Site icon Vistara News

Road Accident: ರಿಪ್ಪನ್‌ಪೇಟೆಯಲ್ಲಿ ಬೈಕ್‌ ಡಿಕ್ಕಿ, ಇಬ್ಬರಿಗೆ ತೀವ್ರ ಗಾಯ

Road Accident in Kanakagiri taluk

ಶಿವಮೊಗ್ಗ: ಶಿವಮೊಗ್ಗದ ಗರ್ತಿಕೆರೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ (road accident) ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆಯಲ್ಲಿ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿದೆ. ಪಾದಚಾರಿ ಹಾಗೂ ಚಾಲಕ ಇಬ್ಬರ ಸ್ಥಿತಿಯೂ ಗಂಭೀರವಾಗಿದೆ. ವಾಯಾಳುಗಳನ್ನು ಗರ್ತಿಕೆರೆ ನಿವಾಸಿ ನದೀಮ್ (22), ಚಿನ್ನಪ್ಪ(54) ಎಂದು ಗುರುತಿಸಲಾಗಿದೆ.

ಬೈಕಿನಲ್ಲಿ ನದೀಮ್ ಗರ್ತಿಕೆರೆ ಕಡೆಯಿಂದ ಮನೆಗೆ ತೆರಳುವಾಗ ದುರ್ಘಟನೆ ನಡೆದಿದೆ. ಪಾದಚಾರಿ ಚಿನ್ನಪ್ಪ ಅವರಿಗೆ ಬೈಕ್ ಡಿಕ್ಕಿಯಾಗಿದೆ. ನಂತರ ಬೈಕ್ ಪ್ರೌಢಶಾಲಾ ನಾಮಫಲಕಕ್ಕೆ ಡಿಕ್ಕಿ ಹೊಡೆದಿದೆ. ಇಬ್ಬರಿಗೂ ತಲೆಗೆ ತೀವ್ರವಾದ ಪೆಟ್ಟು ಬಿದ್ದಿದೆ. ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ನಂತರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಪ್ತಪದಿ ತುಳಿದ ಹತ್ತೇ ದಿನಕ್ಕೆ ಮಸಣ ಸೇರಿದ ನವ ದಂಪತಿ

ಬೆಳಗಾವಿ: ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರು ಗ್ರಾಮದ ಬಳಿ ಕಾರು ಹಾಗೂ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿ ನವ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭೀಕರ ರಸ್ತೆ ಅಪಘಾತ (Road Accident) ನಡೆದಿದ್ದರಿಂದ ಸಪ್ತಪದಿ ತುಳಿದ ಹತ್ತೇ ದಿನಕ್ಕೆ ನವ ದಂಪತಿ ಮಸಣ ಸೇರಿದ್ದಾರೆ.

ಮಹಾರಾಷ್ಟ್ರ ಮೂಲದ ಇಂದ್ರಜಿತ್ ಮೋಹನ್ ಡಮ್ಮನಗಿ (27), ಕಲ್ಯಾಣಿ ಇಂದ್ರಜಿತ್ ಡಮ್ಮಣಗಿ (24) ಮೃತರು. ನವ ದಂಪತಿ ಶನಿವಾರ ಕಾರಿನಲ್ಲಿ ಬಾದಾಮಿಯ ಬನಶಂಕರಿ ದೇವಿ ದರ್ಶನ ಪಡೆದು ಮರಳಿ‌ ಮನೆಗೆ ತೆರಳುವಾಗ ನಿಪ್ಪಾಣಿ- ಮುದೋಳ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾರು ಹಾಗೂ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದ್ದರಿಂದ ಇಬ್ಬರೂ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮೂಡಲಗಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Exit mobile version