VISTARA TOP 10 NEWS : ಸಿದ್ದರಾಮಯ್ಯ-ಡಿಕೆಶಿ ಜಾತಿ ಗಣತಿ ವಾರ್; ಬೆಂಗಳೂರಿನಲ್ಲಿ ತಾಲಿಬಾನ್ ಶಿಕ್ಷಣ ಮತ್ತಿತರ ಪ್ರಮುಖ ಸುದ್ದಿಗಳು Vistara News

ಕರ್ನಾಟಕ

VISTARA TOP 10 NEWS : ಸಿದ್ದರಾಮಯ್ಯ-ಡಿಕೆಶಿ ಜಾತಿ ಗಣತಿ ವಾರ್; ಬೆಂಗಳೂರಿನಲ್ಲಿ ತಾಲಿಬಾನ್ ಶಿಕ್ಷಣ ಮತ್ತಿತರ ಪ್ರಮುಖ ಸುದ್ದಿಗಳು

VISTARA TOP 10 NEWS: ದೇಶ, ವಿದೇಶಗಳ ಸುದ್ದಿಗಳು, ದಿನವಿಡೀ ನಡೆದ ಪ್ರಮುಖ ಬೆಳವಣಿಗೆಗಳ ಸುತ್ತುನೋಟವೇ Vistara Top10 News

VISTARANEWS.COM


on

Masala Dose
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. ಸಿದ್ದರಾಮಯ್ಯ-ಡಿಕೆಶಿ ಮಧ್ಯೆ ಜಾತಿ ಗಣತಿ ವಾರ್;‌ ರಾಹುಲ್‌ ಹೆಸರು ತಂದ ಸಿಎಂ!
ಬೆಂಗಳೂರು: ಎಚ್‌. ಕಾಂತರಾಜು ನೇತೃತ್ವದ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ‘ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2015’ ವರದಿ (ಜಾತಿ ಗಣತಿ – Caste Census) ಈಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನಡುವಿನ ನೇರ ಸಂಘರ್ಷಕ್ಕೆ ಕಾರಣವಾಗಿದೆ. ಜಾತಿ ಗಣತಿ ವರದಿಯನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡಬಾರದು ಎಂಬ ಒಕ್ಕಲಿಗರ ಸಂಘದ ಮನವಿ ಪತ್ರಕ್ಕೆ ಡಿ.ಕೆ. ಶಿವಕುಮಾರ್‌ ಮನವಿ ಸಹಿ ಹಾಕುತ್ತಿದ್ದಂತೆ, ಇತ್ತ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದು, ರಾಹುಲ್‌ ಗಾಂಧಿ ಅವರ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ. ಅವರ ನಿಲುವಿಗೆ ನನ್ನ ಪೂರ್ಣ ಸಹಮತ ಇದೆ ಎಂದು ಹೇಳುವ ಮೂಲಕ ಡಿಕೆಶಿಯನ್ನು ಇಕ್ಕಟ್ಟಿಗೆ ಸಿಲುಕಿಸುವ ದಾಳ ಉರುಳಿಸಿದ್ದಾರೆ. ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ : Caste Census : ಜಾತಿ ಗಣತಿ ವರದಿ ತಿರಸ್ಕಾರ ಮನವಿಗೆ ಸಹಿ ಹಾಕಿದ ಡಿ.ಕೆ. ಶಿವಕುಮಾರ್!

2. ಕೆಲವೇ ದಿನದಲ್ಲಿ 30-40 ಶಾಸಕರು ಕಾಂಗ್ರೆಸ್‌ನಿಂದ ಔಟ್‌ ಎಂದ ಕಟೀಲ್‌
ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಮತ್ತಿತರ ಕಾಂಗ್ರೆಸ್‌ ನಾಯಕರು ಆಪರೇಷನ್‌ ಹಸ್ತ (Operation Hasta) ನಡೆಸಲು ಪ್ರಯತ್ನ ನಡೆಸುತ್ತಿದ್ದಾರೆ. ಅದರ ನಡುವೆಯೇ ಹಸ್ತದೊಳಗೇ ಆಪರೇಷನ್‌ ನಡೆಯುತ್ತಿರುವುದು ಅವರಿಗೆ ಗೊತ್ತಾಗುತ್ತಿಲ್ಲ. ಇನ್ನು ಕೆಲವೇ ದಿನಗಳಲ್ಲಿ 30-40 ಶಾಸಕರು ಕಾಂಗ್ರೆಸ್‌ನಿಂದ ಹೊರಬರಲಿದ್ದಾರೆ ಎಂದು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ (Nalin Kumar Kateel) ಹೇಳಿದ್ದಾರೆ. ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.

3. ಬೆಂಗಳೂರಿನ ಯತೀಮ್‌ ಖಾನಾದಲ್ಲಿ 200 ಮಕ್ಕಳಿಗೆ ತಾಲಿಬಾನ್‌ ಶಿಕ್ಷಣ?
ಬೆಂಗಳೂರು: ರಾಜಧಾನಿಯ ಮುಸ್ಲಿಂ ಅನಾಥಾಶ್ರಮವೊಂದರಲ್ಲಿ (Muslim Yateem Khana) 200 ಪುಟ್ಟ ಪುಟ್ಟ ಮಕ್ಕಳು ಅಸಹನೀಯ ಬದುಕು ಬದುಕುತ್ತಿದ್ದು, ಅವರಿಗೆ ತಾಲಿಬಾನ್‌ ಮಾದರಿಯಲ್ಲಿ ಶಿಕ್ಷಣ (Taliban Education) ನೀಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮಕ್ಕಳನ್ನು ವಸ್ತುಶಃ ಕೋಣೆಗಳಲ್ಲಿ ಕೂಡಿ ಹಾಕಲಾಗಿದ್ದು, ಅವರಿಗೆ ಅಕಾಡೆಮಿಕ್‌ ಶಿಕ್ಷಣ ನೀಡಲಾಗುತ್ತಿಲ್ಲ, ಕೇವಲ ಇಸ್ಲಾಮಿಕ್‌ ಧಾರ್ಮಿಕ ಶಿಕ್ಷಣ (Islamic Education) ನೀಡಲಾಗುತ್ತಿದೆ ಎಂದು ರಾಷ್ಟ್ರೀಯ ಮಕ್ಕಳ ಆಯೋಗದ ಅಧ್ಯಕ್ಷರೇ (National Children Commission president) ಭೇಟಿ ನೀಡಿ ದೂರು (Taliban Training) ನೀಡಿದ್ದಾರೆ. ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.

4. ಕರ್ನಾಟಕಕ್ಕೆ ತಪ್ಪಿದ ಟೆಸ್ಲಾ ಫ್ಯಾಕ್ಟರಿ ಮಹಾರಾಷ್ಟ್ರ, ತಮಿಳು ನಾಡು, ಗುಜರಾತ್‌ನಲ್ಲಿ ಸ್ಥಾಪನೆ?
ನವದೆಹಲಿ: ಅಮೆರಿಕ ನಿರ್ಮಿತ ಟೆಸ್ಲಾ ಕಾರುಗಳನ್ನು (Tesla Car) ಭಾರತೀಯ ಮಾರುಕಟ್ಟೆಗೆ (Indian Market) ತರುವ ಸಂಬಂಧ ಟೆಸ್ಲಾ ಕಂಪನಿ ಮತ್ತು ಭಾರತೀಯ ಸರ್ಕಾರವು (Indian Government) ಒಪ್ಪಂದವನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ. ಮುಂದಿನ ವರ್ಷ ಟೆಸ್ಲಾ ಭಾರತೀಯ ಮಾರುಕಟ್ಟೆಗೆ ಪ್ರವೇಶ ಪಡೆಯಲಿದೆ ಬ್ಲೂಮ್‌ಬರ್ಗ್ ತಿಳಿಸಿದೆ. 2024ರಲ್ಲಿ ಟೆಸ್ಲಾ ಕಂಪನಿ ಭಾರತದಲ್ಲಿ ಫ್ಯಾಕ್ಟರಿ (Tesla Factory) ಕೂಡ ಆರಂಭಿಸಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಟೆಸ್ಲಾ ಕಂಪನಿ ಭಾರತಕ್ಕೆ ಎಂಟ್ರಿ ಕೊಡಲಿದೆ ಎನ್ನುವ ಸುದ್ದಿಗಳು ಮೊದಲಿಗೆ ಹೊರ ಬಂದಾಗಲೇ ಕರ್ನಾಟಕದಲ್ಲಿ ಫ್ಯಾಕ್ಟರಿ ತೆರೆಯಬಹುದು ಎಂದು ಹೇಳಲಾಗಿತ್ತು. ಆದರೆ, ಈಗ ಕಂಪನಿಯ ಯೋಜನೆಗಳು ಬದಲಾಗಿವೆ. ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.

5. ಇತಿಹಾಸದ ಪಠ್ಯದಲ್ಲಿ ರಾಮಾಯಣ, ಮಹಾಭಾರತ! ಶಾಲೆಗಳಲ್ಲಿ ಕಲಿಸಲು ಎನ್‌ಸಿಇಆರ್‌ಟಿಗೆ ಶಿಫಾರಸು
ನವದೆಹಲಿ: ರಾಮಾಯಣ (Ramayana) ಮತ್ತು ಮಹಾಭಾರತದಂತಹ (Mahabhart) ಮಹಾಕಾವ್ಯಗಳನ್ನು (Epics of India) ಭಾರತದ ‘ಶಾಸ್ತ್ರೀಯ ಅವಧಿ’ ಅಡಿಯಲ್ಲಿ ಇತಿಹಾಸದ ಪಠ್ಯಕ್ರಮದ ಭಾಗವಾಗಿ ಶಾಲೆಗಳಲ್ಲಿ ಕಲಿಸಬೇಕು ಎಂದು ಉನ್ನತ ಮಟ್ಟದ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಸಮಿತಿ ಶಿಫಾರಸು ಮಾಡಿದೆ. ಹಾಗೆಯೇ, ಸಂವಿಧಾನದ ಪೀಠಿಕೆಯನ್ನು (Preamble of the Constitution) ಎಲ್ಲಾ ತರಗತಿಗಳ ಗೋಡೆಗಳ ಮೇಲೆ ಸ್ಥಳೀಯ ಭಾಷೆಗಳಲ್ಲಿ ಬರೆಯುವಂತೆ ಸಮಿತಿಯು ಶಿಫಾರಸು ಮಾಡಿದೆ ಎಂದು ಸಮಿತಿಯ ಅಧ್ಯಕ್ಷ ಪ್ರೊ ಸಿ ಐ ಐಸಾಕ್ ತಿಳಿಸಿದ್ದಾರೆ. ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.

6.ಭಾರತ ವಿಶ್ವ ಕಪ್​ ಸೋಲಲು ಮೋದಿಯ ಕಾಲ್ಗುಣವೇ ಕಾರಣ ಎಂದ ರಾಹುಲ್​
ನವದೆಹಲಿ: 2023 ರ ವಿಶ್ವಕಪ್ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 6 ವಿಕೆಟ್​ಗಳ ಸೋಲನುಭವಿಸಲು ಪಂದ್ಯವನ್ನು ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹೋಗಿದ್ದೇ ಕಾರಣ. ಅವರೊಬ್ಬ ಅಪಶಕುನ ವ್ಯಕ್ತಿ ಎಂಬುದಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ (Rahul Gandhi) ಟೀಕಿಸಿದ್ದಾರೆ. ರಾಜಸ್ಥಾನದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಭಾರತವು ಪಂದ್ಯವನ್ನು ಸೋಲುವಂತೆ ಮಾಡಿದ್ದು “ಪನೌತಿ” (ಕೆಟ್ಟ ಶಕುನ) ಎಂದು ರಾಹುಲ್​ ಹೇಳಿದ್ದಾರೆ. ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.
ಇದನ್ನೂ ಓದಿ : 24,789 ಕೋಟಿಗೆ ವಿಶ್ವಕಪ್‌ ಪ್ರಸಾರ ಹಕ್ಕು ಪಡೆದಿದ್ದ ಡಿಸ್ನಿ; 2.2 ಲಕ್ಷ ಕೋಟಿ ರೂ. ಆದಾಯ!

7. ಬಾಹ್ಯಾಕಾಶದಲ್ಲಿ ಚೀನಾದ ಸೇನಾ ನೆಲೆ; ಇನ್ನು ಆಕಾಶದಿಂದಲೇ ಎರಗಲಿದೆ ಹೈಪರ್‌ಸಾನಿಕ್ ಕ್ಷಿಪಣಿ!
ಮಾರಣಾಂತಿಕ ಹೈಪರ್‌ಸಾನಿಕ್ (Hypersonic) ಶಸ್ತ್ರಾಸ್ತ್ರಗಳನ್ನು ಹೊಂದಿರುವ ವಿಶ್ವದ ಮೊದಲ ʼನಿಯರ್-ಸ್ಪೇಸ್ ಕಮಾಂಡ್’ (near-space command) ಅನ್ನು ಚೀನಾ ನಿರ್ಮಿಸಿದೆ ಎಂದು ಹಾಂಗ್ ಕಾಂಗ್‌ನ ಎಸ್‌ಸಿಎಂಪಿ ಪತ್ರಿಕೆ ವರದಿ ಮಾಡಿದೆ. ಆ ನೆಲೆ, ಇನ್ನು ಮುಂದೆ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿಯ (peoples liberation army) ಐದನೇ ಪಡೆಯಾಗಿ ಕಾರ್ಯನಿರ್ವಹಿಸಲಿದೆಯಂತೆ. ಉಳಿದ ನಾಲ್ಕು ಪಡೆಗಳು ಭೂಸೇನೆ, ನೌಕಾಪಡೆ, ವಾಯುಪಡೆ ಮತ್ತು ರಾಕೆಟ್ ಫೋರ್ಸ್. ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.

8. ಮುಂಬೈ ದಾಳಿ; ಲಷ್ಕರ್ ಉಗ್ರ ಸಂಘಟನೆ ನಿಷೇಧಿಸಿದ ಇಸ್ರೇಲ್, ಭಾರತದಿಂದ ‘ಹಮಾಸ್‌’ ಬ್ಯಾನ್?
ನವದೆಹಲಿ/ಜೆರುಸಲೇಂ: ಭಾರತ ಹಾಗೂ ಇಸ್ರೇಲ್‌ ನಡುವೆ ಉತ್ತಮ ಬಾಂಧವ್ಯವಿದೆ. ಅದರಲ್ಲೂ, ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು (Benjamin Netanyahu) ಅವರು ಆತ್ಮೀಯ ಸ್ನೇಹಿತರಾಗಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ 2008ರ ನವೆಂಬರ್‌ 26ರಂದು ಮುಂಬೈ ಮೇಲೆ ಉಗ್ರ ದಾಳಿ (26/11 Mumbai Attack) ನಡೆಸಿದ ಲಷ್ಕರೆ ತಯ್ಬಾ (Lashkar-e-Taiba) ಉಗ್ರ ಸಂಘಟನೆಯನ್ನು ಇಸ್ರೇಲ್‌ ನಿಷೇಧಿಸಿದೆ. ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ : Death Threat: ಮೋದಿ, ಯೋಗಿಗೆ ಜೀವ ಬೆದರಿಕೆ; ಕರೆ ಮಾಡಿದ ಕಮ್ರಾನ್ ಖಾನ್‌ ಯಾರು?

9. ವಿದ್ಯುತ್‌ ಸ್ಪರ್ಶದಿಂದ ತಾಯಿ-ಮಗು ಸಾವಿಗೆ ಇಲಿ ಕಾರಣ ಎಂದ ಸಚಿವ ಜಾರ್ಜ್!
ಬೆಂಗಳೂರು: ವೈಟ್‌ ಫೀಲ್ಡ್‌ ಬಳಿ ಬಸ್ಸಿನಿಂದ ಇಳಿದು ಓಫಾರ್ಮ್‌ ಸರ್ಕಲ್‌ ಬಳಿ ನಡೆದು ಬರುತ್ತಿದ್ದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್‌ ಲೈನ್‌ ತುಳಿದು ತಾಯಿ – ಮಗು ಸಜೀವ ದಹನ (Electricuted Case ) ಆಗಿದ್ದ ಪ್ರಕರಣಕ್ಕೆ ಇಲಿ ಕಾರಣ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ (Energy Minister KJ George) ಹೇಳಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಚಿವರು, ಔದುಂಬರ ಹೋಮ್ಸ್ ಅಪಾರ್ಟ್ಮೆಂಟ್‌ನಲ್ಲಿ ಖಾಸಗಿ ಟ್ರಾನ್ಸ್‌ಫಾರ್ಮರ್ ಅನ್ನು ಹಾಕಿಕೊಳ್ಳಲಾಗಿದ್ದು, ಅದರಲ್ಲಿ ಇಲಿ ಹೋಗಿ ಹಾಳು ಮಾಡಿದ್ದರಿಂಧ ಟ್ರಿಪ್‌ ಆಗಿ ಈ ಅವಘಡ ಉಂಟಾಗಿದೆ ಎಂದು ಹೇಳಿದರು. ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.

10.ಈತ ಸೆಲೆಬ್ರಿಟಿ ಮನೆಗಳ್ಳ; ಖಾಲಿ ಸೈಟ್‌ಗಳೇ ಕದ್ದ ಒಡವೆಗಳ ಸೀಕ್ರೆಟ್‌ ಲಾಕರ್‌
ಬೆಂಗಳೂರು: ಆತ ಕಳ್ಳತನಕ್ಕೆ ಒಬ್ಬಂಟಿಯಾಗಿಯೇ ಇಳಿಯುತ್ತಿದ್ದ. ಒಂಟಿ ಮನೆ ಕಣ್ಣಿಗೆ ಬಿದ್ದರೆ ಸಾಕು ಕ್ಷಣಾರ್ಧದಲ್ಲೇ ಲೂಟಿ ಮಾಡಿ (Theft Case) ಪರಾರಿ ಆಗುತ್ತಿದ್ದ. ಅದರಲ್ಲೂ ಸೆಲೆಬ್ರಿಟಿ ಮನೆಗಳಿಗೆ ಗಾಳ ಹಾಕುತ್ತಿದ್ದ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ. ಸೆಲೆಬ್ರಿಟಿ ಮನೆಗಳ್ಳ ಕಾರ್ತಿಕ್ ಅಲಿಯಾಸ್ ಎಸ್ಕೇಪ್ ಕಾರ್ತಿಕ್ ಬಂಧಿತ ಆರೋಪಿ. ಪೂರ್ಣ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ.
ಮತ್ತಷ್ಟು ವೈರಲ್‌ ಸುದ್ದಿಗಳಿಗಾಗಿ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

HD Kumaraswamy: ಕೆಲವು ವರ್ಗಗಳ ಓಲೈಕೆ ಸಿಎಂ ಅಜೆಂಡಾ: ಎಚ್.ಡಿ. ಕುಮಾರಸ್ವಾಮಿ ಕಿಡಿ

HD Kumaraswamy : ಸಿಎಂ ಸಿದ್ದರಾಮಯ್ಯ ಅವರ ಸಾರ್ವಜನಿಕ ಹೇಳಿಕೆ ಮತ್ತು ಅಜೆಂಡಾವನ್ನು ನೋಡಿದರೆ ಕೆಲವು ವರ್ಗಗಳನ್ನು ಮಾತ್ರ ಓಲೈಕೆಗೆ ಮುಂದಾಗಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

HD Kumaraswamy attack on CM Siddaramaiah and congress Government
Koo

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಈಗ ಮುಸ್ಲಿಂ ಸಮುದಾಯದ (Muslim community) ಓಲೈಕೆ ಮಾಡುವುದಷ್ಟೇ ಅಲ್ಲ. ಅವರ ಸಾರ್ವಜನಿಕ ಹೇಳಿಕೆ ಮತ್ತು ಅಜೆಂಡಾವನ್ನು ನೋಡಿದರೆ ಕೆಲವು ವರ್ಗಗಳನ್ನು ಮಾತ್ರ ಓಲೈಕೆಗೆ ಮುಂದಾಗಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರಗಳ ಚರ್ಚೆ ಆಗಬೇಕು. ಈ ಹಿನ್ನೆಲೆಯಲ್ಲಿ ಈಗ ವೈಯಕ್ತಿಕ ಸೇರಿದಂತೆ ಹಲವು ವಿಚಾರ ಬಗ್ಗೆ ನಾನು ಮಾತನಾಡುವುದಿಲ್ಲ. ಮುಂದೆ ಅದರ ಬಗ್ಗೆ ಮಾತನಾಡುತ್ತೇನೆ. ಉತ್ತರ ಕರ್ನಾಟಕ ಅಭಿವೃದ್ಧಿ ಆಗುತ್ತಿಲ್ಲ. ಆಡಳಿತ ಪಕ್ಷದ ಶಾಸಕರೇ ಮಾತನಾಡಿರುವುದನ್ನು ಗಮನಿಸಿದ್ದೇನೆ ಎಂದು ಹೇಳಿದರು.

ಅಧಿವೇಶನ ಆರಂಭವಾಗಿ ಚರ್ಚೆ ಸುಗಮವಾಗಿ ನಡೆಯುತ್ತಿದೆ. ಇಂದು ಬರಗಾಲದ ಸಂಬಂಧಿಸಿದಂತೆ ಚರ್ಚೆಗೆ ಸಮಯ ನಿಗದಿ ಮಾಡಿದ್ದಾರೆ. ರೈತರು ಹಲವಾರು ಸಮಸ್ಯೆ ಎದುರಿಸುತ್ತಿದ್ದಾರೆ. ಕೊಬ್ಬರಿಗೆ 1250 ರೂಪಾಯಿ ಪ್ರೋತ್ಸಾಹಧನ ಕೊಡುತ್ತೇವೆ ಎಂದು ಹೇಳಿದ್ದಾರೆ. ಈಗ ಆ ವಿಚಾರಕ್ಕೆ ಧರಣಿ ನಡೆಯುತ್ತಿದೆ ಎಂದು ಕುಮಾರಸ್ವಾಮಿ ಹೇಳಿದರು.

ಪಂಚರಾಜ್ಯ ಚುನಾವಣೆ ಫಲಿತಾಂಶವು ದಿಕ್ಸೂಚಿಯಾಗಿದೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿ ಆಗಬೇಕು ಅಂತ ಈಗಾಗಲೇ ಜನರ ತೀರ್ಮಾನ ಮಾಡಿದ್ದಾರೆ. ಸದ್ಯಕ್ಕೆ ಮೈತ್ರಿ ಮಾತುಕತೆ ಕುರಿತು ದೆಹಲಿಗೆ ಹೋಗುತ್ತಿಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಸಿದ್ದರಾಮಯ್ಯರಿಂದ ಮುಸ್ಲಿಂ ಓಲೈಕೆ ಎಂದ ಬಿಜೆಪಿ; ಹೇಳಿದ್ದರಲ್ಲಿ ತಪ್ಪಿಲ್ಲ ಎಂದ ಸಿಎಂ!

ಸೋಮವಾರ (ಡಿ. 4) ಹುಬ್ಬಳ್ಳಿಯಲ್ಲಿ ನಡೆದಿದ್ದ ಸಮಾವೇಶದಲ್ಲಿ ಮುಸ್ಲಿಂ ಸಮುದಾಯದ (Muslim community) ರಕ್ಷಣೆ ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿರುವ ಮಾತಿಗೆ ಈಗ ವಿವಾದ ಸ್ವರೂಪ ಪಡೆದುಕೊಂಡಿದೆ. ಬಿಜೆಪಿ ನಾಯಕರು (BJP leaders) ಸಿಎಂ ವಿರುದ್ಧ ಹರಿಹಾಯ್ದಿದ್ದಾರೆ. ಒಂದು ಸಮುದಾಯದ ಓಲೈಕೆ ರಾಜಕಾರಣ ಇದಾಗಿದೆ. ಈ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಲಾಗುವುದು ಎಂದು ಕಿಡಿಕಾರಿದೆ. ಅಲ್ಲದೆ, ಕಾಂಗ್ರೆಸ್‌ ಪಕ್ಷವನ್ನು ಕಟುವಾದ ಮಾತುಗಳಿಂದ ಟೀಕೆ ಮಾಡಲಾಗಿದೆ. ಆದರೆ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ನಾನು ಹೇಳಿದ್ದರಲ್ಲಿ ತಪ್ಪೇನಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ನಾನು ಹೇಳಿದ್ದರಲ್ಲಿ ತಪ್ಪು ಏನಿದೆ…!? ನಾನು ಹೇಳಿದ್ದು ಒಂದು ನೀವು ಬರೆದಿರುವುದು ಒಂದು. ಒಂದು ಪತ್ರಿಕೆಯವರು ಸರಿಯಾಗಿ ಬರೆದಿದ್ದಾರೆ. ಮುಸ್ಲಿಂ ಸೇರಿದಂತೆ ಎಲ್ಲ ಸಮುದಾಯಗಳ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ ಅಂತ ನಾನು ಹೇಳಿರೋದು. ನೀವು ಅದಕ್ಕೆ ಉಪ್ಪು ಖಾರ ಹಾಕಬೇಡಿ ಎಂದು ಹೇಳಿದರು.

ಇದನ್ನೂ ಓದಿ: Belagavi Winter Session: ಸದನದಲ್ಲಿ ಎಲೆ ಚುಕ್ಕಿ ರೋಗ ಸದ್ದು; ಗಂಭೀರವಾಗಿ ಪರಿಗಣಿಸಿದ ಸರ್ಕಾರ

ಅಲ್ಪಸಂಖ್ಯಾತರನ್ನು ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ

ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ. ಅಲ್ಪಸಂಖ್ಯಾತರಿಗೆ 4 ರಿಂದ 5 ಸಾವಿರ ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿಡುವುದಾಗಿ ಹೇಳಿದ್ದೇನೆ. ಇದನ್ನು ಬಿಜೆಪಿ ಓಲೈಕೆ ರಾಜಕಾರಣ ಎಂದು ಕರೆದರೆ ಹೇಗೆ? ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಮುದಾಯದ ಪರ ಇದ್ದೇವೆ ಎಂದು ಹೇಳಬೇಕಾಗುತ್ತೆ: ಸತೀಶ್‌ ಜಾರಕಿಹೊಳಿ

ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ಸಚಿವ ಸತೀಶ್ ಜಾರಕಿಹೊಳಿ ಸಮರ್ಥನೆ ಮಾಡಿಕೊಂಡಿದ್ದಾರೆ. ಸಮುದಾಯದ ಕಾರ್ಯಕ್ರಮಗಳಲ್ಲಿ ಅಂತಹ ಹೇಳಿಕೆ ಸಹಜ. ಸಮುದಾಯದ ಪರ ಇದ್ದೇವೆ ಎಂದು ಹೇಳಬೇಕಾಗುತ್ತದೆ. ಅದು ಮುಸ್ಲಿಂ ಸಮುದಾಯ ಇರಲಿ ಯಾವುದೇ ಸಮುದಾಯ ಇರಲಿ ಎಂದು ಹೇಳಿದ್ದಾರೆ.

ಮಾಜಿ ಡಿಸಿಎಂ ಅಶ್ವತ್ಥನಾರಾಯಣ ಕಿಡಿ

ಈ ಸರ್ಕಾರ ಬಂದ ದಿನದಿಂದಲೂ ಈ ಕೆಲಸವನ್ನು ಮಾಡುತ್ತಿದ್ದಾರೆ. ಮುಸ್ಲಿಂ ಸಮುದಾಯವನ್ನು ಓಲೈಸುವುದು ಅಷ್ಟೇ ಇವರ ರಾಜಕಾರಣ. ಅಭಿವೃದ್ಧಿ ರಾಜಕಾರಣ ಇಲ್ಲ. ಬರೀ ದ್ವೇಷದ ರಾಜಕಾರಣ ಮಾಡುವುದು ಅಷ್ಟೇ ಇವರ ಕೆಲಸ. ಸದನದಲ್ಲಿ ಈ ಎಲ್ಲ ವಿಚಾರಗಳನ್ನು ಗಂಭೀರವಾಗಿ ಚರ್ಚೆ ಮಾಡುತ್ತೇವೆ ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ ಹೇಳಿದ್ದಾರೆ.

ಇದೊಂದು ಎಡಬಿಡಂಗಿ ಸರ್ಕಾರ: ಆರ್.‌ ಅಶೋಕ್

ಇದೊಂದು ಎಡಬಿಡಂಗಿ ಸರ್ಕಾರವಾಗಿದೆ. ಹಿಂದು ಸೆಕೆಂಡ್ ದರ್ಜೆ ಪ್ರಜೆಗಳಲ್ಲ. ಮುಸ್ಲಿಂ ಓಲೈಕೆ ಮಾಡುವುದನ್ನು ಬಿಡಲಿ. ಒಬ್ಬ ಸಿಎಂ ಒಂದು ಸಮುದಾಯದ ಪರ ನಿಲ್ಲೋದು ಸರಿಯಲ್ಲ. ಸಚಿವ ಜಮೀರ್ ಅಹಮದ್ ಖಾನ್ ಆಯಿತು. ಈಗ ಸಿದ್ದರಾಮಯ್ಯ‌ ಮಾತನಾಡುತ್ತಿದ್ದಾರೆ. ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪ ಮಾಡುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಅವರು ಶಾದಿ ಭಾಗ್ಯ ಮಾಡಿದರು. ಎಸ್ಸಿ ಸಮುದಾಯದಲ್ಲಿ ಬಡವರು ಇರಲಿಲ್ವಾ? ಇವರನ್ನು ಕಳೆದ ಬಾರಿ ಜನ ಸೋಲಿಸಿದ್ದರು. ಈಗ ಅಧಿಕಾರಕ್ಕೆ ಬಂದ ಮೇಲೆ ಮತ್ತೆ ಚಾಳಿ ಶುರು ಮಾಡಿದ್ದಾರೆ. ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗಬೇಕು. ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಇದು ಖಂಡನೀಯ. ಹಿಂದುಗಳು ಕೆಳಗೆ, ಮುಸ್ಲಿಮರು ಮೇಲೆ ಅಂತ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿದರು. ಸಂವಿಧಾನ ಪೀಠಿಕೆಯನ್ನು ಹೇಳುವಾಗ ಎಲ್ಲರೂ ಒಂದೇ ಅಂತ ಹೇಳಲಾಗುವುದು. ಈಗ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಇದು ಬಹುಸಂಖ್ಯಾತ ಹಿಂದುಗಳ ಭಾವನೆಗೆ ಧಕ್ಕೆ ತಂದಿದೆ. ಟಿಪ್ಪು ಸುಲ್ತಾನ್ ಆಚರಣೆಯಂತಹ ಕಾರ್ಯಕ್ರಮವನ್ನು ಬಿಡಬೇಕು ಎಂದು ಆರ್.‌ ಅಶೋಕ್‌ ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಒಂದು ಸಮುದಾಯಕ್ಕೆ ಓಲೈಕೆ ಮಾಡಬಾರದು: ಆರಗ

ಒಬ್ಬ ಮುಖ್ಯಮಂತ್ರಿಯಾಗಿ ಒಂದು ಸಮುದಾಯಕ್ಕೆ ಓಲೈಕೆ ಮಾಡಬಾರದು. ನಾನು ನಿಮಗೆ ರಕ್ಷಣೆ ಕೊಡುತ್ತೇವೆ ಎಂದು ಹೇಳುತ್ತಾರೆ. ಅವರಿಗೆ ಏನು ಭಯ ಇದೆ? ಸಿಎಂ ಅವರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಇಂತಹ ತುಷ್ಟೀಕರಣದಿಂದ ಮೂರು ರಾಜ್ಯವನ್ನು ಕಳೆದುಕೊಂಡಿದ್ದಾರೆ. ಸಿಎಂ ಹೇಳಿಕೆಯನ್ನು ನಾನು ಖಂಡಿಸತ್ತೇನೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ.

ಇದನ್ನೂ ಓದಿ: Illegal Arecanut: ರಾಜ್ಯದಲ್ಲಿ ಅಕ್ರಮ ಅಡಿಕೆ ದಂಧೆ? ಬೆಂಗಳೂರಲ್ಲಿ ಅಂತಾರಾಜ್ಯ ಜಾಲ ಪತ್ತೆ

ಧರ್ಮದ ಹೆಸರಲ್ಲಿ ರಾಜಕಾರಣ: ಚಲವಾದಿ ನಾರಾಯಣ ಸ್ವಾಮಿ

ಪರಿಷತ್‌ ಸದಸ್ಯ ಚಲವಾದಿ ನಾರಾಯಣ ಸ್ವಾಮಿ ಪ್ರತಿಕ್ರಿಯೆ ನೀಡಿ, ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಮರು ಈಗ ಹುಟ್ಟಿದ್ದಾರೆ ಅಂದುಕೊಂಡಿದ್ದಾರೆ. ಅವರಿಗೆ ಈ ದೇಶ ಯಾವುದೇ ಅನ್ಯಾಯ ಮಾಡಿಲ್ಲ‌. ನಮ್ಮ‌ ಸರ್ಕಾರ ಇದ್ದಾಗಲೂ ಸಹಾಯ ಮಾಡಿದೆ. ಅವರು ಧರ್ಮದ ಹೆಸರಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಮುಸಲ್ಮಾನರು ನಮ್ಮ ಪಕ್ಷದಲ್ಲೂ ಇದ್ದಾರೆ. ಕಾಂಗ್ರೆಸ್‌ನವರು ಅವರನ್ನು ಓಲೈಕೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಆಯ್ತು ಮುಸ್ಲಿಂರನ್ನು ಸಿಎಂ ಮಾಡಿದ್ದಾರಾ, ಅಧ್ಯಕ್ಷ ಮಾಡಿದ್ದಾರಾ? ಎಂದು ಪ್ರಶ್ನೆ ಮಾಡಿದರು.

ಏನಿದು ವಿವಾದ?

ಹುಬ್ಬಳ್ಳಿ‌ಯಲ್ಲಿ ಸೋಮವಾರ ನಡೆದಿದ್ದ‌ ಮುಸ್ಲಿಂ ಸಮಾವೇಶದಲ್ಲಿ ಸಿಎಂ‌ ಸಿದ್ದರಾಮಯ್ಯ ಮಾತನಾಡಿ, ರಾಜಕೀಯ ‌ಲಾಭಕ್ಕೆ ಕೆಲವರು ಧರ್ಮಗಳ ನಡುವೆ ಸಂಘರ್ಷ ಉಂಟು ಮಾಡುತ್ತಾರೆ. ಇದರಿಂದ ತಾತ್ಕಾಲಿಕ ಲಾಭ ಸಿಗಬಹುದು. ಪರಸ್ಪರ ಪ್ರೀತಿ ಇರಬೇಕಾದರೆ ನಾವು ಮನುಷ್ಯತ್ವದಿಂದ ಇರಬೇಕು. ಈ ವರ್ಷ ನಾಲ್ಕು ಸಾವಿರ ಕೋಟಿ ಅನುದಾನ ಅಲ್ಪಸಂಖ್ಯಾತರ ಇಲಾಖೆಗೆ ಕೊಟ್ಟಿದ್ದೇವೆ. 10 ಸಾವಿರ ಕೋಟಿ ಹಣ ಅಲ್ಪಸಂಖ್ಯಾತ ಇಲಾಖೆಗೆ ಖರ್ಚು ಮಾಡಬೇಕು ಅನ್ನೋದು ನಮ್ಮ ಉದ್ದೇಶ. ನಾನು ಕೊಟ್ಟಿದ್ದ ಹಣ ಬಿಜೆಪಿ ಸರ್ಕಾರ ಕಡಿಮೆ ಮಾಡಿತ್ತು. ನಿಮ್ಮ ಧಾರ್ಮಿಕ ಕೇಂದ್ರಗಳಿಗೆ ಅನುದಾನ ಬೇಕು. ದೇಶದ ಸಂಪತ್ತಲ್ಲಿ ನಿಮಗೆ ಪಾಲು ಸಿಗಬೇಕು. ದೇಶದ ಸಂಪತ್ತು ನಿಮಗೂ ಹಂಚುತ್ತೇನೆ. ನಿಮಗೆ ಅನ್ಯಾಯ ಮಾಡೋಕೆ ನಾನು ಬಿಡಲ್ಲ. ನಿಮ್ಮನ್ನು ನಾನು ರಕ್ಷಣೆ ಮಾಡುತ್ತೇನೆ ಎಂದು ಹೇಳಿದ್ದರು.

Continue Reading

ಕರ್ನಾಟಕ

Elephant Arjuna : ಕಾಡಿನೊಳಗೆ ಅಂತ್ಯಸಂಸ್ಕಾರ ವಿರೋಧಿಸಿ ಮುತ್ತಿಗೆ; ಪೊಲೀಸರಿಂದ ಲಾಠಿಚಾರ್ಜ್

Elephant Arjuna : ಅರ್ಜುನನ ಅಂತ್ಯಕ್ರಿಯೆಯನ್ನು ಎಲ್ಲರಿಗೂ ಕಾಣುವಂತೆ ರಸ್ತೆ ಸಂಪರ್ಕ ಇರುವ ಜಾಗದಲ್ಲಿ ನಡೆಸಬೇಕು ಎಂದು ಆಗ್ರಹಿಸಿ ಪ್ರತಿಭಟಿಸಿದ ಜನರನ್ನು ಪೊಲೀಸರು ಲಾಠಿ ಚಾರ್ಜ್‌ ಮಾಡಿ ಓಡಿಸಿದ್ದಾರೆ.

VISTARANEWS.COM


on

Elephant Arjuna Lathicharge
Koo

ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಳಸೂರು ಕಾಡಿನಲ್ಲಿ ನಡೆದ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೃತಪಟ್ಟ ಆನೆ ಅರ್ಜುನನ (Elephant Arjuna) ಅಂತ್ಯ ಸಂಸ್ಕಾರವನ್ನು (final rites) ಆತ ಮೃಪಪಟ್ಟ ಕಾಡಿನೊಳಗಿನ ಜಾಗದಲ್ಲಿ ನಡೆಸಬಾರದು, ಎಲ್ಲರಿಗೂ ಕಾಣುವ ರೀತಿಯಲ್ಲಿ ಮೈಸೂರಿನಲ್ಲಿ ಅಥವಾ ಬೇರೆ ಎಲ್ಲಾದರೂ ತೆರೆದ ಜಾಗದಲ್ಲಿ ನಡೆಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ (public protest) ಮತ್ತು ಅಂತ್ಯ ಸಂಸ್ಕಾರ ತಡೆಯಲು ಮುಂದಾದ ಸಾರ್ವಜನಿಕರು ಮತ್ತು ಹೋರಾಟಗಾರರನ್ನು ಪೊಲೀಸರು ಲಾಠಿ ಚಾರ್ಜ್‌ (Police Lathicharge) ಮೂಲಕ ಹಿಮ್ಮೆಟ್ಟಿಸಿದ್ದಾರೆ.

ಸೋಮವಾರ ನಡೆದ ಕಾರ್ಯಾಚರಣೆಯ ವೇಳೆ ಅರ್ಜುನ ಮೃತಪಟ್ಟಿದ್ದ. ದೇಹ ತುಂಬ ಜರ್ಜರಿತವಾಗಿರುವುದರಿಂದ ಅಲ್ಲೇ ಅಂತ್ಯ ಸಂಸ್ಕಾರ ನಡೆಸಲು‌ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ನಿರ್ಧರಿಸಿತ್ತು. ಆದರೆ, ಇದಕ್ಕೆ ಕೆಲವು ಹೋರಾಟಗಾರರು ಆಕ್ಷೇಪಿಸಿದ್ದರು. ಆದರೆ, ಅವರ ವಿರೋಧವನ್ನು ಲೆಕ್ಕಿಸದೆ ಅದೇ ಜಾಗದಲ್ಲಿ ಅಂತ್ಯ ಸಂಸ್ಕಾರ ವಿಧಿ ವಿಧಾನಗಳನ್ನು ಬೆಳಗ್ಗೆ ನಡೆಸಲಾಯಿತು. ಹೋರಾಟಗಾರರ ಧಿಕ್ಕಾರ ಮತ್ತು ಪ್ರತಿಭಟನೆಯ ನಡುವೆಯೇ ಅಂತಿಮ ವಿಧಿಗಳು ನಡೆದವು. ಜಿಲ್ಲಾಧಿಕಾರಿ ಸತ್ಯಭಾಮ, ಎಸ್ಪಿ ಮೊಹಮದ್ ಸುಜೀತಾ, ಡಿಸಿಎಫ್ ಮೋಹನ್ ಕುಮಾರ್ ಅವರ ಸಮ್ಮುಖದಲ್ಲಿ ಮೈಸೂರು ಅರಮನೆಯ ಪುರೋಹಿತರಾದ ಪ್ರಹ್ಲಾದ್‌ ಅವರು ಅಂತಿಮ ವಿಧಿ ವಿಧಾನ ನಡೆಸಿದರು. ದೊಡ್ಡ ಸಂಖ್ಯೆಯಲ್ಲಿ ಬಂದಿದ್ದ ಜನರು ಹೂವಿನ ಹಾರಗಳ ಪುಷ್ಪಾರ್ಚನೆ ನಡೆಸಿದರು.

Elephant Arjuna Lathicharge

ಜಿಲ್ಲಾಡಳಿತದ ವತಿಯಿಂದ ಅರ್ಜುನನಿಗೆ ಸರ್ಕಾರಿ ಗೌರವ ಸಮರ್ಪಣೆ ಮಾಡಲಾಯಿತು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಲಾಯಿತು. ಪೊಲೀಸ್ ಇಲಾಖೆಯ ಸಿಬ್ಬಂದಿಯಿಂದ ಸರ್ಕಾರಿ ಗೌರವದ ವಿಧಿ ಪೂರೈಸಲಾಯಿತು. ರಾಜ್ಯ ಅರಣ್ಯ ಇಲಾಖೆ ಭಾಗವಾಗಿ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಸಹಾಯಕ ಅರಣ್ಯ ಮುಖ್ಯ ಪ್ರದಾನ ಅರಣ್ಯ ಸಂರಕ್ಷಣಾಧಿಕಾರಿ ಶಾಶ್ವತಿ ಮಿಶ್ರ ಗೌರವ ಸಲ್ಲಿಸಿದರು.

Elephant Arjuna Lathicharge

ಇಷ್ಟೆಲ್ಲದರ ನಡುವೆಯೂ ಜನರ ಪ್ರತಿಭಟನೆ ಮುಂದುವರಿದಿತ್ತು. ಅಂತ್ಯಕ್ರಿಯೆಯನ್ನು ಬೇರೆ ಕಡೆ ನಡೆಸಬೇಕು, ಅಲ್ಲಿ ಸ್ಮಾರಕ ನಿರ್ಮಿಸಬೇಕು ಮತ್ತು ಆನೆಯ ಸಾವಿಗೆ ಕಾರಣರಾದ ಎಲ್ಲರಿಗೂ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಈ ನಡುವೆ, ಅರ್ಜುನನ ಪಾರ್ಥಿವ ಶರೀರವನ್ನು ದಫನ ಮಾಡುವುದಕ್ಕಾಗಿ ಜೆಸಿಬಿ ಮೂಲಕ ಗುಂಡಿ ತೋಡಲು ಆರಂಭವಾಗುತ್ತಿದ್ದಂತೆಯೇ ಜನರ ಆಕ್ರೋಶದ ಕಟ್ಟೆ ಒಡೆಯಿತು.

ಇದನ್ನೂ ಓದಿ: Elephant Arjuna : ಎದ್ದೇಳು ರಾಜ, ನಾನು ಬಂದಿದ್ದೀನಿ ; ಅರ್ಜುನನ ಮುಂದೆ ಕಾವಾಡಿಗರ ಕಣ್ಣೀರು!

ಪೊಲೀಸರು ಕಟ್ಟಿದ ತಡೆಗಳನ್ನು ದಾಟಿ ಮುನ್ನುಗ್ಗಲು ಯತ್ನಿಸಿದರು. ಆಗ ಪೊಲೀಸರು ಲಾಠಿ ಚಾರ್ಜ್‌ ನಡೆಸಿದರು. ಲಾಠಿ ಏಟು ಬೀಳುತ್ತಿದ್ದಂತೆಯೇ ಜನರು ದಿಕ್ಕಾಪಾಲಾಗಿ ಓಡಿದರು. ಜನರ ಈ ವರ್ತನೆಯಿಂದ ಪರಿಸರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದೆ.

ಪೊಲೀಸ್‌ ಲಾಠಿಚಾರ್ಜ್‌ ದೃಶ್ಯಗಳು ಇಲ್ಲಿವೆ

Continue Reading

ಕರ್ನಾಟಕ

CM Siddaramaiah : ಸಿದ್ದರಾಮಯ್ಯರಿಂದ ಮುಸ್ಲಿಂ ಓಲೈಕೆ ಎಂದ ಬಿಜೆಪಿ; ಹೇಳಿದ್ದರಲ್ಲಿ ತಪ್ಪಿಲ್ಲ ಎಂದ ಸಿಎಂ!

CM Siddaramaiah : ಬಿಜೆಪಿ ನಾಯಕರು ಸಿಎಂ ವಿರುದ್ಧ ಹರಿಹಾಯ್ದಿದ್ದಾರೆ. ಒಂದು ಸಮುದಾಯದ ಓಲೈಕೆ ರಾಜಕಾರಣ ಇದಾಗಿದೆ. ಈ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಲಾಗುವುದು ಎಂದು ಕಿಡಿಕಾರಿದೆ. ಅಲ್ಲದೆ, ಕಾಂಗ್ರೆಸ್‌ ಪಕ್ಷವನ್ನು ಕಟುವಾದ ಮಾತುಗಳಿಂದ ಟೀಕೆ ಮಾಡಲಾಗಿದೆ. ಆದರೆ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ನಾನು ಹೇಳಿದ್ದರಲ್ಲಿ ತಪ್ಪೇನಿದೆ ಎಂದು ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

CM Siddarmaiah infrot of vidhansoudha
Koo

ಬೆಂಗಳೂರು: ಸೋಮವಾರ (ಡಿ. 4) ಹುಬ್ಬಳ್ಳಿಯಲ್ಲಿ ನಡೆದಿದ್ದ ಸಮಾವೇಶದಲ್ಲಿ ಮುಸ್ಲಿಂ ಸಮುದಾಯದ (Muslim community) ರಕ್ಷಣೆ ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿರುವ ಮಾತಿಗೆ ಈಗ ವಿವಾದ ಸ್ವರೂಪ ಪಡೆದುಕೊಂಡಿದೆ. ಬಿಜೆಪಿ ನಾಯಕರು (BJP leaders) ಸಿಎಂ ವಿರುದ್ಧ ಹರಿಹಾಯ್ದಿದ್ದಾರೆ. ಒಂದು ಸಮುದಾಯದ ಓಲೈಕೆ ರಾಜಕಾರಣ ಇದಾಗಿದೆ. ಈ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಲಾಗುವುದು ಎಂದು ಕಿಡಿಕಾರಿದೆ. ಅಲ್ಲದೆ, ಕಾಂಗ್ರೆಸ್‌ ಪಕ್ಷವನ್ನು ಕಟುವಾದ ಮಾತುಗಳಿಂದ ಟೀಕೆ ಮಾಡಲಾಗಿದೆ. ಆದರೆ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ನಾನು ಹೇಳಿದ್ದರಲ್ಲಿ ತಪ್ಪೇನಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ನಾನು ಹೇಳಿದ್ದರಲ್ಲಿ ತಪ್ಪು ಏನಿದೆ…!? ನಾನು ಹೇಳಿದ್ದು ಒಂದು ನೀವು ಬರೆದಿರುವುದು ಒಂದು. ಒಂದು ಪತ್ರಿಕೆಯವರು ಸರಿಯಾಗಿ ಬರೆದಿದ್ದಾರೆ. ಮುಸ್ಲಿಂ ಸೇರಿದಂತೆ ಎಲ್ಲ ಸಮುದಾಯಗಳ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ ಅಂತ ನಾನು ಹೇಳಿರೋದು. ನೀವು ಅದಕ್ಕೆ ಉಪ್ಪು ಖಾರ ಹಾಕಬೇಡಿ ಎಂದು ಹೇಳಿದರು.

ಇದನ್ನೂ ಓದಿ: Belagavi Winter Session: ಸದನದಲ್ಲಿ ಎಲೆ ಚುಕ್ಕಿ ರೋಗ ಸದ್ದು; ಗಂಭೀರವಾಗಿ ಪರಿಗಣಿಸಿದ ಸರ್ಕಾರ

ಅಲ್ಪಸಂಖ್ಯಾತರನ್ನು ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ

ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ. ಅಲ್ಪಸಂಖ್ಯಾತರಿಗೆ 4 ರಿಂದ 5 ಸಾವಿರ ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿಡುವುದಾಗಿ ಹೇಳಿದ್ದೇನೆ. ಇದನ್ನು ಬಿಜೆಪಿ ಓಲೈಕೆ ರಾಜಕಾರಣ ಎಂದು ಕರೆದರೆ ಹೇಗೆ? ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಮುದಾಯದ ಪರ ಇದ್ದೇವೆ ಎಂದು ಹೇಳಬೇಕಾಗುತ್ತೆ: ಸತೀಶ್‌ ಜಾರಕಿಹೊಳಿ

ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ಸಚಿವ ಸತೀಶ್ ಜಾರಕಿಹೊಳಿ ಸಮರ್ಥನೆ ಮಾಡಿಕೊಂಡಿದ್ದಾರೆ. ಸಮುದಾಯದ ಕಾರ್ಯಕ್ರಮಗಳಲ್ಲಿ ಅಂತಹ ಹೇಳಿಕೆ ಸಹಜ. ಸಮುದಾಯದ ಪರ ಇದ್ದೇವೆ ಎಂದು ಹೇಳಬೇಕಾಗುತ್ತದೆ. ಅದು ಮುಸ್ಲಿಂ ಸಮುದಾಯ ಇರಲಿ ಯಾವುದೇ ಸಮುದಾಯ ಇರಲಿ ಎಂದು ಹೇಳಿದ್ದಾರೆ.

ಮಾಜಿ ಡಿಸಿಎಂ ಅಶ್ವತ್ಥನಾರಾಯಣ ಕಿಡಿ

ಈ ಸರ್ಕಾರ ಬಂದ ದಿನದಿಂದಲೂ ಈ ಕೆಲಸವನ್ನು ಮಾಡುತ್ತಿದ್ದಾರೆ. ಮುಸ್ಲಿಂ ಸಮುದಾಯವನ್ನು ಓಲೈಸುವುದು ಅಷ್ಟೇ ಇವರ ರಾಜಕಾರಣ. ಅಭಿವೃದ್ಧಿ ರಾಜಕಾರಣ ಇಲ್ಲ. ಬರೀ ದ್ವೇಷದ ರಾಜಕಾರಣ ಮಾಡುವುದು ಅಷ್ಟೇ ಇವರ ಕೆಲಸ. ಸದನದಲ್ಲಿ ಈ ಎಲ್ಲ ವಿಚಾರಗಳನ್ನು ಗಂಭೀರವಾಗಿ ಚರ್ಚೆ ಮಾಡುತ್ತೇವೆ ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ ಹೇಳಿದ್ದಾರೆ.

ಇದೊಂದು ಎಡಬಿಡಂಗಿ ಸರ್ಕಾರ: ಆರ್.‌ ಅಶೋಕ್

ಇದೊಂದು ಎಡಬಿಡಂಗಿ ಸರ್ಕಾರವಾಗಿದೆ. ಹಿಂದು ಸೆಕೆಂಡ್ ದರ್ಜೆ ಪ್ರಜೆಗಳಲ್ಲ. ಮುಸ್ಲಿಂ ಓಲೈಕೆ ಮಾಡುವುದನ್ನು ಬಿಡಲಿ. ಒಬ್ಬ ಸಿಎಂ ಒಂದು ಸಮುದಾಯದ ಪರ ನಿಲ್ಲೋದು ಸರಿಯಲ್ಲ. ಸಚಿವ ಜಮೀರ್ ಅಹಮದ್ ಖಾನ್ ಆಯಿತು. ಈಗ ಸಿದ್ದರಾಮಯ್ಯ‌ ಮಾತನಾಡುತ್ತಿದ್ದಾರೆ. ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪ ಮಾಡುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಅವರು ಶಾದಿ ಭಾಗ್ಯ ಮಾಡಿದರು. ಎಸ್ಸಿ ಸಮುದಾಯದಲ್ಲಿ ಬಡವರು ಇರಲಿಲ್ವಾ? ಇವರನ್ನು ಕಳೆದ ಬಾರಿ ಜನ ಸೋಲಿಸಿದ್ದರು. ಈಗ ಅಧಿಕಾರಕ್ಕೆ ಬಂದ ಮೇಲೆ ಮತ್ತೆ ಚಾಳಿ ಶುರು ಮಾಡಿದ್ದಾರೆ. ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗಬೇಕು. ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಇದು ಖಂಡನೀಯ. ಹಿಂದುಗಳು ಕೆಳಗೆ, ಮುಸ್ಲಿಮರು ಮೇಲೆ ಅಂತ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿದರು. ಸಂವಿಧಾನ ಪೀಠಿಕೆಯನ್ನು ಹೇಳುವಾಗ ಎಲ್ಲರೂ ಒಂದೇ ಅಂತ ಹೇಳಲಾಗುವುದು. ಈಗ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಇದು ಬಹುಸಂಖ್ಯಾತ ಹಿಂದುಗಳ ಭಾವನೆಗೆ ಧಕ್ಕೆ ತಂದಿದೆ. ಟಿಪ್ಪು ಸುಲ್ತಾನ್ ಆಚರಣೆಯಂತಹ ಕಾರ್ಯಕ್ರಮವನ್ನು ಬಿಡಬೇಕು ಎಂದು ಆರ್.‌ ಅಶೋಕ್‌ ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಒಂದು ಸಮುದಾಯಕ್ಕೆ ಓಲೈಕೆ ಮಾಡಬಾರದು: ಆರಗ

ಒಬ್ಬ ಮುಖ್ಯಮಂತ್ರಿಯಾಗಿ ಒಂದು ಸಮುದಾಯಕ್ಕೆ ಓಲೈಕೆ ಮಾಡಬಾರದು. ನಾನು ನಿಮಗೆ ರಕ್ಷಣೆ ಕೊಡುತ್ತೇವೆ ಎಂದು ಹೇಳುತ್ತಾರೆ. ಅವರಿಗೆ ಏನು ಭಯ ಇದೆ? ಸಿಎಂ ಅವರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಇಂತಹ ತುಷ್ಟೀಕರಣದಿಂದ ಮೂರು ರಾಜ್ಯವನ್ನು ಕಳೆದುಕೊಂಡಿದ್ದಾರೆ. ಸಿಎಂ ಹೇಳಿಕೆಯನ್ನು ನಾನು ಖಂಡಿಸತ್ತೇನೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ.

ಇದನ್ನೂ ಓದಿ: Illegal Arecanut: ರಾಜ್ಯದಲ್ಲಿ ಅಕ್ರಮ ಅಡಿಕೆ ದಂಧೆ? ಬೆಂಗಳೂರಲ್ಲಿ ಅಂತಾರಾಜ್ಯ ಜಾಲ ಪತ್ತೆ

ಧರ್ಮದ ಹೆಸರಲ್ಲಿ ರಾಜಕಾರಣ: ಚಲವಾದಿ ನಾರಾಯಣ ಸ್ವಾಮಿ

ಪರಿಷತ್‌ ಸದಸ್ಯ ಚಲವಾದಿ ನಾರಾಯಣ ಸ್ವಾಮಿ ಪ್ರತಿಕ್ರಿಯೆ ನೀಡಿ, ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಮರು ಈಗ ಹುಟ್ಟಿದ್ದಾರೆ ಅಂದುಕೊಂಡಿದ್ದಾರೆ. ಅವರಿಗೆ ಈ ದೇಶ ಯಾವುದೇ ಅನ್ಯಾಯ ಮಾಡಿಲ್ಲ‌. ನಮ್ಮ‌ ಸರ್ಕಾರ ಇದ್ದಾಗಲೂ ಸಹಾಯ ಮಾಡಿದೆ. ಅವರು ಧರ್ಮದ ಹೆಸರಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಮುಸಲ್ಮಾನರು ನಮ್ಮ ಪಕ್ಷದಲ್ಲೂ ಇದ್ದಾರೆ. ಕಾಂಗ್ರೆಸ್‌ನವರು ಅವರನ್ನು ಓಲೈಕೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಆಯ್ತು ಮುಸ್ಲಿಂರನ್ನು ಸಿಎಂ ಮಾಡಿದ್ದಾರಾ, ಅಧ್ಯಕ್ಷ ಮಾಡಿದ್ದಾರಾ? ಎಂದು ಪ್ರಶ್ನೆ ಮಾಡಿದರು.

ಏನಿದು ವಿವಾದ?

ಹುಬ್ಬಳ್ಳಿ‌ಯಲ್ಲಿ ಸೋಮವಾರ ನಡೆದಿದ್ದ‌ ಮುಸ್ಲಿಂ ಸಮಾವೇಶದಲ್ಲಿ ಸಿಎಂ‌ ಸಿದ್ದರಾಮಯ್ಯ ಮಾತನಾಡಿ, ರಾಜಕೀಯ ‌ಲಾಭಕ್ಕೆ ಕೆಲವರು ಧರ್ಮಗಳ ನಡುವೆ ಸಂಘರ್ಷ ಉಂಟು ಮಾಡುತ್ತಾರೆ. ಇದರಿಂದ ತಾತ್ಕಾಲಿಕ ಲಾಭ ಸಿಗಬಹುದು. ಪರಸ್ಪರ ಪ್ರೀತಿ ಇರಬೇಕಾದರೆ ನಾವು ಮನುಷ್ಯತ್ವದಿಂದ ಇರಬೇಕು. ಈ ವರ್ಷ ನಾಲ್ಕು ಸಾವಿರ ಕೋಟಿ ಅನುದಾನ ಅಲ್ಪಸಂಖ್ಯಾತರ ಇಲಾಖೆಗೆ ಕೊಟ್ಟಿದ್ದೇವೆ. 10 ಸಾವಿರ ಕೋಟಿ ಹಣ ಅಲ್ಪಸಂಖ್ಯಾತ ಇಲಾಖೆಗೆ ಖರ್ಚು ಮಾಡಬೇಕು ಅನ್ನೋದು ನಮ್ಮ ಉದ್ದೇಶ. ನಾನು ಕೊಟ್ಟಿದ್ದ ಹಣ ಬಿಜೆಪಿ ಸರ್ಕಾರ ಕಡಿಮೆ ಮಾಡಿತ್ತು. ನಿಮ್ಮ ಧಾರ್ಮಿಕ ಕೇಂದ್ರಗಳಿಗೆ ಅನುದಾನ ಬೇಕು. ದೇಶದ ಸಂಪತ್ತಲ್ಲಿ ನಿಮಗೆ ಪಾಲು ಸಿಗಬೇಕು. ದೇಶದ ಸಂಪತ್ತು ನಿಮಗೂ ಹಂಚುತ್ತೇನೆ. ನಿಮಗೆ ಅನ್ಯಾಯ ಮಾಡೋಕೆ ನಾನು ಬಿಡಲ್ಲ. ನಿಮ್ಮನ್ನು ನಾನು ರಕ್ಷಣೆ ಮಾಡುತ್ತೇನೆ ಎಂದು ಹೇಳಿದ್ದರು.

Continue Reading

ಕರ್ನಾಟಕ

Elephant Arjuna : ಎದ್ದೇಳು ರಾಜ, ನಾನು ಬಂದಿದ್ದೀನಿ ; ಅರ್ಜುನನ ಮುಂದೆ ಕಾವಾಡಿಗರ ಕಣ್ಣೀರು!

Elephant Death : ಹಾಸನದ ಯಳಸೂರು ಕಾಡಿನಲ್ಲಿ ನಡೆದ ಕಾರ್ಯಾಚರಣೆಯ ವೇಳೆ ಮೃತಪಟ್ಟ ಅರ್ಜುನನ ಅಂತ್ಯಸಂಸ್ಕಾರ ಅದೇ ಜಾಗದಲ್ಲಿ ನಡೆಯುತ್ತಿದೆ. ಒಂದೆಡೆ ಪ್ರತಿಭಟನೆ, ಇನ್ನೊಂದು ಕಡೆ ಕಣ್ಣೀರ ಧಾರೆ ಸುರಿಯುತ್ತಿದೆ.

VISTARANEWS.COM


on

Arjuna death
Koo

ಹಾಸನ: ಎದ್ದೇಳು ರಾಜ ನಾನು ಬಂದಿದೀನಿ.. ಬಾ ಮನೆಗೆ ಹೋಗೋಣ : ಹೀಗೊಂದು ಕಣ್ಣೀರಿಡುತ್ತಿದ್ದಾರೆ ಕಾಡಾನೆ ಕಾರ್ಯಾಚರಣೆ ವೇಳೆ ಮರಣ ಹೊಂದಿದ ಆನೆ ಅರ್ಜುನನ ಮಾವುತ. ಮೈಸೂರು ದಸರಾದಲ್ಲಿ ತಾಯಿ ಚಾಮುಂಡೇಶ್ವರಿಯನ್ನು ತನ್ನ ಬೆನ್ನಮೇಲೆ ಹೊತ್ತು ಮೆರೆಸಿದ ವೀರ ಅರ್ಜುನ (Elephant Arjuna) ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಪುಂಡಾನೆ ಸೆರೆಗೆ ನಡೆದ ಕಾರ್ಯಾಚರಣೆಯ (Elephant Operation) ವೇಳೆ ಅಸು ನೀಗಿದ್ದ. ಪ್ರಾಣ ಕಳೆದುಕೊಂಡ ಜಾಗದಲ್ಲೇ ಅಂತ್ಯ ಸಂಸ್ಕಾರದ (final rites) ವಿಧಿ ವಿಧಾನಗಳು ನಡೆಯುತ್ತಿವೆ. ಈ ಹೊತ್ತಿನಲ್ಲಿ ಆನೆಯನ್ನು ತಬ್ಬಿಕೊಂಡು ಮಾವುತರು ಕಣ್ಣೀರು ಹಾಕುತ್ತಿರುವ ದೃಶ್ಯ ಎಲ್ಲರೂ ಮರುಗುವಂತೆ ಮಾಡಿದೆ.

Arjuna death Final rites Kavadi
ಕಣ್ಣೀರು ಹಾಕುತ್ತಿರುವ ಕಾವಾಡಿ

ಅರ್ಜುನನ್ನು ಪ್ರೀತಿಯಿಂದ ಪಳಗಿಸಿ, ಅವನ ಆಟಪಾಠಗಳಲ್ಲೇ ಮರೆತಿದ್ದ ಕಾವಾಡಿಗರಿಗೆ ತಮ್ಮ ಮಗುವನ್ನು ಕಳೆದುಕೊಂಡಷ್ಟೇ ದುಖ ಆಗುತ್ತಿದೆ. ಅದರಲ್ಲೂ ಅರ್ಜುನನ ಸಾವು ಅನ್ಯಾಯ ಎಂಬ ಮಾತುಗಳು ಕಾವಾಡಿಗರ ವಲಯದಲ್ಲಿದ್ದು ಕಣ್ಣೀರನ್ನು ಇನ್ನಷ್ಟು ಹೆಚ್ಚಿಸಿದೆ.

ಎದ್ದೇಳು ರಾಜ ನಾನು ಬಂದಿದೀನಿ.. ಬಾ ಮನೆಗೆ ಹೋಗೋಣ ಎನ್ನುತ್ತಾ ಅರ್ಜುನನ್ನು ಎಬ್ಬಿಸಲು ಪ್ರಯತ್ನ ಮಾಡಿದ ಕಾವಾಡಿ, ʻʻನಿನಗೆ ಮುದ್ದೆ ಮಾಡಿ ಕೊಡ್ತಿನಿ.. ಊಟ ಕೊಡ್ತಿನಿ.. ರಾಜ ನಾನು ಬಂದಿದಿನಿ ಎದ್ದೇಳುʼʼ ಎಂದೆಲ್ಲ ಕಣ್ಣೀರು ಹಾಕಿದ ಕಾವಾಡಿ ಕೊನೆಗೆ, ʻʻಅನ್ಯಾಯವಾಗಿ ನಿನ್ನ ಇಲ್ಲಿ ಕರ್ಕೊಬಂದು ಸಾಯಿಸಿ ಬಿಟ್ರಲ್ಲʼʼ ಎಂದು ಬಿಕ್ಕಿ ಬಿಕ್ಕಿ ಅತ್ತರು.

Arjuna death Final rites

ಮೈಸೂರಿನಲ್ಲಿ ಅಂತ್ಯ ಸಂಸ್ಕಾರಕ್ಕೆ ಒತ್ತಾಯ

ಕಾರ್ಯಾರಣೆಯ ವೇಳೆ ಕಾಡಾನೆಯ ದಾಳಿಗೆ ಒಳಗಾದ ಅರ್ಜುನ ಅಲ್ಲೇ ಪ್ರಾಣ ಕಳೆದುಕೊಂಡಿದ್ದ. ಆತನ ಪಾರ್ಥಿವ ಶರೀರದ ಅಂತ್ಯಕ್ರಿಯೆಯ ವಿಧಿ ವಿಧಾನಗಳನ್ನು ಮೃತಪಟ್ಟ ಜಾಗದಲ್ಲೇ ನಡೆಸಲಾಗುತ್ತಿದೆ. ಮೈಸೂರು ಅರಮನೆಯ ಪುರೋಹಿತರಾದ ಪ್ರಹ್ಲಾದ್‌ ಅವರು ವಿಧಿ ವಿಧಾನಗಳ ನೇತೃತ್ವ ವಹಿಸಿದ್ದಾರೆ. ಹಾಸನ ಡಿಸಿ ಸತ್ಯಭಾಮ ಹಾಗೂ ಎಸ್ಪಿ ಮೊಹಮ್ಮದ್ ಸುಜೀತಾ ಅವರು ಆಗಮಿಸಿದ್ದಾರೆ. ಈ ನಡುವೆ, ಅಂತ್ಯ ಸಂಸ್ಕಾರವನ್ನು ಬೇರೆ ಜಾಗದಲ್ಲಿ ಅದರಲ್ಲೂ ಮೈಸೂರಿನಲ್ಲಿ ನಡೆಸಬೇಕು ಎಂದು ಕೆಲವು ಹೋರಾಟಗಾರರು ಒತ್ತಾಯಿಸುತ್ತಿದ್ದಾರೆ. ಅಂತ್ಯ ಸಂಸ್ಕಾರವನ್ನು ಬೇರೆ ಕಡೆ ನಡೆಸಿ ಅಲ್ಲೊಂದು ಸ್ಮಾರಕವನ್ನು ಕಟ್ಟಬೇಕು, ಅದು ಎಲ್ಲರಿಗೂ ಕಾಣುವಂತಿರಬೇಕು ಎನ್ನುವುದು ಹೋರಾಟಗಾರರ ಒತ್ತಾಯ.

ಆದರೆ, ಅರ್ಜುನನಿಗೆ ಈಗಾಗಲೇ ಸಾಕಷ್ಟು ನೋವಾಗಿದೆ. ಇಲ್ಲಿಂದ ಸ್ಥಳಾಂತರ ಮಾಡಿ ತೊಂದರೆ ಕೊಡುವುದು ಬೇಡ, ಇಲ್ಲೇ ಅಂತ್ಯಸಂಸ್ಕಾರ ಮಾಡಲು ಅವಕಾಶ ಕೊಡಿ ಎಂದು ಮೈಸೂರು ಅರಮನೆಯ ಪುರೋಹಿತರು ಮನವಿ ಮಾಡಿಕೊಂಡಿದ್ದಾರೆ.

Arjuna death Final rites Kavadi

ಅರ್ಜುನನ ನೋಡಲು ಜನ ಸಾಗರ

ಮೃತ ಅರ್ಜುನ ನೋಡಲು ಮತ್ತು ಅವನ ಅಂತ್ಯ ಸಂಸ್ಕಾರದ ವೇಳೆ ಅಂತಿಮ ನಮನ ಸಲ್ಲಿಸಲು ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿದ್ದಾರೆ. ಪೊಲೀಸರು ಜನರನ್ನು ನಿಯಂತ್ರಿಸಲು ಮುಂದಾಗುತ್ತಿದ್ದಂತೆ ಜನರ ಪ್ರತಿಭಟನೆ ಹೆಚ್ಚಿತು. ಹೀಗಾಗಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ.

ಅರ್ಜುನನ ಮೃತದೇಹದ ಮುಂದೆಯೂ ಕೆಲವರು ಅಧಿಕಾರಿಗಳಿಗೆ ಧಿಕ್ಕಾರ ಕೂಗುತ್ತಿದ್ದಾರೆ. ಅವನ ಸಾವಿಗೆ ಕಾರಣರಾದ ಅಧಿಕಾರಿಗಳನ್ನು ಶಿಕ್ಷಿಸಿ ಎಂಬ ಬೇಡಿಕೆ ಮುಂದಿಟ್ಟಿದ್ದಾರೆ. ಜತೆಗೆ ಪ್ರಕರಣವನ್ನು ಸಿಐಡಿಗೆ ಒಪ್ಪಿಸುವಂತೆ ಆಗ್ರಹಿಸುತ್ತಿದ್ದಾರೆ.

ಕಾಡಿನಲ್ಲಿ ಅಂತ್ಯ ಸಂಸ್ಕಾರ ಬೇಡ, ಸ್ಮಾರಕ ನಿರ್ಮಿಸಿ: ಶಾಸಕ ಮಂಜು ಒತ್ತಾಯ

ಈ ನಡುವೆ, ಕಾಡಿನ ನಡುವೆ‌ ಅರ್ಜುನನ ಅಂತ್ಯ ಸಂಸ್ಕಾರ ನಡೆಸಬಾರದು, ರಸ್ತೆ ಸಂಪರ್ಕ ಹಾಗು ಮೂಲಭೂತ ಸೌಲಭ್ಯಗಳು ಇರುವ ಜಾಗದಲ್ಲಿ ಅಂತ್ಯಕ್ರಿಯೆ ಮಾಡಬೇಕು. ಅರ್ಜುನನ ಹೆಸರಿನಲ್ಲಿ ಸ್ಮಾರಕ ಮಾಡಬೇಕು ಎಂದು ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಒತ್ತಾಯ ಮಾಡಿದ್ದಾರೆ.

ʻʻಅರ್ಜುನ ರಾಜ್ಯದ ಜನರ ಪ್ರೀತಿಪಾತ್ರ ಆನೆ. ದಸರಾದಲ್ಲಿ ನಾಡದೇವರೆ ಚಾಮುಂಡೇಶ್ಚರಿ ಹೊತ್ತ ಅರ್ಜುನನ ನೆನಪು ಉಳಿಯಬೇಕು. ಅರ್ಜುನನ ನೆನಪು ಉಳಿಯಲು ಸ್ಮಾರಕ ನಿರ್ಮಾಣ ಆಗಬೇಕುʼʼ ಎಂದು ಅವರು ಹೇಳಿದ್ದಾರೆ. ಅರಣ್ಯ ಸಚಿವರು ಕರೆದಿರುವ ಸಭೆಯಲ್ಲಿ ಸ್ಮಾರಕ ನಿರ್ಮಾಣಕ್ಕೆ ಒತ್ತಾಯ ಮಾಡುವುದಾಗಿ ಅವರು ಹೇಳಿದರು.

Arjuna death Final rites

ಉನ್ನತ ಮಟ್ಟದ ತನಿಖೆಗೆ ವಾಟಾಳ್‌ ನಾಗರಾಜ್‌ ಆಗ್ರಹ

ʻʻಸುಮಾರು 22 ವರ್ಷಗಳ ಕಾಲ ಮೈಸೂರು ದಸರಾದಲ್ಲಿ ಭಾಗವಹಿಸಿದ್ದ ಅರ್ಜುನ ಸಾವನ್ನಪ್ಪಿರುವುದು ಅತ್ಯಂತ ಗಂಭೀರವಾದ ಸಂಗತಿ. ಅರ್ಜುನನ ಸಾವಿಗೆ ಕಾರಣ ಯಾರು ಎಂಬುದನ್ನು ತಿಳಿಯಬೇಕು. ಹಾಗಾಗಿ ಅರಣ್ಯ ಇಲಾಖೆಯವರು ಈ ಬಗ್ಗೆ ಉನ್ನತ ಮಟ್ಟದ ತನಿಖೆ ಮಾಡಬೇಕುʼʼ ಎಂದು ಕ‌ನ್ನಡ ಚಳವಳಿ ಮುಖಂಡ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.

ʻʻಅರ್ಜುನನ ಸಾವಿನಿಂದ ಕೋಟಿ ಕೋಟಿ ಜನರ ಮನಸ್ಸಿಗೆ ನೋವಾಗಿದೆ‌. ಅರ್ಜುನ ಎಲ್ಲರ ಪ್ರೀತಿಗೆ ಪಾತ್ರನಾಗಿದ್ದ. ಕಾಡಾನೆಗಳ ದಾಳಿಯಿಂದ ಅರ್ಜುನ ಸಾವನ್ನಪ್ಪಿರುವುದರಿಂದ ನಿಜಕ್ಕೂ ನೋವಾಗಿದೆ. ಅರ್ಜುನನ ಸಾವಿನ ಬಗ್ಗೆ ತನಿಖೆ ಆಗದಿದ್ದರೆ ಕನ್ನಡ ಚಳುವಳಿ ವಾಟಾಳ್ ಪಕ್ಷ ತೀವ್ರ ಹೋರಾಟ ನಡೆಸಲಿದೆʼʼ ಎಂದು ಕನ್ನಡ ಚಳವಳಿ ಮುಖಂಡ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

Continue Reading
Advertisement
HD Kumaraswamy attack on CM Siddaramaiah and congress Government
ಕರ್ನಾಟಕ2 mins ago

HD Kumaraswamy: ಕೆಲವು ವರ್ಗಗಳ ಓಲೈಕೆ ಸಿಎಂ ಅಜೆಂಡಾ: ಎಚ್.ಡಿ. ಕುಮಾರಸ್ವಾಮಿ ಕಿಡಿ

Revanth Reddy
ದೇಶ13 mins ago

Revanth Reddy: ರೇವಂತ್‌ ರೆಡ್ಡಿಯೇ ತೆಲಂಗಾಣ ಮುಖ್ಯಮಂತ್ರಿ: ರಾಹುಲ್ ಗಾಂಧಿ‌

Kanisena Sukhdeva
ದೇಶ20 mins ago

Sukhdev Singh Gogamedi: ರಜಪೂತ್ ಕರ್ಣಿ ಸೇನಾ ಮುಖಂಡ ಸುಖ್​ದೇವ್​​ ಗೋಗಮೇಡಿ ಗುಂಡಿಟ್ಟು ಹತ್ಯೆ

fighter
ಬಾಲಿವುಡ್23 mins ago

Deepika Padukone: ಪೈಲಟ್‌ ಅವತಾರದಲ್ಲಿ ದೀಪಿಕಾ; ‘ಫೈಟರ್‌’ ಫಸ್ಟ್‌ ಲುಕ್‌ ಹೊರಬಿತ್ತು

Layoffs: Another 1000 layoffs at Baijus
ತಂತ್ರಜ್ಞಾನ38 mins ago

Byju’s Debt: ಸಿಬ್ಬಂದಿ ಸಂಬಳಕ್ಕಾಗಿ ಮನೆ ಅಡವಿಟ್ಟ ಬೈಜೂಸ್ ಕಂಪನಿ ಮಾಲಿಕ!

Elephant Arjuna Lathicharge
ಕರ್ನಾಟಕ44 mins ago

Elephant Arjuna : ಕಾಡಿನೊಳಗೆ ಅಂತ್ಯಸಂಸ್ಕಾರ ವಿರೋಧಿಸಿ ಮುತ್ತಿಗೆ; ಪೊಲೀಸರಿಂದ ಲಾಠಿಚಾರ್ಜ್

1 lakh in cash
ವೈರಲ್ ನ್ಯೂಸ್45 mins ago

Viral News: ಹಸಿವಿನಿಂದ ಭಿಕ್ಷುಕ ಸಾವು; ಆತನ ಬಳಿ ಇತ್ತು 1 ಲಕ್ಷ ರೂ!

India bloc Leaders
ದೇಶ1 hour ago

INDIA Alliance: ಬಿಜೆಪಿ ಭರ್ಜರಿ ಗೆಲುವಿನ ಬಳಿಕ ʼಇಂಡಿಯಾ’ ಕೂಟದಲ್ಲಿ ಕೋಲಾಹಲ! ಮೀಟಿಂಗ್ ಕ್ಯಾನ್ಸಲ್

CM Siddarmaiah infrot of vidhansoudha
ಕರ್ನಾಟಕ2 hours ago

CM Siddaramaiah : ಸಿದ್ದರಾಮಯ್ಯರಿಂದ ಮುಸ್ಲಿಂ ಓಲೈಕೆ ಎಂದ ಬಿಜೆಪಿ; ಹೇಳಿದ್ದರಲ್ಲಿ ತಪ್ಪಿಲ್ಲ ಎಂದ ಸಿಎಂ!

Arjuna death
ಕರ್ನಾಟಕ2 hours ago

Elephant Arjuna : ಎದ್ದೇಳು ರಾಜ, ನಾನು ಬಂದಿದ್ದೀನಿ ; ಅರ್ಜುನನ ಮುಂದೆ ಕಾವಾಡಿಗರ ಕಣ್ಣೀರು!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ11 hours ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ1 day ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ2 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ2 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ3 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ4 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ4 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ5 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ5 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

ಟ್ರೆಂಡಿಂಗ್‌