Shivamogga News: ಅಯೋಧ್ಯೆ ಶ್ರೀರಾಮಮಂದಿರ ಮಂತ್ರಾಕ್ಷತೆಗೆ ಭವ್ಯ ಸ್ವಾಗತ - Vistara News

ರಾಮ ಮಂದಿರ

Shivamogga News: ಅಯೋಧ್ಯೆ ಶ್ರೀರಾಮಮಂದಿರ ಮಂತ್ರಾಕ್ಷತೆಗೆ ಭವ್ಯ ಸ್ವಾಗತ

Shivamogga News: ರಿಪ್ಪನ್‌ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಅಯೋಧ್ಯೆ ಶ್ರೀರಾಮಮಂದಿರ ಮಂತ್ರಾಕ್ಷತೆಗೆ ಭವ್ಯ ಸ್ವಾಗತದೊಂದಿಗೆ ಮೆರವಣಿಗೆಯ ಮೂಲಕ ಶಿವಮೊಗ್ಗ ರಸ್ತೆಯಲ್ಲಿರುವ ಶ್ರೀ ವಿಘ್ನನಿವಾರಕ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು.

VISTARANEWS.COM


on

Ayodhya Shree Ram Mandir Mantrakshathe gets grand welcome at Ripponpet
ರಿಪ್ಪನ್‌ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಅಯೋಧ್ಯೆ ಶ್ರೀರಾಮಮಂದಿರ ಮಂತ್ರಾಕ್ಷತೆಗೆ ಸ್ವಾಗತಿಸಲಾಯಿತು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಿಪ್ಪನ್‌ಪೇಟೆ: ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ (Ayodhya Shree Ram Mandir) ಜ.22ರಂದು ಶ್ರೀರಾಮನ ಮೂರ್ತಿಯ ಪ್ರತಿಷ್ಠಾಪನಾ ಮಹೋತ್ಸವದ ಆಮಂತ್ರಣ ಮತ್ತು ಮಂತ್ರಾಕ್ಷತೆ ವಿತರಣೆಯ ಅಂಗವಾಗಿ ಪಟ್ಟಣದ ವಿನಾಯಕ ವೃತ್ತಕ್ಕೆ ಅಯೋಧ್ಯೆ ಶ್ರೀರಾಮಮಂದಿರ ಮಂತ್ರಾಕ್ಷತೆಯ ಕುಂಭವು ಆಗಮಿಸುತ್ತಿದ್ದಂತೆ ಭವ್ಯ ಸ್ವಾಗತದೊಂದಿಗೆ, ಮೆರವಣಿಗೆ ನಡೆಸಲಾಯಿತು.

ಇದನ್ನೂ ಓದಿ: Scholarship for Students: ಈ ಯೋಜನೆಯಡಿ ಸಿಗಲಿದೆ ವಿದ್ಯಾರ್ಥಿ ವೇತನ; ಇಂದೇ ಅರ್ಜಿ ಸಲ್ಲಿಸಿ

ದೇವಸ್ಥಾನ ಸಮಿತಿಯ ಎನ್.ಸತೀಶ್ ಅವರು ಮಂತ್ರಾಕ್ಷತೆಯುಳ್ಳ ಕುಂಭವನ್ನು ಹೊತ್ತು ಮೆರವಣಿಗೆಯಲ್ಲಿ ಅಪಾರ ಭಕ್ತ ಸಮೂಹದೊಂದಿಗೆ ಭಕ್ತಿ ಶ್ರದ್ದೆಯಿಂದ ಶ್ರೀರಾಮನ ಜಯಘೋಷಣೆಯೊಂದಿಗೆ, ಶಿವಮೊಗ್ಗ ರಸ್ತೆಯಲ್ಲಿರುವ ಶ್ರೀ ವಿಘ್ನನಿವಾರಕ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ತೆರಳಿದರು. ಬಳಿಕ ದೇವಸ್ಥಾನದಲ್ಲಿ ಮಂತ್ರಾಕ್ಷತೆಯುಳ್ಳ ಕುಂಭಕ್ಕೆ ಪೂಜೆ ಸಲ್ಲಿಸಲಾಯಿತು.

ಇದನ್ನೂ ಓದಿ: Money Guide: ಮನೆಯಲ್ಲಿ ಎಷ್ಟು ಕ್ಯಾಶ್​ ಇಟ್ಟುಕೊಳ್ಳಬಹುದು? ನಿಯಮ ಮೀರಿದರೆ ದಂಡ ಖಚಿತ

ಈ ಸಂದರ್ಭದಲ್ಲಿ ಭಕ್ತಾಧಿಗಳಾದ ಆರ್.ಟಿ.ಗೋಪಾಲ, ಪದ್ಮಸುರೇಶ್, ಎಂ.ಸುರೇಶ್‌ಸಿಂಗ್, ಎಂ.ಬಿ.ಮಂಜುನಾಥ, ನಾಗರತ್ನ ದೇವರಾಜ್, ಲೀಲಾ ಉಮಾಶಂಕರ್, ಉಮಾ ಸುರೇಶ್‌, ಶೈಲಾ ಆರ್.ಪ್ರಭು, ರೇಖಾ ರವಿ, ಗೀತಾ, ದೇವರಾಜ್, ಈಶ್ವರಶೆಟ್ಟಿ, ಶ್ರೀನಿವಾಸ್ ಅಚಾರ್, ಸುಂದರೇಶ್, ಸುಧೀಂದ್ರ ಪೂಜಾರಿ, ಲಕ್ಷ್ಮಿ ಶ್ರೀನಿವಾಸ್‌, ಮಂಜಪ್ಪ,ಕಾರ್ತಿಕ ಎನ್.ನಾಯ್ಕ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ರಾಮ ಮಂದಿರ

Ayodhya Ram Mandir: ರಾಮಮಂದಿರಕ್ಕೆ ಬರುವ ಚಿನ್ನ, ಬೆಳ್ಳಿ ಆಭರಣಗಳ ಕಾವಲಿಗೆ ಇಬ್ಬರು ಆರ್​​ಎಸ್​ಎಸ್​​ ಕಾರ್ಯಕರ್ತರ ನೇಮಕ

ಅಯೋಧ್ಯೆ ರಾಮ ಮಂದಿರದ (Ayodhya Ram Mandir) ರಾಮಲಲ್ಲಾನಿಗೆ ಪ್ರತಿದಿನ ಲಕ್ಷಾಂತರ ರೂಪಾಯಿ ನಗದು ಸೇರಿದಂತೆ ಚಿನ್ನ, ಬೆಳ್ಳಿ, ಮುತ್ತು ಸೇರಿದಂತೆ ಬೆಲೆಬಾಳುವ ಆಭರಣಗಳೂ ಬರುತ್ತಿದೆ. ಇದನ್ನು ನಿರ್ವಹಿಸಲು ಮತ್ತು ದಾಖಲಿಸಲು ದೇವಸ್ಥಾನದ ಟ್ರಸ್ಟ್‌ನಿಂದ ಇಬ್ಬರು ಆರ್‌ಎಸ್‌ಎಸ್ ಕಾರ್ಯಕರ್ತರನ್ನು ನೇಮಕ ಮಾಡಲಾಗಿದೆ.

VISTARANEWS.COM


on

By

Ayodhya Ram Mandir
Koo

ಉತ್ತರಪ್ರದೇಶ: ಅಯೋಧ್ಯೆಯ ರಾಮಮಂದಿರದ (Ayodhya Ram Mandir) ರಾಮಲಲ್ಲಾನ (ramlalla) ಪ್ರಾಣಪ್ರತಿಷ್ಠಾಪನೆಯಾದ ಬಳಿಕ ಅಲ್ಲಿಗೆ ಬರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದೆ. ಹೀಗೆ ಭೇಟಿ ನೀಡುವ ಭಕ್ತರು ಭಾರಿ ಪ್ರಮಾಣದ ಕಾಣಿಕೆ ಅರ್ಪಿಸುತ್ತಿದ್ದಾರೆ. ಚಿನ್ನ, ಬೆಳ್ಳಿ, ವಜ್ರ, ಮುತ್ತು ಸೇರಿದಂತೆ ಬೆಲೆಬಾಳುವ ಆಭರಣಗಳನ್ನೂ ಸಲ್ಲಿಸುತ್ತಾರೆ. ಪ್ರತಿದಿನ ಲಕ್ಷಾಂತರ ರೂಪಾಯಿ ಹುಂಡಿಗೆ ಬೀಳುವುದು ಸೇರಿದಂತೆ ಬೆಲೆಬಾಳುವ ಆಭರಣಗಳನ್ನು ಅರ್ಪಿಸುತ್ತಿದ್ದಾರೆ. ಹೀಗಾಗಿ ಇವುಗಳ ನಿರ್ವಹಣೆಗೆಂದು ದೇವಸ್ಥಾನದ ಟ್ರಸ್ಟ್‌ ಇಬ್ಬರು ಆರ್‌ಎಸ್‌ಎಸ್ ಕಾರ್ಯಕರ್ತರನ್ನು (RSS workers) ನೇಮಕ ಮಾಡಿದೆ.

ಈ ಆರೆಸ್ಸೆಸ್ ಕಾರ್ಯಕರ್ತರು ಆಭರಣಗಳನ್ನು ದಾನ ಮಾಡುವ ಪ್ರತಿಯೊಬ್ಬ ಭಕ್ತನ ಹೆಸರು, ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ದಾಖಲಿಸಲಾಗುತ್ತಿದೆ. ಮಾಹಿತಿ ದಾಖಲು ಮಾಡಲು ವಿವಿಧ ಪಾಳಿಗಳಲ್ಲಿ ಸಿಬ್ಬಂದಿ ಕೆಲಸ ಮಾಡುತ್ತಾರೆ. ಪ್ರತಿ ದಿನದ ಸಂಜೆ ಕಾಣಿಕೆ ರೂಪದಲ್ಲಿ ಬಂದಿರುವ ಆಭರಣಗಳನ್ನು ದಾಖಲಿಸಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಲಾಕರ್‌ನಲ್ಲಿ ಠೇವಣಿ ಇಡಲಾಗುತ್ತಿದೆ. ಕೆಲವು ಭಕ್ತರು ದೇಣಿಗೆ ಕೌಂಟರ್​ಗೆ ಹೋಗುವ ಬದಲು ಅಲ್ಲಿನ ಸಿಬ್ಬಂದಿ ಮೂಲಕ ಹಣ ನೀಡಲಾಗುತ್ತಿದೆ. ಈ ವಹಿವಾಟುಗಳನ್ನೂ ಎಚ್ಚರಿಕೆಯಿಂದ ದಾಖಲು ಮಾಡಲು ಟ್ರಸ್ಟ್​ ಮುಂದಾಗಿದೆ. ಈ ಎಲ್ಲ ವಹಿವಾಟುಗಳ ಬಗ್ಗೆ ನಿಗಾ ಇಡಲು ಆರ್​ಎಸ್​ಎಸ್​ ಕಾರ್ಯಕರ್ತರನ್ನು ನೇಮಕ ಮಾಡಲಾಗಿದೆ.

ಬಾಲ ರಾಮನಿಗೆ ಅಲಂಕಾರ ಮಾಡುವ ಆಭರಣಗಳನ್ನು ರಕ್ಷಿಸಲು ನಿವೃತ್ತ ಸೇನಾ ಸಿಬ್ಬಂದಿಯನ್ನು ನೇಮಿಸಲಾಗಿದೆ. ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ರಾಮಲಲ್ಲಾನನ್ನು ಅಲಂಕರಿಸುವಾಗ ಮತ್ತು ಅದನ್ನು ತೆಗೆಯುವ ವೇಳೆ ಪುರೋಹಿತರು ನಿವೃತ್ತ ಸೈನಿಕರ ಮೇಲ್ವಿಚಾರಣೆಯಲ್ಲಿ ಲಾಕರ್‌ನಿಂದ ಆಭರಣಗಳನ್ನು ಪಡೆದು ವಾಪಸ್​ ಕೊಡುತ್ತಾರೆ. ಎಲ್ಲ ಆಭರಣವನ್ನು ತೆಗೆಯುವಾಗ ಮತ್ತು ಹಾಕುವಾಗ ಲೆಕ್ಕ ಹಾಕಲಾಗುತ್ತದೆ.

Ayodhya Ram Mandir
Ayodhya Ram Mandir


ಎಂಟು ಗಂಟೆಗಳ ಮೂರು ಪಾಳಿಗಳಲ್ಲಿ ಕೆಲಸ ಮಾಡುವ ಇಬ್ಬರು ಬಂದೂಕು ಹೊಂದಿರುವ ಆರು ಅಂಗರಕ್ಷಕರನ್ನು ಬಾಲರಾಮನ ವಿಗ್ರಹಕ್ಕೆ ಭದ್ರತೆ ಒದಗಿಸಲಾಗಿದೆ. ಈ ಹಿಂದೆ ಧಾರ್ಮಿಕ ಗುರುಗಳಾಗಿ ಸೇವೆ ಸಲ್ಲಿಸಿದ ಮೂವರು ಸೇರಿದಂತೆ 20 ನಿವೃತ್ತ ಸೇನಾ ಸಿಬ್ಬಂದಿಯನ್ನು ರಾಮ ಮಂದಿರದಲ್ಲಿ ಕರ್ತವ್ಯಕ್ಕಾಗಿ ನಿಯೋಜಿಸಲಾಗಿದೆ. ಧಾರ್ಮಿಕ ಗುರುಗಳು ಗರ್ಭಗುಡಿಯ ಹೊರಗೆ ನಿಂತು ಪೂಜೆಗೆ ಸಹಾಯ ಮಾಡುತ್ತಾರೆ. ಉಳಿದ ಸಿಬ್ಬಂದಿ ಭಕ್ತರ ಹರಿವನ್ನು ನಿಯೋಜಿಸುತ್ತಿದ್ದಾರೆ.

ಆರತಿ ಮತ್ತು ಇತರ ಪೂಜೆಗಳ ಸಮಯದಲ್ಲಿ ಗಂಟೆಗಳನ್ನು ಬಾರಿಸಲು ಮತ್ತು ಉಳಿದ ವ್ಯವಸ್ಥೆಗಳನ್ನು ನಿರ್ವಹಿಸಲು ಅವರು ಸಹಾಯ ಮಾಡುತ್ತಾರೆ. 17 ನಿವೃತ್ತ ಸೈನಿಕರು ಸಾಮಾನ್ಯ ಉಡುಪುಗಳನ್ನು ಧರಿಸಿ ದೇಗುಲದ ಆವರಣದ ಮೇಲ್ವಿಚಾರಣೆ ಮಾಡುತ್ತಾರೆ.

ಈ ನಡುವೆ ಶ್ರೀ ರಾಮ ಜನ್ಮಭೂಮಿ ಆವರಣದ ಶೇಷಾವತಾರ ದೇವಾಲಯದ ನಿರ್ಮಾಣ ಪ್ರಾರಂಭವಾಗಿದೆ. ರಾಮಮಂದಿರ ಮತ್ತು ಕುಬೇರ ದಿಬ್ಬದ ನಡುವೆ ಈ ಹೊಸ ದೇವಾಲಯ ನಿರ್ಮಿಸಲಾಗುತ್ತಿದೆ.

ಇದನ್ನೂ ಓದಿ: Ayodhya Ram Mandir : ರಾಮಮಂದಿರದ ಚಾವಣಿ ಸೋರುತ್ತಿಲ್ಲ; ನಿರ್ಮಾಣ ಸಮಿತಿ ಸ್ಪಷ್ಟನೆ

ದಕ್ಷಿಣ ಭಾರತದ ಸಂತರ ಸಲಹೆ ಪಡೆದು ಶೇಷಾವತಾರ್ ದೇವಾಲಯದ ವಿನ್ಯಾಸವನ್ನು ಅಂತಿಮಗೊಳಿಸಲಾಗಿದೆ. ಅದರ ಎತ್ತರವು ರಾಮ ಮಂದಿರದಕ್ಕೆ ಸಮಾನವಾಗಿದೆ. ಈ ದೇವಾಲಯವು ಶ್ರೀ ಸೀತಾರಾಮನ ವಿಗ್ರಹ ಹೊಂದಿರುತ್ತದೆ. ಇದನ್ನು ಶೇಷನಾಗ ರಕ್ಷಿಸುತ್ತಾನೆ. ಇನ್ನು ಸಪ್ತ ಮಂಟಪದ ಅಡಿಪಾಯದ ಕೆಲಸವು ಬಹುತೇಕ ಪೂರ್ಣಗೊಂಡಿದೆ. ಅಡಿಪಾಯ ಮತ್ತು ಗೋಡೆಗೆ ಕಲ್ಲುಗಳ ಕಟ್ಟುವ ಕಾರ್ಯ ನಡೆಸಲಾಗುತ್ತಿದೆ.

Continue Reading

ಪ್ರಮುಖ ಸುದ್ದಿ

Ayodhya Ram Mandir : ಅಯೋಧ್ಯೆಯಲ್ಲಿ ನಿರ್ಮಾಣವಾಗಲಿದೆ ‘ಟೆಂಪಲ್ ಮ್ಯೂಸಿಯಮ್​’; ಯೋಗಿ ಸಂಪುಟದ ಸಮ್ಮತಿ

Ayodhya Ram Mandir : ಟಾಟಾ ಸನ್ಸ್ ಕೇಂದ್ರ ಸರ್ಕಾರದ ಮೂಲಕ ಈ ಯೋಜನೆಗೆ ಪ್ರಸ್ತಾಪ ಇಟ್ಟಿತ್ತು. ತನ್ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ನಿಧಿಯಡಿ 650 ಕೋಟಿ ರೂ.ಗಳ ವೆಚ್ಚದಲ್ಲಿ ವಸ್ತುಸಂಗ್ರಹಾಲಯವನ್ನು ನಿರ್ಮಿಸಲು ಮುಂದಾಗಿತ್ತು” ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಸಿಂಗ್ ಹೇಳಿದ್ದಾರೆ.

VISTARANEWS.COM


on

Ayodhya Ram Mandir
Koo

ಲಕ್ನೋ: ವಿಶ್ವ ಪ್ರಸಿದ್ಧ ರಾಮ ಮಂದಿರುವ ಇರುವ ಅಯೋಧ್ಯೆಯಲ್ಲಿ 650 ಕೋಟಿ ರೂ.ಗಳ ವೆಚ್ಚದಲ್ಲಿ ‘ದೇವಾಲಯಗಳ ವಸ್ತುಸಂಗ್ರಹಾಲಯ’ ನಿರ್ಮಿಸುವ ಟಾಟಾ ಸನ್ಸ್​ ಸಂಸ್ಥೆಯ ಪ್ರಸ್ತಾಪಕ್ಕೆ ಉತ್ತರ ಪ್ರದೇಶ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. ಈ ನಿರ್ಧಾರದ ಬಗ್ಗೆ ವಿವರಗಳನ್ನು ಹಂಚಿಕೊಂಡ ಪ್ರವಾಸೋದ್ಯಮ ಸಚಿವ ಜೈವೀರ್ ಸಿಂಗ್, ಪ್ರವಾಸೋದ್ಯಮ ಇಲಾಖೆಯು ಅಂತರರಾಷ್ಟ್ರೀಯ ಮಟ್ಟದ ವಸ್ತುಸಂಗ್ರಹಾಲಯ ನಿರ್ಮಾಣಕ್ಕಾಗಿ ಬಳಸುವ ಭೂಮಿಯನ್ನು 90 ವರ್ಷಗಳ ಗುತ್ತಿಗೆಗೆ 1 ರೂಪಾಯಿ ಮೊತ್ತಕ್ಕೆ ನೀಡಲಿದೆ ಎಂದು ಹೇಳಿದರು.

ಟಾಟಾ ಸನ್ಸ್ ಕೇಂದ್ರ ಸರ್ಕಾರದ ಮೂಲಕ ಈ ಯೋಜನೆಗೆ ಪ್ರಸ್ತಾಪ ಇಟ್ಟಿತ್ತು. ತನ್ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ನಿಧಿಯಡಿ 650 ಕೋಟಿ ರೂ.ಗಳ ವೆಚ್ಚದಲ್ಲಿ ವಸ್ತುಸಂಗ್ರಹಾಲಯವನ್ನು ನಿರ್ಮಿಸಲು ಮುಂದಾಗಿತ್ತು” ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಸಿಂಗ್ ಹೇಳಿದ್ದಾರೆ. ದೇವಾಲಯದ ಪಟ್ಟಣದಲ್ಲಿ ಇತರ ಅಭಿವೃದ್ಧಿ ಕಾರ್ಯಗಳಿಗಾಗಿ ಹೆಚ್ಚುವರಿ 100 ಕೋಟಿ ರೂ.ಗಳ ಕಂಪನಿಯ ಪ್ರಸ್ತಾಪವನ್ನು ಕ್ಯಾಬಿನೆಟ್ ಅನುಮೋದಿಸಿದೆ ಎಂದು ಅವರು ಹೇಳಿದರು.

ಟಾಟಾ ಸನ್ಸ್ ಪ್ರಮುಖ ಹೂಡಿಕೆ ಹೋಲ್ಡಿಂಗ್ ಕಂಪನಿ

ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಹೆಲಿಪ್ಯಾಡ್​ಗಳನ್ನು ನಿರ್ಮಿಸುವ ಮೂಲಕ ಲಕ್ನೋ, ಪ್ರಯಾಗ್ರಾಜ್ ಮತ್ತು ಕಪಿಲವಾಸ್ತುಗಳಲ್ಲಿ ಹೆಲಿಕಾಪ್ಟರ್ ಸೇವೆಗಳನ್ನು ಪ್ರಾರಂಭಿಸುವುದು ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ಪಡೆದ ಇತರ ಪ್ರಸ್ತಾಪಗಳಾಗಿವೆ.

ಇದನ್ನೂ ಓದಿ:Ayodhya Ram Mandir : ರಾಮಮಂದಿರದ ಚಾವಣಿ ಸೋರುತ್ತಿಲ್ಲ; ನಿರ್ಮಾಣ ಸಮಿತಿ ಸ್ಪಷ್ಟನೆ

ಸುಪ್ತ ಪಾರಂಪರಿಕ ಕಟ್ಟಡಗಳನ್ನು ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸುವ ಪ್ರಸ್ತಾಪಕ್ಕೂ ಸಂಪುಟ ಅನುಮೋದನೆ ಪಡೆದಿದೆ ಎಂದು ಸಚಿವರು ಹೇಳಿದರು.

ಲಕ್ನೋದ ಕೋಥಿ ರೋಶನ್ ದುಲ್ಹಾ, ಮಥುರಾದ ಬರ್ಸಾನಾ ಜಲ್ ಮಹಲ್ ಮತ್ತು ಕಾನ್ಪುರದ ಶುಕ್ಲಾ ತಲಾಬ್ (ಕೊಳ) ಈ ಮೂರು ಪಾರಂಪರಿಕ ಕಟ್ಟಡಗಳನ್ನು ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಲಾಗಿದೆ ಎಂದು ಸಿಂಗ್​ ಹೇಳಿದ್ದಾರೆ. ಈ ಉದ್ದೇಶಕ್ಕಾಗಿ ಮುಖ್ಯಮಂತ್ರಿ ಪ್ರವಾಸೋದ್ಯಮ ಫೆಲೋಶಿಪ್ ಕಾರ್ಯಕ್ರಮದಡಿ ಸಂಶೋಧಕರನ್ನು ಆಯ್ಕೆ ಮಾಡಲಾಗುವುದು ಎಂದು ಅವರು ಹೇಳಿದರು.

Continue Reading

ಪ್ರಮುಖ ಸುದ್ದಿ

Ayodhya Ram Mandir : ರಾಮಮಂದಿರದ ಚಾವಣಿ ಸೋರುತ್ತಿಲ್ಲ; ನಿರ್ಮಾಣ ಸಮಿತಿ ಸ್ಪಷ್ಟನೆ

Ayodhya Ram Mandir : ನಾನು ಸ್ವತಃ ದೇವಾಲಯದ ಕಟ್ಟಡವನ್ನು ಪರಿಶೀಲಿಸಿದ್ದೇನೆ. ಎರಡನೇ ಮಹಡಿ ನಿರ್ಮಾಣ ಹಂತದಲ್ಲಿದೆ. ಅಂತಿಮವಾಗಿ ಎರಡನೇ ಮಹಡಿಯ ಚಾವಣಿ ನಿರ್ಮಾಣಗೊಂಡ ಬಳಿಕ ಮಳೆನೀರು ದೇವಾಲಯಕ್ಕೆ ಪ್ರವೇಶಿಸುವುದನ್ನು ನಿಲ್ಲುತ್ತದೆ ಎಂದು ಮಿಶ್ರಾ ಸುದ್ದಿಗಾರರಿಗೆ ತಿಳಿಸಿದರು.

VISTARANEWS.COM


on

Ayodhya Ram Mandir:
Koo

ನವದೆಹಲಿ: ದೇವಾಲಯದ ಗರ್ಭಗುಡಿಗೆ ಮಳೆನೀರು ಸೋರಿಕೆಯಾಗುತ್ತಿದೆ ಎಂಬ ದೇವಾಲಯದ ಮುಖ್ಯ ಅರ್ಚಕರ ಆರೋಪಗಳನ್ನು ರಾಮ ಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಮಂಗಳವಾರ ನಿರಾಕರಿಸಿದ್ದಾರೆ. ನೀರಿನ ಸೋರಿಕೆಯಾಗುತ್ತಿಲ್ಲ. ಆದರೆ ವಿದ್ಯುತ್ ತಂತಿಗಳನ್ನು ಅಳವಡಿಸಲು ಅಳವಡಿಸಲಾದ ಪೈಪ್ ಗಳಿಂದ ಮಳೆನೀರು ಒಳಗೆ ಬಂದಿದೆ ಎಂದು ಮಿಶ್ರಾ ಹೇಳಿದ್ದಾರೆ.

ನಾನು ಸ್ವತಃ ದೇವಾಲಯದ ಕಟ್ಟಡವನ್ನು ಪರಿಶೀಲಿಸಿದ್ದೇನೆ. ಎರಡನೇ ಮಹಡಿ ನಿರ್ಮಾಣ ಹಂತದಲ್ಲಿದೆ. ಅಂತಿಮವಾಗಿ ಎರಡನೇ ಮಹಡಿಯ ಚಾವಣಿ ನಿರ್ಮಾಣಗೊಂಡ ಬಳಿಕ ಮಳೆನೀರು ದೇವಾಲಯಕ್ಕೆ ಪ್ರವೇಶಿಸುವುದನ್ನು ನಿಲ್ಲುತ್ತದೆ ಎಂದು ಮಿಶ್ರಾ ಸುದ್ದಿಗಾರರಿಗೆ ತಿಳಿಸಿದರು.

ದೇವಾಲಯದ ನಿರ್ಮಾಣದಲ್ಲಿ ನಿರ್ಲಕ್ಷ್ಯವಿದೆ ಎಂದು ರಾಮ ಜನ್ಮಭೂಮಿ ದೇವಾಲಯದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಕಳೆದ ಶನಿವಾರ ಆರೋಪಿಸಿದ್ದರು. ಮಧ್ಯರಾತ್ರಿಯ ಮಳೆಯ ನಂತರ ದೇವಾಲಯದ ಆವರಣದಲ್ಲಿ ತುಂಬಿದ್ದ ಮಳೆನೀರನ್ನು ಹೊರಹಾಕಲು ಯಾವುದೇ ವ್ಯವಸ್ಥೆ ಇಲ್ಲ ಎಂದು ಸೋಮವಾರ ಆರೋಪಿಸಿದ್ದರು. ಸಮಸ್ಯೆ ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ದೇವಾಲಯದ ಅಧಿಕಾರಿಗಳನ್ನು ಒತ್ತಾಯಿಸಿದರು.

ಈ ಘಟನೆಯ ಬಗ್ಗೆ ಗಮನ ಹರಿಸುವಂತೆ ಮತ್ತು ಸೋರಿಕೆಯನ್ನು ತಡೆಯಲು ಮತ್ತು ದೇವಾಲಯದಿಂದ ನೀರಿನ ಹೊರಹರಿವನ್ನು ಖಚಿತಪಡಿಸಿಕೊಳ್ಳಲು ಅಗತ್ಯ ವ್ಯವಸ್ಥೆಗಳನ್ನು ಮಾಡುವಂತೆ ದಾಸ್ ದೇವಾಲಯದ ಅಧಿಕಾರಿಗಳಿಗೆ ಸೂಚಿಸಿದ್ದರು.

ಮಧ್ಯರಾತ್ರಿ ಸುರಿದ ಮಳೆ

ಶನಿವಾರ ಮಧ್ಯರಾತ್ರಿ ಸಂಭವಿಸಿದ ಮೊದಲ ಭಾರಿ ಮಳೆಯಲ್ಲಿ ದೇವಾಲಯದ ಗರ್ಭಗುಡಿಯ ಚಾವಣಿಯಿಂದ ಭಾರಿ ಸೋರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ. ರಾಮ್ ಲಲ್ಲಾ ವಿಗ್ರಹದ ಮುಂದೆ ಅರ್ಚಕರು ಕುಳಿತುಕೊಳ್ಳುವ ಸ್ಥಳ ಮತ್ತು ವಿಐಪಿ ದರ್ಶನಕ್ಕಾಗಿ ಜನರು ಬರುವ ಸ್ಥಳದ ಚಾವಣಿಯಿಂದ ಮಳೆನೀರು ನೇರವಾಗಿ ಸೋರಿಕೆಯಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Share Market : ಷೇರು ಮಾರುಕಟ್ಟೆಯಲ್ಲಿ ನೂತನ ದಾಖಲೆ; ಮೊದಲ ಬಾರಿಗೆ 78,000 ಮಟ್ಟವನ್ನು ದಾಟಿದ ಸೆನ್ಸೆಕ್ಸ್

ದೇಶಾದ್ಯಂತದ ಎಂಜಿನಿಯರ್​ಗಳು ರಾಮ ಮಂದಿರವನ್ನು ನಿರ್ಮಿಸುತ್ತಿರುವುದು ಅಚ್ಚರಿಯ ಸಂಗತಿಯಾಗಿದೆ. ಈ ದೇವಾಲಯವನ್ನು ಜನವರಿ 22 ರಂದು ಉದ್ಘಾಟಿಸಲಾಗಿದೆ. ಆದರೆ, ಮಳೆ ಬಂದರೆ ಚಾವಣಿ ಸೋರುತ್ತದೆ ಎಂದು ಯಾರಿಗೂ ತಿಳಿದಿರಲಿಲ್ಲ ಎಂದು ಅವರು ಹೇಳಿದ್ದರು. ದೊಡ್ಡ ಎಂಜಿನಿಯರ್​ಗಳ ಸಮ್ಮುಖದಲ್ಲಿಯೇ ಇಂತಹ ಘಟನೆ ನಡೆಯುತ್ತಿದೆ, ಇದು ತುಂಬಾ ತಪ್ಪು ಎಂದು ಅವರು ಹೇಳಿದರು.

ಚಾವಣಿಯ ಮೇಲೆ ತಾತ್ಕಾಲಿಕ ಸೂರು ನಿರ್ಮಾಣ ಮಾಡುವ ಮೂಲಕ ಭಕ್ತರಿಗೆ ಮಳೆ ನೀರು ಮತ್ತು ಸೂರ್ಯನ ಬಿಸಿಲಿನಿಂದ ರಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮಿಶ್ರಾ ಹೇಳಿದ್ದಾರೆ. ದೇವಾಲಯದ ನಿರ್ಮಾಣದ ಪ್ರಗತಿಯ ಬಗ್ಗೆ ಮಾತನಾಡಿದ ಮಿಶ್ರಾ, ಮೊದಲ ಮಹಡಿಯಲ್ಲಿ ಕೆಲಸ ನಡೆಯುತ್ತಿದೆ. ಈ ವರ್ಷದ ಜುಲೈ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದಾರೆ. ಡಿಸೆಂಬರ್ ವೇಳೆಗೆ ದೇವಾಲಯದ ನಿರ್ಮಾಣ ಪೂರ್ಣಗೊಳ್ಳಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

Continue Reading

ದೇಶ

Ram Mandir: ಸೋರುತಿಹುದು ಅಯೋಧ್ಯೆ ರಾಮಮಂದಿರ ಮಾಳಿಗೆ; ದೇಗುಲದ ಮುಖ್ಯ ಅರ್ಚಕರ ಆತಂಕ

Ram Mandir: ರಾಮಮಂದಿರದ ಗರ್ಭಗುಡಿಯ ಒಳಚಾವಣಿ ಸೋರಿಕೆಯಾಗುತ್ತಿರುವುದು ನಮಗೆಲ್ಲ ಆತಂಕ ತಂದಿದೆ. ಹಾಗೊಂದು ವೇಳೆ ನಿರಂತರವಾಗಿ ಮಳೆ ಬಂದರೆ, ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಲು, ಪೂಜೆ ಮಾಡಲು ಕೂಡ ಸಮಸ್ಯೆಯಾಗುತ್ತದೆ ಎಂಬುದಾಗಿ ರಾಮಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್‌ ಅವರು ಮಾಹಿತಿ ನೀಡಿದ್ದಾರೆ. ಸೋರುತ್ತಿರುವ ಕುರಿತು ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷರೂ ತಿಳಿಸಿದ್ದಾರೆ.

VISTARANEWS.COM


on

Ram Mandir
Koo

ಅಯೋಧ್ಯೆ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾದ ಭವ್ಯ ರಾಮಮಂದಿರಕ್ಕೆ (Ram Mandir) ಚಾಲನೆ ನೀಡಿ ಆರು ತಿಂಗಳಾಗಿದೆ. 2024ರ ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೇ ರಾಮಮಂದಿರವನ್ನು ಲೋಕಾರ್ಪಣೆ ಮಾಡಿದ್ದಾರೆ. ದೇಶದ ಮೂಲೆ ಮೂಲೆಯಿಂದ ಲಕ್ಷಾಂತರ ಭಕ್ತರು ಮಂದಿರಕ್ಕೆ ಭೇಟಿ ನೀಡಿದ್ದಾರೆ. ಈಗಲೂ ಭೇಟಿ ನೀಡುತ್ತಿದ್ದಾರೆ. ಇದರ ಬೆನ್ನಲ್ಲೇ, ಮಳೆ ಬಂದಾಗ ರಾಮಮಂದಿರದ ಚಾವಣಿ ಸೋರುತ್ತಿದೆ ಎಂಬುದಾಗಿ ದೇವಾಲಯದ ಮುಖ್ಯ ಅರ್ಚಕರೇ ಮಾಹಿತಿ ನೀಡಿದ್ದಾರೆ.

ರಾಮಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್‌ ಅವರು ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡುವಾಗ ಈ ವಿಷಯ ತಿಳಿಸಿದ್ದಾರೆ. “ಮೊದಲ ಮಳೆಗೇ ಗರ್ಭಗುಡಿಯ ಚಾವಣಿ ಮೂಲಕ ನೀರು ಒಳಗೆ ಬಂದಿದೆ. ನೂರಾರು ಎಂಜಿನಿಯರ್‌ಗಳು ಇಲ್ಲಿದ್ದಾರೆ. ಸುಸಜ್ಜಿತವಾಗಿಯೇ ರಾಮಮಂದಿರ ನಿರ್ಮಿಸಲಾಗಿದೆ. ಹೀಗಿದ್ದರೂ ಗರ್ಭಗುಡಿಯೇ ಸೋರುತ್ತಿರುವುದು ಆತಂಕ ಸೃಷ್ಟಿಸಿದೆ. ಹೀಗಾಗುತ್ತದೆ ಎಂದು ಯಾರೂ ಅಂದುಕೊಂಡಿರಲಿಲ್ಲ. ಕೂಡಲೇ ರಾಮಮಂದಿರ ಕಡೆ ಗಮನ ಹರಿಸಿ, ಸಮಸ್ಯೆಯನ್ನು ಸರಿಪಡಿಸಬೇಕಿದೆ” ಎಂದು ಅವರು ಹೇಳಿದ್ದಾರೆ.

“ರಾಮಮಂದಿರದ ಗರ್ಭಗುಡಿಯ ಒಳಚಾವಣಿ ಸೋರಿಕೆಯಾಗುತ್ತಿರುವುದು ನಮಗೆಲ್ಲ ಆತಂಕ ತಂದಿದೆ. ಹಾಗೊಂದು ವೇಳೆ ನಿರಂತರವಾಗಿ ಮಳೆ ಬಂದರೆ, ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಲು, ಪೂಜೆ ಮಾಡಲು ಕೂಡ ಸಮಸ್ಯೆಯಾಗುತ್ತದೆ. ರಾಮಮಂದಿರಕ್ಕೆ ಬರುವ ಭಕ್ತರಿಗೂ ಇದರಿಂದ ಮುಜುಗರ ಆಗುತ್ತದೆ. ಕೂಡಲೇ ಚಾವಣಿಯನ್ನು ದುರಸ್ತಿ ಮಾಡಬೇಕು. ಇದರ ಕುರಿತು ಇನ್ನಷ್ಟು ಗಮನ ಹರಿಸಬೇಕು” ಎಂಬುದಾಗಿ ಸತ್ಯೇಂದ್ರ ದಾಸ್‌ ಅವರು ಒತ್ತಾಯಿಸಿದ್ದಾರೆ.

ಶ್ರೀ ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು ಕೂಡ ನೀರು ಒಳಗೆ ಬರುತ್ತಿರುವುದನ್ನು ದೃಢಪಡಿಸಿದ್ದಾರೆ. “ನಾನು ಅಯೋಧ್ಯೆಯಲ್ಲಿ ಇದ್ದೇನೆ. ಮೊದಲ ಮಹಡಿಯಿಂದ ಮಳೆ ನೀರು ಸೋರಿಕೆಯಾಗುತ್ತಿರುವುದನ್ನುನೋಡಿದ್ದೇನೆ. ಎರಡನೇ ಮಹಡಿಯ ಗುರು ಮಂಟಪ ತೆಗೆದ ಕಾರಣ ನೀರು ಒಳಗೆ ಬರುತ್ತಿದೆ ಎಂದು ಎನಿಸುತ್ತಿದೆ. ಎರಡನೇ ಮಹಡಿಯನ್ನು ಸಂಪೂರ್ಣವಾಗಿ ನಿರ್ಮಿಸಿದ ಬಳಿಕ ಸಮಸ್ಯೆ ಬಗೆಹರಿಯುತ್ತದೆ ಎಂದು ಅನಿಸುತ್ತಿದೆ. ಇದರ ಕುರಿತು ಹೆಚ್ಚಿನ ಗಮನ ಹರಿಸಲಾಗುವುದು” ಎಂದು ಮಾಹಿತಿ ನೀಡಿದ್ದಾರೆ.

ಪರಿಣತ ಎಂಜಿನಿಯರ್‌ಗಳು, ತಜ್ಞರು ಸೇರಿ ರಾಮಮಂದಿರವನ್ನು ನಿರ್ಮಿಸಿದ್ದಾರೆ. ತೀವ್ರ ಪ್ರಮಾಣದಲ್ಲಿ ಭೂಕಂಪ ಸಂಭವಿಸಿದರೂ ಮಂದಿರಕ್ಕೆ ಧಕ್ಕೆಯಾಗದ ಹಾಗೆ ನಿರ್ಮಿಸಲಾಗಿದೆ. ಹೀಗಿದ್ದರೂ ರಾಮಮಂದಿರವು ಮೊದಲ ಮಳೆಗೇ ಸೋರಿಕೆಯಾಗಿರುವುದು ಅರ್ಚಕರ ಆತಂಕಕ್ಕೆ ಕಾರಣವಾಗಿದೆ. ಅವ್ಯವಸ್ಥೆ ಕುರಿತು ರಾಮನ ಭಕ್ತರು ಕೂಡ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Ram Mandir: ರಾಮಮಂದಿರ ಸ್ಫೋಟಿಸುವ ಉಗ್ರರ ಬೆದರಿಕೆ ಆಡಿಯೊ ವೈರಲ್; ಅಯೋಧ್ಯೆಯಲ್ಲಿ ಹೈ ಅಲರ್ಟ್‌

Continue Reading
Advertisement
Actor darshan
ಪ್ರಮುಖ ಸುದ್ದಿ2 ಗಂಟೆಗಳು ago

Actor Darshan : ನಟ ದರ್ಶನ್ ಬಿಡುಗಡೆಗೆ ಮುಹೂರ್ತ ಫಿಕ್ಸ್; ಜನ್ಮ ಜಾತಕದ ಪ್ರಕಾರ ಶುಭ ಸಮಯ ಶುರು

KEA UGCET 2024
ಬೆಂಗಳೂರು3 ಗಂಟೆಗಳು ago

UGCET 2024 : ದ್ವಿತೀಯ ಪಿಯುಸಿ 3ನೇ ಪರೀಕ್ಷೆಯಲ್ಲಿ ಅರ್ಹರಾದವರಿಗೆ ಆಪ್ಷನ್‌ ದಾಖಲಿಸಲು ಲಿಂಕ್‌ ಓಪನ್‌

ಚಿಕ್ಕೋಡಿ3 ಗಂಟೆಗಳು ago

Physical Abuse: ಬಾಲಕಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಅತ್ಯಾಚಾರವೆಸಗಿ ಕೊಂದಿದ್ದ ನೀಚನಿಗೆ ಗಲ್ಲುಶಿಕ್ಷೆ ವಿಧಿಸಿದ ಕೋರ್ಟ್‌

BBMP plans to make arrangements for food in areas where stray dogs do not get food
ಬೆಂಗಳೂರು4 ಗಂಟೆಗಳು ago

Street Dogs : ಬೀದಿನಾಯಿಗಳ ಹಸಿವು ನೀಗಿಸಲು ಮುಂದಾದ ಬಿಬಿಎಂಪಿ; ಸಾರ್ವಜನಿಕರು ಕೈ ಜೋಡಿಸುವಂತೆ ಮನವಿ

Cm Siddaramaiah
ಬೆಂಗಳೂರು4 ಗಂಟೆಗಳು ago

CM Siddaramaiah : ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ದ್ವಿಸದಸ್ಯ ಪೀಠಕ್ಕೆ ಅಪೀಲು ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ತೀರ್ಮಾನ

Mahalaya Amavasya on Gandhi Jayanti Poultry Association demands withdrawal of ban on sale of meat
ಬೆಂಗಳೂರು5 ಗಂಟೆಗಳು ago

Mahalaya Amavasya 2024: ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ; ಮಾಂಸ ಮಾರಾಟ ನಿಷೇಧ ಹಿಂಪಡೆಯುವಂತೆ ಒತ್ತಾಯ

Road Accident
ಬೆಂಗಳೂರು7 ಗಂಟೆಗಳು ago

Road Accident : ಆಟೋಗೆ ಲೋಡ್‌ ತುಂಬಿದ್ದ ಲಾರಿ ಡಿಕ್ಕಿ; ಚಾಲಕನ ನಿದ್ರೆ ಮಂಪರಿಗೆ ಜೀವ ಬಿಟ್ಟಳು ಯುವತಿ

Techie robbery plans to delete her photo video from lovers mobile phone
ಬೆಂಗಳೂರು8 ಗಂಟೆಗಳು ago

Robbery case : ಲವ್ವರ್ ಮೊಬೈಲ್‌ನಲ್ಲಿದ್ದ ತನ್ನ ಫೋಟೊ, ವಿಡಿಯೊ ಡಿಲೀಟ್‌ ಮಾಡಿಸಲು ಟೆಕ್ಕಿಯ ಖರ್ತನಾಕ್‌ ರಾಬರಿ ಪ್ಲ್ಯಾನ್‌

Hopcoms store loses charm in Bengaluru
ಬೆಂಗಳೂರು8 ಗಂಟೆಗಳು ago

HOPCOMS Outlets : ಬೆಂಗಳೂರಿನಲ್ಲಿ ಚಾರ್ಮ್‌ ಕಳೆದುಕೊಂಡ ಹಾಪ್‌ಕಾಮ್ಸ್‌ ಮಳಿಗೆ

fire accident
ಬೆಂಗಳೂರು ಗ್ರಾಮಾಂತರ9 ಗಂಟೆಗಳು ago

Fire Accident : ಹೊಸೂರು ಸಮೀಪದ ಟಾಟಾ ಕಂಪೆನಿಯಲ್ಲಿ ಭಾರಿ ಅಗ್ನಿ ಅವಘಡ; ಪ್ರಾಣ ಉಳಿಸಿಕೊಳ್ಳಲು ಓಡಿ ಬಂದ ಕಾರ್ಮಿಕರು ‌

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌