Site icon Vistara News

Siddaramaiah Cabinet : ಹಾಲಿನ ದರ ಏರಿಕೆ ಫಿಕ್ಸ್‌, ಚರ್ಚೆಯಾಗದ ಕೆಜಿ ಹಳ್ಳಿ ಗಲಭೆಯ ತನ್ವೀರ್‌ ಸೇಠ್‌ ಪತ್ರ

Siddaramaiah Cabinet Nandini milk price hike

ಬೆಂಗಳೂರು: ಕೆಎಂಎಫ್‌ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 3 ರೂಪಾಯಿ ಏರಿಕೆ (Nandini Milk Price hike) ಮಾಡಲು ಸಂಪುಟ ಒಪ್ಪಿಗೆ ಸೂಚಿಸಿದ್ದು, ಆಗಸ್ಟ್ 1ರಿಂದ ನೂತನ ದರ ಜಾರಿಗೆ ಬರಲಿದೆ. ಕಳೆದ ವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ (Siddaramaiah Cabinet) ಈ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಇದಲ್ಲದೆ, ಬಹು ಕುತೂಹಲಕ್ಕೆ ಕಾರಣವಾಗಿದ್ದ “ಶಾಸಕರ ಅಸಮಾಧಾನ”, ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣವನ್ನು ಕೈಬಿಡುವ ಪ್ರಸ್ತಾಪ ಚರ್ಚೆಗೆ ಬಂದಿಲ್ಲ.

ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಚಿವ ಎಚ್.ಕೆ. ಪಾಟೀಲ್‌, ಇಂದಿನ ಸಚಿವ ಸಂಪುಟ ಸಭೆಯಲ್ಲಿ 16 ವಿಷಯಗಳ ಬಗ್ಗೆ ಪರಿಶೀಲನೆ ಕೈ ತೆಗೆದುಕೊಳ್ಳಲಾಗಿತ್ತು. ಈ ವೇಳೆ ಮೊಟ್ಟೆ ವಿತರಣೆ (Egg distribution), ಎಪಿಎಂಸಿಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿ (Infrastructure development in APMCs) ಸೇರಿದಂತೆ ಮತ್ತಿತರ ಕಾರ್ಯಕ್ರಮಗಳಿಗೆ ಒಪ್ಪಿಗೆ ಪಡೆಯಲಾಗಿದೆ ಎಂದು ತಿಳಿಸಿದರು.

ಸಚಿವ ಸಂಪುಟದ ಪ್ರಮುಖ ನಿರ್ಣಯಗಳು

ಇದನ್ನೂ ಓದಿ: Karnataka Politics : ಬಿಎಸ್‌ವೈ-ಎಚ್‌ಡಿಕೆ ಟೂರ್‌; ಯುರೋಪ್‌ನಲ್ಲಿ ಕರ್ನಾಟಕ ಪಾಲಿಟಿಕ್ಸ್!

ಚರ್ಚೆಯಾಗದ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಾಟೆ ಪ್ರಕರಣ!

2021ರ ಆಗಸ್ಟ್‌ನಲ್ಲಿ ನಡೆದಿದ್ದ ಕೆಜಿ ಹಳ್ಳಿ, ಡಿಜೆ ಹಳ್ಳಿ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳನ್ನು ಖುಲಾಸೆ ಮಾಡುವ ನಿಟ್ಟಿನಲ್ಲಿ ಶಾಸಕ ತನ್ವೀರ್‌ ಸೇಠ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರಿಗೆ ಪತ್ರ ಬರೆದಿದ್ದರು. ಈ ಪತ್ರವನ್ನು ಆಧಾರವಾಗಿಟ್ಟುಕೊಂಡಿದ್ದ ಗೃಹ ಸಚಿವ ಪರಮೇಶ್ವರ್‌, ಗೃಹ ಹಾಗೂ ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಇದು ವ್ಯಾಪಕ ಟೀಕೆಗೂ ಗುರಿಯಾಗಿತ್ತು. ಅಲ್ಲದೆ, ಈ ಘಟನೆಯಲ್ಲಿ ಆಗಿನ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಗೂ ಬೆಂಕಿ ಹಚ್ಚಲಾಗಿತ್ತು. ಈಗ ಪ್ರಕರಣವನ್ನು ಕೈಬಿಡಲು ಹೊರಟಿರುವುದರ ಹಿಂದೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಕೈವಾಡ ಇದೆ ಎಂದು ಅವರು ನೇರವಾಗಿ ಆರೋಪ ಮಾಡಿದ್ದರು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ವಿಚಾರ ಚರ್ಚೆಗೆ ಬರಲಿದೆ ಎಂದು ಹೇಳಲಾಗಿತ್ತು. ಆದರೆ, ಇದನ್ನು ಹೊರತುಪಡಿಸಿ ಉಳಿದ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಹೇಳಲಾಗಿದೆ.

Exit mobile version