Site icon Vistara News

Shivamogga News: ಜನರಿಗೆ ಉತ್ತಮ ಸೇವೆ ನೀಡಿದಾಗ ಮಾತ್ರ ಸಂಸ್ಥೆ ಉನ್ನತ ಸ್ಥಾನಕ್ಕೇರುತ್ತದೆ: ಡಾ. ವಿಜಯ ಸಂಕೇಶ್ವರ

Bhagwati Chits Pvt Ltd in Sagar, Chairman of VRL Group of Companies Dr. Vijaya Sankeshwara inaugurated

ಸಾಗರ: ಯಾವುದೇ ಸಂಸ್ಥೆಯು ಸಾರ್ವಜನಿಕರಿಗೆ ಉತ್ತಮ ಸೇವೆ (Good Service) ನೀಡಿದಾಗ ಮಾತ್ರ ಸಂಸ್ಥೆಯು ಉನ್ನತ ಸ್ಥಾನಕ್ಕೆ ಏರುತ್ತದೆ ಎಂದು ವಿಆರ್‌ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ತಿಳಿಸಿದರು.

ಸಾಗರ ನಗರದಲ್ಲಿ ಬುಧವಾರ ಭಗವತಿ ಚಿಟ್ಸ್ ಪ್ರೈ ಲಿ. ಅನ್ನು ಉದ್ಘಾಟಿಸಿ ಮಾತನಾಡಿದ ಅವರು, ವ್ಯವಹಾರ, ವ್ಯಾಪಾರದಲ್ಲಿ ಪ್ರಾಮಾಣಿಕತೆಯಿಂದ ಇದ್ದಾಗ ಮಾತ್ರ ಸಂಸ್ಥೆಯ ಜತೆ ನಾವು ಬೆಳೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Educational Tour: ಶಾಲಾ ಮಕ್ಕಳಿಗೆ ಸಿಹಿ ಸುದ್ದಿ; ದೇಶಾದ್ಯಂತ ಶೈಕ್ಷಣಿಕ ಪ್ರವಾಸಕ್ಕೆ ಅನುಮತಿ

ಕಾರ್ಯಕ್ರಮದಲ್ಲಿ ಭಗವತಿ ಚಿಟ್ಸ್ ಪ್ರೈ ಲಿಮಿಟೆಡ್ ಸಂಸ್ಥೆಯ ವತಿಯಿಂದ ವಿಆರ್‌ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ಮತ್ತು ಶಾಸಕ ಬೇಳೂರು ಗೋಪಾಲಕೃಷ್ಣ ಅವರನ್ನು ಗೌರವಿಸಿ, ಸನ್ಮಾನಿಸಲಾಯಿತು.

ಇದನ್ನೂ ಓದಿ: Snake Catch : ಬೃಹತ್‌ ಗಾತ್ರದ ಹೆಬ್ಬಾವನ್ನು ಹಿಡಿದ 12ರ ಬಾಲಕ! Video ಇದೆ ನೋಡಿ!

ಈ ಸಂದರ್ಭದಲ್ಲಿ ಸಂಸ್ಥೆಯ ಕರುಣಾಕರ್ ಶೆಟ್ಟಿ, ಸಿಗಂದೂರು ಚೌಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಡಾ.ರಾಮಪ್ಪ, ಉದ್ಯಮಿಗಳಾದ ಟಿಪ್ ಟಾಪ್ ಇಬ್ರಾಹಿಂ, ಮಧುಕರ್ ಹೆಗಡೆ, ಆಪ್ಸ್ ಕೋಸ್ ಅಧ್ಯಕ್ಷ ಇಂಧೂದರ ಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

Exit mobile version