Site icon Vistara News

Shrishailappa Bidarur | ಮಣ್ಣಲ್ಲಿ ಮಣ್ಣಾದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು

Shrishailappa Bidarur

ಗದಗ: ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರ ಅಂತ್ಯಸಂಸ್ಕಾರ ಜಿಲ್ಲೆಯ ಸೂಡಿ ಗ್ರಾಮದ ತೋಟದ ಜಮೀನಿನಲ್ಲಿ ಕುಟುಂಬಸ್ಥರು, ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಶನಿವಾರ ನಡೆಯಿತು. ವೀರಶೈವ ಲಿಂಗಾಯತ ಸಂಪ್ರದಾಯದಂತೆ ವಿವಿಧ ಮಠಾಧೀಶರು, ವೈದಿಕರ ನೇತೃತ್ವದಲ್ಲಿ ಸಮಾಧಿ ಕ್ರಿಯೆ ನೆರವೇರಿಸಲಾಯಿತು.

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ವರ್ತೂರಿನಲ್ಲಿ ಕಾಂಗ್ರೆಸ್ ಟಿಕೆಟ್‌ ಆಕಾಂಕ್ಷಿಗಳ ಸಭೆ ನಡೆಯುತ್ತಿದ್ದಾಗ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರು ಶುಕ್ರವಾರ ಹೃದಯಾಘಾತಕ್ಕೆ ಒಳಗಾಗಿದ್ದರು. ಕುಳಿತಲ್ಲೇ ಕುಸಿದಾಗ ಅನೇಕರು ಆಗಮಿಸಿ ಎಚ್ಚರಿಸಲು ಪ್ರಯತ್ನಿಸಿದ್ದರು. ಪ್ರಯೋಜನವಾಗದ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ್‌ ಆಸ್ಪತ್ರೆಗ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

ಇದನ್ನೂ ಓದಿ | ಶ್ರೀಶೈಲಪ್ಪ ಬಿದರೂರು ನಿಧನ | ನಾಯಕನ ಹಠಾತ್‌ ನಿಧನಕ್ಕೆ ಸಂತಾಪ ಸೂಚಿಸಿದ ಗಣ್ಯರು

Exit mobile version