Site icon Vistara News

Murder Case : ತೀರ್ಥಹಳ್ಳಿಯ ಲಾಡ್ಜ್‌ವೊಂದರಲ್ಲಿ ಯುವತಿಯ ಕತ್ತು ಸೀಳಿ ಬರ್ಬರ ಹತ್ಯೆ

Murder Case in Thirthahalli

ಶಿವಮೊಗ್ಗ: ತೀರ್ಥಹಳ್ಳಿಯ (Thirthahalli) ಲಾಡ್ಜ್‌ವೊಂದರಲ್ಲಿ (lodge) ಯುವತಿಯೊಬ್ಬಳ ಬರ್ಬರ ಹತ್ಯೆ (Murder Case) ನಡೆದಿದೆ. ಶಿವಮೊಗ್ಗದ (Shivamogga News) ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಚೌಡೇಶ್ವರಿ ದೇವಸ್ಥಾನದ ಪಕ್ಕದ ಲಾಡ್ಜ್‌ನಲ್ಲಿ ಘಟನೆ ನಡೆದಿದೆ.

ಕಳೆದ ಸೋಮವಾರ (ಏ.1)ರಂದು ಲಾಡ್ಜ್‌ಗೆ ಬಂದಿದ್ದ ಯುವಕ-ಯುವತಿ ರೂಂ ಬಾಡಿಗೆ ಪಡೆದಿದ್ದರು. ಲಾಡ್ಜ್‌ನಲ್ಲಿ ತಂಗಿದ್ದಾಗ ಜತೆಗೆ ಇದ್ದ ಯುವಕನೇ ಯುವತಿಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಯುವತಿ ಕೂಲೆ ಮಾಡಿ ಓಡಿ ಹೋಗಿದ್ದಾನೆ.

ಲಾಡ್ಜ್‌ ಸಿಬ್ಬಂದಿ ರೂಮಿಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ರೂಮಿನೊಳಗೆ ಯುವತಿ ರಕ್ತದ ಮಡುವಿನಲ್ಲಿ ಬಿದ್ದಿದ್ದಳು. ಈ ಭಯಾನಕ ಹತ್ಯೆಯ ದೃಶ್ಯ ಹೇಗಿತ್ತೆಂದರೆ ರೂಮಿನ ತುಂಬೆಲ್ಲ ರಕ್ತವು ಚಿಮ್ಮಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತಳ ಗುರುತು ಇನ್ನೂ ಪತ್ತೆಯಾಗಿಲ್ಲ. ತೀರ್ಥಹಳ್ಳಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ತೀರ್ಥಹಳ್ಳಿ ಪೊಲೀಸರು ಶೋಧ ನಡೆಸಿದ್ದಾರೆ.

ಇದನ್ನೂ ಓದಿ: Assault Case : ಪರ ಪುರಷನೊಟ್ಟಿಗೆ ಮಾತನಾಡಿದ್ದಕ್ಕೆ ಪತ್ನಿಗೆ ಚಾಕು ಹಾಕಿದ ಸೈಕೋ ಪತಿ

ತಡರಾತ್ರಿ ಕೆಲಸ ಮುಗಿಸಿ ವಾಪಸ್ ಆಗುತ್ತಿದ್ದವನ ಕೊಚ್ಚಿ ಕೊಲೆ

ಆನೇಕಲ್: ಖಾಕಿ ಪಡೆ ಚುನಾವಣಾ ಕೆಲಸದಲ್ಲಿ ಬ್ಯುಸಿಯಾಗುತ್ತಿದ್ದಂತೆ, ಇತ್ತ ಕ್ರೈಂ ರೇಟು ಹೆಚ್ಚಾಗುತ್ತಿದೆ. ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಮುತ್ಯಾಲಮ್ಮ ದೇವಾಲಯದ ಬಳಿ ತಡರಾತ್ರಿ ವ್ಯಕ್ತಿಯೊಬ್ಬನ ಬರ್ಬರ (Murder case) ಕೊಲೆಯಾಗಿದೆ. ಒರಿಸ್ಸಾ ಮೂಲದ ದೀಪ್ತಿ ರಂಜನ್ (30) ಹತ್ಯೆಯಾದವನು.

ಮಂಗಳವಾರ ರಾತ್ರಿ 1 ಗಂಟೆ ಸುಮಾರಿಗೆ ಕೆಲಸ ಮುಗಿಸಿ ದೀಪ್ತಿ ರಂಜನ್‌ ವಾಪಸ್ ಆಗುತ್ತಿದ್ದ. ಈ ವೇಳೆ ಎದುರಾದ ಕಿಡಿಗೇಡಿಗಳು ಏಕಾಏಕಿ ದಾಳಿ ಮಾಡಿದ್ದಾರೆ. ಮಾರಕಾಸ್ತ್ರಗಳಿಂದ ಹಲ್ಲೆಗೈದು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಕೃತ್ಯವೆಸಗಿ ಆರೋಪಿಗಳು ಪರಾರಿ ಆಗಿದ್ದಾರೆ.

ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಆಕ್ಸ್‌ಫರ್ಡ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಯುವಕನ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಹೆಬ್ಬಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳಿಗಾಗಿ ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ.

ನಡುರಸ್ತೆಯಲ್ಲಿ ಅಕ್ಕನನ್ನು ಅಟ್ಟಾಡಿಸಿ ಸುತ್ತಿಗೆಯಿಂದ ಹೊಡೆದು ಕೊಂದ

ಯಾದಗಿರಿ: ತಮ್ಮನಿಂದಲೇ ಅಕ್ಕನ ಬರ್ಬರ (Murder Case) ಕೊಲೆಯಾಗಿದೆ. ಯಾದಗಿರಿ (Yadagiri News) ತಾಲೂಕಿನ ಬೊಮ್ಮರಾಲದೊಡ್ಡಿಯಲ್ಲಿ ಘಟನೆ ನಡೆದಿದೆ. ನರಸಮ್ಮ(65) ಕೊಲೆಯಾದ ಸಹೋದರಿ.

ನರಸಮ್ಮಳ ಸಹೋದರ ಸೂಗುರಪ್ಪ ಕೊಲೆ ಆರೋಪಿ ಆಗಿದ್ದಾನೆ. ಮಾನಸಿಕ ಅಸ್ವಸ್ಥನಾಗಿದ್ದ ಸೂಗುರಪ್ಪನನ್ನು ನಸರಮ್ಮಳೇ ನೋಡಿಕೊಳ್ಳುತ್ತಿದ್ದರು. ಇನ್ನೂ ಮನೆಯಲ್ಲಿ ಕೈ-ಕಾಲು ಕಟ್ಟಿ ಕೂರಿಸುತ್ತಿದ್ದರು. ಕೋಪದಲ್ಲಿ ಸರಪಳಿ ಬಿಚ್ಚಿಕೊಂಡು ಕಬ್ಬಿಣ್ಣದ ಸುತ್ತಿಗೆಯಿಂದ ಹೆಂಡತಿಗೆ ಹಾಗೂ ಸಹೋದರಿಗೆ ನರಸಮ್ಮನಿಗೆ ಹೊಡೆದಿದ್ದಾನೆ.

ನರಸಮ್ಮ ಈತನಿಂದ ತಪ್ಪಿಸಿಕೊಂಡು ಹೊರಗೆ ಓಡಿ ಬಂದಿದ್ದಾರೆ. ಆದರೂ ಬಿಡದ ಸೂಗುರಪ್ಪ ನಡು ರಸ್ತೆಯಲ್ಲಿ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸೈದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆರೋಪಿಯನ್ನು ವಶಕ್ಕೆ ಪಡೆದಿದ್ದು, ಸೈದಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಕೇಸ್ ದಾಖಲಾಗಿದೆ. ಇನ್ನೂ ರಸ್ತೆಯಲ್ಲಿ ಬಿದ್ದಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version