Shivamogga News: ಹೊಸನಗರ ತಾ.ಪಂ ಕೆಡಿಪಿ ಸಭೆ: ನೀರಿನ ಸಮಸ್ಯೆ ನಿವಾರಿಸಲು ಶಾಸಕರ ಸೂಚನೆ Vistara News

ಶಿವಮೊಗ್ಗ

Shivamogga News: ಹೊಸನಗರ ತಾ.ಪಂ ಕೆಡಿಪಿ ಸಭೆ: ನೀರಿನ ಸಮಸ್ಯೆ ನಿವಾರಿಸಲು ಶಾಸಕರ ಸೂಚನೆ

Shivamogga News: ಹೊಸನಗರ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಜರುಗಿತು.

VISTARANEWS.COM


on

Hosanagara taluk panchayat kdp meeting
ಹೊಸನಗರ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಜರುಗಿತು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸನಗರ: ಬರದ (Drought) ಸಮಸ್ಯೆ ಎದುರಾಗಿದ್ದು, ಸಾರ್ವಜನಿಕರಿಂದ ಕುಡಿಯುವ ನೀರಿನ (Drinking Water) ಸಮಸ್ಯೆ ಕುರಿತು ದೂರುಗಳು ಬಾರದಂತೆ ಅಧಿಕಾರಿ ವರ್ಗ ಎಚ್ಚೆತ್ತುಕೊಂಡು ಕಾರ್ಯನಿರ್ವಹಿಸಬೇಕಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಬರ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಬರಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಅಗತ್ಯ ಅನುದಾನ ಬಿಡುಗಡೆ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.

ಹಳ್ಳಿಗಳಲ್ಲಿ ದೂರದ ಮನೆಗಳು ಇರುವುದರಿಂದ ನಲ್ಲಿ ಸಂಪರ್ಕ ಕಲ್ಪಿಸಲು ತೊಡಕಾಗಿದೆ. ಜೆಜೆಎಂ ಯೋಜನೆಯಡಿ ವರಾಹಿ ಜಲಾಶಯದಿಂದ ನೀರಿನ ಸಂಪರ್ಕ ಕಲ್ಪಿಸುವ ಯೋಜನೆ ಪ್ರಗತಿಯಲ್ಲಿದೆ. ಆದರೆ ಅಲ್ಲಿಯವರೆಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕಿದೆ.

ಇದನ್ನೂ ಓದಿ: Co-Operative week : ಸರ್ಕಾರಿ ಹಣ ಸಹಕಾರ ಬ್ಯಾಂಕ್‌ನಲ್ಲೇ ಠೇವಣಿಗೆ ಚಿಂತನೆ; ಸಿದ್ದರಾಮಯ್ಯ

ಲಭ್ಯವಿರುವ ಅನುದಾನ ಬಳಸಿಕೊಂಡು ಕೊಳವೆ ಬಾವಿ ಅಗತ್ಯವಿರುವ ಕಡೆಗಳಲ್ಲಿ ಕಾಮಗಾರಿ ಕೈಗೊಳ್ಳಿ. ನೀರು ಸರಬರಾಜು ವ್ಯವಸ್ಥೆಗೆ ಹೆಚ್ಚುವರಿ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಲು ಆದ್ಯತೆ ನೀಡಿ. ತೀರಾ ಸಮಸ್ಯೆ ಉಂಟಾದ ಪ್ರದೇಶಗಳಲ್ಲಿ ಖಾಸಗಿಯಾಗಿ ನೀರು ಖರೀದಿಸಲು ಲಭ್ಯವಿರುವ ಸಂಪನ್ಮೂಲಗಳ ಕಡೆಯೂ ಗಮನ ಹರಿಸಿ. ಎಲ್ಲವನ್ನೂ ನಿಯಮದಲ್ಲಿ ಅವಕಾಶವಿಲ್ಲ ಎಂದು ಕೈಚೆಲ್ಲಬೇಡಿ. ಮಾನವೀಯತೆಯ ಆಧಾರದಲ್ಲಿ ಜನಹಿತವನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ಮಲೆನಾಡು ಭಾಗದ ಗುಡ್ಡಗಾಡು ಪ್ರದೇಶದಲ್ಲಿ ನೀರಿನ ಸಮಸ್ಯೆ ಭೀಕರವಾಗಿ ತಲೆದೋರುವ ಲಕ್ಷಣಗಳಿವೆ. ಕಠಿಣ ಪರಿಸ್ಥಿತಿಯನ್ನು ಎದುರಿಸಲು ಅಧಿಕಾರಿವರ್ಗ ಎಲ್ಲ ರೀತಿಯಲ್ಲಿಯೂ ಸಜ್ಜಾಗಬೇಕಿದೆ. ಪ್ರಸ್ತುತ ಜೆಜೆಎಂ ನಲ್ಲಿ ಮಾತ್ರ ಅನುದಾನ ಲಭ್ಯವಿದೆ. ಬರದ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಜೆಜೆಎಂ ಅನುದಾನ ಬಳಸಿ ಅಗತ್ಯ ಕ್ರಮ ಕೈಗೊಳ್ಳಿ ಎಂದರು.

ಇದನ್ನೂ ಓದಿ: Acid Reflux: ನಿಮಗೆ ಗೊತ್ತಿರಲಿ, ಚಳಿಗಾಲಕ್ಕೂ ಹುಳಿತೇಗಿಗೂ ಇದೆ ಸಂಬಂಧ!

ಸಭೆಯಲ್ಲಿ ತಾಲೂಕು ಪಂಚಾಯಿತಿ ಇಓ ನರೇಂದ್ರಕುಮಾರ್, ತಹಸೀಲ್ದಾರ್ ರಶ್ಮಿ, ಮೆಸ್ಕಾಂ ಎಇಇ ಚಂದ್ರಶೇಖರ, ಗ್ರಾಮ ಪಂಚಾಯಿತಿ ಪಿಡಿಓಗಳು ತಾಲ್ಲೂಕು ಕಛೇರಿಯ ಗ್ರೇಡ್ 2 ತಹಸೀಲ್ದಾರ್ ರಾಕೇಶ್, ಶಿರಾಸ್ಥೆದಾರ್ ಮಂಜುನಾಥ್ ಕಟ್ಟೆ, ಗುಮಾಸ್ಥರಾದ ಚಿರಾಗ್ ಇನ್ನೂ ಮುಂತಾದ ಅಧಿಕಾರಿಗಳು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಶಿವಮೊಗ್ಗ

Shivamogga News: ಯಕ್ಷಿ ಗ್ರಾಮದಲ್ಲಿ ಹುಲ್ಲೇಶ್ವರ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

Shivamogga News: ಸೊರಬ ತಾಲೂಕಿನ ಮಾವಲಿ ವಲಯದ ಯಕ್ಷಿ ಗ್ರಾಮದಲ್ಲಿ ನೂತನವಾಗಿ ಹುಲ್ಲೇಶ್ವರ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಜರುಗಿತು.

VISTARANEWS.COM


on

Inauguration of Hulleshwar Jnana vikas Center at Yakshi Village
ಸೊರಬ ತಾಲೂಕಿನ ಮಾವಲಿ ವಲಯದ ಯಕ್ಷಿ ಗ್ರಾಮದಲ್ಲಿ ನೂತನವಾಗಿ ಹುಲ್ಲೇಶ್ವರ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಜರುಗಿತು.
Koo

ಸೊರಬ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಈವರೆಗಿನ ಸಾಧನೆ, ಮಹಿಳಾ ಸಬಲೀಕರಣಕ್ಕಾಗಿ (Women Empowerment) ಮಾತೃಶ್ರೀ ಹೇಮಾವತಿ ಅಮ್ಮನವರು ನೀಡಿರುವ ವಿಶೇಷ ಯೋಜನೆಗಳಗಿದ್ದು ಅವುಗಳಲ್ಲಿ ಜ್ಞಾನ ವಿಕಾಸ ಯೋಜನೆ ಅತ್ಯಂತ ಮುಖ್ಯವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಸುಬ್ರಾಯ ನಾಯ್ಕ ತಿಳಿಸಿದರು.

ತಾಲೂಕಿನ ಮಾವಲಿ ವಲಯದ ಯಕ್ಷಿ ಗ್ರಾಮದಲ್ಲಿ ಹೊಸದಾಗಿ ಹುಲ್ಲೇಶ್ವರ ಜ್ಞಾನ ವಿಕಾಸ ಕೇಂದ್ರವನ್ನು ಅವರು ಉದ್ಘಾಟಿಸಿ, ಕೇಂದ್ರವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಿಕೊಂಡು ಹೋಗಬೇಕಾದರೆ ಕೇಂದ್ರದಲ್ಲಿನ ಪ್ರತಿಯೊಂದು ಸದಸ್ಯರ ಹೊಂದಾಣಿಕೆ ಅತೀ ಮುಖ್ಯವಾಗಿರುತ್ತದೆ ಎಂದರು.

ಕೇಂದ್ರದಲ್ಲಿ ಪ್ರತಿ ತಿಂಗಳು ವಿವಿಧ ರೀತಿಯ ಜ್ಞಾನ ವಿಕಾಸ ಕಾರ್ಯಕ್ರಮಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿಗಳನ್ನು ನೀಡುವಂತಹ ಕಾರ್ಯಕ್ರಮಗಳು ನಡೆಯುತ್ತಿರುತ್ತದೆ. ಇದರ ಸದುಪಯೋಗವನ್ನು ತಾವೆಲ್ಲರೂ ಪಡೆಯಬೇಕು.

ಇದನ್ನೂ ಓದಿ: Karnataka Drought: ಮುಂದಿನ ವಾರ ಡಿಬಿಟಿ ಮೂಲಕ ರೈತರಿಗೆ ಬರ ಪರಿಹಾರ; 2 ಸಾವಿರ ರೂ.ವರೆಗೆ ಜಮೆ

ಜ್ಞಾನ ವಿಕಾಸ ಕಾರ್ಯಕ್ರಮ ನಿಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕಲು ವೇದಿಕೆಯಾಗಿದೆ. ಪ್ರತಿಯೊಬ್ಬರೂ ಯಾವುದೇ ಸಂಕೋಚವಿಲ್ಲದೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಂಡು ಒಂದು ಉತ್ತಮ ಮಾದರಿ ಕೇಂದ್ರವಾಗಿ ಗುರುತಿಸುವಂತಾಗಬೇಕು ಎಂದರು.

ಗ್ರಾಮದ ಮುಖಂಡ ಮಂಜಪ್ಪ ಮಾತನಾಡಿದರು.

ಇದನ್ನೂ ಓದಿ: Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾಕಿ ರಾಧಾ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶೋಭಾ, ಸೇವಾ ಪ್ರತಿನಿಧಿ ಮಲ್ಲಮ್ಮ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Continue Reading

ಉಡುಪಿ

Karnataka Weather : ಮತ್ತೆ ಬದಲಾಯ್ತು ವಾತಾವರಣ; ಮಳೆ ಹೋಯ್ತು, ಬಿಸಿಲು ಬಂತು!

Karnataka Weather Forecast : ಮಿಚುಂಗ್‌ ಸೈಕ್ಲೋನ್‌ ಪ್ರಭಾವದಿಂದಾಗಿ ಕಳೆದೊಂದು ವಾರದಿಂದ ರಾಜ್ಯದ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇತ್ತು. ಇದೀಗ ಪ್ರಭಾವ ಕಡಿಮೆ ಆಗಿದ್ದು, ರಾಜ್ಯಾದ್ಯಂತ ಇನ್ನೆರಡು ದಿನಗಳು ಶುಷ್ಕ ವಾತಾವರಣ (Dry weather) ಇರಲಿದ್ದು, ಮಳೆಗೆ (Rain News) ಬ್ರೇಕ್‌ ಬಿದ್ದಿದೆ.

VISTARANEWS.COM


on

By

dry weather karnataka weather Forecast
Koo

ಬೆಂಗಳೂರು: ರಾಜ್ಯದ ಹಲವೆಡೆ ಮತ್ತೆ ವಾತಾವರಣ ಬದಲಾಗಿದೆ. ಮಳೆಗೆ ಹೋಗಿ ಮತ್ತೆ ಬಿಸಿಲು ಆವರಿಸುತ್ತಿದೆ. ಇನ್ನೆರಡು ದಿನಗಳು ರಾಜ್ಯದಲ್ಲಿ ಒಣಹವೆ (Dry weather) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಡಿ.7-8ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಗೆ ಯಾವುದೇ ಮಳೆ ಮುನ್ಸೂಚನೆಯಿಲ್ಲ. ಬದಲಿಗೆ ಒಣಹವೆಯೇ ಮೇಲುಗೈ ಸಾಧಿಸಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Winter Cardigan Fashion: ಚಳಿಗಾಲದಲ್ಲಿ ಸ್ಟೈಲಿಶ್‌ ಆಗಿ ಕಾಣಿಸುವ ಕಾರ್ಡಿಗಾನ್‌ ಫ್ಯಾಷನ್‌

ಹಗುರ ಮಳೆಯಷ್ಟೇ!

ಇನ್ನೂ ದಕ್ಷಿಣ ಒಳನಾಡಿನ ಚಾಮರಾಜನಗರದಲ್ಲಿ ಮಾತ್ರ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ ಸೇರಿ ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಲ್ಲಿ ಒಣಹವೆ ಇರಲಿದೆ.

ಇತ್ತ ಮಲೆನಾಡಿನ ಹಾಸನ, ಕೊಡಗು, ಶಿವಮೊಗ್ಗ,ಚಿಕ್ಕಮಗಳೂರಲ್ಲೂ ಮಳೆ ಮುನ್ಸೂಚನೆ ಇಲ್ಲ. ಬಿಸಿಲಿನಿಂದ ಕೂಡಿರಲಿದೆ. ಇನ್ನು ಬೆಂಗಳೂರಲ್ಲಿ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 29 ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 28 ಡಿ.ಸೆ -19 ಡಿ.ಸೆ
ಮಂಗಳೂರು: 33 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 18 ಡಿ.ಸೆ
ಗದಗ: 30 ಡಿ.ಸೆ – 18 ಡಿ.ಸೆ
ಹೊನ್ನಾವರ: 34 ಡಿ.ಸೆ- 23 ಡಿ.ಸೆ
ಕಲಬುರಗಿ: 26 ಡಿ.ಸೆ – 21 ಡಿ.ಸೆ
ಬೆಳಗಾವಿ: 29 ಡಿ.ಸೆ – 17 ಡಿ.ಸೆ
ಕಾರವಾರ: 35 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಶಿವಮೊಗ್ಗ

Shivamogga News: ಬೆಟ್ಟದಕೂರ್ಲಿಯಲ್ಲಿ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬ

Shivamogga News: ಸೊರಬ ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಗ್ರಾಮ ಸಮಿತಿಯಿಂದ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

VISTARANEWS.COM


on

Shivamogga News Hori festival in Bettadakoorli village
ಸೊರಬ ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದಲ್ಲಿ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬ ಜರುಗಿತು.
Koo

ಸೊರಬ: ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಗ್ರಾಮ ಸಮಿತಿಯಿಂದ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬವನ್ನು (Bull Bullying Festival) ವಿಜೃಂಭಣೆಯಿಂದ ಆಚರಿಸಲಾಯಿತು.

ತಾಲೂಕು ಸೇರಿದಂತೆ ನೆರೆಯ ಜಿಲ್ಲೆಗಳಿಂದ ಸುಮಾರು 200 ಕ್ಕೂ ಅಧಿಕ ಹೋರಿಗಳು ಆಗಮಿಸಿದ್ದವು. ಹೋರಿಗಳು ಮಿಂಚಿನ ಓಟ ಮಾಡಿ ನೋಡುಗಳ ಗಮನ ಸೆಳೆದವು. ಅಖಾಡದಲ್ಲಿ ಹೋರಿಗಳು ಓಡುವುದನ್ನು ನೋಡಲು ನೆರೆಯ ಗ್ರಾಮಗಳು ಸೇರಿದಂತೆ ನೆರೆಯ ತಾಲೂಕು ಹಾಗೂ ಜಿಲ್ಲೆಗಳಿಂದ ಸಾವಿರಾರು ಹೋರಿ ಅಭಿಮಾನಿಗಳು ಆಗಮಿಸಿದ್ದರು. ಅಖಾಡದಲ್ಲಿ ಪೈಲ್ವಾನರ ಕೈಗೆ ಸಿಗದಂತೆ ಹೋರಿಗಳು ಓಡುವ ದೃಶ್ಯ ರೋಮಾಂಚನಗೊಳಿಸಿತು. ಹೋರಿಗಳ ಮಾಲೀಕರು ತಮ್ಮ ನೆಚ್ಚಿನ ಹೋರಿಗಳನ್ನು ಬಲೂನು, ಹೂವು, ಕೊಬ್ಬರಿ ಹಾರ ಕಟ್ಟಿ ಶೃಂಗರಿಸಿದ್ದರು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ನಾಳೆ- ನಾಡಿದ್ದು ಮಳೆಗೆ ಬ್ರೇಕ್‌!

ಅಖಾಡದಲ್ಲಿ ಯಮನೂರು ಕುರುಕ್ಷೇತ್ರ, ಕುಬಟೂರು ಬ್ರಹ್ಮ, ಆನವಟ್ಟಿ ಅಭಿಮನ್ಯು, ಆನವಟ್ಟಿ ಪವರ್ ಸ್ಟಾರ್, ಬ್ಯಾತನಾಳ ಕರ್ನಾಟಕ ಎಕ್ಸ್‌ಪ್ರೆಸ್, ಮಲೆನಾಡು ಚಿನ್ನ, ಶಿವಮೊಗ್ಗದ ಶಿವಲಿಂಗ, ಅಂಬಾರಗೊಪ್ಪದ ಯಜಮಾನ, ಸಮನವಳ್ಳಿ ಒಡೆಯ, ಬೆಟ್ಟದಕೂರ್ಲಿಯ ಲಂಕಾಸುರ, ಬೆಟ್ಟದಹುಲಿ, ಸಾಹುಕಾರ, ವೀರಭದ್ರ, ವಿಕ್ರಂ, ಸಾರಂಗ, ಅಪ್ಪಾಜಿ, ಭೀಷ್ಮ, ಏಳುಕೋಟಿ ಸೇರಿದಂತೆ ವಿವಿಧ ಹೆಸರಿನ ಹೋರಿಗಳು ಓಡಿದವು.

ಇದನ್ನೂ ಓದಿ: Belagavi Winter Session: ಕೊಬ್ಬರಿಗೆ 1500 ರೂ. ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್ ಘೋಷಣೆ

ಹೋರಿ ಹಬ್ಬ ಆಯೋಜಿಸಿದ್ದ ಬೆಟ್ಟದ ಕೂರ್ಲಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಗ್ರಾಮ ಸಮಿತಿಯವರು ಅಖಾಡದಲ್ಲಿ ಎರಡು ಬದಿಯಲ್ಲಿ ಸುರಕ್ಷತಾ ಕ್ರಮ ಕೈಗೊಂಡು, ಅಖಾಡದಲ್ಲಿ ಕ್ರಮವಾಗಿ ಒಂದೊಂದೆ ಹೋರಿಗಳನ್ನು ಓಡಿಸಿದರು. ಅಖಾಡದಲ್ಲಿ ಉತ್ತಮವಾಗಿ ಓಡಿದ ಹೋರಿಗಳು ಹಾಗೂ ಬಲ ಪ್ರದರ್ಶನ ತೋರಿದ ಯುವಕರನ್ನು ಗುರುತಿಸಲಾಯಿತು.

Continue Reading

ಕರ್ನಾಟಕ

karnataka Weather :‌ ಇಂದು-ನಾಳೆ ಭಾಗಶಃ ಮೋಡ ಕವಿದ ವಾತಾವರಣ; ಇಲ್ಲೆಲ್ಲ ಮಳೆ ಸೂಚನೆ

Rain News : ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ ಮಳೆಯಾಗುವ (karnataka Weather Forecast) ಸಾಧ್ಯತೆ ಇದೆ. ಕರಾವಳಿಯಲ್ಲಿ ಮಳೆಯು ಮಾಯವಾಗಿದ್ದು, ಶುಷ್ಕ ವಾತಾವರಣವು (Dry Weather) ಮೇಲುಗೈ ಸಾಧಿಸಲಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಮಿಚುಂಗ್‌ ಸೈಕ್ಲೋನ್‌ ಎಫೆಕ್ಟ್‌ನಿಂದಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳು ಸೂರ್ಯ ಮರೆಯಾಗಿ, ಮೋಡ ಕವಿದ ವಾತಾವರಣ (karnataka Weather Forecast) ಇರಲಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಮಲೆನಾಡು ಹಾಗೂ ಕರಾವಳಿಯಲ್ಲಿ ಒಣ ಹವೆ ಇರಲಿದೆ.

ರಾಜಧಾನಿ ಬೆಂಗಳೂರಲ್ಲಿ ಥಂಡಿ ಗಾಳಿಯೊಂದಿಗೆ ಮೋಡ ಕವಿದ ವಾತಾವರಣ ಇರಲಿದೆ. ಆಗಾಗ ಸೂರ್ಯನ ದರ್ಶನ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಸಣ್ಣ ಪ್ರಮಾಣದಲ್ಲಿ ಮಳೆ ಜಿನುಗಲಿದೆ. ಗರಿಷ್ಠ ಉಷ್ಣಾಂಶ 26 ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Rohit Sharma : ಫಾರಿನ್ ಟೂರ್​ ಮುಗಿಸಿ ಮರಳಿದ ರೋಹಿತ್​ ಶರ್ಮಾ ಫ್ಯಾಮಿಲಿ

ಇಲ್ಲೆಲ್ಲ ಚದುರಿದ ಮಳೆ

ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು ಹಾಗೂ ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕಲಬುರಗಿ, ಬೆಳಗಾವಿ, ಬೀದರ್ ಮತ್ತು ಗದಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರವಾದ ಮಳೆ ಸುರಿಯಲಿದೆ. ಉಳಿದಂತೆ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.

ಮಲೆನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದ್ದರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲೂ ಸೂರ್ಯ ಕಣ್ಮರೆಯಾಗಲಿದ್ದಾನೆ. ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 25 ಡಿ.ಸೆ -19 ಡಿ.ಸೆ
ಮಂಗಳೂರು: 33 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 28 ಡಿ.ಸೆ – 18 ಡಿ.ಸೆ
ಗದಗ: 30 ಡಿ.ಸೆ – 18 ಡಿ.ಸೆ
ಹೊನ್ನಾವರ: 35 ಡಿ.ಸೆ- 23 ಡಿ.ಸೆ
ಕಲಬುರಗಿ: 33 ಡಿ.ಸೆ – 21 ಡಿ.ಸೆ
ಬೆಳಗಾವಿ: 29 ಡಿ.ಸೆ – 17 ಡಿ.ಸೆ
ಕಾರವಾರ: 35 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
Dina Bhavishya
ಪ್ರಮುಖ ಸುದ್ದಿ26 mins ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Vistara News impact, Governmet to scrap 7 d rule of SCSP and TSP act
ಕರ್ನಾಟಕ6 hours ago

ವಿಸ್ತಾರ ನ್ಯೂಸ್ ಇಂಪ್ಯಾಕ್ಟ್; ಎಸ್ಸಿ, ಎಸ್ಟಿ‌ ಹಣ ಅನ್ಯ ಕಾರ್ಯದ ಬಳಕೆಗೆ ತಡೆ, ಕಾಯ್ದೆ ತಿದ್ದುಪಡಿಗೆ ಸಂಪುಟ ನಿರ್ಧಾರ

WPL Auction 2024
ಕ್ರಿಕೆಟ್6 hours ago

WPL Auction 2024: ವುಮೆನ್ಸ್ ಪ್ರೀಮಿಯರ್ ಲೀಗ್ ಹರಾಜು ಪ್ರಕ್ರಿಯೆಗೆ ಕೇವಲ 2 ದಿನ ಬಾಕಿ

Supreme Court will deliver judgment on Dece 11 about J and K Special Status scrap
ಕೋರ್ಟ್6 hours ago

ಆರ್ಟಿಕಲ್ 370 ರದ್ದು ಸಿಂಧುವೇ?; ಡಿ.11ಕ್ಕೆ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು

Pro Kabaddi
ಕ್ರೀಡೆ7 hours ago

Pro Kabaddi: ಗುಜರಾತ್ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಿದ ಪಾಟ್ನಾ

Is 500 note with star symbol is fake, What Fact Check says?
Fact Check7 hours ago

Fact Check: ಸ್ಟಾರ್ ಗುರುತಿರುವ 500 ರೂಪಾಯಿ ನೋಟು ನಕಲಿಯೇ?

kavya maran
ಐಪಿಎಲ್ 20238 hours ago

ಸ್ಟಾರ್​​ ಆಟಗಾರನ ಖರೀದಿಗೆ ಸ್ಕೆಚ್​ ಹಾಕಿದ ಸಖತ್ ಕ್ಯೂಟ್ ಓನರ್ ಕಾವ್ಯ ಮಾರನ್

Inauguration of Hulleshwar Jnana vikas Center at Yakshi Village
ಶಿವಮೊಗ್ಗ8 hours ago

Shivamogga News: ಯಕ್ಷಿ ಗ್ರಾಮದಲ್ಲಿ ಹುಲ್ಲೇಶ್ವರ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

14 Medium and Large Irrigation Projects Completed in Kalyana Karnataka says Minister Ramalinga reddy
ಕರ್ನಾಟಕ8 hours ago

ಕಲ್ಯಾಣ ಕರ್ನಾಟಕ ಭಾಗದಲ್ಲಿ 14 ಮಧ್ಯಮ, ಬೃಹತ್ ನೀರಾವರಿ ಯೋಜನೆಗಳು ಪೂರ್ಣ: ರಾಮಲಿಂಗಾರೆಡ್ಡಿ

More than a hundred people from Kiravatti have joined the Congress party
ಉತ್ತರ ಕನ್ನಡ8 hours ago

Uttara Kannada News: ಕಿರವತ್ತಿ ಭಾಗದ 100ಕ್ಕೂ ಹೆಚ್ಚು ಜನ ಕಾಂಗ್ರೆಸ್‌ಗೆ ಸೇರ್ಪಡೆ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Dina Bhavishya
ಪ್ರಮುಖ ಸುದ್ದಿ26 mins ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ11 hours ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ12 hours ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ17 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ1 day ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ2 days ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ2 days ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ2 days ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ2 days ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

ಟ್ರೆಂಡಿಂಗ್‌