ಕನ್ನಡಿಗ ಹುತಾತ್ಮ ಯೋಧನ ಶೌರ್ಯ ಪ್ರಶಸ್ತಿ ನೀಡಲು ಸ್ವತಃ ರಾಷ್ಟ್ರಪತಿ ವೇದಿಕೆ ಇಳಿದು ಬಂದರು - Vistara News

ಕರ್ನಾಟಕ

ಕನ್ನಡಿಗ ಹುತಾತ್ಮ ಯೋಧನ ಶೌರ್ಯ ಪ್ರಶಸ್ತಿ ನೀಡಲು ಸ್ವತಃ ರಾಷ್ಟ್ರಪತಿ ವೇದಿಕೆ ಇಳಿದು ಬಂದರು

ಇದು ಯಾವ ಸಿನಿಮಾ ಕಥೆಯಲ್ಲ.. ಉಗ್ರರ ವಿರುದ್ಧ ಹೋರಾಡಿ ಪ್ರಾಣ ತ್ಯಾಗ ಮಾಡಿದ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಹವಾಲ್ದಾರ ಕಾಶೀರಾಯ್ ಬೊಮ್ಮನಹಳ್ಳಿ ಅವರ ವೀರಗಾಥೆ

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯಪುರ : ಅಂದು 2021ರ ಜುಲೈ 1ರಂದು ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಸೇನೆಗೆ ಲಭ್ಯವಾಗಿತ್ತು. ಉಗ್ರರು ತಪ್ಪಿಸಿಕೊಂಡು ಹೋಗಬಾರದೆಂದು ಭಾರತೀಯ ಯೋಧರು ಉಗ್ರರು ಅಡಗಿದ್ದ ಸ್ಥಳವನ್ನು ಸುತ್ತುವರಿದು ನಿಂತಿದ್ದರು. ಇದು ಯಾವ ಸಿನಿಮಾ ಕಥೆಯಲ್ಲ. ಉಗ್ರರ ವಿರುದ್ಧ ಹೋರಾಡಿ ಪ್ರಾಣ ತ್ಯಾಗ ಮಾಡಿದ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಹವಾಲ್ದಾರ ಕಾಶೀರಾಯ್ ಬೊಮ್ಮನಹಳ್ಳಿ ಅವರ ವೀರಗಾಥೆ. ಇದೀಗ ಕೇಂದ್ರ ಸರ್ಕಾರವು, ಕಾಶೀರಾಯ್ ಬಮ್ಮನಹಳ್ಳಿ ಅವರಿಗೆ ಮರಣೋತ್ತರವಾಗಿ ಶೌರ್ಯ ಪ್ರಶಸ್ತಿಯನ್ನು ಮಂಗಳವಾರ ಪ್ರದಾನ ಮಾಡಲಾಯಿತು. ರಾಷ್ಟ್ರಪತಿ ಭವನದಲ್ಲಿ ಯೋಧನ ಪತ್ನಿ ಹಾಗೂ ತಾಯಿಗೆ ಶೌರ್ಯ ಪ್ರಶಸ್ತಿ ಕೊಡುವಾಗ ಪ್ರಧಾನಿ, ರಾಷ್ಟ್ರಪತಿಯಿದ್ದ ಇಡೀ ಸಭಾಂಗಣ ಕೆಲಕಾಲ ಮೌನವಾಯಿತು.

44 ನೇ ಬಟಾಲಿಯನ್‌ನ ರಾಷ್ಟ್ರೀಯ ರೈಫಲ್ಸ್ ನಲ್ಲಿದ್ದ ವಿಜಯಪುರ ಜಿಲ್ಲೆ ಬಸನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಯೋಧ ಕಾಶೀರಾಯ ಬೊಮ್ಮನಹಳ್ಳಿ ಉಗ್ರರನ್ನು ಹಡೆಮುರಿ ಕಟ್ಟಿ ಸೆರೆ ಹಿಡಿಯೋ ಕಾರ್ಯಾಚರಣೆಯಲ್ಲಿ ಮುಂಚೂಣಿಯಲ್ಲಿದ್ದರು. ಯಾವಾಗ ಉಗ್ರರು ತಮ್ಮನ್ನು ಸುತ್ತುವರಿದರೆಂದು ಗೊತ್ತಾಯಿತೋ ಆಗ ಯೋಧರ ಮೇಲೆ ಉಗ್ರರು ಗುಂಡು ಹಾರಿಸಲು ಆರಂಭಿಸಿದರು. ಆಗ ನಡೆದ ಗುಂಡಿನ ಚಕಮಕಿಯಲ್ಲಿ ಯೋಧ ಕಾಶೀರಾಯ ಬೊಮ್ಮನಹಳ್ಳಿ ಮೂವರು ಉಗ್ರನನ್ನು ಹೊಡೆದುರುಳಿಸಿದ್ದರು.  ಈ ವೇಳೆ ಯೋಧ ಕಾಶೀರಾಯ ಬೊಮ್ಮನಳ್ಳಿಗೆ ಉಗ್ರರ ಗುಂಡುಗಳು ತಾಗಿದರೂ ಎದೆಗುಂದೇ ತನ್ನ ಜೊತೆಗದ್ದ ಯೋಧರ ಪ್ರಾಣ ರಕ್ಷಿಸುತ್ತಲೇ ದೇಶಕ್ಕಾಗಿ ಪ್ರಾಣ ನೀಡಿದ್ದರು.  

ನುಡಿನಮನ :

2021 ರ ಜುಲೈ 2 ರಂದು ಯೋಧ ಕಾಶೀರಾಯ ಬೊಮ್ಮನಹಳ್ಳಿ  ಅಂತ್ಯಕ್ರಿಯೆಯನ್ನು ಸ್ವಗ್ರಾಮ ಉಕ್ಕಲಿ ಗ್ರಾಮದ ಬಸ್ ನಿಲ್ದಾಣದ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತ್ತು. ಅಂತ್ಯಕ್ರಿಯೆ ಮಾಡಿದ ಸ್ಥಳದಲ್ಲೇ ಯೋಧ ಕಾಶೀರಾಯನ ಕಂಚಿನ ಪುತ್ಥಳಿಯನ್ನು ನಿರ್ಮಾಣ ಮಾಡಲು ಗ್ರಾಮದ ಜನರು ನಿರ್ಧಾರ ಮಾಡಿದ್ದಾರೆ.

ಹುತಾತ್ಮ ಯೋಧ ಕಾಶೀರಾಯ ಬೊಮ್ಮನಹಳ್ಳಿಗೆ ಶೌರ್ಯ ಪ್ರಶಸ್ತಿ:

ಮೇ 10 ರಂದು ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಕಾಶೀರಾಯ್ ಗೆ ಕೇಂದ್ರ ಸರ್ಕಾರವು ಮರಣೋತ್ತರವಾಗಿ ಶೌರ್ಯ ಪ್ರಶಸ್ತಿ ಪ್ರದಾನ ಮಾಡಿದೆ. ಹೊಸದಿಲ್ಲಿಯಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಂದ  ಕಾಶೀರಾಯ  ಪತ್ನಿ ಸಂಗೀತಾ ಹಾಗೂ ತಾಯಿ ಶಾಂತಾಬಾಯಿ  ಬೊಮ್ಮನಹಳ್ಳಿ ಪ್ರಶಸ್ತಿ ಸ್ವೀಕರಿಸಿದ್ದಾರೆ. ಪ್ರಶಸ್ತಿ ಸ್ವೀಕರಿಸಲು ಕಾಶೀರಾಯ ಅವರ ಹೆಸರನ್ನು ಘೋಷಿಸಲಾಯಿತು. ಈ ಸಂದರ್ಭದಲ್ಲಿ ಕಾಶೀರಾಯ ಅವರ ತಾಯಿ ಹಾಗೂ ಪತ್ನಿ ರಾಷ್ಟ್ರಪತಿಯವರ ಎದುರಿನ ಮಾರ್ಗದಲ್ಲಿ ಬಂದು ನಿಂತರು. ಕಾಶೀರಾಯ ಅವರ ಸಾಧನೆಗಳನ್ನು ವಿವರಿಸಲಾಗುತ್ತಿತ್ತು. ಈ ಸಮಯದಲ್ಲಿ ಪತ್ನಿ ಮೌನಕ್ಕೆ ಜಾರಿದರು. ಯೋಧನ ತಾಯಿಗೆ ದುಃಖವನ್ನು ತಡೆಯಲಾಗಲಿಲ್ಲ. ಕೆಲಹೊತ್ತು ನೋಡಿದ ರಾಷ್ಟ್ರಪತಿ ಭವನದ ಸಿಬ್ಬಂದಿ, ಮಹಿಳಾ ಸಿಬ್ಬಂದಿಯನ್ನು ಕರೆಯಿಸಿ ಸಂತೈಸಿದರು. ಇಷ್ಟೆಲ್ಲವನ್ನೂ ವೇದಿಕೆಯಿಂದ ನೋಡುತ್ತಿದ್ದ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು, ಯೋಧನ ಪತ್ನಿ ಹಾಗೂ ತಾಯಿ ಇದ್ದಲ್ಲಿಗೇ ವೇದಿಕೆಯಿಂದ ಇಳಿದು ಬಂದರು. ಅಲ್ಲಿಯೇ ಪ್ರಶಸ್ತಿ ಪ್ರದಾನ ಮಾಡಿ ನಮಿಸಿದರು. ಸಭಾಂಗಣದಲ್ಲಿದ್ದ ಪ್ರಧಾನಿ ಮೋದಿ ಸೇರಿ ಎಲ್ಲರೂ ಈ ಹೊತ್ತು ಮೌನಕ್ಕೆ ಜಾರಿದರು. ಭಯೋತ್ಪಾದಕರ ವಿರುದ್ಧ ಹೋರಾಡಿ ಮಣ್ಣಲ್ಲಿ ರಕ್ತ ಹರಿಸಿದ ಭಾರತಾಂಬೆಯ ಮಡಿಲ ಪುತ್ರ ಕಾಶೀರಾಯ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿ ನೀಡಿರುವ ಕೇಂದ್ರ ಸರ್ಕಾರಕ್ಕೆ ಜನತೆ ಅಭಿನಂದನೆ ಸಲ್ಲಿಸಿದ್ದಾರೆ.

ಯೋಧ ಕಾಶೀರಾಯ ಕುಟುಂಬ ಮಾಹಿತಿ :

ಹುತಾತ್ಮ ಯೋಧ ಕಾಶೀರಾಯ ಬೊಮ್ಮಹಳ್ಳಿ ಮೂಲತಃ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದವರಾಗಿದ್ದು, ಯೋಧನಿಗೆ ಪತ್ನಿ ಸಂಗೀತಾ, ಓರ್ವ ಪುತ್ರಿ ಹಾಗೂ ಓರ್ವ ಪುತ್ರನಿದ್ಧಾನೆ. 2013 ರಲ್ಲಿ ಕಾಶೀರಾಯನ ಮದುವೆಯಾಗಿತ್ತು. ತಂದೆ ತಾಯಿ ಇಬ್ಬರು ಸಹೋದರರು ಇದ್ದಾರೆ.  ಇರಲು ಒಂದು ಸ್ವಂತ ಮನೆ ಬಿಟ್ಟರೆ ಇವರಿಗೆ ಯಾವುದೇ ಆಸ್ತಿಗಳಿಲ್ಲ. ತಂದೆ ತಾಯಿ ಈಗಲೂ ಜಮೀನಿನಲ್ಲಿ ಕೆಲಸ ಮಾಡುತ್ತಾರೆ. ಇಬ್ಬರು ಸಹೋದರರ ಪೈಕಿ ಓರ್ವ ಸಹೋದರ ಕಿರಾಣಿ ಶಾಪ್ ನಲ್ಲಿ ಕೆಲಸಕ್ಕೆ ಹೋಗುತ್ತಾರೆ. ಮತ್ತೋರ್ವ ಸಹೋದರ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಾರೆ. ಇಡೀ ಕುಟುಂಬಕ್ಕೆ ಆಸರೆಯಾಗಿದ್ದ ಕಾಶೀರಾಯ ಅಗಲಿಕೆ ಇಡೀ ಕುಟುಂಬಕ್ಕೆ ಮರೆಯಲಾರದ ನೋವು ನೀಡಿದೆ.

ಮರಣೋತ್ತರವಾಗಿ ಶೌರ್ಯ ಪ್ರಶಸ್ತಿಯನ್ನು ಪ್ರಕಟಿಸಿರುವುದು ವಿಜಯಪುರ ಜಿಲ್ಲಾಡಳಿತ ಮತ್ತು ಜಿಲ್ಲೆಯ ಜನತೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ಬಿ ದಾನಮ್ಮನವರ  ಅಭಿಮಾನ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಯೋಧ ದೇಶ ರಕ್ಷಣೆಯಲ್ಲಿ ಹುತಾತ್ಮನಾಗಿದ್ದ. ಕೇಂದ್ರ ಸರ್ಕಾರ ಹುತಾತ್ಮ ಯೋಧನಿಗೆ ಶೌರ್ಯ ಪ್ರಶಸ್ತಿ ನೀಡೋ ಮೂಲಕ ಗೌರವಿಸಿದೆ ಎಂದು ಡಿಸಿ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kannada New Movie: ಸೆನ್ಸಾರ್ ಅಂಗಳದಲ್ಲಿ ‘ಬ್ಯಾಕ್ ಬೆಂಚರ್ಸ್’ ಸಿನಿಮಾ!

Kannada New Movie: ಕಾಲೇಜು ಕೇಂದ್ರಿತ ಕಥೆ ಮತ್ತು ಬೇರೆ ಹೊಸತನದ ನಿರೂಪಣೆಯ ಸುಳಿವಿನೊಂದಿಗೆ ಎಲ್ಲಾ ವರ್ಗದ ಪ್ರೇಕ್ಷಕರನ್ನೂ “ಬ್ಯಾಕ್ ಬೆಂಚರ್ಸ್” ಆಕರ್ಷಿಸಿದ್ದಾರೆ. ಹೀಗೆ ತಾನೇತಾನಾಗಿ ಎಲ್ಲರನ್ನು ಆವರಿಸಿಕೊಂಡಿರುವ ಈ ಚಿತ್ರ ಇದೇ ಜುಲೈ 19ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ಆರಂಭಿಕ ಹೆಜ್ಜೆಯಲ್ಲಿಯೇ ಸಕಾರಾತ್ಮಕ ವಾತಾವರಣ ಸೃಷ್ಟಿಸಿಕೊಂಡಿರುವ ಈ ಸಿನಿಮಾ ಈಗ ಸೆನ್ಸಾರ್ ಅಂಗಳ ತಲುಪಿಕೊಂಡಿದೆ.

VISTARANEWS.COM


on

Back Benchers film in the Censor
Koo

ಬೆಂಗಳೂರು: ಭಿನ್ನ ಕಂಟೆಂಟಿನ ಮುನ್ಸೂಚನೆಯೊಂದಿಗೆ ಕ್ರೇಜ್ ಹುಟ್ಟುಹಾಕಿರುವ ಚಿತ್ರ `ಬ್ಯಾಕ್ ಬೆಂಚರ್ಸ್’ ಈಗಾಗಲೇ ಟೀಸರ್ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿದೆ. ಕಾಲೇಜು ಕೇಂದ್ರಿತ ಕಥೆ ಮತ್ತು ಬೇರೆ ಹೊಸತನದ ನಿರೂಪಣೆಯ ಸುಳಿವಿನೊಂದಿಗೆ ಎಲ್ಲಾ ವರ್ಗದ ಪ್ರೇಕ್ಷಕರನ್ನೂ “ಬ್ಯಾಕ್ ಬೆಂಚರ್ಸ್” ಆಕರ್ಷಿಸಿದ್ದಾರೆ. ಹೀಗೆ ತಾನೇತಾನಾಗಿ ಎಲ್ಲರನ್ನು ಆವರಿಸಿಕೊಂಡಿರುವ ಈ ಚಿತ್ರ ಇದೇ ಜುಲೈ 19ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ಆರಂಭಿಕ ಹೆಜ್ಜೆಯಲ್ಲಿಯೇ ಸಕಾರಾತ್ಮಕ ವಾತಾವರಣ ಸೃಷ್ಟಿಸಿಕೊಂಡಿರುವ ಈ ಸಿನಿಮಾ (Kannada New Movie) ಈಗ ಸೆನ್ಸಾರ್ ಅಂಗಳ ತಲುಪಿಕೊಂಡಿದೆ.

ಇದು ರಾಜಶೇಖರ್ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ. ನಿರ್ಮಾಪಕರಾಗಿ, ನಿರ್ದೇಶಕರಾಗಿ ಪ್ರೇಕ್ಷಕರ ನಾಡಿಮಿಡಿತವನ್ನು ಅರಿತಿರುವವರು ರಾಜಶೇಖರ್. ಅನುಭವವನ್ನೆಲ್ಲ ಒಟ್ಟುಗೂಡಿಸಿಕೊಂಡು, ಹೊಸಬರ ತಂಡವನ್ನಿಟ್ಟುಕೊಂಡು ರಾಜಶೇಖರ್ ಈ ಚಿತ್ರವನ್ನು ರೂಪಿಸಿದ್ದಾರೆ.

ಸಾಮಾನ್ಯವಾಗಿ ಹೊಸಬರನ್ನು ಹಾಕಿಕೊಂಡು ಸಿನಿಮಾ ಮಾಡಲು ಬಹುತೇಕರು ಹಿಂದೇಟು ಹಾಕುತ್ತಾರೆ. ರಾಜಶೇಖರ್ ಅವರು ಸಂಪೂರ್ಣವಾಗಿ ಹೊಸಬರ ತಂಡದೊಂದಿಗೆ ಈ ಚಿತ್ರವನ್ನು ತಯಾರಿಸಿದ್ದಾರೆಂದರೆ ಅಚ್ಚರಿ ಮೂಡದಿರುವುದಿಲ್ಲ. ಹೊಸಬರೇ ಸೇರಿರುವುದರಿಂದ ಇಲ್ಲಿ ಹೊಸತನದ ಛಾಯೆಯಿದೆ. ಅದರ ಘಮವೀಗ ಟೀಸರ್ ಮೂಲಕ ಪ್ರೇಕ್ಷಕರನ್ನು ತಲುಪಿಕೊಂಡಿದೆ.

ಇದನ್ನೂ ಓದಿ: VSK Media Awards 2024: ಬೆಂಗಳೂರಿನಲ್ಲಿ ಜೂ.30 ರಂದು “ವಿಎಸ್‌ಕೆ ಮಾಧ್ಯಮ ಪ್ರಶಸ್ತಿ” ಪ್ರದಾನ

ಇದರ ಭಾಗವಾಗಿರುವ ಯುವ ಪಡೆ ಭಿನ್ನ ಶೈಲಿಯಲ್ಲಿಯೇ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಸೋಶಿಯಲ್ ಮೀಡಿಯಾದಲ್ಲಂತೂ ಈಗ “ಬ್ಯಾಕ್ ಬೆಂಚರ್ಸ್” ಹವಾ ವ್ಯಾಪಿಸಿಕೊಂಡಿದೆ. ಇದು ನಾಯಕ ನಾಯಕಿಯರಾಗಿರುವವರು, ಇತರೇ ಪಾತ್ರಗಳನ್ನು ನಿರ್ವಹಿಸಿದವರು ಸೇರಿದಂತೆ ಒಂದಿಡೀ ತಂಡ ಹೊಸ ಶೈಲಿಯಲ್ಲಿ ಪ್ರೇಕ್ಷಕರನ್ನು ತಲುಪಿಕೊಳ್ಳುತ್ತಿದೆ.

ನಿರ್ದೇಶಕ ರಾಜಶೇಖರ್ ಸ್ಕ್ರಿಫ್ಟ್ ವರ್ಕ್ ಸೇರಿದಂತೆ ಎಲ್ಲದರಲ್ಲಿಯೂ ಈ ಹುಡುಗ-ಹುಡುಗಿಯರನ್ನು ಸೇರಿಸಿಕೊಂಡಿದ್ದಾರೆ. ಅದರ ಫಲವಾಗಿಯೇ ಈ ಕಾಲೇಜು ಸ್ಟೋರಿ ತಾಜಾ ಅನುಭೂತಿಯೊಂದಿಗೆ ಸೆಳೆದುಕೊಂಡಿದೆ.

ಪಿಪಿ ಪ್ರೊಡಕ್ಷನ್ಸ್ ಅಡಿಯಲ್ಲಿ ಖುದ್ದು ರಾಜಶೇಖರ್ ಅವರೇ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಂಜನ್, ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಳೀಕರ್, ಮಾನ್ಯ ಗೌಡ, ಕುಂಕುಮ್ ಎಚ್, ಅನುಷಾ ಸುರೇಶ್, ವಿಯೋಮಿ ವನಿತಾ, ಮನೋಜ್ ಶೆಟ್ಟಿ, ನಮಿತಾ ಗೌಡ, ವಿಕಾಸ್, ರನ್ನ, ವಿಜಯ್ ಪ್ರಸಾದ್, ಚತುರ್ಥಿ ರಾಜ್, ಗೌರವ್ ಮುಂತಾದವರ ತಾರಾಗಣವಿದೆ.

ಇದನ್ನೂ ಓದಿ: Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

ನಕುಲ್ ಅಭಯಂಕರ್ ಸಂಗೀತ ನಿರ್ದೇಶನ, ಮನೋಹರ್ ಜೋಶಿ ಛಾಯಾಗ್ರಹಣ, ರಂಜನ್ ಮತ್ತು ಅಮರ್ ಗೌಡ ಸಂಕಲನ ಈ ಚಿತ್ರಕ್ಕಿದೆ. ಇದೀಗ ಸೆನ್ಸಾರ್ ಅಂಗಳ ತಲುಪಿರುವ “ಬ್ಯಾಕ್ ಬೆಂಚರ್ಸ್” ಮತ್ತಷ್ಟು ವೇಗದಿಂದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

Continue Reading

ಕರ್ನಾಟಕ

Kannada New Movie: ರಾಧಿಕಾ ಕುಮಾರಸ್ವಾಮಿ ಅಭಿನಯದ ‘ಅಜಾಗ್ರತ’ ಸಿನಿಮಾ ಡೈರೆಕ್ಟರ್‌ಗೆ ನಿರ್ಮಾಪಕರಿಂದ ದುಬಾರಿ ಕಾರ್‌ ಗಿಫ್ಟ್‌!

Kannada New Movie: ಯಾವುದೇ ಚಿತ್ರವಾದರೂ ಸರಿ. ಮೊದಲು ಬಂಡವಾಳ ಹಾಕಿದ ನಿರ್ಮಾಪಕರಿಗೆ ಆ ಸಿನಿಮಾ ಮೆಚ್ಚುಗೆಯಾಗಬೇಕು. ನಿರ್ಮಾಪಕರಿಗೆ ಸಿನಿಮಾ ಇಷ್ಟವಾದಾರೆ ನಿರ್ದೇಶಕ ಅರ್ಧ ಗೆದ್ದ ಹಾಗೆ. ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸಿರುವ, ರವಿರಾಜ್ ನಿರ್ಮಾಣದ ಹಾಗೂ ಎಂ.ಶಶಿಧರ್ ನಿರ್ದೇಶನದ “ಅಜಾಗ್ರತ” ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಗಿದು ಚಿತ್ರದ ರಫ್ ಕಾಪಿ ಬಂದಿದೆ. ‘ಅಜಾಗ್ರತ” ಚಿತ್ರದ ರಫ್ ಕಾಪಿ ನೋಡಿದ ನಿರ್ಮಾಪಕರಿಗೆ ಚಿತ್ರ ತುಂಬಾ ಇಷ್ಟವಾಗಿದೆಯಂತೆ. ಈ ಸಂದರ್ಭದಲ್ಲಿ ನಿರ್ಮಾಪಕ ರವಿರಾಜ್, ನಿರ್ದೇಶಕ ಶಶಿಧರ್ ಅವರಿಗೆ ದುಬಾರಿ ಕಾರ್‌ ಉಡುಗೊರೆಯಾಗಿ ನೀಡುವ ಮೂಲಕ ಚಿತ್ರ ಉತ್ತಮವಾಗಿ ಮೂಡಿಬಂದಿರುವ ಖುಷಿಯನ್ನು ವ್ಯಕ್ತಪಡಿಸಿದ್ದಾರೆ‌.

VISTARANEWS.COM


on

Producer who gifted an expensive car to the director of Radhika Kumaraswamy starrer Ajagrata
Koo

ಬೆಂಗಳೂರು: ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸಿರುವ, ರವಿರಾಜ್ ನಿರ್ಮಾಣದ ಹಾಗೂ ಎಂ. ಶಶಿಧರ್ ನಿರ್ದೇಶನದ “ಅಜಾಗ್ರತ” ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಗಿದು ಚಿತ್ರದ ರಫ್ ಕಾಪಿ ಬಂದಿದೆ. ‘ಅಜಾಗ್ರತ” ಚಿತ್ರದ ರಫ್ ಕಾಪಿ ನೋಡಿದ ನಿರ್ಮಾಪಕರಿಗೆ ಚಿತ್ರ ತುಂಬಾ ಇಷ್ಟವಾಗಿದೆಯಂತೆ. ಈ ಸಂದರ್ಭದಲ್ಲಿ ನಿರ್ಮಾಪಕ ರವಿರಾಜ್, ನಿರ್ದೇಶಕ ಶಶಿಧರ್ ಅವರಿಗೆ ದುಬಾರಿ ಕಾರು ನೀಡುವ ಮೂಲಕ ಚಿತ್ರ (Kannada New Movie) ಉತ್ತಮವಾಗಿ ಮೂಡಿಬಂದಿರುವ ಖುಷಿಯನ್ನು ವ್ಯಕ್ತಪಡಿಸಿದ್ದಾರೆ‌.

“ನಿರ್ದೇಶಕರು ಕಥೆ ಹೇಳಿದ ರೀತಿಯಲ್ಲೇ, ಅದಕ್ಕೂ ಹೆಚ್ಚಾಗಿಯೇ ಚಿತ್ರವನ್ನು ಬಹಳ ಚೆನ್ನಾಗಿ ಮಾಡಿ ಮುಗಿಸಿದ್ದಾರೆ. ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಚಿತ್ರ ನೋಡಿ ನನಗೆ ತುಂಬಾ ಖುಷಿಯಾಗಿದೆ. ಚಿತ್ರವನ್ನು ಉತ್ತಮವಾಗಿ ನಿರ್ದೇಶಿಸಿರುವ ನಿರ್ದೇಶಕರಿಗೆ ಉಡುಗೊರೆ ನೀಡುವ ಮನಸ್ಸಾಯಿತು. ಹಾಗಾಗಿ ಫಾರ್ಚ್ಯೂನರ್ ಕಾರನ್ನು ಉಡುಗೊರೆಯಾಗಿ ನೀಡುತ್ತಿದ್ದೇನೆ” ಎಂದು ನಿರ್ಮಾಪಕ ರವಿರಾಜ್ ತಿಳಿಸಿದ್ದಾರೆ.

ಇದನ್ನೂ ಓದಿ: VSK Media Awards 2024: ಬೆಂಗಳೂರಿನಲ್ಲಿ ಜೂ.30 ರಂದು “ವಿಎಸ್‌ಕೆ ಮಾಧ್ಯಮ ಪ್ರಶಸ್ತಿ” ಪ್ರದಾನ

ಚಿತ್ರ ಬಿಡುಗಡೆಯಾಗಿ ಯಶಸ್ವಿಯಾದ ನಂತರ ನಿರ್ದೇಶಕರಿಗೆ ಉಡುಗೊರೆ ನೀಡುವ ನಿರ್ಮಾಪಕರಿದ್ದಾರೆ. ಆದರೆ ಚಿತ್ರ ಬಿಡುಗಡೆಗೂ ಮುನ್ನ ನಿರ್ದೇಶಕರ ಕಾರ್ಯವನ್ನು ಮೆಚ್ಚಿ, ಕಾರನ್ನು ಉಡುಗೊರೆ ನೀಡಿರುವ ನಿರ್ಮಾಪಕ ರವಿರಾಜ್ ಅವರ ಗುಣ ನಿಜಕ್ಕೂ ಶ್ಲಾಘನೀಯ.

ಬಾಲಿವುಡ್‌ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ಈ ಚಿತ್ರದ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿಯಾಗಿ ರಾಧಿಕಾ ಕುಮಾರಸ್ವಾಮಿ ಅಭಿನಯಿಸಿದ್ದಾರೆ. ಹೆಸರಾಂತ ನಟ ಬಾಬಿ ಸಿಂಹ ಸಹ ಈಗ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾ ಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: International Mud Day: ಆರೋಗ್ಯ, ಸೌಂದರ್ಯದ ಪಾಲಿಗೆ ಹೊನ್ನು ಈ ಮಣ್ಣು!

ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Continue Reading

ಬೆಂಗಳೂರು

Actor Darshan: ಜೈಲಲ್ಲಿ ದರ್ಶನ್‌ ಭೇಟಿಯಾದ ನಟಿ ರಕ್ಷಿತಾ, ಪ್ರೇಮ್ ದಂಪತಿ

Actor Darshan: ನಟ ದರ್ಶನ್‌ ಭೇಟಿ ಬಳಿಕ ಪ್ರಕರಣದ ಬಗ್ಗೆ ರಕ್ಷಿತಾ, ಪ್ರೇಮ್ ದಂಪತಿ ಬೇಸರ ಹೊರಹಾಕಿದ್ದು, ಇಂತಹ ಪ್ರಕರಣ ನಡೆಯಬಾರದಿತ್ತು ಎಂದು ಹೇಳಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ರನ್ನು (Actor Darshan) ಕೆಲ ಆಪ್ತರು ಭೇಟಿ ಮಾಡುತ್ತಿದ್ದಾರೆ. ಈ ನಡುವೆ ನಟಿ ರಕ್ಷಿತಾ, ಪ್ರೇಮ್ ದಂಪತಿ ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಭೇಟಿ ಬಳಿಕ ಪ್ರಕರಣದ ಬಗ್ಗೆ ರಕ್ಷಿತಾ, ಪ್ರೇಮ್ ದಂಪತಿ ಬೇಸರ ಹೊರಹಾಕಿದ್ದು, ಇಂತಹ ಪ್ರಕರಣ ನಡೆಯಬಾರದಿತ್ತು ಎಂದು ಹೇಳಿದ್ದಾರೆ.

ನಟ ದರ್ಶನ್ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ನಟಿ ರಕ್ಷಿತಾ, ಈ ಘಟನೆ ನಡೆದಿರುವುದು ದುರಾದೃಷ್ಟಕರ. ನಮಗೆ ಈ ಪ್ರಕರಣದ ಬಗ್ಗೆ ಬೇಜಾರು ಇದೆ ಎಂದು ಹೇಳಿದರು.

ನಿರ್ದೇಶಕ ಜೋಗಿ ಪ್ರೇಮ್ ಪ್ರತಿಕ್ರಿಯಿಸಿ, ಪ್ರಕರಣ ನ್ಯಾಯಾಲಯದಲ್ಲಿದೆ. ನಾವು ಈ ಸಂದರ್ಭದಲ್ಲಿ ಪ್ರಕರಣದ ಈ ಬಗ್ಗೆ ಮಾತನಾಡುವುದು ಸರಿಯಲ್ಲ. ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ಹೇಳಿ, ಜೈಲಿನಲ್ಲಿ ದರ್ಶನ್ ಜತೆ ನಡೆದ ಮಾತುಕತೆ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದರು.

ಪ್ರಕರಣದ ಬಗ್ಗೆ ಪವಿತ್ರಾ ಗೌಡಗೆ ಏನೂ ಗೊತ್ತಿಲ್ಲ: ವಕೀಲ

ಪವಿತ್ರಾ ಗೌಡ ಪರ ವಕೀಲ ನಾರಾಯಣಸ್ವಾಮಿ ಪ್ರತಿಕ್ರಿಯಿಸಿ, ನ್ಯಾಯಾಂಗ ಬಂಧನದಲ್ಲಿದ್ದಾಗ ಎಲ್ಲರೂ ಚೆನ್ನಾಗಿಯೇ ಇರುತ್ತಾರೆ. ಯಾರಿಗೂ ಹಿಂಸೆ ಕೋಡಲು ಇಲ್ಲಿಗೆ ಕರೆದುಕೊಂಡು ಬರೋದಿಲ್ಲ. ಅವರ ಮನಪರಿವರ್ತನೆಯಾಗಲಿ ಎಂದು ಜೈಲಿಗೆ ಕರೆದುಕೊಂಡು ಬರಲಾಗುತ್ತದೆ. ಎಲ್ಲರೂ ಹೇಗೆ ಇರುತ್ತಾರೋ ಹಾಗೆ ಪವಿತ್ರಾ ಕೂಡ ಇರುತ್ತಾರೆ. ಅವರಿಗೆ ಸ್ಪೇಷಲ್ ಏನು ಇಲ್ಲ ಎಂದು ತಿಳಿಸಿದ್ದಾರೆ.

ಜಾಮೀನು ಅರ್ಜಿ ಯಾವಾಗ ಹಾಕಿಕೊಳ್ಳಬೇಕು ಎನ್ನುವುದಕ್ಕೆ ಕಾಯುತ್ತಿದ್ದೇವೆ. ಅದರ ಬಗ್ಗೆಯೇ ಚರ್ಚೆ ನಡೆಸಲು ಭೇಟಿ ಮಾಡಿದ್ದೆ. ಅವರಿಗೆ ಪ್ರಕರಣದ ಬಗ್ಗೆಯೇ ಏನೂ ತಿಳಿದಿಲ್ಲ. ಅವರಿಗೆ ಶಾಕ್ ಆಗಿದೆ. ಯಾವಾಗಲೂ ತಪ್ಪು ಮಾಡಿರಲಿಲ್ಲ, ಈ ರೀತಿಯಾದಾಗ ನೋವಾಗುತ್ತೆ. ತಪ್ಪು ಮಾಡಿರುವವರಿಗಾದರೆ ಅದರ ಅರಿವಿರುತ್ತದೆ. ನಾನು ಏನೂ ಮಾಡಿಲ್ಲ, ನನಗೆ ಯಾಕೆ ಇಂತ ಪರಿಸ್ಥಿತಿ ಎಂದು ಶಾಕ್‌ನಲ್ಲಿದ್ದಾರೆ. ಜುಲೈ 4ರ ಬಳಿಕ ಜಾಮೀನು ಅರ್ಜಿ ಬಗ್ಗೆ ಚಿಂತಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ | Assault Case: ಸಾಲ ವಾಪಸ್‌ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿದ ಬಿಜೆಪಿ ಕಾರ್ಯಕರ್ತ

ದರ್ಶನ್ ಭೇಟಿಯಾಗಲು ಅಭಿಮಾನಿಯ ರಂಪಾಟ

ದರ್ಶನ್ ಭೇಟಿ ಮಾಡಬೇಕೆಂದು ಅಭಿಮಾನಿಯೊಬ್ಬ ರಂಪಾಟವಾಡಿರುವುದು ಕಂಡುಬಂದಿದೆ. ಜೈಲ್ ಚೆಕ್ ಪೋಸ್ಟ್ ಬಳಿ ರಸ್ತೆಯಲ್ಲಿ ಕುಳಿತ ಅಭಿಮಾನಿ, ದರ್ಶನ್ ನೋಡಬೇಕೆಂದು ಕಣ್ಣೀರು ಹಾಕಿದ್ದಾನೆ. ಮದ್ಯಪಾನ ಮಾಡಿ ಬಂದಿದ್ದ ವ್ಯಕ್ತಿ, ದರ್ಶನ್ ನೋಡಲೇ ಬೇಕು ಎಂದು ಪಟ್ಟು ಹಿಡಿದಿದ್ದರಿಂದ ಆತನನ್ನು ಮನವೊಲಿಸಲು ಪೊಲೀಸರು ಹೈರಾಣಾದರು.

Continue Reading

ಬೆಂಗಳೂರು

Bengaluru News: ಜೈನ್‌ ಶಾಂತಮಣಿ ಕಲಾ ಕೇಂದ್ರದ ಕಲ್ಲಿನ ಕೆತ್ತನೆ ಮತ್ತು ಚಿತ್ರಕಲಾ ಶಿಬಿರ “ಪಾರ್ಶ್ವ ಪಡಾಪ್” ಗೆ ಸಂಭ್ರಮದ ತೆರೆ

Bengaluru News: ಭಾರತೀಯ ಶಿಲ್ಪಿಗಳು ಮತ್ತು ವರ್ಣಚಿತ್ರಕಾರರ ಒಂದು ವಾರದ ಸಮಾವೇಶ “ಪಾರ್ಶ್ವ ಪಡಾಪ್” ಶನಿವಾರ ಸಂಭ್ರಮದಿಂದ ತೆರೆ ಕಂಡಿತು. ದೇಶದ ನಾನಾ ರಾಜ್ಯಗಳಿಂದ ಆಗಮಿಸಿದ್ದ ಉತ್ಸಾಹಿ ಶಿಲ್ಪಿಗಳು ಮತ್ತು ವರ್ಣಚಿತ್ರಕಾರರ ಅದ್ಭುತ ಶಿಲ್ಪಕಲೆ ಹಾಗೂ ಚಿತ್ರಕಲೆಗಳು ನೋಡುಗರ ಗಮನ ಸೆಳೆದವು.

VISTARANEWS.COM


on

Jain Shantamani Kala Kendra Stone Carving and Painting Camp in Bengaluru
Koo

ಬೆಂಗಳೂರು: ಭಾರತದಾದ್ಯಂತ ಶಿಲ್ಪಿಗಳು ಮತ್ತು ವರ್ಣಚಿತ್ರಕಾರರ ಒಂದು ವಾರದ ಸಮಾವೇಶ “ಪಾರ್ಶ್ವ ಪಡಾಪ್” ಶನಿವಾರ ಸಂಭ್ರಮದಿಂದ ತೆರೆ ಕಂಡಿತು. ದೇಶದ ನಾನಾ ರಾಜ್ಯಗಳಿಂದ ಆಗಮಿಸಿದ್ದ ಉತ್ಸಾಹಿ ಶಿಲ್ಪಿಗಳು ಮತ್ತು ವರ್ಣಚಿತ್ರಕಾರರ ಅದ್ಭುತ ಶಿಲ್ಪಕಲೆ ಹಾಗೂ ಚಿತ್ರಕಲೆಗಳು ನೋಡುಗರ ಗಮನ (Bengaluru News) ಸೆಳೆದವು.

ಜೈನ್ ವಿವಿಯ (ಡೀಮ್ಡ್-ಟು-ಯುನಿವರ್ಸಿಟಿ) ಶಾಂತಮಣಿ ಕಲಾ ಕೇಂದ್ರ ಮತ್ತು ಜೈನ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ (ಜೆಐಆರ್‌ಎಸ್) ಸಹಯೋಗದಲ್ಲಿ ಆಯೋಜಿಸಿದ್ದ ಕಲಾ ಪ್ರತಿಭಾನ್ವೇಷಣೆ ಶಿಬಿರದಲ್ಲಿ ವಿವಿಧ ಕಲಾ ಪ್ರಕಾರಗಳ ಚಟುವಟಿಕೆಗಳು ಆಯೋಜನೆಗೊಂಡಿದ್ದವು. ಇವುಗಳಲ್ಲಿ ಬೆಂಗಳೂರಿನ ಜೈನ್ ಗ್ಲೋಬಲ್ ಕ್ಯಾಂಪಸ್‌ನಲ್ಲಿ ನಡೆದ ಶಿಲ್ಪಕಲಾ ಸ್ಪರ್ಧೆ ಮತ್ತು ರಾಷ್ಟ್ರೀಯ ಚಿತ್ರಕಲಾ ಶಿಬಿರವೂ ಒಳಗೊಂಡಿದ್ದವು.

ಕಲ್ಲಿನ ಕೆತ್ತನೆ, ಶಿಲ್ಪಕಲೆ ಮತ್ತು ಭಾವನಾತ್ಮಕ ಚಿತ್ರಕಲೆಯ ಮೇಲೆ ಕೇಂದ್ರೀಕರಿಸಿದ ಈ ಕಾರ್ಯಕ್ರಮವು ವಿಶಿಷ್ಟ ವೇದಿಕೆಯೊಂದರ ಮೂಲಕ ಭಾರತೀಯ ಕಲಾವಿದರಲ್ಲಿ ಕಲಾತ್ಮಕ ಬುದ್ದಿಮತ್ತೆ ಮತ್ತು ಸೃಜನಶೀಲತೆಯನ್ನು ಬೆಳೆಸುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ: VSK Media Awards 2024: ಬೆಂಗಳೂರಿನಲ್ಲಿ ಜೂ.30 ರಂದು “ವಿಎಸ್‌ಕೆ ಮಾಧ್ಯಮ ಪ್ರಶಸ್ತಿ” ಪ್ರದಾನ

ಈ ಶಿಬಿರವು ದೇಶದ ನಾನಾ ರಾಜ್ಯಗಳಿಂದ ಬಂದ ಉತ್ಸಾಹಿ ಶಿಲ್ಪಿಗಳು, ವರ್ಣಚಿತ್ರಕಾರರ ಸಮಗ್ರ, ಸಾಂಸ್ಕೃತಿಕ ಮತ್ತು ಶ್ರೀಮಂತ ಕಲಾತ್ಮಕತೆಯನ್ನು ಪ್ರದರ್ಶಿಸಲು ಅವಕಾಶ ಕಲ್ಪಿಸಿತು. ಕಲಾವಿದರು, ಕಲಾ ಉತ್ಸಾಹಿಗಳು, ವಿದ್ಯಾರ್ಥಿಗಳು, ಶಿಕ್ಷಣ ತಜ್ಞರು ಮತ್ತು ವಿವಿಧ ವಯೋಮಾನದ ಉತ್ಸಾಹಿಗಳು, ವಿಶೇಷಚೇತನ ಕಲಾವಿದರೊಬ್ಬರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ಶಿಬಿರದಲ್ಲಿ ಕಲಾವಿದರು ಪ್ರಕೃತಿ ಮತ್ತು ಮಾನವೀಯತೆಯ ಅಂಶಗಳನ್ನು ಮುಕ್ತವಾಗಿ ಬೆಸೆದರು. ಇಂದಿನ ಜಗತ್ತಿಗೆ ಅಗತ್ಯವಿರುವ ಸಂದೇಶಗಳನ್ನು ಸಾರಿದರು. ಎಲ್ಲರೂ ಒಟ್ಟಾಗಿ ಭಾಗವಹಿಸಿದ ಈ ಪ್ರದರ್ಶನದಲ್ಲಿ ಕಲಾತ್ಮಕತೆಯ ವೈವಿಧ್ಯತೆ ಮತ್ತು ಆಳವನ್ನು ಅನುಭವಿಸಿದರು.

ಸಮಾವೇಶದಲ್ಲಿ ಪಾಲ್ಗೊಂಡಿದ್ದ ಶಿಲ್ಪಿಗಳು, ವರ್ಣಚಿತ್ರಕಾರರನ್ನು ಗೌರವಿಸಿ, ಪ್ರಮಾಣಪತ್ರಗಳು ಮತ್ತು ಟ್ರೋಫಿಗಳನ್ನು ವಿತರಿಸಲಾಯಿತು ಅಲ್ಲದೇ ಜೈನ್ ಗ್ರೂಪ್ ವತಿಯಿಂದ ನಗದು ಬಹುಮಾನಗಳನ್ನು ಸಹ ವಿತರಣೆ ಮಾಡಲಾಯಿತು.

ಇದನ್ನೂ ಓದಿ: Kannada New Movie: “ಯೂಟ್ಯೂಬ್ ಟ್ರೆಂಡಿಂಗ್” ಪಟ್ಟಿಯ 3ನೇ ಸ್ಥಾನದಲ್ಲಿ “ಕೃಷ್ಣಂ ಪ್ರಣಯ ಸಖಿ” ಚಿತ್ರದ “ಚಿನ್ನಮ್ಮ” ಹಾಡು!

ಲೋಹದ ಲೇಬಲ್‌ಗಳೊಂದಿಗೆ ಕಲಾವಿದರ ಹೆಸರನ್ನು ಹೊಂದಿರುವ ಕಲ್ಲಿನ ಕೆತ್ತನೆಯ ಶಿಲ್ಪಗಳು ನೋಡುಗರನ್ನು ಆಕರ್ಷಿಸಿದವು. ಅದ್ಭುತ ಶಿಲ್ಪಕಲೆ ಹಾಗೂ ಚಿತ್ರಕಲೆಗಳು ವೀಕ್ಷಕರನ್ನು ಗಮನ ಸೆಳೆದವು.

Continue Reading
Advertisement
maya neelakantan
ವಿದೇಶ2 mins ago

Maya Neelakantan: ಅಮೆರಿಕವನ್ನು ಹುಚ್ಚೆಬ್ಬಿಸಿದ 10 ವರ್ಷದ ಭಾರತೀಯ ಗಿಟಾರ್‌ ಬಾಲೆ ಮಾಯಾ ನೀಲಕಂಠನ್‌, ಯಾರೀಕೆ?

Back Benchers film in the Censor
ಕರ್ನಾಟಕ6 mins ago

Kannada New Movie: ಸೆನ್ಸಾರ್ ಅಂಗಳದಲ್ಲಿ ‘ಬ್ಯಾಕ್ ಬೆಂಚರ್ಸ್’ ಸಿನಿಮಾ!

Producer who gifted an expensive car to the director of Radhika Kumaraswamy starrer Ajagrata
ಕರ್ನಾಟಕ8 mins ago

Kannada New Movie: ರಾಧಿಕಾ ಕುಮಾರಸ್ವಾಮಿ ಅಭಿನಯದ ‘ಅಜಾಗ್ರತ’ ಸಿನಿಮಾ ಡೈರೆಕ್ಟರ್‌ಗೆ ನಿರ್ಮಾಪಕರಿಂದ ದುಬಾರಿ ಕಾರ್‌ ಗಿಫ್ಟ್‌!

T20 World Cup final
ಕ್ರಿಕೆಟ್26 mins ago

T20 World Cup Final : ಟಾಸ್​ ಗೆದ್ದವರು ಮ್ಯಾಚ್​ ಗೆಲ್ತಾರೆ; ವಿಶ್ವ ಕಪ್​ ಫೈನಲ್ ಪಂದ್ಯದ ಇತಿಹಾಸ ಹೀಗಿದೆ

Weight Loss Tips
ಆಹಾರ/ಅಡುಗೆ46 mins ago

Weight Loss Tips: ಕಪ್ಪು ಬಣ್ಣದ ಆಹಾರಗಳಿಂದ ತೂಕ ಇಳಿಸಿ!

T20 World Cup 2024
ಪ್ರಮುಖ ಸುದ್ದಿ1 hour ago

T20 World Cup 2024 : ಫೈನಲ್ ಪಂದ್ಯ ಆರಂಭಕ್ಕೆ ಮೊದಲೇ ವಿಜೇತರನ್ನು ಘೋಷಿಸಿದ ಟಾಮ್ ಮೂಡಿ

Actor Darshan
ಬೆಂಗಳೂರು1 hour ago

Actor Darshan: ಜೈಲಲ್ಲಿ ದರ್ಶನ್‌ ಭೇಟಿಯಾದ ನಟಿ ರಕ್ಷಿತಾ, ಪ್ರೇಮ್ ದಂಪತಿ

Special Status
ದೇಶ1 hour ago

Special Status: ಎನ್‌ಡಿಎಗೆ ಮೈತ್ರಿಗೆ ಮೊದಲ ಅಗ್ನಿ ಪರೀಕ್ಷೆ; ವಿಶೇಷ ಸ್ಥಾನಮಾನಕ್ಕೆ ಜೆಡಿಯು ನಿರ್ಣಯ

Jain Shantamani Kala Kendra Stone Carving and Painting Camp in Bengaluru
ಬೆಂಗಳೂರು1 hour ago

Bengaluru News: ಜೈನ್‌ ಶಾಂತಮಣಿ ಕಲಾ ಕೇಂದ್ರದ ಕಲ್ಲಿನ ಕೆತ್ತನೆ ಮತ್ತು ಚಿತ್ರಕಲಾ ಶಿಬಿರ “ಪಾರ್ಶ್ವ ಪಡಾಪ್” ಗೆ ಸಂಭ್ರಮದ ತೆರೆ

Virat Kohli
ಪ್ರಮುಖ ಸುದ್ದಿ2 hours ago

Virat kohli : ವಿರಾಟ್ ಕೊಹ್ಲಿಗೆ ಫಾರ್ಮ್​ಗೆ ಮರಳಲು ಸಲಹೆಗಳನ್ನು ನೀಡಿದ ಮಾಜಿ ನಾಯಕ ಸುನೀಲ್ ಗವಾಸ್ಕರ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ4 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ10 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ1 day ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌