Shivamogga News: ಸಾಹಿತ್ಯ ಕೃಷಿಯಲ್ಲಿ ತೊಡಗಿರುವ ಕಸಾಪ: ಸಾಹಿತಿ ಹ.ಅ. ಪಾಟೀಲ - Vistara News

ಶಿವಮೊಗ್ಗ

Shivamogga News: ಸಾಹಿತ್ಯ ಕೃಷಿಯಲ್ಲಿ ತೊಡಗಿರುವ ಕಸಾಪ: ಸಾಹಿತಿ ಹ.ಅ. ಪಾಟೀಲ

ಶಿವಮೊಗ್ಗದ ರಿಪ್ಪನ್‌ಪೇಟೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನವನ್ನು ಆಚರಿಸಲಾಗಿದೆ. ಈ ವೇಳೆ ಹಿರಿಯ ಸಾಹಿತಿ ಹ.ಅ.ಪಾಟೀಲ ಅವರು ಕಸಾಪ (Shivamogga News) ಬಗ್ಗೆ ಮಾತನಾಡಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಿಪ್ಪನ್‌ಪೇಟೆ: “ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸಾಹಿತ್ಯ ನಾಡು ನುಡಿಯ ಬೆಳವಣಿಗೆಗೆ ಪೂರಕವಾಗಿ ಸದಾಶಯದೊಂದಿಗೆ 1915ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಚಾಲನೆ ನೀಡಿದ್ದರು. ಅದೀಗ ಉತ್ತಮ ರೀತಿಯಲ್ಲಿ ಸಾಹಿತ್ಯ ಕೃಷಿಯಲ್ಲಿ ತೊಡಗಿದೆ” ಎಂದು ಹಿರಿಯ ಸಾಹಿತಿ ಹ.ಅ.ಪಾಟೀಲ (Shivamogga News) ಹೇಳಿದರು.

ರಿಪ್ಪನ್‌ಪೇಟೆಯ ಗ್ರಾಮ ಪಂಚಾಯಿತಿಯ ಕುವೆಂಪು ಸಭಾಂಗಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಕಸಾಪ ಸಂಸ್ಥಾಪನಾ ದಿನ ಆಚರಣೆಯ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, “ಸಾಹಿತ್ಯ ಪರಿಷತ್ತು ಪ್ರಾರಂಭವಾದ ದಿನದಿಂದ ಇಂದಿನವರೆಗೆ ಅನೇಕ ಸಾಹಿತಿಗಳು, ಸಂಘಟಕರು, ಕನ್ನಡದ ಪರಿಚಾರಕರು ಈ ಸಂಸ್ಥೆಯ ಪದಾಧಿಕಾರಿಗಳಾಗಿ ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದಾರೆ. ಅದರಿಂದಾಗಿ ಸಂಸ್ಥೆ 108 ವರ್ಷ ಮುನ್ನಡೆಯಲು ಸಾಧ್ಯವಾಗಿದೆ” ಎಂದು ತಿಳಿಸಿದರು.

ಇದನ್ನೂ ಓದಿ: Karnataka Election 2023 : 13 ಕ್ಷೇತ್ರಗಳಲ್ಲಿ ಹಾದು ಹೋದ ಮೋದಿ ರೋಡ್‌ ಶೋ; ಬೆಂಗಳೂರಿನಾದ್ಯಂತ ಸಂಚಲನ

ಪ್ರತಿಯೊಬ್ಬ ನಾಗರಿಕರು ಭಾಷಾ ಅಭಿಮಾನ ಹೊಂದಲಿ

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ಎನ್. ಮಂಜುನಾಥ ಕಾಮತ್ ಮಾತನಾಡಿ, “ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪನೆಯ ಮೂಲ ಉದ್ದೇಶ ನಾಡು, ನುಡಿ, ಭಾಷೆ, ನೆಲ, ಜಲದ ಸಂರಕ್ಷಣೆಯೊಂದಿಗೆ ಕನ್ನಡ ನಾಡನ್ನು ಅಭಿವೃದ್ಧಿಯತ್ತ ಸಾಗುವಂತೆ ಮಾಡುವುದಾಗಿದೆ. ನಮ್ಮ ನಾಡಿನ ಪ್ರತಿಯೊಬ್ಬ ನಾಗರಿಕರು ಭಾಷಾ ಅಭಿಮಾನವನ್ನು ಹೊಂದುವುದರ ಜತೆಗೆ ರಾಜ್ಯದ ಅಭಿವೃದ್ಧಿಗೆ ಕೈ ಜೋಡಿಸಿದಾಗ ನಮ್ಮ ಕನ್ನಡ ನಾಡು ಭಾರತದಲ್ಲಿ ಅಭಿವೃದ್ಧಿ ಹೊಂದಿದ ರಾಜ್ಯವಾಗಲಿದೆ” ಎಂದರು.

ಸಭೆಯ ಅಧ್ಯಕ್ಷತೆಯನ್ನು ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ತ.ಮ. ನರಸಿಂಹ ವಹಿಸಿದ್ದರು. ಕಾರ್ಯಕ್ರಮದ ಮೊದಲಲ್ಲಿ ಕಸಾಪ ಹೋಬಳಿ ಸಮಿತಿಯ ಕಾರ್ಯದರ್ಶಿ ಪಿಯೂಸ್‌ ರೋಡ್ರಿಗಸ್ ಪ್ರಾರ್ಥಿಸಿದರು. ಕಸಾಪ ಹಿರಿಯ ಸದಸ್ಯ ಹಸನಬ್ಬ ಸ್ವಾಗತಿಸಿ, ಪಿಯೂಸ್ ರೋಡ್ರಿಗಸ್ ವಂದಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather: 28 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ತಾಪಮಾನ; ಇನ್ನೊಂದು ವಾರ ಕಾದ ಕೆಂಡ

Heat Wave : ವಿಪರೀತ ತಾಪಮಾನವು ಜನರಿಗೆ ತಲೆ ಬಿಸಿ (highest temperature) ಮಾಡಿದೆ. ಅನಾರೋಗ್ಯ ಸಮಸ್ಯೆ ಹೆಚ್ಚಾಗುತ್ತಿದ್ದು, ಈ ನಡುವೆ ದಾಖಲೆಯಲ್ಲಿ ಉಷ್ಣಾಂಶ ಏರಿಕೆ ಆಗುತ್ತಿದೆ. ಮುಂದಿನ ಐದು ದಿನಗಳಿಗೆ ಹೀಟ್‌ ವೇವ್ಸ್‌ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka Weather
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬೇಸಿಗೆಯ ಬೇಗೆ ಶುರುವಾಗಿದ್ದು, ಜನರು ಹನಿ ನೀರಿಗೂ (Karnataka Weather Forecast) ಹೆಣಗಾಡುತ್ತಿದ್ದಾರೆ. ಈ ಮಧ್ಯೆ ರಾಜಧಾನಿ ಬೆಂಗಳೂರಲ್ಲಿ (temperature rising) ದಾಖಲೆಯ ಪ್ರಮಾಣದಲ್ಲಿ ಉಷ್ಣಾಂಶ ಏರಿಕೆ ಆಗಿದೆ. ಇದರಿಂದಾಗಿ ಜನರು ಪರಿತಪಿಸುವಂತಾಗಿದೆ (bangalore temperature) ಈ ಬಗ್ಗೆ ಹವಾಮಾನ ಇಲಾಖೆ (bangalore weather) ಮಾಹಿತಿ ನೀಡಿದೆ. ಬೆಂಗಳೂರು ಸೇರಿದಂತೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನಿನ್ನೆ ಗುರುವಾರ ಒಂದೇ ದಿನ ತಾಪಮಾನ ಏರಿಕೆ ಆಗಿದೆ.

ರಾಜಧಾನಿ ಬೆಂಗಳೂರಲ್ಲಿ ಗರಿಷ್ಠ ತಾಪಮಾನವು 37.8 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಕಳೆದ 28 ವರ್ಷದಲ್ಲೇ ಗರಿಷ್ಠ ತಾಪಮಾನ ಇದಾಗಿದೆ. ಕಳೆದೊಂದು ವಾರದಿಂದ 36 ಡಿಗ್ರಿ ಸೆಲ್ಸಿಯಸ್ ಇದ್ದ ತಾಪಮಾನವು ನಿನ್ನೆ ಗುರುವಾರ 37.8 ಡಿ.ಸೆಗೆ ಏರಿಕೆ ಆಗಿತ್ತು. 1996ರಲ್ಲಿ ಬೆಂಗಳೂರಲ್ಲಿ 37.3 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿತು, ಇದೀಗ ಈ ದಾಖಲೆಯು ನಿನ್ನೆ ಉಡೀಸ್‌ ಆಗಿದೆ. ಇಷ್ಟೊಂದು ತಾಪಮಾನದಲ್ಲಿ ಜನರು ತಿರುಗಾಡಿದರೆ ಖಂಡಿತವಾಗಿಯೂ ಅನಾರೋಗ್ಯಕ್ಕೆ ತುತ್ತಾಗಲಿದ್ದಾರೆ.

ಬೆಂಗಳೂರು ಮಾತ್ರವಲ್ಲ ಕಲಬುರಗಿ, ಬಾಗಲಕೋಟೆ, ರಾಯಚೂರು, ಬಳ್ಳಾರಿ ಹಾಗೂ ವಿಜಯಪುರ, ಕೊಪ್ಪಳದಲ್ಲಿ ಅತ್ಯಾಧಿಕ ತಾಪಮಾನ ದಾಖಲಾಗಿದೆ. ಈ ಬಗ್ಗೆ ಗರಿಷ್ಠ ಉಷ್ಣಾಂಶ ದಾಖಲಾದ ಬಗ್ಗೆ ಹವಾಮಾನ ಇಲಾಖೆ ಪಟ್ಟಿ ಬಿಡುಗಡೆ ಮಾಡಿದೆ.

ಜಿಲ್ಲೆಗರಿಷ್ಠ ತಾಪಮಾನದಿನ ಹಾಗೂ ವರ್ಷ
ಬೆಂಗಳೂರು37.3 ಡಿ.ಸೆ29th 1996
ಕಲಬುರಗಿ4331st 1996
ಬಾಗಲಕೋಟೆ41.631st 1996
ರಾಯಚೂರು44.627th 1992
ಬಳ್ಳಾರಿ4330th 1996
ಕೊಪ್ಪಳ40.224th 2019
ವಿಜಯಪುರ41.929, 30th 1996

ಇನ್ನೂ 5 ದಿನಗಳು ಸುಡುವ ಕೆಂಡ

ಬೇಸಿಗೆ ಆರಂಭವಾಗುವ ಮೊದಲೇ ಜನರು ಬೇಸಿಗೆಯ ಅನುಭವಿಸಿದ್ದರು. ಮಾರ್ಚ್‌ ಮುಗಿಯುವ ಮೊದಲೇ ಸೂರ್ಯ ದಿನೇದಿನೆ ಪ್ರಖರವಾಗುತ್ತಿದ್ದಾನೆ. ಎಲ್ಲ ರಾಜ್ಯಗಳಲ್ಲೂ ಬೇಸಿಗೆಯನ್ನು ಎದುರಿಸಲು, ಅಗತ್ಯ ಪರಿಹಾರ ಕ್ರಮ ತೆಗೆದುಕೊಳ್ಳಿ ಎಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.

ಈ ಬೆನ್ನಲ್ಲೇ ಮುಂದಿನ ಐದು ದಿನಗಳು ಕೆಲವು ಕಡೆ 40 ರಿಂದ 50 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಇದು ಖಂಡಿತವಾಗಿಯೂ ಆರೋಗ್ಯಕ್ಕೆ ತುಂಬಾ ಅಪಾಯಕಾರಿಯಾದ ತಾಪಮಾನವಾಗಿದೆ.

ಆರೋಗ್ಯ ಇಲಾಖೆಯ ಮಾರ್ಗಸೂಚಿ ಹೀಗಿದೆ..

ಸೂರ್ಯನ ತಾಪವು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಬೇವರಿಸುವ ಸೂರ್ಯನ ಶಾಖವು ಜನರು ಆರೋಗ್ಯದ ಮೇಲೂ ಪರಿಣಾಮ (Health Tips) ಬೀರುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆಯು (Health Department) ಕೆಲವು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕರು ಏನು ಮಾಡಬೇಕು ಏನು ಮಾಡಬಾರದು ಎಂಬ ಸಲಹೆಗಳನ್ನೂ ನೀಡಲಾಗಿದೆ. ಜತೆಗೆ ಮಾಲೀಕರು ಹಾಗೂ ಕೆಲಸಗಾರರಿಗೂ ಒಂದಷ್ಟು ಮುಂಜಾಗ್ರತಾ ಕ್ರಮಗಳನ್ನು (Health Tips) ಕೈಗೊಳ್ಳಲಾಗಿದೆ.

ತಾಪಮಾನದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳೇನು?

ಸಾಮಾನ್ಯವಾಗಿ ದೇಹದ ಉಷ್ಣತೆಯು 36.4 ಡಿ.ಸೆ ನಿಂದ 37.2 ಡಿ.ಸೆ ಇರಲಿದೆ. ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ ಉಷ್ಣತೆಯಿಂದಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಸಾಧಾರಣದಿಂದ ತೀವ್ರ ಜ್ವರ, ಗಂಧೆಗಳು (prickly heat), ಊತಗಳು ( ಕೈ-ಕಾಲುಗಳು ಹಾಗೂ ಮೊಣಕಾಲು), ಉಷ್ಣತೆಯಿಂದ ಸೆಳೆತ (ಸ್ನಾಯುಗಳ ಸೆಳೆತ), ಪ್ರಜ್ಞೆ ತಪ್ಪುವುದು, ಸುಸ್ತಾಗುವುದು ಹಾಗೂ ಪಾಶ್ವವಾಯು ಉಂಟಾಗಲಿದೆ. ಕೆಲವೊಮ್ಮೆ ಅತಿಯಾದ ಉಷ್ಣತೆಯಿಂದಾಗಿ ಹೃದ್ರೋಗ, ಉಸಿರಾಟದ ಸಮಸ್ಯೆಗಳು ಹಾಗೂ ಕಿಡ್ನಿ ಸಮಸ್ಯೆಗಳು ಹೆಚ್ಚಾಗುತ್ತದೆ. ಅತಿಯಾದ ಬಾಯಾರಿಕೆ, ವಾಕರಿಕೆ ಅಥವಾ ವಾಂತಿಯಾಗುವುದು, ತಲೆನೋವು ಹಾಗೂ ಮೂತ್ರ ವಿಸರ್ಜನೆ ಪ್ರಮಾಣದಲ್ಲಿ ಕಡಿಮೆಯಾಗುವುದು ಹಾಗೂ ಹಳದಿ ಬಣ್ಣದ ಮೂತ್ರ, ಏರು ಗತಿಯ ಉಸಿರಾಟ ಹಾಗೂ ಹೃದಯದ ಬಡಿತ ಹೆಚ್ಚಾಗಲಿದೆ.

ಏನು ಮಾಡಬೇಕು?
-ತಕ್ಷಣವೇ ತಂಪಾದ ಸ್ಥಳಕ್ಕೆ ತೆರಳಿ ಮತ್ತು ದ್ರವಾಹಾರವನ್ನು ಸೇವಿಸಿ. ನೀರಿನ ಸೇವನೆ ಅತ್ಯುತ್ತಮ.
-ಹೆಚ್ಚು ನೀರು ಕುಡಿಯುವುದು. ಬಾಯಾರಿಕೆ ಇಲ್ಲದಿದ್ದರೂ ಆಗಾಗ ನೀರು ಸೇವಿಸಿ. ಜತೆಗೆ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ, ಲಸ್ಸಿ ಹಾಗು ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮ.
-ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟೂಸ್, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
-ತಿಳಿ ಬಣ್ಣದ, ಅಳಕವಾದ (loose fitting) ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.
-ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸಿ ಬಿಸಿಲಿನಿಂದ ರಕ್ಷಣೆ ಪಡೆಯಿರಿ.
-ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ / ಚಪ್ಪಲಿ ಅಥವಾ ಶೂಸ್‌ಗಳನ್ನು ಧರಿಸಬೇಕು.
-ಸಾಧ್ಯವಾದಷ್ಟು ಒಳಾಂಗಣದಲ್ಲಿದ್ದು, ಉತ್ತಮ ಗಾಳಿ ಬೀಸುವ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಿ. ನೇರವಾಗಿ ಸೂರ್ಯನ ಬೆಳಕು ಹಾಗೂ ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಲು ಹಗಲು ಹೊತ್ತಿನಲ್ಲಿ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿ.

ಇದನ್ನೂ ಓದಿ: Side Effects Of Pillow: ಎತ್ತರದ ದಿಂಬು ಬಳಸುತ್ತೀರಾ? ಸಮಸ್ಯೆ ತಪ್ಪಿದ್ದಲ್ಲ!

ಈ ಕೆಲಸವನ್ನು ಮಾಡಬಾರದು

-ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಿ.
-ಮಧ್ಯಾಹ್ನದ ಸಮಯದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
-ಮಧ್ಯಾಹ್ನ ಅಡುಗೆ ಮಾಡುವುದು ತಪ್ಪಿಸಿ. ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆದಿಡಿ.
-ಮಧ್ಯಪಾನ, ಟೀ, ಕಾಫಿ ಮತ್ತು ಕಾರ್ಬೋನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ. ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
-ಹೆಚ್ಚು ಪ್ರೊಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
-ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನಾಪಮಾನವು ಅಪಾಯಕಾರಿಯಾಗಬಹುದು.
-ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆಯ ನೀರಿನ ವ್ಯವಸ್ಥೆ ಮಾಡಬೇಕು. 20 ನಿಮಿಷಗಳಿಗೊಮ್ಮೆ ಒಂದು ಗ್ಲಾಸ್‌ ಅಥವಾ ಅದಕ್ಕಿಂತ ಹೆಚ್ಚಿನ ನೀರು ಕುಡಿಬೇಕು

Heat wave

ಅಗ್ನಿ ಅವಘಡದ ಕುರಿತು ಎಚ್ಚರಿಕೆ ವಹಿಸಿ

ಬೇಸಿಗೆ ಸಮಯದಲ್ಲಿ ಅತಿಯಾದ ತಾಪಮಾನದಿಂದ ಆರೋಗ್ಯ ಕೇಂದ್ರಗಳಲ್ಲಿ ಅಗ್ನಿ ಅನಾಹುತಗಳಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತೆಯನ್ನು ವಹಿಸುವಂತೆ ಆರೋಗ್ಯ ಇಲಾಖೆಯ ಆಯುಕ್ತ ರಂದೀಪ್‌ ಎಲ್ಲಾ ಆಸ್ಪತ್ರೆಗಳಿಗೂ ಸೂಚನೆ ನೀಡಿದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರಗಳೂ ಸೇರಿದಂತೆ ಎಲ್ಲಾ ಹಂತದ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ, ವೈದ್ಯಕೀಯ ಕಾಲೇಜು ಆಸ್ಪತ್ರೆ ಹಾಗೂ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ, ಬೆಂಕಿ ನಂದಿಸುವ ಉಪಕರಣಗಳ ಲಭ್ಯತೆ ಇರಬೇಕು. ಅಗ್ನಿಶಾಮಕ ದಳದಿಂದ No Objection Certificate ಅನ್ನು ಹೊಂದಿರಬೇಕು. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಕೈಗೊಂಡು ಆರೋಗ್ಯ ಸಂಸ್ಥೆಗಳಲ್ಲಿ ಅಗ್ನಿ ಅವಘಡಗಳನ್ನು ತಡೆಗಟ್ಟುವಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಉತ್ತರದಲ್ಲಿ ಬಿಸಿಲ ಏಟು; ಮಲೆನಾಡು, ಕರಾವಳಿಯಲ್ಲಿ ಮಳೆಯಾಟ

Heat Wave Alert: ಉತ್ತರ ಒಳನಾಡಿನ 4 ಜಿಲ್ಲೆಗಳಲ್ಲಿ ಹೀಟ್‌ ವೇವ್‌ ಅಲರ್ಟ್‌ (Karnataka Weather Forecast) ನೀಡಲಾಗಿದ್ದು, ಈ ನಡುವೆ ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ.

VISTARANEWS.COM


on

By

Karnataka Weather
Koo

ಬೆಂಗಳೂರು: ಉತ್ತರ ಒಳನಾಡಿನಲ್ಲಿ ವಿಪರೀತ ತಾಪಮಾನ (Temperature Forecast) ಇದ್ದರೆ, ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಮೈಸೂರು ಜಿಲ್ಲೆಯಲ್ಲಿ ಚದುರಿದಂತೆ ಸಾಧಾರಣ ಮಳೆ ಸಾಧ್ಯತೆ ಉಳಿದಂತೆ ಚಾಮರಾಜನಗರ ಹಾಗೂ ಕರಾವಳಿಯ ದಕ್ಷಿಣ ಕನ್ನಡ ಸೇರಿ ಮಲೆನಾಡಿನ ಉತ್ತರ ಕನ್ನಡ, ಶಿವಮೊಗ್ಗ, ಕೊಡಗು ಮತ್ತು ಹಾಸನ ಚಿಕ್ಕಮಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ರಾಜ್ಯಾದ್ಯಂತ ಶುಷ್ಕ ವಾತಾವರಣ (Dry Weather) ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಜತೆಗೆ ಮುಂದಿನ ಐದು ದಿನಗಳಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2-3ಡಿ.ಸೆ ಹೆಚ್ಚಾಗುವ ಸಾಧ್ಯತೆ ಇದೆ.

ಮುಂದಿನ 2 ದಿನಗಳಲ್ಲಿ ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ಬೀದರ್‌ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಶಾಖದ ಅಲೆಗಳ ಸಾಧ್ಯತೆ ಇದೆ. ಬಿಸಿಗಾಳಿ ಬೀಸಲಿದ್ದು, ಉರಿ ಬಿಸಿಲು ಜನರನ್ನು ತತ್ತರಿಸುವಂತೆ ಮಾಡಿದೆ. ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 35 ಹಾಗೂ ಕನಿಷ್ಠ ಉಷ್ಣಾಂಶ 21 ಡಿ.ಸೆ ದಾಖಲಾಗಿದೆ. ಕೆಲವೊಮ್ಮೆ ಬಿಸಿ ಗಾಳಿ ಬೀಸಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 36 ಡಿ.ಸೆ – 22 ಡಿ.ಸೆ
ಮಂಗಳೂರು: 35 ಡಿ.ಸೆ – 26 ಡಿ.ಸೆ
ಚಿತ್ರದುರ್ಗ: 37 ಡಿ.ಸೆ – 21 ಡಿ.ಸೆ
ಗದಗ: 39 ಡಿ.ಸೆ – 23 ಡಿ.ಸೆ
ಹೊನ್ನಾವರ: 34 ಡಿ.ಸೆ- 25 ಡಿ.ಸೆ
ಕಲಬುರಗಿ: 41 ಡಿ.ಸೆ – 26 ಡಿ.ಸೆ
ಬೆಳಗಾವಿ: 37 ಡಿ.ಸೆ – 22 ಡಿ.ಸೆ
ಕಾರವಾರ: 36 ಡಿ.ಸೆ – 26 ಡಿ.ಸೆ

ಇದನ್ನೂ ಓದಿ: Summer Fashion: ಸಮ್ಮರ್‌ ಸೀಸನ್‌ನಲ್ಲಿ ಸಿಂಪಲ್‌ ಸ್ಲಿವ್‌ಲೆಸ್‌ ಗೌನ್‌ಗಳ ಹಂಗಾಮ!

ಬೇಸಿಗೆಯಲ್ಲಿ ಕರಬೂಜದ ಹಣ್ಣನ್ನು ಭರಪೂರ ತಿನ್ನಿ!

ʻಬಂತಲ್ಲ ಬೇಸಿಗೆ, ಕೆಟ್ಟ ಬಿಸಿಲುʼ ಎಂದು ಗೊಣಗುವವರಿಗೆ ಬೇಸಿಗೆಯ ಹಣ್ಣುಗಳ ಪರಿಚಯ ಇದೆಯೋ ಇಲ್ಲವೋ. ಕಲ್ಲಂಗಡಿ, ದ್ರಾಕ್ಷಿಯಿಂದ ಹಿಡಿದು ಕರಬೂಜ, ಮಾವಿನಹಣ್ಣುಗಳವರೆಗೆ, ಬಳಲುವ ಶರೀರಗಳ ದಾಹ ತಣಿಸಲೋ ಎಂಬಂತೆ ನಿಸರ್ಗವೇ ಮಾಡಿಕೊಟ್ಟ ಅನುಕೂಲವಿದು. ಕರಬೂಜಕ್ಕೆ ಮಧುಫಲ ಎಂಬ ಹೆಸರೂ ಇದೆ. ಕಲ್ಲಂಗಡಿ, ಕುಂಬಳಕಾಯಿಗಳ ಜಾತಿಗೆ ಸೇರಿದ ಈ ಹಣ್ಣು ಮೊದಲಿಗೆ ಪಶ್ಚಿಮ ಏಷ್ಯಾ ದೇಶಗಳ ಬೆಳೆಯಾಗಿದ್ದರೂ, ನಂತರದ ವರ್ಷಗಳಲ್ಲಿ ಬ್ರೆಜಿಲ್‌, ಅಮೆರಿಕಾ ಮತ್ತು ಏಷ್ಯಾದ ಹಲವಾರು ಭಾಗಗಳಿಗೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಭಾರತದಲ್ಲೂ ತಮಿಳುನಾಡು, ಆಂಧ್ರ, ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಇದನ್ನು ಬೆಳೆಯಲಾಗುತ್ತದೆ. ಏನಿವೆ ಇದನ್ನು ತಿನ್ನುವುದರ ಲಾಭಗಳು (Muskmelon Benefits) ಎಂಬುದನ್ನು ನೋಡೋಣ.

muskmelon

ಪೌಷ್ಟಿಕಾಂಶಗಳು ಏನಿವೆ?

ವಿಟಮಿನ್‌ ಸಿ ಹೆಚ್ಚಿನ ಪ್ರಮಾಣದಲ್ಲಿರುವ ಫಲವಿದು. ಬೇಸಿಗೆಯಲ್ಲಿ ದಾಳಿ ಇಡಬಹುದಾದ ರೋಗಗಳನ್ನು ದೂರ ಇರಿಸುವುದಕ್ಕೆ ಅಗತ್ಯವಾದ ರಕ್ಷಾಕವಚನ್ನು ಸಿ ಜೀವಸತ್ವ ಒದಗಿಸುತ್ತದೆ. ಜೊತೆಗೆ, ಕಣ್ಣು, ಕೂದಲು ಮತ್ತು ಚರ್ಮಗಳ ಸ್ವಾಸ್ಥ್ಯಕ್ಕೆ ಬೇಕಾದ ವಿಟಮಿನ್‌ ಎ ಸಹ ಹೇರಳವಾಗಿದೆ. ಇದರಲ್ಲಿರುವ ಗ್ಯಾಲಿಕ್‌ ಆಮ್ಲ, ಎಲಾಜಿಕ್‌ ಆಮ್ಲದಂಥ ಆಂಟಿ ಆಕ್ಸಿಡೆಂಟ್‌ಗಳು ದೇಹದಲ್ಲಿ ಕೋಶಗಳ ಹಾನಿಯನ್ನು ತಡೆದು, ಶರೀರವನ್ನು ಪುನರುಜ್ಜೀವನಗೊಳಿಸುತ್ತವೆ. ರಕ್ತನಾಳಗಳನ್ನು ಸಡಿಲಿಸಿ, ರಕ್ತ ಪರಿಚಲನೆಯನ್ನು ಚುರುಕುಗೊಳಿಸುತ್ತದೆ. ಹಾಗಾಗಿ ಬೇಸಿಗೆಯಲ್ಲಿ ಕರಬೂಜದ ಹಣ್ಣನ್ನು ಯಥಾವತ್‌ ಆಗಿ ಅಥವಾ, ಪಾನಕ, ಸಲಾಡ್‌ ಯಾವುದೇ ರೀತಿಯಲ್ಲಿ ಸೇವಿಸಲು ಯೋಗ್ಯವಾಗಿದೆ.

Different Types of Tasty Ripe Melons on Wooden Table

ಬಹೂಪಯೋಗಿ ಹಣ್ಣು

ಮಾನಸಿಕ ಒತ್ತಡವನ್ನು ಕಳೆದು ದೇಹ ಮತ್ತು ಮನಸ್ಸಿಗೆ ತಂಪೆರೆಯುವ ಸಾಮರ್ಥ್ಯ ಇದಕ್ಕಿದೆ. ಜೊತೆಗೆ, ಇದರಲ್ಲಿರುವ ಪೊಟಾಶಿಯಂನಂಥ ಖನಿಜಗಳು ನಿದ್ದೆಯನ್ನು ಉದ್ದೀಪಿಸುವ ಗುಣ ಹೊಂದಿವೆ. ಅಧಿಕ ನೀರಿನಂಶದಿಂದ ದೇಹದ ಬಳಲಿಕೆಯನ್ನೂ ದೂರ ಮಾಡಿ, ಕಣ್ತುಂಬಾ ನಿದ್ದೆ ಬರಿಸುತ್ತದೆ. ಇದರಲ್ಲಿರುವ ವಿಟಮಿನ್‌ ಎ ಅಂಶವು ದೃಷ್ಟಿಯನ್ನು ಚುರುಕುಗೊಳಿಸಿ, ಕಣ್ಣನ್ನು ಸೋಂಕುಗಳಿಂದ ರಕ್ಷಿಸುತ್ತದೆ. ಈ ಹಣ್ಣಿನ ಪ್ರಖರ ಹಳದಿ, ಕಿತ್ತಳೆ ಮತ್ತು ಕೆಂಪು ಬಣ್ಣಗಳು ಹೆಚ್ಚಿನ ಕೆರೋಟಿನಾಯ್ಡ್‌ಗಳಿರುವ ಸಂಕೇತ. ಈ ಅಂಶ ಹೆಚ್ಚಿದ್ದಷ್ಟೂ ಕಣ್ಣಿನ ಆರೋಗ್ಯಕ್ಕೆ ಉತ್ತಮ.
ಉದರ ಸಂಬಂಧೀ ಸಮಸ್ಯೆಗಳಿಗೂ ಇದು ಮದ್ದು. ಅಜೀರ್ಣದ ಸಮಸ್ಯೆಗಳನ್ನು ದೂರ ಮಾಡಿ, ಅಸಿಡಿಟಿಯನ್ನು ಹತೋಟಿಯಲ್ಲಿ ಇರಿಸುತ್ತದೆ. ಮಾತ್ರವಲ್ಲ, ನಿಯಮಿತ ಸೇವನೆಯಿಂದ ಹೊಟ್ಟೆ ಹುಣ್ಣು ಮತ್ತು ಮಲಬದ್ಧತೆಗೂ ಉಪಶಮನ ನೀಡುತ್ತದೆ. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನಾರಿನ ಅಂಶದಿಂದಾಗಿ ಸಹಜ ವಿರೇಚಕದಂತೆ ಕೆಲಸ ಮಾಡಿ, ಹೊಟ್ಟೆಯನ್ನು ಸ್ವಚ್ಛ ಮಾಡುತ್ತದೆ.

Heart Health In Winter

ಹೃದಯ-ಸ್ನೇಹಿ

ಇದೇ ಪೊಟಾಶಿಯಂ ಸತ್ವಗಳಿಂದಾಗಿ, ರಕ್ತದ ಒತ್ತಡ ನಿಯಂತ್ರಣಕ್ಕೆ ನೆರವು ದೊರೆಯುತ್ತದೆ ಮತ್ತು ಹೃದಯದ ಆರೋಗ್ಯ ಕಾಪಾಡುವಲ್ಲಿ ನೆರವಾಗುತ್ತದೆ. ಅದಲ್ಲದೆ, ಹೃದಯಸ್ನೇಹಿ ಎನಿಸಿಕೊಳ್ಳುವುದಕ್ಕೆ ಮತ್ತೂ ಕಾರಣಗಳಿವೆ. ಕರಬೂಜದಲ್ಲಿರುವ ಅಡೆನೋಸಿನ್‌ ಎಂಬ ಅಂಶವು ರಕ್ತ ಹೆಪ್ಪುಗಟ್ಟದಂತೆ ನೋಡಿಕೊಳ್ಳುವ ಮತ್ತು ರಕ್ತ ನೀರಾಗಿಸುವ ಗುಣವನ್ನು ಹೊಂದಿದೆ. ಹಾಗಾಗಿ ಹೃದಯಕ್ಕೆ ರಕ್ತ ಪೂರೈಕೆಯಲ್ಲಿ ತೊಂದರೆಯಾಗದಂತೆ ಕಾಪಾಡುತ್ತದೆ.
ಮಹಿಳೆಯರಿಗೆ ಮುಟ್ಟಿನ ದಿನಗಳಲ್ಲಿ ಕಾಡುವ ಹೊಟ್ಟೆನೋವನ್ನು ಶಮನ ಮಾಡಬಲ್ಲದು. ರಕ್ತ ನೀರಾಗುವಂತೆ ನೋಡಿಕೊಳ್ಳುವ ಗುಣದಿಂದಲೇ, ರಕ್ತಸ್ರಾವ ಸರಾಗವಾಗುವಂತೆ ಮಾಡಿ ಹೊಟ್ಟೆಯ ನೋವನ್ನು ಕಡಿಮೆ ಮಾಡುತ್ತದೆ. ಹಾಗಾಗಿ ಮುಟ್ಟಿನ ಮೊದಲ ದಿನವೇ ಕರಬೂಜ ಸೇವನೆಯನ್ನು ಪರಂಪರಾಗತ ವೈದ್ಯ ಪದ್ಧತಿಯನ್ನು ಪ್ರೋತ್ಸಾಹಿಸುತ್ತಾರೆ.

weight loss

ತೂಕ ಇಳಿಕೆಗೆ

ತಿನ್ನುವುದಕ್ಕೆ ಸಿಹಿ ರುಚಿಯ ಈ ಹಣ್ಣಿನಲ್ಲಿರುವ ಕ್ಯಾಲರಿಗಳು ಕಡಿಮೆ. ನೀರಿನ ಪ್ರಮಾಣವೇ ಹೆಚ್ಚಿರುವುದರಿಂದ ತೂಕ ಇಳಿಸುವವರಿಗೆ ಒಳ್ಳೆಯ ಆಯ್ಕೆ. ಬೇಗ ಹೊಟ್ಟೆ ತುಂಬಿದ ಅನುಭವ ನೀಡಿ, ದೀರ್ಘಕಾಲದವರೆಗೆ ಹೊಟ್ಟೆ ಹಸಿವಾಗದಂತೆ ಕಾಪಾಡುತ್ತದೆ. ಹೆಚ್ಚು ನೀರಿನಂಶ ಹೊಂದಿರುವ ಇದು ಶರೀರವನ್ನು ತಂಪಾಗಿಸುವ ಗುಣವನ್ನು ಹೊಂದಿದೆ. ಜೊತೆಗೆ, ಡೈಯುರೇಟಿಕ್‌ ಸಹ ಹೌದಾಗಿದ್ದು, ಬೇಡದ ಕಶ್ಮಲಗಳನ್ನು ದೇಹದಿಂದ ಹೊರದೂಡುತ್ತದೆ. ಮೂತ್ರಪಿಂಡಗಳ ಆರೋಗ್ಯವನ್ನೂ ರಕ್ಷಿಸುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕಲಬುರಗಿಯಲ್ಲಿ 40ರ ಗಡಿದಾಟಿದ ತಾಪಮಾನ; 4 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌

Rain News : ರಾಜ್ಯದಲ್ಲಿ ಮಳೆ ಕಾಣೆಯಾಗಿದ್ದು, ಇನ್ನೆರಡು ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ ಹೀಟ್‌ ವೇವ್‌ ಅಲರ್ಟ್‌ (Heat wave Alert) ನೀಡಲಾಗಿದೆ. ಹವಾಮಾನ ಇಲಾಖೆ (karnataka Weather Forecast) ಈ ಬಗ್ಗೆ ಎಚ್ಚರಿಕೆಯನ್ನು ನೀಡಿದೆ.

VISTARANEWS.COM


on

By

Karnataka Weather
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಶುಷ್ಕ ವಾತಾವರಣ (Dry Weather) ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಜತೆಗೆ ಮುಂದಿನ ಐದು ದಿನಗಳಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2-3ಡಿ.ಸೆ ಹೆಚ್ಚಾಗುವ ಸಾಧ್ಯತೆ ಇದೆ.

ಪ್ರಸ್ತುತ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಹವಾಮಾನ ಮೌಲ್ಯದ 90% ಮೀರಿದೆ. ಇನ್ನು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಶಾಖ ಸೂಚ್ಯಂಕವು 40-50 ಡಿ.ಸೆ ವ್ಯಾಪ್ತಿಯಲ್ಲಿರಲಿದೆ.

ಮುಂದಿನ 2 ದಿನಗಳಲ್ಲಿ ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ಬೀದರ್‌ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಶಾಖದ ಅಲೆಗಳ ಸಾಧ್ಯತೆ ಇದೆ. ಬಿಸಿಗಾಳಿ ಬೀಸಲಿದ್ದು, ಉರಿ ಬಿಸಿಲು ಜನರನ್ನು ತತ್ತರಿಸುವಂತೆ ಮಾಡಿದೆ.

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 35 ಹಾಗೂ ಕನಿಷ್ಠ ಉಷ್ಣಾಂಶ 21 ಡಿ.ಸೆ ದಾಖಲಾಗಿದೆ. ಕೆಲವೊಮ್ಮೆ ಬಿಸಿ ಗಾಳಿ ಬೀಸಲಿದೆ.

ಇದನ್ನೂ ಓದಿ: Health Tips : ಬೇಸಿಗೆಯಲ್ಲಿ ಲೈಫ್‌ಸ್ಟೈಲ್‌ ಹೇಗಿರಬೇಕು? ಆರೋಗ್ಯ ಇಲಾಖೆಯಿಂದ ಸರಳ ಸೂತ್ರ

ಇನ್ನೂ ಬುಧವಾರದಂದು ರಾಜ್ಯಾದ್ಯಂತ ಒಣ ಹವೆ ಇತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶವು 40 ಡಿ.ಸೆ ದಾಖಲಾಗಿತ್ತು. ಮಂಡ್ಯದ ಎಡಬ್ಲ್ಯೂಎಸ್‌ನಲ್ಲಿ ಕನಿಷ್ಠ ಉಷ್ಣಾಂಶ 16.7 ಡಿ.ಸೆ ಇತ್ತು. ಸರಾಸರಿ ಕನಿಷ್ಠ ಉಷ್ಣಾಂಶ ಕೋಲಾರದಲ್ಲಿ 18.1 ಡಿಗ್ರಿ ಸೆಲ್ಸಿಯಸ್ ಹಾಗೂ ರಾಯಚೂರು ಜಿಲ್ಲೆಯಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 40.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ಬೆಂಗಳೂರು ನಗರ, ಕೋಲಾರ, ಹಾಸನ, ರಾಮನಗರ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ನಿಂದ 18 ಡಿಗ್ರಿ ಸೆಲ್ಸಿಯಸ್ ಇತ್ತು. ಹಾವೇರಿ, ಬಾಗಲಕೋಟೆ, ರಾಯಚೂರು ಮತ್ತು ಕೊಪ್ಪಳದ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 42 ಡಿಗ್ರಿ ಸೆಲ್ಸಿಯಸ್ ನಿಂದ 44 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ದಾಖಲಾಗಿದೆ.

Summer Fashion: ಸಮ್ಮರ್‌ ಸೀಸನ್‌ನಲ್ಲಿ ಸಿಂಪಲ್‌ ಸ್ಲಿವ್‌ಲೆಸ್‌ ಗೌನ್‌ಗಳ ಹಂಗಾಮ!


ಸಮ್ಮರ್‌ ಸೀಸನ್‌ನಲ್ಲಿ (Summer Fashion) ಇದೀಗ ಸ್ಲಿವ್‌ಲೆಸ್‌ ಗೌನ್‌ಗಳ ಹಂಗಾಮ ಹೆಚ್ಚಾಗಿದೆ. ನೋಡಲು ಮಾತ್ರವಲ್ಲ, ಧರಿಸಿದಾಗ ಈ ಸೀಸನ್‌ನಲ್ಲಿ ಹೆಚ್ಚು ಸೆಕೆಯಾಗದಂತೆ, ಕಂಫರ್ಟಬಲ್‌ ಫೀಲ್‌ ಆಗುವಂತಹ ನಾನಾ ಡಿಸೈನ್ನ ಅದರಲ್ಲೂ ಲೈಟ್‌ವೈಟ್‌ ಫ್ಯಾಬ್ರಿಕ್‌ನ ತೋಳಿಲ್ಲದ ಈ ಗೌನ್‌ಗಳು ನಾನಾ ಡಿಸೈನ್‌ನಲ್ಲಿ ಮಾರುಕಟ್ಟೆಗೆ ಕಾಲಿಟ್ಟಿವೆ.

Summer Fashion

ಕಂಫರ್ಟಬಲ್‌ ಡಿಸೈನ್‌ ಗೌನ್‌

“ಸ್ಲಿವ್‌ಲೆಸ್‌ ಗೌನ್‌ಗಳು ಸಮ್ಮರ್‌ ಸೀಸನ್‌ನ ಟ್ರೆಂಡಿ ಗೌನ್‌ಗಳು ಎನ್ನಬಹುದು. ಇವು ಸೆಕೆಯಾಗುವುದಿಲ್ಲ. ಆರಾಮ ಎಂದೆನಿಸುತ್ತವೆ. ಇನ್ನು, ಈ ಸೀಸನ್‌ಗೆ ಪೂರಕ ಎಂಬಂತೆ, ಡಿಸೈನ್‌ಗಳನ್ನು ಹೊಂದಿರುತ್ತವೆ. ತೀರಾ ಟೈಟ್‌ ಫಿಟ್ಟಿಂಗ್‌ ಆಗಿರುವುದಿಲ್ಲ. ಅದರಲ್ಲೂ ಲೇಯರ್‌ ಇನ್ನರ್‌ ಲೈನಿಂಗ್‌ ಹೊಂದಿರುವುದಿಲ್ಲ. ಲೈಟ್‌ವೈಟಾಗಿರುತ್ತವೆ. ಅಂತಹ ಫ್ಯಾಬ್ರಿಕನ್ನೇ ಇವುಗಳನ್ನು ವಿನ್ಯಾಸ ಮಾಡಲು ಆಯ್ಕೆ ಮಾಡಲಾಗಿರುತ್ತದೆ. ವೆಡ್ಡಿಂಗ್‌ ಸೀಸನ್‌ಗೆ ಸೂಕ್ತವಾಗಿರುವುದು ಮಾತ್ರವಲ್ಲ, ಪಾರ್ಟಿವೇರ್‌ ಗೌನ್‌ಗಳು ಹಾಗೂ ಫೋಟೋಶೂಟ್‌ ಗೌನ್‌ಗಳು ಈ ಸೀಸನ್‌ಗೆ ತಕ್ಕಂತೆ ಬಿಡುಗಡೆಗೊಂಡಿವೆ” ಎನ್ನುತ್ತಾರೆ ಗೌನ್‌ ಡಿಸೈನರ್ ರಾಜನ್‌. ಅವರ ಪ್ರಕಾರ, ಇಂತಹ ಗೌನ್‌ಗಳು ಈ ಸೀಸನ್‌ಗೆಂದೇ ಸಿದ್ಧಪಡಿಸಲಾಗಿರುತ್ತದೆ ಎನ್ನುತ್ತಾರೆ.

Summer Fashion

ಟ್ರೆಂಡಿಯಾಗಿರುವ ಗೌನ್‌ ಡಿಸೈನ್ಸ್

ಸ್ಲಿವ್‌ಲೆಸ್‌ ಬಾರ್ಡರ್ ಗೌನ್ಸ್, ಎಥ್ನಿಕ್‌ ಡಿಸೈನ್ಸ್, ಸ್ಯಾಟಿನ್‌ ಗೌನ್ಸ್, ನೆಟ್ಟೆಡ್‌ ಸ್ಲಿವ್‌ಲೆಸ್‌ ಗೌನ್ಸ್, ಹಾಲ್ಟರ್‌ ನೆಕ್‌ ಗೌನ್ಸ್, ಸ್ವಿಂಗ್‌ ನೆಕ್‌ಲೈನ್‌ ಗೌನ್ಸ್, ಟೈಯಿಂಗ್‌ ಸ್ಲಿವ್‌ಲೆಸ್‌ ಗೌನ್ಸ್, ಶೋಲ್ಡರ್‌ಲೆಸ್‌ ಗೌನ್‌ಗಳು ಸೇರಿದಂತೆ ನಾನಾ ಬಗೆಯವು ಈ ಸೀಸನ್‌ಗೆ ಎಂಟ್ರಿ ನೀಡಿವೆ. ಇನ್ನು ಫುಲ್‌ಸ್ಲೀವ್‌ ಗೌನ್‌ಗಳು ಹಾಗೂ ಪಫ್‌ ಸ್ಲೀವ್‌, ಟೈಟ್‌ ಸ್ಲೀವ್‌ ಗೌನ್‌ಗಳು ಸದ್ಯಕ್ಕೆ ಸೈಡಿಗೆ ಸರಿದಿವೆ. ಮಾನ್ಸೂನ್‌ವರೆಗೂ ಇವು ಹಿಂದಿರುಗುವ ಯಾವುದೇ ಮುನ್ಸೂಚನೆಗಳು ಕಾಣುತ್ತಿಲ್ಲ ಎನ್ನುತ್ತಾರೆ ಸ್ಟೈಲಿಸ್ಟ್ ರಿಚಾ ಖಾನ್‌. ಅವರು ಹೇಳುವಂತೆ, ಈ ಸೀಸನ್‌ ಗೌನ್‌ಗಳು ಆದಷ್ಟೂ ಶಾರ್ಟ್ ಸ್ಲಿವ್‌ ಅಥವಾ ಸ್ಲಿವ್‌ಲೆಸ್‌ ಹೊಂದಿರುತ್ತವಂತೆ.

ಪಾರ್ಟಿವೇರ್‌ ಸ್ಲಿವ್‌ಲೆಸ್‌ ಗೌನ್‌ಗಳು

ಪಾರ್ಟಿವೇರ್‌ ಸ್ಲಿವ್‌ಲೆಸ್‌ ಗೌನ್‌ಗಳು ತೀರಾ ಉದ್ದವಾಗಿರುವುದಿಲ್ಲ! ಬದಲಿಗೆ ನೋಡಲು ಕೊಂಚ ಮ್ಯಾಕ್ಸಿಯಂತಿರುತ್ತವೆ. ಅಥವಾ ಲಾಂಗ್‌ ಸ್ಕರ್ಟ್‌ನಂತಿರುತ್ತವೆ. ಡಿಸೈನ್‌ಗಳು ಅಷ್ಟೇ! ಸಿಂಪಲ್‌ ಆಗಿರುತ್ತವೆ. ಕೊಂಚ ಶಿಮ್ಮರ್‌ ಆಗಿರುತ್ತವೆ ಎನ್ನುತ್ತಾರೆ ಡಿಸೈನರ್‌ ಡಿಂಪಲ್‌.

Summer Fashion

ಸ್ಲಿವ್‌ಲೆಸ್‌ ಗೌನ್‌ಗಳ ಆಯ್ಕೆಗೆ 3 ಟಿಪ್ಸ್

  • ಆದಷ್ಟೂ ಸಿಂಪಲ್‌ ಡಿಸೈನ್‌ ಆಯ್ಕೆ ಮಾಡಿ.
  • ಟ್ರೆಂಡಿ ಕಲರ್ಸ್ ಸೆಲೆಕ್ಟ್ ಮಾಡಿ.
  • ತೀರಾ ಟೈಟ್‌ ಆಗಿರುವುದು ಬೇಡ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Karnataka Weather : ಮುಂದಿನ 5 ದಿನ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ; ಉತ್ತರ ಒಳನಾಡಲ್ಲಿ ಹೀಟ್‌ ವೇವ್‌!

Karnataka Weather : ಮುಂದಿನ ಮೂರು ದಿನಗಳ ಕಾಲ ಅಂದರೆ, ಮಾರ್ಚ್‌ 28ರಿಂದ 30ರವರೆಗೆ ಉತ್ತರ ಒಳನಾಡಿನ ಕೆಲವು ಕಡೆ ಹೀಟ್‌ ವೇವ್‌ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶವು ಮುಂದಿನ ನಾಲ್ಕೈದು ದಿನ 36 – 37 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

VISTARANEWS.COM


on

Karnataka Weather Heavy rains lash in Karnataka for next 5 days also Heat wave caution and Girl enjoying rain
Koo

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಅಂದರೆ (ಮಾ. 28 – ಏಪ್ರಿಲ್‌ 1) ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಗುಡುಗು – ಮಿಂಚುಗಳ ಸಹಿತ ಸಾಧಾರಣದಿಂದ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಬೆಂಗಳೂರು ಮಾತ್ರ ಸೆಕೆಯಲ್ಲಿ ಮತ್ತಷ್ಟು ಬೇಯಲಿದೆ ಎಂದು ಅಂದಾಜಿಸಲಾಗಿದೆ. ಕಾರಣ, ಏಪ್ರಿಲ್‌ 2ರವರೆಗೆ ಗರಿಷ್ಠ ಉಷ್ಣಾಂಶವು 36 – 37 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather Forecast) ಉಲ್ಲೇಖಿಸಿದೆ. ಇನ್ನು ರಾಜ್ಯದ ಹಲವು ನದಿಗಳಲ್ಲಿ ನೀರು ಬತ್ತಿರುವ ದೃಶ್ಯಗಳನ್ನು ನೆಟ್ಟಿಗರು ಸೋಷಿಯಲ್‌ ಮೀಡಿಯಾಗಳಲ್ಲಿ ಪೋಸ್ಟ್‌ ಮಾಡುವ ಮೂಲಕ ಬರದ ಭೀಕರತೆಯ ದರ್ಶನ ಮಾಡಿಸಿದ್ದಾರೆ. ಹೀಗಾಗಿ ಕಾವೇರಿ ಕೊಳ್ಳ ಸೇರಿದಂತೆ ನದಿ ಒಡಲು ಇರುವ ಕಡೆಗಳಲ್ಲಿ ಉತ್ತಮ ಮಳೆಯಾಗಬಹುದು ಎಂಬ ನಿರೀಕ್ಷೆಯನ್ನು ಹೊಂದಲಾಗಿದೆ.

ಇದರ ಜತೆಗೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವು 2 – 3 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಉತ್ತರ ಒಳನಾಡಲ್ಲಿ ಹೀಟ್‌ ವೇವ್‌!

ಮುಂದಿನ ಮೂರು ದಿನಗಳ ಕಾಲ ಅಂದರೆ, ಮಾರ್ಚ್‌ 28ರಿಂದ 30ರವರೆಗೆ ಉತ್ತರ ಒಳನಾಡಿನ ಕೆಲವು ಕಡೆ ಹೀಟ್‌ ವೇವ್‌ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಬಿಸಿಲಿನ ಬೇಗೆಯ ಜತೆಗೆ ಬಿಸಿ ಗಾಳಿಯನ್ನೂ ಜನರು ತಡೆದುಕೊಳ್ಳಬೇಕಿದೆ.

ಹಾಟ್‌ ಬೆಂಗಳೂರು

ಬೆಂಗಳೂರಲ್ಲಿ ಬಿಸಿಲಿನ ತೀವ್ರತೆ ಇರಲಿದ್ದು, ಸೆಕೆಯು ಕಾಡಲಿದೆ. ಇಲ್ಲಿ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಲಿದ್ದು, ಹಾಲಿ 35 ಡಿಗ್ರಿ ಸೆಲ್ಸಿಯಸ್‌ ಇರುವ ಗರಿಷ್ಠ ಉಷ್ಣಾಂಶವು ಮುಂದಿನ ನಾಲ್ಕೈದು ದಿನ 36 – 37 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹೇಳಲಾಗಿದೆ. ಕನಿಷ್ಠ ಉಷ್ಣಾಂಶವು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ಹೇಳಿದೆ.

ಶಿವಮೊಗ್ಗ, ದಾವಣಗೆರೆಯಲ್ಲಿ ಗುಡುಗಿನೊಂದಿಗೆ ಮಳೆ

ದಕ್ಷಿಣ ಒಳನಾಡಿನ ಶಿವಮೊಗ್ಗ, ದಾವಣಗೆರೆ ಸೇರಿ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಉಳಿದೆಡೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಆಗಾಗ ಮಳೆಯಾಗಬಹುದು ಎಂದು ಹೇಳಲಾಗಿದೆ.

ಉತ್ತರ ಕರ್ನಾಟಕದಲ್ಲಿ ಕೆಲವು ಕಡೆ ಅಲ್ಪ ಮಳೆ

ಉತ್ತರ ಒಳನಾಡಿನ ಹಾವೇರಿ, ಧಾರವಾಡ ಮತ್ತು ಬೆಳಗಾವಿಯಲ್ಲಿ ಚದುರಿದಂತೆ ಅಲ್ಪ ಪ್ರಮಾಣದ ಮಳೆಯಾಗುವ ಸಂಭವ ಇದೆ. ಗದಗ, ಕೊಪ್ಪಳ, ಬಾಗಲಕೋಟೆ, ವಿಜಯನಗರ ಮತ್ತು ವಿಜಯಪುರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ.

ಕರಾವಳಿ – ಮಲೆನಾಡಲ್ಲಿ ಸಾಧಾರಣ ಮಳೆ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆಯನ್ನು ಹೊಂದಲಾಗಿದೆ.

ಇದನ್ನೂ ಓದಿ: Summer Skincare: ಬೇಸಿಗೆಯಲ್ಲಿ ನಿಮ್ಮ ಚರ್ಮ ಕಪ್ಪಾಗದಂತೆ ತಡೆಯಲು ಹೀಗೆ ಮಾಡಿ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 35 ಡಿ.ಸೆ – 21 ಡಿ.ಸೆ
ಮಂಗಳೂರು: 35 ಡಿ.ಸೆ – 25 ಡಿ.ಸೆ
ಚಿತ್ರದುರ್ಗ: 37 ಡಿ.ಸೆ – 23 ಡಿ.ಸೆ
ಗದಗ: 38 ಡಿ.ಸೆ – 22 ಡಿ.ಸೆ
ಹೊನ್ನಾವರ: 34 ಡಿ.ಸೆ- 24 ಡಿ.ಸೆ
ಕಲಬುರಗಿ: 41 ಡಿ.ಸೆ – 26 ಡಿ.ಸೆ
ಬೆಳಗಾವಿ: 37 ಡಿ.ಸೆ – 21 ಡಿ.ಸೆ
ಕಾರವಾರ: 35 ಡಿ.ಸೆ – 25 ಡಿ.ಸೆ

ದುಬಾರೆಯ ಪರಿಸ್ಥಿತಿ ಹೇಗಿದೆ ನೋಡಿ!

ಕಾವೇರಿ ನದಿಯಲ್ಲೂ ನೀರಿಲ್ಲ

ಮಳೆ ಇಲ್ಲದೆ ಕರ್ನಾಟಕದ ಬಹುತೇಕ ನದಿಗಳು ಬತ್ತುವ ಹಂತವನ್ನು ತಲುಪಿವೆ. ನೀರಿಲ್ಲದೆ ನದಿ ಮಾರ್ಗಗಳು ಒಣಗಿ ಹೋಗಿವೆ. ಖಾಲಿ ರಸ್ತೆಯಂತಾಗಿವೆ. ಕಾವೇರಿ ನದಿ ತೀರದ ಪ್ರದೇಶದಲ್ಲಿರುವ ದುಬಾರೆ ಪರಿಸ್ಥಿತಿ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಕೊಡಗು ಕನೆಕ್ಟ್‌ ಎಂಬ ಖಾತೆಯಲ್ಲಿ ಫೋಟೊಗಳನ್ನು ಪೋಸ್ಟ್‌ ಮಾಡಲಾಗಿದೆ. ಇದು ನೀರಿನ ಕೊರತೆಯ ತೀವ್ರತೆಯನ್ನು ಎತ್ತಿ ತೋರಿಸುತ್ತದೆ.

Continue Reading
Advertisement
Lok Sabha Election 2024
ಕರ್ನಾಟಕ5 mins ago

Lok Sabha Election 2024: ಅನುಮಾನ ಬೇಡ, ಮೋದಿ ಮತ್ತೊಮ್ಮೆ ಪ್ರಧಾನಿಯಾಗ್ತಾರೆ: ಸಾಹಿತಿ ಎಸ್.ಎಲ್. ಭೈರಪ್ಪ

Summer Nail Colours Trend
ಫ್ಯಾಷನ್27 mins ago

Summer Nail Colours Trend: ಸಮ್ಮರ್‌ ಸೀಸನ್‌ನಲ್ಲಿ ಬದಲಾಯ್ತು ನೇಲ್‌ ಕಲರ್ಸ್‌ ಟ್ರೆಂಡ್‌

Lok Sabha Election 2024 and BJP files complaint with Election Commission against Yathindra for calling Amit Shah a rowdy and also CM Siddaramaiah in this Photo
Lok Sabha Election 202432 mins ago

Lok Sabha Election 2024: ಅಮಿತ್‌ ಶಾ ರೌಡಿ ಎಂದಿದ್ದ ಯತೀಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

Board Exam
ಬೆಂಗಳೂರು36 mins ago

Board Exams: ಬೋರ್ಡ್‌ ಎಕ್ಸಾಂ ವ್ಯಾಲ್ಯುವೇಶನ್‌; 3 ದಿನದ ಗಡುವು ಆದೇಶ ವಾಪಸ್‌

income Tax - how to save tax
ಪ್ರಮುಖ ಸುದ್ದಿ47 mins ago

Income Tax : ತೆರಿಗೆ ಉಳಿತಾಯ ಮಾಡಲು ಇನ್ನೆರಡೇ ದಿನ ಅವಕಾಶ, ಏನೇನು ಮಾಡಬಹುದು ಇನ್ನು?

Utthana Essay Competition 2023
ಕರ್ನಾಟಕ1 hour ago

Utthana Essay Competition 2023: ಉತ್ಥಾನ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಬೆಂಗಳೂರಿನ ಕಾವ್ಯಜೋಗಿ ಪ್ರಥಮ

Lok Sabha Election 2024 R Ashok attack on Yathindra Siddaramaiah for he says Amit Shah is Rowdy and goonda
Lok Sabha Election 20241 hour ago

Lok Sabha Election 2024: ಸಿದ್ದರಾಮಯ್ಯ ಗೂಂಡಾ ಗುರು; ಯತೀಂದ್ರ ಜೈಲಿಗೆ ಹೋಗ್ತಾರೆ: ಆರ್.‌ ಅಶೋಕ್‌ ಕೆಂಡ

Kodagu University
ಕೊಡಗು1 hour ago

Kodagu University : ಉದ್ಯೋಗ ಸೃಷ್ಟಿ ಜತೆಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಪ್ರೊ.ಅಶೋಕ್ ಸಂಗಪ್ಪ

Alia Bhatt wore diamond jewellery
ಸಿನಿಮಾ1 hour ago

Alia Bhatt: ಲಂಡನ್‌ ʻಹೋಪ್ ಗಾಲಾʼದಲ್ಲಿ ಆಲಿಯಾ ಭಟ್‌ ಧರಿಸಿದ ವಜ್ರದ ನೆಕ್ಲೇಸ್ ಬೆಲೆ ಎಷ್ಟು?

Heat Stroke
ಆರೋಗ್ಯ1 hour ago

Heat Stroke: ನೀರು ಕುಡಿದು ತಂಪಾಗಿರಿ, ಹೀಟ್‌ ಸ್ಟ್ರೋಕ್‌ ತಪ್ಪಿಸಿಕೊಳ್ಳಿ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20241 day ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ3 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ4 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌