Modi in Shivamogga : ಈ ಬಾರಿ 400 ಮೀರಿ; ಶಿವಮೊಗ್ಗದಲ್ಲಿ ನರೇಂದ್ರ ಮೋದಿ ಘೋಷವಾಕ್ಯ - Vistara News

ಶಿವಮೊಗ್ಗ

Modi in Shivamogga : ಈ ಬಾರಿ 400 ಮೀರಿ; ಶಿವಮೊಗ್ಗದಲ್ಲಿ ನರೇಂದ್ರ ಮೋದಿ ಘೋಷವಾಕ್ಯ

Modi in Shivamogga: ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಈ ವೇಳೆ ಕಾಂಗ್ರೆಸ್‌ ಮೇಲೆ ತೀವ್ರ ವಾಕ್‌ ಪ್ರಹಾರ ನಡೆಸಿದರು. ಸಮಾವೇಶದಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಡಾ. ಸಿ.ಎನ್‌. ಮಂಜುನಾಥ್‌ ಅವರು ಬಿಜೆಪಿಗೆ ಸೇರ್ಪಡೆಗೊಂಡರು.

VISTARANEWS.COM


on

Modi in Shivamogga
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ : ಈ ಬಾರಿ 400 ಮೀರಿ – ಇದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಶಿವಮೊಗ್ಗದ ಅಲ್ಲಮ ಪ್ರಭು ಮೈದಾನದಲ್ಲಿ (Modi in Shivamogga) ನಡೆದ ಬಿಜೆಪಿಯ ಲೋಕಸಭಾ ಚುನಾವಣಾ (Lok Sabha Election 2024) ಪ್ರಚಾರ ಸಮಾವೇಶದಲ್ಲಿ ನೀಡಿದ ಹೊಸ ಘೋಷ ವಾಕ್ಯ. ಈ ಬಾರಿ ದೇಶದ ಜನರು ಬಿಜೆಪಿಗೆ 400ಕ್ಕೂ ಅಧಿಕ ಸ್ಥಾನಗಳನ್ನು ನೀಡಲು ಸಿದ್ಧರಾಗಿದ್ದಾರೆ ಎಂದು ಪ್ರಧಾನಿ ಹೇಳಿದರು ಮತ್ತು ಅದನ್ನು ಸಾಧ್ಯಗೊಳಿಸಲು ಕರ್ನಾಟಕದ ಎಲ್ಲ 28 ಕ್ಷೇತ್ರಗಳಲ್ಲೂ ಬಿಜೆಪಿಯನ್ನು ಗೆಲ್ಲಿಸಿ ಎಂದು ಕರೆ ನೀಡಿದರು.

ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಾಹನ ರ‍್ಯಾಲಿಯಲ್ಲಿ ಅಲ್ಲಮ ಪ್ರಭು ಮೈದಾನಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರು ಸಭಾಂಗಣದ ಒಳಗೆ ತೆರೆದ ವಾಹನದ ರ‍್ಯಾಲಿ ನಡೆಸಿ ಎಲ್ಲರನ್ನೂ ಆತ್ಮೀಯವಾಗಿ ಎದುರ್ಗೊಂಡರು. ಅಲ್ಲಿಂದ ವೇದಿಕೆಗೆ ತೆರಳಿದಾಗ ಇಡೀ ಮೈದಾನದಲ್ಲಿ ಹೈ ಮೋದಿ, ಜೈ ಶ್ರೀರಾಮ್‌ ಎಂಬ ಘೋಷ ವಾಕ್ಯ ಮೊಳಗಿತು.

ಭಾಷಣದ ಆರಂಭದಲ್ಲಿ ಶಕ್ತಿ ಸ್ವರೂಪಿಣಿ ಸಿಗಂಧೂರು ಚೌಡೇಶ್ವರಿಯನ್ನು ನೆನಪಿಸಿಕೊಂಡ ಪ್ರಧಾನಿ ಮೋದಿ ಅವರು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರು ಕರ್ನಾಟಕದಲ್ಲಿ ಬಿಜೆಪಿಯನ್ನು ಕಟ್ಟಲು ಪಟ್ಟ ಕಷ್ಟವನ್ನೂ ಕಣ್ಣೆದುರು ತೆರೆದಿಟ್ಟರು. ಇಲ್ಲಿ ಒಬ್ಬ ಬಿಜೆಪಿ ಕಾರ್ಯಕರ್ತ ಮುನ್ಸಿಪಾಲಿಟಿ ಮೆಂಬರ್‌ ಆಗುವ ಪರಿಸ್ಥಿತಿ ಇರಲಿಲ್ಲ. ಆ ಕಾಲದಲ್ಲಿ ಬಿ.ಎಸ್‌ ಯಡಿಯೂರಪ್ಪ ಅವರು ತಮ್ಮ ಯೌವನವನ್ನು ಇಲ್ಲಿ ಬಿಜೆಪಿಗಾಗಿ ಸಮರ್ಪಿಸಿದರು. ಇದು ಯಡಿಯೂರಪ್ಪ ಅವರ ತಪೋಭೂಮಿಯಾಗಿ ಬೆಳೆದು ಬಿಜೆಪಿಯ ಶಕ್ತಿಯಾಗಿದೆ ಎಂದರು.

ಯಾಕೆ ಈ ಬಾರಿ ಯಾಕೆ ಬಿಜೆಪಿಗೆ 400 ಸ್ಥಾನ ಬೇಕು?

ಈ ಚುನಾವಣೆಯಲ್ಲಿ ಬಿಜೆಪಿಗೆ ನಾಲ್ಕು ನೂರಕ್ಕೂ ಅಧಿಕ ಸ್ಥಾನ ಕೊಡಬೇಕು ಎಂದು ಕೇಳಿದ ಅವರು ಅದಕ್ಕೆ ಕೆಲವು ಕಾರಣಗಳನ್ನು ನೀಡಿದರು. ವಿಕಸಿತ ಭಾರತಕ್ಕಾಗಿ, ವಿಕಸಿತ ಕರ್ನಾಟಕಕ್ಕಾಗಿ, ಯುವಜನರ ಆಶಾವಾದ ಪೂರೈಸಲು, ಬಡವರ ಕಲ್ಯಾಣಕ್ಕಾಗಿ, ರೈತರ ಅಭಿವೃದ್ಧಿಗಾಗಿ, ಭಯೋತ್ಪಾದನೆ ನಿಗ್ರಹಕ್ಕಾಗಿ, ಕಾಶ್ಮೀರದ ಅಭಿವೃದ್ಧಿಗಾಗಿ, ಮಹಿಳೆಯರ ಸಬಲೀಕರಣಕ್ಕಾಗಿ ಬಿಜೆಪಿಗೆ 400ಕ್ಕೂ ಅಧಿಕ ಸ್ಥಾನ ಬೇಕು ಎಂದು ಕೇಳಿದರು.

ಕಾಂಗ್ರೆಸ್‌ಗೆ ಒಂದು ಅಭಿವೃದ್ಧಿಯ ಅಜೆಂಡಾವೇ ಇಲ್ಲ

ಕಾಂಗ್ರೆಸ್‌ ನ್ನು ತಮ್ಮ ತೀವ್ರ ವಾಗ್ಬಾಣಗಳಿಂದ ಚುಚ್ಚಿದ ಅವರು, ಕಾಂಗ್ರೆಸ್‌ ಪಕ್ಷಕ್ಕೆ ಅಭಿವೃದ್ಧಿಯ ಅಜೆಂಡಾವೇ ಇಲ್ಲ ಎಂದರು.

ಕಾಂಗ್ರೆಸ್‌ನ ಪ್ರಮುಖ ಅಜೆಂಡಾ ಸುಳ್ಳು ಹೇಳುವುದು. ಒಂದು ಬಾರಿ ಸುಳ್ಳು ಹೇಳುವುದು, ಅದನ್ನು ಮತ್ತೆ ಮತ್ತೆ ಹೇಳುವುದು, ದೊಡ್ಡ ದೊಡ್ಡ ಸುಳ್ಳು ಹೇಳುವುದು, ಸುಳ್ಳುಗಳನ್ನು ನಿಜವೆಂದು ಸಾಧಿಸಲು ಮತ್ತಷ್ಟು ಸುಳ್ಳು ಹೇಳುವುದು ಎಂದು ಪ್ರಧಾನಿ ಗೇಲಿ ಮಾಡಿದರು. ಒಂದೊಮ್ಮೆ ಏನಾದರೂ ತಪ್ಪು ಮಾಡಿ ಸಿಕ್ಕಿ ಬಿದ್ದರೆ ಅದನ್ನು ಬೇರೆಯವರ ತಲೆಗೆ ಕಟ್ಟಿ ಸುಮ್ಮನಿರುವುದು ಅದರ ಪ್ರಧಾನ ಅಜೆಂಡಾ ಎಂದರು.

ಕರ್ನಾಟಕದಲ್ಲಿ ಎಷ್ಟೊಂದು ಸಿಎಂಗಳಿದ್ದಾರೆ ಗೊತ್ತಾ?

ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಆಡಳಿತ ನಡೆಸಲು ಒಂದು ಅವಕಾಶ ಸಿಕ್ಕಿದೆ. ಅದನ್ನು ಅವರು ಅವರನ್ನು ಸದುಪಯೋಗಪಡಿಸಿಕೊಳ್ಳುವ ಬದಲು ದುರುಪಯೋಗ ಪಡಿಸಿಕೊಂಡಿದ್ದಾರೆ. ಇಲ್ಲಿ ಅಭಿವೃದ್ಧಿಗೆ ಯಾವುದೇ ಕಾರ್ಯಕ್ರಮಗಳಿಲ್ಲ. ಅಭಿವೃದ್ಧಿಗೆ ನಯಾ ಪೈಸೆ ಕೂಡಾ ಇಲ್ಲ ಎಂದು ಹೇಳಿದರು.

ಕರ್ನಾಟಕವನ್ನು ಅವರು ಕಾಂಗ್ರೆಸ್‌ನ ಎಟಿಎಂ ಮಾಡಿಕೊಳ್ಳಲು ಬಳಸಿಕೊಂಡಿದ್ದಾರೆ. ಹೀಗಾಗಿ ಇಲ್ಲಿ ಅಭಿವೃದ್ಧಿಗೆ ಹಣವೇ ಇಲ್ಲದಂತಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ರಾಜ್ಯದಲ್ಲಿ ಇರುವುದು ಒಬ್ಬ ಮುಖ್ಯಮಂತ್ರಿಯಲ್ಲ. ಹಲವು ಮುಖ್ಯಮಂತ್ರಿಗಳಿದ್ದಾರೆ ಎಂದ ಅವರು ಇಲ್ಲಿ ಒಬ್ಬರು ಸಿಎಂ ಆಗಲು ಕಾಯುತ್ತಿದ್ದಾರೆ, ಅವರು ಸಿಎಂ ಇನ್‌ ವೇಟಿಂಗ್‌, ಇಲ್ಲಿ ಹಲವರು ಮುಂದಿನ ಸಿಎಂ ಆಗಲು ಆಕಾಂಕ್ಷಿಗಳಾಗಿದ್ದಾರೆ, ಕಾತರರಾಗಿದ್ದಾರೆ. ಇಲ್ಲಿ ಸೂಪರ್‌ ಸಿಎಂಗಳಿದ್ದಾರೆ, ಶ್ಯಾಡೋ (ಛಾಯಾ) ಸಿಎಂಗಳಿದ್ದಾರೆ. ಇವರ ನಡುವೆ ದಿಲ್ಲಿಯ ಒಬ್ಬ ಕಲೆಕ್ಷನ್‌ ಮಿನಿಸ್ಟರ್‌ ಕೂಡಾ ಇದ್ದಾರೆ ಎಂದು ಮೋದಿ ಹೇಳಿದರು.

ಕಾಂಗ್ರೆಸ್‌ನ ಈ ಎಲ್ಲ ಅಪಸವ್ಯಗಳಿಂದ ಜನರು ಎಷ್ಟೊಂದು ಅಕ್ರೋಶಿತರಾಗಿದ್ದಾರೆ ಎಂದರೆ ಈ ಬಾರಿ ಎಲ್ಲ 28 ಸಂಸತ್‌ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು ಪ್ರಧಾನಿ ಮೋದಿ.

Modi in Shivamogga rally6

ಶಿವಮೊಗ್ಗ, ದಾವಣಗೆರೆ, ಉಡುಪಿ-ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳ ಸಮಾವೇಶ ಇದಾಗಿದ್ದು, ಬಿಜೆಪಿ ಅಭ್ಯರ್ಥಿಗಳಾd ಬಿ.ವೈ ರಾಘವೇಂದ್ರ, ಗಾಯತ್ರಿ ಸಿದ್ದೇಶ್ವರ್‌, ಕೋಟ ಶ್ರೀನಿವಾಸ ಪೂಜಾರಿ ಮತ್ತು ಕ್ಯಾ. ಬ್ರಿಜೇಶ್‌ ಚೌಟ ಭಾಗವಹಿಸಿದ್ದರು. ಬಿಜೆಪಿ ಹಿರಿಯ ನಾಯಕ ಬಿ.ಎಸ್‌. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು.

ಇದನ್ನೂ ಓದಿ : Modi in Shivamogga LIVE : ಮಲೆನಾಡಿನಲ್ಲಿ ಮೋದಿ ಮತ ಶಿಕಾರಿ, ಬಿಸಿಲಲ್ಲೂ ರಣೋತ್ಸಾಹ : ಇಲ್ಲೇ LIVE ನೋಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ರಾಜ್ಯದಲ್ಲಿ ತಗ್ಗಿದ ಮಳೆ ಪ್ರಮಾಣ; ಸ್ವಲ್ಪ ಕಡೆ ವರುಣ ಸಾಧಾರಣ, ಗಾಳಿ ರಭಸ ಅಸಾಧಾರಣ

Rain News : ರಾಜ್ಯಾದ್ಯಂತ ಬ್ರೇಕ್‌ ಕೊಟ್ಟಿದ್ದ ವರುಣ ಜೂನ್‌ ಮೊದಲ ವಾರದಿಂದ ಮತ್ತೆ ಅಬ್ಬರಿಸಲಿದ್ದಾನೆ. ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ರಭಸವಾಗಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ (Rain news) ಪ್ರಮಾಣವು ತಗ್ಗಿದೆ. ಕಳೆದ ಎರಡ್ಮೂರು ದಿನದಿಂದ ಮಳೆಯು ಕಣ್ಮರೆಯಾಗಿದೆ. ನಿನ್ನೆ ಗುರುವಾರ ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ (Karnataka Weather Forecast) ಮಳೆಯಾಗಿದೆ. ಉಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ (Dry Weather) ಇತ್ತು.

ಶಿವಮೊಗ್ಗದ ಆಗುಂಬೆಯಲ್ಲಿ 5 ಸೆಂ.ಮೀ, ಕೊಡಗಿನ ಗೋಣಿಕೊಪ್ಪಲು 3 ಸೆಂ.ಮೀ ಮಳೆಯಾಗಿದೆ. ಹಾಗೇ ದಕ್ಷಿಣ ಕನ್ನಡದ ಧರ್ಮಸ್ಥಳ, ಉಡುಪಿಯ ಕೋಟ, ಉತ್ತರ ಕನ್ನಡದ ಮಂಕಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಇನ್ನೂ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 41.3 ಡಿ.ಸೆ ದಾಖಲಾಗಿತ್ತು.

ಇದನ್ನೂ ಓದಿ: World No Tobacco Day: ತಂಬಾಕಿನ ಚಟ ಎಷ್ಟೊಂದು ರೋಗಗಗಳಿಗೆ ಕಾರಣ ಆಗುತ್ತದೆ ನೋಡಿ!

ನಾಳೆಯಿಂದ ಮತ್ತೆ ಶುರುವಾಗುತ್ತಾ ಅಬ್ಬರ?

ದಕ್ಷಿಣ ಒಳನಾಡು ಹಾಗೂ ಮಲೆನಾಡಿನ ಭಾಗಗಳಲ್ಲಿ ಮಳೆ ಅಬ್ಬರ ಇರಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ 30-40 ಕಿ.ಮೀ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ.

ಇನ್ನೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: Kukke Subramanya: ಹೊಳೆ ಉಕ್ಕಿ ಹರಿದು ಕೊಚ್ಚಿ ಹೋದ ಪಿಕ್ಅಪ್ ವಾಹನ; ಚಾಲಕನ ರಕ್ಷಣೆ

ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಹಾವೇರಿ, ಕಲಬುಲಗಿ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿಗುಡುಗು ಸಹಿತ ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ 40-50 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಮೇಲ್ಮೈ ಮಾರುತಗಳು (30-40 kmph) ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಮೇಲೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ಮುಂದಿನ 24 ಗಂಟೆಯಲ್ಲಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿಯಲಿದೆ. ಕೆಲವೊಮ್ಮೆ ಹಗುರ ಮಳೆಯಾಗಲಿದ್ದು, ಮೇಲ್ಮೈ ಗಾಳಿಯು ಪ್ರಬಲವಾಗಿರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Road Accident : ಸ್ಕೂಟರ್‌ ಪಲ್ಟಿಯಾಗಿ ದಂಪತಿ ನರಳಾಟ; ನೆರವಿಗೆ ಧಾವಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

Road Accident : ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ದಂಪತಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ನೆರವಿಗೆ ಧಾವಿಸಿದ್ದರು. ಇತ್ತ ಹಾಸನದಲ್ಲಿ ಕುಡಿದು ಅಡ್ಡಾದಿಡ್ಡಿಯಾಗಿ ಕಾರು ಓಡಿಸಿದ್ದಲ್ಲದೇ, ಬಸ್ಸಿಗೆ ಅಡ್ಡ ಹಾಕಿ ಆವಾಜ್‌ ಹಾಕಿದ ಕುಡುಕ ಚಾಲಕನನ್ನು ಹಿಡಿದು ಥಳಿಸಿದ್ದಾರೆ.

VISTARANEWS.COM


on

By

Road Accident
Koo

ಶಿವಮೊಗ್ಗ: ಸವಾರನ ನಿಯಂತ್ರಣ ತಪ್ಪಿದ ಸ್ಕೂಟರ್‌ ಅಪಘಾತಕ್ಕೀಡಾಗಿದ್ದು, ನಡು ರಸ್ತೆಯಲ್ಲಿ ದಂಪತಿ (Road Accident) ಗೋಳಾಡಿದ್ದಾರೆ. ಶಿವಮೊಗ್ಗದ ಸಾಗರ ತಾಲೂಕಿನ ಆನಂದಪುರ ಸಮೀಪದ ಹೊಸಗುಂದ ಬಳಿ ಘಟನೆ ನಡೆದಿದೆ. ಸ್ಕೂಟರ್‌ ಪಲ್ಟಿಯಾದ ಹಿನ್ನೆಲೆಯಲ್ಲಿ ದಂಪತಿ ರಸ್ತೆ ಬದಿ ಬಿದ್ದು ನರಳಾಡುತ್ತಿದ್ದರು. ಇದೇ ಮಾರ್ಗದಲ್ಲಿ ಆನಂದಪುರ ಕಡೆಗೆ ಆಗಮಿಸುತ್ತಿದ್ದ ಶಾಸಕ ಬೇಳೂರು ಗೋಪಾಲಕೃಷ್ಣ ನೆರವಿಗೆ ಧಾವಿಸಿದ್ದಾರೆ.

ಅಪಘಾತದಿಂದ ಒದ್ದಾಡುತ್ತಿದ್ದ ಗಾಯಾಳು ದಂಪತಿಯನ್ನು ಕೂಡಲೇ ತಮ್ಮ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಅದೃಷ್ಟವಶಾತ್ ಶಾಸಕರ ಸಮಯ ಪ್ರಜ್ಞೆಯಿಂದ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಾಸನದಲ್ಲಿ ಕುಡುಕ ಚಾಲಕನಿಗೆ ಧರ್ಮದೇಟು

ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರು ಓಡಿಸಿದ ಚಾಲಕನೊಬ್ಬ ಸಾರಿಗೆ ಬಸ್‌ಗೆ ಅಡ್ಡ ಹಾಕಿದ್ದಾನೆ. ಬಳಿಕ ಬಸ್‌ವೊಳಗೆ ಹೋಗಿ ಬಸ್‌ ಡೈವರ್‌ಗೆ ಅವಾಜ್‌ ಹಾಕಿದ್ದಾನೆ. ಇದರಿಂದ ಸಿಟ್ಟಾದ ಚಾಲಕ ಹಾಗೂ ಪ್ರಯಾಣಿಕರು ಕುಡುಕನಿಗೆ ಧರ್ಮದೇಟು ನೀಡಿದ್ದಾರೆ.

ಹಾಸನ: ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ್ದಲ್ಲದೇ, ಕುಡುಕನೊಬ್ಬ ಸಾರಿಗೆ ಬಸ್‌ಗೆ ಅಡ್ಡಲಾಗಿ ಕಾರು ನಿಲ್ಲಿಸಿ ಅವಾಜ್‌ ಹಾಕಿದ್ದಾನೆ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ಭೈರಾಪುರ ಬಳಿ ಘಟನೆ ನಡೆದಿದೆ. ಬಸ್‌ವೊಳಗೆ ನುಗ್ಗಿ ದಾಂಧಲೆ ಮಾಡುತ್ತಿದ್ದ ಕುಡುಕನಿಗೆ ಜನರು ಧರ್ಮದೇಟು ನೀಡಿದ್ದಾರೆ.

ಸಾರಿಗೆ ಬಸ್‌ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿತ್ತು. ಕಂಠಪೂರ್ತಿ ಕುಡಿದು ಹಾಸನದ ಕಡೆಗೆ ಬರುತ್ತಿದ್ದ ಕಾರು ಚಾಲಕ, ಅದೇ ಮತ್ತಿನಲ್ಲಿ ಎದುರಿಗೆ ಬಂದ ಬಸ್‌ಗೆ ಅಡ್ಡಹಾಕಿದ್ದಾನೆ. ಮಾತ್ರವಲ್ಲ ಬಸ್ಸಿನಲ್ಲಿ ಇದ್ದವರಿಗೆ ಅವಾಜ್‌ ಹಾಕಿ ನಿಂದಿಸಿದ್ದಾನೆ. ಈತನ ಹುಚ್ಚಾಟಕ್ಕೆ ಸಿಟ್ಟಾದ ಪ್ರಯಾಣಿಕರು, ಚಾಲಕನೊಟ್ಟಿಗೆ ಸೇರಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಇದರಿಂದಾಗಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Self Harming : ವೆಗಾ ಸಿಟಿ ಮಾಲ್‌ ಮೇಲಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ

ಕುಸಿದು ಬಿದ್ದ ಮನೆಯ ಚಾವಣಿ; ಮಣ್ಣಿನಡಿ ಸಿಲುಕಿ ಮಕ್ಕಳಿಬ್ಬರು ಸಾವು

ಬಾಗಲಕೋಟೆ: ಮನೆಯ ಚಾವಣಿ ಕುಸಿದ ಪರಿಣಾಮ ಇಬ್ಬರು ಮಕ್ಕಳು ದಾರುಣವಾಗಿ (Rooftop collapse) ಮೃತಪಟ್ಟಿದ್ದಾರೆ. ಬಾಗಲಕೋಟೆಯ ಕಂದಗಲ್ಲ ಗ್ರಾಮದಲ್ಲಿ ಘಟನೆ ನಡೆದಿದೆ. ಗೀತಾ ಈಶ್ವರಯ್ಯಾ ಆದಾರಪುರಮಠ (15), ರುದ್ರಯ್ಯಾ ಈಶ್ವರಯ್ಯಾ ಆದಾಪುರಮಠ (10) ಮೃತ ದುರ್ದೈವಿಗಳು.

40-50 ವರ್ಷಗಳಷ್ಟು ಹಳೆಯ ಮನೆಗೆ ಮಣ್ಣಿನ ಚಾವಣಿ ಇತ್ತು. ಇತ್ತೀಚೆಗೆ ಸುರಿದ ಭಾರಿ ಮಳೆಗೆ ಮನೆ ಸೋರಿಕೆಯಾಗಿತ್ತು. ಈ ವೇಳೆ ಚಾವಣಿಗೆ ಮಣ್ಣು ಹಾಕಿ ತಟ್ಟಿ ಸರಿಮಾಡಿಕೊಂಡಿದ್ದರು. ಆದರೆ ಶುಕ್ರವಾರ ಏಕಾಏಕಿ ಮನೆ ಚಾವಣಿ ಕುಸಿದಿದೆ. ಮನೆಯೊಳಗೆ ಇದ್ದ ಮಕ್ಕಳಿಬ್ಬರ ಮೇಲೆ ರಭಸವಾಗಿ ಮಣ್ಣು ಬಿದ್ದಿದೆ.

Rooftop collapse The roof of the house that collapsed Two children die after being trapped under mud

ಈ ದುರ್ಘಟನೆ ನಡೆದಾಗ ಮನೆಯಲ್ಲಿ ಮಕ್ಕಳ ತಂದೆ-ತಾಯಿ ಇರಲಿಲ್ಲ. ಮಕ್ಕಳ ಮೇಲೆ ಚಾವಣಿ ಬಿದ್ದ ಪರಿಣಾಮ ಹೊರಬರಲು ಆಗದೆ ಮಣ್ಣಲ್ಲಿ ಸಿಲುಕಿದ್ದಾರೆ. ಇತ್ತ ಕೂಡಲೇ ಸ್ಥಳೀಯರ ಸಹಾಯದಿಂದ ಮಕ್ಕಳನ್ನು ಹೊರತೆಗೆಯಲಾಯಿತು. ಇಳಕಲ್ಲ ತಾಲ್ಲೂಕಾಸ್ಪತ್ರೆಗೆ ಸಾಗಿಸಲಾಯಿತಾದರೂ ಮಕ್ಕಳಿಬ್ಬರು ಬದುಕುಳಿಯಲಿಲ್ಲ.

 Rooftop collapse

ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಆಸ್ಪತ್ರೆಗೆ ಶಾಸಕ ವಿಜಯಾನಂದ ಕಾಶಪ್ಪನರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬೆಳೆದು ನಿಂತ ಮಕ್ಕಳನ್ನು ಕಳೆದುಕೊಂಡಿದ್ದಕ್ಕೆ ಕಣ್ಣೀರು ಹಾಕಿದರು. ಬಾಗಲಕೋಟೆಯ ಇಳಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದಲ್ಲಿ ಈ ದುರಂತ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯದಲ್ಲಿಂದು ಭಾರಿ ಮಳೆಗೆ ಗುಡುಗು, ಮಿಂಚು ಸಾಥ್‌

Rain News : ರಾಜ್ಯಾದ್ಯಂತ ರಭಸವಾಗಿ ಗಾಳಿ ಬೀಸಲಿದ್ದು, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ 30-40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಮಂಡ್ಯ, ಮೈಸೂರು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದೆಡೆ ಬಹುಶಃ ಒಣಹವೆ ಇರಲಿದೆ.

ಉತ್ತರಒಳನಾಡಿನ ಬೆಳಗಾವಿ, ಹಾವೇರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗಲಿದ್ದು, ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ನಿರೀಕ್ಷೆಯಿದೆ.

ಮಲೆನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಧ್ಯಮ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರು ವ್ಯಾಪ್ತಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ: BMTC Driver : ಬಿಎಂಟಿಸಿ ಎಲೆಕ್ಟ್ರಿಕಲ್‌ ಬಸ್‌ಗೆ ಪರಭಾಷಿಕರ ನೇಮಕ; ಡಿಸಿ ಕಚೇರಿಗೆ ನುಗ್ಗಿ ಕನ್ನಡಿಗರ ಆಕ್ರೋಶ

ಮಳೆ ಬರುವ ಮುನ್ನ ಈ ವನ್ಯಜೀವಿಧಾಮಗಳನ್ನು ನೋಡಲು ಪ್ರಯತ್ನಿಸಿ

ಮಳೆಗಾಲ ಮತ್ತು ಕಾಡು! ಪ್ರಕೃತಿ ಪ್ರಿಯರ ಅತ್ಯಂತ ಇಷ್ಟದ ಕಾಂಬಿನೇಷನ್‌ ಇದು. ಮಳೆಗಾಲದಲ್ಲೊಮ್ಮೆ ಕಾಡಿಗೆ ಕರೆದರೆ ಯಾವ ಪ್ರಕೃತಿಪ್ರೇಮಿ ಬೇಡ ಅನ್ನಲಾರ ಹೇಳಿ? ವನ್ಯಜೀವಿ ಪ್ರಿಯರ, ಪ್ರಕೃತಿಪ್ರಿಯರ ಈ ಆಸೆಗೆ ತಣ್ಣೀರೆರಚುವಂತೆ ಮಳೆಗಾಲ ಬಂದ ತಕ್ಷಣ ರಾಷ್ಟ್ರೀಯ ಉದ್ಯಾನ/ವನ್ಯಜೀವಿಧಾಮಗಳೆಲ್ಲ ಬಾಗಿಲು ಮುಚ್ಚುತ್ತವೆ. ಕಾಡಿನ ಮದ್ಯದಲ್ಲಿ ಸಫಾರಿ ಹೋಗಲು, ವನ್ಯಜೀವಿಗಳ ಬೆನ್ನು ಹತ್ತಲು ಯಾರಿಗೂ ಆಸ್ಪದವಿಲ್ಲ. ಆದರೂ, ಪ್ರಕೃತಿ ಪ್ರಿಯರೆಲ್ಲ ಇಂತಹ ರಾಷ್ಟ್ರೀಯ ಉದ್ಯಾನ/ ವನ್ಯಜೀವಿಧಾಮಗಳು ಮುಚ್ಚಿಕೊಳ್ಳುವ ಕೆಲವೇ ದಿನಗಳ ಮುಂಚಿತವಾಗಿ ಅಲ್ಲಿಗೆ ಭೇಟಿ ಕೊಡಬೇಕು. ಮಳೆಗಾಲ ಈಗಷ್ಟೇ ಶುರುವಾದ ವನ್ಯಜೀವಿಧಾಮದಲ್ಲಿ ತಿರುಗಾಡಿ ಬರುವುದೇ ಹಬ್ಬ. ಒಂದೆರಡು ಮಳೆ ಸುರಿದು ಕಾಡೆಲ್ಲ ಕಳೆಕಳೆಯಾಗಿ ಹಸಿರಾಗಿ ಚಿಗಿತುಕೊಂಡು ಅದ್ಭುತ ದೃಶ್ಯಗಳನ್ನು ನಿಮಗೆ ನೀಡುವ ಜೊತೆಗೆ ರೋಮಾಂಚಕ ಅನುಭವಗಳನ್ನು ನೀಡುತ್ತವೆ. ಬನ್ನಿ, ಯಾವೆಲ್ಲ ರಾಷ್ಟ್ರೀಯ ಉದ್ಯಾನಗಳನ್ನು ಮಳೆಗಾಲಕ್ಕೆ ಸ್ವಲ್ಪವೇ ಮುನ್ನ ನೀವು ನೋಡುವುದೇ ಒಂದು ಅನುಭವ (wildlife sanctuaries) ಎಂಬುದನ್ನು ತಿಳಿಯೋಣ ಬನ್ನಿ.

Jim Corbett National Park, Uttarakhand

ಜಿಮ್‌ ಕಾರ್ಬೆಟ್‌ ರಾಷ್ಟ್ರೀಯ ಉದ್ಯಾನ, ಉತ್ತರಾಖಂಡ

ಉತ್ತರಾಖಂಡದ ಬಹು ಪ್ರಸಿದ್ಧ ರಾಷ್ಟ್ರೀಯ ಉದ್ಯಾನ ಭಾರತದ ಅತ್ಯಂತ ಹಳೆಯ ವನ್ಯಜೀವಿಧಾಮಗಳಲ್ಲಿ ಒಂದು. ಹುಲಿಗಳನ್ನು ಕಾಣಲು ಇದು ಪ್ರಶಸ್ತ ಜಾಗ. ಜೂನ್‌ ಮದ್ಯದಲ್ಲಿ ಇದು ಮುಚ್ಚಿದರೆ ಮತ್ತೆ ತೆರೆಯುವುದು ಅಕ್ಟೋಬರ್‌ನಲ್ಲಿಯೇ. ಆದರೆ, ಜೂನ್‌ ಆರಂಭದಲ್ಲಿ ಈ ಕಾಡು ನೋಡುವುದು ಬಲು ಸೊಗಸು.

Ranthambore National Park, Rajasthan

ರಣಥಂಬೋರ್‌ ರಾಷ್ಟ್ರೀಯ ಉದ್ಯಾನ, ರಾಜಸ್ಥಾನ

ಭಾರತದ ದೊಡ್ಡ ರಾಷ್ಟ್ರೀಯ ಉದ್ಯಾನಗಳ ಪೈಕಿ ಇದೂ ಒಂದು. ಹುಲಿಗಳನ್ನು ನೋಡಬೇಕೆಂದು ಬಯಸುವ ಪ್ರತಿ ವನ್ಯಜೀವಿ ಪ್ರೇಮಿ ಹಾಗೂ ವನ್ಯಜೀವಿ ಛಾಯಾಗ್ರಾಹಕರು ಈ ರಾಷ್ಟ್ರೀಯ ಉದ್ಯಾನಕ್ಕೆ ಬೇಟಿ ಕೊಡಲು ಬಯಸುವುದು ಸಾಮಾನ್ಯ. ಇದು ಜೂನ್‌ 30ರ ವೇಳೆಗೆ ಮುಚ್ಚುವ ಕಾರಣ ಅದಕ್ಕೂ ಮೊದಲು ಬೇಟಿ ಕೊಟ್ಟರೆ ಅಪರೂಪದ ಅನುಭವಗಳು ನಿಮ್ಮದಾಗಬಹುದು.

Bandhavgarh National Park, Madhya Pradesh

ಬಾಂಧವಗಢ ರಾಷ್ಟ್ರೀಯ ಉದ್ಯಾನ, ಮಧ್ಯಪ್ರದೇಶ

ಹುಲಿಯನ್ನು ನೋಡಲು ಬಯಸುವ ಪ್ರತಿಯೊಬ್ಬ ವನ್ಯಜೀವಿ ಪ್ರಿಯರಿಗೂ ತಿಳಿದ ವನ್ಯಜೀವಿಧಾಮ ಇದು. ಇಲ್ಲಿ ಹುಲಿ ದರ್ಶನದ ಸಾಧ್ಯತೆ ಹೆಚ್ಚು. ಈಗಷ್ಟೇ ಮಳೆಬಿದ್ದ ಕಾಡು ಹಸಿರಾಗಿ ಕಂಗೊಳಿಸುವ ಸಂದರ್ಭ ಮಧ್ಯದಲ್ಲಿ ಆಕಳಿಸುತ್ತಾ ಕುಳಿತ ಹುಲಿಯನ್ನೊಮ್ಮೆ ಕಲ್ಪಿಸಿ ನೋಡಿ. ರೋಮಾಂಚಿತಗೊಳ್ಳುವುದಿಲ್ಲವೇ ಹೇಳಿ! ಜುಲೈನಿಂದ ಅಕ್ಟೋಬರ್‌ವರೆಗೆ ಈದು ಮುಚ್ಚಿರುವ ಕಾರಣ ಜೂನ್‌ನಲ್ಲಿ ಭೇಟಿಕೊಡಲು ಸುಸಮಯ.

Kanha National Park, Madhya Pradesh

ಕನ್ಹಾ ರಾಷ್ಟ್ರೀಯ ಉದ್ಯಾನ, ಮಧ್ಯಪ್ರದೇಶ

ಇದೂ ಕೂಡಾ ಹುಲಿಗಳಿಗೆ ಬಲುಪ್ರಸಿದ್ಧವಾದ ರಾಷ್ಟ್ರೀಯ ಉದ್ಯಾನ. ಮಳೆಗಾಲ ಆರಂಭವಾದ ತಕ್ಷಣ ಕಾಣಲು ಇದು ಬಲು ಚಂದ. ಜೂನ್‌ 30ರಿಂದ ಅಕ್ಟೋಬರ್‌ 15ರವರೆಗೆ ಇದು ಮುಚ್ಚಿರುತ್ತದೆ.

Pench National Park, Madhya Pradesh and Maharashtra

ಪೆಂಚ್‌ ರಾಷ್ಟ್ರೀಯ ಉದ್ಯಾನ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ

ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದ ಗಡಿಯಲ್ಲಿರುವ ಈ ರಾಷ್ಟ್ರೀಯ ಉದ್ಯಾನ ಅತ್ಯಂತ ಸುಂದರವಾದ ಕಾಡುಗಳಲ್ಲಿ ಒಂದು. ರುಡ್ಯಾರ್ಡ್‌ ಕಿಪ್ಲಿಂಗ್‌ ಅವರ ದಿ ಜಂಗಲ್‌ ಬುಕ್‌ ಇದೇ ಕಾಡಿನಿಂದ ಸ್ಪೂರ್ತಿಗೊಂಡು ರಚಿತವಾದ ಕತೆ. ಹೆಚ್ಚು ಹುಲಿಗಳಿರುವ ಈ ಕಾಡು ಜೂನ್‌ 16ರಿಂದ ಸೆಪ್ಟೆಂಬರ್‌ವರೆಗೆ ಪ್ರವಾಸಿಗರಿಗೆ ಮುಚ್ಚಿರುತ್ತದೆ.

Nagarhole National Park, Karnataka

ನಾಗರಹೊಳೆ ರಾಷ್ಟ್ರೀಯ ಉದ್ಯಾನ, ಕರ್ನಾಟಕ

ನಮ್ಮ ಕರ್ನಾಟಕದ ನಾಗರಹೊಳೆ ರಾಷ್ಟ್ರೀಯ ಉದ್ಯಾನ ಭಾರತದ ಅತ್ಯಂತ ಸುಂದರವಾದ ವನ್ಯಜೀವಿಧಾಮಗಳಲ್ಲಿ ಒಂದು. ಹುಲಿಗಳ ಜೊತೆಗೆ ಆನೆ, ಚಿರತೆ, ಜಿಂಕೆ, ಕಾಡಮ್ಮೆಗಳೂ ಸೇರಿದಂತೆ ಅನೇಕ ಪ್ರಾಣಿಗಳ ಸಂತಿತಿ ಇಲ್ಲಿ ವಿಪುಲವಾಗಿದೆ. ಮಳೆ ಈಗಷ್ಟೇ ಬರಲು ಆರಂಭವಾಗುವ ಸಂದರ್ಭ ಇದು ರಮ್ಯವಾಗಿ ಕಾಣುತ್ತದೆ. ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ಇದು ಮುಚ್ಚಿರುತ್ತದೆ. ಅಕ್ಟೋಬರ್‌ ತಿಂಗಳಲ್ಲೂ ಇದು ಅದ್ಭುತವಾಗಿ ಕಾಣುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

MLC Election: ವಿಧಾನಪರಿಷತ್ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳ ಪರ ಶಾಸಕ ಬೇಳೂರು ಗೋಪಾಲಕೃಷ್ಣ ಮತಯಾಚನೆ

MLC Election: ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು, ಸರ್ಕಾರಿ ಪ್ರೌಢಶಾಲೆ, ಹಾಗೂ ಮೇರಿ ಮಾತಾ ಪ್ರೌಢಶಾಲೆಗಳಲ್ಲಿ ಗುರುವಾರ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಶಾಸಕ ಬೇಳೂರು ಗೋಪಾಲಕೃಷ್ಣ ಮತಯಾಚನೆ ನಡೆಸಿದರು.

VISTARANEWS.COM


on

MLA Belur Gopalakrishna election campaign for Congress candidates at ripponpete
Koo

ರಿಪ್ಪನ್‌ಪೇಟೆ: ವಿಧಾನಪರಿಷತ್‌ನ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ (MLC Election) ಗೆಲುವು ಸಾಧಿಸುವುದು ನಿಶ್ಚಿತ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು, ಸರ್ಕಾರಿ ಪ್ರೌಢಶಾಲೆ, ಹಾಗೂ ಮೇರಿ ಮಾತಾ ಪ್ರೌಢಶಾಲೆಗಳಲ್ಲಿ ಗುರುವಾರ ನೈಋತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮತಯಾಚನೆ ನಡೆಸಿ ಅವರು ಮಾತನಾಡಿದರು.

ಇದನ್ನೂ ಓದಿ: Singapore Open: ದ್ವಿತೀಯ ಸುತ್ತಿಗೆ ಆಟ ಮುಗಿಸಿದ ಭಾರತದ ಪಿ.ವಿ.ಸಿಂಧು

ಇದೇ ಜೂನ್ 3 ರಂದು ನಡೆಯುವ ರಾಜ್ಯ ವಿಧಾನಪರಿಷತ್ ಚುನಾವಣೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿರುವ ಆಯನೂರು ಮಂಜುನಾಥ್ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಕೆ.ಕೆ. ಮಂಜುನಾಥ್ ಅವರಿಗೆ ಮೊದಲ ಪ್ರಾಶಸ್ತ್ಯದ ಮತವನ್ನು ನೀಡಿ, ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ನೈರುತ್ಯ ಪದವೀಧರ ಕ್ಷೇತ್ರದ ವ್ಯಾಪ್ತಿಯಲ್ಲಿ 85 ಸಾವಿರ ಪದವೀಧರ ಮತದಾರರು ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ 24 ಸಾವಿರ ಮತದಾರರನ್ನು ಹೊಂದಿದ್ದು, ಕಾಂಗ್ರೆಸ್ ಪಕ್ಷದ ಪಕ್ಷದ ಅಭ್ಯರ್ಥಿಗಳು ಹಿರಿಯರು ನೀಡಿರುವ ಜವಾಬ್ದಾರಿಯನ್ನು ಯಾವುದೇ ಕಪ್ಪು ಚುಕ್ಕಿ ಬಾರದಂತೆ ಸಮರ್ಥವಾಗಿ ನಿರ್ವಹಿಸುವ ಮೂಲಕ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದಲ್ಲಿ ಸಮಸ್ಯೆಗಳಿಗೆ ಪರಿಷತ್‌ನಲ್ಲಿ ಧ್ವನಿಯಾಗಿ ಕೆಲಸ ಮಾಡುತ್ತಾರೆ ಎಂದು ತಿಳಿಸಿದರು.

ಇದನ್ನೂ ಓದಿ: Kantara Movie: `ಕಾಂತಾರ ಚಾಪ್ಟರ್‌ 1‌’ ಸಿನಿಮಾಗೆ ಖ್ಯಾತ ಮಾಲಿವುಡ್‌ ನಟ ಎಂಟ್ರಿ!

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಬಂಡಿ ರಾಮಚಂದ್ರ, ಹೊಸನಗರ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ, ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮೀ, ಪಕ್ಷದ ಹಿರಿಯ ಮುಖಂಡರುಗಳಾದ ಕೆರೆಹಳ್ಳಿ ರವಿ, ಫ್ಯಾನ್ಸಿ ರಮೇಶ್, ಮಧುಸೂದನ್, ಜಿ. ಆರ್. ಗೋಪಾಲಕೃಷ್ಣ, ಲೇಖನ, ಅಮೀರ್ ಹಂಜಾ, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

Continue Reading
Advertisement
Modi Meditation
ಪ್ರಮುಖ ಸುದ್ದಿ1 min ago

Modi Meditation: ಮೋದಿ ಮಾಡ್ತಿರೋದು ‘ಧ್ಯಾನ’ ಅಲ್ಲ ‘ಡ್ರಾಮಾ’ ಎಂದ ಮಲ್ಲಿಕಾರ್ಜುನ ಖರ್ಗೆ!

Virat Kohli
ಪ್ರಮುಖ ಸುದ್ದಿ16 mins ago

Virat kohli : ಕಡೆಗಣಿಸುವ ಹೇಳಿಕೆ ನೀಡಿ ಕೊಹ್ಲಿಗೆ ಮತ್ತೆ ಅವಮಾನ ಮಾಡಿದ ಅಂಬಾಟಿ ರಾಯುಡು

Anjali Murder Case
ಕರ್ನಾಟಕ28 mins ago

Anjali Murder Case: ಅಂಜಲಿ ಹಂತಕ ಗಿರೀಶ್‌ಗೆ ಜೂನ್ 16ರವರೆಗೆ‌ ನ್ಯಾಯಾಂಗ ಬಂಧನ

Vastu Tips
ಧಾರ್ಮಿಕ50 mins ago

Vastu Tips: ನೆಲ ಒರೆಸುವಾಗಲೂ ವಾಸ್ತು ನಿಯಮ ಪಾಲಿಸಲೇಬೇಕು!

T20 World Cup
ಕ್ರೀಡೆ51 mins ago

T20 World Cup 2024 : ಟಿ20 ವಿಶ್ವಕಪ್ ವಿಜೇತ ಭಾರತ ತಂಡದ ಕ್ರಿಕೆಟಿಗರು ಈಗ ಎಲ್ಲಿದ್ದಾರೆ?

Lok Sabha Election
ದೇಶ54 mins ago

Lok Sabha Election: ನಾಳೆ ಕೊನೆಯ ಹಂತದ ಮತದಾನ; ಮೋದಿ, ಕಂಗನಾ ಸೇರಿ ಹಲವರ ಭವಿಷ್ಯ ನಿರ್ಧಾರ

Shocking Video
ವೈರಲ್ ನ್ಯೂಸ್1 hour ago

Shocking Video: ಮಗುವನ್ನು ಎತ್ತಿಕೊಂಡು ಹೋಗಲು ಕೋತಿಯ ಶತಪ್ರಯತ್ನ; ಮುಂದೇನಾಯ್ತು?

MLC Election
ಪ್ರಮುಖ ಸುದ್ದಿ1 hour ago

MLC Election: ವಿಧಾನ ಪರಿಷತ್‌ ಚುನಾವಣೆ; ಯತೀಂದ್ರ ಸಿದ್ದರಾಮಯ್ಯ ಅವಿರೋಧ ಆಯ್ಕೆ

Karnataka Weather Forecast
ಮಳೆ1 hour ago

Karnataka Weather : ರಾಜ್ಯದಲ್ಲಿ ತಗ್ಗಿದ ಮಳೆ ಪ್ರಮಾಣ; ಸ್ವಲ್ಪ ಕಡೆ ವರುಣ ಸಾಧಾರಣ, ಗಾಳಿ ರಭಸ ಅಸಾಧಾರಣ

World No Tobacco Day
ಆರೋಗ್ಯ2 hours ago

World No Tobacco Day: ತಂಬಾಕಿನ ಚಟ ಎಷ್ಟೊಂದು ರೋಗಗಗಳಿಗೆ ಕಾರಣ ಆಗುತ್ತದೆ ನೋಡಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ1 day ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌