Shivamogga News: ನೈರುತ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಭರ್ಜರಿ ಗೆಲುವು; ರಿಪ್ಪನ್‌ಪೇಟೆಯಲ್ಲಿ ಸಂಭ್ರಮಾಚರಣೆ - Vistara News

ಶಿವಮೊಗ್ಗ

Shivamogga News: ನೈರುತ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಭರ್ಜರಿ ಗೆಲುವು; ರಿಪ್ಪನ್‌ಪೇಟೆಯಲ್ಲಿ ಸಂಭ್ರಮಾಚರಣೆ

Shivamogga News: ವಿಧಾನ ಪರಿಷತ್‌ನ ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿಗಳಾದ ಎಸ್‌.ಎಲ್‌. ಭೋಜೇಗೌಡ, ಡಾ. ಧನಂಜಯ ಸರ್ಜಿ ಅವರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ರಿಪ್ಪನ್‌ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಶುಕ್ರವಾರ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.

VISTARANEWS.COM


on

Alliance Candidates Win in MLC South West Constituency Celebration at Ripponpet
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಿಪ್ಪನ್‌ಪೇಟೆ: ವಿಧಾನ ಪರಿಷತ್‌ನ ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿಗಳಾದ ಎಸ್‌. ಎಲ್‌. ಭೋಜೇಗೌಡ, ಡಾ. ಧನಂಜಯ ಸರ್ಜಿ ಅವರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದ ವಿನಾಯಕ ವೃತ್ತದಲ್ಲಿ ಶುಕ್ರವಾರ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ (Shivamogga News) ನಡೆಸಿದರು.

ಇದನ್ನೂ ಓದಿ: Pesticides in Spices: MDH, Everest ಬೆನ್ನಲ್ಲೇ ರಾಜ್ಯದ ಮಸಾಲೆ ಪದಾರ್ಥಗಳಿಗೂ ತಟ್ಟಿದ ಬ್ಯಾನ್‌ ಬಿಸಿ

ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್‌.ಎಲ್‌.ಭೋಜೇಗೌಡ ಹಾಗೂ ನೈರುತ್ಯ ಪದವೀಧರರ ಕ್ಷೇತ್ರದಿಂದ ಡಾ. ಧನಂಜಯ ಸರ್ಜಿ ಅವರು ಭರ್ಜರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್ ಮಾತನಾಡಿದರು.

ಇದನ್ನೂ ಓದಿ: Karnataka Rain : ಮಳೆ ಶುರುವಾದರೆ ಸಾಕು ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ!

ಈ ವೇಳೆ ಬಿಜೆಪಿ ಹಾಗೂ ಜೆಡಿಎಸ್‌ ಮುಖಂಡರುಗಳಾದ ಎನ್. ಸತೀಶ್, ಎಂ.ಬಿ.‌ ಮಂಜುನಾಥ್, ಸುರೇಶ್ ಸಿಂಗ್, ಸೋಮಶೇಖರ್ ದೂನ, ಪಿ. ರಮೇಶ್, ರಾಮಚಂದ್ರ, ಸುಧೀರ್ ಪಿ., ಮುರುಳಿ ಕೆರೆಹಳ್ಳಿ, ಈಶ್ವರ್ ಮಳಕೊಪ್ಪ, ಮಹೇಶ್ ಮಾನಿಕೆರೆ, ಮಂಜುಳಾ ಕೇತರ್ಜಿರಾವ್‌, ದೀಪಾ ಸುಧೀರ್‌, ಪದ್ಮಾ ಸುರೇಶ್, ಲೀಲಾಶಂಕರ್‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Shivamogga News: ಶಿವಮೊಗ್ಗದಲ್ಲಿ ಜೂ.22ರಂದು ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ

Shivamogga News: ಚಿಕ್ಕಮಗಳೂರಿನ ಯುವ ಸ್ಫೂರ್ತಿ ಅಕಾಡೆಮಿ, ವಿಸ್ತಾರ ನ್ಯೂಸ್‌ ಹಾಗೂ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜು, ಗಾಜನೂರು ಇವರ ಸಹಯೋಗದಲ್ಲಿ ಜೂ.22ರಂದು ಶನಿವಾರ ಬೆಳಗ್ಗೆ 10 ಗಂಟೆಗೆ ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.

VISTARANEWS.COM


on

Yuva spoorthi samvaada programme on June 22 in Shivamogga
Koo

ಶಿವಮೊಗ್ಗ: ಚಿಕ್ಕಮಗಳೂರಿನ ಯುವ ಸ್ಫೂರ್ತಿ ಅಕಾಡೆಮಿ, ವಿಸ್ತಾರ ನ್ಯೂಸ್‌ ಹಾಗೂ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜು ಗಾಜನೂರು ಇವರ ಸಹಯೋಗದಲ್ಲಿ ಜೂ.22ರಂದು ಶನಿವಾರ ಬೆಳಗ್ಗೆ 10 ಗಂಟೆಗೆ ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ (Shivamogga News) ಏರ್ಪಡಿಸಲಾಗಿದೆ.

ಇದನ್ನೂ ಓದಿ: Working Hours: ಅತಿ ಹೆಚ್ಚು ಕೆಲಸದ ಸಮಯ ಹೊಂದಿರುವ ದೇಶಗಳಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ?

ಜಿಲ್ಲೆಯ ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಉದ್ಘಾಟಿಸುವರು. ಶಿವಮೊಗ್ಗದ ಶ್ರೀ ದೊಡ್ಡಮ್ಮ ದೇವಿ ಉಪಾಸಕರಾದ ಶ್ರೀ ಸಿದ್ದಪ್ಪಾಜಿ ದಿವ್ಯ ಸಾನ್ನಿಧ್ಯ ವಹಿಸುವರು. ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಲೋಕಪ್ಪ ವಿ. ದಳವಾಯಿ ಅಧ್ಯಕ್ಷತೆ ವಹಿಸುವರು. ಚಿಕ್ಕಮಗಳೂರಿನ ಯುವ ಸ್ಫೂರ್ತಿ ಅಕಾಡೆಮಿಯ ಮುಖ್ಯಸ್ಥ ಸುಂದರೇಶ್‌ ಸಿ.ಬಿ. ಪ್ರಾಸ್ತಾವಿಕವಾಗಿ ಮಾತನಾಡುವರು.

ಇದನ್ನೂ ಓದಿ: CM Siddaramaiah: ಸರ್ಕಾರಿ ನೌಕರರಿಗೆ ಬಂಪರ್‌ ಸುದ್ದಿ: 27% ವೇತನ ಹೆಚ್ಚಳಕ್ಕೆ ಮುಂದಾದ ಸಿಎಂ

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗೋಪಾಲಕೃಷ್ಣ ಬಿ., ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸ್ನೇಹಲ್‌ ಸುಧಾಕರ್‌ ಲೋಖಂಡೆ, ಶಿವಮೊಗ್ಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್‌ ಜಿ.ಕೆ., ಹೈಕೋರ್ಟ್‌ ಹಾಗೂ ಸುಪ್ರೀ ಕೋರ್ಟ್‌ನ ನ್ಯಾಯವಾದಿ ವಿಕ್ರಂ ಪಡ್ಕೆ ಪಾಲ್ಗೊಳ್ಳುವರು.

Continue Reading

ಮಳೆ

Karnataka Weather : ಭಾರಿ ಮಳೆ ಜತೆಗೆ ಬೀಸಲಿದೆ ಬಿರುಗಾಳಿ; ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Weather Forecast : ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ (Heavy rain alert) ಬಿರುಗಾಳಿ ಬೀಸಲಿದ್ದು, ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ (Fisher Warning) ನೀಡಲಾಗಿದೆ. ಜತೆಗೆ ಮಲೆನಾಡು, ಒಳನಾಡಿನಲ್ಲೂ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು : ರಾಜ್ಯಾದ್ಯಂತ ಬುಧವಾರದಂದು ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಕೂಡಿರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಉತ್ತರ ಒಳನಾಡಿನ ಹಲವೆಡೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇತ್ತ ಮಲೆನಾಡಿನ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲೂ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Wild Animals Attack : ಮನೆಯಂಗಳವನ್ನು ಧ್ವಂಸ ಮಾಡಿದ ಆನೆಗಳು; ಗ್ರಾಮಕ್ಕೆ ಓಡೋಡಿ ಬಂದ ಕರಡಿ

9 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

ಗುಡುಗು, ಸಿಡಿಲು ಜತೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿ ವೇಗವು 30-40 ಕಿ.ಮೀ ಇರಲಿದೆ. ಹೀಗಾಗಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಮುಖ್ಯವಾಗಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಸೇರಿ ಒಳನಾಡಿನ ಚಿತ್ರದುರ್ಗ, ಮಂಡ್ಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕಡಲಿಗೆ ಮೀನುಗಾರರ ದಿಗ್ಬಂಧನ

ಕಡಲ ತೀರದಲ್ಲಿ ಅಲೆಗಳ ಅಬ್ಬರ ಜೋರಾಗಿ ಇರಲಿದ್ದು, ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜೂನ್‌ 21ರವರೆಗೆ ಮೀನುಗಾರರು ಮೀನುಗಾರಿಕೆ ತೆರಳದಂತೆ ಸೂಚಿಸಲಾಗಿದೆ. ಜತೆಗೆ ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಗುಡುಗು, ಸಿಡಿಲಿನ ಮಳೆಗೆ ಮನೆಯ ಗೋಡೆ ಕುಸಿತ; ನಾಳೆಗೂ ಇದೆ ಅಲರ್ಟ್‌

Karnataka Weather Forecast : ಗುಡುಗು, ಸಿಡಿಲು ಸಹಿತ ಸುರಿದ ಮಳೆಗೆ (Rain News) ಮನೆಯ ಗೋಡೆ ಕುಸಿದಿದ್ದು, ಕುಟುಂಬಸ್ಥರು ಪವಾಡ ಸದೃಶ್ಯದಂತೆ ಪಾರಾಗಿದ್ದಾರೆ. ರಾಜ್ಯದ ಹಲವೆಡೆ ಮಳೆಯಾಗಿರುವ ವರದಿ ಆಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು/ದೊಡ್ಡಬಳ್ಳಾಪುರ: ಸಿಡಿಲು ಬಡಿದು ಮನೆಯ ಗೋಡೆ ಕುಸಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮುಕ್ಕಡಿಘಟ್ಟ ಗ್ರಾಮದಲ್ಲಿ (Karnataka Weather Forecast) ನಡೆದಿದೆ. ಸೋಮವಾರ ರಾತ್ರಿ ಗುಡುಗು, ಸಿಡಿಲು ಸಹಿತ ಜಡಿ (Rain News) ಮಳೆಯಾಗಿದೆ.

ಈ ವೇಳೆ ಸಿಡಿಲು ಬಡಿದ ಪರಿಣಾಮ ಗೋಡೆ ಕುಸಿತವಾಗಿದೆ. ಗಂಗರಾಜ್ ಎಂಬುವವರಿಗೆ ಸೇರಿದ ಮನೆ ಹಾನಿಯಾಗಿದೆ. ಮನೆಯ ಕುಟುಂಬಸ್ಥರು ಬೇರೆ ಕೋಣೆಯಲ್ಲಿದ್ದ ಕಾರಣ ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೂ ಗೋಡೆ ಕುಸಿದ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಜಖಂಗೊಂಡಿವೆ. ದೊಡ್ಡಬಳ್ಳಾಪುರ ಗ್ರಾಮಾಂತರ ‌ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Electric shock : ಮೀನು ಹಿಡಿಯಲು ಹೋದಾಗ ವಿದ್ಯುತ್‌ ಪ್ರವಹಿಸಿ ಬಾಲಕರಿಬ್ಬರು ಮೃತ್ಯು; ಕುಟುಂಬಸ್ಥರ ಆಕ್ರಂದನ

ಚಿಕ್ಕಮಗಳೂರಲ್ಲಿ ಅಬ್ಬರ ಮಳೆ

ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ ಭಾರಿ ಮಳೆಯಾಗಿದ್ದು, 8 ಸೆಂ.ಮೀ ದಾಖಲಾಗಿದೆ. ಧರ್ಮಸ್ಥಳದಲ್ಲಿ 6 ಸೆಂ.ಮೀ, ಕಾರ್ಕಳ , ಕಕ್ಕೇರಿ, ಯಗಟಿಯಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಹೊಸದುರ್ಗ, ಹಾರಂಗಿ, ರಾಯಲ್ಪಾಡು, ಚನ್ನಗಿರಿ, ಕೋಲಾರ, ಎಂಎಂ ಹಿಲ್ಸ್‌ನಲ್ಲಿ 4 ಸೆಂ.ಮೀ ಮಳೆಯಾಗಿದೆ.

ಇನ್ನೂ ಮಣಿ, ಶಿರಾಲಿ, ಬೆಳ್ತಂಗಡಿ, ಕೊಣನೂರಿನಲ್ಲಿ ತಲಾ 3 ಸೆಂ.ಮೀ ಹಾಗೂ ಹೊನ್ನಾವರ, ಪುತ್ತೂರು, ಮಂಗಳೂರು, ತುಮಕೂರು, ಭಾಗಮಂಡಲ, ವಿರಾಜಪೇಟೆ, ಕುಶಾಲನಗರದಲ್ಲಿ ತಲಾ 2 ಸೆಂ.ಮೀನಷ್ಟು ಮಳೆಯಾಗಿದೆ. ಮಂಕಿ, ಪಣಂಬೂರು , ಮೂಲ್ಕಿ, ಉಪ್ಪಿನಂಗಡಿ, ಕುಮಟಾ, ಮಧುಗಿರಿ, ಪರಶುರಾಂಪುರ, ತೊಂಡೇಭಾವಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಕರಾವಳಿ ಭಾಗಕ್ಕೆ ಮಳೆ ಅಲರ್ಟ್‌

ಜೂನ್‌ 19ರಂದು ಕರಾವಳಿ ಭಾಗಕ್ಕೆ ಮಳೆ ಎಚ್ಚರಿಕೆ ನೀಡಲಾಗಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಒಳನಾಡಿನಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಲ್ಲಿ ಕೆಲವೊಮ್ಮೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಗರಿಷ್ಠ 30 ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿವಮೊಗ್ಗ

Murder Case : ಸ್ಮಶಾನಕ್ಕೆ ಕರೆದೊಯ್ದು ಸ್ನೇಹಿತನನ್ನೇ ಕೊಂದು ಹಾಕಿದ ಮಿತ್ರದ್ರೋಹಿ

Murder Case : ಮದ್ಯ ಸೇವಿಸುವ ನೆಪದಲ್ಲಿ ಗೆಳೆಯನನ್ನು ಸ್ಮಶಾನಕ್ಕೆ ಕರೆದುಕೊಂಡು ಹೋದ ದುಷ್ಟನೊಬ್ಬ ಬರ್ಬರವಾಗಿ ಕೊಂದಿದ್ದಾನೆ. ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ್ದಾನೆ.

VISTARANEWS.COM


on

By

murder Case
ಸಾಂದರ್ಭಿಕ ಚಿತ್ರ
Koo

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಯುವಕನೊಬ್ಬ ತನ್ನ ಸ್ನೇಹಿತನನ್ನೇ ಬರ್ಬರವಾಗಿ ಕೊಂದು (Murder Case) ಹಾಕಿದ್ದಾನೆ. ಶಿವಮೊಗ್ಗ ನಗರದ ಆಯನೂರು ಗೇಟ್ ಬಳಿ ಸೋಮವಾರ ತಡರಾತ್ರಿ ಘಟನೆ ನಡೆದಿದೆ. ಶಿವಮೊಗ್ಗದ ಜೆಪಿ ನಗರದ ನಿವಾಸಿ ರಾಜುನಾಯ್ಕ(30) ಕೊಲೆಯಾದವನು. ವಿಕ್ರಮ್ ಕೊಲೆ ಆರೋಪಿ ಆಗಿದ್ದಾನೆ.

ಕಳೆದ ಎರಡ್ಮೂರು ದಿನದಿಂದ ರಾಜುನಾಯ್ಕ ಹಾಗೂ ವಿಕ್ರಮ್‌ ನಡುವೆ ಕಲಹ ಇತ್ತು. ನಿನ್ನೆ ಸೋಮವಾರ ರಾತ್ರಿ ಎಣ್ಣೆ ಕುಡಿಯೋಣ ಬಾ ಎಂದು ವಿಕ್ರಮ್‌ ರಾಜುನಾಯ್ಕ್‌ನನ್ನು ಕರೆದುಕೊಂಡು ಹೋಗಿದ್ದ. ಎಣ್ಣೆ ಕುಡಿಸುವ ನೆಪದಲ್ಲಿ ಸ್ಮಶಾನಕ್ಕೆ ಕರೆದುಕೊಂಡು ಹೋಗಿ ತಲೆ ಮೇಲೆ ಕಲ್ಲು ಎತ್ತಿ ಕೊಲೆ ಮಾಡಲಾಗಿದೆ.

ಸದ್ಯ ಘಟನೆ ಸಂಬಂಧ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Reels Tragedy : ರೀಲ್ಸ್‌ ಶೋಕಿ; ಪ್ರಪಾತಕ್ಕೆ ಬಿದ್ದು ಯುವತಿ ಸಾವು- ಛಿದ್ರಗೊಂಡ ಕಾರು

ಹಾಸನದಲ್ಲಿ ಪತ್ನಿಯನ್ನು ಕೊಂದು ನೇಣಿಗೆ ಶರಣಾದ ಪತಿ

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾನೆ. ಹರೀಶ್ (50) ಎಂಬಾತ ಪತ್ನಿ ಜಾಜಿ (45) ಕೊಂದು ಆತ್ಮಹತ್ಯೆ ಮಾಡಿಕೊಂಡವನು.

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ದೊಡ್ಡಸಾಲಾವರ ಗ್ರಾಮದಲ್ಲಿ ಘಟನೆ ನಡೆದಿದೆ. ಹರೀಶ್‌ ಹಾಗೂ ಜಾಜಿ ನಡುವೆ ಪ್ರತಿನಿತ್ಯ ಒಂದಲ್ಲ ಒಂದು ಕಾರಣಕ್ಕೆ ಜಗಳ ನಡೆಯುತ್ತಲೇ ಇತ್ತು. ಸೋಮವಾರ ರಾತ್ರಿಯೂ ಇಬ್ಬರ ನಡುವೆ ಜಗಳ ನಡೆದಿದ್ದು, ವಿಕೋಪಕ್ಕೆ ತಿರುಗಿದೆ.

ಈ ವೇಳೆ ಸಿಟ್ಟಾದ ಹರೀಶ್‌ ಮನೆಯಲ್ಲಿದ್ದ ನಾಡ ಬಂದೂಕಿನಿಂದ ಗುಂಡು ಹಾರಿಸಿ ಪತ್ನಿ ಜಾಜಿಯನ್ನು ಹತ್ಯೆ ಮಾಡಿದ್ದಾನೆ. ನಂತರ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಇನ್ನೂ ಈ ದಂಪತಿಗೆ ಮೂವರು ಮಕ್ಕಳಿದ್ದು, ಬೇರೆಡೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Renuka swamy Murder case
ಬೆಂಗಳೂರು7 mins ago

Renuka Swamy Murder : ನಟ ದರ್ಶನ್ ಹಲ್ಲೆ ಮಾಡುವುದನ್ನು ವಿಡಿಯೊ ಮಾಡಿದ್ದ ಮೂವರು ಅರೆಸ್ಟ್‌; ಸಿಕ್ಕೇ ಬಿಡ್ತಾ ದೊಡ್ಡ ಸಾಕ್ಷಿ!

International Yoga Day 2024
ಫ್ಯಾಷನ್17 mins ago

International Yoga Day 2024: ಯೋಗಾಭ್ಯಾಸಕ್ಕೆ ಪುರುಷರ ಉಡುಗೆಗಳು ಹೀಗಿರಬೇಕು

Amithab Bacchan
Latest31 mins ago

Amithab Bacchan :14ನೇ ವರ್ಷಕ್ಕೆ ಕಾಲಿಟ್ಟ ʼರಾವಣ್ʼ ಚಿತ್ರ; ಮಗನನ್ನು ಹೊಗಳಿ ಸೊಸೆಯನ್ನು ನಿರ್ಲಕ್ಷಿಸಿದ ಅಮಿತಾಭ್!

BCCI
ಕ್ರೀಡೆ32 mins ago

BCCI: ಟೀಮ್​ ಇಂಡಿಯಾದ ತವರಿನ ಕ್ರಿಕೆಟ್​ ಸರಣಿಯ ವೇಳಾಪಟ್ಟಿ ಪ್ರಕಟ

Amitabh Bachchan touched Aswini Dutt feet
ಬಾಲಿವುಡ್35 mins ago

Amitabh Bachchan: ಅಶ್ವಿನಿ ದತ್ ಕಾಲಿಗೆ ನಮಸ್ಕರಿಸಿದ ಅಮಿತಾಭ್‌; ʻಬಿಗ್‌ ಬಿʼ ಕೊಂಡಾಡಿದ ರಾಮ್ ಗೋಪಾಲ್ ವರ್ಮಾ!

Citroen C3 Aircross
ಪ್ರಮುಖ ಸುದ್ದಿ40 mins ago

Citroen C3 Aircross : ಧೋನಿ ಹೆಸರಿನಲ್ಲಿ ಬಿಡುಗಡೆಯಾಗಿದೆ ಈ ಕಾರು, ಕೇವಲ 100 ಕಾರಷ್ಟೇ ಉತ್ಪಾದನೆ

Mysuru News
ಮೈಸೂರು42 mins ago

Mysuru News : ಪತ್ನಿ ಶೀಲ ಶಂಕಿಸಿ ಬೆಂಕಿ ಹಚ್ಚಿ ಸುಟ್ಟು ಹಾಕಿದವನಿಗೆ ಜೀವಾವಧಿ ಶಿಕ್ಷೆ

Yuva spoorthi samvaada programme on June 22 in Shivamogga
ಕರ್ನಾಟಕ47 mins ago

Shivamogga News: ಶಿವಮೊಗ್ಗದಲ್ಲಿ ಜೂ.22ರಂದು ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ

IIT Bombay
Latest60 mins ago

IIT Bombay: ಹಿಂದೂ ದೇವರ ಅವಹೇಳನಕಾರಿ ನಾಟಕ; ಐಐಟಿ ವಿದ್ಯಾರ್ಥಿಗಳಿಗೆ ದಂಡ

Manish Pandey
ಕ್ರೀಡೆ1 hour ago

Manish Pandey: ಕ್ರಿಕೆಟಿಗ ಮನೀಷ್​ ಪಾಂಡೆ ದಾಂಪತ್ಯದಲ್ಲಿ ಬಿರುಕು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು3 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ4 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ4 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ5 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ6 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ6 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌