Site icon Vistara News

Shivamogga News: ರಿಪ್ಪನ್‌ಪೇಟೆಯಲ್ಲಿ ಕಾಂಗ್ರೆಸ್ ಘಟಕ ಕಚೇರಿ ಉದ್ಘಾಟಿಸಿದ ಗೀತಾ ಶಿವರಾಜಕುಮಾರ್

Geeta Shivarajakumar inaugurated Congress office in Ripponpet

ರಿಪ್ಪನಪೇಟೆ: ರಾಜ್ಯ ಕಾಂಗ್ರೆಸ್ ಸರ್ಕಾರವು (State Congress Government) ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವುದರ ಮೂಲಕ ನುಡಿದಂತೆ ನಡೆದಿದೆ. ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಎಲ್ಲರೂ ಸೇರಿ ಪಕ್ಷಕ್ಕೆ ಶಕ್ತಿ ತುಂಬಬೇಕು ಎಂದು ಶಿವಮೊಗ್ಗ (Shivamogga News) ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮನವಿ ಮಾಡಿದರು.

ಪಟ್ಟಣದಲ್ಲಿ ಗುರುವಾರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಹೊಸನಗರ-ರಿಪ್ಪನ್‌ಪೇಟೆ ಬ್ಲಾಕ್ ಕಾಂಗ್ರೆಸ್ ಘಟಕ ಕಚೇರಿಯನ್ನು ಉದ್ಘಾಟಿಸಿ, ಬಳಿಕ ಅವರು ಮಾತನಾಡಿದರು.

ಇದನ್ನೂ ಓದಿ: Indian billionaires: ಭಾರತದಲ್ಲಿ 200 ಬಿಲಿಯನೇರ್‌ಗಳು! ಅತಿ ಶ್ರೀಮಂತರ ಸಂಖ್ಯೆಯಲ್ಲಿ ಭಾರತ ನಂ.3

ಕಚೇರಿಯಲ್ಲಿ ಪಕ್ಷದ ಚಟುವಟಿಕೆಗಳಿಗೆ ಮಾತ್ರ ಹೆಚ್ಚು ಒತ್ತು ನೀಡದೆ, ಸಾರ್ವಜನಿಕ ಸಮಸ್ಯೆಗಳ ಪರಿಹರಿಸುವ ಬಗ್ಗೆಯೂ ಆಸಕ್ತಿ ತೋರಬೇಕು ಎಂದ ಅವರು, ಜನಸಾಮಾನ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಂಗ್ರೆಸ್ ಪಕ್ಷದ ಯೋಜನೆಗಳ ಬಗ್ಗೆ ಮನವರಿಕೆ ಮಾಡಬೇಕು ಎಂದು ತಿಳಿಸಿದರು.

ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರ ಗೆಲುವಿಗೆ ಎಲ್ಲರೂ ಸೇರಿ ಒಗ್ಗಟ್ಟಿನ ಬಲ ಪ್ರದರ್ಶಿಸಬೇಕಿದೆ. ರಾಜಕೀಯದಲ್ಲಿ ದ್ವೇಷ, ಅಸೂಯೆ, ಮನಸ್ತಾಪಗಳು ಸಹಜ. ಆದರೆ, ಅವುಗಳನ್ನು ಬದಿಗೆ ಸರಿಸಿ, ಗೀತಾ ಅವರ ಗೆಲುವಿಗೆ ಎಲ್ಲರೂ ಸಹಕರಿಸಬೇಕು ಎಂದರು.

ಇದನ್ನೂ ಓದಿ: Job Alert: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಶೈಕ್ಷಣಿಕ ವಿದ್ಯಾರ್ಹತೆಗೆ ತಿದ್ದುಪಡಿ; ಹೊಸ ಅಧಿಸೂಚನೆಯಲ್ಲಿ ಏನಿದೆ?

ಈ ಸಂದರ್ಭದಲ್ಲಿ ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ನಟ ಶಿವರಾಜಕುಮಾರ್, ವಿಧಾನ ಪರಿಷತ್ ಮಾಜಿ ಅಧ್ಯಕ್ಷ ಆಯನೂರು ಮಂಜುನಾಥ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಶ್ವೇತ ಬಂಡಿ, ಅನಿತಾ ಕುಮಾರಿ, ಬಂಡಿ ರಾಮಚಂದ್ರಪ್ಪ, ಬಿ.ಪಿ.ರಾಮಚಂದ್ರಪ್ಪ, ಸಾಕಮ್ಮ, ಧನಲಕ್ಷ್ಮಿ, ಸುಮ ಸುಬ್ರಹ್ಮಣ್ಯ, ವೈ.ಎಚ್.ನಾಗರಾಜ, ಸಣ್ಣಕ್ಕಿ ಮಂಜು, ಫ್ಯಾನ್ಸಿ ರಮೇಶ್‌, ಶ್ರೀಧರ್‌ ಹಾಗೂ ಇತರರು ಉಪಸ್ಥಿತರಿದ್ದರು.

Exit mobile version