Site icon Vistara News

Murder Case: ಶಿವಮೊಗ್ಗದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ; ಕ್ರಿಕೆಟ್ ಬ್ಯಾಟ್, ವಿಕೆಟ್‌ಗಳಿಂದ ಹೊಡೆದು ಕೊಂದ ದುಷ್ಕರ್ಮಿಗಳು

Crime Scene

ಶಿವಮೊಗ್ಗ: ನಗರದ ಬಾಪೂಜಿನಗರದ ಗಂಗಮ್ಮ ದೇವಾಲಯದ ಬಳಿ ವ್ಯಕ್ತಿಯ ಬರ್ಬರ ಹತ್ಯೆ ನಡೆದಿದೆ. ಮೂವರು ದುಷ್ಕರ್ಮಿಗಳು, ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್‌ಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.

ಮೆಂಟಲ್ ಸೂರಿ ಅಲಿಯಾಸ್ ಸುರೇಶ್ (45) ಕೊಲೆಯಾದ ವ್ಯಕ್ತಿ. ಹಲವು ಕಳ್ಳತನ ಹಾಗೂ ರಾಬರಿ ಪ್ರಕರಣಗಳಲ್ಲಿ ಮೆಂಟಲ್ ಸೂರಿ ಭಾಗಿಯಾಗಿದ್ದ. ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಕೃತ್ಯ ಎಸಗಿದ್ದು, ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್‌ಗಳ ಸಹಾಯದಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ವೈಯಕ್ತಿಕ ಕಾರಣಗಳಿಂದ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ | Neha Murder Case: ನೇಹಾ ಕೊಲೆ ಪ್ರಕರಣ ರಾಜಕೀಯಕ್ಕೆ ಬಳಕೆ; ಕೊಲೆಗಾರನಿಗೆ ಉಗ್ರ ಶಿಕ್ಷೆ ಎಂದ ಸಿದ್ದರಾಮಯ್ಯ

ಹೊಳಲ್ಕೆರೆ ಬಳಿ ಕಾರು ಪಲ್ಟಿ; ಶಿವಮೊಗ್ಗ ಮೂಲದ ವ್ಯಕ್ತಿ ಸಾವು, ಇನ್ನಿಬ್ಬರಿಗೆ ಗಾಯ

ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ಹೊರವಲಯದ ಕಣಿವೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಣಿವೆಯಲ್ಲಿ (Road Accident) ಪಲ್ಟಿ ಹೊಡೆದಿದ್ದು, ಸ್ಥಳದಲ್ಲೇ ಒಬ್ಬರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇನ್ನಿಬ್ಬರಿಗೆ ಗಂಭೀರವಾದ ಗಾಯಗಳಾಗಿವೆ.
ಮಂಜುನಾಥ (36) ಸ್ಥಳದಲ್ಲೇ ಮೃತಪಟ್ಟವರು. ಸತೀಶ್ ಹಾಗೂ ಸುಚೇತ ಎಂಬುವವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಹೊಳಲ್ಕೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಮೂವರೂ ಶಿವಮೊಗ್ಗ ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ.

ಇವರು ಬೆಂಗಳೂರಿನಿಂದ‌ ಶಿವಮೊಗ್ಗಕ್ಕೆ ಕಾರಲ್ಲಿ ಹೊರಟಿದ್ದರು. ಮೃತ ಮಂಜುನಾಥ್ ಬೆಂಗಳೂರಿನಲ್ಲಿ ಎಂಜಿನಿಯರ್ ಆಗಿದ್ದರು. ವೀಕೆಂಡ್‌ ಹಿನ್ನೆಲೆಯಲ್ಲಿ ಊರಿನತ್ತ ಹೊರಟಿದ್ದರು ಎನ್ನಲಾಗಿದೆ. ಕಾರು ವೇಗವಾಗಿದ್ದ ಕಾರಣ ಹೊಳಲ್ಕೆರೆ ಹೊರವಲಯದ ಕಣಿವೆ ತಿರುವಿನಲ್ಲಿ ಕಾರು ನಿಯಂತ್ರಣಕ್ಕೆ ಸಿಗಲಿಲ್ಲ. ಹೀಗಾಗಿ ಪಲ್ಟಿ ಹೊಡೆದಿದೆ. ಈ ವೇಳೆ ತೀವ್ರ ರಕ್ತಸ್ರಾವವಾಗಿ ಮಂಜುನಾಥ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನಿಬ್ಬರಿಗೆ ಭಾರಿ ಗಾಯಗಳಾಗಿವೆ. ಹೊಳಲ್ಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.

Exit mobile version