Drowned in river : ತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರುಪಾಲು Vistara News
Connect with us

ಕ್ರೈಂ

Drowned in river : ತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರುಪಾಲು

Drowned in River: ಅವರಿಬ್ಬರು ಕಾಲೇಜು ಹುಡುಗರು. ರಜೆಯ ದಿನ ಜತೆಯಾಗಿ ಮೀನು ಹಿಡಿಯಲು ತುಂಗಾ ತೀರಕ್ಕೆ ಹೋಗಿದ್ದರು. ಆದರೆ, ಅಲ್ಲಿ ಜವರಾಯ ನೀರಿನಲ್ಲಿ ಕಾದು ಕುಳಿತಿದ್ದ. ಇಬ್ಬರು ಯುವಕರು ನೀರುಪಾಲಾಗಿದ್ದಾರೆ.

VISTARANEWS.COM


on

Shivamogga youths drowned
ತುಂಗಾ ನದಿಯಲ್ಲಿ ಕಾರ್ಯಾಚರಣೆ ಮತ್ತು ನೀರುಪಾಲಾದ ಇಬ್ಬರು ಯುವಕರು
Koo

ಶಿವಮೊಗ್ಗ: ಮೀನು ಹಿಡಿಯಲೆಂದು ತುಂಗಾ ನದಿಗೆ (Tunga river) ಇಳಿದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ (Two Youngsters drowned). ಕಾಲೇಜು ವಿದ್ಯಾರ್ಥಿಗಳಾಗಿರುವ (College Students) ಮೊಯಿನ್‌ ಖಾನ್‌ ಮತ್ತು ಅಂಜುಂ ಖಾನ್‌ ನೀರಿನಲ್ಲಿ ಕಣ್ಮರೆಯಾದವರು. ಇಬ್ಬರೂ 18 ವರ್ಷದವರು.

ಶಿವಮೊಗ್ಗದ ಶಿವಮೊಗ್ಗದ ಕುರುಬರ ಪಾಳ್ಯದಲ್ಲಿ ದುರ್ಘಟನೆ ನಡೆದಿದೆ. ಸವಾಯಿಪಾಳ್ಯದ ಮೊಯಿನ್ ಖಾನ್(18), ಇಲ್ಯಾಸ್ ನಗರದ ಅಂಜುಂ ಖಾನ್(18) ಇಬ್ಬರೂ ಬೇರೆ ಕೆಲವು ಸ್ನೇಹಿತರ ಜತೆ ಮೀನು ಹಿಡಿಯಲೆಂದು (Youths went for fishing) ನದಿ ತೀರಕ್ಕೆ ಬಂದಿದ್ದರು. ಅಲ್ಲಿ ನೀರಿಗಿಳಿದು ಮೀನು ಹಿಡಿಯುತ್ತಾ ಸುಳಿಗೆ ಸಿಲುಕಿಕೊಂಡಿದ್ದಾರೆ. ಹಾಗೆ ನೀರಿನಲ್ಲಿ ಮುಳುಗಿದ ಅವರು ಮೇಲೆ ಬಂದಿಲ್ಲ.

Shivamogga youths drowned in tunga river

ಬಿಸಿಎ ಮೊದಲ ವರ್ಷದ ವಿದ್ಯಾರ್ಥಿಯಾಗಿರುವ ಮೊಯಿನ್ ಖಾನ್ ಶವ ಪತ್ತೆಯಾಗಿದ್ದರೆ, ಬಿಎ ಮೊದಲ ವರ್ಷದ ವಿದ್ಯಾರ್ಥಿ ಅಂಜುಂಗಾಗಿ ಶೋಧ ಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆಸುತ್ತಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಗಣೇಶನ ಹಬ್ಬದ ಹಿನ್ನೆಲೆಯಲ್ಲಿ ಕಾಲೇಜಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ಇವರು ಮೀನು ಹಿಡಿಯಲು ಹೋಗಿರಬಹುದು ಎಂದು ಶಂಕಿಸಲಾಗಿದೆ. ಆದರೆ ಉತ್ಸಾಹದಲ್ಲಿ ಅವರಿಗೆ ಸಾವು ಕಣ್ಣೆದುರು ಬಂದು ನಿಂತಿದ್ದು ಗೊತ್ತಾಗಲಿಲ್ಲ. ಅವರ ಮನೆಯವರು ಕುಟುಂಬಿಕರು ನದಿ ತೀರಕ್ಕೆ ಬಂದಿದ್ದು ಕುಟುಂಬದವರ ಕಣ್ಣೀರು ಹರಿಯುತ್ತಲೇ ಇದೆ. ವಯಸ್ಸಿಗೆ ಬಂದ ಮಕ್ಕಳು ಈ ರೀತಿಯಾಗಿ ಪ್ರಾಣ ಕಳೆದುಕೊಳ್ಳುವ ನೋವಿನ ಬಗ್ಗೆ ಅಲ್ಲಿನ ಜನರು ಮಾತನಾಡಿಕೊಳ್ಳುತ್ತಿದ್ದಾರೆ.

ಇದನ್ನು ಓದಿ: Murder Case : ಎಗ್‌ರೈಸ್‌, ಕಬಾಬ್‌ ಇಲ್ಲ ಎಂದಿದ್ದೇ ತಪ್ಪಾಯ್ತಾ? ಅಂಗಡಿ ಮಾಲೀಕನನ್ನು ಇರಿದು ಕೊಂದ ಪಾತಕಿ

ವ್ಯಕ್ತಿಯನ್ನು ಕೊಂದು ಇಂಗುಗುಂಡಿಯಲ್ಲಿ ಮುಚ್ಚಿಟ್ಟಿದ್ದವರು 48 ಗಂಟೆಯಲ್ಲಿ ಸೆರೆ

ಶಿರಸಿ: ವ್ಯಕ್ತಿಯೊಬ್ಬನನ್ನು ಕೊಂದು ಇಂಗು ಗುಂಡಿಯಲ್ಲಿ ಮುಚ್ಚಿಟ್ಟಿದ್ದ ಮೂವರನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ ಕೇವಲ 48 ಗಂಟೆಯಲ್ಲಿ ಪ್ರಕರಣವನ್ನು ಭೇದಿಸಲಾಗಿದೆ.

ಶಿರಸಿ ತಾಲೂಕಿನ ವಡ್ಡಿನಕೊಪ್ಪದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿತ್ತು. ಹಾನಗಲ್ ತಾಲೂಕಿನ ಹೊಸಗೆಜ್ಜೆಹಳ್ಳಿ ನಿವಾಸಿ ಅಶೋಕ ಗಿರಿಯಪ್ಪ ಉಪ್ಪಾರ (48) ಕೊಲೆಯಾದ ವ್ಯಕ್ತಿ. ಇದನ್ನು ಬೆನ್ನು ಹತ್ತಿದ ಪೊಲೀಸರು ಪ್ರಕರಣ ದಾಖಲಾದ 48ಗಂಟೆಯಲ್ಲೆ ಆರೋಪಿಗಳನ್ನು ಬಂಧಿಸಿದ್ದಾರೆ.

ಹಾನಗಲ್ ತಾಲೂಕಿನ ಪರಶುರಾಮ ಸುರಳೇಶ್ವರ (23), ನಿರಂಜನ ತಳವಾರ (19), ಗುಡ್ಡಪ್ಪ (19) ಬಂಧಿತರು. ಇವರು ಗಿರಿಯಪ್ಪ ಉಪ್ಪಾರ ಅವರನ್ನು ಕೊಲೆಗೈದು ವಡ್ಡಿಕೊಪ್ಪ ಅರಣ್ಯ ಪ್ರದೇಶದ ಇಂಗುಗುಂಡಿಯಲ್ಲಿ ಶವ ಮುಚ್ಚಿಟ್ಟಿದ್ದರು. ಹಣಕ್ಕಾಗಿ ಕೊಲೆ ನಡೆಸಿ ಗೋಣಿ ಚೀಲ ಮುಚ್ಚಿ ಅರಣ್ಯ ಪ್ರದೇಶದಲ್ಲಿ ಎಸೆದಿದ್ದ ಆರೋಪಿತರು ಏನೂ ಆಗಿಲ್ಲ ಎಂಬಂತೆ ತಮ್ಮ ಪಾಡಿಗೆ ತಾವಿದ್ದರು. ಆದರೆ, ಪೊಲೀಸರು ಮಾತ್ರ ಪ್ರಕರಣದ ಬೆನ್ನು ಹತ್ತಿ ಬಂಧಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Belagavi News: ಹಣಕಾಸು ವಿಚಾರಕ್ಕೆ ಯೋಧನಿಂದಲೇ ಯೋಧನ ಮೇಲೆ ಗುಂಡಿನ ದಾಳಿ

Belagavi News: ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ರಾಜನಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಹಣಕಾಸಿನ ವಿಚಾರಕ್ಕೆ ಗಲಾಟೆ ನಡೆದು ಯೋಧ, ಮತ್ತೊಬ್ಬ ಯೋಧನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

VISTARANEWS.COM


on

Edited by

Soldier
Koo

ಬೆಳಗಾವಿ: ಹಣಕಾಸಿನ ವಿಚಾರಕ್ಕೆ ಯೋಧನ ಮೇಲೆ ಮತ್ತೊಬ್ಬ ಯೋಧ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ಗೋಕಾಕ್ ತಾಲೂಕಿನ ರಾಜನಕಟ್ಟೆ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಯೋಧನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿ ನಂಜುಂಡಿ

ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಸುತ್ತಿರುವ ಬಸಪ್ಪ ಮೈಲಪ್ಪ ಬಂಬರಗಾ (32) ಗಾಯಾಳು ಯೋಧ. ನಂಜುಂಡಿ ಲಕ್ಷ್ಮಣ ಬೂದಿಹಾಳ (32) ಗುಂಡಿನ ದಾಳಿಗೈದ ಆರೋಪಿ. ಇಬ್ಬರೂ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಹಣಕಾಸಿನ ವಿಚಾರಕ್ಕೆ ನಡುವೆ ಗಲಾಟೆಯಾಗಿದೆ. ಈ ವೇಳೆ ಬಸಪ್ಪ ಮೈಲಪ್ಪ ಬಂಬರಗಾ ಮೇಲೆ ನಂಜುಂಡಿ ಲಕ್ಷ್ಮಣ ಬೂದಿಹಾಳ ಗುಂಡಿನ ದಾಳಿ ನಡೆಸಿದ್ದಾರೆ. ಹೀಗಾಗಿ ಗಾಯಾಳು ಯೋಧನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | Great robbery: ಅಂಗಡಿಯ ಗೋಡೆಗೆ ರಂಧ್ರ ಕೊರೆದು 25 ಕೋಟಿ ರೂ. ಮೌಲ್ಯದ ಆಭರಣ ದೋಚಿದ ಖತರ್ನಾಕ್ ಕಳ್ಳರು!

ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳ ಸಾವು

ಕಲಬುರಗಿ: ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವುದು ನಗರದ ರಿಂಗ್ ರಸ್ತೆಯ ನಾಗನಹಳ್ಳಿ ಬಳಿಯ ರೈಲ್ವೆ ಬ್ರಿಡ್ಜ್ ಬಳಿ ಮಂಗಳವಾರ ನಡೆದಿದೆ. ಹುಟ್ಟುಹಬ್ಬದ ಪಾರ್ಟಿಗೆ ಹೋಗುತ್ತಿದ್ದಾಗ ಅಪಘಾತವಾಗಿದೆ (Bike Accident).

ಅಂಬಿಕಾ ನಗರದ ಅಲಿ ಅಬ್ಬಾಸ್ ಹಾಗೂ ರೆಹಮತ್ ನಗರದ ಇರ್ಫಾನ್ ಮೃತ ವಿದ್ಯಾರ್ಥಿಗಳು. ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಅಬ್ಬಾಸ್ ಅಲಿ, ಸ್ನೇಹಿತ ಇರ್ಫಾನ್ ಜತೆ ಬೈಕ್‌ನಲ್ಲಿ ಪಾರ್ಟಿಗೆ ಹೊರಟಿದ್ದ. ವೇಗವಾಗಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಬೈಕ್‌ ಡಿವೈಡರ್‌ಗೆ ಡಿಕ್ಕಿಯಾಗಿದೆ. ಈ ವೇಳೆ ತಲೆಗೆ ಗಂಭೀರ ಗಾಯಗಳಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು 10ನೇ ತರಗತಿ ಓದುತ್ತಿದ್ದರು. ಸ್ಥಳಕ್ಕೆ ಸಂಚಾರ-2 ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!

ದೈಹಿಕ ಶಿಕ್ಷಕನಿಗೆ ಹಲ್ಲೆ ಮಾಡಿದ್ದ ಯುವಕನಿಗೆ ಯುವಕರಿಂದ ಥಳಿತ

Assault Case

ಯಾದಗಿರಿ: ದೈಹಿಕ ಶಿಕ್ಷಕನಿಗೆ ಹಲ್ಲೆ ಮಾಡಿದ್ದ ಯುವಕನಿಗೆ ಥಳಿಸಿರುವ ಘಟನೆ ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದೆ. ಕಬಡ್ಡಿ ಪಂದ್ಯದ ವೇಳೆ ದೈಹಿಕ ಶಿಕ್ಷಕ ಔಟ್ ಎಂದು ತೀರ್ಪು ನೀಡಿದ್ದಕ್ಕೆ ಕೋಪಗೊಂಡು ಯುವಕನೊಬ್ಬ, ದೈಹಿಕ ಶಿಕ್ಷಕನಿಗೆ ಹಲ್ಲೆ ಮಾಡಿದ್ದ. ಹೀಗಾಗಿ ಆತನ ಮೇಲೆ ಯುವಕರ ಗುಂಪು ಹಿಗ್ಗಾಮುಗ್ಗಾ ಥಳಿಸಿದೆ. ಗಲಾಟೆ ಬಿಡಿಸಲು ಅಧಿಕಾರಿಗಳು, ಸಿಬ್ಬಂದಿ ಹರಸಾಹಸಪಟ್ಟರು.

Continue Reading

ಕ್ರೈಂ

Great robbery: ಅಂಗಡಿಯ ಗೋಡೆಗೆ ರಂಧ್ರ ಕೊರೆದು 25 ಕೋಟಿ ರೂ. ಮೌಲ್ಯದ ಆಭರಣ ದೋಚಿದ ಖತರ್ನಾಕ್ ಕಳ್ಳರು!

Great robbery: ದಿಲ್ಲಿಯಲ್ಲಿ ಕಳ್ಳರು ಜ್ಯುವೆಲ್ಲರಿ ಶಾಪ್‌ ಒಂದರಿಂದ ಬರೋಬ್ಬರಿ 25 ಕೋಟಿ ರೂ.(25 crore) ಮೌಲ್ಯದ ಚಿನ್ನಾಭರಣ ದೋಚಿದ್ದಾರೆ. ಸಿಸಿ ಟಿವಿ ಕ್ಯಾಮರಾ(cc tv camera) ಅಳವಡಿಸಿದ್ದರೂ ಅದರ ಸಂಪರ್ಕ ಕಡಿತಗೊಳಿಸಿ ಈ ಕೃತ್ಯ ಎಸಗಲಾಗಿದೆ.

VISTARANEWS.COM


on

Edited by

Crime image
Koo

ನವ ದೆಹಲಿ: ಚಿನ್ನಾಭರಣಗಳಂತಹ ಬೆಲೆಬಾಳುವ ವಸ್ತುಗಳ ರಕ್ಷಣೆಗೆ ಆಧುನಿಕ ತಂತ್ರಜ್ಞಾನಗಳ ಮೊರೆ ಹೋದರೂ ಕಳ್ಳರು ಅದೆಲ್ಲವನ್ನೂ ಬೇಧಿಸಿ ಸೊತ್ತುಗಳನ್ನು ಕಳವು ಮಾಡೇ ಮಾಡುತ್ತಾರೆ. ಇದಕ್ಕೆ ಉದಾಹರಣೆ ಎಂಬಂತೆ ಸಿಸಿ ಟಿವಿ ಕ್ಯಾಮರಾ(cc tv camera) ಅಳವಡಿಸಿದ ಜ್ಯುವೆಲ್ಲರಿ ಶಾಪ್‌ ಒಂದರಿಂದ ಕಳ್ಳರು ಬರೋಬ್ಬರಿ 25 ಕೋಟಿ ರೂ.(25 crore) ಮೌಲ್ಯದ ವಜ್ರ ಮತ್ತು ಚಿನ್ನಾಭರಣಗಳನ್ನು ದೋಚಿದ್ದಾರೆ.

ದಕ್ಷಿಣ ದೆಹಲಿಯ ಜುಂಗ್‌ಪುರದ ಭೋಗಲ್‌ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸೆಪ್ಟಂಬರ್‌ 25 ಮತ್ತು 26ರ ಮಧ್ಯೆ ಅಂಗಡಿಯ ಗೋಡೆಗೆ ಕನ್ನ ಕೊರೆದು ಕಳ್ಳರು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಬೆಳಗ್ಗೆ ಅಂಗಡಿ ಮಾಲಕ ಬಾಗಿಲು ತೆರೆಯಲು ಬಂದಾಗ ಕಳವಿನ ವಿಚಾರ ಬೆಳಕಿಗೆ ಬಂದಿದೆ.

ಉಮ್ರಾವ್‌ ಸಿಂಗ್‌ ಜ್ಯುವೆಲ್ಲರಿಯಿಂದ ಈ ಕಳವು ನಡೆದಿದೆ. 1948ರಲ್ಲಿ ಆರಂಭವಾದ ಈ ಜ್ಯುವೆಲ್ಲರಿ ಈ ಪ್ರದೇಶದಲ್ಲಿ ಜನಪ್ರಿಯವಾಗಿದೆ. ಸೋಮವಾರ ಮಧ್ಯರಾತ್ರಿ ಈ ಕಳವು ನಡೆದಿರುವ ಶಂಕೆ ವ್ಯಕ್ತವಾಗಿದೆ. ಆಭರಣ ಅಂಗಡಿಯ ‌ಗೋಡೆಗೆ ರಂಧ್ರವನ್ನು ಕೊರೆದು ಕಳ್ಳರು ಲಾಕರ್ ಹೊಂದಿರುವ ಸ್ಟ್ರಾಂಗ್ ರೂಮ್ ಗೆ ತಲುಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಶೇಷ ಎಂದರೆ ಬೆಳ್ಳಿಯ ಆಭರಣಗಳನ್ನು ಅಲ್ಲೇ ಬಿಟ್ಟಿರುವ ಖದೀಮರು ಚಿನ್ನ ಮತ್ತು ವಜ್ರದ ಆಭರಣಗಳನ್ನು ದೋಚಿದ್ದಾರೆ.

ಸಿಸಿ ಟಿವಿ ಕ್ಯಾಮರಾ ಅಳವಡಿಕೆ ಪ್ರಯೋಜಕ್ಕೆ ಬರಲಿಲ್ಲ

ಈ ಜ್ಯುವೆಲ್ಲರಿಗೆ ಸಿಸಿ ಟಿವಿ ಕ್ಯಾಮರಾ ಅಳವಡಿಸಿದ್ದರೂ ಪ್ರಯೋಜನವಾಗಲಿಲ್ಲ. ಕಳ್ಳರು ಕ್ಯಾಮರಾದ ಸಂಪರ್ಕ ಕತ್ತರಿಸಿ ಕೃತ್ಯ ಎಸಗಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಬೆಳಿಗ್ಗೆ ಅಂಗಡಿಯ ನಾಮಫಲಕ ಮುರಿದಿರುವುದನ್ನು ನೋಡಿದ ಅಂಗಡಿ ಮಾಲಕರಿಗೆ ಅನುಮಾನ ಮೂಡಿತ್ತು. ಬಳಿಕ ಅವರು ಅಂಗಡಿಯ ಬಾಗಿಲು ತೆರೆದಾಗ ಎಲ್ಲಾ ವಜ್ರ ಮತ್ತು ಚಿನ್ನದ ಆಭರಣಗಳು ಕಾಣೆಯಾಗಿರುವುದು ಕಂಡುಬಂತು. ಅಲರಾಂ ಸಂಪರ್ಕವನ್ನೂ ಕಳ್ಳರು ಕಡಿತಗೊಳಿಸಿದ್ದರು.

ʼʼನಾಲ್ಕು ಮಹಡಿಯ ಕಟ್ಟಡದ ಟೆರೇಸ್‌ ಮೇಲಿನಿಂದ ಕೆಳ ಅಂತಸ್ತಿಗೆ ಬಂದ ಕಳ್ಳರು ಗೋಡೆಯನ್ನು ಡ್ರಿಲ್‌ನಿಂದ ಕೊರೆದು ಸ್ಟ್ರಾಂಗ್‌ ರೂಮ್‌ ಪ್ರವೇಶಿಸಿರುವ ಸಾಧ್ಯತೆ ಇದೆ. 10ರಿಂದ 15 ಲಕ್ಷ ರೂಪಾಯಿ ನಗದು ಕೂಡ ಕಳವಾಗಿದೆ. ಕಳ್ಳರ ಪೈಕಿ ಒಬ್ಬಾತ ಸ್ಟ್ರಾಂಗ್ ರೂಮ್ ಪ್ರವೇಶಿಸಿ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ಚೀಲದಲ್ಲಿ ತುಂಬಿ ಹೊರಗಡೆ ಸಾಗಿಸಿರಬೇಕು” ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: NCP Crisis: ಪಕ್ಷದಲ್ಲಿ ಯಾವುದೇ ಒಡಕಿಲ್ಲ ಎಂದ ಎನ್‌ಸಿಪಿ ಎರಡೂ ಬಣ!

ಅಪರಾಧಿಗಳಿಗೆ ಅಂಗಡಿ ಮತ್ತು ಆಭರಣಗಳ ಬಗ್ಗೆ ಮೊದಲೇ ಮಾಹಿತಿ ಇತ್ತು ಮತ್ತು ಸ್ಟ್ರಾಂಗ್ ರೂಮ್ ಅನ್ನು ಹೇಗೆ ತಲುಪಬೇಕೆಂದು ಅವರಿಗೆ ತಿಳಿದಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕಳ್ಳರಿಗೆ ಎಲೆಕ್ಟ್ರಾನಿಕ್ ಉಪಕರಣಗಳ ಬಗ್ಗೆಯೂ ತಿಳಿದಿರುವ ಸಾಧ್ಯತೆ ಇದೆ. ದರೋಡೆ ನಡೆದ ರೀತಿಯನ್ನು ನೋಡಿದರೆ, ಅಪರಾಧಿಗಳು ತಮ್ಮ ಕೃತ್ಯದ ಬಗ್ಗೆ ಯೋಜನೆ ರೂಪಿಸಲು ಮೊದಲೇ ಸ್ಥಳಕ್ಕೆ ಬಂದಿರುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದು, ಇದುವರೆಗೆ ಯಾರನ್ನೂ ಬಂಧಿಸಿಲ್ಲ.

ಇನ್ನಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Bangalore Bandh: ಬೆಂಗಳೂರು ಬಂದ್‌ ಹತ್ತಿಕ್ಕಲು ಪೊಲೀಸ್‌ ಬಲ ಪ್ರಯೋಗ ನಡೆಯಿತೇ? ಕಮಿಷನರ್‌ ಹೇಳಿದ್ದೇನು?

Bangalore Bandh : ಬೆಂಗಳೂರು ಬಂದ್‌ ಏನೋ ಸಾಂಗವಾಗಿ ಮುಗಿದಿದೆ. ಆದರೆ, ಪೊಲೀಸರ ಬಲ ಪ್ರಯೋಗದ ಮೂಲಕ ಬಂದ್‌ ಪರಿಣಾಮವನ್ನು ತಗ್ಗಿಸಲಾಯಿತೇ ಎಂಬ ಪ್ರಶ್ನೆ ಮೂಡಿದೆ. ಇಬ್ಬರು ನಾಯಕರು, ಪೊಲೀಸ್‌ ಕಮೀಷನರ್‌ ಹೇಳಿದ್ದೇನು?

VISTARANEWS.COM


on

Edited by

Protesters deatained
Koo

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ (Cauvery water Dispute) ಕರ್ನಾಟಕ ಜಲ ಸಂರಕ್ಷಣಾ ಸಮಿತಿ (Karnataka Jala Samrakshana Samiti) ಕರೆ ನೀಡಿದ್ದ ಒಂದು ದಿನದ ಬೆಂಗಳೂರು ಬಂದ್‌ (Bangalore Bandh) ಸಾಂಗವಾಗಿ ಮುಕ್ತಾಯಗೊಂಡಿದೆ. ಬೆಳಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ನಡೆದ ಪ್ರತಿಭಟನೆಯ ವೇಳೆ ಗಮನೀಯ ಅನಾಹುತಕಾರಿ ಘಟನೆಗಳು ಇಲ್ಲದೆ ಬಂದ್‌ ಬಹುತೇಕ ಶಾಂತಿಯುತವಾಗಿ ನಡೆಯಿತು.

ನೂರಾರು ಸಂಘಟನೆಗಳು ಸೇರಿ ನಡೆಸಿದ ಈ ಬಂದ್‌ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಬೆಂಬಲ ನೀಡಿವೆ. ಈ ನಡುವೆ, ಪ್ರತಿಭಟನೆಗೆ ನಮ್ಮ ಯಾವುದೇ ಆಕ್ಷೇಪ ಇಲ್ಲ ಎಂದು ಪದೇಪದೆ ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಒಳಗಿಂದೊಳಗೆ ಪೊಲೀಸ್‌ ಬಲ ಪ್ರಯೋಗದ (Police Force used to curb bandh?) ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸಿದರೇ ಎಂಬ ಪ್ರಶ್ನೆ ಕೇಳಿಬಂದಿದೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಂಗಳವಾರ ಬೆಳಗ್ಗೆ ಬಂದ್‌ ಆರಂಭವಾಗುತ್ತಿದ್ದಂತೆಯೇ ಪೊಲೀಸ್‌ ಇಲಾಖೆ ಬಲಪ್ರಯೋಗದ ಮೂಲಕ ಬಂದ್‌ನ್ನು ಹತ್ತಿಕ್ಕಲಾಗುತ್ತಿದೆ ಎಂದು ಆರೋಪಿಸಿದ್ದರು. ನಾಯಕರನ್ನು ಬಂಧಿಸಿದ್ದು, ರಾತ್ರೋರಾತ್ರಿ ನಡೆದ ಮುನ್ನೆಚ್ಚರಿಕಾ ಕ್ರಮದ ಬಂಧನಗಳನ್ನು ಅವರು ಉಲ್ಲೇಖ ಮಾಡಿದ್ದರು.

ಇತ್ತ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡಾ ಎಲ್ಲ ರೀತಿಯಿಂದಲೂ ಹತ್ತಿಕ್ಕುವ ಪ್ರಯತ್ನಗಳ ನಡುವೆ ಬಂದ್‌ ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ. ಅವರು ಕೂಡಾ ಪೊಲೀಸ್‌ ಬಲ ಪ್ರಯೋಗದ ಉಲ್ಲೇಖ ಮಾಡಿದ್ದಾರೆ.

ಸೆಕ್ಷನ್‌ ಜಾರಿಗೆ ಬಿಜೆಪಿ, ಜೆಡಿಎಸ್‌ ವಿರೋಧ

ಬಂದ್‌ನ ದಿನ ಯಾವುದೇ ಪ್ರತಿಭಟನೆ ನಡೆಸುವಂತಿಲ್ಲ. ಮಾಡುವುದಿದ್ದರೆ ಕೇವಲ ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಅವಕಾಶ. ಬೇರೆ ಎಲ್ಲೂ ಮೆರವಣಿಗೆ ಕೂಡಾ ಮಾಡುವಂತಿಲ್ಲ ಎಂದು ಪೊಲೀಸ್‌ ಕಮೀಷನರ್‌ ಬಿ. ದಯಾನಂದ್‌ ಹೇಳಿದ್ದರು. ಇದನ್ನು ಬಿಜೆಪಿ ಮತ್ತು ಜೆಡಿಎಸ್‌ ಆಕ್ಷೇಪಿಸಿವೆ. ಪೊಲೀಸ್‌ ಅಧಿಕಾರಿಗಳು ಸೆಕ್ಷನ್‌ 144ರ ಹೆಸರಿನಲ್ಲಿ ಟೌನ್‌ ಹಾಲ್‌ನಿಂದ ಫ್ರೀಡಂ ಪಾರ್ಕ್‌ನವರೆಗೆ ನಡೆಯುವ ಮೆರವಣಿಗೆಯನ್ನೂ ತಡೆಯುತ್ತಿದ್ದಾರೆ ಎಂದಿದ್ದಾರೆ.

ಎಲ್ಲೇ ಬಂಧನವಾದರೂ ಫ್ರೀಡಂ ಪಾರ್ಕ್‌ಗೆ

ಮಂಗಳವಾರ ಮುಂಜಾನೆ ಹಲವಾರು ಕಡೆಗಳಲ್ಲಿ ಪ್ರತಿಭಟನೆಗಳನ್ನು ಆಯೋಜಿಸಲಾಗಿತ್ತು. ಆದರೆ, ಪೊಲೀಸರು ಅಲ್ಲೆಲ್ಲ ಮೊದಲೇ ಹಾಜರಿದ್ದು ಪ್ರತಿಭಟನಾಕಾರರನ್ನು ಬಂಧಿಸಿ ಬಳಿಕ ಫ್ರೀಡಂ ಪಾರ್ಕ್‌ಗೆ ಕರೆದುಕೊಂಡು ಹೋಗಿ ಬಿಟ್ಟಿದ್ದಾರೆ. ಬಂದ್‌ಗೆ ಕರೆ ನೀಡಿದ್ದ ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ಮುಖಂಡ, ರೈತ ನಾಯಕ ಕುರುಬೂರು ಶಾಂತ ಕುಮಾರ್‌ ಅವರನ್ನು ಅವರು ಮೈಸೂರು ಬ್ಯಾಂಕ್‌ ಸರ್ಕಲ್‌ಗೆ ಬರುತ್ತಲೇ ಬಂಧಿಸಲಾಯಿತು. ಅವರು ಟೌನ್‌ ಹಾಲ್‌ವರೆಗೆ ಮೆರವಣಿಗೆ ಹೋಗುತ್ತೇವೆ, ಒಂದು ಪ್ರತಿಭಟನೆ ಸಭೆ ನಡೆಸುತ್ತೇವೆ ಎಂದರೂ ಅವಕಾಶ ಸಿಕ್ಕಿಲ್ಲ. ಹೀಗೆ ಎಲ್ಲಾ ನಾಯಕರನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: Bangalore Bandh : ಪ್ರತಿಭಟನಾಕಾರರ ಬಂಧನಕ್ಕೆ ಎಚ್‌ಡಿಕೆ ಕೆಂಡಾಮಂಡಲ; ಇದು ಸ್ಟಾಲಿನ್‌ನ ಬಾಡಿಗೆ ಸರ್ಕಾರವೇ?

1000ಕ್ಕೂ ಅಧಿಕ ಮಂದಿಯನ್ನು ಮೊದಲೇ ಕಸ್ಟಡಿಗೆ ಪಡೆಯಲಾಗಿತ್ತು!

ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಅವರೇ ಹೇಳಿದಂತೆ ಬೆಂಗಳೂರಿನಲ್ಲಿ ಬಂದ್‌ನ ಮುನ್ನಾ ದಿನವೇ ಮುನ್ನೆಚ್ಚರಿಕೆ ಕ್ರಮವಾಗಿ 1000ಕ್ಕೂ ಅಧಿಕ ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ʻʻಬೆಳಗ್ಗೆಯಿಂದ ಶಾಂತಿಯುತವಾಗಿ ಬಂದ್ ನಡೆದಿದೆ. ಯಾವುದೇ ಅಹಿತಕರ ಘಟನೆಗಳು ನಗರದಲ್ಲಿ ನಡೆದಿಲ್ಲ. ನಗರದಾದ್ಯಂತ ವ್ಯಾಪಕವಾದ ಬಂದೋಬಸ್ತ್ ಮಾಡಲಾಗಿತ್ತು. ಮೊದಲೇ ಕೆಲವರನ್ನು ನಾವು ವಶಕ್ಕೆ ಪಡೆದಿದ್ದೆವು. ಇನ್ನು ಪ್ರತಿಭಟನೆಗೆ ಬಂದವರನ್ನು ವಶಕ್ಕೆ ಪಡೆದೆವುʼʼ ಎಂದು ಅವರು ಬಂದ್‌ ಬಳಿಕ ಹೇಳಿದರು.

ʻʻಕೆಲವು ಕಡೆಗಳಲ್ಲಿ ಅಂಗಡಿ ಮುಂಗಟ್ಟು ಸ್ವಯಂಪ್ರೇರಿತವಾಗಿ ಬಂದ್ ಮಾಡಿದರು. ಯಾವುದೇ ಬಸ್ ಗಳಿಗೆ ಕಲ್ಲು ತೂರಾಟ ಆಗಿಲ್ಲ. ಜಯನಗರದಲ್ಲಿ ಕೆಲ ಘಟನೆಗಳು ಆಗಿವೆ. ಪೊಲೀಸರು ಅದರ ಬಗ್ಗೆ ತನಿಖೆ ಮಾಡ್ತಾ ಇದ್ದಾರೆ. ತಮಿಳುನಾಡು ಬಸ್ ಗಳು ಅವರೇ ಸಂಚಾರ ನಿಲ್ಲಿಸಿದರುʼʼ ಎಂದು ವಿವರಿಸಿದರು.

ಮುನ್ನೆಚ್ಚರಿಕೆ ಕ್ರಮವಾಗಿ ಒಂದು ಸಾವಿರಕ್ಕೂ ಅಧಿಕ ಮಂದಿಯನ್ನು ಕಸ್ಟಡಿಗೆ ಪಡೆದಿದ್ದೆವು. ಅವರನ್ನು ಬಿಡುಗಡೆ ಮಾಡಲಾಗಿದೆʼʼ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ. ಬಂಧಿತರಲ್ಲಿ ಈ ಹಿಂದೆ ಬಂದ್‌ ಸಂದರ್ಭದಲ್ಲಿ ಗಲಾಟೆ ಮಾಡಿದ ಹಿನ್ನೆಲೆ ಇರುವವರು, ಸಂಘಟನೆಗಳು ಮುಖಂಡರು ಇದ್ದರು.

Continue Reading

ಕರ್ನಾಟಕ

Bike Accident: ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳ ಸಾವು

Bike Accident: ಕಲಬುರಗಿ ರಿಂಗ್ ರಸ್ತೆಯ ನಾಗನಹಳ್ಳಿ ಬಳಿಯ ರೈಲ್ವೆ ಬ್ರಿಡ್ಜ್ ಬಳಿ ಮಂಗಳವಾರ ಅಫಘಾತ ನಡೆದಿದೆ. ಡಿವೈಡರ್‌ಗೆ ಬೈಕ್‌ ಡಿಕ್ಕಿಯಾಗಿದ್ದರಿಂದ ಇಬ್ಬರು ವಿದಯಾರ್ಥಿಗಳು ಮೃತಪಟ್ಟಿದ್ದಾರೆ.

VISTARANEWS.COM


on

Edited by

Bike Accident
Koo

ಕಲಬುರಗಿ: ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವುದು ನಗರದ ರಿಂಗ್ ರಸ್ತೆಯ ನಾಗನಹಳ್ಳಿ ಬಳಿಯ ರೈಲ್ವೆ ಬ್ರಿಡ್ಜ್ ಬಳಿ ಮಂಗಳವಾರ ನಡೆದಿದೆ. ಹುಟ್ಟುಹಬ್ಬದ ಪಾರ್ಟಿಗೆ ಹೋಗುತ್ತಿದ್ದಾಗ ಅಪಘಾತವಾಗಿದೆ (Bike Accident).

ಅಂಬಿಕಾ ನಗರದ ಅಲಿ ಅಬ್ಬಾಸ್ ಹಾಗೂ ರೆಹಮತ್ ನಗರದ ಇರ್ಫಾನ್ ಮೃತ ವಿದ್ಯಾರ್ಥಿಗಳು. ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಅಬ್ಬಾಸ್ ಅಲಿ, ಸ್ನೇಹಿತ ಇರ್ಫಾನ್ ಜತೆ ಬೈಕ್‌ನಲ್ಲಿ ಪಾರ್ಟಿಗೆ ಹೊರಟಿದ್ದ. ವೇಗವಾಗಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಬೈಕ್‌ ಡಿವೈಡರ್‌ಗೆ ಡಿಕ್ಕಿಯಾಗಿದೆ. ಈ ವೇಳೆ ತಲೆಗೆ ಗಂಭೀರ ಗಾಯಗಳಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು 10ನೇ ತರಗತಿ ಓದುತ್ತಿದ್ದರು. ಸ್ಥಳಕ್ಕೆ ಸಂಚಾರ-2 ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!

ದೈಹಿಕ ಶಿಕ್ಷಕನಿಗೆ ಹಲ್ಲೆ ಮಾಡಿದ್ದ ಯುವಕನಿಗೆ ಯುವಕರಿಂದ ಥಳಿತ

Assault Case

ಯಾದಗಿರಿ: ದೈಹಿಕ ಶಿಕ್ಷಕನಿಗೆ ಹಲ್ಲೆ ಮಾಡಿದ್ದ ಯುವಕನಿಗೆ ಥಳಿಸಿರುವ ಘಟನೆ ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದೆ. ಕಬಡ್ಡಿ ಪಂದ್ಯದ ವೇಳೆ ದೈಹಿಕ ಶಿಕ್ಷಕ ಔಟ್ ಎಂದು ತೀರ್ಪು ನೀಡಿದ್ದಕ್ಕೆ ಕೋಪಗೊಂಡು ಯುವಕನೊಬ್ಬ, ದೈಹಿಕ ಶಿಕ್ಷಕನಿಗೆ ಹಲ್ಲೆ ಮಾಡಿದ್ದ. ಹೀಗಾಗಿ ಆತನ ಮೇಲೆ ಯುವಕರ ಗುಂಪು ಹಿಗ್ಗಾಮುಗ್ಗಾ ಥಳಿಸಿದೆ. ಗಲಾಟೆ ಬಿಡಿಸಲು ಅಧಿಕಾರಿಗಳು, ಸಿಬ್ಬಂದಿ ಹರಸಾಹಸಪಟ್ಟರು.

10 ವರ್ಷದ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ; ಕಾಮುಕ ಹೆಡ್‌ ಮಾಸ್ಟರ್‌ ಅರೆಸ್ಟ್‌

Gadaga sexual assault

ಗದಗ: ಮಕ್ಕಳಿಗೆ ಸದ್ಬುದ್ಧಿಯನ್ನು ಹೇಳಿಕೊಡಬೇಕಾದ ಶಿಕ್ಷಕನೊಬ್ಬ ಮಗಳಂಥ ವಿದ್ಯಾರ್ಥಿನಿ ಮೇಲೆ ತನ್ನ ಕಾಮುಕತನವನ್ನು (Harassment Case) ಪ್ರದರ್ಶನ ಮಾಡಿದ ಹೇಯ ಘಟನೆ ಗದಗ ಜಿಲ್ಲಾ (Gadaga News) ನರಗುಂದ ತಾಲೂಕಿನಲ್ಲಿ ನಡೆಸಿದೆ. ನರಗುಂದ ಪಟ್ಟಣದ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ (Head Master of Urdu school) 10 ವರ್ಷದ ಬಾಲಕಿಗೆ ಲೈಂಗಿಕ ಹಿಂಸೆ (Sexual harassment on 10 year old girl ನೀಡಿದ್ದಾನೆ.

ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯೊಂದರಲ್ಲಿ ಪ್ರಭಾರ ಮುಖ್ಯ ಶಿಕ್ಷಕನಾಗಿರುವ ಅಲ್ಲಾದಿನ್ ಚವಡಿಯೇ ಈ ರೀತಿ ನಡೆದುಕೊಂಡವನು. ಅವನು ತನ್ನದೇ ಶಾಲೆಯ 10 ವರ್ಷದ ವಿದ್ಯಾರ್ಥಿನಿಗೆ ಹಿಂಸೆ ನೀಡಿದ್ದಾನೆ.

ಆರೋಪಿ ಚವಡಿ ಬಾಲಕಿಯನ್ನು ತನ್ನ ಕಚೇರಿಯ ಒಳಗೆ ಕರೆಸಿಕೊಂಡು ಆಕೆಯ ದೇಹದ ಮೇಲೆಲ್ಲ ಕೈ ಆಡಿಸುತ್ತಿದ್ದನೆಂದು ಹೇಳಲಾಗಿದೆ. ಈ ವಿಷಯವನ್ನು ಯಾರಿಗೂ ಹೇಳಬಾರದು. ಹೇಳಿದರೆ ನಿನ್ನನ್ನು ಕೊಂದು ಬಿಡುತ್ತೇನೆ ಎಂದು ಬೆದರಿಸಿದ್ದ ಎನ್ನಲಾಗಿದೆ.

ಶಾಲೆಯಲ್ಲಿ ಆದ ಘಟನೆಯ ಬಗ್ಗೆ ಹುಡುಗಿಯ ತಾಯಿಯ ಬಳಿ ಹೇಳಿದ್ದಳು. ಮನೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿತ್ತು. ಆದರೆ, ದೂರು ನೀಡಿದರೆ ಮಗಳ ಭವಿಷ್ಯಕ್ಕೆ ತೊಂದರೆಯಾದೀತು, ಮದುವೆ ಮಾಡುವುದು ಕಷ್ಟವಾದೀತು ಎಂದು ಭಾವಿಸಿದ ಮನೆಯವರು ಕೆಲವು ದಿನ ಸುಮ್ಮನಿದ್ದರು.

ಇದನ್ನೂ ಓದಿ | Road Accident : ಆಕ್ಸೆಲ್ ಕಟ್‌ ಆಗಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಬಸ್‌; 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ

ಬಳಿಕ ಮುಂದೆಯೂ ಈ ರೀತಿಯ ಘಟನೆ ಮುಂದುವರಿಯಬಾರದು ಎಂಬ ಕಾರಣಕ್ಕಾಗಿ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದು, ಈಗ ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನ ಅನ್ವಯ ಎಫ್ ಐ ಆರ್ ದಾಖಲಾಗಿದೆ.

ಪೊಲೀಸರು ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಪ್ರಭಾರಿ ಮುಖ್ಯ ಶಿಕ್ಷಕ ಅಲ್ಲಾದಿನ್‌ನನ್ನು ಪೋಕ್ಸೋ ಕಾಯ್ದೆ‌ ಅಡಿ ಬಂಧಿಸಿದ್ದಾರೆ.

Continue Reading
Advertisement
Rishabh Pant
ಕ್ರಿಕೆಟ್11 mins ago

World Cup 2023 : ಮುಂಬರುವ ವಿಶ್ವ ಕಪ್​ ಮಿಸ್ ಮಾಡಿಕೊಳ್ಳಲಿರುವ ಸ್ಟಾರ್​ ಪ್ಲೇಯರ್​ಗಳ ಲಿಸ್ಟ್​ ಇಲ್ಲಿದೆ

Soldier
ಕರ್ನಾಟಕ12 mins ago

Belagavi News: ಹಣಕಾಸು ವಿಚಾರಕ್ಕೆ ಯೋಧನಿಂದಲೇ ಯೋಧನ ಮೇಲೆ ಗುಂಡಿನ ದಾಳಿ

DK Shivakumar and CM Siddaramaiah
ಕರ್ನಾಟಕ32 mins ago

Cauvery Dispute : 3000 ಕ್ಯೂಸೆಕ್‌ ನೀರು ಬಿಡುಗಡೆ ಆದೇಶವನ್ನೂ ಪಾಲಿಸುತ್ತಾ ಸರ್ಕಾರ?; ಸಿಎಂ ಹೇಳಿದ್ದೇನು?

Fact Check, PFI Attack on Soldier is Fake Says Kerala Police
Fact Check40 mins ago

Fact Check: ಕೇರಳ ಯೋಧನ ಮೇಲೆ ಪಿಎಫ್ಐ ದಾಳಿ! ಪ್ರಸಿದ್ಧಿಗಾಗಿ ‘ಫೇಕ್’ ಅಟ್ಯಾಕ್ ಕತೆ ಕಟ್ಟಿದ್ನಾ ಸೈನಿಕ?

Ruturaj Gaikwad
ಕ್ರಿಕೆಟ್48 mins ago

Ruturaj Gaikwad : ಚೀನಾಗೆ ಹೊರಡುವ ಮೊದಲು ಪುಣೆಯ ಗಣೇಶ ಮಂದಿರಕ್ಕೆ ಭೇಟಿ ನೀಡಿದ ಋತುರಾಜ್​

BJP Workers Protest
ಕರ್ನಾಟಕ59 mins ago

BJP Protest: ಕೋಲಾರ ಸಂಸದ ಮುನಿಸ್ವಾಮಿ ಜತೆ ಅನುಚಿತ ವರ್ತನೆಗೆ ಆಕ್ರೋಶ; ಶಾಸಕ, ಎಸ್‌ಪಿ ವಿರುದ್ಧ ಬಿಜೆಪಿ ಪ್ರತಿಭಟನೆ

Cluster level Pratibha Karanji programme in Mehakar village
ಬೀದರ್‌1 hour ago

Bidar News: ಮೇಹಕರ ಗ್ರಾಮದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

CM Siddaramaiah Sangolli Rayanna
ಕರ್ನಾಟಕ1 hour ago

CM Siddaramaiah : ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ; ಅನ್ನ ಕೊಟ್ಟ ದೇವ್ರು ಸಿದ್ದರಾಮಯ್ಯ ಎಂದ ಮಹಿಳೆ

MLA T B Jayachandra speech at foot and mouth flu vaccination campaign
ತುಮಕೂರು1 hour ago

Tumkur News: ಕಾಲುಬಾಯಿ ಜ್ವರ ಲಸಿಕೆ ಅಭಿಯಾನಕ್ಕೆ ಶಾಸಕ ಟಿ.ಬಿ.ಜಯಚಂದ್ರ ಚಾಲನೆ

Uttara Kannada News: District Level Monthly Best PDO Awarded Hitlalli Gram Panchayat PDO G.G. Shetty was felicitated at Karwar
ಉತ್ತರ ಕನ್ನಡ1 hour ago

Uttara Kannada News: ಅನಿವಾರ್ಯವಿದ್ದಲ್ಲಿ ಮಾತ್ರ ಹೊಸ ಕಟ್ಟಡ ಕಾಮಗಾರಿ ಕೈಗೊಳ್ಳಿ; ರಿತೇಶ್ ಕುಮಾರ ಸಿಂಗ್

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina Bhavishya
ಪ್ರಮುಖ ಸುದ್ದಿ16 hours ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ1 day ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ1 day ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ1 day ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ1 day ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ2 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

ಟ್ರೆಂಡಿಂಗ್‌