Shivamogga News: ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವ ಸಂಪನ್ನ - Vistara News

ಶಿವಮೊಗ್ಗ

Shivamogga News: ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವ ಸಂಪನ್ನ

Shivamogga News: ಸೊರಬ ತಾಲೂಕಿನ ಚಂದ್ರಗುತ್ತಿಯ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಿಯ ಜಾತ್ರಾ ಮಹೋತ್ಸವ ಸಂಪನ್ನಗೊಂಡಿದ್ದು, ದೇವಸ್ಥಾನದ ಆಡಳಿತ ಮಂಡಳಿಯಿಂದ ದೇಗುಲದಲ್ಲಿ ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

VISTARANEWS.COM


on

Chandragutti Sri Renukamba Devi Jatra Mahotsava Sampanna
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸೊರಬ: ತಾಲೂಕಿನ ಚಂದ್ರಗುತ್ತಿಯ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಿಯ (Chandragutti Shri Renukamba Devi) ಜಾತ್ರಾ ಮಹೋತ್ಸವ ಸಂಪನ್ನಗೊಂಡಿದ್ದು, ದೇವಸ್ಥಾನದ ಆಡಳಿತ ಮಂಡಳಿಯಿಂದ ದೇಗುಲದಲ್ಲಿ ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಭಕ್ತರಿಗೆ ಪ್ರಸಾದ (Shivamogga News) ವಿತರಿಸಲಾಯಿತು.

ಈ ಬಾರಿಯ ಶ್ರೀ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವವು ಸಂಪನ್ನಗೊಂಡಿದ್ದು, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ವಿ.ಎಲ್. ಶಿವಪ್ರಸಾದ್ ಅವರ ನೇತೃತ್ವದಲ್ಲಿ ದೇವಸ್ಥಾನಕ್ಕೆ ಆಗಮಿಸಿದ ಭಕ್ತರಿಗೆ ಮತ್ತು ಚಂದ್ರಗುತ್ತಿ ಗ್ರಾಮದ ಪ್ರತಿಯೊಂದು ಮನೆಗಳಿಗೂ ಸಹ ಪ್ರಸಾದ ವಿತರಿಸಲಾಯಿತು.

ಇದನ್ನೂ ಓದಿ: Job Alert: ಇಸ್ರೋದಲ್ಲಿ ಉದ್ಯೋಗ ನಿರ್ವಹಿಸಬೇಕೆ? ಇಲ್ಲಿದೆ ಸುವರ್ಣಾವಕಾಶ

ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ವಿ.ಎಲ್. ಶಿವಪ್ರಸಾದ್ ಮಾತನಾಡಿ, ಶ್ರೀ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವ ವೈಭವದಿಂದ ಸಂಪನ್ನಗೊಂಡಿದ್ದು, ಈ ಹಿನ್ನಲೆಯಲ್ಲಿ ನಾಡಿನ ಸಮಸ್ತ ಜನತೆಗೆ ಶೀ ರೇಣುಕಾಂಬ ದೇವಿಯು ಸುಖ, ಶಾಂತಿ, ನೆಮ್ಮದಿ, ಮತ್ತು ಆರೋಗ್ಯ, ಆಯಸ್ಸು, ಜೀವನದಲ್ಲಿ ನೀಡಲಿ ಹಾಗೂ ಕಾಲಕ್ಕೆ ತಕ್ಕಂತೆ ಮಳೆ, ಬೆಳೆ, ಆಗಲಿ ಎಂದು ಶ್ರೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: Shivamogga News: ಜಲಮೂಲದ ಸನಿಹ ಆಚರಿಸುವ ಜಲದಿನ ಹೆಚ್ಚು ಅರ್ಥಪೂರ್ಣ: ಎಂ.ಆರ್.ಪಾಟೀಲ್

ದೇವಸ್ಥಾನದ ಪ್ರಧಾನ ಅರ್ಚಕ ಅರವಿಂದ್ ಭಟ್ ಅವರು ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ದೇವಸ್ಥಾನದ ಸಿಬ್ಬಂದಿಗಳು ಗ್ರಾಮದ ಪ್ರತಿ ಮನೆಗಳಿಗೆ ತೆರಳಿ ಪ್ರಸಾದ ವಿತರಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿವಮೊಗ್ಗ

Lok Sabha Election 2024: ಅತಿ ಹೆಚ್ಚು ಮತಗಳ ಅಂತರದಿಂದ ಬಿ.ವೈ.ರಾಘವೇಂದ್ರ ಗೆಲುವು: ಆರ್.ಎ. ಚಾಬುಸಾಬ್

Lok Sabha Election 2024: ಮೇ 7ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಬೆಂಬಲಿತ ಆಭ್ಯರ್ಥಿ ಬಿ.ವೈ.ರಾಘವೇಂದ್ರ ಈ ಬಾರಿ ಅತಿ ಹೆಚ್ಚು ಮತಗಳ ಆಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂದು ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ. ಚಾಬುಸಾಬ್ ಹೇಳಿದ್ದಾರೆ.

VISTARANEWS.COM


on

state JDS secretary R A Chabusab statement In Ripponpet
Koo

ರಿಪ್ಪನ್‌ಪೇಟೆ: ಮೇ 7ರಂದು ನಡೆಯುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ-ಜೆಡಿಎಸ್ ಬೆಂಬಲಿತ ಆಭ್ಯರ್ಥಿ ಬಿ.ವೈ. ರಾಘವೇಂದ್ರ, ಈ ಬಾರಿ ಅತಿ ಹೆಚ್ಚು ಮತಗಳ ಆಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂದು ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ. ಚಾಬುಸಾಬ್ ವಿಶ್ವಾಸ ವ್ಯಕ್ತಪಡಿಸಿದರು.

ರಿಪ್ಪನ್‌ಪೇಟೆಯ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಎರಡು ಪಕ್ಷದ ಮುಖಂಡರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಫರ್ಧಿಸಿದರೂ ಬಿ.ವೈ.ರಾಘವೇಂದ್ರರ ಗೆಲುವು ತಡೆಯಲು ಸಾಧ್ಯವಿಲ್ಲ ಎಂದ ಅವರು, ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಬಾಕಿ ಉಳಿದಿರುವ ಬಹಳಷ್ಟು ಆಭಿವೃದ್ದಿ ಕಾರ್ಯಗಳನ್ನು ಬಿ.ವೈ. ರಾಘವೇಂದ್ರ ಅವರು ಕೇಂದ್ರದ ಸಚಿವರಾಗಿ ಈಡೇರಿಸುತ್ತಾರೆ.

ಇದನ್ನೂ ಓದಿ: TCS World 10K : ನಾಳೆ ಬೆಂಗಳೂರಿನಲ್ಲಿ ವಿಶ್ವ ವಿಖ್ಯಾತಿಯ ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಾಥಾನ್​

ದೇಶಕ್ಕೆ ಬೆಳಕು ನೀಡುವ ಉದ್ದೇಶದಿಂದ ಮನೆ-ಮಠವನ್ನು ಕಳೆದುಕೊಂಡು ನಿರಾಶ್ರಿತರಾಗಿರುವ ಶರಾವತಿ ಸಂತ್ರಸ್ಥ ಕುಟುಂಬಕ್ಕೆ ಶಾಶ್ವತ ನೆಲೆ ಕಾಣುವಂತೆ ಮಾಡುವ ಬಗ್ಗೆ ಕೇಂದ್ರ ಸಂಪುಟ ಸಭೆಯಲ್ಲಿ ಸಾಕಷ್ಟು ಬಾರಿ ಗಮನ ಸೆಳೆದಿರುವ ಬಿ.ವೈ.ರಾಘವೇಂದ್ರ, ಈ ಬಾರಿ ಗೆದ್ದು ಆ ಜ್ವಲಂತ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುತ್ತಾರೆ ಎಂಬ ವಿಶ್ವಾಸ ನಮ್ಮದಾಗಿದೆ ಎಂದರು.

ಕಳೆದ ಹತ್ತು ವರ್ಷದ ಹಿಂದೆ ಕಾಂಗ್ರೆಸ್ ಪಕ್ಷದ ಆಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಸೋತವರು ಕ್ಷೇತ್ರದ ಕಡೇ ಮುಖ ಹಾಕಲೇ ಇಲ್ಲ ಎಂದು ಆರೋಪಿಸಿದ ಅವರು,. ಇದೀಗ ದಿಢೀರ್ ಅಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ ಕುಮಾರ್ ಪ್ರತ್ಯಕ್ಷರಾಗಿದ್ದಾರೆ. ಇವರಿಗೆ ಮತ ಹಾಕಿ ಗೆಲ್ಲಿಸಬೇಕೇ? ಜಿಲ್ಲೆಯ ಹತ್ತು ಹಲವು ಸಮಸ್ಯೆಗಳ ಅರಿವೇ ಇಲ್ಲದವರನ್ನು ಬೆಂಬಲಿಸಬೇಕಾ ಎಂದರು.

ಹಾಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಕೇವಲ 10 ವರ್ಷದಲ್ಲಿ ಶಿವಮೊಗ್ಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಗೆ ಟೊಂಕ ಕಟ್ಟಿ ನಿಂತಿದ್ದಾರೆ ಎಂಬುದಕ್ಕೆ ಮೈಸೂರು-ಬೆಂಗಳೂರು, ಶಿವಮೊಗ್ಗ-ಸಾಗರ-ತಾಳಗುಪ್ಪ ಇಂಟರ್ ಸಿಟಿ ರೈಲು ಸೇರಿದಂತೆ ವಿಮಾನ ನಿಲ್ದಾಣ, ಮೇಗರವಳ್ಳಿಯಿಂದ ಆಗುಂಬೆ ಮಾರ್ಗದ ಸೋಮೇಶ್ವರದವರೆಗೆ ಸುರಂಗ ಮಾರ್ಗದ ಸಂಪರ್ಕದ ರಸ್ತೆ ಅಭಿವೃದ್ಧಿ ಹಾಗೂ ರಾಣೆಬೆನ್ನೂರು-ಬೈಂದೂರುವರೆಗೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಕೋಟ್ಯಾಂತರ ರೂ. ಅನುದಾನ ತರಲಾಗಿದ್ದರೂ ಕಾಂಗ್ರೆಸ್ ಪಕ್ಷದವರು ಏನು ಮಾಡಿಲ್ಲ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆಲ್ಲ ಮತದಾರರು ಕಿವಿಗೊಡಬೇಡಿ ಎಂದ ಅವರು, ನಮ್ಮ ಎರಡು ಪಕ್ಷದವರು ಮತದಾರರಿಗೆ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಸಾಧನೆಗಳನ್ನು ಮನವರಿಕೆ ಮಾಡುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.

ಇದನ್ನೂ ಓದಿ: MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಮಾಹಿತಿ ಸಂಗ್ರಹಕ್ಕೆ ಮುಂದಾದ ಅಮೆರಿಕ

ಈ ವೇಳೆ ಹೊಸನಗರ ತಾಲೂಕು ಜೆಡಿಎಸ್ ಆಧ್ಯಕ್ಷ ಎನ್.ವರ್ತೇಶ್, ಬಿಜೆಪಿ ಜಿಲ್ಲಾ ಮುಖಂಡ ಆರ್.ಟಿ.ಗೋಪಾಲ, ಎಂ.ಬಿ.ಮಂಜುನಾಥ, ನಾಗಾರ್ಜುನಸ್ವಾಮಿ, ಕೃಷ್ಣೋಜಿರಾವ್, ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ಜಿ.ಎಸ್.ವರದರಾಜ್, ಬಿಜೆಪಿ ಮುಖಂಡರಾದ ಸುಂದರೇಶ್, ಸುಧೀಂದ್ರ ಪೂಜಾರಿ, ಪಿ.ರಮೇಶ್, ಮಹೇಶ ಮಾಣಿಕೆರೆ, ಮಂಜುನಾಥ ಗವಟೂರು, ರಾಮು ಬಳೆಗಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ಮಳೆ

Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

Karnataka Weather Forecast : ರಾಜ್ಯಾದ್ಯಂತ ತಾಪಮಾನ ಏರಿಕೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜನ-ಸಾಮಾನ್ಯರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ (Dry Weather) ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಏಪ್ರಿಲ್‌ 30ರವರೆಗೆ ಹೀಟ್‌ ವೇವ್‌ (heat Wave) ಪ್ರಭಾವ ಇರಲಿದೆ.

ಪ್ರಮುಖವಾಗಿ ಉತ್ತರ ಒಳನಾಡಿ ಬೀದರ್, ಕಲಬುರಗಿ, ವಿಯಜಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಜತೆಗೆ ಹೀಟ್‌ ವೇವ್‌ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿ ಗಾಳಿ ಎಚ್ಚರಿಕೆ

ಏಪ್ರಿಲ್ 27 ರಿಂದ ಮೇ 1ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 23 ಡಿ.ಸೆ ಇರುವ ಸಾಧ್ಯತೆ ಇದೆ.

ಇದನ್ನೂ ಓದಿ: Murder Case : ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

ಸೂರ್ಯನ ತಾಪವು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಬೇವರಿಸುವ ಸೂರ್ಯನ ಶಾಖವು ಜನರು ಆರೋಗ್ಯದ ಮೇಲೂ ಪರಿಣಾಮ (Health Tips) ಬೀರುತ್ತಿದೆ. ಸಾರ್ವಜನಿಕರು ಏನು ಮಾಡಬೇಕು ಏನು ಮಾಡಬಾರದು ಎಂಬ ಮಾಹಿತಿ ಇಲ್ಲದೆ.

ತಾಪಮಾನದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳೇನು?

ಸಾಮಾನ್ಯವಾಗಿ ದೇಹದ ಉಷ್ಣತೆಯು 36.4 ಡಿ.ಸೆ ನಿಂದ 37.2 ಡಿ.ಸೆ ಇರಲಿದೆ. ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ ಉಷ್ಣತೆಯಿಂದಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಸಾಧಾರಣದಿಂದ ತೀವ್ರ ಜ್ವರ, ಗಂಧೆಗಳು (prickly heat), ಊತಗಳು ( ಕೈ-ಕಾಲುಗಳು ಹಾಗೂ ಮೊಣಕಾಲು), ಉಷ್ಣತೆಯಿಂದ ಸೆಳೆತ (ಸ್ನಾಯುಗಳ ಸೆಳೆತ), ಪ್ರಜ್ಞೆ ತಪ್ಪುವುದು, ಸುಸ್ತಾಗುವುದು ಹಾಗೂ ಪಾಶ್ವವಾಯು ಉಂಟಾಗಲಿದೆ. ಕೆಲವೊಮ್ಮೆ ಅತಿಯಾದ ಉಷ್ಣತೆಯಿಂದಾಗಿ ಹೃದ್ರೋಗ, ಉಸಿರಾಟದ ಸಮಸ್ಯೆಗಳು ಹಾಗೂ ಕಿಡ್ನಿ ಸಮಸ್ಯೆಗಳು ಹೆಚ್ಚಾಗುತ್ತದೆ. ಅತಿಯಾದ ಬಾಯಾರಿಕೆ, ವಾಕರಿಕೆ ಅಥವಾ ವಾಂತಿಯಾಗುವುದು, ತಲೆನೋವು ಹಾಗೂ ಮೂತ್ರ ವಿಸರ್ಜನೆ ಪ್ರಮಾಣದಲ್ಲಿ ಕಡಿಮೆಯಾಗುವುದು ಹಾಗೂ ಹಳದಿ ಬಣ್ಣದ ಮೂತ್ರ, ಏರು ಗತಿಯ ಉಸಿರಾಟ ಹಾಗೂ ಹೃದಯದ ಬಡಿತ ಹೆಚ್ಚಾಗಲಿದೆ.

ಏನು ಮಾಡಬೇಕು?
-ತಕ್ಷಣವೇ ತಂಪಾದ ಸ್ಥಳಕ್ಕೆ ತೆರಳಿ ಮತ್ತು ದ್ರವಾಹಾರವನ್ನು ಸೇವಿಸಿ. ನೀರಿನ ಸೇವನೆ ಅತ್ಯುತ್ತಮ.
-ಹೆಚ್ಚು ನೀರು ಕುಡಿಯುವುದು. ಬಾಯಾರಿಕೆ ಇಲ್ಲದಿದ್ದರೂ ಆಗಾಗ ನೀರು ಸೇವಿಸಿ. ಜತೆಗೆ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ, ಲಸ್ಸಿ ಹಾಗು ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮ.
-ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟೂಸ್, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
-ತಿಳಿ ಬಣ್ಣದ, ಅಳಕವಾದ (loose fitting) ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.
-ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸಿ ಬಿಸಿಲಿನಿಂದ ರಕ್ಷಣೆ ಪಡೆಯಿರಿ.
-ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ / ಚಪ್ಪಲಿ ಅಥವಾ ಶೂಸ್‌ಗಳನ್ನು ಧರಿಸಬೇಕು.
-ಸಾಧ್ಯವಾದಷ್ಟು ಒಳಾಂಗಣದಲ್ಲಿದ್ದು, ಉತ್ತಮ ಗಾಳಿ ಬೀಸುವ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಿ. ನೇರವಾಗಿ ಸೂರ್ಯನ ಬೆಳಕು ಹಾಗೂ ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಲು ಹಗಲು ಹೊತ್ತಿನಲ್ಲಿ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿ.

ಈ ಕೆಲಸವನ್ನು ಮಾಡಬಾರದು

-ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಿ.
-ಮಧ್ಯಾಹ್ನದ ಸಮಯದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
-ಮಧ್ಯಾಹ್ನ ಅಡುಗೆ ಮಾಡುವುದು ತಪ್ಪಿಸಿ. ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆದಿಡಿ.
-ಮಧ್ಯಪಾನ, ಟೀ, ಕಾಫಿ ಮತ್ತು ಕಾರ್ಬೋನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ. ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
-ಹೆಚ್ಚು ಪ್ರೊಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
-ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನಾಪಮಾನವು ಅಪಾಯಕಾರಿಯಾಗಬಹುದು.
-ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆಯ ನೀರಿನ ವ್ಯವಸ್ಥೆ ಮಾಡಬೇಕು. 20 ನಿಮಿಷಗಳಿಗೊಮ್ಮೆ ಒಂದು ಗ್ಲಾಸ್‌ ಅಥವಾ ಅದಕ್ಕಿಂತ ಹೆಚ್ಚಿನ ನೀರು ಕುಡಿಬೇಕು

Heat wave

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

karnataka Weather : ದೂರ ಸರಿದ ಮಳೆ; ಬೆಂಗಳೂರಲ್ಲಿ 39ರ ಗಡಿದಾಟಲಿದೆ ಗರಿಷ್ಠ ಉಷ್ಣಾಂಶ! 15 ಜಿಲ್ಲೆಗಳಿಗೆ ಅಲರ್ಟ್‌

Temperature Warning: ಈ ವರ್ಷ ಬೆಂಗಳೂರು ತನ್ನೆಲ್ಲ ಹಳೆಯ ದಾಖಲೆಗಳನ್ನು ಮುರಿಯುತ್ತಾ ಬಂದಿದ್ದು, ಗರಿಷ್ಠ ತಾಪಮಾನವು ಮತ್ತಷ್ಟು ದುಪ್ಪಟ್ಟು ಆಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಈ ನಡುವೆ 15 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌ (Heat Wave alert) ನೀಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯು ದೂರ ಸರಿದಿದ್ದು, ಒಣಹವೆ (Karnataka Weather forecast) ಆವರಿಸಿದೆ. ರಾಜಧಾನಿ ಬೆಂಗಳೂರಲ್ಲಿ (temperature rising) ದಾಖಲೆಯ ಪ್ರಮಾಣದಲ್ಲಿ ಗರಿಷ್ಠ ಉಷ್ಣಾಂಶ ಏರಿಕೆ ಆಗುತ್ತಿದೆ. ಮಾರ್ಚ್‌ನಲ್ಲಿ ಹಳೆಯ ಎಲ್ಲ ದಾಖಲೆ ಮುರಿದಿದ್ದ ಬೆಂಗಳೂರಲ್ಲಿ ಇದೀಗ ಏಪ್ರಿಲ್‌ 28ರಂದು ಗರಿಷ್ಠ ಉಷ್ಣಾಂಶವು 39 ಡಿ.ಸೆಗೆ ಏರಿಕೆ ಆಗಲಿದೆ ಎಂದು ಹವಾಮಾನ ಇಲಾಖೆ (Bengaluru weather) ಮಾಹಿತಿ ನೀಡಿದೆ. ತಾಪಮಾನ (Bengaluru temperature) ಏರಿಕೆಯಿಂದ ಜನರು ಪರಿತಪಿಸುವಂತಾಗಿದೆ

ಕೂಲ್‌ ಸಿಟಿ (Cool city Bengaluru) ಎಂದು ಕರೆಸಿಕೊಳ್ಳುವ ಬೆಂಗಳೂರು ಹಾಟ್‌ ಸಿಟಿಯಾಗಿ (Bengaluru temperature) ಬದಲಾಗುತ್ತಿದೆ. ಬೆಂಗಳೂರಿನಲ್ಲೀಗ ದಾಖಲೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ (Temperature Warning) ಸಿಟಿ ಜನರು ತತ್ತರಿಸಿ ಹೋಗಿದ್ದಾರೆ. ಬಿಸಿಲನಾಡು ಎಂದು ಕರೆಸಿಕೊಳ್ಳುವ ಉತ್ತರ ಒಳನಾಡಿನ ಜಿಲ್ಲೆಗಳಿಗೂ ರಾಜಧಾನಿ ಬೆಂಗಳೂರು ಅಕ್ಷರಶಃ ಸೆಡ್ಡು ಹೊಡೆಯುತ್ತಿದೆ.

ಮಾರ್ಚ್‌ ಬಳಿಕ ಏಪ್ರಿಲ್‌ ಮೊದಲ ವಾರದಲ್ಲೇ ಬೆಂಗಳೂರಿನಲ್ಲಿ ದಾಖಲೆಯ ಮಟ್ಟದಲ್ಲಿ ಗರಿಷ್ಠ ತಾಪಮಾನವು (Bengaluru heatwave) ದಾಖಲಾಗಿತ್ತು. ಇದೀಗ ಏಪ್ರಿಲ್‌ ಅಂತ್ಯದಲ್ಲೂ ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಹಗಲಿನಲ್ಲಿ ತಾಪಮಾನ 38 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಕಂಡಿದೆ. ಇದರಿಂದಾಗಿ ಬಿಸಿಲ ಬೇಗೆಗೆ ತೇವಾಂಶದ ಕೊರತೆಯಿಂದಾಗಿ ಒಣ ಹವೆ (Bengaluru heat) ಮುಂದುವರಿದಿದೆ. ಇಷ್ಟೊಂದು ತಾಪಮಾನದಲ್ಲಿ ಜನರು ತಿರುಗಾಡಿದರೆ ಖಂಡಿತವಾಗಿಯೂ ಅನಾರೋಗ್ಯಕ್ಕೆ ತುತ್ತಾಗಲಿದ್ದಾರೆ.

ಇದನ್ನೂ ಓದಿ: Home Remedy For Cracked Heels: ಒಡೆದ ಹಿಮ್ಮಡಿಗಳಿಗೆ ಕರ್ಪೂರದ ಎಣ್ಣೆ ಪರಿಣಾಮಕಾರಿ

ಹೀಟ್‌ ವೇವ್‌ ಶಾಕ್‌

ರಾಜ್ಯದಲ್ಲಿ ಏ.28ರಂದು ಒಣಹವೆ ಮುಂದುವರಿಯಲಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹೀಟ್‌ ವೇವ್‌ ಹೆಚ್ಚಾಗಲಿದೆ. ಹೀಗಾಗಿ ಈ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಮುನ್ನೆಚ್ಚರಿಕೆಯನ್ನು ವಹಿಸುವಂತೆ ಸೂಚಿಸಲಾಗಿದೆ. ಜತೆಗೆ ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಇನ್ನೂ ಶುಕ್ರವಾರದಂದು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಇತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 42.2 ಡಿ.ಸೆ ದಾಖಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಒಳನಾಡಿನಲ್ಲಿ ವಿಪರೀತ ಬಿಸಿಲು; ಕರಾವಳಿಯಲ್ಲಿ ಬಿಸಿಗಾಳಿ, ಮಲೆನಾಡಿನಲ್ಲಿ ಗುಡುಗು ಮಳೆ

Karnataka Weather Forecast : ಉತ್ತರ ಕರ್ನಾಟಕದಲ್ಲಿ ತಾಪಮಾನ ಏರಿಕೆಯಿಂದ ಜನರು ತತ್ತರಿಸಿ ಹೋಗಲಿದ್ದಾರೆ. ಕರಾವಳಿಯಲ್ಲಿ ಬಿಸಿಗಾಳಿಯು (Hot weather) ಬೀಸಲಿದ್ದು, ದಕ್ಷಿಣ ಒಳನಾಡಲ್ಲಿ ಶುಷ್ಕ ವಾತಾವರಣ (Dry Weather) ಇರಲಿದೆ. ಮಲೆನಾಡಿನ ಕೆಲವಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Rain News) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ವಾರಾಂತ್ಯದಲ್ಲಿ ರಾಜ್ಯಾದ್ಯಂತ ಹಗುರದಿಂದ ಕೂಡಿದ ಮಳೆಯಾಗುವ (Rain news) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಮಲೆನಾಡಿನ ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದರೆ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲ ಭಾಗಗಳಲ್ಲಿ ಶುಷ್ಕ ಹವಾಮಾನ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ತಿಂಗಳಾಂತ್ಯದವರೆಗೂ ತಾಪಮಾನ ಹೆಚ್ಚಳ

ಗರಿಷ್ಠ ತಾಪಮಾನವು ಏಪ್ರಿಲ್‌ 30ರವರೆಗೆ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ಮಧ್ಯಾಹ್ನ 12ರಿಂದ 3ಗಂಟೆವರೆಗೆ ಹೊರಾಂಗಣ ಚಟುವಟಿಕೆಗಳಿಂದ ದೂರ ಇರುವಂತೆ ತಜ್ಞರು ಸೂಚಿಸಿದ್ದಾರೆ. ಇನ್ನೂ ಕರಾವಳಿ ಕರ್ನಾಟಕದಲ್ಲಿ ವಾತಾವರಣವು ಬಿಸಿಯಾಗಿರಲಿದೆ. ಕೆಲವೊಮ್ಮೆ ಬಿಸಿ ಗಾಳಿಯೂ ಬೀಸಲಿದೆ.

ಯೆಲ್ಲೋ ಅಲರ್ಟ್‌

ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ತಾಪಮಾನ ವಿಪರೀತ ಏರಿಕೆ ಆಗಲಿದೆ. ಹೀಗಾಗಿ ಈ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Flower Crown Trend: ಬಣ್ಣಬಣ್ಣದ ಫಂಕಿ ಫ್ಲವರ್‌ ಕ್ರೌನ್‌ಗೆ ಯುವತಿಯರು ಫಿದಾ

ಸೆಕೆಗಾಲದಲ್ಲಿ ಟ್ರೆಂಡಿಯಾದ 3 ಮಿಕ್ಸ್‌ ಮ್ಯಾಚ್‌ ಹೇರ್‌ಸ್ಟೈಲ್ಸ್!

ಈ ಬಾರಿಯ ಸಮ್ಮರ್‌ ಸೀಸನ್‌ನಲ್ಲಿ ಸೆಕೆಯಾಗದ 3 ಬಗೆಯ ಸಮ್ಮರ್‌ ಮಿಕ್ಸ್‌ ಮ್ಯಾಚ್‌ ಹೇರ್‌ಸ್ಟೈಲ್‌ಗಳು (Summer Hairstyles) ಟ್ರೆಂಡಿಯಾಗಿವೆ. ತಕ್ಷಣಕ್ಕೆ ನೋಡಲು ಹಳೆಯ ಹೇರ್‌ಸ್ಟೈಲ್‌ ಎಂದೆನಿಸಿದರೂ ಅವುಗಳ ಜೊತೆಗೆ ನಾನಾ ಬಗೆಯ ವಿನ್ಯಾಸಗಳು ಸೇರಿಕೊಂಡಿವೆ.

Summer Hairstyles

ಸೈಡಿಗೆ ಸರಿದ ಫ್ರೀ ಹೇರ್‌ಸ್ಟೈಲ್‌ಗಳು

“ಈ ಸಮ್ಮರ್‌ನಲ್ಲಿ ಫ್ರೀ ಹೇರ್‌ಸ್ಟೈಲ್‌ಗಳು ಸೈಡಿಗೆ ಸರಿದಿವೆ. ಕೇವಲ ಹೇರ್‌ ಕಂಡೀಷನ್‌ ಕೋಣೆಗಳಲ್ಲಿ ಹಾಗೂ ಇನ್‌ಡೋರ್‌ ಆವರಣದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಮಾತ್ರ ಈ ಹೇರ್‌ ಸ್ಟೈಲ್‌ಗಳಲ್ಲಿ ಹೆಣ್ಣುಮಕ್ಕಳು ಕಾಣಸಿಗುತ್ತಿದ್ದಾರೆ. ಇನ್ನು ಹೊರಾಂಗಣದಲ್ಲಿ ಸೆಕೆಯಾಗದ ಹಾಗೂ ಆರಾಮ ಎಂದೆನಿಸುವ ಕಂಫರ್ಟಬಲ್‌ ಕೂದಲ ವಿನ್ಯಾಸಗಳು ಚಾಲ್ತಿಯಲ್ಲಿವೆ. ಇದು ಕೇವಲ ಮಹಿಳೆಯರಿಗೆ ಮಾತ್ರ ಸೀಮಿತವಾಗಿಲ್ಲ! ಟೀನೇಜ್‌ ಹಾಗೂ ಯುವತಿಯರಲ್ಲೂ ಕಾಮನ್‌ ಆಗಿವೆ” ಎನ್ನುತ್ತಾರೆ ಹೇರ್‌ಸ್ಟೈಲಿಸ್ಟ್‌ ನಮಿತಾ. ಅವರ ಪ್ರಕಾರ, ಶಾರ್ಟ್‌ ಹೇರ್‌ಸ್ಟೈಲ್‌ಗಳು ಈ ಸೀಸನ್‌ನಲ್ಲಿ ತೀರಾ ಕಾಮನ್‌ ಆಗಿವೆ ಎನ್ನುತ್ತಾರೆ.

ಹೈ ಬನ್‌ ಹೇರ್‌ಸ್ಟೈಲ್‌

ನೆತ್ತಿಯ ಮೇಲೆ ಹಾಕುವಂತಹ ಹೈ ಬನ್‌ ಹೇರ್‌ಸ್ಟೈಲ್‌ಗಳು ಇದೀಗ ಬಿಸಿಲಿನ ಝಳದಲ್ಲಿ ಹೈಲೈಟ್‌ ಆಗುತ್ತಿವೆ. ಕೆಳಗಿನಿಂದ ಮೇಲಿನವರೆಗೂ ಕೂದಲನ್ನು ಕಟ್ಟಿ ಹಾಕುವಂತಹ ವಿನ್ಯಾಸದಲ್ಲಿ ಹಾಗೂ ನೆತ್ತಿಯ ಮೇಲೆ ಸುತ್ತಿ ಅಥವಾ ಹರಡಿದಂತೆ ಕಾಣುವ ರೀತಿಯಲ್ಲಿ ಹಾಕುವ ಹೇರ್‌ಬನ್‌ಗಳು ಈ ಸೀಸನ್‌ನಲ್ಲಿ ಟ್ರೆಂಡಿಯಾಗಿವೆ. ಇವು ನೋಡಲು ಕೂಡ ಆಕರ್ಷಕವಾಗಿ ಕಾಣಿಸುತ್ತವೆ. ಜೊತೆಗೆ ಸೆಕೆಯಾಗುವುದಿಲ್ಲ!

Summer Hairstyles

ಪೋನಿಟೈಲ್‌ ವಿತ್‌ ಫ್ರಿಂಝ್‌ ಹೇರ್‌ಸ್ಟೈಲ್‌

ಮುಂಭಾಗದಲ್ಲಿ ಹುಡುಗಿಯರ ಹಣೆಯನ್ನು ಕವರ್‌ ಮಾಡುವ ಫ್ರಿಂಝ್‌ ಹೇರ್‌ಸ್ಟೈಲ್‌ ಹಿಂದೆ ಸಿಂಪಲ್‌ ಪೋನಿಟೈಲ್‌ ಕೂಡ ಈ ಸೀಸನ್‌ನಲ್ಲಿ ಮರಳಿದೆ. ನೋಡಲು ಸಿಂಪಲ್ಲಾಗಿ ಕಾಣಿಸುವ ಈ ಹೇರ್‌ಸ್ಟೈಲ್‌ ನೋಡಿದಾಗ ಖಾಲಿ ಎಂದೆನಿಸುವುದಿಲ್ಲ. ಬದಲಿಗೆ ಎರಡು ಹೇರ್‌ಸ್ಟೈಲ್‌ ಕಾಂಬಿನೇಷನ್‌ ಇದಾಗಿರುತ್ತದೆ.

ಹನ್‌ ಹೇರ್‌ಸ್ಟೈಲ್‌

ಅರ್ಧ ಫ್ರೀ ಹೇರ್‌ಸ್ಟೈಲ್‌ ಹಾಗೂ ಅರ್ಧ ಕಟ್ಟಿದ ಬನ್‌ ಹೇರ್‌ಸ್ಟೈಲ್‌ ಕಾಂಬೀನೇಷನ್‌ ಈ ಸೀಸನ್‌ನ ಹನ್‌ ಹೇರ್‌ಸ್ಟೈಲ್‌ನಲ್ಲಿ ಸೇರಿದೆ. ಇವೆರಡರೊಳಗೆ ಹಣೆ ಮುಂಭಾಗದ ಫಿಂಝ್‌ ಹೇರ್‌ಸ್ಟೈಲ್‌ ಮಿಕ್ಸ್‌ ಆಗಿದೆ. ಇವೆಲ್ಲದರ ಸಮಾಗಮ ಫ್ರಿಂಝ್‌ ಹನ್‌ ಹೇರ್‌ಸ್ಟೈಲ್‌. ಇದು ಈ ಸೀಸನ್‌ನಲ್ಲಿ ಇದು ಹುಡುಗಿಯರ ಫೇವರೇಟ್‌ ಲಿಸ್ಟ್‌ನಲ್ಲಿದೆ.

Summer Hairstyles

ಬೇಸಿಗೆ ಹೇರ್‌ಸ್ಟೈಲ್‌ ಫಾಲೋ ಮಾಡಲು ಹೀಗೆ ಮಾಡಿ

  • ಹೊರಗಡೆ ಹೋಗುವಾಗ ಮೇಲಿನ ಹೇರ್‌ಸ್ಟೈಲ್‌ಗಳನ್ನು ಮಾಡಿ.
  • ಮುಖದ ಆಕಾರಕ್ಕೆ ತಕ್ಕಂತೆ ಇವನ್ನು ಆಯ್ಕೆ ಮಾಡಿ.
  • ಫ್ರಿಂಝ್‌ ಮಾಡದಿದ್ದವರೂ ಸೈಡ್‌ಲಾಕ್ಸ್‌ ಕೂದಲ ವಿನ್ಯಾಸ ಮಾಡಬಹುದು.
  • ತೀರಾ ಟೈಟಾಗಿ ಕಟ್ಟಬೇಡಿ. ತಲೆ ನೋವಾಗಬಹುದು.
  • ಮೇಲಿನ ಹೇರ್‌ಸ್ಟೈಲ್ಸ್‌ ನಿಮಗೆ ಸ್ಲಿಮ್‌ ಲುಕ್‌ ನೀಡಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Priyanka Gandhi Rahul Gandhi
ದೇಶ13 mins ago

Lok Sabha Election 2024: ಅಮೇಥಿ, ರಾಯ್‌ಬರೇಲಿಗೆ ರಾಹುಲ್‌, ಪ್ರಿಯಾಂಕಾ ಫಿಕ್ಸ್‌? ಖರ್ಗೆ ನಿರ್ಧಾರ ಫೈನಲ್‌

Ranbir Kapoor stunned as photographer abuses in front of him
ಬಾಲಿವುಡ್20 mins ago

Ranbir Kapoor: ರಣಬೀರ್​ ಕಪೂರ್‌ಗೆ​ ಅಶ್ಲೀಲವಾಗಿ ಬೈಯ್ದ್ರಾ ಫೋಟೋಗ್ರಾಫರ್‌? ವಿಡಿಯೊದಲ್ಲಿ ಏನಿದೆ?

pralhad Joshi
ಪ್ರಮುಖ ಸುದ್ದಿ21 mins ago

Pralhad Joshi : ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್​ನಿಂದ ನಾಟಕ; ಪ್ರಲ್ಹಾದ್ ಜೋಶಿ ಲೇವಡಿ

If Congress comes to power all your assets will belong to Government says PM Narendra Modi
Lok Sabha Election 202422 mins ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202452 mins ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Gold Rate
ಪ್ರಮುಖ ಸುದ್ದಿ1 hour ago

Gold Rate : ಏರುಗತಿಯಲ್ಲಿದೆ ಬಂಗಾರದ ಬೆಲೆ; ಇನ್ನೂ ಏರುವ ಮೊದಲು ಖರೀದಿ ಸೂಕ್ತ

ದೇಶ1 hour ago

School Teacher: ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ ಶಿಕ್ಷಕಿ ಪುಂಡಾಟ; ನೆರೆಮನೆಯವರ ಮೇಲೂ ಹಲ್ಲೆ

Varalaxmi Sarathkumar negative comments on fiance
ಕಾಲಿವುಡ್1 hour ago

Varalaxmi Sarathkumar: ನನ್ನ ತಂದೆ ಎರಡು ಮದುವೆಯಾದರು, ಹಾಗೇ ನಾನೂ ಕೂಡ ಎಂದ ನಟ ಶರತ್‌ಕುಮಾರ್ ಪುತ್ರಿ!

Viral Video
ವೈರಲ್ ನ್ಯೂಸ್1 hour ago

Viral Video: ವಧುವಿಗೆ ಹೂಮಾಲೆ ಹಾಕಲು ವರ ಮಾಡಿರುವ ಕಿತಾಪತಿ ಏನು ನೋಡಿ!

Outdoor Exercise
ಆರೋಗ್ಯ1 hour ago

Outdoor Exercise: ಹೊರಾಂಗಣ ವ್ಯಾಯಾಮ ಖಿನ್ನತೆಯನ್ನು ದೂರ ಮಾಡುವುದೇ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

If Congress comes to power all your assets will belong to Government says PM Narendra Modi
Lok Sabha Election 202422 mins ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202452 mins ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ4 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ8 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202420 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

ಟ್ರೆಂಡಿಂಗ್‌