Site icon Vistara News

Shivotsava 2023: ಚಿಕ್ಕಬಳ್ಳಾಪುರದ ನಂದಿಯಲ್ಲಿ ವಿಜೃಂಭಣೆಯ ಶಿವೋತ್ಸವ; ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಭಾಗಿ

Shivotsava 2023

#image_title

ಚಿಕ್ಕಬಳ್ಳಾಪುರ: ಮಹಾ ಶಿವರಾತ್ರಿ ಹಿನ್ನೆಲೆಯಲ್ಲಿ ತಾಲೂಕಿನ ನಂದಿ ಗ್ರಾಮದ ಶ್ರೀ ಭೋಗನಂದೀಶ್ವರ ಆಲಯದ ಆವರಣದಲ್ಲಿ ಶಿವೋತ್ಸವ-2023 (Shivotsava 2023) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಮತ್ತಿತರರು ಭಾಗವಹಿಸಿದ್ದರು.

ಕಾರ್ಯಕ್ರಮಕ್ಕೂ ಮುನ್ನಾ ನಂದಿ ಗಿರಿಧಾಮದಲ್ಲಿ ರಾಜ್ಯಪಾಲರು ಸೂರ್ಯಾಸ್ತ ವೀಕ್ಷಣೆ ಮಾಡಿದ ಬಳಿಕ ಕುಟುಂಬ ಸಮೇತರಾಗಿ ಭೋಗನಂದೀಶ್ವರ ದೇಗುಲಕ್ಕೆ ಶನಿವಾರ ಸಂಜೆ ತೆರಳಿ ದರ್ಶನ ಪಡೆದರು. ಬಳಿಕ ಶಿವೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇದನ್ನೂ ಓದಿ | Maha Shivaratri 2023: ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವಜಾತ್ರೆ ಸಂಭ್ರಮ; ಮಾದಪ್ಪನಿಗೆ ನಮಿಸಿದ ಸಚಿವ ಸೋಮಣ್ಣ

ಶಿವೋತ್ಸವ ಜಾಗರಣೆ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿವಿಧೆಡೆಯಿಂದ ಸಾವಿರಾರು ಜನರು ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಸೇರಿ ಗಣ್ಯರನ್ನು ವೇದಿಕೆ ಮೇಲೆ ಸನ್ಮಾನಿಸಲಾಯಿತು.

Exit mobile version