Site icon Vistara News

Love Case : ತಂಗಿಯನ್ನು ಪ್ರೀತಿಸುತ್ತಿದ್ದ ಯುವಕನಿಗೆ ಚಾಕು ಹಾಕಿದ ಅಣ್ಣ

Brother stabs young man who was in love with his sister

ಶಿವಮೊಗ್ಗ : ತಂಗಿಯನ್ನು ಪ್ರೀತಿಸುತ್ತಿದ್ದ ಎಂಬ (Love Case) ಕಾರಣಕ್ಕೆ ಅಣ್ಣನೊಬ್ಬ ಯುವಕನಿಗೆ ಚಾಕು ಇರಿದಿದ್ದಾನೆ. ಶಿವಮೊಗ್ಗ ಜಿಲ್ಲೆಯ (Shivamogga News) ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಈ ಘಟನೆ ನಡೆದಿದೆ. ಸಲ್ಮಾನ ಅಲಿಯಾಸ್‌ ಗೂಡು (24) ಚಾಕು ಇರಿತಕ್ಕೊಳಗಾದವನು.

ನಿನ್ನೆ ಗುರುವಾರ ತಡರಾತ್ರಿ ಶಿರಾಳಕೊಪ್ಪದಲ್ಲಿ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಸಲ್ಮಾನ್‌ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ ಇದು ಯುವತಿ ಅಣ್ಣನಿಗೆ ಇಷ್ಟವಿರಲಿಲ್ಲ ಎನ್ನಲಾಗಿದೆ. ಇದರಿಂದಲೇ ಸಿಟ್ಟಾದ ಯುವತಿ ಅಣ್ಣ, ರಾತ್ರಿ ವೇಳೆ ಸಲ್ಮಾನ್‌ನನ್ನು ಮಾತಾಡಿಸುವ ನೆಪದಲ್ಲಿ ಚಾಕುವಿನಿಂದ ಇರಿದಿದ್ದಾನೆ.

ತೀವ್ರ ರಕ್ತಸ್ರಾವವಾಗಿದ್ದ ಸಲ್ಮಾನ್‌ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Dolly Sohi: ಸಹೋದರಿ ಸಾವಿನ ಮರುದಿನವೇ ಖ್ಯಾತ ನಟಿ ಕ್ಯಾನ್ಸರ್‌ನಿಂದ ನಿಧನ

ಪೋಕ್ಸೋ ಪ್ರಕರಣದಲ್ಲಿ ಬಾಲಮಂಜುನಾಥ ಸ್ವಾಮೀಜಿ ಬಂಧನ

ತುಮಕೂರು: ಅಪ್ರಾಪ್ತ ವಯಸ್ಸಿನ ಹುಡುಗಿಗೆ ಲೈಂಗಿಕ ಕಿರುಕುಳ (physical abuse) ನೀಡಿದ ಸ್ವಾಮೀಜಿಯೊಬ್ಬನನ್ನು ತುಮಕೂರು (Tumkur news) ಪೊಲೀಸರು ಪೋಕ್ಸೋ ಕೇಸ್‌ (POCSO Case) ದಾಖಲಿಸಿ ಬಂಧಿಸಿದ್ದಾರೆ.

ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದ ಪೀಠಾಧ್ಯಕ್ಷರಾಗಿದ್ದ ಬಾಲಮಂಜುನಾಥ ಸ್ವಾಮೀಜಿ (Balamanjunatha Swamiji) ಬಂಧಿತ ಆರೋಪಿ. ಈತನ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿಕೊಂಡು ತಡರಾತ್ರಿ ಬಂಧಿಸಲಾಗಿದೆ.

ಕಳೆದ ಫೆಬ್ರುವರಿ 10ರಂದು ತುಮಕೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಸ್ವತಃ ಸ್ವಾಮೀಜಿಯೇ ಒಂದು ದೂರು ದಾಖಲಿಸಿದ್ದ. ಇದರಲ್ಲಿ, ಚರ್ಮ ರೋಗಕ್ಕೆ ಚಿಕಿತ್ಸೆ ಕೊಡುವ ನೆಪದಲ್ಲಿ ನನ್ನ ಬೆತ್ತಲೆ ವಿಡಿಯೋ ಮಾಡಿಕೊಂಡು, ನನ್ನನ್ನು ಬೆದರಿಸಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದಾರೆ ಎಂದು ದೂರು ದಾಖಲಿಸಿದ್ದ.

ಸ್ವಾಮೀಜಿಯ ಸೇವಕನಾಗಿದ್ದ ಅಭಿಷೇಕ್ ಮತ್ತು ಟೀಂನಿಂದ ಬೆದರಿಕೆ ಹಾಕಿ ಹಣಕ್ಕೆ ಡಿಮ್ಯಾಂಡ್ ಇಡಲಾಗಿದೆ ಎಂದು, ತನ್ನ ಆಪ್ತ ಸಹಾಯಕನಾಗಿದ್ದ ಅಭಿಲಾಷ್ ಎಂಬಾತನಿಂದ ಎಫ್ಐಆರ್ ದಾಖಲು ಮಾಡಿಸಿದ್ದ. ಒಟ್ಟು 6 ಜನರ ಮೇಲೆ ದೂರು ನೀಡಲಾಗಿತ್ತು. ಈ ಪ್ರಕರಣದ ಬೆನ್ನಲ್ಲೇ ಸ್ವಾಮೀಜಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಮಠದಲ್ಲೇ ಅಪ್ರಾಪ್ತ ಬಾಲಕಿಗೆ ಸ್ವಾಮೀಜಿ ಲೈಂಗಿಕ ಕಿರುಕುಳ ಕೊಟ್ಟಿರುವ ಬಗ್ಗೆ ಮಾಹಿತಿ ದೊರೆತಿದೆ. ಅಭಿಷೇಕ್ ಕೊಟ್ಟ ಮಾಹಿತಿ ಮೇರೆಗೆ ತಡರಾತ್ರಿ ಮಠಕ್ಕೆ ತೆರಳಿ ಪರಿಶೀಲನೆ ನಡೆಸಿದ ಪೊಲೀಸರ ಪರಿಶೀಲನೆ ವೇಳೆ ಸ್ವಾಮೀಜಿಯ ಅಸಲಿ ಮುಖವಾಡ ಬಯಲಾಗಿದೆ.

ಬಾಲಮಂಜುನಾಥ ಸ್ವಾಮೀಜಿ ಹಾಗೂ ಆತನ ಆಪ್ತ ಸಹಾಯಕ ಅಭಿಲಾಷ್ ವಿರುದ್ಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲು ಮಾಡಲಾಗಿದ್ದು, ತಡರಾತ್ರಿ ಇಬ್ಬರನ್ನು ಬಂಧಿಸಿದ್ದಾರೆ. ತುಮಕೂರು ಎಸ್‌ಪಿ ಅಶೋಕ್ ಕೆ.ವಿ ನೇತೃತ್ವದಲ್ಲಿ ಬಂಧನ ನಡೆದಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version