Shivamogga News: ಆಯುರ್ವೇದ ಚಿಕಿತ್ಸಾ ಪದ್ದತಿಯಿಂದ ಸದೃಢ ಅರೋಗ್ಯ ಸಾಧ್ಯ: ಹೊಂಬುಜ ಶ್ರೀಗಳು Vistara News

ಶಿವಮೊಗ್ಗ

Shivamogga News: ಆಯುರ್ವೇದ ಚಿಕಿತ್ಸಾ ಪದ್ದತಿಯಿಂದ ಸದೃಢ ಅರೋಗ್ಯ ಸಾಧ್ಯ: ಹೊಂಬುಜ ಶ್ರೀಗಳು

Shivamogga News: ರಿಪ್ಪನ್‌ಪೇಟೆ ಸಮೀಪದ ಹೊಂಬುಜ ಜೈನಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ದೃಢಬಲ ಆಯುರ್ವೇದ ವಸತಿ ಶಿಬಿರ ಕಾರ್ಯಕ್ರಮದಲ್ಲಿ ಹೊಂಬುಜ ಜೈನ ಮಠದ ಡಾ.ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಜಿ ಆಶೀರ್ವಚನ ನೀಡಿದರು.

VISTARANEWS.COM


on

Hombuja Jain Math Dr Devendrakirthi Bhattarak Mahaswamiji aashirvachan
ರಿಪ್ಪನ್‌ಪೇಟೆ ಸಮೀಪದ ಹೊಂಬುಜ ಜೈನಮಠದಲ್ಲಿ ನಡೆದ ದೃಢಬಲ ಆಯುರ್ವೇದ ವಸತಿ ಶಿಬಿರದಲ್ಲಿ ಹೊಂಬುಜ ಜೈನ ಮಠದ ಡಾ.ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಿಪ್ಪನ್‌ಪೇಟೆ: ದೇಶಿಯ ಆಯುರ್ವೇದ ಚಿಕಿತ್ಸಾ ಪದ್ದತಿಯಿಂದ (Ayurvedic Treatment) ಸದೃಢ ಅರೋಗ್ಯ (Health) ಸಾಧ್ಯ, ಹಿಂದಿನ ಕಾಲದಲ್ಲಿಯೂ ನಮ್ಮ ಪೂರ್ವಿಕರು ಆಹಾರದ ಕ್ರಮದ ಮೂಲಕ ರೋಗವನ್ನು (Disease) ಹತೋಟಿಗೆ ತಂದು ಅದನ್ನು ಗುಣಪಡಿಸುವ ವ್ಯವಸ್ಥೆಯಿತ್ತು, ನಂತರ ಆಯುರ್ವೇದ ಚಿಕಿತ್ಸಾ ಪದ್ದತಿಯನ್ನಾಧರಿಸಿ ಮನೆಮದ್ದು ಸಿದ್ದಪಡಿಸಿ ರೋಗಿಗಳಿಗೆ ನೀಡುವುದರೊಂದಿಗೆ ಮಾರಕ ರೋಗವನ್ನು ಗುಣಪಡಿಸುವ ಪದ್ದತಿ ಇತ್ತು ಎಂದು ಹೊಂಬುಜ ಜೈನ ಮಠದ ಡಾ.ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಹೇಳಿದರು.

ರಿಪ್ಪನ್‌ಪೇಟೆ ಸಮೀಪದ ಹೊಂಬುಜ ಜೈನಮಠದಲ್ಲಿ ಆಯೋಜಿಸಲಾದ ಆಯುರ್ವೇದ ಶಿಬಿರ ದೃಢಬಲ ಸಮಾರಂಭದಲ್ಲಿ ಗಿಡಮೂಲಿಕೆಗಳ ವಸ್ತು ಪ್ರದರ್ಶನ ಉದ್ಘಾಟಿಸಿ, ದಿವ್ಯಸಾನಿಧ್ಯವಹಿಸಿ ಆಶೀರ್ವಚನ ನೀಡಿ “ಸಾತ್ವಿಕ ಆಹಾರ ಸೇವಿಸಿ, ಉತ್ತಮ ವಿಹಾರ ಕೈಗೊಳ್ಳುವುದನ್ನು ವೈದ್ಯರಾಗುವ ಆಯುರ್ವೇದ ವಿದ್ಯಾರ್ಥಿಗಳು. ಆಯುರ್ವೇದ ತಜ್ಞರಿಂದ ಮಾಹಿತಿ ಪಡೆದು ದೇಶದ ಆರೋಗ್ಯ ಕ್ಷೇತ್ರದಲ್ಲಿ ಆಯುರ್ವೇದ ಚಿಕಿತ್ಸಾ ಪದ್ಧತಿಗೆ ವಿಶಿಷ್ಟ ಸ್ಥಾನ-ಮಾನ-ಗೌರವ ದೊರೆಕಿಸುವಂತಾಗಲಿ” ಎಂದು ಶುಭ ಹಾರೈಸಿದರು.

ಇದನ್ನೂ ಓದಿ: BYJU’s Layoffs: ಮತ್ತೆ 5500 ಉದ್ಯೋಗ ಕಡಿತಕ್ಕೆ ಮುಂದಾದ ಬೈಜೂಸ್ ಕಂಪನಿ

ಜೈನ ಆಯುರ್ವೇದ ಪದ್ಧತಿ, ಔಷಧ ತಯಾರಿಕೆ, ಕುಂದಾದ್ರಿ ಬೆಟ್ಟದ ಅಮೂಲ್ಯ ಗಿಡಮೂಲಿಕೆಗಳ ಕುರಿತು ಶ್ರೀಗಳು ಉಲ್ಲೇಖಿಸುತ್ತಾ ಪೂಜ್ಯಪಾದ ಮುನಿಶ್ರೀಗಳ ಚಿಕಿತ್ಸಾ ಪದ್ಧತಿ ಸಂಶೋಧನೆಗೆ ಯೋಗ್ಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಹೊಂಬುಜ ಅತಿಶಯ ಶ್ರೀಕ್ಷೇತ್ರವು ಮಾನಸಿಕ, ಶಾರೀರಿಕ, ಸ್ವಾಸ್ಥ್ಯ ರಕ್ಷಣೆಗೆ ಪ್ರಥಮ ಪ್ರಾಶಸ್ತ್ಯ ನೀಡುತ್ತಲಿದೆ ಎಂದರು.

ಇದನ್ನೂ ಓದಿ: Asian Games 2023: ಕೇವಲ ಒಂದು ಅಂಕದ ಅಂತರದಲ್ಲಿ ವಿಷ್ಣು​ಗೆ ಕೈತಪ್ಪಿದ ಬೆಳ್ಳಿ ಪದಕ

ವೈದ್ಯರಾದ ಡಾ. ಜೀವಂಧರ ಜೈನ್ ಮಾತನಾಡಿದರು. ಡಾ. ಅರ್ಹಂತ್ ಕುಮಾರ್, ಡಾ. ಆನಂದ ವೇದಿಕೆಯಲ್ಲಿ ಉಪಸ್ಥಿತರಿದ್ದರು. 150ಕ್ಕೂ ಅಧಿಕ ಆಯುರ್ವೇದ ವೈದ್ಯ, ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಉಡುಪಿ

Karnataka Weather : ಮೈಸೂರು ಸೇರಿ 11 ಜಿಲ್ಲೆಗಳಿಗೆ ಮಳೆ ಅಲರ್ಟ್‌!

Rain News : ದಕ್ಷಿಣ ಒಳನಾಡು ಹಾಗೂ ಮಲೆನಾಡು, ಕರಾವಳಿ ಭಾಗದಲ್ಲಿ ವರುಣ (Karnataka weather Forecast) ಸಕ್ರಿಯನಾಗಿದ್ದರೆ, ಉತ್ತರ ಒಳನಾಡಿನಲ್ಲಿ ಒಣಹವೆ (Dry weather) ಮುಂದುವರಿಯಲಿದೆ.

VISTARANEWS.COM


on

By

Rain News
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರಾವಳಿ ಮತ್ತು ದಕ್ಷಿಣ ಒಳನಾಡಿನ (Karnataka weather Forecast) ಕೆಲವು ಕಡೆಗಳಲ್ಲಿ ಮಳೆಯಾಗಲಿದ್ದು, (Rain News) ಉತ್ತರ ಒಳನಾಡಿನಲ್ಲಿ ಒಣಹವೆ (Dry weather) ಇರಲಿದೆ. ಬಹುತೇಕ ಜಿಲ್ಲೆಗಳಲ್ಲಿ ಉರಿ ಉರಿ ವಾತಾವರಣ ಇರಲಿದೆ.

ಮೈಸೂರಲ್ಲಿ ಭಾರಿ ಮಳೆ

ದಕ್ಷಿಣ ಒಳನಾಡಿನ ಮೈಸೂರಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಹಾವೇರಿ, ಧಾರವಾಡ ಮತ್ತು ಬೆಳಗಾವಿಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಸಾಧಾರಣದೊಂದಿಗೆ ಹಗುರ ಮಳೆ ಸಾಧ್ಯತೆ

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆ ಸುರಿಯಲಿದೆ.

ಮೋಡ ಕವಿದ ವಾತಾವರಣ

ಬೆಂಗಳೂರಲ್ಲಿ ಕೆಲವೊಮ್ಮೆ ಮೋಡ ಕವಿದ ವಾತಾವರಣವಿರಲಿದೆ. ಮಧ್ಯಾಹ್ನ ಬಿಸಿಲು ಇರಲಿದೆ. ಸಂಜೆ ಅಥವಾ ರಾತ್ರಿಯಂದು ಆಯ್ದ ಕಡೆಗಳಲ್ಲಿ ಮಳೆ ಇರಲಿದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: KGF 3 Actor Yash | ಕೆಜಿಎಫ್​ನ ರಾಕಿ ಭಾಯ್​, ಪಾಂಡ್ಯ ಬ್ರದರ್ಸ್​ ಭೇಟಿ; ಕೆಜಿಎಫ್​ 3 ಟ್ರೆಂಡಿಂಗ್​

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ -20 ಡಿ.ಸೆ
ಮಂಗಳೂರು: 34 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 19 ಡಿ.ಸೆ
ಗದಗ: 31 ಡಿ.ಸೆ – 17 ಡಿ.ಸೆ
ಹೊನ್ನಾವರ: 35 ಡಿ.ಸೆ- 22 ಡಿ.ಸೆ
ಕಲಬುರಗಿ: 31 ಡಿ.ಸೆ – 19 ಡಿ.ಸೆ
ಬೆಳಗಾವಿ: 31 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉಡುಪಿ

Karnataka Weather : ನಾಳೆ ಬೆಂಗಳೂರು ಸೇರಿ ಹಲವೆಡೆ ಮಳೆ ಸಾಧ್ಯತೆ!

Rain News : ಡಿ.10ರಂದು ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ (Karnataka weather Forecast) ನಿರೀಕ್ಷೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ (Dry weather) ಮುಂದುವರಿಯಲಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ (Karnataka weather Forecast) ಕೆಲವು ಕಡೆಗಳಲ್ಲಿ ಮಳೆಯಾಗುವ (Rain News) ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ (Dry weather) ಇರಲಿದೆ.

ದಕ್ಷಿಣ ಒಳನಾಡಿನ ಮೈಸೂರಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಹಾವೇರಿ, ಧಾರವಾಡ ಮತ್ತು ಬೆಳಗಾವಿಯಲ್ಲಿ ಚದುರಿದಂತೆ ಹಗುರದಿಂದ ಮಳೆ ಇರಲಿದ್ದು, ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆ ಸುರಿಯಲಿದೆ.

ಬೆಂಗಳೂರು ಸುತ್ತಮುತ್ತಲ ಪ್ರದೇಶದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಮಳೆಯಾಗುವ ಬಹಳಷ್ಟು ಸಾಧ್ಯತೆಗಳಿದ್ದು, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Cyber Crime: ಪಾರ್ಟ್‌ ಟೈಂ ಜಾಬ್‌ ಆಮಿಷ; ಲಿಂಕ್‌ ಕ್ಲಿಕ್ಕಿಸಿ ಕಾಸು ಲೂಟಿ, ಹೋಯಿತು ಕೋಟಿ ಕೋಟಿ!

ಕರಾವಳಿ- ಮಲೆನಾಡಲ್ಲಿ ಉತ್ತಮ ಮಳೆ

ರಾಜ್ಯದಲ್ಲಿ ಶುಕ್ರವಾರದಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ಜಯಪುರ (ಚಿಕ್ಕಮಗಳೂರು ಜಿಲ್ಲೆ) 6, ಅಜ್ಜಂಪುರ (ಚಿಕ್ಕಮಗಳೂರು ಜಿಲ್ಲೆ), ನಾಯಕನಹಟ್ಟಿ (ಚಿತ್ರದುರ್ಗ ಜಿಲ್ಲೆ) ತಲಾ 5 ಸೆಂ.ಮೀ ಮಳೆಯಾಗಿದೆ.

ಹೊಸದುರ್ಗ (ಚಿತ್ರದುರ್ಗ ಜಿಲ್ಲೆ), ಕಡೂರು (ಚಿಕ್ಕಮಗಳೂರು ಜಿಲ್ಲೆ) ತಲಾ 4 ಸೆಂ.ಮೀ ಹಾಗೂ ಕೊಟ್ಟಿಗೆಹಾರ, ಎನ್.ಆರ್.ಪುರ, ತರೀಕೆರೆ, ಯಗಟಿ (ಎಲ್ಲಾ ಚಿಕ್ಕಮಗಳೂರು ಜಿಲ್ಲೆ), ಬೇಲೂರು (ಹಾಸನ ಜಿಲ್ಲೆ), ಮೂರ್ನಾಡು (ಕೊಡಗು ಜಿಲ್ಲೆ) ತಲಾ 3 ಸೆಂ.ಮೀ ಮಳೆಯಾಗಿದೆ. ಹುಂಚದಕಟ್ಟೆ (ಶಿವಮೊಗ್ಗ ಜಿಲ್ಲೆ) 2 ಸೆಂ.ಮೀ, ಮಂಗಳೂರು ವಿಮಾನ ನಿಲ್ದಾಣ (ದಕ್ಷಿಣ ಕನ್ನಡ ಜಿಲ್ಲೆ), ಭಾಗಮಂಡಲ (ಕೊಡಗು ಜಿಲ್ಲೆ), ವೈ.ಎನ್.ಹೊಸಕೋಟೆ, ಸಿರಾ (ಎರಡೂ ತುಮಕೂರು ಜಿಲ್ಲೆ), ಬಾಳೆಹೊನ್ನೂರು (ಚಿಕ್ಕಮಗಳೂರು ಜಿಲ್ಲೆ), ಸಕಲೇಶಪುರ (ಹಾಸನ ಜಿಲ್ಲೆ) ತಲಾ 1 ಸೆಂ. ಮೀ ಮಳೆಯಾಗಿದೆ. ಕಡಿಮೆ ಉಷ್ಣಾಂಶ 14.0 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉಡುಪಿ

Karnataka Weather : ವೀಕೆಂಡ್‌ಗೆ ಮಳೆ ಅಡ್ಡಿ! ಯಾವ್ಯಾವ ಜಿಲ್ಲೆಗೆ ಅಲರ್ಟ್‌

Rain News : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ವಾರಾಂತ್ಯದಲ್ಲಿ ಮಳೆ ಸೂಚನೆ (rain News) ಇದ್ದು, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ (Karnataka weather Forecast) ಸುರಿಯಲಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರದ ಅಲ್ಲಲ್ಲಿ ಚದುರಿದಂತೆ ಮಳೆಯಾಗಹುದು.

ಸಾಧಾರಣ ಮಳೆ!

ಉತ್ತರ ಒಳನಾಡಿನ ವಿಜಯನಗರ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಕೊಪ್ಪಳ, ಗದಗ, ಬಾಗಲಕೋಟೆ, ಗದಗ, ಹಾವೇರಿ ಮತ್ತು ವಿಜಯಪುರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ಮೇಲುಗೈ ಸಾಧಿಸಲಿದೆ.

ಇದನ್ನೂ ಓದಿ: Funky Pant Suit Fashion: ಮೆನ್ಸ್ ಕ್ಲಾಸಿ ಪ್ಯಾಂಟ್‌ ಸೂಟ್‌ಗೂ ಸಿಕ್ತು ಫ್ಯಾನ್ಸಿ ಫಂಕಿ ಲುಕ್‌!

ಉತ್ತರ ಕನ್ನಡ, ಉಡುಪಿಗಿಲ್ಲ ಮಳೆ ಸೂಚನೆ

ಮಲೆನಾಡಿನ ಚಿಕ್ಕಮಗಳೂರು, ಹಾಸನದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇತ್ತ ಕರಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದರೆ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಒಣಹವೆ ಮುಂದುವರಿಯಲಿದೆ.

ಬೆಂಗಳೂರಲ್ಲಿ ಆಗಾಗ ಮರೆಯಾಗುವ ಸೂರ್ಯ

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಹಗುರ ಮಳೆಯಾಗಹುದು. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ -18 ಡಿ.ಸೆ
ಮಂಗಳೂರು: 34 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 17 ಡಿ.ಸೆ
ಗದಗ: 30 ಡಿ.ಸೆ – 17 ಡಿ.ಸೆ
ಹೊನ್ನಾವರ: 34 ಡಿ.ಸೆ- 23 ಡಿ.ಸೆ
ಕಲಬುರಗಿ: 26 ಡಿ.ಸೆ – 20 ಡಿ.ಸೆ
ಬೆಳಗಾವಿ: 30 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉಡುಪಿ

Karnataka weather: ಸಂಜೆಗೆ ಶುರುವಾಗುತ್ತೆ ಮಳೆ; ಇನ್ನೊಂದು ವಾರ ಈ ಜಿಲ್ಲೆಯವರು ಎಚ್ಚರ!

Karnataka weather Forecast : ವಾರಾಂತ್ಯದಲ್ಲಿ ಮಳೆ ಸೂಚನೆ ಇದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Rain News)ಸಾಧ್ಯತೆ ಇದೆ. ಕರಾವಳಿಯಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ.

VISTARANEWS.COM


on

By

Heavy rains lash Karnataka for another week
Koo

ಬೆಂಗಳೂರು: ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ದಾವಣಗೆರೆ, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರದಲ್ಲಿ ಚದುರಿದಂತೆ (Karnataka weather Forecast) ಮಳೆಯಾಗಲಿದೆ.

ಉತ್ತರ ಒಳನಾಡಿನ ವಿಜಯನಗರ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಕೊಪ್ಪಳ, ಗದಗ, ಬಾಗಲಕೋಟೆ, ಗದಗ, ಹಾವೇರಿ ಮತ್ತು ವಿಜಯಪುರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಶುಷ್ಕ ವಾತಾವರಣ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇತ್ತ ಕರಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದರೆ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಒಣಹವೆ ಮುಂದುವರಿಯಲಿದೆ.

ಇದನ್ನೂ ಓದಿ: Murder Case : ಹೆಂಡ್ತಿಯನ್ನು ಕಡಿದು ಹಾಕಿ ಆತ್ಮಹತ್ಯೆಗೆ ಶರಣಾದ!

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಹಗುರದಿಂದ ಕೂಡಿದ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಗುರುವಾರ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ಉತ್ತರಒಳನಾಡಿನಲ್ಲಿ ಒಣಹವೆ ಮುಂದುವರಿದಿತ್ತು. ವಿಜಯಪುರದಲ್ಲಿ 12.5 ಡಿ.ಸೆ ಕಡಿಮೆ ಉಷ್ಣಾಂಶ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading
Advertisement
Aadhaar update
ಕರ್ನಾಟಕ7 mins ago

Aadhaar update: ಆಧಾರ್‌ ಕಾರ್ಡ್‌ ಉಚಿತ ಅಪ್ಡೇಟ್‌ಗೆ 4 ದಿನ ಮಾತ್ರವೇ ಅವಕಾಶ! ಹೀಗೆ ಮಾಡಿ ನವೀಕರಿಸಿ

CM Revanth Reddy launches two guarantee Schemes in Telangana
ದೇಶ15 mins ago

ತೆಲಂಗಾಣದಲ್ಲಿ ಎರಡು ಗ್ಯಾರಂಟಿಗಳಿಗೆ ಚಾಲನೆ ನೀಡಿದ ಸಿಎಂ ರೇವಂತ್ ರೆಡ್ಡಿ

sextortion
ಅಂಕಣ30 mins ago

ಸೈಬರ್‌ ಸೇಫ್ಟಿ ಅಂಕಣ: ‘ಡೀಪ್ ಫೇಕ್’ ತಂತ್ರಜ್ಞಾನದಿಂದ ಸೆಕ್ಸ್‌ಟಾರ್ಷನ್

Yuva Nidhi Scheme
ಕರ್ನಾಟಕ30 mins ago

Yuva Nidhi Scheme: ಜನವರಿಯಲ್ಲೇ ಯುವನಿಧಿ ಜಾರಿ; ಅರ್ಹತೆ ಯಾರಿಗಿದೆ? ಈ ದಾಖಲೆ ನಿಮ್ಮಲಿರಲಿ!

kaivara tatayya
ಅಂಕಣ45 mins ago

ತಾತಯ್ಯ ತತ್ವಾಮೃತಂ: ಭಕ್ತಿತತ್ವದಿಂದ ಮೋಕ್ಷ ಸಾಧನೆ

Madhu Bangarappa Beluru Gopalakrishna
ಅಂಕಣ1 hour ago

ಮೊಗಸಾಲೆ ಅಂಕಣ: ಒಣಗಿದ ಜಿಲ್ಲೆಯಲ್ಲಿ ಜೋಗದ ಬದಲು ಕಚ್ಚಾಟದ ರೋಗ

Rain News
ಉಡುಪಿ1 hour ago

Karnataka Weather : ಮೈಸೂರು ಸೇರಿ 11 ಜಿಲ್ಲೆಗಳಿಗೆ ಮಳೆ ಅಲರ್ಟ್‌!

Vistara Editorial, Let the strengthening government schools
ಕರ್ನಾಟಕ1 hour ago

ವಿಸ್ತಾರ ಸಂಪಾದಕೀಯ: ಸರ್ಕಾರಿ ಶಾಲೆಗಳ ಬಲವರ್ಧನೆಗೆ ತಜ್ಞರ ಸೂತ್ರಗಳು ಜಾರಿಯಾಗಲಿ

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

Sphoorti Salu
ಸುವಚನ3 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ1 day ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema1 day ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema1 day ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ2 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ3 days ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ3 days ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

ಟ್ರೆಂಡಿಂಗ್‌