Site icon Vistara News

Shimogga News: ಆಕ್ಸಿಜನ್ ಸಿಲಿಂಡರ್ ರಾಗಿಗುಡ್ಡ ಸಂರಕ್ಷಣೆಗೆ ಆಗ್ರಹ; ತಲೆ ಮೇಲೆ ಕೈ ಹೊತ್ತು ಪ್ರತಿಭಟನೆ

#image_title

ಶಿವಮೊಗ್ಗ: ನಗರದ ಹೊರವಲಯದಲ್ಲಿರುವ ರಾಗಿಗುಡ್ಡದ ಸಂರಕ್ಷಣೆಗಾಗಿ ವಿನೂತನವಾಗಿ ಪ್ರತಿಭಟನೆ ನಡೆಸಲಾಗಿದೆ. ನಗರದ ಆಕ್ಸಿಜನ್ ಸಿಲಿಂಡರ್ ಎಂದೇ ಗುರುತಿಸಲ್ಪಟ್ಟಿರುವ ರಾಗಿಗುಡ್ಡದಲ್ಲಿ ನವುಲೆ ಕಡೆಯಿಂದ ಕಾಂಕ್ರಿಟ್ ರಸ್ತೆ ನಿರ್ಮಾಣ ಸೇರಿದಂತೆ ಯಾವುದೇ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ನಡೆಸಬಾರದು ಎಂದು ರಾಗಿಗುಡ್ಡ ಉಳಿಸಿ ಅಭಿಯಾನದ ನವ್ಯಶ್ರೀ ನಾಗೇಶ್ ಜಿಲ್ಲಾಡಳಿತವನ್ನು ಒತ್ತಾಯಿಸಿದರು.

“ಈ ಪ್ರದೇಶದಲ್ಲಿ ಕಟ್ಟಡ, ಕಾಂಕ್ರಿಟ್ ರಸ್ತೆ ನಿರ್ಮಾಣದಿಂದ ನೈಸರ್ಗಿಕ ಕಾಡು ನಾಶವಾಗುತ್ತಿದೆ. ಗಿಡ, ಮರಗಳು ಅಗ್ನಿಗೆ ಆಹುತಿಯಾಗಿವೆ. ಅಳಿದುಳಿದಿರುವ ಸಸ್ಯ ಸಂಕುಲವನ್ನು ಸಂರಕ್ಷಿಸಬೇಕಾಗಿದೆ. ಬಿಸಿಲಿನಿಂದಾಗಿ ಸಸ್ಯಗಳು ಒಣಗುತ್ತಿವೆ. ಈ ಸಸ್ಯಗಳಿಗೆ ನೀರು ಪೂರೈಸಲು ಬೋರ್‌ವೆಲ್ ಕೊರೆಸಿ ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ನೀರಿನ ಟ್ಯಾಂಕ್‌ನ ಪೈಪ್‌ಲೈನ್ ವ್ಯವಸ್ಥೆ ಹಾಳಾಗಿದೆ. ಕೂಡಲೇ ಇದನ್ನು ದುರಸ್ತಿ ಪಡಿಸಬೇಕು” ಎಂದು ನವ್ಯಶ್ರೀ ಹೇಳಿದರು.

ಇದನ್ನೂ ಓದಿ: SC ST Reservation: ಮುಂದುವರಿದ ಬಂಜಾರರ ಆಕ್ರೋಶ; ಗದಗದಲ್ಲಿ ಕೇಶ ಮುಂಡನ ಮಾಡಿಸಿ ಆಕ್ರೋಶ, ಶಿವಮೊಗ್ಗದಲ್ಲಿ ಹೆದ್ದಾರಿ ತಡೆ

ರಾಗಿಗುಡ್ಡ ಉಳಿಸಿ ಅಭಿಯಾನದ ವತಿಯಿಂದ ಏ.1ರಂದು ರಾಗಿಗುಡ್ಡದ ನೆತ್ತಿಯ ಮೇಲಿರುವ ಬ್ರಹ್ಮ,ವಿಷ್ಣು, ಮಹೇಶ್ವರ ಮೂರ್ತಿಯ ಸಮೀಪ ರಾಗಿಗುಡ್ಡ ಉಳಿಸಿ ಎಂಬ ಧ್ಯೇಯದೊಂದಿಗೆ ತಲೆಯ ಮೇಲೆ ಕೈ ಹೊತ್ತು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ರಾಗಿಗುಡ್ಡ ಪ್ರದೇಶವನ್ನು ಜಿಲ್ಲಾಧಿಕಾರಿಗಳು ಅರಣ್ಯ ಇಲಾಖೆಗೆ ಹಸ್ತಾಂತರಿಸಬೇಕು. ಈ ಪ್ರದೇಶದ ಸುತ್ತ ಭದ್ರವಾದ ಬೇಲಿ ನಿರ್ಮಿಸಬೇಕು. ಮುಂಗಾರು ಆರಂಭವಾಗುತ್ತಿದ್ದಂತೆಯೇ ಅರಣ್ಯ ಇಲಾಖೆ ಹಸರೀಕರಣವನ್ನು ಪ್ರಾರಂಭಿಸಲಿದೆ. ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ರಾಗಿಗುಡ್ಡ ಪ್ರದೇಶದಲ್ಲಿ ಸಸಿ ನೆಡುವಂತಾಗಬೇಕೆಂದು ಹೇಳಿದರು.

ರಾಗಿಗುಡ್ಡದಲ್ಲಿ ಅಪರೂಪದ, ವಿನಾಶದ ಅಂಚಿನಲ್ಲಿರುವ ಸಸ್ಯಗಳಿವೆ. ಇವುಗಳನ್ನು ಸಂರಕ್ಷಿಸಬೇಕಾಗಿದೆ. ಇದೊಂದು ಪಾರಂಪರಿಕ ತಾಣವಾಗಿದ್ದು, ಮುಂದಿನ ಪೀಳಿಗೆಗೆ ಇದನ್ನು ಉಳಿಸಿಬೇಕಾಗಿದೆ. ಈ ನಿಟ್ಟಿನಲ್ಲಿ ರಾಗಿಗುಡ್ಡ ಉಳಿಸಿ ಅಭಿಯಾನ ಕೈಗೊಳ್ಳಲಾಗಿದೆ. ಈ ಅಭಿಯಾನ ನಿರಂತರವಾಗಿ ಹೋರಾಟ ನಡೆಸಲಿದ್ದು ಇದರಲ್ಲಿ ನಾಗರಿಕರು ಪಾಲ್ಗೊಳ್ಳಬೇಕೆಂದು ಅವರು ಮನವಿ ಮಾಡಿದರು.

ಇದನ್ನೂ ಓದಿ: Karnataka Election 2023: ಶಿವಮೊಗ್ಗ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿದ್ದಾರೆ 14,58,680 ಮತದಾರರು: ಜಿಲ್ಲಾಧಿಕಾರಿ ಡಾ.ಸೆಲ್ವಮಣಿ

ಈ ಪ್ರತಿಭಟನೆಯಲ್ಲಿ ಅಭಿಯಾನದ ಕೆ.ವಿ.ವಸಂತ ಕುಮಾರ್, ಎಸ್.ಬಿ. ಅಶೋಕ್, ನಾಗರಾಜ್ ಶೆಟ್ಟರ್, ಆರ್. ಶ್ರೀಕಾಂತ್, ರಘುಪತಿ, ಲೋಕೇಶ್ವರಪ್ಪ, ದಿಗಂತ್ ಕುಮಾರ್ ಮತ್ತಿತರರು ಭಾಗವಹಿಸಿದ್ದರು.

Exit mobile version