Murder case : ಮಲೆನಾಡಲ್ಲಿ ಒಂಟಿ ಮಹಿಳೆ ಕೊಲೆ; ಕತ್ತು ಹಿಸುಕಿ ಕೊಂದವರು ಯಾರು? - Vistara News

ಶಿವಮೊಗ್ಗ

Murder case : ಮಲೆನಾಡಲ್ಲಿ ಒಂಟಿ ಮಹಿಳೆ ಕೊಲೆ; ಕತ್ತು ಹಿಸುಕಿ ಕೊಂದವರು ಯಾರು?

Murder case : ಶಿವಮೊಗ್ಗದಲ್ಲಿ (Shivamogga News) ಮಹಿಳೆಯೊಬ್ಬರ ಕೊಲೆಯಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಹಂತಕರ ಬೆನ್ನಿಗೆ ಬಿದ್ದಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

VISTARANEWS.COM


on

murder case
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಮಲೆನಾಡು ಶಿವಮೊಗ್ಗದಲ್ಲಿ ಒಂಟಿ ಮಹಿಳೆಯ (Murder Case) ಕೊಲೆಯಾಗಿದೆ. ಕತ್ತು ಬಿಗಿದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಶುಕ್ರವಾರ ತಡರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಮಂಜರಿಕೊಪ್ಪದಲ್ಲಿ ಮಹಿಳೆಯ ಕೊಲೆಯಾಗಿದೆ. ಸಾವಿತ್ರಮ್ಮ (65) ಕೊಲೆಯಾದವರು. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದ್ದು, ಕೊಲೆಗೆ ಏನು ಕಾರಣ ಎಂಬುದು ತಿಳಿದು ಬಂದಿಲ್ಲ.

ಸದ್ಯ ಪೊಲೀಸರು ಈ ಕುರಿತು ತನಿಖೆಯನ್ನು ನಡೆಸುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಹಂತಕರ ಹುಡುಕಾಟವನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Road Accident : ಡಿವೈಡರ್‌ಗೆ ಕಾರು ಡಿಕ್ಕಿಯಾಗಿ‌ ವಿದ್ಯಾರ್ಥಿನಿ ಸ್ಪಾಟ್‌ ಡೆತ್‌; ಲಾರಿ ಹರಿದು ಪಾದಚಾರಿ ಸಾವು

ಒಂಟಿ ಕೈ ರೌಡಿಯಿಂದ ಇನ್ನೊಬ್ಬ ರೌಡಿಯ ಕೊಚ್ಚಿ ಕೊಲೆ

ಬೆಂಗಳೂರು: ಬೆಂಗಳೂರಿನಲ್ಲಿ (Bangalore crime) ರೌಡಿ ಗ್ಯಾಂಗ್‌ಗಳ ಬೀದಿಜಗಳ, ಹಲ್ಲೆಗಳು ತಾರಕಕ್ಕೇರಿದ್ದು, ಹೆಣಗಳು ಬೀಳುತ್ತಿವೆ. ಒಂಟಿ ಕೈಯ ರೌಡಿಶೀಟರ್ (Rowdy Sheeter) ಒಬ್ಬನ ಗ್ಯಾಂಗ್ ಇನ್ನೊಬ್ಬ ರೌಡಿಶೀಟರ್‌ನನ್ನು ಬರ್ಬರವಾಗಿ ಕೊಚ್ಚಿ ಕೊಲೆ (Murder Case) ಮಾಡಿದೆ.

ಸಿದ್ಧಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಐಸಾಕ್ (30) ಮೃತಪಟ್ಟ ರೌಡಿಶೀಟರ್. ವೆಂಕಟೇಶ ಅಲಿಯಾಸ್ ಒಂಟಿ ಕೈ ವೆಂಕಟೇಶ ಎಂಬಾತನ ಗ್ಯಾಂಗ್‌, ಐಸಾಕ್‌ನನ್ನು ಸುತ್ತುಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಂದುಹಾಕಿದೆ.

ಡ್ರಗ್ಸ್ ಹಾವಳಿ ಹಾಗೂ ವಹಿವಾಟಿನ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ಮೂಡಿದೆ. ಮೃತ ಐಸಾಕ್ ಹಲವು ಕಡೆ ಡ್ರಗ್ಸ್, ಗಾಂಜಾ ಮಾರಾಟ ಮಾಡುತ್ತಿದ್ದ. ಇದನ್ನು ಒಂಟಿ ಕೈ ವೆಂಕಟೇಶ ವಿರೋಧಿಸಿದ್ದ. ವೆಂಕಟೇಶನ ಸ್ನೇಹಿತರಿಗೂ ಕೂಡ ಐಸಾಕ್ ಗಾಂಜಾ ನೀಡಿ ಅಡಿಕ್ಟ್ ಆಗುವಂತೆ ಮಾಡಿದ್ದ. ಒಂದೇ ಏರಿಯಾ ಆದ ಕಾರಣ ಹುಡುಗರು ಗಾಂಜಾ ಚಟಕ್ಕೆ ಬಿದ್ದಿದ್ದರು.

ಈ ಹಿನ್ನೆಲೆಯಲ್ಲಿ ಐಸಾಕ್‌ಗೆ ಒಂಟಿ ಕೈ ವೆಂಕಟೇಶ್ ವಾರ್ನ್ ಮಾಡಿದ್ದ. ಆದರೂ ಐಸಾಕ್ ಗಾಂಜಾ ಮಾರಾಟ ನಿಲ್ಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಬೆಳಗಿನ ಜಾವ 3-30ರ ಸಂದರ್ಭದಲ್ಲಿ ಐಸಾಕ್‌ನನ್ನು ಕೊಲೆ ಮಾಡಲಾಗಿದೆ. ಸದ್ಯ ನಿಖರ ಕಾರಣ ಹಾಗು ಆರೋಪಿಗಳಿಗಾಗಿ ಸಿದ್ದಾಪುರ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಒಂಟಿ ಕೈ ವೆಂಕಟೇಶ್ ಈ ಹಿಂದೆ ನಾಲ್ಕು ಕೊಲೆ ಕೇಸುಗಳಲ್ಲಿ ಭಾಗಿಯಾಗಿದ್ದಾನೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

Karnataka Rain : ಕಾರವಾರದಲ್ಲಿ ಬಿಣಗಾ ಕಾರವಾರ ಟನೆಲ್‌ ಬಳಿ ಕಲ್ಲು ಕುಸಿದಿದ್ದು, ರಸ್ತೆ ಬಂದ್‌ ಮಾಡಿದ್ದಾರೆ. ಬೆಳಗಾವಿಯಲ್ಲಿ ದೇವಸ್ಥಾನದ ಗೋಪುರ ಕುಸಿದು ಬಿದ್ದಿದೆ. ವಿಜಯನಗರದಲ್ಲಿ ರಾಮ-ಲಕ್ಷ್ಮಣ ದೇಗುಲಕ್ಕೆ ಜಲದಿಗ್ಭಂದನ ಹಾಕಲಾಗಿದೆ.

VISTARANEWS.COM


on

By

karnataka rain
Koo

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ (Karnataka Rain) ಮುಂದುವರಿದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಾರವಾರದ ಸುರಂಗ ಮಾರ್ಗದಲ್ಲಿ ಕಲ್ಲು ಕುಸಿದಿದೆ. ಬಿಣಗಾದಿಂದ ಕಾರವಾರಕ್ಕೆ ಆಗಮಿಸುವ ಸುರಂಗದ ಎದುರು ಕಲ್ಲು, ಮಣ್ಣು ಜಾರಿ ಬಿದ್ದಿದೆ. ಅದೃಷ್ಟವಶಾತ್ ವಾಹನ ಸವಾರರು ಪಾರಾಗಿದ್ದಾರೆ.

ಸ್ಥಳಕ್ಕೆ ಕಾರವಾರ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು, ಐಆರ್‌ಬಿ ಕಾರ್ಮಿಕರಿಂದ ಹೆದ್ದಾರಿಯಲ್ಲಿ ಬಿದ್ದ ಕಲ್ಲು ಮಣ್ಣು ತೆರವು ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬಿಣಗಾ ಕಾರವಾರ ಟನೆಲ್ ಬಂದ್ ಮಾಡಿದ್ದಾರೆ. ಬಿಣಗಾದಿಂದ ಬೈತಕೋಲ್ ಮಾರ್ಗದಲ್ಲಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

karnataka rain
karnataka rain

ಕುಸಿದು ಬಿದ್ದ ದೇವಸ್ಥಾನದ ಗೋಪುರ

ಬೆಳಗಾವಿ: ನಿರಂತರ ಮಳೆಗೆ ಬೆಳಗಾವಿಯ ಕಿತ್ತೂರಿನ ಕೊಂಡವಾಡ ಚೌಕಿನಲ್ಲಿರುವ ಕರೆಮ್ಮ ದೇವಿ ದೇವಸ್ಥಾನದ ಗೋಪುರ ಕುಸಿದು ಬಿದ್ದಿದೆ. ಕಳೆದ ಮೂರು ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಗೋಪುರ ಸಂಪೂರ್ಣವಾಗಿ ಕುಸಿದು, ಪಕ್ಕದ ಮಳಿಗೆಯ ಮೇಲೆ ಗೋಪುರ ಬಿದ್ದಿದೆ. ಘಟನೆಯಲ್ಲಿ ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ನಿನ್ನೆ ಶುಕ್ರವಾರವಷ್ಟೇ ಕಿತ್ತೂರು ಕೋಟೆಯ ಆವರಣದಲ್ಲಿದ್ದ ಐತಿಹಾಸಿಕ ವಾಚ್ ಟವರ್ ಕುಸಿದು ಬಿದ್ದಿತ್ತು.

ರಾಮ-ಲಕ್ಷ್ಮಣ ದೇಗುಲಕ್ಕೆ ಜಲದಿಗ್ಭಂದನ

ಜಲಾಶಯದಿಂದ 1.80 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ನದಿಗೆ ಹರಿಬಿಟ್ಟ ಹಿನ್ನೆಲೆಯಲ್ಲಿ ವಿಜಯನಗರದ ವಿಶ್ವ ವಿಖ್ಯಾತ ಹಂಪಿಯಲ್ಲಿ ತುಂಗಭದ್ರಾ ಉಕ್ಕಿ ಹರಿಯುತ್ತಿದೆ. ನದಿಯ ರೌದ್ರ ನರ್ತನ ಹೆಚ್ಚಾಗಿದ್ದರಿಂದ ಹಂಪಿಯ ಹಲವು ಸ್ಮಾರಕಗಳು ಮುಳುಗಿವೆ. ಅದರಲ್ಲೂ ಐತಿಹಾಸಿಕ ರಾಮ – ಲಕ್ಷ್ಮಣ ದೇಗುಲಕ್ಕೆ ಜಲ ದಿಗ್ಭಂದನ ಹಾಕಲಾಗಿದೆ. ಪ್ರವಾಸಿಗರು ಉಳಿದುಕೊಳುತ್ತಿದ್ದ ಮೂರು ಕಲ್ಲಿನ ಮಂಟಪಗಳು ಮುಕ್ಕಾಲು ಭಾಗ ಮುಳುಗಡೆಯಾಗಿದೆ.

ತುಂಗಭದ್ರಾ ನದಿ ನೀರು ನುಗ್ಗಿದ್ದರಿಂದ ದೇಗುಲಕ್ಕೆ ಭಕ್ತರ ಸಂಖ್ಯೆಯಲ್ಲಿ ಭಾರೀ ವಿರಳವಾಗಿದೆ. ರಾಮ – ಲಕ್ಷ್ಮಣ, ಸೀತೆ ದೇಗುಲ 2011, 2017ರಲ್ಲಿ ಎರಡು ಬಾರಿ ಸಂಪೂರ್ಣ ಮುಳುಗಡೆ ಆಗಿತ್ತು. ವಾಲಿ ಎನ್ನುವ ರಾಜನನ್ನು ಸಂಹರಿಸಿ ಸುಗ್ರೀವ ಅನ್ನೋ ರಾಜನಿಗೆ ಪಟ್ಟಾಭಿಷೇಕ ಮಾಡಿದ ಜಾಗವೇ ರಾಮ-ಲಕ್ಷ್ಮಣ ದೇಗುಲವಾಗಿದೆ. ರಾಮ-ಲಕ್ಷ್ಮಣ, ಸೀತಾಮಾತೆ, ಆಂಜನೇಯ ಹಾಗೂ ಸುಗ್ರೀವ ರಾಜ ಸೇರಿ ಐದು ಜನರ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದೆ.

ವಿಧಿ, ವಿಧಾನ ಮಂಟಪ, ಸ್ನಾನ ಘಟ್ಟ, ಪುರಂದರ ದಾಸರ ಮಂಟಪ ಸೇರಿ ಹತ್ತಾರು ಸ್ಮಾರಕಗಳು ಈಗಾಗಲೇ ಮುಳುಗಡೆಯಾಗಿದೆ. ಸ್ಮಾರಕಗಳು ಎಲ್ಲಿವೆ ಎಂಬುದು ಗೊತ್ತಾಗದ ರೀತಿ ತುಂಗಭದ್ರಾ ಉಕ್ಕಿ ಹರಿಯುತ್ತಿದೆ.

ಇದನ್ನೂ ಓದಿ: Murder case : ಮಲೆನಾಡಲ್ಲಿ ಒಂಟಿ ಮಹಿಳೆ ಕೊಲೆ; ಕತ್ತು ಹಿಸುಕಿ ಕೊಂದವರು ಯಾರು?

ಮುಳುಗಿದ ಸಂಗಮೇಶ್ವರ ದೇವಾಲಯ

ಮಲೆನಾಡಿನ ಶಿವಮೊಗ್ಗದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಮಳೆ ಅಬ್ಬರಕ್ಕೆ ಮಲೆನಾಡಿನ ನದಿಗಳು ಮೈದುಂಬಿ ಹರಿಯುತ್ತಿದೆ. ಅಪಾಯದ ಮಟ್ಟ ಮೀರಿ ತುಂಗಾ, ಭದ್ರಾ ಹರಿಯುತ್ತಿದೆ‌. ತುಂಗಾ, ಭದ್ರಾ ನದಿ ಸಂಗಮ ಕ್ಷೇತ್ರ ನೋಡಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಕೂಡ್ಲಿ ತುಂಗಾ ಹಾಗೂ ಭದ್ರಾ ನದಿ ಬಂದು ಸಂಗಮ ಆಗುವ ಪುಣ್ಯಕ್ಷೇತ್ರವಾಗಿದ್ದು, ಸಂಗಮೇಶ್ವರ ದೇವಾಲಯ ಮುಳುಗಿದೆ.

ಏತ ನೀರಾವರಿ ಬ್ಯಾರೇಜ್‌ಗೆ ಪ್ರವಾಸಿಗರ ದಂಡು

ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟಾಲೂರು ಏತ ನೀರಾವರಿ ಬ್ಯಾರೇಜ್‌ನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಮುಂಡರಗಿ ತಾಲೂಕಿನ ಹಮ್ಮಿಗಿ, ಗುಮ್ಮಗೋಳ, ವಿಠಲಾಪುರ ಸೇರಿದಂತೆ ಅನೇಕ ಗ್ರಾಮದ ರೈತರು ತತ್ತರಿಸಿದ್ದಾರೆ.

ಬ್ಯಾರೇಜ್‌ನ 26 ಗೇಟ್‌ಗಳಲ್ಲಿ 19 ಗೇಟ್‌ಗಳು ತೆರದು 2,90,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಬ್ಯಾರೇಜ್‌ನಿಂದ ರಭಸವಾಗಿ ಹರಿಯುತ್ತಿರುವ ನೀರು ನೋಡಲು ಕಿರು ಆಣೆಕಟ್ಟು ವೀಕ್ಷಿಸಲು ಪ್ರವಾಸಿಗರು ದೌಡಯಿಸಿದ್ದಾರೆ. ಬ್ಯಾರೇಜ್ ಎದುರು ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂತಸಗೊಂಡಿದ್ದಾರೆ.

ಜೋಗ ಜಲಪಾತಕ್ಕೆ ಪ್ರವಾಸಿಗರು ಫಿದಾ

ಲಿಂಗನಮಕ್ಕಿ ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ವಿಶ್ವವಿಖ್ಯಾತ ಜೋಗ ಜಲಪಾತ ಕಣ್ಮನ ಸೆಳೆಯುತ್ತಿದೆ. ಹಾಲ್ನೊರೆಯಂತೆ ಧುಮ್ಮಿಕ್ಕಿ ಹರಿಯುತ್ತಿದೆ. ಜೋಗ ಜಲಪಾತದ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ ಆಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : 7 ಜಿಲ್ಲೆಗಳಲ್ಲಿ ವ್ಯಾಪಿಸಲಿದೆ ಭರ್ಜರಿ ಮಳೆ

Karnataka Weather Forecast : ರಾಜ್ಯಾದ್ಯಂತ ನೈರುತ್ಯ ಮುಂಗಾರು ದುರ್ಬಲಗೊಂಡಿದೆ. ಕರಾವಳಿ ಹಾಗೂ ಮಲೆನಾಡಿನ ಕೆಲವಡೆ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ (Rain News) ಅಬ್ಬರ ಕಡಿಮೆ ಆಗುತ್ತಿದ್ದು, ಕೆಲವಡೆ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather forecast) ನೀಡಿದೆ. 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಗಾಳಿಯು 30-40 ಕಿ.ಮೀ ವೇಗದಲ್ಲಿ ಬೀಸಲಿದ್ದು,ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ಮತ್ತು ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇದನ್ನೂ ಓದಿ: Teachers Transfer : ಇಂದಿನಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಶುರು; ವಿವಿಧ ನೇಮಕಾತಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

ಐತಿಹಾಸಿಕ ಕಿತ್ತೂರು ಕೋಟೆಯ ವಾಚ್ ಟವರ್ ಕುಸಿತ

ಬೆಳಗಾವಿ ಜಿಲ್ಲೆಯಾದ್ಯಂತ ನಿರಂತರ ಮಳೆಯಿಂದಾಗಿ ಐತಿಹಾಸಿಕ ಕಿತ್ತೂರು ಕೋಟೆಯ ವಾಚ್ ಟವರ್ ಕುಸಿದು ಬಿದ್ದಿದೆ. 15ನೇ ಶತಮಾನದಲ್ಲಿ ನಿರ್ಮಿಸಲಾಗಿದ್ದ ವಾಚ್ ಟವರ್ ಮಧ್ಯಾಹ್ನ ಸುರಿದ ಭಾರಿ ಮಳೆಗೆ ಕುಸಿದಿದೆ.

ಹಾವೇರಿಯಲ್ಲಿ ಬಾಲಕನ ಮೇಲೆ ಕುಸಿದ ಚಾವಣಿ

ಹಾವೇರಿ ಜಿಲ್ಲೆಯಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ನಿರಂತರ ಮಳೆಗೆ ಶಾಲೆಯ ಚಾವಣಿ ಕುಸಿದು ಬಾಲಕನಿಗೆ ಗಾಯವಾಗಿದೆ. ಹಾವೇರಿಯ ನೀರಲಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. 25 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 5 ನೇ ತರಗತಿಯಲ್ಲಿ ಓದುತ್ತಿದ್ದ ವಿನಾಯಕ್ ಮೋರೆ ಗಾಯಗೊಂಡವನು. ಬಾಲಕನ ಕಾಲಿನ ಮೇಲೆ ಚಾವಣಿ ಕಂಬ ಬಿದ್ದಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಗುತ್ತಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹರವಿ ಗ್ರಾಮದಲ್ಲೂ ಮನೆ ಕುಸಿದಿದೆ. ಕುಮಾರ ಮಳೆಪ್ಪನವರ ಮನೆಯು ಕುಸಿದು ಬಿದ್ದಿದೆ. ಬೆಳಗಿನ ಜಾವದಲ್ಲಿ ಮಣ್ಣು ಕುಸಿದಿದೆ. ಅದೃಷ್ಟವಶಾತ್ ಕುಟುಂಬಸ್ಥರು ಪಾರಾಗಿದ್ದಾರೆ.

ಇದನ್ನೂ ಓದಿ: Governor Versus State: ಶುರುವಾಯ್ತು ರಾಜ್ಯದಲ್ಲಿ ರಾಜ್ಯ ಸರ್ಕಾರ ವರ್ಸಸ್ ರಾಜ್ಯಪಾಲ ಸಂಘರ್ಷ; ರಾಜ್ಯಪಾಲರ ಮುಂದಿನ ನಡೆ ಏನು?

ಸೌಪರ್ಣಿಕ ನದಿ ತೀರದಲ್ಲಿ ಮತ್ತೆ ನೆರೆ

ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಸೌಪರ್ಣಿಕ ನದಿ ತೀರದಲ್ಲಿ ಮತ್ತೆ ನೆರೆ ಸೃಷ್ಟಿಯಾಗಿದೆ. ಸತತ ಮೂರನೇ ಬಾರಿಗೆ ನೆರೆ ಹಾವಳಿಯಿಂದಾಗಿ ಬೈಂದೂರು ತಾಲೂಕಿನ ನಾವುಂದ ಕುದ್ರು ವಿನಲ್ಲಿ ವಾಸವಾಗಿರುವ ಏಳು ಮನೆಗಳಿಗೆ ಜಲದಿಗ್ಬಂದನ ಹಾಕಲಾಗಿದೆ. ದೋಣಿಯ ಮೂಲಕವೇ ದೈನಂದಿನ ಕೆಲಸಗಳನ್ನು ಮಾಡಿಕೊಳ್ಳುತ್ತಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮನೆ ಮುಂಭಾಗವೇ ಭೂಮಿ ಛಿದ್ರ

ಚಿಕ್ಕಮಗಳೂರಿನಲ್ಲಿ ಮಳೆಯ ಅಬ್ಬರ ನಿಲ್ಲುವಂತೆ ಕಾಣುತ್ತಿಲ್ಲ. ಭಾರಿ ಮಳೆಗೆ ಭಾರಿ ಪ್ರಮಾಣದ ಭೂಕುಸಿತ ಉಂಟಾಗಿದೆ. ಕೊಪ್ಪ ತಾಲೂಕಿನ ಬಸರಿ ಕಟ್ಟೆ ಚೆನ್ನಕಲ್ಲು ಗ್ರಾಮದಲ್ಲಿ ನಾಗರಾಜ್ ಎಂಬುವವರ ಮನೆ ಮುಂದೆ ಭೂಮಿ ಛಿದ್ರ ಛಿದ್ರಗೊಂಡಿದೆ. 300 ಅಡಿಯಷ್ಟು ದೂರಕ್ಕೆ ಭೂಮಿ ಜಾರಿ ಹೋಗಿದೆ. ಭೂಮಿ ಕುಸಿತದ ರಭಸಕ್ಕೆ ಮನೆಯ ಅಡಿಪಾಯ, ಗೋಡೆಗಳಲ್ಲಿ ಬಿರುಕು ಉಂಟಾಗಿದೆ. ಮಳೆ ಹೆಚ್ಚಾದಂತೆ ಮನೆಯ ಮುಂಭಾಗ ಮತ್ತಷ್ಟು ಧರೆ ಕುಸಿತ ಉಂಟಾಗುವ ಸಾಧ್ಯತೆ ಇದೆ. ಭೂ ಕುಸಿತದಿಂದಾಗಿ 4-5 ಎಕರೆ, ಅಡಿಕೆ ತೋಟವು ನಾಶವಾಗಿದೆ.

ಶಿರಾಡಿಘಾಟ್ ಭೂ ಕುಸಿತ; ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ಟೀಂ ಭೇಟಿ

ಹಾಸನದ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಸಮೀಪದ ಗುಡ್ಡಕುಸಿತ ಸ್ಥಳಕ್ಕೆ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾದ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕುಸಿತಕ್ಕೆ ಕಾರಣ ತಿಳಿಯಲು ಸ್ಥಳ ಪರಿಶೀಲನೆ ನಡೆಸಿದ್ದರು. ಒಂದೇ ಸ್ಥಳದಲ್ಲಿ ನಿರಂತರವಾಗಿ ಭೂಮಿ ಕುಸಿಯುತ್ತಿದೆ. ಸಕಲೇಶಪುರ ತಾಲೂಕಿನ ಹಾರ್ಲೇ ಕೂಡಿಗೆ ಗ್ರಾಮದ ಸಮೀಪ ಭೂಮಿ ಕುಸಿದಿತ್ತು. ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಕುಸಿತವಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವಾರಾಂತ್ಯದಲ್ಲಿ ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ ಎಚ್ಚರಿಕೆ

Karnataka Weather Forecast : ವಾರಾಂತ್ಯದಲ್ಲಿ ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಇನ್ನೂ ಜಲಾವೃತ ರಸ್ತೆಯಲ್ಲಿ‌ ಗ್ರಾಮಸ್ಥರು ಬೈಕ್‌ ಓಡಿಸಿ ಹುಚ್ಚಾಟ ಮೆರೆದಿದ್ದಾರೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ನೈರುತ್ಯ ಮುಂಗಾರು ಕರಾವಳಿಯಲ್ಲಿ (Karnataka Weather Forecast) ಸಕ್ರಿಯವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಉತ್ತರ ಒಳನಾಡಿನಲ್ಲಿ (Rain News) ದುರ್ಬಲವಾಗಿತ್ತು. ಮಣಿ 19 ಸೆಂ.ಮೀ, ಪುತ್ತೂರು ಎಚ್‌ಎಂಎಸ್ 16 ಸೆಂ.ಮೀ, ಮಂಗಳೂರು, ಪಣಂಬೂರು ವೀಕ್ಷಣಾಲಯ 15 ಸೆಂ.ಮೀ ಮಳೆಯಾಗಿದೆ. ಕಾರ್ಕಳ, ಮಂಕಿ , ಆಗುಂಬೆ ಎಮೋ 14 ಸೆಂ.ಮೀ ಮಳೆಯಾಗಿದೆ. ಅಂಕೋಲಾ, ಕದ್ರ, ಉಪ್ಪಿನಂಗಡಿ13 ಸೆಂ.ಮೀ ಮಳೆಯಾಗಿದೆ. ಮಂಗಳೂರು ಎಪಿ ವೀಕ್ಷಣಾಲಯ , ಗೇರ್ಸೊಪ್ಪ, ಕುಂದಾಪುರ 12 ಸೆಂ.ಮೀ ಮಳೆಯಾಗಿದೆ.

ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ

ಕರಾವಳಿಯ ಉಡುಪಿ ಮತ್ತು ಉತ್ತರ ಕನ್ನಡದ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ನಿರಂತರ ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ವ್ಯಾಪಕ ಮಳೆಯಾಗಲಿದೆ. ನಿರಂತರ ಗಾಳಿಯ ವೇಗವು 30-40 ಕಿಮೀ ತಲುಪಲಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ಹಾಸನದಲ್ಲಿ ಗಾಳಿ- ಮಳೆಗೆ ಕುಸಿದು ಬಿದ್ದ ಮನೆ; ಮಂಗಳೂರಿನಲ್ಲಿ ಜಾನುವಾರುಗಳು ಸಾವು

ಜಲಾವೃತ ರಸ್ತೆಯಲ್ಲಿ‌ ಗ್ರಾಮಸ್ಥರ ಹುಚ್ಚಾಟ

ತುಂಗಭದ್ರಾ ಜಲಾಶಯ‌ ಹಿನ್ನೀರು ಪ್ರದೇಶದಲ್ಲಿ ಪ್ರವಾಹ ಭೀತಿ ಎದುರಾಗಿದೆ. ವಿಜಯನಗರ ಜಿಲ್ಲೆಯ ಮಕರಬ್ಬಿ-ಬ್ಯಾಲಹುಣಸೆ ಗ್ರಾಮದ ಸಂಪರ್ಕ ರಸ್ತೆ ಜಲಾವೃತಗೊಂಡಿದೆ. ಸಂಪರ್ಕ ಕಡಿತದಿಂದಾಗಿ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ವ್ಯಾಪ್ತಿಗೆ ಒಳಪಡುವ ಮಕರಬ್ಬಿ ಗ್ರಾಮಸ್ಥರು ತೀವ್ರ ಪರದಾಟ ಅನುಭವಿಸುತ್ತಿದ್ದಾರೆ.

ಮಕರಬ್ಬಿ ಗ್ರಾಮದಿಂದ ಬ್ಯಾಲಹುಣಸೆ ಶಾಲೆಗೆ ತೆರಳಬೇಕಿದ್ದ ಶಾಲಾ ಮಕ್ಕಳಿಗೆ ಸಂಕಷ್ಟ ಎದುರಾಗಿದೆ. ರಸ್ತೆ ಸಂಪರ್ಕ ಕಡಿತವಾಗಿದ್ದರಿಂದ 2 ದಿನದಿಂದ‌ ಶಾಲೆಗೆ ತೆರಳದೇ ಮಕ್ಕಳು ಗೈರಾಗಿದ್ದಾರೆ. ಮಕ್ಕಳ ಪರದಾಟ ಒಂದೆಡೆಯಾದರೆ ವಯೋವೃದ್ಧರು, ಮಹಿಳೆಯರು ಬೇರೆ ಗ್ರಾಮಗಳಿಗೆ ತೆರಳಲು ಹರಸಾಹಸ ಪಡುತ್ತಿದ್ದಾರೆ.

ಇವೆಲ್ಲದರ ಮಧ್ಯೆ ಬೈಕ್ ಸವಾರರು ಹುಚ್ಚಾಟ ಮೆರೆದಿದ್ದಾರೆ. ಜಲಾವೃತವಾದ ರಸ್ತೆ ಮಧ್ಯೆ ಸಾಲು ಸಾಲು ವಾಹನ ನಿಲ್ಲಿಸಿ ಕ್ಲೀನಿಂಗ್‌ನಲ್ಲಿ ತೊಡಗಿದ್ದರು. ಮೊಣಕಾಲುವರೆಗೆ ಜಲಾವೃತವಾದ ರಸ್ತೆಯಲ್ಲಿಯೇ ಬೈಕ್ ನಿಲ್ಲಿಸಿ ಸ್ವಚ್ಚಗೊಳಿಸುತ್ತಿದ್ದರು. ಜತೆಗೆ ಜಲಾವೃತ ರಸ್ತೆಯಲ್ಲಿ ‌ ಬೈಕ್‌ ಓಡಿಸಿದ್ದಾರೆ. ಸ್ವಲ್ಪ ಯಾಮಾರಿದ್ದರೂ ನೀರಿನ‌ ರಭಸಕ್ಕೆ ಬೈಕ್ ಸಮೇತ ಕೊಚ್ಚಿಕೊಂಡು ಹೋಗುವ ಸಾಧ್ಯತೆ ಇದೆ. ಟಿಬಿ ಡ್ಯಾಂ ಭರ್ತಿಯಾಗಿದ್ದರಿಂದ ಹಿನ್ನೀರು ಪ್ರದೇಶದ ಗ್ರಾಮಗಳಲ್ಲಿ ಇದೀಗ ಪ್ರವಾಹ ಭೀತಿ ಎದುರಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಹಾಸನದಲ್ಲಿ ಗಾಳಿ- ಮಳೆಗೆ ಕುಸಿದು ಬಿದ್ದ ಮನೆ; ಮಂಗಳೂರಿನಲ್ಲಿ ಜಾನುವಾರುಗಳು ಸಾವು

Karnataka Rain : ಹಾಸನ, ಹಾವೇರಿ, ಕಾರವಾರದಲ್ಲಿ ಗಾಳಿ- ಮಳೆಗೆ ಮನೆಗಳು ಕುಸಿದು ಬಿದ್ದಿದೆ. ಮಂಗಳೂರಿನಲ್ಲಿ ಭೂಮಿ ಕುಸಿದಿದ್ದು ಜಾನುವಾರುಗಳು ಮೃತಪಟ್ಟಿವೆ.

VISTARANEWS.COM


on

By

karnataka Rain
Koo

ಹಾವೇರಿ/ಹಾಸನ: ಭಾರಿ ಮಳೆ, ಗಾಳಿಗೆ (karnataka Rain) ವಾಸದ ಮನೆಯೊಂದು ಕುಸಿದು ಬಿದ್ದಿದೆ. ಮನೆಯಲ್ಲಿದ್ದ ಆರು ಮಂದಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಹಾಸನದ‌ ಅಂಬೇಡ್ಕರ್ ನಗರದಲ್ಲಿ ಘಟನೆ ನಡೆದಿದೆ. ಮುನಿರ್ ಪಾಷ ಎಂಬುವವರಿಗೆ ಸೇರಿದ ಮನೆಯು ಕುಸಿದಿದೆ. ಮನೆಯ ಒಂದು ಭಾಗ ಕುಸಿಯುತ್ತಿರುವಾಗಲೇ ಆರು ಮಂದಿ ಹೊರಗೆ ಓಡಿ ಬಂದಿದ್ದಾರೆ. ಮನೆಯಲ್ಲಿದ್ದ ವಸ್ತುಗಳು ಮಣ್ಣು ಪಾಲಾಗಿದೆ.

ಕುಸಿದು ಬಿದ್ದ ಮಣ್ಣಿನ ಗೋಡೆ

ಉತ್ತರಕನ್ನಡದ ಕಾರವಾರ ಶಿರವಾಡದ ಬಂಗಾರಪ್ಪನಗರದಲ್ಲಿ ಸುಪ್ರಿಯಾ ವಡ್ಡರ್ ಎಂಬುವವರ ಮನೆಯ ಹಿಂಬದಿ ಗೋಡೆ ಕುಸಿದಿದೆ. ಮಳೆಯಿಂದಾಗಿ ನೆನೆದು ಮಣ್ಣಿನಗೋಡೆ ಕುಸಿದಿದೆ. ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಮಂಗಳೂರಿನಲ್ಲಿ ಭೂ ಕುಸಿದು ಜಾನುವಾರುಗಳು ಸಾವು

ಭೂ ಕುಸಿತಗೊಂಡು ಮೂರು ಮನೆಗಳಿಗೆ ಹಾನಿಯಾಗಿದ್ದು, ನಾಲ್ಕು ಜಾನುವಾರುಗಳು ಮೃತಪಟ್ಟಿವೆ. ದಕ್ಷಿಣ ಕನ್ನಡದ ಪುತ್ತೂರಿನ ಬೆಳ್ಳಿಪ್ಪಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಬೆಳ್ಳಿಪ್ಪಾಡಿ ಗ್ರಾಮದ ಅಂದ್ರಿಗೇರಿನ ಗಂಗಯ್ಯ ಗೌಡ, ಮಹಾಬಲ ಗೌಡ ಅವರ ಮನೆಗಳಿಗೆ ಹಾನಿಯಾಗಿದೆ. ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ದನಗಳ ಮೇಲೆ ಮಣ್ಣು ಬಿದ್ದ ಪರಿಣಾಮ ಜಾನುವಾರುಗಳು ಮೃತಪಟ್ಟಿವೆ.

ಐತಿಹಾಸಿಕ ಕಿತ್ತೂರು ಕೋಟೆಯ ವಾಚ್ ಟವರ್ ಕುಸಿತ

ಬೆಳಗಾವಿ ಜಿಲ್ಲೆಯಾದ್ಯಂತ ನಿರಂತರ ಮಳೆಯಿಂದಾಗಿ ಐತಿಹಾಸಿಕ ಕಿತ್ತೂರು ಕೋಟೆಯ ವಾಚ್ ಟವರ್ ಕುಸಿದು ಬಿದ್ದಿದೆ. 15ನೇ ಶತಮಾನದಲ್ಲಿ ನಿರ್ಮಿಸಲಾಗಿದ್ದ ವಾಚ್ ಟವರ್ ಮಧ್ಯಾಹ್ನ ಸುರಿದ ಭಾರಿ ಮಳೆಗೆ ಕುಸಿದಿದೆ.

ಹಾವೇರಿಯಲ್ಲಿ ಬಾಲಕನ ಮೇಲೆ ಕುಸಿದ ಚಾವಣಿ

ಹಾವೇರಿ ಜಿಲ್ಲೆಯಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ನಿರಂತರ ಮಳೆಗೆ ಶಾಲೆಯ ಚಾವಣಿ ಕುಸಿದು ಬಾಲಕನಿಗೆ ಗಾಯವಾಗಿದೆ. ಹಾವೇರಿಯ ನೀರಲಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. 25 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 5 ನೇ ತರಗತಿಯಲ್ಲಿ ಓದುತ್ತಿದ್ದ ವಿನಾಯಕ್ ಮೋರೆ ಗಾಯಗೊಂಡವನು. ಬಾಲಕನ ಕಾಲಿನ ಮೇಲೆ ಚಾವಣಿ ಕಂಬ ಬಿದ್ದಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಗುತ್ತಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹರವಿ ಗ್ರಾಮದಲ್ಲೂ ಮನೆ ಕುಸಿದಿದೆ. ಕುಮಾರ ಮಳೆಪ್ಪನವರ ಮನೆಯು ಕುಸಿದು ಬಿದ್ದಿದೆ. ಬೆಳಗಿನ ಜಾವದಲ್ಲಿ ಮಣ್ಣು ಕುಸಿದಿದೆ. ಅದೃಷ್ಟವಶಾತ್ ಕುಟುಂಬಸ್ಥರು ಪಾರಾಗಿದ್ದಾರೆ.

ಇದನ್ನೂ ಓದಿ: Governor Versus State: ಶುರುವಾಯ್ತು ರಾಜ್ಯದಲ್ಲಿ ರಾಜ್ಯ ಸರ್ಕಾರ ವರ್ಸಸ್ ರಾಜ್ಯಪಾಲ ಸಂಘರ್ಷ; ರಾಜ್ಯಪಾಲರ ಮುಂದಿನ ನಡೆ ಏನು?

ಸೌಪರ್ಣಿಕ ನದಿ ತೀರದಲ್ಲಿ ಮತ್ತೆ ನೆರೆ

ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಸೌಪರ್ಣಿಕ ನದಿ ತೀರದಲ್ಲಿ ಮತ್ತೆ ನೆರೆ ಸೃಷ್ಟಿಯಾಗಿದೆ. ಸತತ ಮೂರನೇ ಬಾರಿಗೆ ನೆರೆ ಹಾವಳಿಯಿಂದಾಗಿ ಬೈಂದೂರು ತಾಲೂಕಿನ ನಾವುಂದ ಕುದ್ರು ವಿನಲ್ಲಿ ವಾಸವಾಗಿರುವ ಏಳು ಮನೆಗಳಿಗೆ ಜಲದಿಗ್ಬಂದನ ಹಾಕಲಾಗಿದೆ. ದೋಣಿಯ ಮೂಲಕವೇ ದೈನಂದಿನ ಕೆಲಸಗಳನ್ನು ಮಾಡಿಕೊಳ್ಳುತ್ತಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮನೆ ಮುಂಭಾಗವೇ ಭೂಮಿ ಛಿದ್ರ

ಚಿಕ್ಕಮಗಳೂರಿನಲ್ಲಿ ಮಳೆಯ ಅಬ್ಬರ ನಿಲ್ಲುವಂತೆ ಕಾಣುತ್ತಿಲ್ಲ. ಭಾರಿ ಮಳೆಗೆ ಭಾರಿ ಪ್ರಮಾಣದ ಭೂಕುಸಿತ ಉಂಟಾಗಿದೆ. ಕೊಪ್ಪ ತಾಲೂಕಿನ ಬಸರಿ ಕಟ್ಟೆ ಚೆನ್ನಕಲ್ಲು ಗ್ರಾಮದಲ್ಲಿ ನಾಗರಾಜ್ ಎಂಬುವವರ ಮನೆ ಮುಂದೆ ಭೂಮಿ ಛಿದ್ರ ಛಿದ್ರಗೊಂಡಿದೆ. 300 ಅಡಿಯಷ್ಟು ದೂರಕ್ಕೆ ಭೂಮಿ ಜಾರಿ ಹೋಗಿದೆ. ಭೂಮಿ ಕುಸಿತದ ರಭಸಕ್ಕೆ ಮನೆಯ ಅಡಿಪಾಯ, ಗೋಡೆಗಳಲ್ಲಿ ಬಿರುಕು ಉಂಟಾಗಿದೆ. ಮಳೆ ಹೆಚ್ಚಾದಂತೆ ಮನೆಯ ಮುಂಭಾಗ ಮತ್ತಷ್ಟು ಧರೆ ಕುಸಿತ ಉಂಟಾಗುವ ಸಾಧ್ಯತೆ ಇದೆ. ಭೂ ಕುಸಿತದಿಂದಾಗಿ 4-5 ಎಕರೆ, ಅಡಿಕೆ ತೋಟವು ನಾಶವಾಗಿದೆ.

ಶಿರಾಡಿಘಾಟ್ ಭೂ ಕುಸಿತ; ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ಟೀಂ ಭೇಟಿ

ಹಾಸನದ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಸಮೀಪದ ಗುಡ್ಡಕುಸಿತ ಸ್ಥಳಕ್ಕೆ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾದ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕುಸಿತಕ್ಕೆ ಕಾರಣ ತಿಳಿಯಲು ಸ್ಥಳ ಪರಿಶೀಲನೆ ನಡೆಸಿದ್ದರು. ಒಂದೇ ಸ್ಥಳದಲ್ಲಿ ನಿರಂತರವಾಗಿ ಭೂಮಿ ಕುಸಿಯುತ್ತಿದೆ. ಸಕಲೇಶಪುರ ತಾಲೂಕಿನ ಹಾರ್ಲೇ ಕೂಡಿಗೆ ಗ್ರಾಮದ ಸಮೀಪ ಭೂಮಿ ಕುಸಿದಿತ್ತು. ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಕುಸಿತವಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
ಮಾಲಿವುಡ್6 mins ago

Mohanlal Visits Landslide: ಸೇನಾ ಸಮವಸ್ತ್ರ ಧರಿಸಿ ವಯನಾಡಿಗೆ ಬಂದ ಮೋಹನ್​ಲಾಲ್!

M R Mamata
ಶ್ರದ್ಧಾಂಜಲಿ7 mins ago

M R Mamata: ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಆರ್ ಮಮತಾ ನಿಧನ

wayanad landslide cm siddaramaiah pinarayi vijayan
ಕರ್ನಾಟಕ23 mins ago

Wayanad landslide: ವಯನಾಡ್‌ ಭೂಕುಸಿತ ಸಂತ್ರಸ್ತರಿಗೆ 100 ಮನೆ ನಿರ್ಮಾಣ: ಕೇರಳ ಸಿಎಂಗೆ ಸಿದ್ದರಾಮಯ್ಯ ಭರವಸೆ

Paris Olympics
ಪ್ರಮುಖ ಸುದ್ದಿ23 mins ago

Paris Olympics: ಹ್ಯಾಟ್ರಿಕ್​ ಪದಕ ತಪ್ಪಿಸಿಕೊಂಡ ಮನು ಭಾಕರ್​; 4ನೇ ಸ್ಥಾನಕ್ಕೆ ತೃಪ್ತಿ

Self Harming
ಚಿಕ್ಕೋಡಿ40 mins ago

Self Harming : ಉಕ್ಕಿ ಹರಿಯುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು

BJP-JDS Padayatra
ಕರ್ನಾಟಕ41 mins ago

BJP-JDS Padayatra: ಮೈಸೂರು ಚಲೋ ಪಾದಯಾತ್ರೆ ಆರಂಭ; ದಲಿತರು, ರೈತರಿಗೆ ನ್ಯಾಯ ಕೊಡಿಸಲು ಹೋರಾಟ ಎಂದ ವಿಜಯೇಂದ್ರ

Narco-Terrorism
ದೇಶ43 mins ago

Narco-Terrorism: ಭಯೋತ್ಪಾದನೆಗೆ ಹಣಕಾಸು ನೆರವು ಒದಗಿಸುತ್ತಿದ್ದ ಆರು ಸರ್ಕಾರಿ ಅಧಿಕಾರಿಗಳ ಅಮಾನತು

Ismail Haniyeh
ವಿದೇಶ1 hour ago

Ismail Haniyh Killing: ಹನಿಯೆಹ್‌ ಹತ್ಯೆ ಹಿಂದೆ ಇಸ್ರೇಲ್‌ನ ಮಾಸ್ಟರ್‌ ಪ್ಲ್ಯಾನ್‌? ಮೊಸಾದ್‌ನ ಸೀಕ್ರೆಟ್‌ ಏಜೆಂಟ್‌ಗಳಿಂದ ಬಾಂಬ್‌ ಸ್ಫೋಟ?

karnataka rain
ಮಳೆ1 hour ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

hd kumaraswamy muda
ಪ್ರಮುಖ ಸುದ್ದಿ1 hour ago

HD Kumaraswamy: ಇನ್ನೂ ಹತ್ತು ತಿಂಗಳು ಸರ್ಕಾರ ನಡೆಸಿ ನೋಡೋಣ: ಕಾಂಗ್ರೆಸ್‌ಗೆ ಎಚ್‌ಡಿಕೆ ಸವಾಲ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ1 hour ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌