Site icon Vistara News

Physical Abuse : ಅರ್ಥವಾಗದ ಪಾಠವನ್ನು ಹೇಳಿಕೊಡುವುದಾಗಿ ವಿದ್ಯಾರ್ಥಿನಿಯನ್ನು ಕರೆಸಿ ಅತ್ಯಾಚಾರವೆಸಗಿದ ಉಪನ್ಯಾಸಕ

Physical Abuse

ಶಿವಮೊಗ್ಗ : ವಿದ್ಯಾರ್ಥಿನಿಯನ್ನು ಪುಸಲಾಯಿಸಿದ ಉಪನ್ಯಾಸಕನೊಬ್ಬ ಮದುವೆ ಆಗುವುದಾಗಿ (Physical Abuse) ನಂಬಿಸಿ ಅತ್ಯಾಚಾರವೆಸಗಿದ್ದಾನೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಉಪನ್ಯಾಸಕನನ್ನು ಪೊಲೀಸರು ಬಂಧಿಸಿದ್ದಾರೆ. ಸಾಗರದ ಖಾಸಗಿ ಕಾಲೇಜಿನ ಉಪನ್ಯಾಸಕನಾಗಿರುವ ಪುನೀತ್ ಬಂಧಿತ ಆರೋಪಿಯಾಗಿದ್ದಾನೆ.

ಅರ್ಥವಾಗದ ವಿಷಯದ ಬಗ್ಗೆ ಅರ್ಥ ಮಾಡಿಸಿಕೊಡ್ತೇನೆ ಅಂತೇಳಿ ವಿದ್ಯಾರ್ಥಿನಿ ಜತೆ
ಸ್ನೇಹ ಬೆಳೆಸಿದ್ದ. ಸ್ನೇಹ ನಂತರ ಮದುವೆಯಾಗುವುದಾಗಿ ನಂಬಿಸಿದ್ದ ಉಪನ್ಯಾಸಕ ತದನಂತರ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಸದ್ಯ ಅತ್ಯಾಚಾರ ಕುರಿತು ಶಿವಮೊಗ್ಗ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿ ಉಪನ್ಯಾಸಕ ಪುನೀತ್ ವಶಕ್ಕೆ ಪಡೆದ ಪೊಲೀಸರು ವಿಚಾರಣೆಯನ್ನು ಮುಂದುವರಿಸಿದ್ದಾರೆ.

ಲೈಂಗಿಕ ದೌರ್ಜನ್ಯ; ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮೇಲೆ ಎಫ್‌ಐಆರ್‌

ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮೇಲೆ ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. 47 ವರ್ಷದ ಮಹಿಳೆಯಿಂದ ಲೈಂಗಿಕ ದೌರ್ಜನ್ಯ ದೂರು ಬಂದಿದೆ. ಬೆಂಗಳೂರಿನ ಪೈ ವಿಸ್ತಾ ಹೋಟೆಲ್‌ 2023 ರ ಜೂನ್ ನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ದೌರ್ಜನ್ಯದ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲ್ಯಾಕ್‌ ಮೇಲ್ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಹೀಗಾಗಿ IPC 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಅರುಣ್‌ ಕುಮಾರ್‌ ಪುತ್ತೂರು ವಿಧಾನಸಭಾ ಚುನಾವಣೆಗೆ ಹಿಂದುತ್ವದ ಹೆಸರಿನಲ್ಲಿ ಬಂಡಾಯ ಸ್ಪರ್ಧೆಯಲ್ಲಿ ಬಿಜೆಪಿಗೆ ಠಕ್ಕರ್‌ ಕೊಟ್ಟು ಬಂಡಾಯ ಸ್ಪರ್ಧೆ ಮಾಡಿ ಪ್ರಖ್ಯಾತಿ ಪಡೆದಿದ್ದರು. ಪುತ್ತಿಲ ಅವರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಗೆ ಮಹಿಳೆ ಫಿದಾ ಆಗಿದ್ದರು. ಪುತ್ತಿಲಗೆ ಅಭಿಮಾನಿ ಆಗಿ ಸಾಮಾಜಿಕ ಜಾಲತಾಣದಲ್ಲಿ ಫಾಲೋ ಮಾಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಲಾಡ್ಜ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ

ಚಿಕ್ಕ ತಿರುಪತಿಯ ಲಾಡ್ಜ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿ ಮಾಲೂರು ತಾಲೂಕಿನ ಚಿಕ್ಕ ತಿರುಪತಿ ಗ್ರಾಮದ ಶ್ರೀ ರಾಮು (42) ಗುರುತಿಸಲಾಗಿದೆ. ಆತ್ಮಹತ್ಯೆಗೆ ಕೌಟುಂಬಿಕ ಕಲಹಗಳೇ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಮಾಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version