Modi in Karnataka: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು: ಪ್ರಧಾನಿ ನರೇಂದ್ರ ಮೋದಿ ಉಲ್ಲೇಖ - Vistara News

ಕರ್ನಾಟಕ ಎಲೆಕ್ಷನ್

Modi in Karnataka: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು: ಪ್ರಧಾನಿ ನರೇಂದ್ರ ಮೋದಿ ಉಲ್ಲೇಖ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್‌. ಯಡಿಯೂರಪ್ಪ ಅವರ ಹೆಸರಿಡಬೇಕು ಎಂದು ಅನೇಕರು ಒತ್ತಾಯಿಸಿದ್ದರು. ಆದರೆ ಸ್ವಯ ಯಡಿಯೂರಪ್ಪ ಇದನ್ನು ನಿರಾಕರಿಸಿದ್ದರು.

VISTARANEWS.COM


on

modi-in-karnataka-shivamogga airport named after kuvempu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ಶಿವಮೊಗ್ಗದಲ್ಲಿ ಫೆಬ್ರವರಿ 27ರಂದು ಉದ್ಘಾಟನೆಯಾದ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರನ್ನು ಪ್ರಸ್ತಾಪಿಸುವ ಮೂಲಕ ನರೇಂದ್ರ ಮೋದಿ ನಾಮಕರಣ ಮಾಡಿದ್ದಾರೆ. ಐಐಟಿ-ಧಾರವಾಡ ಕ್ಯಾಂಪಸ್ ಹೊರಗಿನ ಮೈದಾನದಲ್ಲಿ ಆಯೋಜಿಸಲಾಗಿದ್ದ ಐಐಟಿ ಧಾರವಾಡ ಲೋಕಾರ್ಪಣೆ, ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರಂ ಲೋಕಾರ್ಪಣೆ, ಹೊಸಪೇಟೆ-ಹುಬ್ಬಳ್ಳಿ-ತಿನೈಘಾಟ್‌ ವಿದ್ಯುದೀಕರಣ ಉದ್ಘಾಟನೆ, ಹುಬ್ಬಳ್ಳಿ ಧಾರವಾಡ ಸ್ಮಾರ್ಟ್‌ ಸಿಟಿ ಕಾಮಗಾರಿಗಳ ಉದ್ಘಾಟನೆ, ಜಯದೇವ ಆಸ್ಪತ್ರೆಯ ಶಂಕುಸ್ಥಾಪನೆ, ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗಳ ಶಂಕುಸ್ಥಾಪನೆ, ಹೈಟೆಕ್ ಕ್ರೀಡಾ ಸಂಕೀರ್ಣ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇಂದು ಮಂಡ್ಯದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಸಮರ್ಪಿಸಿದೆ. ಕರ್ನಾಟಕವನ್ನು ವಿಶ್ವದ ಸಾಫ್ಟ್‌ವೇರ್‌ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಮತ್ತಷ್ಟು ಮುಂದಕ್ಕೆ ಒಯ್ಯುತ್ತದೆ. ಇತ್ತೀಚೆಗೆ, ಬೆಳಗಾವಿಯಲ್ಲಿ, ಶಿವಮೊಗ್ಗದಲ್ಲೂ ಭಾಗವಹಿಸಿದ್ದೆ ಎಂದು ಮೋದಿ ಹೇಳಿದರು. ಈ ಸಮಯದಲ್ಲಿ, ಶಿವಮೊಗ್ಗದಲ್ಲಿ ಅನೇಕ ಯೋಜನೆಗಳ ಜತೆಗೆ ಕುವೆಂಪು ವಿಮಾನ ನಿಲ್ದಾಣದ ಉದ್ಘಾಟನೆ ಆಗಿತ್ತು ಎಂದರು.

ವಿಮಾನ ನಿಲ್ದಾಣವನ್ನು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರ ಜನ್ಮದಿನದಂದು ಪ್ರಧಾನಿ ಮೋದಿ ಉದ್ಘಾಟಿಸಿದ್ದರು. ನಿಲ್ದಾಣಕ್ಕೆ ಬಿ.ಎಸ್‌. ಯಡಿಯೂರಪ್ಪ ಹೆಸರಿಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಸೇರಿ ಅನೇಕರು ಆಶಿಸಿದ್ದರು. ಆದರೆ ಸ್ವತಃ ಯಡಿಯೂರಪ್ಪ ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ರಾಷ್ಟ್ರಕವಿ ಕುವೆಂಪು ಅವರ ಹೆಸರಿಡುವಂತೆ ಕೋರಿದ್ದರು.

ಉದ್ಘಾಟನೆಯ ದಿನ ನಿಲ್ದಾಣಕ್ಕೆ ಯಾವುದೇ ಹೆಸರನ್ನು ಅಂತಿಮಗೊಳಿಸಲಾಗಿರಲಿಲ್ಲ. ಇದೀಗ ಹುಬ್ಬಳ್ಳಿಯಲ್ಲಿ ಮಾತನಾಡುವ ವೇಳೆ ಕುವೆಂಪು ವಿಮಾನ ನಿಲ್ದಾಣ ಎಂದು ಮೋದಿ ಉಲ್ಲೇಖಿಸುವ ಮೂಲಕ, ಅದೇ ಹೆಸರನ್ನು ಇರಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ ಏರ್‌ಪೋರ್ಟ್‌ಗೆ ಕುವೆಂಪು, ರೈಲು ನಿಲ್ದಾಣಕ್ಕೆ ಕೆಳದಿ ಶಿವಪ್ಪ ನಾಯಕನ ಹೆಸರು ಅಂತಿಮ, ರಾಜ್ಯ ಸಂಪುಟ ಸಭೆ ಅಸ್ತು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ರಾಜಕೀಯ

Surapura Assembly constituency: ಸುರಪುರ ಉಪ ಚುನಾವಣೆಗೆ ರಾಜುಗೌಡ ಬಿಜೆಪಿ ಅಭ್ಯರ್ಥಿ; ಹೇಗಿದೆ ಕ್ಷೇತ್ರ ಚಿತ್ರಣ?

Surapura Assembly constituency: ಬಿ.ಎಸ್.‌ ಯಡಿಯೂರಪ್ಪ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ರಾಜುಗೌಡ ಕ್ಷೇತ್ರದಲ್ಲಿ ಜನರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರು. ಆದರೆ, ಕಾಂಗ್ರೆಸ್‌ ಅಭ್ಯರ್ಥಿಗೆ ಇರುವ ಅನುಕಂಪದ ಅಲೆಯನ್ನು ದಾಟಿ ಇವರು ಜಯಗಳಿಸಬೇಕೆಂದರೆ ಹೆಚ್ಚಿನ ಶ್ರಮವನ್ನು ಹಾಕಲೇಬೇಕಿದೆ.

VISTARANEWS.COM


on

Raju Gowda Shorapur or Surapura Assembly constituency BJP Candidate
Koo

ಬೆಂಗಳೂರು: ದೇಶದೆಲ್ಲೆಡೆ ಲೋಕಸಭಾ ಚುನಾವಣೆಯ (Lok Sabha Election 2024) ಫೀವರ್‌ ಹೆಚ್ಚಾಗಿದೆ. ಈ ನಡುವೆ ಮುಖ್ಯ ಚುನಾವಣಾ ಆಯೋಗವು ಹಲವು ರಾಜ್ಯಗಳ ಉಪ ಚುನಾವಣೆಯನ್ನೂ ಸಹ ಘೋಷಣೆ ಮಾಡಿದೆ. ಇದಕ್ಕೆ ಈಗ ರಾಜ್ಯದಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ (Raja Venkatappa Nayaka) ಅವರ ನಿಧನದಿಂದ ತೆರವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ (Surapura Assembly constituency) ಬಿಜೆಪಿ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ರಸಿಂಹ ನಾಯಕ (ರಾಜೂಗೌಡ) (Raju Gowda) ಅವರಿಗೆ ಮತ್ತೆ ಟಿಕೆಟ್ ನೀಡಲಾಗಿದೆ.

ರಾಜುಗೌಡ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ರಾಜಾ ವೆಂಕಟಪ್ಪ ನಾಯಕ ವಿರುದ್ಧ ಸೋಲು ಕಂಡಿದ್ದರು. ಆದರೆ, ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಿದೆ. 2023ರಲ್ಲಿ ನಡೆದ ಚುನಾವಣೆಯಲ್ಲಿ ರಾಜೂಗೌಡ ಅವರು 25223 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು. ಆದರೆ, ಕಳೆದ 2018ರ ಚುನಾವಣೆಯಲ್ಲಿ ರಾಜುಗೌಡ ಅವರು ಗೆದ್ದಿದ್ದರು. ಅಲ್ಲದೆ, ಬಿ.ಎಸ್.‌ ಯಡಿಯೂರಪ್ಪ (BS Yediyurappa) ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಇವರು ಕ್ಷೇತ್ರದಲ್ಲಿ ಜನರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರು. ಆದರೆ, ಕಾಂಗ್ರೆಸ್‌ ಅಭ್ಯರ್ಥಿಗೆ ಇರುವ ಅನುಕಂಪದ ಅಲೆಯನ್ನು ದಾಟಿ ಇವರು ಜಯಗಳಿಸಬೇಕೆಂದರೆ ಹೆಚ್ಚಿನ ಶ್ರಮವನ್ನು ಹಾಕಲೇಬೇಕಿದೆ.

ಕಾಂಗ್ರೆಸ್‌ನಿಂದ ರಾಜಾ ವೇಣುಗೋಪಾಲ ನಾಯಕ ಸ್ಪರ್ಧೆ

ಕಾಂಗ್ರೆಸ್‌ನಿಂದ ಈಗಾಗಲೇ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ. ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ (Raja Venugopala Nayaka) ಸ್ಪರ್ಧೆ ಮಾಡುತ್ತಿದ್ದಾರೆ. ತಂದೆ ನಿಧನವಾಗಿದ್ದರಿಂದ ಅನುಕಂಪದ ಅಲೆ ಹಾಗೂ ಕಾಂಗ್ರೆಸ್‌ ಆಡಳಿತದಲ್ಲಿರುವುದು ಅವರಿಗೆ ಪ್ಲಸ್‌ ಆಗಲಿದೆ. ಜತೆಗೆ ವೇಣುಗೋಪಾಲ ನಾಯಕ್‌ಗೆ ಚುನಾವಣೆ ಹೊಸದೇನಲ್ಲ. ಅವರದ್ದು ರಾಜಕೀಯ ಹಿನ್ನೆಲೆಯ ಕುಟುಂಬವಾಗಿದೆ. ಇವರ ಅಜ್ಜ ರಾಜಾ ಕುಮಾರ ನಾಯಕ ಅವರು ಎರಡು ಬಾರಿ, ತಂದೆ ರಾಜಾ ವೆಂಕಟಪ್ಪ ನಾಯಕ 4 ಬಾರಿ, ಚಿಕ್ಕಪ್ಪ ಒಂದು ಬಾರಿ ಸುರಪುರ ಕ್ಷೇತ್ರದಿಂದ ಶಾಸಕರಾಗಿದ್ದರು. ಅಲ್ಲದೆ, ತಂದೆಯ ಜತೆಗೆ ಚುನಾವಣೆ ಸಂದರ್ಭದಲ್ಲಿ ಕ್ಯಾಂಪೇನ್‌ ಮಾಡುವುದು, ತಂತ್ರಗಾರಿಕೆಯನ್ನು ರೂಪಿಸುವ ಕೆಲಸವನ್ನು ವೇಣುಗೋಪಾಲ ನಾಯಕ ಮಾಡುತ್ತಿದ್ದರು. ಹೀಗಾಗಿ ಅವರಿಗೆ ಈ ಚುನಾವಣೆ ಹೊಸದಲ್ಲ.

ಎಲ್ಲ ಪಕ್ಷದವರೂ ಇಲ್ಲಿ ಗೆದ್ದಿದ್ದಾರೆ

2008ರ ಕ್ಷೇತ್ರ ಮರು ವಿಂಗಡಣೆವರೆಗೂ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಸಾಮಾನ್ಯ ವರ್ಗದವರು ಸ್ಪರ್ಧೆ ಮಾಡಬಹುದಾಗಿತ್ತು. ಇದರ ಬಳಿಕ ಎಸ್‌ಟಿ ಮೀಸಲು ಕ್ಷೇತ್ರವಾಯಿತು. 1957ರಿಂದ ಇಲ್ಲಿಯವರೆಗೆ ಒಟ್ಟು 16 ಬಾರಿ ಚುನಾವಣೆಗಳು ನಡೆದಿವೆ. ಇದರಲ್ಲಿ ಕಾಂಗ್ರೆಸ್‌ 8, ಬಿಜೆಪಿ 2 ಹಾಗೂ ಸ್ವತಂತ್ರ ಪಕ್ಷ, ಕರ್ನಾಟಕ ಕಾಂಗ್ರೆಸ್‌ ಪಕ್ಷ (ಕೆಸಿಪಿ), ಕನ್ನಡ ನಾಡು ಪಕ್ಷ (ಕೆಎನ್‌ಡಿಪಿ) ಮತ್ತು ಸ್ವತಂತ್ರ್ಯ ಅಭ್ಯರ್ಥಿಗಳು ತಲಾ ಒಮ್ಮೆ ವಿಜಯ ಸಾಧಿಸಿದ್ದಾರೆ.

ಪಕ್ಷಾಂತರ ಮಾಡಿದ್ದ ರಾಜುಗೌಡ

2013ರ ಚುನಾವಣೆಯಲ್ಲಿ ಬಿಜೆಪಿ ತೊರೆದು ಜೆಡಿಎಸ್‌ ಸೇರಿದ್ದ ರಾಜು ಗೌಡ ಸೋಲು ಕಂಡಿದ್ದರು. ಆಗ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ರಾಜಾ ವೆಂಕಟಪ್ಪ ನಾಯಕ 65,033 ಮತಗಳನ್ನು ಪಡೆದು ಗೆದ್ದಿದ್ದರು. ರಾಜುಗೌಡ 60,958 ಮತಗಳನ್ನು ಪಡೆದಿದ್ದರು. ಕೇವಲ 4,075 ಮತಗಳ ಅಂತರದಿಂದ ಸೋಲು ಕಂಡಿದ್ದರು.

2018ರ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಸೇರಿದ ರಾಜು ಗೌಡ 1,04,426 ಮತಗಳನ್ನು ಪಡೆದು ಮೂರನೇ ಬಾರಿಗೆ ಜಯ ಸಾಧಿಸಿದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ರಾಜಾ ವೆಂಕಟಪ್ಪ ನಾಯಕ 81,851 ಮತಗಳನ್ನು ಪಡೆದುಕೊಂಡಿದ್ದರು. ಹೀಗಾಗಿ 22,568 ಮತಗಳ ಅಂತರದಲ್ಲಿ ರಾಜುಗೌಡ ಗೆದ್ದಿದ್ದರು.

ಸಮುದಾಯವಾರು ಮತಗಳು ಎಷ್ಟಿವೆ?

ಸದ್ಯದ ಮಾಹಿತಿ ಪ್ರಕಾರ ಸುರಪುರ ಕ್ಷೇತ್ರದಲ್ಲಿ 1,41, 618 ಪುರುಷರು, 1,39,729 ಮಹಿಳಾ, 28 ಲಿಂಗತ್ವ ಅಲ್ಪಸಂಖ್ಯಾತ ಮತದಾರರು ಸೇರಿ ಒಟ್ಟು 2,81,375 ಮತದಾರರಿದ್ದಾರೆ. ಎಸ್‌ಟಿ ಮೀಸಲು ಕ್ಷೇತ್ರವಾಗಿರುವ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಪಂಗಡದ ಜನರೇ ನಿರ್ಣಾಯಕರು.

  • ಪರಿಶಿಷ್ಟ ಪಂಗಡ: 1 ಲಕ್ಷಕ್ಕೂ ಅಧಿಕ ಮತದಾರರು
  • ದಲಿತ: 80 ಸಾವಿರಕ್ಕೂ ಅಧಿಕ ಮತದಾರರು
  • ಮುಸ್ಲಿಂ: 45 ಸಾವಿರಕ್ಕೂ ಅಧಿಕ ಮತದಾರರಿದ್ದಾರೆ.

ಇದನ್ನೂ ಓದಿ: Lok Sabha Election 2024: ಮಂಡ್ಯನಾ? ರಾಮನಗರವಾ? ಧರ್ಮ ಸಂಕಟದಲ್ಲಿ ಮಾಜಿ ಸಿಎಂ ಎಚ್‌ಡಿಕೆ!

ಉಪ ಚುನಾವಣೆಯ ಫಲಿತಾಂಶ ಜೂ. 4ಕ್ಕೆ ಇದ್ದು, ಯಾರು ವಿಜಯಶಾಲಿಯಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಆದರೆ, ಸುರಪುರ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್‌ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ.

Continue Reading

ದೇಶ

Kota Srinivas Poojary : ಫೋಟೊಗ್ರಾಫರ್‌ನಿಂದ ಸಂಸತ್‌ ಟಿಕೆಟ್‌ವರೆಗೆ; ಸಿಂಪಲ್​ ಮ್ಯಾನ್​ ಕೋಟ ಶ್ರೀನಿವಾಸ ಪೂಜಾರಿ ಜರ್ನಿ

kota srinivas poojary : ಗ್ರಾಮ ಪಂಚಾಯಿತಿ ಚುನಾವಣೆ ಮೂಲಕ ರಾಜಕೀಯ ಆರಂಭಿಸಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರು ಇದೀಗ ಪಾರ್ಲಿಮೆಂಟ್​ ಮೆಟ್ಟಿಲೇರಲು ಸಜ್ಜಾಗಿದ್ದಾರೆ.

VISTARANEWS.COM


on

Lok sabha Election 2024 Kota Srinivas Poojary12
Koo

ಬೆಂಗಳೂರು: ಮುಂಬರುವ ಲೋಕಸಭಾ ಕ್ಷೇತ್ರ ಚುನಾವಣೆಗೆ (Lok Sabha Election) ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬುಧವಾರ (ಮಾರ್ಚ್​ 13ರಂದು) ಬಿಡುಗಡೆ ಮಾಡಿದೆ. ಒಟ್ಟು 72 ಅಭ್ಯರ್ಥಿಗಳಲ್ಲಿ ಕರ್ನಾಟಕದ 20 ಅಭ್ಯರ್ಥಿಗಳಿದ್ದಾರೆ. ಈ ಪಟ್ಟಿಯಲ್ಲಿ ವಿಶೇಷವಾಗಿ ಗಮನ ಸೆಳೆದಿರುವುದು ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ (Kota srinivas poojary). ಜನರ ನಡುವಿನ ನಾಯಕ ಹಾಗೂ ಅತ್ಯಂತ ಸರಳ ವ್ಯಕ್ತಿತ್ವದ ಶ್ರೀನಿವಾಸ ಪೂಜಾರಿ ಚುನಾವಣೆಯಲ್ಲಿ ಗೆದ್ದರೆ ಪಾರ್ಲಿಮೆಂಟ್ ಮೆಟ್ಟಿಲೇರುವುದು ನಿಶ್ಚಿತ. ಸಜ್ಜನ ಜನಪ್ರತಿನಿಧಿ ಎನಿಸಿಕೊಂಡಿರುವ ಅವರಿಗೆ ಬಿಜೆಪಿ ವರಿಷ್ಠರು ಟಿಕೆಟ್​ ನೀಡಿರುವುದು ಅವರ ಕ್ಷೇತ್ರದ ಬಿಜೆಪಿ ಅಭಿಮಾನಿಗಳ ಪಾಲಿಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ.

Lok-sabha-Election-2024-Kota-Srinivas-Poojary1

ಕರ್ನಾಟಕ ಸರ್ಕಾರದಲ್ಲಿ ಮೂರು ಬಾರಿ ಸಚಿವರಾಗಿದ್ದ ಅವರೀಗ ವಿಧಾನ ಪರಿಷತ್​ನಲ್ಲಿ ವಿರೋಧ ಪಕ್ಷದ ನಾಯಕ. ಅವರನ್ನು ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ಕಣಕ್ಕೆ ಇಳಿಸಿದೆ. ಕೋಟಾ ಶ್ರೀನಿವಾಸ ಪೂಜಾರಿ ಅವರು ಅತ್ಯಂತ ಸರಳ ವ್ಯಕ್ತಿತ್ವದವರು ಎಂಬುದು ಅವರನ್ನು ಬಲ್ಲವರು ಹೇಳುವ ಮೊದಲ ಮಾತು. ಅವರನ್ನು ಜನರು ಪಕ್ಷವನ್ನು ನೋಡದೇ ಪ್ರೀತಿಸುತ್ತಾರೆ ಎಂಬುದು ಕೂಡ ವಿಶೇಷ. ಅಭಿಮಾನಿಗಳ ದಂಡನ್ನು ಬಿಟ್ಟು ಸಾಮಾನ್ಯ ಜನರಂತೆ ಸುತ್ತಾಡುವ ಅವರು ಊಟ, ತಿಂಡಿಗೂ ಸಣ್ಣ ಪುಟ್ಟ ಹೋಟೆಲ್​ಗೆ ಹೋಗುತ್ತಾರೆ ಎಂಬುದು ವಿಶೇಷ.

ಸರಳ ರಾಜಕಾರಣಿ

ಸಾಮಾನ್ಯ ಛಾಯಾಗ್ರಾಹಕನಾಗಿ ವೃತ್ತಿ ಆರಂಭಿಸಿದ್ದ ಶ್ರೀನಿವಾಸ ಪೂಜಾರಿ ಅವರು ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಹಾಗೂ ವಿಧಾನ ಪರಿಷತ್‌ಗೆ ಆಯ್ಕೆಯಾಗಿ ಹಲವು ಇಲಾಖೆಗಳಲ್ಲಿ ಸಚಿವರಾಗಿದ್ದಾರೆ . ಅವರೀಗ ಲೋಕ ಸಭಾ ಟಿಕೆಟ್​ ಪಡೆದು ತಮ್ಮ ವ್ಯಾಪ್ತಿಯನ್ನು ರಾಷ್ಟ್ರೀಯ ರಾಜಕಾರಣದ ಮಟ್ಟಿಗೆ ವಿಸ್ತರಿಸಿಕೊಂಡಿದ್ದಾರೆ. ನೇರ ಮಾತು, ಒಲವು ನಿಲುವುಗಳಿಂದಲೇ ಸಾಧನೆಯ ಉತ್ತುಂಗಕ್ಕೇರಿ, ಬಿಜೆಪಿ ಪಕ್ಷದಲ್ಲಿಯೂ ಪ್ರಭಾವಿ ನಾಯಕನಾಗಿ ಬೆಳೆದಿದ್ದಾರೆ ಅವರು. ಆದರೆ, ಅವರ ಸರಳ ವ್ಯಕ್ತಿತ್ವ ಇಂದಿಗೂ ಬದಲಾಗಿಲ್ಲ.

Kota Srinivas Poojary

ಕೋಟ ಶ್ರೀನಿವಾಸ ಪೂಜಾರಿ, 1993ರಲ್ಲಿ ಗ್ರಾಮ ಪಂಚಾಯತ್ ಸದಸ್ಯರಾಗುವುದರೊಂದಿಗೆ ರಾಜಕೀಯ ಜೀವನ ಆರಂಭಿಸಿದ್ದರು. 1996ರಲ್ಲಿ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಗೊಂಡಿದ್ದರು. 2006ರಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆರಿಸಿ ಬಂದರು. ಅವರು ಕರ್ನಾಟಕ ರಾಜಕೀಯದಲ್ಲಿ ಹಲವಾರು ನಿರ್ಣಾಯಕ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಅವರು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರವನ್ನು ಪ್ರತಿನಿಧಿಸಿ 6 ಜನವರಿ 2010 ರಿಂದ 4 ಜನವರಿ 2016 ರವರೆಗೆ ಕರ್ನಾಟಕ ವಿಧಾನ ಪರಿಷತ್ತಿಗೆ ಮೊದಲ ಬಾರಿಗೆ ಆಯ್ಕೆಯಾದರು ಮತ್ತು 6 ಜನವರಿ 2016 ರಿಂದ 5 ಜನವರಿ 2022 ರವರೆಗೆ ಅವಧಿಗೆ ಮರು ಆಯ್ಕೆಯಾದರು. 2022ರಲ್ಲಿ ಮತ್ತೆ ಆಯ್ಕೆಯಾಗಿದ್ದಾರೆ. ಫೆಬ್ರವರಿ 7, 2018 ರಿಂದ ಜುಲೈ 26, 2019 ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದು, ಮತ್ತದೇ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಅಕ್ಟೋಬರ್ 7, 2021ರಂದು ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ನೇಮಿಸಲಾಗಿತ್ತು.

ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನ ಸೇರಿದಂತೆ ವಿವಿಧ ಹುದ್ದೆಗಳನ್ನಲಂಕರಿಸಿ ಅವುಗಳನ್ನು ಯಶಸ್ವಿಯಾಗಿ ನಿಭಾಯಿಸಿದ ಬಳಿಕ ಸದ್ಯ ಹಿಂದುಳಿದ ಮೋರ್ಚಾದ ರಾಜ್ಯಾಧ್ಯಕ್ಷರಾಗಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಪಂಚಾಯತ್ ರಾಜ್ ವ್ಯವಸ್ಥೆಯ ಕುರಿತು ಆಳವಾದ ಅರಿವು, ಅಧ್ಯಯನಗಳಿವೆ.

ಫೋಟೋಗ್ರಫಿಯಿಂದ ಲೋಕಸಭಾ ಟಿಕೆಟ್​ ವರೆಗೆ

ಶ್ರೀನಿವಾಸ ಪೂಜಾರರು ಒಬ್ಬ ಸೃಜನಶೀಲ ರಾಜಕಾರಣಿ . ಆರಂಭದಲ್ಲಿ ಫೋಟೋಗ್ರಫಿಯನ್ನು ವೃತ್ತಿಯನ್ನಾಗಿಸಿಕೊಂಡ ಅವರು ಬರವಣಿಗೆಯಲ್ಲಿಯೂ ಸಿದ್ಧಹಸ್ತರು. ಅನೇಕ ದಿನಪತ್ರಿಕೆಗಳಲ್ಲಿ ಅಂಕಣಕಾರರಾಗಿದ್ದರು. ನಮ್ಮ ಕಮಲ ಎಂಬ ಪಂಚಾಯತ್ ರಾಜ್ ವ್ಯವಸ್ಥೆಯ ಬಗೆಗೆ ಮಾಸ ಪತ್ರಿಕೆಯೊಂದನ್ನು ಆರಂಭಿಸಿ ಅದರ ಸಂಪಾದಕರಾಗಿದ್ದರು. ಆಕರ್ಷಕ ಮಾತಿನ ವರಸೆ ಪೂಜಾರಿಯವರಿಗೆ ಸಲೀಸು. ಡಾ. ಶಿವರಾಮ ಕಾರಂತರ ಅಭಿಮಾನಿಯಾಗಿ ತನ್ನ ಹುಟ್ಟೂರಿನಲ್ಲಿ ಕಾರಂತ ಭವನ ನಿರ್ಮಾಣ, ಕಾರಂತ ಹುಟ್ಟೂರ ಪ್ರಶಸ್ತಿ ಸೇರಿದಂತೆ ಅವರ ನೆನಪನ್ನು ಕೋಟದಲ್ಲಿ ಚಿರಸ್ಥಾಯಿಯಾಗಿಸಿದ ಕೀರ್ತಿಯಲ್ಲಿ ಇವರದ್ದು ದೊಡ್ಡ ಪಾಲಿದೆ.

Continue Reading

Lok Sabha Election 2024

Lok Sabha Election 2024: ಮಂಡ್ಯ ಕ್ಷೇತ್ರದ ಮೈತ್ರಿ ಟಿಕೆಟ್ 100% ನನಗೇ ಸಿಗ್ತದೆ ಎಂದ ಸುಮಲತಾ

Lok Sabha Election 2024: ಅಭ್ಯರ್ಥಿಗಳ ಘೋಷಣೆಗೂ ಮೊದಲು ದೆಹಲಿಗೆ ಹೋಗುವ ಅಗತ್ಯವಿಲ್ಲ. ಒಂದು ವೇಳೆ ಬರಲು ಹೇಳಿದರೆ ಹೋಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್‌ ತಿಳಿಸಿದ್ದಾರೆ.

VISTARANEWS.COM


on

Sumalatha
Koo

ಮಂಡ್ಯ: ಯಾವುದೇ ಅನುಭವ ಇಲ್ಲದೇ ಕಳೆದ ಬಾರಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ನಿಂತಿದ್ದೆ. ನನಗೆ ಬೇಕಾದವರು ನಿಮ್ಮ ಜೊತೆ ಇರುತ್ತೇವೆ ಎಂದು ಗಟ್ಟಿಯಾಗಿ ನಿಂತಿದ್ದರು. ಈಗಿನ ಸಂದರ್ಭ ಬೇರೆಯೇ ಇದೆ. ಈ ಬಾರಿ ಮಂಡ್ಯ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ 100% ನನಗೆ ಸಿಗಲಿದೆ ಎಂದು ಸಂಸದೆ ಸುಮಲತಾ ಅಂಬರೀಶ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ನೆನ್ನೆಯ ಲಿಸ್ಟ್ ನೋಡಿದರೆ ರಾಜ್ಯವಾರು ಪಟ್ಟಿ ಬಿಡುಗಡೆ ಮಾಡಿದ್ದಾರೆ. ಹಾಗೆ ಕರ್ನಾಟಕದ್ದು ಬಂದಾಗ ನಮ್ಮ ಎಲ್ಲರ ಹೆಸರು ಬರಬಹುದು. ಅಭ್ಯರ್ಥಿಗಳ ಘೋಷಣೆಗೂ ಮೊದಲು ದೆಹಲಿಗೆ ಹೋಗುವ ಅಗತ್ಯವಿಲ್ಲ. ಒಂದು ವೇಳೆ ನನ್ನು ಬರಲು ಹೇಳಿದರೆ ಹೋಗುತ್ತೇನೆ ಎಂದು ಹೇಳಿದರು.

ಈ ಬಾರಿಯ ಚುನಾವಣೆಯ ಪ್ರಚಾರ, ಹೋರಾಟ ಡಿಫೆರೆಂಟ್ ಆಗಿ ಇರುತ್ತೆ. ಯಶ್, ದರ್ಶನ್ ಬಂದ್ರೆ ಬಲ ಇರುತ್ತೆ, ಎಲ್ಲರ ಸಪೋರ್ಟ್ ಇದೆ. ಅವರು ನನಗೋಸ್ಕರ ಬರಿ ಸಪೋರ್ಟ್ ಅಲ್ಲ. ತ್ಯಾಗ ಮಾಡಿದ್ದಾರೆ. ಇಬ್ಬರೂ 25 ದಿನ ಸ್ವಾರ್ಥವಿಲ್ಲದೆ ನನ್ನ ಪರ ನಿಂತಿದ್ದರು. ಪದೇ ಪದೇ ಎಲ್ಲಾ ಬಿಟ್ಟು ಬನ್ನಿ ಎಂದು ಕರೆಯಲು ನನ್ನ ಮನಸ್ಸು ಒಪ್ಪಲ್ಲ.
ಯಶ್, ದರ್ಶನ್ ಸಿನಿಮಾಗಳಲ್ಲಿ ಬ್ಯುಸಿ ಇರುತ್ತಾರೆ. ಅವರು ಬಂದರೆ ಖಂಡಿತವಾಗಿ ಸ್ವಾಗತಿಸುವೆ ಎಂದು ತಿಳಿಸಿದರು.

ಇದನ್ನೂ ಓದಿ | BJP Candidates List: ಬಿಜೆಪಿ ಮೊದಲ ಪಟ್ಟಿಯಲ್ಲಿ 33 ಹಾಲಿ ಸಂಸದರಿಗೆ ಟಿಕೆಟ್‌ ನಕಾರ!

ಯಶ್ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಪ್ಯಾನ್ ಇಂಡಿಯಾ ಸ್ಟಾರ್‌ ಆಗಿದ್ದಾರೆ, ಅವರಿಂದ ಹೆಚ್ಚು ನಿರೀಕ್ಷೆ ಮಾಡುವುದು ಸರಿಯಲ್ಲ. ಅವರು ಬಂದರೆ ಸಂತೋಷಪಡುತ್ತೇನೆ. ಕಳೆದ ಚುನಾವಣೆಯಲ್ಲಿ ನನ್ನ ಮನೆಯ ಮಕ್ಕಳು ತರ ಓಡಾಡಿದ್ದಾರೆ. ಆವತ್ತಿನ ಸ್ಥಿತಿಯಲ್ಲಿ ನನ್ನ ಜೊತೆ ನಿಂತಿದ್ದರು. ಈ ಬಾರಿ ಅವರು ಬರದಿದ್ದರೂ ನಾನು ಬೇಜಾರು ಮಾಡಿಕೊಳ್ಳಲ್ಲ ಎಂದು ತಿಳಿಸಿದರು.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಇದು ಅತ್ಯಂತ ಭಯಾನಕ‌ ವಿಚಾರ. ಇದನ್ನು ಎಲ್ಲರೂ ಖಂಡಿಸಬೇಕು. ತಪ್ಪಿತಸ್ಥರಿಗೆ ಕಠಿಣಾತಿ ಕಠಿಣ ಶಿಕ್ಷೆ ವಿಧಿಸಬೇಕು. ಈ ಪ್ರಕರಣದಲ್ಲಿ ಬೇರೆ ಬೇರೆ ಹೇಳಿಕೆ ಕೊಡೋದು ಮಹಾಪರಾಧ. ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳನ್ನು ಬೇಗ ಬಂಧಿಸಲಿದ್ದಾರೆ ಎಂದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕಿಂತ ಹೆಚ್ಚಾಗಿ ಉಗ್ರವಾದಿ ಅಥವಾ ಆತಂಕವಾದಿಗಳು ಈ ರೀತಿಯ ಕೃತ್ಯಗಳನ್ನು ಮಾಡಬಹುದು ಎಂಬಂತೆ ಪ್ರೋತ್ಸಾಹವಂತೂ ಇದೆ. ಯಾರೇ ಆದರೂ ಇದನ್ನು ಉತ್ತೇಜನ ನೀಡುವಂತಹ ಹೇಳಿಕೆ‌ ಕೊಡಬಾರದು ಎಂದು ಹೇಳಿದರು.

ವಿಧಾನಸೌಧದಲ್ಲಿ ಪಾಕಿಸ್ತಾನ‌ ಪರ ‌ಘೋಷಣೆ ವಿಚಾರಕ್ಕೆ ಸ್ಪಂದಿಸಿ, ಎಫ್‌ಎಸ್‌ಎಲ್ ವರದಿಯಲ್ಲೂ ಅದು ಫೇಕ್ ಅಲ್ಲ ಎಂಬಂತೆ ಬಂದಿದೆ. ಪಕ್ಷಗಳು ಒಂದು ಸಮುದಾಯವನ್ನು ಯಾವುದೇ ತಪ್ಪು ಮಾಡಿದರೂ ಖಂಡಿಸದೇ, ರಕ್ಷಣೆ ಮಾಡಿಕೊಂಡು ಬರಬರಬಾರದು. ಎಲ್ಲಾ‌‌ ಚಾನೆಲ್‌ಗಳೂ ಆ ವಿಚಾರವನ್ನ ಪ್ರಚಾರ ಮಾಡಿವೆ. ಒಂದೆರಡು ಚಾನೆಲ್ ಆದ್ರೆ ತಪ್ಪು ಮಾಡಬಹುದು. ಎಲ್ಲಾ ಚಾನೆಲ್‌ಗಳು ತಪ್ಪು ಮಾಡುತ್ತವೆಯೇ ಎಂದು ಪ್ರಶ್ನಿಸಿದರು.

ಮಂಡ್ಯದಲ್ಲಿ ಮನೆ ಕಟ್ಟುವ ಬಗ್ಗೆ ಪ್ರತಿಕ್ರಿಯಿಸಿ, ಮಂಡ್ಯದಲ್ಲಿ ನನ್ನ ಮನೆ ಇದೆ, ಅದು ಬಾಡಿಗೆ ಮನೆ. ಅಂಬರೀಶ್ ಇದ್ದ ಕಾಲದಿಂದಲೂ ಈ ಮನೆಯಲ್ಲಿ ಬಾಡಿಗೆಗೆ ಇದ್ದೇವೆ. ಹನಕೆರೆ ಬಳಿ ಲ್ಯಾಂಡ್ ತೆಗೆದುಕೊಂಡು ಮನೆಕಟ್ಟುವ ಆಸೆ ಇತ್ತು.
ಆದ್ರೆ ಅದರಲ್ಲಿ ರಾಜಕಾರಣ ನಡೆಯಿತು. ಮನೆ ಕಟ್ಟುವಾಗ ಅಡಚಣೆಗಳು ಉಂಟಾದವು. ದೇವರು ಆಶೀರ್ವಾದ ಮಾಡಿದ್ರೆ ಮುಂದೆ ಮನೆ ಕಟ್ಟೋಣ., ನನಗಿಂತ ಅಭಿಗೆ ಮಂಡ್ಯದಲ್ಲಿ ಮನೆ ಕಟ್ಟಲು ತುಂಬಾ ಆಸೆ ಇದೆ‌ ಎಂದು ತಿಳಿಸಿದರು.

ಇದನ್ನೂ ಓದಿ | R Ashok : ಸರ್ಕಾರಕ್ಕೆ ಬುದ್ಧಿ ಬರಲು ಇನ್ನೆಷ್ಟು ಬಾಂಬ್‌ ಬ್ಲಾಸ್ಟ್‌ ಆಗಬೇಕು; ಆರ್‌ ಅಶೋಕ್‌ ಪ್ರಶ್ನೆ

ಮಂಡ್ಯದಲ್ಲಿ ಹೊಸ ಸಕ್ಕರೆ‌ ಕಾರ್ಖಾನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೈಷುಗರ್ ಕಾರ್ಖಾನೆಯನ್ನು ಯಾರು ಟಚ್ ಮಾಡಬಾರದು, ಈ ಹಿಂದೆ ಭ್ರಷ್ಟಾಚಾರ ಆಗಿರುವುದು ಗೊತ್ತಿದೆ. ಇದರಿಂದ ನೂರಾರು ಕೋಟಿ ನಷ್ಟವಾಗಿದೆ. ಈ ಹಿಂದೆ ಯಡಿಯೂರಪ್ಪ ಮಾತು ಕೊಟ್ಟು, ಬೊಮ್ಮಾಯಿ ಅವರು 50 ಕೋಟಿ ಕೊಟ್ಟು ಕಾರ್ಖಾನೆ ಶುರು ಮಾಡಿಸಿದ್ದರು. ಈಗಿನ ಸರ್ಕಾರ 100 ಕೋಟಿ ಕೊಟ್ಟಿದೆ. ಇನ್ನೂ ಕೂಡ ಕಬ್ಬು ಅರೆಯುತ್ತಿಲ್ಲ, ಮತ್ತೆ 500 ಕೋಟಿಯ ಹೊಸ ಕಾರ್ಖಾನೆ ಅಂದ್ರೆ ಅರ್ಥ ಏನು? ಒಂದಲ್ಲ 5 ಕಾರ್ಖಾನೆ ಮಾಡಿ. ಮೈಷುಗರ್ ಕಾರ್ಖಾನೆ ಮಂಡ್ಯಕ್ಕೆ ಪ್ರತಿಷ್ಠೆಯಾಗಿದೆ. ಹಳೆಯ ಕಾರ್ಖಾನೆ ಏನು ಮಾಡ್ತೀರಾ? ಮತ್ತೆ ಕ್ಲೋಸ್ ಮಾಡ್ತೀರಾ? ಐತಿಹಾಸಿಕ ಕಾರ್ಖಾನೆ ಎಂದು ನಾವು ಕಾಪಾಡಲು ಹೋರಾಟ ಮಾಡಿದ್ದು ವ್ಯರ್ಥನಾ? ಇದು ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆಯಾಗಿದ್ದು, ಭಾವನಾತ್ಮಕ ಸಂಬಂಧ ಇದೆ. 500 ಕೋಟಿಯನ್ನು ಈ ಕಾರ್ಖಾನೆಗೆ ಹಾಕಿ ಸರಿಪಡಿಸಬೇಕು. ಮೈಷುಗರ್ ಕಾರ್ಖಾನೆ ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದರು.

Continue Reading

ಪ್ರಮುಖ ಸುದ್ದಿ

Karnataka Budget 2024: ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಮೇಲ್ದರ್ಜೆಗೆ, ಕಾಲೇಜುಗಳಿಗೆ 400 ಕೋಟಿ ಅನುದಾನ

Karnataka Budget 2024: 2024-25ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ರೂ.ಗಳ ಅನುದಾನವನ್ನು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 130 ಕೋಟಿ ರೂ.ಗಳ ಅನುದಾನವನ್ನು ಕೂಡ ಸಿಎಂ ಒದಗಿಸಿದ್ದಾರೆ.

VISTARANEWS.COM


on

siddaramaiah budget medical education
Koo

ಬೆಂಗಳೂರು: ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರವು (Medical Education) ಸರ್ಕಾರಿ ವಲಯದಲ್ಲಿಯೂ ವ್ಯಾಪಕ ಬೆಳವಣಿಗೆ ಹೊಂದಿರುವುದರಿಂದ ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಇನ್ನಷ್ಟು ದಕ್ಷತೆ ತರುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು (directorate) ಆಯುಕ್ತಾಲಯವನ್ನಾಗಿ ಉನ್ನತೀಕರಿಸುವ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ (Karnataka Budget 2024) ಪ್ರಕಟಿಸಿದ್ದಾರೆ.

ಇದರ ಜೊತೆಗೆ, 2024-25ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ರೂ.ಗಳ ಅನುದಾನವನ್ನು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 130 ಕೋಟಿ ರೂ.ಗಳ ಅನುದಾನವನ್ನು ಕೂಡ ಸಿಎಂ ಒದಗಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ವಲಯಕ್ಕಾಗಿ ಈ ಸಾಲಿನ ಬಜೆಟ್‌ನಲ್ಲಿ ಸಿಎಂ ನೀಡಿದ ಕೊಡುಗೆಗಳು ಇಂತಿವೆ:

1) ಮೈಸೂರಿನಲ್ಲಿರುವ 40 ಹಾಸಿಗೆ ಸಾಮರ್ಥ್ಯದ Nephro-Urology ಆಸ್ಪತ್ರೆಯನ್ನು 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲಾಗುವುದು.

2) ಕಲಬುರಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕವನ್ನು ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯ ತಾಂತ್ರಿಕ ನೆರವಿನೊಂದಿಗೆ ಸ್ಥಾಪಿಸಲಾಗುವುದು.

3) ಗದಗ, ಕೊಪ್ಪಳ ಮತ್ತು ಚಾಮರಾಜನಗರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳು ನಿರ್ಮಾಣವಾಗಿದ್ದು, ಈ ಆಸ್ಪತ್ರೆಗಳಿಗೆ ಅವಶ್ಯವಿರುವ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳ ಖರೀದಿಗಾಗಿ 150 ಕೋಟಿ ರೂ.ಗಳನ್ನು ಒದಗಿಸಲಾಗುವುದು.

4) ಬೆಂಗಳೂರಿನ ನೆಫ್ರೋ-ಯುರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ 20 ಕೋಟಿ ರೂ.ಗಳ ವೆಚ್ಚದಲ್ಲಿ ರೋಬೋಟಿಕ್ ಯಂತ್ರದ ಮೂಲಕ ಉತ್ತಮ ಶಸ್ತ್ರಚಿಕಿತ್ಸೆಯನ್ನು ನೀಡಲು ಕ್ರಮವಹಿಸಲಾಗುವುದು.

5) ವೈದ್ಯಕೀಯ ಕಾಲೇಜುಗಳಲ್ಲಿನ ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ 114 Modular OT ಗಳನ್ನು 177 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.

6) ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ Cathlab ಸೌಲಭ್ಯದೊಂದಿಗೆ Super Speciality Cardiac Unit ಅನ್ನು 10 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪಿಪಿಪಿ ಮಾದರಿಯಲ್ಲಿ Cardiac Unit ಪ್ರಾರಂಭಿಸಲಾಗುವುದು.

7) ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ವೈದ್ಯಕೀಯ ಸಂಸ್ಥೆಗಳಲ್ಲಿ 64 Anaesthesia Workstation ಗಳನ್ನು 34 ಕೋಟಿ ರೂ. ವೆಚ್ಚದಲ್ಲಿ ಖರೀದಿಸಿ ಅಳವಡಿಸಲಾಗುವುದು.

8) ರಾಜ್ಯದಲ್ಲಿ ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ Human Milk Bank ಘಟಕಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ರಾಯಚೂರು, ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಹೊಸ ಘಟಕಗಳನ್ನು ಸ್ಥಾಪಿಸಲಾಗುವುದು.

9) ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅಪಾಯಕಾರಿ ಸಾಂಕ್ರಾಮಿಕ ರೋಗಗಳು ಮತ್ತು ವೈರಲ್ ಸೋಂಕುಗಳನ್ನು ಪತ್ತೆ ಹಚ್ಚಲು Viral Research & Diagnostic Laboratory (VRDL) ಅನ್ನು ಸ್ಥಾಪಿಸಲಾಗುವುದು.

10) ಸಾರ್ವಜನಿಕರ ಎಲ್ಲಾ ಆರೋಗ್ಯ ಮಾಹಿತಿಯನ್ನು ಡಿಜಿಟಲೀಕರಣಗೊಳಿಸುವ ಸಂಬಂಧ ಡಿಜಿಟಲ್ ಹೆಲ್ತ್ ಸೊಸೈಟಿಯನ್ನು ಆರಂಭಿಸಲು ಈಗಾಗಲೇ ಕ್ರಮವಹಿಸಲಾಗಿರುತ್ತದೆ. ಇದರಡಿಯಲ್ಲಿ ಒಂದು Health Repository ಯನ್ನು ಸೃಜಿಸಿ ಸಾರ್ವಜನಿಕರ ಚಿಕಿತ್ಸಾ ಮಾಹಿತಿಯು ಒಂದೇ ಮೂಲದಿಂದ ಎಲ್ಲಾ ಆಸ್ಪತ್ರೆಗಳು ಮತ್ತು ವೈದ್ಯರಿಗೆ ಲಭ್ಯವಾಗುವಂತೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಆಸ್ಪತ್ರೆಗಳಿಗೆ ಶಿಫಾರಸ್ಸು ಮಾಡುವುದನ್ನು ಮತ್ತು ಚಿಕಿತ್ಸಾ ಸಮಯವನ್ನು ಸ್ವಯಂಚಾಲಿತವಾಗಿ ನಿಗದಿಪಡಿಸುವ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು.

11) ಚಿತ್ರದುರ್ಗ ಜಿಲ್ಲೆಯಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು 500 ಕೋಟಿ ರೂ.ಗಳ ವೆಚ್ಚದಲ್ಲಿ 2023-24ನೇ ಸಾಲಿನಿಂದ 150 ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳ ದಾಖಲಾತಿಯೊಂದಿಗೆ ಪ್ರಾರಂಭಿಸಲಾಗಿರುತ್ತದೆ. ವೈದ್ಯಕೀಯ ಕಾಲೇಜಿನ ಕಟ್ಟಡ, ವಿದ್ಯಾರ್ಥಿ ವಸತಿ ನಿಲಯ, ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.

12) ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಮೈಸೂರು ವೈದ್ಯಕೀಯ ಮಹಾವಿದ್ಯಾಲಯದ ಶತಮಾನೋತ್ಸವದ ನೆನಪಿಗಾಗಿ ಕೆ.ಆರ್. ಆಸ್ಪತ್ರೆ ಆವರಣದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಹೊರ ರೋಗಿ ವಿಭಾಗದ ಕಟ್ಟಡವನ್ನು ನಿರ್ಮಿಸಲಾಗುವುದು.

ಇದನ್ನೂ ಓದಿ: Karnataka Budget 2024 : ಸಿದ್ದು ಬಜೆಟ್‌ನ ಘೋಷಣೆಗಳ ಸಂಪೂರ್ಣ ಪಟ್ಟಿ; ಇದನ್ನು ಓದಿದ್ರೆ ಸಾಕು!

Continue Reading
Advertisement
Lok sabha election-2024
Latest2 mins ago

Lok sabha Election‌ 2024: ಲೋಕಸಭೆ ಚುನಾವಣೆಯಲ್ಲಿ ಈ 10 ವಿಷಯಗಳೇ ನಿರ್ಣಾಯಕ

Nenapirali Prem New Movie announced
ಸ್ಯಾಂಡಲ್ ವುಡ್12 mins ago

Nenapirali Prem: ಪೊಲೀಸ್ ಖದರ್‌ನಲ್ಲಿ `ನೆನಪಿರಲಿ ಪ್ರೇಮ್’: ಹೊಸ ಸಿನಿಮಾ ಅನೌನ್ಸ್‌!

Neha murder case Karnataka is becoming another Bihar says Basavaraj Bommai
ಕರ್ನಾಟಕ15 mins ago

Neha Murder Case: ನೇಹಾ ಕೊಲೆ ಕೇಸ್; ಕರ್ನಾಟಕ ಮತ್ತೊಂದು ಬಿಹಾರವಾಗುತ್ತಿದೆ: ಬಸವರಾಜ ಬೊಮ್ಮಾಯಿ

Assault Case
ಬೆಂಗಳೂರು16 mins ago

Assault Case: ಸಿಸಿಬಿ ಪೊಲೀಸರ ಮೇಲೆ ಕಲ್ಲು, ದೊಣ್ಣೆಯಿಂದ ನೈಜೀರಿಯಾ ಪ್ರಜೆಗಳು ಅಟ್ಯಾಕ್‌

India’s Russian oil imports hit record high in February
ಪ್ರಮುಖ ಸುದ್ದಿ22 mins ago

Israel- Iran war: ಇರಾನ್‌ ವಾಯುನೆಲೆ ಮೇಲೆ ಇಸ್ರೇಲ್‌ ದಾಳಿ ಆರಂಭ; ಕಚ್ಚಾ ತೈಲ ಬೆಲೆ 4% ಏರಿಕೆ

Teja Sajja Hanuman Movie Feme Mirai announce
ಟಾಲಿವುಡ್32 mins ago

Teja Sajja: ಹೊಸ ಸಿನಿಮಾ ಅನೌನ್ಸ್‌ ಮಾಡಿದ ʻಹನುಮಾನ್ʼ ಹೀರೊ ತೇಜ್ ಸಜ್ಜಾ

Murder case Man stabbed to death 9 times for refusing to love
ಪ್ರಮುಖ ಸುದ್ದಿ41 mins ago

Neha Murder Case: ನೇಹಾ ಕೊಲೆಗಾರ ಫಯಾಜ್‌ಗೆ 14 ದಿನ ನ್ಯಾಯಾಂಗ ಬಂಧನ; ʼಲವ್‌ ಜಿಹಾದ್‌ ಕೊಲೆʼ ವಿರೋಧಿಸಿ ಮೂರು ದಿನ ಮುನವಳ್ಳಿ ಬಂದ್

Viral Video
ವೈರಲ್ ನ್ಯೂಸ್41 mins ago

Viral Video: ಶಾಲೆಯಲ್ಲಿ ಪಾಠ ಮಾಡುವ ಬದಲು ಫೇಶಿಯಲ್ ಮಾಡಿಕೊಂಡು ಸಿಕ್ಕಿಬಿದ್ದ ಪ್ರಿನ್ಸಿಪಾಲ್!

IPL 2024
ಕ್ರೀಡೆ42 mins ago

IPL 2024: ಮುಂಬೈ ಗೆದ್ದರೂ ಪಾಂಡ್ಯಗಿಲ್ಲ ಖುಷಿ; ನಿಧಾನಗತಿಯ ಓವರ್​ಗೆ ಬಿತ್ತು 12 ಲಕ್ಷ ದಂಡ

Murder Case
ಬೆಂಗಳೂರು1 hour ago

Murder case : ಬೆಂಗಳೂರಲ್ಲಿ ರಕ್ತದೋಕುಳಿ; ಪ್ರತ್ಯೇಕ ಕಡೆಗಳಲ್ಲಿ ಯುವಕರಿಬ್ಬರ ಬರ್ಬರ ಹತ್ಯೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ7 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ7 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ1 week ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

ಟ್ರೆಂಡಿಂಗ್‌