Shivamogga news: ಇನ್ನೂ ತೆರವುಗೊಂಡಿಲ್ಲ 2018ರ ಚುನಾವಣೆಯ ಬ್ಯಾನರ್‌! - Vistara News

ಶಿವಮೊಗ್ಗ

Shivamogga news: ಇನ್ನೂ ತೆರವುಗೊಂಡಿಲ್ಲ 2018ರ ಚುನಾವಣೆಯ ಬ್ಯಾನರ್‌!

Shivamogga news: ಶಿವಮೊಗ್ಗದ ರಿಪ್ಪನ್‌ಪೇಟೆ ನಾಡಕಚೇರಿಯ ಬಳಿ 2018ರ ಚುನಾವಣೆಯ ಬ್ಯಾನರ್‌ ಇನ್ನೂ ಇದ್ದು, ಅಧಿಕಾರಿಗಳು ಅದನ್ನು ತೆರವುಗೊಳಿಸಿಲ್ಲ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಿಪ್ಪನ್‌ಪೇಟೆ: ಐದು ವರ್ಷಕ್ಕೊಮ್ಮೆ ನಡೆಯುವ ವಿಧಾನಸಭಾ ಚುನಾವಣೆ (Shivamogga news) ಕಳೆದು ಪುನಃ ಚುನಾವಣೆ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಇಲ್ಲಿನ ನಾಡ ಕಚೇರಿ ಮತ್ತು ಗ್ರಾಮ ಪಂಚಾಯ್ತಿ ಕಚೇರಿ ಮುಂಭಾಗ ಇನ್ನೂ ಚುನಾವಣಾ ಆಯೋಗದವರು 2018ರ ವಿಧಾನಸಭಾ ಚುನಾವಣೆ ಬ್ಯಾನರ್ ಅನ್ನು ತೆಗೆಯದೆ ನಿರ್ಲಕ್ಷ್ಯ ವಹಿಸಿದ್ದಾರೆ.

ಈಗಾಗಲೇ 2023ರ ವಿಧಾನಸಭಾ ಚುನಾವಣೆ ಪ್ರಕಟಗೊಂಡು ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಆದರೂ ನಾಡಕಚೇರಿ ಮತ್ತು ಗ್ರಾಮ ಪಂಚಾಯ್ತಿ ಬಳಿಯಲ್ಲಿ ಅಳವಡಿಸಲಾಗಿರುವ 2018ನೇ ವರ್ಷದ ಚುನಾವಣಾ ಆಯೋಗದ ವಿಧಾನಸಭಾ ಚುನಾವಣಾ ಫ್ಲೆಕ್ಸ್ ತೆರವುಗೊಳಿಸದೆ ಸ್ಥಳೀಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದಕ್ಕೆ ಸಾರ್ವಜನಿಕರಲ್ಲಿ ಸುದ್ದಿಗೆ ಗ್ರಾಸವಾಗಿದೆ.

ಇದನ್ನೂ ಓದಿ: Karnataka Election 2023: ಚುನಾವಣೆ ತರಬೇತಿಯಲ್ಲಿದ್ದ ನೌಕರ ಹೃದಯಾಘಾತದಿಂದ ಸಾವು; ಮೈಸೂರಲ್ಲಿ ಅಪಘಾತದಲ್ಲಿ ಸವಾರ ಮೃತ್ಯು

ಸಾರ್ವಜನಿಕರು “ಕ್ಷಣ ಕಾಲ ನಾಡಕಚೇರಿಯ ಮತ್ತು ಗ್ರಾಮ ಪಂಚಾಯ್ತಿ ಬಳಿಯಲ್ಲಿನ 2018ರ ವಿಧಾನಸಭಾ ಚುನಾವಣೆ ಬ್ಯಾನರ್ ನೋಡಿ ನಾವುಗಳು 2018ರ ವಿಧಾನಸಭಾ ಚುನಾವಣೆಯಲ್ಲಿ ಇದ್ದೇವೆ ಎನ್ನುವಂತೆ ಭಾಸವಾಗುತ್ತದೆ” ಎಂದು ಹೇಳಿದ್ದಾರೆ. ಅದಲ್ಲದೆ ಬ್ಯಾನರ್‌ನ ಮೇಲ್ಭಾಗದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರ ಪೋಟೊ ಎದ್ದು ಕಾಣುತಿದ್ದು, ಇದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ವಾರಾಂತ್ಯಕ್ಕೆ ಗುಡುಗು ಸಹಿತ ಭಾರಿ ಮಳೆ ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka Weather Forecast : ರಾಜ್ಯಾದ್ಯಂತ ಮೇ 25ರಂದು ಗುಡುಗು ಸಹಿತ ಭಾರಿ (Rain News) ಮಳೆಯಾಗಲಿದ್ದು, 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Yellow Alert) ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ದಕ್ಷಿಣ ಒಳನಾಡು, ಉತ್ತರ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ (Rain News) ಇದೆ. ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ರಾಮನಗರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಹಾವೇರಿ, ವಿಜಯನಗರ, ಬಳ್ಳಾರಿ, ಕೊಪ್ಪಳ, ಗದಗ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಮಲೆನಾಡಿನ ಹಾಸನ ಮತ್ತು ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ವ್ಯಾಪಕ ಮಳೆಯಾಗಲಿದೆ.

ಇದನ್ನೂ ಓದಿ: Excise revenue: ಇದು ಎಣ್ಣೆ ಮಹಿಮೆ! ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಬೆಂಗಳೂರಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Hosanagara News: ಹೊಸನಗರದಲ್ಲಿ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಸಮಸ್ಯೆ; ಟವರ್‌ ಏರಿ ಪ್ರತಿಭಟನೆಗೆ ಮುಂದಾದ ವಕೀಲ!

Hosanagara News: ಹೊಸನಗರ ತಾಲೂಕಿನ ಬಿಎಸ್ಎನ್ಎಲ್ ಮೊಬೈಲ್ (BSNL Mobile) ಗ್ರಾಹಕರ ಸಂಕಷ್ಟಕ್ಕೆ ಪರಿಹಾರವೆಂಬುದು ದಶಕಗಳಿಂದ ಮರೀಚಿಕೆಯಾಗಿಯೇ ಉಳಿದಿದೆ. ನೆಟ್ವರ್ಕ್ ಸಮಸ್ಯೆ ಪರಿಹಾರಕ್ಕಾಗಿ ಒತ್ತಾಯಿಸಿ, ಮೇ 27ರಂದು ಮತ್ತಿಮನೆ ಗ್ರಾಮದಲ್ಲಿನ ಬಿಎಸ್ಎನ್ಎಲ್ ಟವರ್ ಏರಿ ಪ್ರತಿಭಟನೆ ನಡೆಸಲಾಗುವುದು ಎಂದು ವಕೀಲ ಮೋಹನ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

BSNL network problem in Hosanagara The lawyer decided to climb the tower and protest
Koo

ಹೊಸನಗರ: ತಾಲೂಕಿನ ಬಿಎಸ್ಎನ್ಎಲ್ ಮೊಬೈಲ್ (BSNL Mobile) ಗ್ರಾಹಕರ ಸಂಕಷ್ಟಕ್ಕೆ ಪರಿಹಾರವೆಂಬುದು ದಶಕಗಳಿಂದ ಮರೀಚಿಕೆಯಾಗಿಯೇ ಉಳಿದಿದೆ. ನೆಟ್‌ವರ್ಕ್ ಸಮಸ್ಯೆ ಪರಿಹಾರಕ್ಕಾಗಿ ಒತ್ತಾಯಿಸಿ, ಮೇ 27ರಂದು ಮತ್ತಿಮನೆ ಗ್ರಾಮದಲ್ಲಿನ (Hosanagara News) ಬಿಎಸ್ಎನ್ಎಲ್ ಟವರ್ ಏರಿ ಪ್ರತಿಭಟನೆ ನಡೆಸಲಾಗುವುದು ಎಂದು ವಕೀಲ ಮೋಹನ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೊಸನಗರ ತಾಲೂಕಿನ ಮತ್ತಿಮನೆ, ಸಂಪೆಕಟ್ಟೆ, ನಿಟ್ಟೂರು, ನಗರ, ಮಾಸ್ತಿಕಟ್ಟೆ, ಯಡೂರು ಭಾಗದಲ್ಲಿ ಸಾವಿರಾರು ಗ್ರಾಹಕರು ಬಿಎಸ್ಎನ್ಎಲ್ ಸಿಮ್ ಪಡೆದುಕೊಂಡಿದ್ದಾರೆ. ಪ್ರತಿ ತಿಂಗಳು 250 ರಿಂದ 499 ರೂ. ತನಕ ರೀಚಾರ್ಜ್ ಮಾಡಿಕೊಳ್ಳುತ್ತಾರೆ ಆದರೆ ಬಿಎಸ್‌ಎನ್‌ಎಲ್‌ನ ನೆಟ್‌ವರ್ಕ್ ಸರಿಯಾಗಿ ಇಲ್ಲದೆ ಗ್ರಾಹಕರು ವಂಚಿತರಾಗುತ್ತಿದ್ದಾರೆ. ಮಲೆನಾಡಿನ ಭಾಗದಲ್ಲಿ ಬಿಎಸ್ಎನ್ಎಲ್ ಸಂಸ್ಥೆ ಸಾರ್ವಜನಿಕ ಸೇವೆ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಅವರು ಆರೋಪಿಸಿದರು.

ಇದನ್ನೂ ಓದಿ: Indian 2: ಜು.12ಕ್ಕೆ ಕಮಲ್ ಹಾಸನ್ ಅಭಿನಯದ ‘ಇಂಡಿಯನ್ 2’ ಚಿತ್ರ ರಿಲೀಸ್‌

ಸರ್ಕಾರಿ ಕಚೇರಿಯಲ್ಲಿ ಸರ್ವರ್ ಇಲ್ಲದೆ ಪ್ರತಿನಿತ್ಯ ಸಾರ್ವಜನಿಕರ ಸಮಯ ಮತ್ತು ಹಣ ವ್ಯರ್ಥವಾಗುತ್ತಿದೆ. ಈ ಎಲ್ಲ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಪ್ರತಿಭಟನೆ ನಡೆಸಲು ತೀರ್ಮಾನಿರುವುದಾಗಿ ಅವರು ತಿಳಿಸಿದರು.

ತಾಲೂಕಿನ ಕುಗ್ರಾಮಗಳಾದ ಮತ್ತಿಮನೆ, ಬಸವಾಪುರ, ಬೇಗದಳ್ಳಿ, ಬೇಳೂರು, ಬ್ರಾಹ್ಮಣತರುವೆ, ಬೈದೂರು, ದೊಬ್ಯಾಳು, ಗಿಣಿಕಲ್, ಗುಬ್ಬಿಗ, ಗುಡೋಡಿ, ರಿಪ್ಪನ್ ಪೇಟೆ, ಹೆದ್ದಾರಿಪುರ, ಗರ್ತಿ ಕೆರೆ, ಹುಂಚಹೊಳಗೋಡು, ಹೊರೊಯತಿಗೆ, ಕಳಸೆ, ಕಾನಗೋಡು, ಕರಿಗಲ್ಲು, ಕಟ್ಟೆಕೊಪ್ಪ, ಕಟ್ಟಿನಹೊಳೆ, ಕೆ.ಹೊನ್ನೆಕೊಪ್ಪ, ಕಿಲಂದೂರು ಜಂಗಲ್, ಕೊಳವಾಡಿ, ಕೊರನಕೋಟೆ, ಮಾಗೋಡಿ, ಮಳಲಿ, ಮನಸೆಟ್ಟೆ, ಮಸ್ಕಾನಿ, ನೀಲಕಂಠನ ತೋಟ, ನೆಲಗಳಲೆ, ಪಿ.ಕಲ್ಲುಕೊಪ್ಪ, ರಾವೆ, ತೋಟದ ಕೊಪ್ಪ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಬಿಸ್ಎಸ್‌ಎನ್‌ಎಲ್ ನೆಟ್‌ವರ್ಕ್ ಅತ್ಯಂತ ಕಳಪೆಯಾಗಿದೆ.

ಇದನ್ನೂ ಓದಿ: Kannada New Movie: ಸಿನಿಮಾ ಆಗುತ್ತಿದೆ ʼಪೆನ್‌ಡ್ರೈವ್ʼ! ಕುತೂಹಲಭರಿತ ಪೋಸ್ಟರ್

ಈ ಭಾಗದ ಗ್ರಾಹಕರನ್ನು ಹಲವು ದಶಕಗಳಿಂದ ಬಿಎಸ್‌ಎನ್‌ಎಲ್‌ ವಂಚಿಸುತ್ತಾ ಬಂದಿದೆ. ತಾಲೂಕಿನ ಶೇ.60 ರಷ್ಟು ಗ್ರಾಮ ಪಂಚಾಯಿತಿಗಳಲ್ಲಿ ಇಂಟರ್ನೆಟ್ ಸಂಪರ್ಕ ಸಮರ್ಪಕವಾಗಿಲ್ಲ ಇದರಿಂದ ಗ್ರಾಮ ಪಂಚಾಯಿತಿ ಕಾರ್ಯಕ್ಷಮತೆಗೆ ಸಮಸ್ಯೆ ಉಂಟಾಗುತ್ತಿದೆ. ಈ ಬಗ್ಗೆ ಇಲಾಖೆಗೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ ಎಂದು ವಕೀಲ ಮೋಹನ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದರು.

Continue Reading

ಮಳೆ

Karnataka Weather : ಕೈಯಲ್ಲಿ ಛತ್ರಿ ಹಿಡಿದು ಬಸ್ ಡ್ರೈವಿಂಗ್; ಮಳೆಗೆ ಕುಸಿದು ಬಿದ್ದ ಮಾಳಿಗೆ ಮನೆ

Karnataka Weather Forecast : ಮಳೆ ಅವಾಂತರವು ಮುಂದುವರಿದಿದೆ. ನಿರಂತರ ಮಳೆಗೆ (Rain News) ಕೆಎಸ್‌ಆರ್‌ಟಿಸಿ ಬಸ್ಸಿನೊಳಗೆ ನೀರು ಸೋರುತ್ತಿರುವ ಕಾರಣಕ್ಕೆ ಚಾಲಕನೊಬ್ಬ ಕೈಯಲ್ಲಿ ಛತ್ರಿ ಹಿಡಿದು ಚಲಾಯಿಸಿದ್ದಾರೆ. ಇತ್ತ ವ್ಯಾಪಕ ಮಳೆಗೆ ಮಾಳಿಗೆ ಮನೆ ಕುಸಿದಿದ್ದು, ಮನೆಯಲ್ಲಿದ್ದ ಮಕ್ಕಳಿಬ್ಬರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

VISTARANEWS.COM


on

By

Karnataka Weather Forecast
Koo

ಧಾರವಾಡ/ದಾವಣಗೆರೆ: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಮಳೆ (Rain News) ಬಂದರು ಕಷ್ಟ ಬಾರದೆ ಇದ್ದರೂ ನಷ್ಟ ಎನ್ನುವಂತಾಗಿದೆ. ಮಳೆಯಿಂದಾಗಿ (karnataka Weather Forecast) ಅವಾಂತರವೇ ಸೃಷ್ಟಿಯಾಗಿದ್ದು, ಸಾವು-ನೋವು ಸಂಭವಿಸಿದೆ. ಧಾರವಾಡದಲ್ಲಿ ಭಾರಿ ಮಳೆಗೆ ಸಾರಿಗೆ ಬಸ್‌ನಲ್ಲಿ ನೀರು ಸೋರುತ್ತಿದ್ದ ಕಾರಣಕ್ಕೆ, ಚಾಲಕರೊಬ್ಬರು ಒಂದು ಕೈಯಲ್ಲಿ ಛತ್ರಿ ಹಿಡಿದು ಮತ್ತೊಂದು ಕೈಯಲ್ಲಿ ಬಸ್ ಡ್ರೈವಿಂಗ್ ಮಾಡಿದ್ದಾರೆ.

ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿಗೆ ಗ್ರಾಮಕ್ಕೆ ಸಂಚರಿಸುವ ಸಾರಿಗೆ ಬಸ್‌ ಇದಾಗಿದ್ದು, ಭಾರಿ ಮಳೆಗೆ ಎಲ್ಲ ಕಡೆಯು ನೀರು ಸೋರಿದೆ. ಮಳೆಯಿಂದ ರಕ್ಷಣೆ ಪಡೆಯುವ ಸಲುವಾಗಿ ಚಾಲಕ ಛತ್ರಿ ಹಿಡಿದುಕೊಂಡು ಬಸ್‌ ಅನ್ನು ಚಾಲನೆ ಮಾಡಿದ್ದಾರೆ. ಈ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ. ಚಾಲಕ ಛತ್ರಿ ಹಿಡಿದ ದೃಶ್ಯವನ್ನು ನಿರ್ವಾಹಕಿ ವಿಡಿಯೊ ಮಾಡಿದ್ದಾರೆ ಎನ್ನಲಾಗಿದೆ.

karnataka Weather Forecast

ದಾವಣಗೆರೆಯಲ್ಲಿ ಕುಸಿದು ಬಿದ್ದ ಮಾಳಿಗೆ ಮನೆ

ಭಾರಿ ಮಳೆಗೆ ಮಾಳಿಗೆ ಮನೆಯೊಂದು ಕುಸಿದು ಬಿದ್ದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಶುಕ್ರವಾರ ಬೆಳಗ್ಗೆ ಸುರಿದ ಮಳೆಯಿಂದ ಮಾಳಿಗೆ ಮನೆ ಕುಸಿದಿದೆ. ಕುಟುಂಬಸ್ಥರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಚ್ಚವ್ವನಹಳ್ಳಿ ಗ್ರಾಮದ ಸನಾವುಲ್ಲಾ ಎಂಬುವರಿಗೆ ಸೇರಿದ ಮಾಳಿಗೆ ಮನೆಯಲ್ಲಿ ಮಕ್ಕಳು ಪಾರಾಗಿದ್ದು, ಸನಾವುಲ್ಲಾ ಅವರಿಗೆ ಸಣ್ಣ-ಪುಟ್ಟ ಗಾಯವಾಗಿದೆ. ಚಿಕಿತ್ಸೆಗಾಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ: Karnataka Rain : ಸಿಡಿಲಾಘಾತಕ್ಕೆ ವಿದ್ಯಾರ್ಥಿ ಬಲಿ; ಗಾಳಿ-ಮಳೆಗೆ ಮರ ಮುರಿದು ಬಿದ್ದು ಜಾನುವಾರು ಸಾವು

ಹಾಸನದಲ್ಲಿ ಮಳೆ ಗಾಳಿಗೆ ರಸ್ತೆಗೆ ಬಿದ್ದ ಮರ

ಹಾಸನ ನಗರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿದೆ. ಸತತ ಒಂದು ಗಂಟೆಗಳ ಕಾಲ ಸುರಿದ ಗಾಳಿ ಮಳೆಗೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ಇದರಿಂದಾಗಿ ಒಂದು ಕಾರು ಜಖಂ ಆಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಹಾಸನ ನಗರದ ಹೌಸಿಂಗ್ ಬೋರ್ಡ್‌ ಬಡಾವಣೆಯಲ್ಲಿ ಈ ಘಟೆನೆ ನಡೆದಿದೆ. ಇತ್ತ ನಗರದ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿತ್ತು. ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಯಿಂದಾಗಿ ಹಾಸನ ನಗರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

ಚಿಕ್ಕಬಳ್ಳಾಪುರದಲ್ಲಿ ಧರೆಗುರುಳಿದ 50 ವರ್ಷದ ಅರಳಿ ಮರ

ಬಿರುಗಾಳಿ ಸಹಿತ‌ ಮಳೆಗೆ ಬೃಹತ್ ಗಾತ್ರದ ಮರವೊಂದು ಧರೆಗುರುಳಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅರಳಿಕಟ್ಟೆಯಲ್ಲಿದ್ದ 50 ವರ್ಷಗಳಿಗೂ ಹಳೆಯ ಅರಳಿ ಮರ ಉರುಳಿ ಬಿದ್ದಿದೆ. ಅದೃಷ್ಟವಶಾತ್‌ ಆ ಸಮಯದಲ್ಲಿ ಯಾರು ಇಲ್ಲದ ಕಾರಣಕ್ಕೆ ಅಪಾಯವೊಂದು ತಪ್ಪಿದೆ. ಇಶಾ ಫೌಂಡೇಶನ್ ಸುತ್ತಮುತ್ತ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಬಿರುಗಾಳಿಗೆ ಜಾಹೀರಾತು ಫಲಕಗಳು ನೆಲಕ್ಕೆ ಬಿದ್ದಿವೆ. ಚಿಕನ್ ಹಾಗೂ ಚಾಟ್ಸ್ ಅಂಗಡಿ ಮೇಲೆ ಫಲಕ ಬಿದ್ದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಸಿಡಿಲಾಘಾತಕ್ಕೆ ವಿದ್ಯಾರ್ಥಿ ಬಲಿ; ಗಾಳಿ-ಮಳೆಗೆ ಮರ ಮುರಿದು ಬಿದ್ದು ಜಾನುವಾರು ಸಾವು

Karnataka Rain : ಉಡುಪಿಯಲ್ಲಿ ಸಿಡಿಲಾಘಾತಕ್ಕೆ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾನೆ. ಹಲವೆಡೆ ಭಾರಿ ಮಳೆ-ಗಾಳಿಯಿಂದಾಗಿ ಮರಗಳು ಧರೆಗುರುಳುತ್ತಿವೆ. ಪರಿಣಾಮ ಅನಾಹುತಗಳು ಸಂಭವಿಸುತ್ತಿವೆ. ಮರದ ಬೃಹತ್‌ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಜಾನುವಾರವೊಂದು ಮೃತಪಟ್ಟಿದೆ. ಕೆಲವೆಡೆ ಮನೆಯ ಶೆಡ್‌ಗಳು ಹಾರಿ ಹೋಗಿವೆ.

VISTARANEWS.COM


on

By

Karnataka Rain
Koo

ಉಡುಪಿ/ಬೆಳಗಾವಿ: ರಾಜ್ಯಾದ್ಯಂತ ಗುಡುಗು, ಸಿಡಿಲು ಸಹಿತ ಮಳೆಯಾಗುತ್ತಿದ್ದು, ಸಾವು- ನೋವು (Karnataka Rain) ಸಂಭವಿಸುತ್ತಿದೆ. ಉಡುಪಿಯಲ್ಲಿ ಸಿಡಿಲಾಘಾತಕ್ಕೆ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾನೆ. ಉಡುಪಿಯ ಶಿರ್ವ ಪಂಚಾಯತ್ ವ್ಯಾಪ್ತಿಯ ಮಾಣಿಬೆಟ್ಟು ಬಳಿ ಘಟನೆ ನಡೆದಿದೆ. ಶಿರ್ವ ಮಾಣೆಬೆಟ್ಟು ನಿವಾಸಿ ರಕ್ಷಿತ್ ಪೂಜಾರಿ ಮೃತ ದುರ್ದೈವಿ.

ರಕ್ಷಿತ್‌ ಶಿರ್ವ ಎಂಎಸ್‌ಆರ್‌ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿಯಾಗಿದ್ದ. ಗುರುವಾರ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದಾಗ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ರಕ್ಷಿತ್‌ನನ್ನು ಕೂಡಲೇ ಕುಟುಂಬಸ್ಥರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಗೆ ಮೃತಪಟ್ಟಿದ್ದಾನೆ.

ಬೆಳಗಾವಿಯಲ್ಲಿ ಮರದಡಿ ನಿಂತಿದ್ದ ಆಕಳು ಸಾವು

ಬೆಳಗಾವಿಯ ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಗಾಳಿಯೊಂದಿಗೆ ಭಾರಿ‌ ಮಳೆಯಾಗಿದೆ. ಮಳೆಗೆ ಬೃಹತ್ ಗಾತ್ರದ ಮರ ಧರೆಗುರುಳಿದೆ. ಗುರುವಾರ ಸಂಜೆ ಸುರಿದ ಮಳೆಯಿಂದ ಮನೆ ಮುಂದಿದ್ದ ಮರ ಬಿದ್ದಿದೆ. ಮರದ ಕೆಳಗೆ ಕಟ್ಟಿದ್ದ ಆಕಳು ಮೇಲೆ ಬೃಹತ್‌ ಗಾತ್ರದ ಕೊಂಬೆ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದೆ. ರೈತ ಶಂಕರ್ ರೊಡ್ಡಣ್ಣವರ್ ಎಂಬುವವರಿಗೆ ಸೇರಿದ ಆಕಳು ಮೃತಪಟ್ಟಿದೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಳೆಗೆ ಮನೆ ಬಿದ್ದು ಬೀದಿಗೆ ಬಂದ ಕುಟುಂಬ

ಕಳೆದ ರಾತ್ರಿ ಸುರಿದ ಭಾರಿ ಮಳೆ ಗಾಳಿಗೆ ಎಲ್ಲವನ್ನೂ ಕಳೆದುಕೊಂಡು ಕುಟುಂಬವೊಂದು ಬೀದಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮದಲ್ಲಿ ಭಾರಿ ಮಳೆಗೆ ಲಕ್ಷ್ಮೀ ಮಾದರ್ ಎಂಬುವವರ ಮನೆಯ ಚಾವಣಿ ಹಾರಿ ಹೋಗಿದೆ. ಲಕ್ಷ್ಮಿ ಅವರ ಕೈ ಮೇಲೂ ಚಾವಣಿ ಬಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ಎಲ್ಲ ಸಾಮಾಗ್ರಿಗಳಿಗೂ ಹಾನಿಯಾಗಿವೆ. ಸರ್ಕಾರದಿಂದ ಸೂಕ್ತ ಪರಿಹಾರಕ್ಕೆ ಲಕ್ಷ್ಮೀ ಮನವಿ ಮಾಡಿದ್ದಾರೆ. ಇನ್ನೂ ಭಾರಿ ಬಿರುಗಾಳಿಗೆ 5ಕ್ಕೂ ಹೆಚ್ಚು ಶೆಡ್‌ಗಳ ಚಾವಣಿ, 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಮನೆಗಳಿಗೆ ಹಾನಿ ಹಿನ್ನೆಲೆ ಇಬ್ಬರಿಗೆ ಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಾಗಲಕೋಟೆಯಲ್ಲಿ ನೆಲಕ್ಕುರುಳಿದ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌

ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಬಾಗಲಕೋಟೆಯ ತುಳಸಿಗೇರಿ ಗ್ರಾಮದಲ್ಲಿ ಬಿರುಗಾಳಿಗೆ ಮರ ಮುರಿದು ಬಿದ್ದು, ಚಾವಣಿಗೆ ಹಾರಿಹೋಗಿದೆ. ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ನೆಲಕ್ಕುರಳಿದೆ. ನೋಡ ನೋಡುತ್ತಿದ್ದಂತೆ ಶೆಡ್‌ನ ಚಾವಣಿ ಶಿಟ್ ಗಾಳಿಯಲ್ಲಿ ಹಾರಾಡಿದ್ದವು. ಕಾಯಿ ಅಂಗಡಿಗಳ ಮೇಲೆ ಮರದ ಕೊಂಬೆ ಮುರಿದು ಬಿದ್ದ ಹಾನಿಯಾಗಿತ್ತು.

ಇದನ್ನೂ ಓದಿ: Karnataka Weather : ಕರಾವಳಿಯಲ್ಲಿ ಬಿರುಗಾಳಿ ಮಳೆ; ಕಡಲಿಗಿಳಿಯದಂತೆ ಮೀನುಗಾರರಿಗೆ ಅಲರ್ಟ್!‌

ಕುಸಿದು ಬಿದ್ದ ಕಳವಾಡಿ ಈಶ್ವರ ಮಾರಿಕಾಂಬಾ ದೇವಳದ ಅನ್ನಛತ್ರ

ಭಾರಿ ಗಾಳಿ ಮಳೆಗೆ ದೇವಳದ ಅನ್ನಛತ್ರ ಕುಸಿದು ಭಾರಿ ಅನಾಹುತ ತಪ್ಪಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಳವಾಡಿ ಈಶ್ವರ ಮಾರಿಕಾಂಬಾ ದೇವಳದ ಅನ್ನಛತ್ರದಲ್ಲಿ ಘಟನೆ ನಡೆದಿದೆ. ಕೊಲ್ಲೂರು ರಸ್ತೆಯಲ್ಲಿ ಮರ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ವಿದ್ಯುತ್ ತಂತಿಯ ಮೇಲೆ ಮರ ಬಿದ್ದು, ತಡರಾತ್ರಿಯವರಗೂ ಹಲವೆಡೆ ವಿದ್ಯುತ್ ವ್ಯತ್ಯಯವಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದರು.

ಚಿಕ್ಕಮಗಳೂರಲ್ಲಿ ಮರ ಬಿದ್ದು ಐವರು ಕೂದಲೆಳೆ ಅಂತರದಲ್ಲಿ ಪಾರು

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಭಾರಿ ಬಿರುಗಾಳಿ ಮಳೆಗೆ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಇದೇ ವೇಳೆ ಮನೆಯಲ್ಲಿದ್ದ ಐವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಚಿಕ್ಕಮಗಳೂರಿನ ಕಳಸ ತಾಲೂಕಿನ ಬಾಳೆಹೊಳೆ ಕಗ್ಗನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಮಲಗಿದ್ದಾಗ ಮಂಚದ ಮೇಲೆಯೇ ಬೃಹತ್ ಗಾತ್ರದ ಕೊಂಬೆ ಬಿದ್ದಿದೆ. ಮನೆಯಲ್ಲಿದ್ದ ಕುಟುಂಬಸ್ಥರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಮನೆಯೊಳಗೆ ಸಿಲುಕಿದ್ದವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮನೆ ಸಂಪೂರ್ಣ ಜಖಂಗೊಂಡಿದ್ದು, ಪಿಠೋಪಕರಣಗಳಿಗೆ ಹಾನಿಯಾಗಿದೆ. ಮನೆಯಲ್ಲಿ ಸಂಗ್ರಹಿಸಿದ್ದ ಆಹಾರ ಪದಾರ್ಥಗಳು ಮಣ್ಣು ಪಾಲಾಗಿದೆ. ಬೆಳಗಿನ ಜಾವ ನಾಲ್ಕು ಗಂಟೆಗೆ ಈ ಅವಘಡ ಸಂಭವಿಸಿದೆ. ಬೃಹತ್ ಗಾತ್ರದ ಮರ ಬಿದ್ದರೂ ಐವರು ಉಳಿದಿದ್ದೆ ಪವಾಡ ಎಂದಿದ್ದಾರೆ.

ಮಳೆ ಅನಾಹುತಕ್ಕೆ ಶುಂಠಿ ಬೆಳೆ ನಾಶ

ಮೈಸೂರಿನಲ್ಲಿ ಮಳೆ ಅನಾಹುತ ಮುಂದುವರಿದಿದೆ. ಸರಗೂರು ತಾಲೂಕಿನ ಬಾಡಿಗೆ ಗ್ರಾಮದಲ್ಲಿ ರೈತ ಜವರಯ್ಯ ಹಾಗೂ ಪುಟ್ಟತಾಯಮ್ಮ ಅವರಿಗೆ ಸೇರಿದ ಶುಂಠಿ ಬೆಳೆ ನಾಶವಾಗಿದೆ. ಇದರಿಂದಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಜಮೀನಿನಲ್ಲಿ ಮಳೆ ನೀರು ನಿಂತಿದ್ದರಿಂದ ಪುಟ್ಟತಾಯಮ್ಮ ಕಣ್ಣೀರಿಟ್ಟು, ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ರಾಯಚೂರಲ್ಲಿ ಸುರಿದ ಒಂದೇ ಮಳೆಗೆ ಜಮೀನು ಜಲಾವೃತ

ರಾಯಚೂರು ತಾಲೂಕಿನ ಕೆರೆಬೂದೂರು ಗ್ರಾಮದ ಬಳಿ ಒಂದೇ ಮಳೆಗೆ ಜಮೀನು ಜಲಾವೃತಗೊಂಡಿದೆ. ಮಳೆಯಿಂದಾಗಿ ನೂರಾರು ಎಕರೆ ಜಮೀನು ಜಲಾವೃತಗೊಂಡಿದ್ದರಿಂದ ಬಿತ್ತನೆಗೆ ತಯಾರಿ ನಡೆಸಿದ್ದ ರೈತರಿಗೆ ಭಾರೀ‌ ನಿರಾಸೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Pune Porsche accident
ಕ್ರೈಂ3 mins ago

Pune Porsche accident: ಕಾರು ಗುದ್ದಿ ಇಬ್ಬರನ್ನು ಸಾಯಿಸಿದ ಬಾಲಕನ ಅಜ್ಜನೂ ಪೊಲೀಸ್‌ ವಶಕ್ಕೆ

Summer Special Trains
ಬೆಂಗಳೂರು11 mins ago

Summer Special Trains : ನೈರುತ್ಯ ರೈಲ್ವೆಯಿಂದ ಬೇಸಿಗೆ ವಿಶೇಷ ರೈಲುಗಳ ಸಂಚಾರ; ಪಟ್ಟಿ ಇಲ್ಲಿದೆ

Lockup Death
ಕರ್ನಾಟಕ12 mins ago

Lockup Death: ದಾವಣಗೆರೆ ಯುವಕನ ಸಾವು ಪ್ರಕರಣ ಲಾಕಪ್ ಡೆತ್ ಅಲ್ಲ, ಎಫ್ಐಆರ್ ಇಲ್ಲದೆ ಕರೆ ತಂದಿದ್ದು ತಪ್ಪು ಎಂದ ಸಿಎಂ

Hardik Pandya
ಕ್ರೀಡೆ36 mins ago

Hardik Pandya: ಪತ್ನಿಗೆ ಶೇ.70ರಷ್ಟು ಆಸ್ತಿ ವರ್ಗಾಯಿಸಲು ಮುಂದಾದ ಹಾರ್ದಿಕ್​ ಪಾಂಡ್ಯ; ಶೀಘ್ರದಲ್ಲೇ ವಿಚ್ಛೇದನ!

Prajwal Revanna Case Why did Deve Gowda write a letter to Prajwal and HD Kumaraswamy reveals secret
ರಾಜಕೀಯ37 mins ago

Prajwal Revanna Case: ಪ್ರಜ್ವಲ್‌ಗೆ ದೇವೇಗೌಡರು ಪತ್ರ ಬರೆದಿದ್ದು ಏಕೆ? ಸೀಕ್ರೆಟ್‌ ರಿವೀಲ್‌ ಮಾಡಿದ ಎಚ್‌ಡಿಕೆ!

Murder case in Mysuru
ಮೈಸೂರು41 mins ago

Murder case : ದನ ಕಟ್ಟುವ ವಿಚಾರಕ್ಕೆ ಕಿರಿಕ್‌; ಕಾಲಿಂದ ಒದ್ದು ಕುಡುಗೋಲಿನಿಂದ ಹೊಡೆದು ದೊಡ್ಡಮ್ಮನನ್ನೇ ಕೊಂದ ದುಷ್ಟ

Gold Rate Today
ಚಿನ್ನದ ದರ42 mins ago

Gold Rate Today: ಚಿನ್ನದ ದರ ಇಂದು ಯಥಾಸ್ಥಿತಿ; 22K- 24K ಬಂಗಾರದ ದರಗಳು ಹೀಗಿವೆ

Shreerastu Shubhamastu Serial Netra Jadhav out
ಕಿರುತೆರೆ54 mins ago

Shreerastu Shubhamastu Serial: ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿಯಿಂದ ಹೊರನಡೆದ ನೇತ್ರಾ ಜಾಧವ್: ʻಶಾರ್ವರಿʼ ಪಾತ್ರಕ್ಕೆ ಹೊಸ ಎಂಟ್ರಿ ಯಾರು?

Road Accident
ಕ್ರೈಂ1 hour ago

Road Accident : ಇಬ್ಬರ ಪ್ರಾಣ ತೆಗೆದ ಅಪರಿಚಿತ ವಾಹನ; ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿ ಸಾವು

Sreenath Bhasi Movie Shashidhar direction new Movie
ಸ್ಯಾಂಡಲ್ ವುಡ್1 hour ago

Sreenath Bhasi Movie: ʻಮಂಜುಮ್ಮೆಲ್ ಬಾಯ್ಸ್ʼ ನಟನಿಗೆ ಸ್ಯಾಂಡಲ್​ವುಡ್​ ಡೈರೆಕ್ಟರ್ ಆ್ಯಕ್ಷನ್​ ಕಟ್​!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌