SSLC Exam: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಿದ್ದ ಇಬ್ಬರ ದುರಂತ ಅಂತ್ಯ - Vistara News

ಶಿವಮೊಗ್ಗ

SSLC Exam: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಿದ್ದ ಇಬ್ಬರ ದುರಂತ ಅಂತ್ಯ

SSLC Exam : ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ (Students Death) ಬರೆಯಬೇಕಾಗಿದ್ದ ಇಬ್ಬರು ವಿದ್ಯಾರ್ಥಿಗಳು ದುರಂತ ಅಂತ್ಯ ಕಂಡಿದ್ದಾರೆ. ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ವಿದ್ಯಾರ್ಥಿನಿ ಅಪಘಾತದಲ್ಲಿ (Road Accident) ಮೃತಪಟ್ಟರೆ, ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ.

VISTARANEWS.COM


on

SSLC Students Death
ರಸ್ತೆ ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿನಿ ಮತ್ತೊಂದು ಕಡೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು (SSLC Exam) ಪರೀಕ್ಷಾ ಕೇಂದ್ರಕ್ಕೆ ಹೋಗುತ್ತಿದ್ದ ವಿದ್ಯಾರ್ಥಿನಿ (Student Death) ರಸ್ತೆ ಅಪಘಾತದಲ್ಲಿ (Road Accident) ಮೃತಪಟ್ಟಿದ್ದಾಳೆ. ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕೂಲ್ಸುಂ (14) ಮೃತ ದುರ್ದೈವಿ. ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.

ಉಮ್ಮೆ ಕೂಲ್ಸುಂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲೆಂದು ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದಳು. ರಸ್ತೆ ದಾಟುವ ವೇಳೆ ವಿದ್ಯಾರ್ಥಿನಿಗೆ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದಿತ್ತು. ಡಿಕ್ಕಿ ಹೊಡೆದ ರಭಸಕ್ಕೆ ಕೆಳಗೆ ಬಿದ್ದ ಉಮ್ಮೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಟ್ಟಿದ್ದಾಳೆ.

ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬಾಲಕಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿಸ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ:Road Accident : ಮೆಟ್ರೋ ಪಿಲ್ಲರ್‌ಗೆ ಡಿಕ್ಕಿ ಹೊಡೆದ ಲಾರಿ ಛಿದ್ರ ಛಿದ್ರ; ಉಸಿರು ಚೆಲ್ಲಿದ ಚಾಲಕ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ಸೂಸೈಡ್‌

ಶಿವಮೊಗ್ಗ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಶಿವಮೊಗ್ಗದ ಸಾಗರ ತಾಲೂಕಿನ ಆನಂದಪುರ ಸಮೀಪದ ಯಡೆಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪರಶುರಾಮ್ (17) ನೇಣಿಗೆ ಶರಣಾದ ವಿದ್ಯಾರ್ಥಿ.

ಪರಶುರಾಮ್‌ ಆನಂದಪುರದ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ಎಸ್ಎಸ್ಎಲ್‌ಸಿ ಓದುತ್ತಿದ್ದ. ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಾಗಿದ್ದ ಪರಶುರಾಮ್‌ ಮನೆಯ ಹಿಂಭಾಗದಲ್ಲಿ ನೇಣಿಗೆ ಶರಣಾದ್ದಾನೆ.

ಪರೀಕ್ಷೆ ಭಯಕ್ಕೆ ಮೃತಪಟ್ಟನಾ ಅಥವಾ ಬೇರೆಯಾವುದಾದರೂ ವಿಚಾರಕ್ಕೆ ಮಾನಸಿಕವಾಗಿ ಖಿನ್ನತೆ ಅನುಭವಿಸುತ್ತಿದ್ದನ್ನಾ ಎಂಬುದು ತಿಳಿದು ಬಂದಿಲ್ಲ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಸ್ಥಳಕ್ಕೆ ಆನಂದಪುರದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಗನ ಮೃತದೇಹವನ್ನು ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain : ರಾಜ್ಯದಲ್ಲಿ ಮಳೆ ಅವಾಂತರ ಮುಂದುವರಿದಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆಯನ್ನು ನೀಡಲಾಗಿದೆ.

VISTARANEWS.COM


on

By

Karnataka Rain
ಭಾರಿ ಮಳೆಗೆ ಕೊಚ್ಚಿ ಹೋದ ಬೆಳೆಗಳು
Koo

ಮಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡದಲ್ಲಿ 115 .5 ಮಿಮಿ ನಿಂದ 204 .5 ಮಿಮಿ ಮಳೆಯಾಗುವ (Karnataka Rain) ಸಾಧ್ಯತೆ ಇದ್ದು, ಎರಡು ದಿನಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಕರಾವಳಿಯುದ್ದಕ್ಕೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರಿಕೆಗೆ ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಈಗಾಗಲೇ ಸಮುದ್ರಕ್ಕೆ ತೆರಳಿದ ಮೀನುಗಾರಿಕಾ ಬೋಟ್‌ಗಳಿಗೆ ತಕ್ಷಣ ದಡಕ್ಕೆ ಬರುವಂತೆ ಸೂಚನೆಯನ್ನು ನೀಡಲಾಗಿದೆ. ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದಾವಣಗೆರೆಯಲ್ಲಿ ನಿಯಂತ್ರಣ ತಪ್ಪಿ ಕೊಚ್ಚಿಹೋದ ಕಾರು

ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಭರ್ಜರಿ ಮಳೆಯಾಗುತ್ತಿದೆ. ಭಾನುವಾರ ರಾತ್ರಿ ಸುರಿದ ಮಳೆಯಿಂದಾಗಿ ಜಗಳೂರಿನ ಕಾನನಕಟ್ಟೆ ಗ್ರಾಮದ ಸೇತುವೆ ಮೇಲೆ ನೀರು ಹರಿದಿದೆ. ಹರಿಯುತ್ತಿರುವ ನೀರಿನಲ್ಲೇ ಕಾರು ಚಲಾಯಿಸುವಾಗ ಚಾಲಕ‌ನ ನಿಯಂತ್ರಣ ತಪ್ಪಿ ಕಾರು ಕೊಚ್ಚಿಹೋಗಿದೆ. ಕೂಡಲೇ ಸ್ಥಳೀಯರಿಂದ ಕಾರು ಚಾಲಕ ಹಾಗೂ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. ಜತೆಗೆ ಕೊಚ್ಚಿ ಹೋದ ಕಾರನ್ನು ದಡಕ್ಕೆ ಎಳೆದು ತಂದಿದ್ದಾರೆ. ಜಗಳೂರಿನ ದೊಡ್ಡ ಬೊಮ್ಮನಹಳ್ಳಿ, ಸೇರಿದಂತೆ ಹಲವು ಕಡೆ ಚೆಕ್ ಡ್ಯಾಂಗಳು ತುಂಬಿ ಹರಿಯುತ್ತಿವೆ.

karnataka rain

ಶಿವಮೊಗ್ಗದಲ್ಲಿ ಮನೆ ಮೇಲೆ ಬಿದ್ದ ಅರಳಿ ಮರ

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಶಿವಮೊಗ್ಗದ ಸೊರಬ ಪಟ್ಟಣದಲ್ಲಿ ಮನೆ ಮೇಲೆ ಬೃಹತ್ ಅರಳಿ ಮರ, ತೆಂಗಿನ ಮರ ಬಿದ್ದು ಹಾನಿಯಾಗಿದೆ. ಭಾಗ್ಯ ಎಂಬುವರಿಗೆ ಸೇರಿದ ಮನೆ ಸಂಪೂರ್ಣ ದ್ವಂಸವಾಗಿದ್ದು,ಭಾಗ್ಯ ಅವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮನೆ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳು ಹಾನಿಯಾಗಿವೆ. ಸ್ಥಳಕ್ಕೆ ತಹಸೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೂಕ್ತ ಪರಿಹಾರ ನೀಡುವಂತೆ ಮನೆ ಮಾಲೀಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

ಕೋಲಾರದಲ್ಲಿ ಮಳೆಗೆ ಬೆಳೆಗಳು ನೀರುಪಾಲು

ಕೋಲಾರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಲ್ಲಸಂದ್ರ ಗ್ರಾಮದಲ್ಲಿ ಬೆಳೆಗಳು ನೀರುಪಾಲಾಗಿದೆ. ಕೋಲಾರ ತಾಲೂಕಿನ ನರಸಾಪುರ ಹೋಬಳಿಯ ಮಲ್ಲಸಂದ್ರ ಗ್ರಾಮದಲ್ಲಿ ನಿನ್ನೆ ಭಾನುವಾರ ಸಂಜೆ ಸುರಿದ ಮಳೆಗೆ ಬೆಳೆಗಳು ಜಲಾವೃತಗೊಂಡಿದೆ. ಮಳೆಯ ನೀರಿನಲ್ಲಿ ಸೌತೆಕಾಯಿ, ಬೀನ್ಸ್, ಹೂ ಬೆಳೆಗಳು ಕೊಚ್ಚಿಹೋಗಿವೆ. ಅವೈಜ್ಞಾನಿಕ ಲೇಔಟ್ ನಿರ್ಮಾಣ ಮಾಡಿರುವುದೇ ಇದಕ್ಕೆಲ್ಲ ಕಾರಣ ಎಂದು ರೈತರು ಆರೋಪಿಸಿದ್ದಾರೆ. ದೊಂಬರಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿರುವ ಲೇಔಟ್‌ನಲ್ಲಿ ಮಳೆಯ ನೀರು ಹರಿಯಲು ಯಾವುದೇ ಕಾಲುವೆ ಮಾಡಿಲ್ಲ. ಇದರಿಂದ ಮಳೆ ಬಿದ್ದಾಗಲೆಲ್ಲಾ ಲೇಔಟ್‌ನಿಂದ ಹರಿದು ಬರುವ ನೀರು ತೋಟಗಳಿಗೆ ನುಗ್ಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಚಿಕ್ಕಮಗಳೂರಿನ ಮಳೆ ಅಬ್ಬರಕ್ಕೆ ಕುಸಿದ ಮನೆ

ಚಿಕ್ಕಮಗಳೂರಿನಲ್ಲಿ ಭಾನುವಾರ ರಾತ್ರಿ ಸುರಿದ ಗಾಳಿ-ಮಳೆಗೆ ಮನೆ ಕುಸಿದಿದೆ. ಎನ್.ಆರ್.ಪುರ ತಾಲೂಕಿನ ಕರ್ಕೇಶ್ವರ ಗ್ರಾಮದಲ್ಲಿ ಘಟನೆ ನಡೆದಿದೆ. ಗುಲಾಬಿ ಎಂಬಾಕೆಯ ಮನೆ ಕುಸಿದಿದೆ. ಒಂಟಿ ಮಹಿಳೆಯಾಗಿರುವ ಗುಲಾಬಿ, ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದು, ಗಾಳಿ-ಮಳೆಗೆ ಇದ್ದವೊಂದು ಮನೆಯೂ ನೆಲಸಮವಾಗಿದೆ ಎಂದು ಕಂಗಲಾಗಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರಿಂದ ನಿರ್ಗತಿಕ ಮಹಿಳೆಗೆ ಸಹಾಯ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವರ್ಷಾಘಾತಕ್ಕೆ ಜನ ಸುಸ್ತು; ಮಳೆಯಾಟಕ್ಕೆ ಬಿರುಗಾಳಿ ಸಾಥ್‌

Bengaluru Rain : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಗುಡುಗು ಸಹಿತ ಬಿರುಗಾಳಿ ಮಳೆಯಾಗುವ (Heavy Rain alert) ನಿರೀಕ್ಷೆ ಇದೆ. ಜತೆಗೆ ಬಿಸಿಲಿನಿಂದ ತತ್ತರಿಸಿದ್ದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು ಇಳಿಕೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಮುಂದಿನ 5 ದಿನಗಳು ರಾಜ್ಯದ ಒಳನಾಡು ಭಾಗದಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಬೇಸಿಗೆಯಿಂದ ತತ್ತರಿಸಿದ್ದವರಿಗೆ ವಾತಾವರಣವು ತಂಪಾಗಿ ಇರಲಿದೆ. ಮುಂದಿನ 24 ಗಂಟೆಯಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ (Rain news) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಪ್ರತ್ಯೇಕ ಕಡೆಗಳಲ್ಲಿ ಗುಡುಗು, ಸಿಡಿಲು ಸಂಭವಿಸಲಿದೆ.

ರಾಜಧಾನಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಾಧಾರಣ ಮಳೆಯೊಂದಿಗೆ ಗುಡುಗು ಸಹಿತ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 22 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

ಕರಾವಳಿಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಮಲೆನಾಡಿನ ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರದಲ್ಲಿ ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದ್ದು, ಭಾರೀ ಮಳೆಯೊಂದಿಗೆ ಗುಡುಗು ಇರಲಿದೆ.

ಜತೆಗೆ ಮಂಡ್ಯ, ರಾಮನಗರ, ದಾವಣಗೆರೆ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ ಸೇರಿದಂತೆ ಚಿತ್ರದುರ್ಗದ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Rain News: ಕುಷ್ಟಗಿಯಲ್ಲಿ ಸಿಡಿಲು ಬಡಿದು ರೈತ ಸಾವು, ಯುವಕನಿಗೆ ಗಂಭೀರ ಗಾಯ

Rain News: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಚನಾಳ ಗ್ರಾಮದ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಸಿಡಿಲು ಬಡಿದು ರೈತ ಮೃತಪಟ್ಟಿದ್ದಾರೆ.

VISTARANEWS.COM


on

Rain News
ಧಾರಾಕಾರ ಮಳೆಗೆ ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯ ರೈಸ್ ಮಿಲ್ ಕಾಂಪೌಂಡ್ ಕುಸಿದಿದೆ.
Koo

ಕೊಪ್ಪಳ: ಸಿಡಿಲು ಬಡಿದು (Lightning strike) ರೈತ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಚನಾಳ ಗ್ರಾಮದಲ್ಲಿ ನಡೆದಿದೆ. ಉತ್ತಮ ಮಳೆ (Rain News) ಹಿನ್ನೆಲೆಯಲ್ಲಿ ಜಮೀನಿನಲ್ಲಿ ಬಿತ್ತನೆ ಸಲುವಾಗಿ ಕೃಷಿ ಚಟುವಟಿಕೆ ಮಾಡುತ್ತಿದ್ದಾಗ ಅವಘಡ ನಡೆದಿದ್ದು, ಈಶಪ್ಪ ಕಳಮಳ್ಳಿ (40) ಮೃತ ರೈತ.

ಮಳೆ ಬಂದ ಖುಷಿಯಲ್ಲಿ ಎತ್ತುಗಳೊಂದಿಗೆ ರೈತ ಭೂಮಿ ಹದ ಮಾಡುತ್ತಿದ್ದ. ಈ ವೇಳೆ ಸಿಡಿಲು ಬಡಿದು ರೈತ ಈಶಪ್ಪ ಕಳಮಳ್ಳಿ ಮೃತಪಟ್ಟಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ರೈತನ ಸಹೋದರ ಪಾರಾಗಿದ್ದಾನೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸಿಡಿಲು ಬಡಿದು ಯುವಕನಿಗೆ ಗಂಭೀರ ಗಾಯ

ಧಾರವಾಡ: ಸಿಡಿಲು ಬಡಿದು ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡದ ಮುಗದ ಗ್ರಾಮದ ಕೆರೆ ಬಳಿ ನಡೆದಿದೆ. ಇಂದು ಮಧ್ಯಾಹ್ನ ಸುರಿದ ಸಿಡಿಲು ಸಹಿತ ಮಳೆ ವೇಳೆ ಅವಘಡ ನಡೆದಿದೆ. ದಡ್ಡಿಕಮಲಾಪುರ ಗ್ರಾಮದ ನಿವಾಸಿ ರವಿ ಕೊರಮಡ್ಡಿ ಗಾಯಾಳು. ಇದೆ ವೇಳೆ ಸಿಡಿಲಿಗೆ ಎಮ್ಮೆ ಕರು ಬಲಿಯಾಗಿದೆ. ಗಂಭೀರ ಗಾಯಗೊಂಡ ಯುವಕನನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

ಇದನ್ನೂ ಓದಿ | Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಶಿವಮೊಗ್ಗದಲ್ಲಿ ಕಾಂಪೌಂಡ್ ಕುಸಿತ

ಶಿವಮೊಗ್ಗ: ಧಾರಾಕಾರ ಮಳೆಗೆ ಕಾಂಪೌಡ್‌ ಕುಸಿದಿರುವುದು ನಗರದಲ್ಲಿ ಭಾನುವಾರ ನಡೆದಿದೆ. ತೀರ್ಥಹಳ್ಳಿ ರಸ್ತೆಯ ಪೆಟ್ರೋಲ್ ಬಂಕ್ ಪಕ್ಕದ ರೈಸ್ ಮಿಲ್ ಕಾಂಪೌಂಡ್ ಕುಸಿದಿದೆ.

ಚಿಕ್ಕಮಗಳೂರಿನ ಬಯಲು ಸೀಮೆ ಭಾಗದಲ್ಲಿ ಭಾರಿ ಮಳೆ

ಚಿಕ್ಕಮಗಳೂರು: ಜಿಲ್ಲೆಯ ಬಯಲು ಸೀಮೆ ಭಾಗದಲ್ಲಿ ವರುಣ ಅಬ್ಬರಿಸಿದ್ದಾರೆ. ಒಂದು ಗಂಟೆ ಸುರಿದ ಭಾರಿ ಮಳೆಗೆ ರಸ್ತೆ ಸಂಪರ್ಕ ಕಡಿತವಾಗಿರುವುದು ಅಜ್ಜಂಪುರ ತಾಲೂಕಿನ ಶಿವನಿ ಗ್ರಾಮದಲ್ಲಿ ಕಂಡುಬಂದಿದೆ. ರಸ್ತೆಯ ಮೇಲೆ ನದಿಯಂತೆ ಹಳ್ಳದ ನೀರು ಹರಿದಿದ್ದರಿಂದ ದಂದೂರು ಹಾಗೂ ಚೀರನಹಳ್ಳಿ ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಭಾರಿ ಮಳೆಯಿಂದಾಗಿ ಶಿವನಿ ಹೋಬಳಿ ಸುತ್ತಮುತ್ತ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಜನರು ಪರದಾಡುವಂತಾಗಿದೆ.

ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka rain

ವಿಜಯನಗರ/ಬೆಂಗಳೂರು: ರಾಜ್ಯಾದ್ಯಂತ ಭಾನುವಾರ ಹಲವೆಡೆ ಗುಡುಗು ಸಹಿತ ಮಳೆ (Karnataka Rain) ಅಬ್ಬರಿಸಿದೆ. ವಿಜಯನಗರ ಜಿಲ್ಲೆಯಲ್ಲಿ ಅರ್ಧ ಗಂಟೆಗೂ ಅಧಿಕ ಸಮಯ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದೆ. ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಸಿಡಿಲು ಬಡಿದು ಎರಡು ಜಾನುವಾರುಗಳು ಮೃತಪಟ್ಟಿವೆ. ಕೋರಿ ಮಲಿಯಪ್ಪ ಎಂಬ ರೈತರಿಗೆ ಸೇರಿದ ಎತ್ತುಗಳನ್ನು ಹೊಲದಲ್ಲಿ ಮರದಡಿ ಕಟ್ಟಿ ಹಾಕಿದ್ದರು. ಈ ವೇಳೆ ಸಿಡಿಲು ಬಡಿದು ಎರಡು ಎತ್ತುಗಳು ಮೃತಪಟ್ಟಿವೆ. ಅಂದಾಜು ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಎತ್ತುಗಳು ಸಾವನ್ನಪ್ಪಿದ್ದರಿಂದ ರೈತ ಕೋರಿ ಮಲಿಯಪ್ಪ ಕಂಗಲಾಗಿದ್ದಾರೆ.

ಬೆಂಗಳೂರು, ಆನೇಕಲ್‌ನಲ್ಲಿ ಗುಡುಗು ಸಹಿತ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಮಳೆ ಮುಂದುವರಿದಿದೆ. ಸಂಜೆಗೆ ಆವರಿಸುತ್ತಿದ್ದ ಮಳೆ ಭಾನುವಾರ ಬೆಳಗಿನಿಂದಲೇ ಅಬ್ಬರಿಸುತ್ತಿದೆ. ಎಂಎಸ್ ಬಿಲ್ಡಿಂಗ್ , ವಿಧಾನಸೌಧ , ಶಿವಾನಂದ ಸರ್ಕಲ್, ಶಿವಾಜಿನಗರ ಸೇರಿದಂತೆ ಮೆಜೆಸ್ಟಿಕ್‌ ಸುತ್ತಮುತ್ತ ಮಧ್ಯಾಹ್ನ ಶುರುವಾದ ಮಳೆಯು ಸುಮಾರು 1 ಗಂಟೆಗೂ ಹೆಚ್ಚು ಸಮಯ ಆವರಿಸಿತ್ತು. ಆಗಾಗ ಬರುತ್ತಿದ್ದ ಗುಡುಗು ಜನರನ್ನು ಬೆಚ್ಚಿ ಬೀಳಿಸುತ್ತಿತ್ತು. ಕೆ.ಆರ್ ಸರ್ಕಲ್, ಕಬ್ಬನ್ ಪಾರ್ಕ್ ರಸ್ತೆ, ಲಾಲ್ ಬಾಗ್ ರಸ್ತೆ, ರಾಜಾಜಿನಗರ, ರಾಜಕುಮಾರ್ ರಸ್ತೆಯಲ್ಲಿಯೂ ಮಳೆಯಾಗಿದೆ. ಯಲಹಂಕ, ನ್ಯೂ ಟೌನ್, ದೊಡ್ಡಬಳ್ಳಾಪುರ ಮುಖ್ಯರಸ್ತೆ, ಪುಟ್ಟೇನಹಳ್ಳಿ, ಏರ್‌ಪೋರ್ಟ್‌ ರೋಡ್‌ನಲ್ಲಿ ಮಳೆಯಾಗಿದೆ.

ಇತ್ತ ಆನೇಕಲ್ ಭಾಗದಲ್ಲೂ ಧಾರಾಕಾರ ಮಳೆಯಾಗಿತ್ತು. ಭಾನುವಾರ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ವೇಳೆಗೆ ಆಗಮಿಸಿದ ಮಳೆಯು ಆನೇಕಲ್, ಅತ್ತಿಬೆಲೆ, ಸರ್ಜಾಪುರ ಭಾಗದಲ್ಲಿ ಅಬ್ಬರಿಸಿತ್ತು. ಕಳೆದೊಂದು ವಾರದಿಂದ ನಿರಂತರ ಮಳೆಯಿಂದಾಗಿ ಕೃಷಿ ಚಟುವಟಿಕೆ ಚುರುಕುಗೊಂಡಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಧಾರವಾಡದಲ್ಲೂ ಮಳೆ

ಪೇಡಾನಗರಿ ಧಾರವಾಡದಲ್ಲೂ ವರುಣನ ಅಬ್ಬರ ಮುಂದುವರಿದಿದೆ. ಮಧ್ಯಾಹ್ನದ ವೇಳೆ ಶುರುವಾದ ಮಳೆಯಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ವಿಜಯನಗರದಲ್ಲಿ ಮರಕ್ಕೆ ಬಡಿದ ಸಿಡಿಲು

ವಿಜಯನಗರದಲ್ಲಿ ಗುಡುಗು ಸಿಡಿಲು ಸಮೇತ ಮಳೆಯಾಗುತ್ತಿದ್ದು, ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ. ಹೊಸಪೇಟೆ ತಾಲೂಕಿನ ಕೆರೆ ತಾಂಡಾ ಗ್ರಾಮದಲ್ಲಿ ಮರಕ್ಕೆ ಸಿಡಿಲು ಬಡಿದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ, ಕಮಲಾಪುರ, ಹಂಪಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಇತ್ತ ಹೊಸಪೇಟೆ ಹೃದಯ ಭಾಗದಲ್ಲಿ ರಸ್ತೆ ಮೇಲೆ ನೀರು ನಿಂತು ಅವಾಂತರವೇ ಸೃಷ್ಟಿಯಾಗಿತ್ತು. ನೂರು ಹಾಸಿಗೆ ಆಸ್ಪತ್ರೆ, VNC ಕಾಲೇಜಿಗೆ ಹೋಗುವ ರಸ್ತೆ ಮೇಲೆ ನೀರು ನಿಂತಿತ್ತು. ಕೆಲ ಸಮಯ ವಾಹನಗಳ ಸಂಚಾರ ಅಡಚಣೆ ಉಂಟಾಯಿತು

ಇದನ್ನೂ ಓದಿ: Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ದಾವಣಗೆರೆಯಲ್ಲಿ ನೆಲ ಕಚ್ಚಿದ ಬೆಳೆ

ಶನಿವಾರ ಸುರಿದ ಮಳೆಯಿಂದ ಭತ್ತದ ಬೆಳೆ‌ಯು ನೆಲ ಕಚ್ಚಿದೆ. ದಾವಣಗೆರೆಯ ದೊಡ್ಡಬಾತಿ ಗ್ರಾಮದ ಸುತ್ತಮುತ್ತಲಿನ 20ಕ್ಕೂ ಹೆಚ್ಚು ಎಕರೆ ಭತ್ತದ ಬೆಳೆ ನಾಶವಾಗಿದೆ. ಉಮೇಶ್ ಎಂಬ ಯುವ ರೈತ ಬೆಳೆದಿದ್ದ ಎರಡು ಎಕರೆ ಭತ್ತ ಸಂಪೂರ್ಣ ನಾಶವಾಗಿತ್ತು. ಬರಗಾಲದ ಸಂದರ್ಭದಲ್ಲಿ ಬೋರ್ ವೆಲ್ ನೀರಿನಲ್ಲಿ ಭತ್ತ ಬೆಳೆ ಬೆಳೆದಿದ್ದರು. ಎಕರೆಗೆ 25 ರಿಂದ 30 ಸಾವಿರ ಖರ್ಚು ಮಾಡಿ ಬೆಳೆದಿದ್ದ ಬೆಳೆಯು ರಾತ್ರಿ ಸುರಿದ ಮಳೆಗೆ ಸಂಪೂರ್ಣ ನಾಶವಾಗಿದೆ. ಮಳೆ ಬಾರದೇ ಕಷ್ಟ ಅನುಭವಿಸಿದ ರೈತರಿಗೆ ಈಗ ಮಳೆ ಬಂದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka Rain : ಒಂದೇ ಮಳೆಗೆ ಬೆಂಗಳೂರಿನ ಹಲವು ಏರಿಯಾಗಳು ಸಣ್ಣ ದ್ವೀಪದಂತಾಗಿದೆ. ಚಿಕ್ಕಮಗಳೂರಿನ ಕಳಸದಲ್ಲೂ ಮಳೆಯು ಅಬ್ಬರಿಸುತ್ತಿದೆ. ಹಲವೆಡೆ ಮಳೆಯಿಂದ ಅವಘಡ ಮುಂದುವರಿದಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು/ಚಿಕ್ಕಮಗಳೂರು: ಬೆಂಗಳೂರಿನಲ್ಲಿ ಗಂಟೆ ಕಾಲ ಸುರಿದ ಮಳೆಗೆ (Karnataka Rain) ರಸ್ತೆಗಳೆಲ್ಲವೂ ಹೊಳೆಯಂತಾಗಿದೆ. ರಾಜಕಾಲುವೆಯಿಂದ ಯಲಹಂಕ ನಿವಾಸಿಗಳಿಗೆ ನಿತ್ಯ ಸಂಕಷ್ಟ ಎದುರಿಸುವಂತಾಗಿದೆ. ನಿನ್ನೆ ಶನಿವಾರ ರಾತ್ರಿ ಸುರಿದ ಮಳೆಗೆ ಇಡೀ ಏರಿಯಾ ಜಲಾವೃತಗೊಂಡಿದೆ.

karnataka rain

ಯಲಹಂಕದ ನಾರ್ಥ್‌ ಹುಡ್ ಅಪಾರ್ಟ್‌ಮೆಂಟ್ ಸುತ್ತಮುತ್ತ ನೀರು ತುಂಬಿ ಅವಾಂತರವೇ ಸೃಷ್ಟಿಯಾಗಿದೆ. ಕಳೆದ ಒಂದು ವಾರದಿಂದ ರಾಜಕಾಲುವೆಯಿಂದ ನೀರು ಹರಿಯುತ್ತಿದೆ. ಸ್ಟಾರ್ಮ್ ವಾಟರ್ ಡ್ರೇನ್ ಓಪನ್ ಬಿಟ್ಟಿರುವುದರಿಂದ ಈ ಸಮಸ್ಯೆ ಆಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇನ್ನೂ ರಾಜಕಾಲುವೆ ನೀರಿನ ವಾಸನೆಗೆ ನಿವಾಸಿಗಳು ಕಂಗಾಲಾಗಿದ್ದಾರೆ. ಗಬ್ಬು ವಾಸನೆ ತಾಳಲಾರದೇ ಕೆಲ ನಿವಾಸಿಗಳು ಮನೆ ಖಾಲಿ ಮಾಡಿದ್ದಾರೆ. ರಾತ್ರಿಯಿಂದಲೂ ಮೋಟಾರ್‌ ಮೂಲಕ ನೀರು ಹೊರಹಾಕುತ್ತಿದ್ದಾರೆ. ಸುತ್ತಮುತ್ತಲಿನ ಐದಾರು ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಸಂಕಷ್ಟ ಎದುರಾಗಿದೆ. ವಾರದ ಹಿಂದೆ ಬಿಬಿಎಂಪಿಗೆ ಪತ್ರ ಬರೆದರೂ ಯಾವುದೇ ಪ್ರಯೋಜವಿಲ್ಲ ಎಂದು ಕಿಡಿಕಾರಿದ್ದಾರೆ. ರಾಜಕಾಲುವೆಯಿಂದ ನೀರು ತುಂಬಿ 22 ಮನೆಗಳ ನಿವಾಸಿಗಳು ಪರದಾಡುತ್ತಿದ್ದಾರೆ. ಪಕ್ಕದಲ್ಲಿರುವ ಪುಟ್ಟೇನಹಳ್ಳಿ ಕೆರೆಗೆ ನೀರು ಹರಿಯದೇ ಇರುವುದರಿಂದ ಆ ನೀರು ಕೂಡ ಸೇರುತ್ತಿದೆ. ರಾಜಕಾಲುವೆ, ಮಳೆ ನೀರು ಸೇರಿ ಇಡೀ ಏರಿಯಾ ಕೆರೆಯಂತಾಗಿದೆ.

ಇದನ್ನೂ ಓದಿ: Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಕಳಸ ತಾಲೂಕಿನಾದ್ಯಂತ ಧಾರಾಕಾರ ಮಳೆ

ಕಾಫಿನಾಡು ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಭಾರೀ ಗಾಳಿ-ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಕಳಸ ತಾಲೂಕಿನಾದ್ಯಂತ ಧಾರಾಕಾರ ಮಳೆಗೆ ಕಳಸ ದೇವಸ್ಥಾನದ ಎತ್ತರದ ಪ್ರದೇಶದಿಂದ ನೀರು ಹರಿಯುತ್ತಿದೆ. ದಕ್ಷಿಣ ಕಾಶಿ ಕಳಸೇಶ್ವರ ಸ್ವಾಮಿ ದೇವಸ್ಥಾನದ ಮೆಟ್ಟಿಲು ಮೇಲಿಂದ ನೀರು ಹರಿಯುತ್ತಿದೆ. ಇತ್ತ ಮೆಟ್ಟಿಲ ಮೇಲೆ ನಿಂತು ಮಳೆ ನೀರಲ್ಲಿ ಮಕ್ಕಳು ಆಟವಾಡುತ್ತಿರುವ ದೃಶ್ಯ ಕಂಡು ಬಂತು. ಗಾಳಿ-ಮಳೆಗೆ ಮರ ಬಿದ್ದು ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಭದ್ರಾ ನದಿ ಒಳಹರಿವಿನಲ್ಲಿ ನೀರಿನ ಪ್ರಮಾಣ ಹೆಚ್ಚಳಗೊಂಡಿದೆ.

karnataka rain

ಕೊಪ್ಪಳದಲ್ಲೂ ಮುಂಗಾರು ಪೂರ್ವ ಮಳೆ

ಕೊಪ್ಪಳದಲ್ಲಿ ಭಾನುವಾರ ಮುಂಗಾರು ಪೂರ್ವ ಮಳೆ ಆರಂಭವಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಮೂರು ದಿನಗಳಿಂದ ಆಗಾಗ ಮಳೆ ಸುರಿಯುತ್ತಿದೆ. ನಿನ್ನೆ ಶನಿವಾರ ಸಂಜೆ ಸುರಿದಿದ್ದ ಮಳೆಯು ಭಾನುವಾರ ಬೆಳಗಿನವರೆಗೆ ಬಿಡುವು ಕೊಟ್ಟಿತ್ತು. ಮಧ್ಯಾಹ್ನದ ನಂತರ ಧೋ ಎಂದು ಗುಡುಗು ಸಹಿತ ಮಳೆ ಸುರಿಯುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Covaxin Safety
ದೇಶ32 mins ago

Covaxin Safety: ಕೊವ್ಯಾಕ್ಸಿನ್‌ನಿಂದ ಅಡ್ಡ ಪರಿಣಾಮ ಎಂದು ಬನಾರಸ್‌ ವಿವಿ ವರದಿ; ವೈದ್ಯ ಸಂಶೋಧನಾ ಸಂಸ್ಥೆ ಆಕ್ಷೇಪ

Food department deletes name from ration card list even though it is alive
ವಿಜಯನಗರ36 mins ago

Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

History Of Ice Cream
ಆಹಾರ/ಅಡುಗೆ37 mins ago

History Of Ice Cream: ಎಲ್ಲರ ನೆಚ್ಚಿನ ಐಸ್‌ಕ್ರೀಮ್‌ ಹುಟ್ಟಿದ್ದು ಹೇಗೆ?

IPL 2024
ಕ್ರೀಡೆ38 mins ago

IPL 2024: ಮೋದಿ ಸ್ಟೇಡಿಯಂನಲ್ಲಿ ನಡೆಯುವ ಐಪಿಎಲ್​ ಪ್ಲೇ ಆಫ್​ ಪಂದ್ಯಕ್ಕೆ ಐಸಿಸ್‌ ಉಗ್ರರ ಕಾಟ; ಪಂದ್ಯಕ್ಕೂ ಮುನ್ನ ನಾಲ್ವರ ಬಂಧನ

Silver Jewel Trend
ಫ್ಯಾಷನ್48 mins ago

Silver Jewel Trend: ಬಂಗಾರದ ಆಭರಣಗಳಿಗೆ ಸೆಡ್ಡು ಹೊಡೆದ ಸಿಲ್ವರ್‌ ಜ್ಯುವೆಲರಿಗಳು!

Prajwal Revanna Case
ಪ್ರಮುಖ ಸುದ್ದಿ50 mins ago

Prajwal Revanna Case: ನಾನು ಸೇರಿ ಸುಮಾರು 30 ಜನರ ಫೋನ್ ಟ್ಯಾಪ್: ಸರ್ಕಾರದ ವಿರುದ್ಧ ಎಚ್‌ಡಿಕೆ ಬಾಂಬ್‌!

Holenarasipura sexual assault case SIT moves HC against HD Revanna bail order
ಕ್ರೈಂ56 mins ago

HD Revanna: ರೇವಣ್ಣಗೆ ಜಾಮೀನು ಸಿಕ್ಕರೂ ಸಿಗದ ರಿಲೀಫ್‌; ಎಸ್‌ಐಟಿಯಿಂದ ಹೈಕೋರ್ಟ್‌ ಮೊರೆ

Due to heavy rain in Shira water entered houses and shops
ತುಮಕೂರು1 hour ago

Heavy Rain: ಶಿರಾದಲ್ಲಿ ಭಾರೀ ಮಳೆಗೆ ಮನೆ, ಅಂಗಡಿಗಳಿಗೆ ನುಗ್ಗಿದ ನೀರು

Lok Sabha Election 2024 Shah Rukh Khan booth in Mumbai
ಬಾಲಿವುಡ್1 hour ago

Lok Sabha Election 2024: ಕುಟುಂಬದ ಜತೆ ಬಂದು ಮತ ಚಲಾಯಿಸಿದ ಶಾರುಖ್‌ ಖಾನ್‌

Trichy Tour
ಪ್ರವಾಸ1 hour ago

Trichy Tour: ದಾಂಪತ್ಯದ ಲವಲವಿಕೆಯನ್ನು ಮತ್ತೆ ಜೀವಂತಗೊಳಿಸಲು ತಿರುಚಿರಾಪಳ್ಳಿಗೆ ಹೋಗಿ ಬನ್ನಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌