Site icon Vistara News

Suicide news | ತಂದೆಯಂತೆಯೇ ಆತ್ಮಹತ್ಯೆ ಮಾಡಿಕೊಂಡ ರೈತ

farmer suicide

ಶಿವಮೊಗ್ಗ: ಶಿವಮೊಗ್ಗದಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುಟುಂಬದಲ್ಲಿ ಇದು ಈ ರೀತಿಯ ಎರಡನೇ ದುರಂತವಾಗಿದ್ದು, ಇವರ ತಂದೆಯೂ 5 ವರ್ಷದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು.

ರೈತ ತೀರ್ಥಯ್ಯ(46) ಎಂಭವರು ಪ್ರಸಕ್ತ ವರುಷದ ಭೀಕರ ಮಳೆಗೆ ತಮ್ಮ ಹೊಲದ ಮೆಕ್ಕೆಜೋಳದ ಬೆಳೆ ನೆಲಕಚ್ಚಿರುವುದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳೆ ಹಾಕಲು ಸಾಕಷ್ಟು ಸಾಲ ಮಾಡಿಕೊಂಡಿದ್ದು, ಅದನ್ನು ತೀರಿಸಲು ಸಾಧ್ಯವಿಲ್ಲ ಎಂಬ ಆತಂಕದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಐದು ವರ್ಷದ ಹಿಂದೆ ಇವರ ತಂದೆ ಸಹ ಬೆಳೆ ಹಾನಿಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ | ಕುಡಿದ ಮತ್ತಿನಲ್ಲಿ ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಾಕಿ, ಆತ್ಮಹತ್ಯೆಗೆ ಯತ್ನ

Exit mobile version