Siddapura News: ಇಂದು ಪಟ್ಟಣದಲ್ಲೂ ಪುಸ್ತಕದ ಅಂಗಡಿಗಳಿಲ್ಲ; ಸರಕಾರಕ್ಕೆ ಸಾಹಿತ್ಯದ ಬಗ್ಗೆ ಆಸಕ್ತಿ ಇಲ್ಲ: ಸಾಹಿತಿ ನಾಗೇಶ್ ಹೆಗಡೆ - Vistara News

ಉತ್ತರ ಕನ್ನಡ

Siddapura News: ಇಂದು ಪಟ್ಟಣದಲ್ಲೂ ಪುಸ್ತಕದ ಅಂಗಡಿಗಳಿಲ್ಲ; ಸರಕಾರಕ್ಕೆ ಸಾಹಿತ್ಯದ ಬಗ್ಗೆ ಆಸಕ್ತಿ ಇಲ್ಲ: ಸಾಹಿತಿ ನಾಗೇಶ್ ಹೆಗಡೆ

Siddapura News: ಇಂದಿನ ಬದುಕಿಗೆ ಎಂತಹ ಸಾಹಿತ್ಯಗಳು ಬೇಕು ಎನ್ನುವುದನ್ನು ಚರ್ಚಿಸುವ ಅಗತ್ಯ ಇದೆ ಎಂದು ಸಾಹಿತಿ ನಾಗೇಶ್ ಹೆಗಡೆ ಬಕ್ಕೆಮನೆ ಹೇಳಿದರು.

VISTARANEWS.COM


on

Siddapura sahitya sammelana
ಶಂಕರ ಮಠದಲ್ಲಿ ನಡೆದ 6 ನೇ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ ಸಾಹಿತಿ ನಾಗೇಶ್ ಹೆಗಡೆ ಬಕ್ಕೆಮನೆ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಿದ್ದಾಪುರ: ಹೊರಗಿನ ಜ್ಞಾನ ನಮ್ಮಲ್ಲಿ ಪ್ರಜ್ವಲಿಸಬೇಕು. ನಮ್ಮಲ್ಲಿರುವ ಪ್ರತಿಭೆಗಳನ್ನು ಹೊರ ಜಗತ್ತಿಗೆ ತೋರಿಸಬೇಕು. ಇಲ್ಲಿನ ಸುಸ್ಥಿರ ಬದುಕಿನ ಜೀವನವನ್ನು ಪ್ರಪಂಚಕ್ಕೆ ಸಾಹಿತ್ಯದ ಮೂಲಕ ಸಾರುವ ಕೆಲಸ ಆಗಬೇಕು ಎಂದು ಸಾಹಿತಿ ನಾಗೇಶ್ ಹೆಗಡೆ ಬಕ್ಕೆಮನೆ ಹೇಳಿದರು.

ಪಟ್ಟಣದ ಶಂಕರ ಮಠದಲ್ಲಿ ಭಾನುವಾರ (ಜ.೨೯) ನಡೆದ 6ನೇ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿ, ಇಂದಿನ ಬದುಕಿಗೆ ಎಂತಹ ಸಾಹಿತ್ಯಗಳು ಬೇಕು ಎನ್ನುವುದನ್ನು ಚರ್ಚಿಸುವ ಅಗತ್ಯ ಇದೆ. ನಮ್ಮಲ್ಲಿ ನಿಸರ್ಗ ಸಂಪತ್ತು ಮತ್ತು ಅಕ್ಷರ ಸಂಪತ್ತು ಅಗಾಧವಾಗಿದೆ. ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ನಿಸರ್ಗ ಸಂರಕ್ಷಣೆಯ ಹೋರಾಟದವರೆಗೆ ನಮ್ಮವರು ಅನನ್ಯವಾದ ಕೊಡುಗೆ ನೀಡಿದ್ದಾರೆ. ಪ್ರತಿ ಮನೆಯ ಕಪಾಟುಗಳಲ್ಲಿಯೂ ಪುಸ್ತಕಗಳು ಇರಬೇಕು. ಆದರೆ ಇಂದು ಪಟ್ಟಣದಲ್ಲೂ ಪುಸ್ತಕದ ಅಂಗಡಿಗಳೇ ಇಲ್ಲವಾಗಿದೆ. ಸರಕಾರಕ್ಕೆ ಸಾಹಿತ್ಯದ ಬಗ್ಗೆ ಆಸಕ್ತಿ ಇಲ್ಲವಾಗಿದೆ ಎಂದರು.

#image_title

ಇದನ್ನೂ ಓದಿ | RBI Repo Rate : ಆರ್‌ಬಿಐ ರೆಪೊ ದರ 0.25% ಏರಿಕೆ ಸಾಧ್ಯತೆ: ಸಮೀಕ್ಷೆ

ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿ, ʻʻನಮ್ಮ ಭಾಷೆಗೆ ಸಂಸ್ಕಾರ ಕೊಡುವಂತಹ ಸಂಸ್ಕಾರವನ್ನು ಪರಿಚಯಿಸುವಂತಹ ಅಗಾಧವಾದ ಶಕ್ತಿ ಇದೆ. ಹಾಗಾಗಿ ಭಾಷೆಯನ್ನು ನಾವು ರಕ್ಷಿಸಿಕೊಳ್ಳಬೇಕು ಅದು ಇಂದಿನ ದಿನಗಳಲ್ಲಿ ಅತ್ಯಂತ ಅಗತ್ಯವಾಗಿದೆ. ಆದರೆ ಸವಾಲುಗಳು ಕೂಡ ಅಷ್ಟೇ ಇವೆ. ಇಂದಿನ ಆಧುನಿಕ ತಂತ್ರಜ್ಞಾನಗಳಾದ ಮೊಬೈಲ್ ಹಾಗೂ ಇತರೆ ಕಾರಣದಿಂದಾಗಿ ಭಾಷೆಗಳಿಗೆ ಅನೇಕ ಸವಾಲುಗಳು ಹುಟ್ಟಿಕೊಳ್ಳುತ್ತಿವೆ. ಈಗ ಹಿಂದಿನ ಭಾಷೆಗಳನ್ನು ಅಭ್ಯಾಸ ಮಾಡುವಂಥದ್ದು ಒಂದು ಪರಂಪರೆ. ಆದರೆ ಈ ಭಾಷೆ ಮುಂದೇನಾಗಬಹುದು ಎಂಬುದನ್ನು ಯೋಚಿಸುವುದು ಅಗತ್ಯವಾಗಿದೆ. ಮೊಬೈಲ್‌ಗಳಲ್ಲಿ ಇಂದಿನ ಯುವ ಪೀಳಿಗೆಯವರು ಕಳಿಸುತ್ತಿರುವ ಮೆಸೇಜ್‌ಗಳನ್ನು ನೋಡಿದರೆ ಈ ಭಾಷೆ ಏನಾಗುತ್ತಿದೆ ಎಂಬ ಆತಂಕವಾಗುತ್ತದೆ. ಹಾಗಾಗಿ ಈ ಕುರಿತು ಅಧ್ಯಯನ ಮಾಡಬೇಕಾದ ಅವಶ್ಯಕತೆ ಇದೆʼʼ ಎಂದರು.

ಇದನ್ನೂ ಓದಿ | Bharat Jodo Yatra: ಸಹೋದರಿ ಪ್ರಿಯಾಂಕಾ, ಕಾರ್ಯಕರ್ತರ ಜತೆ ರಾಹುಲ್ ಗಾಂಧಿ ಹಿಮ ಎರಚಾಟ! Video Viral

ಕಸಾಪ ತಾಲೂಕು ಅಧ್ಯಕ್ಷ ಗೋಪಾಲ್ ಬಾಶಿ ಪ್ರಾಸ್ತಾವಿಕವಾಗಿ ಮಾತನಾಡಿದರು . ಕಸಾಪ ಜಿಲ್ಲಾ ಅಧ್ಯಕ್ಷ ಬಿಎನ್ ವಾಸರೆ ಆಶಯ ನುಡಿಯಾಡಿದರು. ನಾಗರಾಜ್ ಮಾಳ್ಕೋಡ್ ದ್ವಾರಗಳನ್ನು ಪರಿಚಯಿಸಿದರು. ಸಾಹಿತಿ ತಮ್ಮಣ್ಣ ಬೀಗಾರ ಹೊಸ ಪುಸ್ತಕಗಳ ಬಿಡುಗಡೆ, ಆರ್ ಎಂ ಹೆಗಡೆ ಬಾಳೆಸರ ಮೆರವಣಿಗೆಗೆ ಚಾಲನೆ ನೀಡಿದರು. ಡಾ ಕೆ ಶ್ರೀಧರ್ ವೈದ್ಯ ದ್ವಾರಗಳನ್ನು ಉದ್ಘಾಟಿಸಿದರು. ಸಾಹಿತಿ ಸುಬ್ರಾಯ ಮತ್ತಿಹಳ್ಳಿ ಪುಸ್ತಕ ಮಳಿಗೆಗಳನ್ನು ಉದ್ಘಾಟಿಸಿದರು. ಸುಜಾತಾ ದಂಠಕಲ್ ಸಂದೇಶ ವಾಚಿಸಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚಂದ್ರಕಲಾ ನಾಯ್ಕ, ಪ.ಪಂ ಸ್ಥಾಯಿ ಸಮಿತಿಯ ಅಧ್ಯಕ್ಷ ವಿನಯ ಹೊನ್ನೆಗುಂಡಿ, ಕೆ ಜಿ ನಾಗರಾಜ, ಆರ್ ಆರ್ ನಾಯ್ಕ, ಸಿ ಎಸ್ ಗೌಡರ್, ಸತೀಶ್ ಹೆಗಡೆ, ಶಶಿಭೂಷಣ ಹೆಗಡೆ, ಜಿಲ್ಲಾ ಕಸಾಪದ ಕಾರ್ಯದರ್ಶಿ ಪಿ ಆರ್ ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ, ಇಒ ಪ್ರಶಾಂತ ರಾವ್.
ಕುಮಾರಿ ನಿಶಾ ಮಂಜುನಾಥ್ ನಾಯ್ಕ್ ಯಕ್ಷ ನೃತ್ಯ ಮಾಡಿ ಸಭೆಯನ್ನು ಸ್ವಾಗತಿಸಿದರು.
ಶಿಕ್ಷಕರ ತಂಡದವರು ನಾಡಗೀತೆ ಹಾಡಿದರು. ಪ್ರಶಾಂತಿ ಪ್ರೌಢಶಾಲೆ ವಿದ್ಯಾರ್ಥಿಗಳು ರೈತ ಗೀತೆ ಹಾಡಿದರು.
ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷರಾದ ತಹಶೀಲ್ದಾರ್ ಸಂತೋಷ್ ಭಂಡಾರಿ ಸ್ವಾಗತಿಸಿದರು.
ರತ್ನಾಕರ್ ಜಿ ನಾಯ್ಕ್, ಕುಮಾರಿ ನೇಹಾ, ಕುಮಾರಿ ಸಂಜನಾ ನಿರೂಪಿಸಿದರು. ಪಿ ಬಿ ಹೊಸೂರ್ ವಂದಿಸಿದರು.

ಇದನ್ನೂ ಓದಿ | ಗ್ರಾಮೀಣ ಶಾಸಕಿ ಸಲುವಾಗಿ ರಾಜ್ಯವನ್ನು ಹಾಳು ಮಾಡಿದ್ದು ಡಿ.ಕೆ. ಶಿವಕುಮಾರ್‌ : ಸಿಡಿ ಪ್ರಕರಣ ಸಿಬಿಐಗೆ ನೀಡಲು ರಮೇಶ್‌ ಜಾರಕಿಹೊಳಿ ಆಗ್ರಹ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Modi in Karnataka: ಏಪ್ರಿಲ್‌ 28 – 29ಕ್ಕೆ ಕರ್ನಾಟಕಕ್ಕೆ ಮೋದಿ; 2ನೇ ಹಂತಕ್ಕೆ ಬಿಜೆಪಿ ಪ್ಲ್ಯಾನ್‌ ರೆಡಿ!

Modi in Karnataka: ಏಪ್ರಿಲ್‌ 28ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಂದು ಮೂರು ಕಡೆ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ದಾವಣಗೆರೆ, ಬೆಳಗಾವಿ ಹಾಗೂ ಉತ್ತರಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ. ಈ ಮೂಲಕ ಇವುಗಳೂ ಸೇರಿದಂತೆ ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳ ಮತದಾರರನ್ನೂ ಸೆಳೆಯಲು ಬಿಜೆಪಿ ಪ್ಲ್ಯಾನ್‌ ಮಾಡಿಕೊಂಡಿದೆ.

VISTARANEWS.COM


on

Modi in Karnataka from April 28 and 29 BJP plan for second phase ready
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಈಗಾಗಲೇ ಒಂದು ಸುತ್ತಿನ ಮತ ಬೇಟೆ ಮುಗಿಸಿ ತೆರಳಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಎರಡನೇ ಹಂತದ ಚುನಾವಣೆಗೆ ರಿಎಂಟ್ರಿ ಕೊಡಲಿದ್ದಾರೆ. ಈ ವೇಳೆ ಮೋದಿ (Modi in Karnataka) ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಏಪ್ರಿಲ್‌ 28 ಹಾಗೂ 29ರಂದು ಕರ್ನಾಟಕದಲ್ಲಿ ಜನರನ್ನು ಮೋಡಿ ಮಾಡಲು ಮೋದಿ ಮುಂದಾಗಿದ್ದಾರೆ.

ಏಪ್ರಿಲ್‌ 28ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಂದು ಮೂರು ಕಡೆ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ದಾವಣಗೆರೆ, ಬೆಳಗಾವಿ ಹಾಗೂ ಉತ್ತರಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮತಬೇಟೆ ನಡೆಸಲು ಬಿಜೆಪಿ ಸ್ಥಳ ನಿಗದಿಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಈ ಬೃಹತ್‌ ಸಮಾವೇಶಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಜನರನ್ನು ಸೇರಿಸಲು ಚಿಂತನೆ ನಡೆಸಲಾಗಿದೆ. ಅಲ್ಲದೆ, ಶಿವಮೊಗ್ಗ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳ ಜನರನ್ನು ಸೇರಿಸಲು ಚಿಂತನೆ ನಡೆಸಲಾಗಿದೆ. ಕಾರಣ ಆ ಭಾಗಗಳಲ್ಲೂ ಎರಡನೇ ಹಂತದ ಚುನಾವಣೆ ನಡೆಯುವುದರಿಂದ ಮೋದಿ ಮಾತು ಕೆಲಸ ಮಾಡಲಿದೆ ಎಂಬ ನಿಟ್ಟಿನಲ್ಲಿ ಬಿಜೆಪಿ ಪ್ಲ್ಯಾನ್‌ ಮಾಡಿಕೊಂಡಿದೆ ಎನ್ನಲಾಗಿದೆ. ಈ ಮೂಲಕ ಇವುಗಳೂ ಸೇರಿದಂತೆ ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳ ಮತದಾರರನ್ನೂ ಸೆಳೆಯಲು ತಂತ್ರ ರೂಪಿಸಲಾಗಿದೆ.

ಮೂರು ಕಡೆಯೂ ಬೃಹತ್‌ ಸಮಾವೇಶ

ಈ ಮೂರು ಲೋಕಸಭಾ ಕ್ಷೇತ್ರಗಳಲ್ಲಿಯೂ ಬೃಹತ್‌ ಸಮಾವೇಶ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಂದು ಬೆಳಗಾವಿಯಲ್ಲಿ 28 ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.

29ರಂದು 4 ಕಡೆ ಸಮಾವೇಶ

ಏಪ್ರಿಲ್‌ 29ರಂದು ಕಲಬುರಗಿ, ಬಳ್ಳಾರಿ, ರಾಯಚೂರು ಅಥವಾ ಕೊಪ್ಪಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಮಾವೇಶವನ್ನು ನಡೆಸಲಿದ್ದಾರೆ.

2ನೇ ಹಂತದ ಚುನಾವಣೆಗೆ ಬಿಜೆಪಿ ಪ್ಲ್ಯಾನ್‌ ರೆಡಿ

ಮೊದಲ ಹಂತದ ಚುನಾವಣೆಗೆ ಏಪ್ರಿಲ್‌ 26ರಂದು ಮತದಾನ ನಡೆಯುವುದರಿಂದ ಕರ್ನಾಟಕದಲ್ಲಿನ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸಲಾಗುತ್ತಿದೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಮೋದಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು. ಇಂತಹ ಯುವ ವರ್ಗದ ಮತಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಸೆಳೆಯಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ.

ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

ವಿದ್ಯುನ್ಮಾನ ಮತಯಂತ್ರಗಳ (EVM- ಇವಿಎಂ) ಕುರಿತು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಕಾನೂನು ಹೋರಾಟದ ನಡುವೆಯೇ ಲೋಕಸಭೆ ಚುನಾವಣೆ (Lok Sabha Election 2024) ಮೊದಲ ಹಂತದ ಮತದಾನ (1st phase Voting) ನಡೆಯುತ್ತಿದೆ. ಇವಿಎಂಗಳಲ್ಲಿ ಚಲಾವಣೆಯಾದ 100% ಮತಗಳನ್ನೂ ವಿವಿಪ್ಯಾಟ್ (VVPAT) ವ್ಯವಸ್ಥೆಯ ಮೂಲಕ ಪರಿಶೀಲಿಸುವ ವ್ಯವಸ್ಥೆ ಜಾರಿ ಮಾಡಬೇಕು (VVPAT Verification) ಎಂದು ಅರ್ಜಿದಾರರು ಕೋರಿದ್ದಾರೆ. ಈ ಸಂದರ್ಭದಲ್ಲಿ, ಇವಿಎಂ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ, ವಿವಿಪ್ಯಾಟ್‌ ಮೂಲಕ ಅದರ ಪರಿಶೀಲನೆ ಹೇಗೆ, ಎಂಬುದನ್ನು ವಿವರವಾಗಿ ತಿಳಿಯೋಣ.

ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ. ನಿನ್ನೆ, ಭಾರತೀಯ ಚುನಾವಣಾ ಆಯೋಗದ ವಕೀಲರು ಇವಿಎಂ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ರೀತಿಯ ಟ್ಯಾಂಪರಿಂಗ್ ವಿರುದ್ಧ ಹೇಗೆ ದೋಷರಹಿತವಾಗಿದೆ ಎಂಬುದನ್ನು ವಿವರಿಸಿದರು.

ಇವಿಎಂ ಕೆಲಸ ಮಾಡುವುದು ಹೇಗೆ?

EVM ಎರಡು ಘಟಕಗಳನ್ನು ಹೊಂದಿದೆ- ನಿಯಂತ್ರಣ ಘಟಕ ಮತ್ತು ಮತದಾನ ಘಟಕ. ಇವುಗಳನ್ನು ಕೇಬಲ್ ಮೂಲಕ ಸಂಪರ್ಕಿಸಲಾಗಿದೆ. ಇವಿಎಂ ನಿಯಂತ್ರಣ ಘಟಕವು ಪೋಲಿಂಗ್ ಆಫೀಸರ್‌ ಬಳಿ ಇರುತ್ತದೆ. ಮತಯಂತ್ರ ಸಾಮಾನ್ಯವಾಗಿ ಮತದಾರನ ಖಾಸಗಿತನಕ್ಕಾಗಿ ಮುಚ್ಚಿದ ಆವರಣದೊಳಗೆ ಇರುತ್ತದೆ.

ಮತಗಟ್ಟೆಯಲ್ಲಿ, ಮತಗಟ್ಟೆ ಅಧಿಕಾರಿಯು ನಿಮ್ಮ ಗುರುತನ್ನು ಪರಿಶೀಲಿಸುತ್ತಾರೆ. ನಂತರ ನೀವು ಮತ ​​ಚಲಾಯಿಸಲು ಅನುವು ಮಾಡಿಕೊಡುವ ಬ್ಯಾಲೆಟ್ ಬಟನ್ ಅನ್ನು ಒತ್ತುತ್ತಾರೆ. ಬ್ಯಾಲೆಟ್ ಯೂನಿಟ್‌ನಲ್ಲಿ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳು ಅವುಗಳ ಪಕ್ಕದಲ್ಲಿ ನೀಲಿ ಬಟನ್‌ಗಳಿರುತ್ತವೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತಬೇಕು.

ಮತದಾನ ಪ್ರಕ್ರಿಯೆ

ಮತಗಟ್ಟೆ ಅಧಿಕಾರಿಯ ನಿಯಂತ್ರಣ ಘಟಕವು ಬಹು ಬಟನ್‌ಗಳನ್ನು ಹೊಂದಿದೆ. ಅವುಗಳಲ್ಲಿ ಒಂದು ʼballot’ ಎಂಬ ಶೀರ್ಷಿಕೆಯಿದು. ಒಮ್ಮೆ ಅಧಿಕಾರಿಯು ಈ ಗುಂಡಿಯನ್ನು ಒತ್ತಿದರೆ, ʼಬ್ಯುಸಿ’ ಎಂಬ ಶೀರ್ಷಿಕೆಯ ಕೆಂಪು ದೀಪವು ಬೆಳಗುತ್ತದೆ. ಒಂದು ಮತವನ್ನು ದಾಖಲಿಸಲು ನಿಯಂತ್ರಣ ಘಟಕ ಸಿದ್ಧವಾಗಿದೆ ಎಂದು ಇದು ಸೂಚಿಸುತ್ತದೆ. ಮತದಾರ ಇರುವ ಬ್ಯಾಲೆಟ್ ಯೂನಿಟ್‌ನಲ್ಲಿ ಹಸಿರು ದೀಪ ಆನ್ ಆಗಿದ್ದು, ಮತದಾನಕ್ಕೆ ಯಂತ್ರ ಸಿದ್ಧವಾಗಿದೆ ಎಂದು ಸಂಕೇತಿಸುತ್ತದೆ. ನಂತರ ಮತದಾರನು ತನ್ನ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತುತ್ತಾನೆ. ಬ್ಯಾಲೆಟ್ ಯೂನಿಟ್ ದೃಷ್ಟಿಹೀನ ಮತದಾರರಿಗೆ ಬ್ರೈಲ್ ಲಿಪಿಯನ್ನು ಸಹ ಹೊಂದಿದೆ.

ಮತದಾರರು ಮತದಾನ ಮಾಡಿದ ನಂತರ, ನಿಯಂತ್ರಣ ಘಟಕವು ಬೀಪ್ ಧ್ವನಿಯನ್ನು ಹೊರಸೂಸುತ್ತದೆ. ಇದು ಮತದಾನ ಪೂರ್ಣಗೊಂಡಿದೆ ಎಂದು ಸೂಚಿಸುತ್ತದೆ. ನಿಯಂತ್ರಣ ಘಟಕವು ಎಲ್‌ಇಡಿ ಪರದೆ ಮತ್ತು ಬಟನ್‌ಗಳನ್ನು ಹೊಂದಿದ್ದು, ಅದರಲ್ಲಿ ದಾಖಲಾಗಿರುವ ಒಟ್ಟು ಮತಗಳ ಸಂಖ್ಯೆಯನ್ನು ನೋಡಲು ಬಳಸಬಹುದು. ಎಲ್ಲಾ ಮತಗಳು ದಾಖಲಾದ ನಂತರ, ಮತಗಟ್ಟೆ ಅಧಿಕಾರಿಯು ನಿಯಂತ್ರಣ ಘಟಕದ ಬದಿಯಲ್ಲಿರುವ ಗುಂಡಿಯನ್ನು ಒತ್ತಿ, ಯಂತ್ರವನ್ನು ಮುಚ್ಚುತ್ತಾರೆ. ಎಣಿಕೆಯ ದಿನದಂದು, ಪ್ರತಿ ಅಭ್ಯರ್ಥಿ ಪಡೆದ ಒಟ್ಟು ಮತಗಳನ್ನು ನೋಡಲು ʼresult’ ಶೀರ್ಷಿಕೆಯ ಬಟನ್ ಅನ್ನು ಬಳಸಲಾಗುತ್ತದೆ. ನಿಯಂತ್ರಣ ಘಟಕದಿಂದ ಎಲ್ಲಾ ಡೇಟಾವನ್ನು ಅಳಿಸಲು ಬಳಸಬಹುದಾದ ʼclear’ ಬಟನ್ ಕೂಡ ಇದೆ.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಇದನ್ನೂ ಓದಿ: VVPAT Verification: ಇವಿಎಂ-ವಿವಿಪ್ಯಾಟ್‌ ತಾಳೆಯ ಪ್ರಕ್ರಿಯೆ ತಿಳಿಸಿ; ಆಯೋಗಕ್ಕೆ ಸುಪ್ರೀಂ ಸೂಚನೆ

ಸಮಯ ಉಳಿಕೆ

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ.

ಎಲ್ಲರ ಸಮ್ಮುಖದಲ್ಲಿ ಪರಿಶೀಲನೆ

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

Continue Reading

ಕ್ರೈಂ

Road Accident: ಅಂಕೋಲಾದಲ್ಲಿ ಭೀಕರ ಅಪಘಾತ; ಬೈಕ್‌ ಸವಾರ ಸುಟ್ಟು ಕರಕಲು!

Road Accident: ಬೈಕ್ ಸವಾರರು ಮಂಗಳವಾರ (ಏಪ್ರಿಲ್‌ 24) ತಡರಾತ್ರಿ ಅಂಕೋಲಾದಿಂದ ಕಾರವಾರದತ್ತ ತೆರಳುತ್ತಿದ್ದರು. ಈ ವೇಳೆ ಕಾರವಾರ ಕಡೆಯಿಂದ ಬಂದ ಟ್ರ್ಯಾಕ್ಸ್‌ವೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಅಪಘಾತದ ವೇಳೆ ಬೈಕ್‌ನ ಪೆಟ್ರೋಲ್‌ ಟ್ಯಾಂಕ್‌ಗೆ ಬೆಂಕಿ ತಗುಲಿದ್ದು, ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದೆ. ಈ ಹಿನ್ನೆಲೆಯಲ್ಲಿ ಒಬ್ಬ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ ಮತ್ತಿಬ್ಬರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

VISTARANEWS.COM


on

Road accident in Ankola The biker was burnt to death
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಗ್ರಾಮದ ಬಳಿ ತಡರಾತ್ರಿ ಬೈಕ್ ಹಾಗೂ ಟ್ರ್ಯಾಕ್ಸ್ ನಡುವೆ ಮುಖಾಮುಖಿ ಡಿಕ್ಕಿ (Road Accident) ಸಂಭವಿಸಿದ್ದು, ಪೆಟ್ರೋಲ್ ಟ್ಯಾಂಕ್‌ಗೆ ಬೆಂಕಿ ತಗುಲಿ ಬೈಕ್ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ. ಬೈಕ್‌ನಲ್ಲಿದ್ದ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಮಂತ ಹರಿಕಂತ್ರ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿದ್ದ ಸುಮಿತ್ ಹರಿಕಂತ್ರ, ಚಾಣಕ್ಯ ಹರಿಕಂತ್ರ ಎಂಬುವವರಿಗೆ ಗಂಭೀರ ಗಾಯಗಳಾಗಿವೆ.

ಬೈಕ್ ಸವಾರರು ಮಂಗಳವಾರ (ಏಪ್ರಿಲ್‌ 24) ತಡರಾತ್ರಿ ಅಂಕೋಲಾದಿಂದ ಕಾರವಾರದತ್ತ ತೆರಳುತ್ತಿದ್ದರು. ಈ ವೇಳೆ ಕಾರವಾರ ಕಡೆಯಿಂದ ಬಂದ ಟ್ರ್ಯಾಕ್ಸ್‌ವೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಅಪಘಾತದ ವೇಳೆ ಬೈಕ್‌ನ ಪೆಟ್ರೋಲ್‌ ಟ್ಯಾಂಕ್‌ಗೆ ಬೆಂಕಿ ತಗುಲಿದ್ದು, ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದೆ. ಆದರೆ, ಬೈಕ್‌ ಸವಾರನ ಮೇಲೆ ಬೈಕ್‌ ಬಿದ್ದಿದ್ದರಿಂದ ಮೇಲೆ ಏಳಲು ಆಗಿಲ್ಲ. ಹೀಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದರಿಂದ ಅಲ್ಲೇ ಸಿಲುಕಿದ್ದ ಬೈಕ್‌ ಸವಾರ ಸುಮಂತ ಹರಿಕಂತ್ರ ಅವರ ಮೈಗೂ ಬೆಂಕಿ ತಗುಲಿದೆ. ಹೀಗಾಗಿ ಅವರು ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ.

ಗಾಯಾಳುಗಳು ಆಸ್ಪತ್ರೆಗೆ ದಾಖಲು

ಗಾಯಾಳುಗಳಾದ ಸುಮಿತ್‌ ಹಾಗೂ ಚಾಣಕ್ಯ ಹರಿಕಂತ್ರ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಗುಜರಿ ಅಂಗಡಿ ಮಾಲೀಕನಿಗೆ ಬೆದರಿಸಿ ಹಣ ಪೀಕಿದ ಪೊಲೀಸ್‌ 

ಬೆಂಗಳೂರು: ಮಾರತ್ತಹಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ಸುಳ್ಳು ಆರೋಪಗಳನ್ನು ಮಾಡಿ ಗುಜರಿ ಅಂಗಡಿ ಮಾಲೀಕನಿಂದ ಹಣ ವಸೂಲಿ (Fraud Case) ಮಾಡಿರುವ ಆರೋಪವೊಂದು ಕೇಳಿ ಬಂದಿದೆ. ಗುಜರಿ ಅಂಗಡಿ ಮಾಲೀಕ ಅಖ್ತಿರ್ ಅಲಿ ಮಂಡಲ್‌ ಎಂಬುವವರು ಈ ಸಂಬಂಧ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ಅಖ್ತರ್ ಅವರು ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಲ್ಲೂರಳ್ಳಿಯಲ್ಲಿ ಗುಜರಿ ಅಂಗಡಿ ಇಟ್ಟುಕೊಂಡಿದ್ದರು. ಕಳೆದ ಏಪ್ರಿಲ್ 17ರ ಮಧ್ಯಾಹ್ನ 12ಗಂಟೆಗೆ ಗುಜುರಿ ಬಳಿ ಪೊಲೀಸ್ ಸಿಬ್ಬಂದಿ, ಇನ್ಫಾರ್ಮರ್ ಎಸ್.ನಿವಾಸ್ ಎಂಬಾತನ ಜತೆಗೆ ಆಗಮಿಸಿದ್ದರು. ಹೀಗೆ ಬಂದವರೇ ನಾವು ಪೊಲೀಸರು ನೀವು ದಂಧೆ ನಡೆಸುತ್ತಿದ್ದೀರಾ? ಗಾಂಜಾ ಮಾರಾಟ ಮಾಡುತ್ತೀದ್ದೀರಾ ಎಂದು ಬೆದರಿಕೆ ಹಾಕಿದ್ದಾರೆ.

ಕೆಲಸಗಾರರ ಮೇಲೆ ಹಲ್ಲೆ ಮಾಡಿ ಅಖ್ತರ್ ಬಳಿ ಸುಮಾರು 2 ಲಕ್ಷ ರೂ. ಹಣವನ್ನು ಇನ್ಫಾರ್ಮರ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಮೊದಲು 20 ಸಾವಿರ ನಗದು ಪಡೆದುಕೊಂಡು ಬಳಿಕ ಬ್ಯಾಂಕ್ ಖಾತೆಯಿಂದ 80 ಸಾವಿರ ರೂ. ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ ಹೋಗುವಾಗ ಬೆದರಿಕೆ ಹಾಕಿ ಎಟಿಎಂ ಕಾರ್ಡ್ ಹಾಗೂ ಪಿನ್ ನಂಬರ್‌ ಪಡೆದುಕೊಂಡಿದ್ದಾರೆ. ಬಳಿಕ ಎಟಿಎಂನಿಂದ 50 ಸಾವಿರ ಹಣ ಡ್ರಾ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Neha Murder Case: ಫಯಾಜ್‌ ಜೈಲಲ್ಲಿ ಇರೋವಾಗ ಮೊಬೈಲ್ ಫೋಟೊ ಲೀಕ್ ಆಗಲು ಹೇಗೆ ಸಾಧ್ಯ?

ಮರುದಿನ ವಾಪಸ್‌ ಗುಜುರಿ ಅಂಗಡಿಗೆ ಬಂದಿದ್ದ ಆರೋಪಿಗಳು, ಎಟಿಎಂ ಕಾರ್ಡ್ ಕೊಟ್ಟು ಮತ್ತೆ 50 ಸಾವಿರ ಹಣ ಪಡೆದುಕೊಂಡು ಹೋಗಿದ್ದಾರೆ. ಮತ್ತೊಮ್ಮೆ 50 ಸಾವಿರ ರೂ. ಕೊಡಬೇಕು ಇಲ್ಲದಿದ್ದರೆ ಬೈಕ್ ತೆಗೆದುಕೊಂಡು ಹೋಗುವುದಾಗಿ ಬೆದರಿಕೆ ಹಾಕಿದ್ದಾರೆ. ಇವರ ಕಾಟ ತಾಳಲಾರದೆ ಅಖ್ತಿರ್‌ ವೈಟ್ ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ನಿವಾಸ್ ಎಂಬಾತನನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಮೂವರು ಆರೋಪಿಗಳಿಗೆ ಹುಡುಕಾಟ ನಡೆಸಿದ್ದಾಗಿ ವೈಟ್ ಫೀಲ್ಡ್ ಡಿಸಿಪಿ ಶಿವಕುಮಾರ್ ಗುಣಾರೆ ಮಾಹಿತಿ ನೀಡಿದ್ದಾರೆ.

Continue Reading

ಮಳೆ

Karnataka Weather : ಸುಳಿಗಾಳಿ ಪ್ರಭಾವ; ರಭಸ ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಎಚ್ಚರಿಕೆ

Karnataka Weather Forecast : ಸುಳಿಗಾಳಿ ಪ್ರಭಾವದಿಂದಾಗಿ ಹಲವೆಡೆ ವ್ಯಾಪಕ ಮಳೆಯಾಗುವ (Rain News) ಸಾಧ್ಯತೆ ಇದೆ. ಕೆಲವೆಡೆ ರಭಸವಾಗಿ ಗಾಳಿ ಬೀಸಲಿದೆ. ಗುಡುಗು, ಮಿಂಚಿನ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮಧ್ಯ‌ ಮಹಾರಾಷ್ಟ್ರದಿಂದ ಕರ್ನಾಟಕ ಸೇರಿ ಕೇರಳದವರೆಗೆ ಸುಳಿಗಾಳಿಯ ಚಲನೆಯಿಂದ ಹವಾಮಾನದಲ್ಲಿ ವೈಪರಿತ್ಯ ಉಂಟಾಗಿದೆ. ಇದರ ಪ್ರಭಾವದಿಂದಾಗಿ ಇನ್ನೆರಡು ದಿನಗಳು ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ. ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ (Rain News) ಇದ್ದು, ಗಾಳಿ ವೇಗವು 30-40 ಕಿ.ಮೀ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲೂ ಗುಡುಗುನೊಂದಿಗೆ ಮಳೆ ಸಾಧ್ಯತೆ ಇದೆ. ಉಡುಪಿ ಜಿಲ್ಲೆಯ ಶುಷ್ಕ ಹವಾಮಾನ ಇರಲಿದೆ.

ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣಹವೆ ಮೇಲುಗೈ ಸಾಧಿಸಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದೆ. ಉತ್ತರ ಒಳನಾಡಿನ ಹಾವೇರಿ, ಬೆಳಗಾವಿ, ಧಾರವಾಡ, ವಿಜಯಪುರ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಉಳಿದೆಡೆ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Murder Case : ಒಂಟಿ ಮಹಿಳೆ ಕೊಲೆ ಕೇಸ್‌; ಅತಿಯಾದ ಸೆಕ್ಸ್‌ಗೆ ಒತ್ತಾಯಿಸಿದವಳನ್ನು ಬೆಡ್‌ ರೂಂನಲ್ಲೇ ಕೊಂದ ಯುವಕ

ಆರೆಂಜ್ ಮತ್ತು ಯೆಲ್ಲೋ ಅಲರ್ಟ್

ಕೆಲವೆಡೆ ಮಳೆ ನಡುವೆಯು ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ನೀಡಿದೆ. ಈ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಆಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ನೀಡಿದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಬುಧವಾರ ಬೆಳಗ್ಗೆವರೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ನಾಲ್ಕು ದಿನಗಳಿಗೆ ಹೀಟ್‌ ವೇವ್‌ ಅಲರ್ಟ್‌

ಮೊದಲ ದಿನ 24ರಂದು ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

25ರಂದು ರಾಯಚೂರು,ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಗದಗ, ದಾವಣಗೆರೆ ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

26ರಂದು ರಾಯಚೂರು,ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಗದಗ, ದಾವಣಗೆರೆ ತುಮಕೂರು ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

27ರಂದು ರಾಯಚೂರು,ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಗದಗ, ದಾವಣಗೆರೆ ತುಮಕೂರು ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿ ಮತ್ತು ಆರ್ದ್ರತೆ

ಏಪ್ರಿಲ್ 24 ರಿಂದ 27 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬಿರುಗಾಳಿ ಮಳೆಗೆ ಜನರು ತತ್ತರ; ಸಿಡಿಲಿಗೆ ಎತ್ತುಗಳು ಬಲಿ, ನೆಲಕಚ್ಚಿದ ಬೆಳೆಗಳು

Karnataka Weather Forecast : ಬಿರುಗಾಳಿ ಸಹಿತ ಸುರಿದ ಮಳೆಗೆ (Rain News) ಬೀದರ್‌, ವಿಜಯನಗರ, ದಾವಣಗೆರೆ ರೈತರು ತತ್ತರಿಸಿ ಹೋಗಿದ್ದಾರೆ. ಸಾಲಸೋಲ ಮಾಡಿ ಖರೀದಿಸಿದ್ದ ಎತ್ತುಗಳು ಸಿಡಿಲಿಗೆ ಬಲಿಯಾದರೆ, ನೀರಿಲ್ಲದಿದ್ದರೂ ಟ್ಯಾಂಕರ್‌ ಮೂಲಕ ಕಷ್ಟ ಪಟ್ಟು ಬೆಳೆದಿದ್ದ ಬೆಳೆಯು ನೆಲಕಚ್ಚಿದೆ. ಸದ್ಯ ಬುಧವಾರದಂದು ಎಲ್ಲೆಲ್ಲಿ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಅಬ್ಬರಕ್ಕೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಮುಂದಿನ 24 ಗಂಟೆಯಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ (Rain News) ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಮಧ್ಯ‌ ಮಹಾರಾಷ್ಟ್ರದಿಂದ ಕರ್ನಾಟಕ ಸೇರಿ ಕೇರಳದವರೆಗೆ ಸುಳಿಗಾಳಿಯ ಚಲನೆಯಿಂದ ಹವಾಮಾನದಲ್ಲಿ ವೈಪರಿತ್ಯ ಉಂಟಾಗಿದೆ. ಇದರ ಪ್ರಭಾವದಿಂದಾಗಿ ಇನ್ನೆರಡು ದಿನಗಳು ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.

ಪ್ರಮುಖವಾಗಿ ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಬಾಗಲಕೋಟೆ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಸೇರಿ ದಕ್ಷಿಣ ಒಳನಾಡಿನ ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗಲಿದೆ. ಇನ್ನೂ 30-40 ಕಿಮೀ ವೇಗದಲ್ಲಿ ಬಿರುಸಿನ ಗಾಳಿ ಬೀಸಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಇದನ್ನೂ ಓದಿ:Murder Case : ಕೊಲೆಯಾದ ಮಹಿಳೆಗೆ 20 ಹುಡುಗರ ಸಹವಾಸ! ಅವರಿಗೆ ಆಕೆ ಇಟ್ಟಿದ್ದ ಹೆಸರು ಆರೆಂಜ್, ಆ್ಯಪಲ್, ಬನಾನಾ ಇತ್ಯಾದಿ!

ಸಿಡಿಲಿಗೆ ಎತ್ತುಗಳು ಬಲಿ

ಬೀದರ್‌ನ ಔರಾದ್ ತಾಲೂಕಿನ ಕೊಳ್ಳೂರ ಗ್ರಾಮದಲ್ಲಿ ಸಿಡಿಲು ಬಡಿದು 2 ಎತ್ತುಗಳು ಮೃತಪಟ್ಟಿರುವ ಘಟನೆ ನಡೆದಿದೆ. ಸೋಮವಾರ ತಡರಾತ್ರಿಯಲ್ಲಿ ಭಾರಿ ಮಳೆಯೊಂದಿಗೆ ಸಿಡಿಲು ಬಡಿದಿದೆ. ಪರಿಣಾಮ ಸಾಗರ ಬಸವರಾಜ ಪಾಟೀಲ ಎಂಬುವವರಿಗೆ ಸೇರಿದ ಎತ್ತುಗಳು ಮೃತಪಟ್ಟಿವೆ.

ವಿಜಯನಗರದಲ್ಲಿ ಗಾಳಿ-ಮಳೆಗೆ ಹಾರಿದ ಶಾಮಿಯಾನ

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸೀತಾರಾಮ್ ತಾಂಡಾದ ಗ್ರಾಮದ ಬಳಿಯ ಆಂಜನೇಯ ದೇಗುಲದಲ್ಲಿ ಹನುಮ ಜಯಂತಿ ನಿಮಿತ್ತ ಶಾಮಿಯಾನ, ಲೈಟಿಂಗ್ ಹಾಕಲಾಗಿತ್ತು. ಆದರೆ ಜೋರಾಗಿ ಬೀಸಿದ ಗಾಳಿ, ಮಳೆಗೆ ಶಾಮಿಯಾನ, ಲೈಟಿಂಗ್ಸ್‌ ಹಾರಿ ಹೋಗಿತ್ತು. ಇದರಿಂದಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿತ್ತು.

ತಡರಾತ್ರಿ ಬಿರುಗಾಳಿ ಸಹಿತ ಮಳೆಗೆ ಹತ್ತಾರು ಎಕರೆ ಪಪ್ಪಾಯಿ ಬೆಳೆ ನೆಲಕ್ಕೆ ಉರುಳಿದೆ. ಹಗರಿಬೊಮ್ಮನಹಳ್ಳಿ ತಾಲೂಕಿನ ವಟ್ಟಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ವಟ್ಟಮ್ಮನಹಳ್ಳಿ ಗ್ರಾಮದ ಮೂಗಪ್ಪ ಎಂಬುವರಿಗೆ ಸೇರಿದ 5 ಎಕರೆ ಪಪ್ಪಾಯಿ ಬೆಳೆ ಹಾಳಾಗಿದೆ. ಇದರಿಂದ ಅಂದಾಜು 5 ರಿಂದ 7 ಲಕ್ಷ ರೂಪಾಯಿ ಬೆಲೆ ಬಾಳುವ ಪಪ್ಪಾಯಿ ಬೆಳೆಗೆ ಹಾನಿಯಾಗಿದೆ. ಇದೇ ಗ್ರಾಮದ ಪತ್ರಿಗೌಡ ಹೊನ್ನೆಹಳ್ಳಿ ಎನ್ನುವವರ 3 ಎಕರೆ, ಕುಸುಮ ಅವರ 4 ಎಕರೆ ಪಪ್ಪಾಯಿ ಬೆಳೆ ನಷ್ಟವಾಗಿದೆ. ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೂಕ್ತ ಪರಿಹಾರಕ್ಕೆ ರೈತರು ಆಗ್ರಹಿಸಿದ್ದಾರೆ.

ದಾವಣಗೆರೆಯಲ್ಲಿ ಬಾಳೆ ಬೆಳೆ ನಾಶ

ಸೋಮವಾರ ಸಂಜೆ ಸುರಿದ ಗಾಳಿ ಮಳೆಗೆ ಅಪಾರ ಪ್ರಮಾಣದ ಬಾಳೆ ಬೆಳೆ ನಾಶವಾಗಿವೆ. ದಾವಣಗೆರೆಯ ಜಗಳೂರು ತಾಲೂಕಿನ ಕಟ್ಟಿಗೆಹಳ್ಳಿ, ಜಮ್ಮಪುರ, ಹರಿಶಿನಗುಂಡಿ ಸೇರಿದಂತೆ ಹಲವು ಕಡೆ ಬೆಳೆ ನಾಶವಾಗಿದೆ. ಕಟ್ಟಿಗೆಹಳ್ಳಿ ಗ್ರಾಮದ ಸಿದ್ದಮ್ಮ, ಬಸವರಾಜಪ್ಪ ಎಂಬುವರಿಗೆ ಸೇರಿದ 20 ಎಕರೆ ಬಾಳೆ ತೋಟ ನೆಲಕಚ್ಚಿದೆ. ಬರಗಾಲದಲ್ಲಿ ಟ್ಯಾಂಕರ್ ನೀರು ಖರೀದಿ ಮಾಡಿ ಬಾಳೆ ಬೆಳೆಸಿದ್ದರು. ಆದರೆ ಗಾಳಿ ಮಳೆಗೆ ಬಾಳೆಯು ನೆಲಸಮವಾಗಿದೆ. ಕೂಡಲೇ ಹಾನಿಗೊಂಡ ಬೆಳೆಗೆ ಸರ್ಕಾರ ಪರಿಹಾರ ‌ನೀಡುವಂತೆ ಒತ್ತಾಯಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
VVPAT Verification
ದೇಶ14 mins ago

VVPAT Verification: ವಿವಿಪ್ಯಾಟ್‌ ಕೇಸ್; ಚುನಾವಣೆಯನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

Sunita Williams
ದೇಶ14 mins ago

Sunita Williams: ಸುನೀತಾ ವಿಲಿಯಮ್ಸ್‌ 3ನೇ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಲು ಸಜ್ಜು

Marcus Stoinis
ಕ್ರಿಕೆಟ್24 mins ago

IPL 2024: 13 ವರ್ಷದ ಐಪಿಎಲ್​ ದಾಖಲೆ ಮುರಿದ ಮಾರ್ಕಸ್​ ಸ್ಟೋಯಿನಿಸ್

Areca Price
ಪರಿಸರ26 mins ago

Areca Price: ಅಡಿಕೆ ದರ ಗಗನಮುಖಿ; ಚುನಾವಣೆ ಬಳಿಕ ಮತ್ತಷ್ಟು ಏರಿಕೆ?

Veteran journalist Arjun Deva passes away
ಶ್ರದ್ಧಾಂಜಲಿ28 mins ago

Arjun Deva: ಹಿರಿಯ ಪತ್ರಕರ್ತ ಅರ್ಜುನ್ ದೇವ ನಿಧನ; ಗಣ್ಯರ ಕಂಬನಿ

pm narendra modi jp morgan jamie dimon
ಪ್ರಮುಖ ಸುದ್ದಿ43 mins ago

PM Narendra Modi: “ಅಮೆರಿಕಕ್ಕೆ ಮೋದಿಯಂಥ ನಾಯಕ ಬೇಕು” ಜೆಪಿ ಮೋರ್ಗನ್‌ ಸಂಸ್ಥೆ ಸಿಇಒ ಜೇಮಿ ಶ್ಲಾಘನೆ

IPL 2024 Points Table
ಕ್ರೀಡೆ58 mins ago

IPL 2024 Points Table: ಚೆನ್ನೈಗೆ ಹೀನಾಯವಾಗಿ ಸೋಲುಣಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಲಕ್ನೋ

Noida Scrap Mafia
ವಿದೇಶ1 hour ago

Noida Scrap Mafia: ಥೈಲ್ಯಾಂಡ್‌ನಲ್ಲಿ ಪೊಲೀಸ್‌ ಬಲೆಗೆ ಬಿದ್ದ ಗ್ಯಾಂಗ್‌ಸ್ಟರ್‌ ರವಿ ಕಾನಾ

ಬೆಂಗಳೂರು ಗ್ರಾಮಾಂತರ1 hour ago

Lok Sabha Election 2024: ಬೆಂಗಳೂರು ಗ್ರಾಮಾಂತರಕ್ಕೆ ಡಬಲ್ ಸೆಕ್ಯೂರಿಟಿ; 28 ಲೋಕಸಭಾ ಕ್ಷೇತ್ರದ ಮತದಾರರು ಎಷ್ಟು?

shree Saibaba jatra mahotsav and Mass marriage programme
ಯಾದಗಿರಿ1 hour ago

Yadgiri News: ಸಾಮಾಜಿಕ ಕಾರ್ಯಗಳಿಂದ ಆತ್ಮತೃಪ್ತಿ: ಶಾಂತವೀರ ಸ್ವಾಮೀಜಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ10 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌