Site icon Vistara News

Shivamogga News: ಚಂದಾಳದಿಂಬ ಗ್ರಾಮದಲ್ಲಿ ಕೊಟ್ಟಿಗೆಗೆ ಬಿದ್ದ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

ಬೆಂಕಿಗೆ ಆಹುತಿಯಾಗಿರುವ ಕೊಟ್ಟಿಗೆ

ರಿಪ್ಪನ್‌ಪೇಟೆ: ಶಿವಮೊಗ್ಗ ಜಿಲ್ಲೆಯ (Shivamogga News) ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಚಂದಾಳದಿಂಬ ಗ್ರಾಮದಲ್ಲಿ ರೈತರೊಬ್ಬರ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಲಕ್ಷಾಂತರ ರೂಪಾಯಿಗಳ ನಷ್ಟವಾಗಿರುವ ಘಟನೆ ನಡೆದಿದೆ.

ಚಂದಾಳದಿಂಬ ಅಮಟೆಕೊಪ್ಪ ಗ್ರಾಮದ ಲಿಂಗಮೂರ್ತಿ ಗೌಡ ಅವರ ಮನೆಯ ಕೊಟ್ಟಿಗೆಗೆ ಶುಕ್ರವಾರ ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ತಗುಲಿ ಶೇಖರಿಸಿಟ್ಟಿದ್ದ ಹಳೆಯ ನಾಟ ಮತ್ತು ಗೋವುಗಳ ಹುಲ್ಲು ಪಿಂಡಿಗಳು ಬೆಂಕಿಗೆ ಆಹುತಿಯಾಗಿದೆ.

ಅಗ್ನಿ ಅವಘಡದ ಮಾಹಿತಿ ಸಿಕ್ಕ ಕೂಡಲೇ ಸ್ಥಳೀಯರು ಹೊಸನಗರದ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯನ್ನು ಕೈಗೊಂಡು ಕೆಲವೇ ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಗ್ನಿಶಾಮಕ ದಳದವರ ಕಾರ್ಯ ವೈಖರಿಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದರು.

ಇದನ್ನೂ ಓದಿ: ಶಿವಮೊಗ್ಗ ಜಿಲ್ಲೆ ಕ್ಷೇತ್ರ ಸಮೀಕ್ಷೆ : ಬಿಜೆಪಿಗೆ ಪ್ರಾಬಲ್ಯ ಉಳಿಸಿಕೊಳ್ಳುವ ಸವಾಲು

ಕಾರ್ಯಾಚರಣೆಯಲ್ಲಿ ಹೊಸನಗರ ಅಗ್ನಿಶಾಮಕ ದಳದ ಠಾಣಾಧಿಕಾರಿ ಕೆ.ಟಿ.ರಾಜಪ್ಪ, ಸಿಬ್ಬಂದಿ ಎಲ್.ಎಫ್‌. ರಾಜೇಶ್, ಟಿ.ಎಂ. ಪ್ರವೀಣ್, ಎಫ್‌.ಡಿ. ಶಿವರಾಜ್, ಎಫ್‌.ಎಂ. ಮಂಜುನಾಥ್, ಚಿಕ್ಕಯ್ಯ ಮಠಪತಿ ಇದ್ದರು.

Exit mobile version