Site icon Vistara News

ತಾಯಿ ಮೃತಪಟ್ಟು 1 ವರ್ಷವಾಗುವ 1 ದಿನ ಮೊದಲು ಆತ್ಮಹತ್ಯೆ ಮಾಡಿಕೊಂಡ ಯುವಕ

Suicide sagara

ಸಾಗರ: ತಾಯಿ ಮೃತಪಟ್ಟು ಒಂದು ದಿನ ಮೊದಲು ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಎಸ್.ಎನ್. ನಗರ ಹೊಸಬಡಾವಣೆಯಲ್ಲಿ ಭಾನುವಾರ ನಡೆದಿದೆ.
ನಾಗರಾಜ್(23) ಆತ್ಮಹತ್ಯೆ ಮಾಡಿಕೊಂಡ ಯುವಕ.

ಗ್ಯಾಸ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ್ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಸ್ನೇಹಿತರೊಂದಿಗೆ ನಾಗರಾಜ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಮೃತ ನಾಗರಾಜನ ತಾಯಿ ತೀರಿಕೊಂಡು ಸೋಮವಾರಕ್ಕೆ ಒಂದು ವರ್ಷ ಆಗಲಿದೆ.

ಮನೆಯಲ್ಲಿ ಒಬ್ಬಂಟಿ ಆಗಿದ್ದ ನಾಗರಾಜ್ ತಾಯಿಯ ಅಗಲಿಕೆಯಿಂದ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ.
ಸಾಗರ ಪೇಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪ್ರೊಬೆಷನರಿ ಡಿವೈಎಸ್ಪಿ ಅಶ್ವಿನಿ, ಎಎಸ್ಐ ಹಾಲಪ್ಪ ಭೇಟಿ ನೀಡಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ | Suicide case | ಕರುನಾಡಲ್ಲಿ ಹೆಚ್ಚುತ್ತಿವೆ ಹದಿಹರೆಯದವರ ಆತ್ಮಹತ್ಯೆ; ಕಾರಣವೇನು? ಪರಿಹಾರವೇನು?

Exit mobile version