Shivamogga News: ಪ್ರತಿಭಾನ್ವಿತರಿಗೆ ಪ್ರೋತ್ಸಾಹ, ಅವಕಾಶಗಳಿಲ್ಲ: ನಿರ್ಭಯಾನಂದ ಸ್ವಾಮೀಜಿ Vistara News

ಶಿವಮೊಗ್ಗ

Shivamogga News: ಪ್ರತಿಭಾನ್ವಿತರಿಗೆ ಪ್ರೋತ್ಸಾಹ, ಅವಕಾಶಗಳಿಲ್ಲ: ನಿರ್ಭಯಾನಂದ ಸ್ವಾಮೀಜಿ

Shivamogga News: ರಿಪ್ಪನ್‌ಪೇಟೆ ಪಟ್ಟಣದ ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಸನ್ಮಾನ ಕಾರ್ಯಕ್ರಮ ಜರುಗಿತು.

VISTARANEWS.COM


on

felicitation programme for athletes at Ripponpet 
ರಿಪ್ಪನ್‌ಪೇಟೆ ಪಟ್ಟಣದ ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯಲ್ಲಿ, ರಾಜ್ಯಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳನ್ನು ಗೌರವಿಸಿ, ಸನ್ಮಾನಿಸಲಾಯಿತು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಿಪ್ಪನ್‌ಪೇಟೆ: ಭಾರತದಲ್ಲಿ ಪ್ರತಿಭಾನ್ವಿತ ಸಾಧಕರಿದ್ದಾರೆ. ಆದರೆ ಅವರಿಗೆ ಪ್ರೋತ್ಸಾಹ-ಅವಕಾಶಗಳಿಲ್ಲ, ನಮ್ಮಲ್ಲಿ ಎಷ್ಟೇ ಸಂಶೋಧನೆಗಳಾದರೂ (Research) ಅವು ಸದ್ಬಳಕೆಯಾಗಿದ್ದು ವಿದೇಶಗಳಲ್ಲಿ ಹೀಗಾಗಿ ಆ ದೇಶಗಳು ಮುಂದುವರಿದಿವೆ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

ಪಟ್ಟಣದ ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿಜ್ಞಾನ ಮತ್ತು ತಾಂತ್ರಿಕತೆ ಇಂದು ಬಹಳಷ್ಟು ವಿಸ್ತಾರಗೊಂಡಿದೆ. ಅದ್ಭುತ ಸಾಧನೆಗಳಾಗಿವೆ. ವಿಜ್ಞಾನವನ್ನು ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಶ್ರದ್ಧೆ ಮತ್ತು ನಿಷ್ಠೆಯಿಂದ ಏಕಾಗ್ರತೆಯಿಂದ ಅಧ್ಯಯನ ಮಾಡುವ ಮೂಲಕ ಮುಂದೊಂದು ದಿನ ದೊಡ್ಡ ವಿಜ್ಞಾನಿಯಾಗಿ ಹೊರಹೊಮ್ಮಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Vastu Tips: ಸಂಪತ್ತು, ಆರೋಗ್ಯ ವೃದ್ಧಿಗೆ ಇಲ್ಲಿದೆ ಸರಳ ಮಾರ್ಗ

ಬೆಂಗಳೂರು ಯಲಹಂಕ ರಾಮಕೃಷ್ಣ ವೇದಾಂತ ಆಶ್ರಮದ ಆಭಯಾನಂದಜಿ ಮಹಾರಾಜ್, ಹೊಸನಗರ ತಾಲೂಕಿನ ಸುಳಗೋಡು ಶ್ರೀರಾಮಕೃಷ್ಣ ಯೋಗಪೀಠದ ಶ್ರೀಸ್ವಾಮಿ ಪ್ರಕಾಶನಂದಜೀ ಮಹಾರಾಜ್ ನೇತೃತ್ವ ವಹಿಸಿದ್ದರು.

ಶ್ರೀ ಶಾರದ ರಾಮಕೃಷ್ಣ ವಿದ್ಯಾಲಯದ ಸಂಸ್ಥಾಪಕ ಅಧ್ಯಕ್ಷ ದೇವರಾಜ್ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: ‘ಫೆಮಾ’ ಉಲ್ಲಂಘಿಸಿದ ಬೈಜುಸ್‌ಗೆ 9000 ಕೋಟಿ ರೂ. ಪಾವತಿಸಲು ಇಡಿ ನೋಟಿಸ್!

ಕು.ನವ್ಯ ಪ್ರಾರ್ಥಿಸಿದರು, ಶಾರದ ರಾಮಕೃಷ್ಣ ವಿದ್ಯಾಲಯದ ಸಂಸ್ಥಾಪಕ ಆಧ್ಯಕ್ಷ ಡಿ.ಎಂ. ದೇವರಾಜ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಗುರುರಾಜ ವಂದಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಉಡುಪಿ

Karnataka Weather : ಮತ್ತೆ ಬದಲಾಯ್ತು ವಾತಾವರಣ; ಮಳೆ ಹೋಯ್ತು, ಬಿಸಿಲು ಬಂತು!

Karnataka Weather Forecast : ಮಿಚುಂಗ್‌ ಸೈಕ್ಲೋನ್‌ ಪ್ರಭಾವದಿಂದಾಗಿ ಕಳೆದೊಂದು ವಾರದಿಂದ ರಾಜ್ಯದ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇತ್ತು. ಇದೀಗ ಪ್ರಭಾವ ಕಡಿಮೆ ಆಗಿದ್ದು, ರಾಜ್ಯಾದ್ಯಂತ ಇನ್ನೆರಡು ದಿನಗಳು ಶುಷ್ಕ ವಾತಾವರಣ (Dry weather) ಇರಲಿದ್ದು, ಮಳೆಗೆ (Rain News) ಬ್ರೇಕ್‌ ಬಿದ್ದಿದೆ.

VISTARANEWS.COM


on

By

dry weather karnataka weather Forecast
Koo

ಬೆಂಗಳೂರು: ರಾಜ್ಯದ ಹಲವೆಡೆ ಮತ್ತೆ ವಾತಾವರಣ ಬದಲಾಗಿದೆ. ಮಳೆಗೆ ಹೋಗಿ ಮತ್ತೆ ಬಿಸಿಲು ಆವರಿಸುತ್ತಿದೆ. ಇನ್ನೆರಡು ದಿನಗಳು ರಾಜ್ಯದಲ್ಲಿ ಒಣಹವೆ (Dry weather) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಡಿ.7-8ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಗೆ ಯಾವುದೇ ಮಳೆ ಮುನ್ಸೂಚನೆಯಿಲ್ಲ. ಬದಲಿಗೆ ಒಣಹವೆಯೇ ಮೇಲುಗೈ ಸಾಧಿಸಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Winter Cardigan Fashion: ಚಳಿಗಾಲದಲ್ಲಿ ಸ್ಟೈಲಿಶ್‌ ಆಗಿ ಕಾಣಿಸುವ ಕಾರ್ಡಿಗಾನ್‌ ಫ್ಯಾಷನ್‌

ಹಗುರ ಮಳೆಯಷ್ಟೇ!

ಇನ್ನೂ ದಕ್ಷಿಣ ಒಳನಾಡಿನ ಚಾಮರಾಜನಗರದಲ್ಲಿ ಮಾತ್ರ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ ಸೇರಿ ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಲ್ಲಿ ಒಣಹವೆ ಇರಲಿದೆ.

ಇತ್ತ ಮಲೆನಾಡಿನ ಹಾಸನ, ಕೊಡಗು, ಶಿವಮೊಗ್ಗ,ಚಿಕ್ಕಮಗಳೂರಲ್ಲೂ ಮಳೆ ಮುನ್ಸೂಚನೆ ಇಲ್ಲ. ಬಿಸಿಲಿನಿಂದ ಕೂಡಿರಲಿದೆ. ಇನ್ನು ಬೆಂಗಳೂರಲ್ಲಿ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 29 ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 28 ಡಿ.ಸೆ -19 ಡಿ.ಸೆ
ಮಂಗಳೂರು: 33 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 18 ಡಿ.ಸೆ
ಗದಗ: 30 ಡಿ.ಸೆ – 18 ಡಿ.ಸೆ
ಹೊನ್ನಾವರ: 34 ಡಿ.ಸೆ- 23 ಡಿ.ಸೆ
ಕಲಬುರಗಿ: 26 ಡಿ.ಸೆ – 21 ಡಿ.ಸೆ
ಬೆಳಗಾವಿ: 29 ಡಿ.ಸೆ – 17 ಡಿ.ಸೆ
ಕಾರವಾರ: 35 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಶಿವಮೊಗ್ಗ

Shivamogga News: ಬೆಟ್ಟದಕೂರ್ಲಿಯಲ್ಲಿ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬ

Shivamogga News: ಸೊರಬ ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಗ್ರಾಮ ಸಮಿತಿಯಿಂದ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

VISTARANEWS.COM


on

Shivamogga News Hori festival in Bettadakoorli village
ಸೊರಬ ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದಲ್ಲಿ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬ ಜರುಗಿತು.
Koo

ಸೊರಬ: ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಗ್ರಾಮ ಸಮಿತಿಯಿಂದ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬವನ್ನು (Bull Bullying Festival) ವಿಜೃಂಭಣೆಯಿಂದ ಆಚರಿಸಲಾಯಿತು.

ತಾಲೂಕು ಸೇರಿದಂತೆ ನೆರೆಯ ಜಿಲ್ಲೆಗಳಿಂದ ಸುಮಾರು 200 ಕ್ಕೂ ಅಧಿಕ ಹೋರಿಗಳು ಆಗಮಿಸಿದ್ದವು. ಹೋರಿಗಳು ಮಿಂಚಿನ ಓಟ ಮಾಡಿ ನೋಡುಗಳ ಗಮನ ಸೆಳೆದವು. ಅಖಾಡದಲ್ಲಿ ಹೋರಿಗಳು ಓಡುವುದನ್ನು ನೋಡಲು ನೆರೆಯ ಗ್ರಾಮಗಳು ಸೇರಿದಂತೆ ನೆರೆಯ ತಾಲೂಕು ಹಾಗೂ ಜಿಲ್ಲೆಗಳಿಂದ ಸಾವಿರಾರು ಹೋರಿ ಅಭಿಮಾನಿಗಳು ಆಗಮಿಸಿದ್ದರು. ಅಖಾಡದಲ್ಲಿ ಪೈಲ್ವಾನರ ಕೈಗೆ ಸಿಗದಂತೆ ಹೋರಿಗಳು ಓಡುವ ದೃಶ್ಯ ರೋಮಾಂಚನಗೊಳಿಸಿತು. ಹೋರಿಗಳ ಮಾಲೀಕರು ತಮ್ಮ ನೆಚ್ಚಿನ ಹೋರಿಗಳನ್ನು ಬಲೂನು, ಹೂವು, ಕೊಬ್ಬರಿ ಹಾರ ಕಟ್ಟಿ ಶೃಂಗರಿಸಿದ್ದರು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ನಾಳೆ- ನಾಡಿದ್ದು ಮಳೆಗೆ ಬ್ರೇಕ್‌!

ಅಖಾಡದಲ್ಲಿ ಯಮನೂರು ಕುರುಕ್ಷೇತ್ರ, ಕುಬಟೂರು ಬ್ರಹ್ಮ, ಆನವಟ್ಟಿ ಅಭಿಮನ್ಯು, ಆನವಟ್ಟಿ ಪವರ್ ಸ್ಟಾರ್, ಬ್ಯಾತನಾಳ ಕರ್ನಾಟಕ ಎಕ್ಸ್‌ಪ್ರೆಸ್, ಮಲೆನಾಡು ಚಿನ್ನ, ಶಿವಮೊಗ್ಗದ ಶಿವಲಿಂಗ, ಅಂಬಾರಗೊಪ್ಪದ ಯಜಮಾನ, ಸಮನವಳ್ಳಿ ಒಡೆಯ, ಬೆಟ್ಟದಕೂರ್ಲಿಯ ಲಂಕಾಸುರ, ಬೆಟ್ಟದಹುಲಿ, ಸಾಹುಕಾರ, ವೀರಭದ್ರ, ವಿಕ್ರಂ, ಸಾರಂಗ, ಅಪ್ಪಾಜಿ, ಭೀಷ್ಮ, ಏಳುಕೋಟಿ ಸೇರಿದಂತೆ ವಿವಿಧ ಹೆಸರಿನ ಹೋರಿಗಳು ಓಡಿದವು.

ಇದನ್ನೂ ಓದಿ: Belagavi Winter Session: ಕೊಬ್ಬರಿಗೆ 1500 ರೂ. ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್ ಘೋಷಣೆ

ಹೋರಿ ಹಬ್ಬ ಆಯೋಜಿಸಿದ್ದ ಬೆಟ್ಟದ ಕೂರ್ಲಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಗ್ರಾಮ ಸಮಿತಿಯವರು ಅಖಾಡದಲ್ಲಿ ಎರಡು ಬದಿಯಲ್ಲಿ ಸುರಕ್ಷತಾ ಕ್ರಮ ಕೈಗೊಂಡು, ಅಖಾಡದಲ್ಲಿ ಕ್ರಮವಾಗಿ ಒಂದೊಂದೆ ಹೋರಿಗಳನ್ನು ಓಡಿಸಿದರು. ಅಖಾಡದಲ್ಲಿ ಉತ್ತಮವಾಗಿ ಓಡಿದ ಹೋರಿಗಳು ಹಾಗೂ ಬಲ ಪ್ರದರ್ಶನ ತೋರಿದ ಯುವಕರನ್ನು ಗುರುತಿಸಲಾಯಿತು.

Continue Reading

ಕರ್ನಾಟಕ

karnataka Weather :‌ ಇಂದು-ನಾಳೆ ಭಾಗಶಃ ಮೋಡ ಕವಿದ ವಾತಾವರಣ; ಇಲ್ಲೆಲ್ಲ ಮಳೆ ಸೂಚನೆ

Rain News : ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ ಮಳೆಯಾಗುವ (karnataka Weather Forecast) ಸಾಧ್ಯತೆ ಇದೆ. ಕರಾವಳಿಯಲ್ಲಿ ಮಳೆಯು ಮಾಯವಾಗಿದ್ದು, ಶುಷ್ಕ ವಾತಾವರಣವು (Dry Weather) ಮೇಲುಗೈ ಸಾಧಿಸಲಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಮಿಚುಂಗ್‌ ಸೈಕ್ಲೋನ್‌ ಎಫೆಕ್ಟ್‌ನಿಂದಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳು ಸೂರ್ಯ ಮರೆಯಾಗಿ, ಮೋಡ ಕವಿದ ವಾತಾವರಣ (karnataka Weather Forecast) ಇರಲಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಮಲೆನಾಡು ಹಾಗೂ ಕರಾವಳಿಯಲ್ಲಿ ಒಣ ಹವೆ ಇರಲಿದೆ.

ರಾಜಧಾನಿ ಬೆಂಗಳೂರಲ್ಲಿ ಥಂಡಿ ಗಾಳಿಯೊಂದಿಗೆ ಮೋಡ ಕವಿದ ವಾತಾವರಣ ಇರಲಿದೆ. ಆಗಾಗ ಸೂರ್ಯನ ದರ್ಶನ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಸಣ್ಣ ಪ್ರಮಾಣದಲ್ಲಿ ಮಳೆ ಜಿನುಗಲಿದೆ. ಗರಿಷ್ಠ ಉಷ್ಣಾಂಶ 26 ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Rohit Sharma : ಫಾರಿನ್ ಟೂರ್​ ಮುಗಿಸಿ ಮರಳಿದ ರೋಹಿತ್​ ಶರ್ಮಾ ಫ್ಯಾಮಿಲಿ

ಇಲ್ಲೆಲ್ಲ ಚದುರಿದ ಮಳೆ

ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು ಹಾಗೂ ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕಲಬುರಗಿ, ಬೆಳಗಾವಿ, ಬೀದರ್ ಮತ್ತು ಗದಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರವಾದ ಮಳೆ ಸುರಿಯಲಿದೆ. ಉಳಿದಂತೆ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.

ಮಲೆನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದ್ದರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲೂ ಸೂರ್ಯ ಕಣ್ಮರೆಯಾಗಲಿದ್ದಾನೆ. ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 25 ಡಿ.ಸೆ -19 ಡಿ.ಸೆ
ಮಂಗಳೂರು: 33 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 28 ಡಿ.ಸೆ – 18 ಡಿ.ಸೆ
ಗದಗ: 30 ಡಿ.ಸೆ – 18 ಡಿ.ಸೆ
ಹೊನ್ನಾವರ: 35 ಡಿ.ಸೆ- 23 ಡಿ.ಸೆ
ಕಲಬುರಗಿ: 33 ಡಿ.ಸೆ – 21 ಡಿ.ಸೆ
ಬೆಳಗಾವಿ: 29 ಡಿ.ಸೆ – 17 ಡಿ.ಸೆ
ಕಾರವಾರ: 35 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಶಿವಮೊಗ್ಗ

Shivamogga News: ಪ್ರಶಸ್ತಿ, ಸನ್ಮಾನಗಳಿಂದ ಸಮಾಜಮುಖಿ ಕಾರ್ಯಕ್ಕೆ ಪ್ರೇರಣೆ: ರವಿ ಹೆಗಡೆ

Shivamogga News: ಸೊರಬ ಪಟ್ಟಣದ ಡಾ. ರಾಜ್ ರಂಗಮಂದಿರದಲ್ಲಿ ಸುರಭಿ ಸೇವಾ ಚಾರಿಟೆಬಲ್ ಟ್ರಸ್ಟ್ ವತಿಯಿಂದ ರಾಜ್ಯ ಸುರಭಿಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸುರಭಿವಾಣಿ ಪತ್ರಿಕೆಯ ದಶಮಾನೋತ್ಸವ ಕಾರ್ಯಕ್ರಮ ಜರುಗಿತು.

VISTARANEWS.COM


on

Senior journalist Ravi Hegde spoke at the 10th anniversary program of Surabhivani newspaper in Soraba
ಸೊರಬ ಪಟ್ಟಣದ ಡಾ. ರಾಜ್ ರಂಗಮಂದಿರದಲ್ಲಿ ಸುರಭಿ ಸೇವಾ ಚಾರಿಟೆಬಲ್ ಟ್ರಸ್ಟ್ ವತಿಯಿಂದ ನಡೆದ ಸುರಭಿವಾಣಿ ಪತ್ರಿಕೆಯ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ರವಿ ಹೆಗಡೆ ಮಾತನಾಡಿದರು.
Koo

ಸೊರಬ: ಸಮಾಜಮುಖಿ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸಿ, ಸಮಾಜ ತಿದ್ದುವ ಕೆಲಸದಲ್ಲಿ ನಿರತರಾಗುವಂತೆ ಪ್ರೇರಣೆ ನೀಡುವ ಕೆಲಸವನ್ನು ಪ್ರಶಸ್ತಿ (Award), ಸನ್ಮಾನಗಳು ಮಾಡುತ್ತವೆ ಎಂದು ಹಿರಿಯ ಪತ್ರಕರ್ತ ರವಿ ಹೆಗಡೆ ಹೇಳಿದರು.

ಪಟ್ಟಣದ ಡಾ. ರಾಜ್ ರಂಗಮಂದಿರದಲ್ಲಿ ಸುರಭಿ ಸೇವಾ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಕೊಡಮಾಡುವ ಸುರಭಿಶ್ರೀ ರಾಜ್ಯ ಪ್ರಶಸ್ತಿ ಸ್ವೀಕರಿಸಿ, ಸುರಭಿವಾಣಿ ಪತ್ರಿಕೆಯ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಶಸ್ತಿ ಸ್ವೀಕರಿಸಿದವರು ಜವಾಬ್ದಾರಿಯನ್ನು ಹೊತ್ತು ಸರಿ ದಾರಿಯಲ್ಲಿ ನಡೆದಾಗ ಪ್ರಶಸ್ತಿಗಳಿಗೆ ಅರ್ಥ ಮೂಡುತ್ತದೆ ಮತ್ತು ಅದರ ಆಶಯದಂತೆ ನಡೆದುಕೊಳ್ಳುವುದು ಪುರಸ್ಕೃತರ ಜವಾಬ್ದಾರಿಯೂ ಆಗಿದೆ. ಗ್ರಾಮೀಣ ಮಟ್ಟದಿಂದ ಬೆಳೆದ ಒಂದು ಪತ್ರಿಕೆ ದಶಮಾನೋತ್ಸವ ಆಚರಿಸುತ್ತಿರುವುದು ಶ್ಲಾಘನೀಯ ಎಂದರು.

ಇದನ್ನೂ ಓದಿ: Teachers Recruitment: ಪ್ರಾಥಮಿಕ, ಪ್ರೌಢ ಶಾಲೆ ಶಿಕ್ಷಕರ ನೇಮಕ; ಒಟ್ಟು ಎಷ್ಟು ಹುದ್ದೆ ನಿರೀಕ್ಷೆ?

ಶಿಕಾರಿಪುರ ತಾಲೂಕು ದುಗ್ಲಿ ಕಡೇನಂದಿಹಳ್ಳಿ ಮಠದ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆತ್ಮಕ್ಕೆ ಎಂದಿಗೂ ಸಾವಿಲ್ಲ. ಹಾಗಾಗಿ ಪ್ರತಿಯೊಬ್ಬ ಮನುಷ್ಯನೂ ಸಮಾಜದ ಒಳಿತಿಗಾಗಿ ದುಡಿದಾಗ ಮೋಕ್ಷ ಪ್ರಾಪ್ತಿಯಾಗುತ್ತದೆ. ಕ್ಷಣಿಕ ಜೀವನದಲ್ಲಿ ಸಾರ್ಥಕ ಬದುಕಿನೆಡೆಗೆ ನಡೆಯಲು ಗುರುವಿನ ಆಶೀರ್ವಾದವೂ ಲಭ್ಯವಾಗಬೇಕು. ಆಗ ಮಾತ್ರ ಬದುಕನ್ನು ಸರಿದಾರಿಗೆ ತರಲು ಸಾಧ್ಯ. ಇದಕ್ಕೆ ಧಾರ್ಮಿಕ ಚಿಂತನೆ ಬೆಳೆಸಿಕೊಂಡು ಆತ್ಮವನ್ನು ಭಗವಂತನ ಪಾದಕ್ಕೆ ಅರ್ಪಿಸಿದಾಗ ಮನುಷ್ಯ ಜನ್ಮ ಸಾರ್ಥಕತೆ ಪಡೆಯುತ್ತದೆ ಎಂದರು.

ಸುರಭಿವಾಣಿ ದಶಮಾನೋತ್ಸವದ ವಿಶೇಷ ಸಂಚಿಕೆ ಬಿಡುಗಡೆ ಮಾಡಿದ ಜಡೆ ಸಂಸ್ಥಾನ ಮಠದ ಡಾ. ಮಹಾಂತ ಸ್ವಾಮೀಜಿ ಮಾತನಾಡಿ, ಮೌಢ್ಯವನ್ನು ಅಳಿಸಿ ಮೌಲ್ಯವನ್ನು ಬಿತ್ತುವ ಕಾರ್ಯ ಪತ್ರಿಕೆಗಳಿಂದ ಮಾತ್ರ ಸಾಧ್ಯವಾಗುತ್ತಿದೆ. ಸಮಾಜದಲ್ಲಿನ ಒಳಿತು- ಕೆಡುಕುಗಳನ್ನು ಬಿತ್ತರಿಸುವ ಪತ್ರಿಕೆಗಳಿಂದ ಆಸ್ವಾದಿಸುವ ಮತ್ತು ಯಾವುದನ್ನು ಗ್ರಹಿಸಬೇಕು ಎನ್ನುವ ಮನೋಧರ್ಮ ನಮ್ಮ ಮೇಲಿದೆ ಎಂದರು.

ಇದನ್ನೂ ಓದಿ: Fishermen Rescued: ಅರಬ್ಬಿ ಸಮುದ್ರದಲ್ಲಿ ನಾಪತ್ತೆಯಾಗಿದ್ದ ಬೋಟ್‌ ಪತ್ತೆ; 27 ಮೀನುಗಾರರ ರಕ್ಷಣೆ

ಕಾರ್ಯಕ್ರಮದಲ್ಲಿ ಹೊನ್ನಾವರ ಶ್ರೀ ಕ್ಷೇತ್ರ ಕರ್ಕಿ ಜ್ಞಾನೇಶ್ವರಿ ಪೀಠದ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಮಹಾಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯ ಪತ್ರಕರ್ತ ಎಸ್.ಚಂದ್ರಕಾಂತ್, ಯೋಧ ಎನ್. ಜಗದೀಶ, ಡಾ. ಗಂಗಾಧರ ವ.ಮ. ಆತ್ರೇಯ ಸಾಗರ, ಅರುಣ್ ವಿನಾಯಕ ಶೇಟ್ ಹೊಸಾಡು (ಇಳಕಲ್), ಎನ್.ವಿ. ಈರೇಶ್ ಶಿಕಾರಿಪುರ, ಬಿ.ವಿ. ಗಣಪತಿ ಭಟ್ ಬೆಂಗಳೂರು, ರಾಜು ಎಂ. ರೇವಣಕರ್ ರಾಣೇಬೆನ್ನೂರು, ಮಹೇಂದ್ರಕುಮಾರ ಜೈನ್ ಶಿರಾಳಕೊಪ್ಪ, ಪ್ರದೀಪ್ ಎಲ್ಲನಕರ ಶಿರಸಿ, ಸತ್ಯನಾರಾಯಣ ರಾಯ್ಕರ್ ದಾವಣಗೆರೆ, ಸಂತೋಷ್ ಮಧುಕರ ಶೇಟ್ ಶಿರಸಿ, ಬಸವನಗೌಡ ಎಂ. ಮಲ್ಲಾಪುರ, ಗಜಾನನ ಎಸ್. ಅಣ್ವೇಕರ್ ಹುಬ್ಬಳ್ಳಿ ಅವರಿಗೆ ಸುರಭಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇದನ್ನೂ ಓದಿ: karnataka Weather :‌ ಮುಂದಿನ 24 ಗಂಟೆಯಲ್ಲಿ 18 ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

ಈ ವೇಳೆ ಲಕ್ಕವಳ್ಳಿ ಜೈನಮಠದ ವೃಷಭಸೇನ ಭಟ್ಟಾಕರ, ಟ್ರಸ್ಟ್‌ನ ನಾರಾಯಣಭಟ್ ಮರಾಠ, ಯು.ಎಲ್. ಸಂದೀಪ್, ವಾಣಿಶ್ರೀ ಉಪಸ್ಥಿತರಿದ್ದರು. ಸುರಭಿ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಎಸ್.ಜಿ. ರಾಮಚಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಎನ್. ಷಣ್ಮುಖಾಚಾರ್ ಕಾರ್ಯಕ್ರಮ ನಿರೂಪಿಸಿದರು.

Continue Reading
Advertisement
Wedding Fashion
ಫ್ಯಾಷನ್7 mins ago

Wedding Fashion: ಮದುಮಗನ ಆರತಕ್ಷತೆಯ ಗ್ರ್ಯಾಂಡ್‌ ಔಟ್‌ಫಿಟ್‌ ಆಯ್ಕೆಗೆ ಇಲ್ಲಿದೆ 5 ಸಿಂಪಲ್‌ ಸೂತ್ರ

U-19 Asia Cup IND vs PAK
ಕ್ರಿಕೆಟ್17 mins ago

ನಾಳೆಯಿಂದ ಅಂಡರ್​-19 ಏಷ್ಯಾಕಪ್; ಭಾರತ-ಪಾಕ್​ ಮುಖಾಮುಖಿ ಯಾವಾಗ?

Veer Savarkar and Priyank Kharge
ಕರ್ನಾಟಕ17 mins ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

job opportunity
ದೇಶ30 mins ago

Job News: ಕೇಂದ್ರ ಸರ್ಕಾರ, ರಕ್ಷಣಾ ಇಲಾಖೆಗಳಲ್ಲಿ ಶೇ.14ರಷ್ಟು ಉದ್ಯೋಗ ಹೆಚ್ಚಳ

Office Rental Rises in top 7 cities including bengaluru
ದೇಶ33 mins ago

ಬೆಂಗಳೂರು ಸೇರಿ ದೇಶದ ಟಾಪ್ 7 ನಗರಗಳಲ್ಲಿ ಕಚೇರಿ ಬಾಡಿಗೆ ಹೆಚ್ಚಳ!

BMTC Bus hits bike
ಕರ್ನಾಟಕ46 mins ago

BMTC Accident : ಕಿಲ್ಲರ್‌ ಬಿಎಂಟಿಸಿ ಬಸ್‌ಗೆ 120 ಮಂದಿ ಬಲಿ!

Kapil Sharma and Sunil Grover
ಬಾಲಿವುಡ್47 mins ago

The Kapil Sharma Show: 6 ವರ್ಷದ ಮುನಿಸು ಮರೆತು ಒಟ್ಟಿಗೆ ಪಾರ್ಟಿ ಮಾಡಿದ ಕಪಿಲ್‌ ಶರ್ಮಾ, ಸುನಿಲ್‌ ಗ್ರೋವರ್!

Virat Kohli
ಕ್ರಿಕೆಟ್53 mins ago

ಕಿಂಗ್​ ಕೊಹ್ಲಿ ಕೈಬಿಟ್ಟ ಬಿಸಿಸಿಐ; ಟಿ20 ವಿಶ್ವಕಪ್​ಗೆ ನೂತನ ಆಟಗಾರನ ಆಯ್ಕೆ!

No rain alert dry weather in karnataka
ಕರ್ನಾಟಕ1 hour ago

Karnataka Weather : ಮುಕ್ಕಾಲು ಕರ್ನಾಟಕದಲ್ಲಿ ಶುಷ್ಕ ವಾತಾವರಣ! ಇಲ್ಲೆಲ್ಲ ಸಣ್ಣ ಮಳೆ!

Winter Black Fashion
ಫ್ಯಾಷನ್1 hour ago

Winter Black Fashion: ವಿಂಟರ್‌ ಸೀಸನ್‌ನಲ್ಲಿ ಟ್ರೆಂಡಿಯಾದ ಬ್ಲ್ಯಾಕ್‌ ಡಿಸೈನರ್‌ವೇರ್ಸ್

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

CM-Siddaramaiah
ಕರ್ನಾಟಕ6 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ13 hours ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ21 hours ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ1 day ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ1 day ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ1 day ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ1 day ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ1 day ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

read your daily horoscope predictions for december 6 2023
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರು ಸುಮ್ಮನಿದ್ದರೂ ನಡೆಯುತ್ತೆ ಕಲಹ!

CM Siddaramaiah and Black magic
ಕರ್ನಾಟಕ2 days ago

Belagavi Winter Session: ಸಿದ್ದರಾಮಯ್ಯಗೆ ಮಾಟ – ಮಂತ್ರ; ಗಾಳಿ ಬಿಡಿಸಲು ರೇವಣ್ಣಗೆ ಅಶೋಕ್‌ ಮನವಿ!

ಟ್ರೆಂಡಿಂಗ್‌