ಭ್ರಷ್ಟಾಚಾರಕ್ಕೆ ಬೂಸ್ಟ್‌ ನೀಡಿದ್ದೇ ಸಿದ್ದರಾಮಯ್ಯ, ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣನೂ ಹುಚ್ಚ: ಬಿ.ಸಿ. ಪಾಟೀಲ - Vistara News

ಕರ್ನಾಟಕ

ಭ್ರಷ್ಟಾಚಾರಕ್ಕೆ ಬೂಸ್ಟ್‌ ನೀಡಿದ್ದೇ ಸಿದ್ದರಾಮಯ್ಯ, ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣನೂ ಹುಚ್ಚ: ಬಿ.ಸಿ. ಪಾಟೀಲ

ಬಿಜೆಪಿ ಸರ್ಕಾರದ ಮೇಲೆ 40% ಭ್ರಷ್ಟಾಚಾರ ಆರೋಪ ಮಾಡಿರುವ ಕಾಂಗ್ರೆಸ್ ಪಕ್ಷ ಹಾಗೂ ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ ವಿರುದ್ಧ ಸಚಿವ ಬಿ.ಸಿ.ಪಾಟೀಲ ಕಿಡಿಕಾರಿದ್ದಾರೆ.

VISTARANEWS.COM


on

bc patil gadaga
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗದಗ: ಲೋಕಾಯುಕ್ತ ನಿಶಕ್ತಗೊಳಿಸಲು ಎಸಿಬಿ ಸೃಷ್ಟಿಸಿದ್ದೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಅವರ ಮೇಲಿನ ಭ್ರಷ್ಟಾಚಾರ ಆರೋಪ ರಕ್ಷಿಸಿಕೊಳ್ಳಲು ಎಸಿಬಿ ರಚನೆ ಮಾಡಿದ್ದಾರೆ. ಹಾಸಿಗೆ, ದಿಂಬು ಖರೀದಿಯಲ್ಲೂ ಶೇಕಡಾ 100ರಷ್ಟು ಭ್ರಷ್ಟಾಚಾರ ಎಸಗಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಆರೋಪಿಸಿದರು.

ಗದಗ ಜಿಲ್ಲೆಯ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಭಾನುವಾರ ಜಿಲ್ಲೆಯ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿ, ಬಿಜೆಪಿ ಸರ್ಕಾರದ ಮೇಲೆ 40% ಭ್ರಷ್ಟಾಚಾರ ಆರೋಪ ಮಾಡಿರುವ ಕಾಂಗ್ರೆಸ್ ಪಕ್ಷ ಹಾಗೂ ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ ವಿರುದ್ಧ ಬಿ.ಸಿ.ಪಾಟೀಲ ಕಿಡಿಕಾರಿ, ಭ್ರಷ್ಟಾಚಾರಕ್ಕೆ ಬೂಸ್ಟ್‌ ನೀಡಿದ್ದೇ ಸಿದ್ದರಾಮಯ್ಯ ಎಂದು ನೇರ ಆರೋಪ ಮಾಡಿದ್ದಾರೆ.

‘ಕೆಂಪಣ್ಣ’ ಅವನೊಬ್ಬ ಹುಚ್ಚ:ಬಿ.ಸಿ.ಪಾಟೀಲ
ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ ಅವನೊಬ್ಬ ಹುಚ್ಚ. ಸಾಕ್ಷ್ಯಾಧಾರ ಇಲ್ಲದೆ ಕಳೆದೊಂದು ವರ್ಷದಿಂದ ಆರೋಪಿಸುತ್ತಾ ಬಂದಿದ್ದಾರೆ. ಇದನ್ನು ಹುಚ್ಚುತನವಲ್ಲದೆ ಬೇರೇನು ಹೇಳಬೇಕು? ಎಂದು ಪ್ರಶ್ನೆ ಮಾಡಿದರು.

ಇದನ್ನೂ ಓದಿ | BJP ಜನಸ್ಪಂದನ | ಪ್ರವೀಣ್ ನೆಟ್ಟಾರು ಕುಟುಂಬದವರಿಗೆ ಸಿಎಂ ಕಚೇರಿಯಲ್ಲಿ ನೌಕರಿ ನೀಡುವುದಾಗಿ ಬೊಮ್ಮಾಯಿ ಘೋಷಣೆ

ಕಾಂಗ್ರೆಸ್‌ನಲ್ಲಿ ಉತ್ಸವಗಳೇ ನಡೆಯುತ್ತಿವೆ
ದಲಿತೋತ್ಸವ ವಿಚಾರವಾಗಿ ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ, “ಕಾಂಗ್ರೆಸ್‌ನಲ್ಲಿ ಉತ್ಸವಗಳೇ ನಡೆಯುತ್ತಿವೆ. ಸಿದ್ದರಾಮೋತ್ಸವ, ಡಿಕೆಶಿ ಉತ್ಸವ, ಜಮೀರ್ ಉತ್ಸವ, ಜಿ.ಪರಮೇಶ್ವರ ಉತ್ಸವಗಳೇ ನಡೆಯೋದು. ನಮ್ಮದು ಜನಸ್ಪಂದನ ಕಾರ್ಯಕ್ರಮ ಎಂದು ಹೇಳಿದರು.

ಎಚ್.ಕೆ. ಪಾಟಿಲ್ ವಿರುದ್ಧ ಅಸಮಧಾನ
ತಾಲೂಕಿನ ಕುರ್ತುಕೋಟಿ ಗ್ರಾಮದ ಬೆಳೆ ಹಾನಿ ಪ್ರದೇಶಕ್ಕೆ ಬಿ.ಸಿ. ಪಾಟೀಲ ಭೇಟಿ ನೀಡಿದ ಸಂದರ್ಭದಲ್ಲಿ ರೈತರು ಸ್ಥಳೀಯ ಶಾಸಕ ಎಚ್.ಕೆ. ಪಾಟೀಲ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಘಟನೆ ಜರುಗಿದೆ. ಎಚ್.ಕೆ. ಪಾಟೀಲರು ಕಾಂಗ್ರೆಸ್ ಕಾರ್ಯಕರ್ತರ ಹೊಲಗಳಿಗಷ್ಟೇ ಭೇಟಿ ನೀಡುತ್ತಾರೆ. ‘ಬಿ’ ಕೆಟಗಿರಿ ಪರಿಗಣಿಸಿ ಮಳೆಯಿಂದ ಹಾಳಾದ ಜಮೀನುಗಳನ್ನು ‘ಬಿ’ ಕೆಟಗರಿ ಎಂದು ಪರಿಗಣಿಸಿ. ‘ಸಿ’ ಕೆಟಗರಿಯಲ್ಲಿ ಕೇವಲ 50 ಸಾವಿರ ರೂ. ಪರಿಹಾರ ಮಾತ್ರ ಸಿಗುತ್ತದೆ ಎಂದು ರೈತರು ಅಳಲು ತೋಡಿಕೊಂಡರು.

ನಾನೇ ಪೊಲೀಸ್ ಗಿರಿ ಮಾಡ್ಬೇಕಾ?
ನೆರೆ ಪ್ರದೇಶಗಳ ಭೇಟಿ ವೇಳೆ ಸ್ಥಳದಲ್ಲಿ ಕಾರುಗಳೇ ತುಂಬಿದ್ದರಿಂದ ಟ್ರಾಫಿಕ್ ಕಿರಿಕಿರಿ ಉಂಟಾಗಿತ್ತು. ಆಗ ಬಿ.ಸಿ.ಪಾಟೀಲ್‌, “ನಾನೇ ಪೊಲೀಸ್ ಗಿರಿ ಮಾಡಬೇಕು” ಎನ್ನುತ್ತಾ ಕಾರ್‌ನಿಂದ ಕೆಳಗಿಳಿದ ಸಚಿವರು, ಕಾರ್ಯಕರ್ತರ ಕಾರುಗಳನ್ನು ಸ್ಥಳದಿಂದ ಮುಂದಕ್ಕೆ ಹೋಗುವಂತೆ ನೋಡಿಕೊಂಡರು.

ಘೇರಾವ್‌ ಹಾಕಿ ಊರಿಗೆ ಕರೆದೊಯ್ದರು
ಗದಗ ಸಮೀಪದ ಕುರ್ತಕೋಟಿ ಗ್ರಾಮದ ವೀಕ್ಷಣೆ ಮಾಡಿ ತೆರಳುತ್ತಿದ್ದ ಸಚಿವ ಬಿ.ಸಿ. ಪಾಟೀಲ ಅವರ ಕಾರಿಗೆ ಅಂತೂರು-ಬೆಂತೂರು ಗ್ರಾಮಸ್ಥರು ಘೇರಾವ್ ಹಾಕಿ ತಮ್ಮೂರಿಗೆ ಕರೆದುಕೊಂಡು ಹೋದ ಪ್ರಸಂಗ ಜರುಗಿತು. ಸಚಿವ ಪಾಟೀಲ ಕಾರಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು, ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹಾಳಾಗಿದೆ. ಮಧ್ಯದಲ್ಲೇ ಮರಳಿದರೆ ಹೇಗೆ? ನಮ್ಮೂರಿಗೂ ಬನ್ನಿ ಎಂದು ಪಟ್ಟುಹಿಡಿದರು. ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಗ್ರಾಮಕ್ಕೆ ಸಚಿವರು ತೆರಳಿದರು.

ಇದನ್ನೂ ಓದಿ | BJP ಜನಸ್ಪಂದನ | ವಲಸಿಗ ಶಾಸಕರನ್ನು ವೀರರು ಎಂದ ಸಿಎಂ ಬೊಮ್ಮಾಯಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಂಡ್ಯ

SSLC Result 2024: ಪಾಸ್ ಆಗಿದ್ದರೂ ಫೇಲ್ ಎಂದು ತಿಳಿದು ನೇಣಿಗೆ ಶರಣಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

SSLC Result 2024 : ಮಂಡ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು (SSLC Student) ನೇಣಿಗೆ ಶರಣಾಗಿದ್ದಾಳೆ. ಪರೀಕ್ಷೆಯಲ್ಲಿ ಪಾಸ್‌ ಆಗಿದ್ದರೂ, ಫೇಲಾದೆ ಎಂದು ತಪ್ಪಾಗಿ ಭಾವಿಸಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಳೆ.

VISTARANEWS.COM


on

By

SSLC Result 2024
Koo

ಮಂಡ್ಯ: ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Result 2024) ಪ್ರಕಟಗೊಂಡಿದೆ. ಮಂಡ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ. ಪರೀಕ್ಷೆಯಲ್ಲಿ ಪಾಸ್ ಆಗಿದ್ದರೂ ಫೇಲ್ ಎಂದು ತಿಳಿದು ನೇಣಿಗೆ ಶರಣಾದ್ದಾಳೆ.

ಅಮೃತ (16) ನೇಣಿಗೆ ಶರಣಾದ ವಿದ್ಯಾರ್ಥಿನಿ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಅಮೃತ ನಗರಕೆರೆ ಗ್ರಾಮದ ಸರ್ಕಾರಿ ಅನುದಾನಿತ ಪೂರ್ಣಿಮಾ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ಅಮೃತ ಶೇ.57 ಅಂಕ ಪಡೆದು ತೇರ್ಗಡೆ ಹೊಂದಿದ್ದಳು.

ಆದರೆ ಪರೀಕ್ಷೆಯಲ್ಲಿ ಫೇಲ್‌ ಆಗಿಬಿಟ್ಟೆ ಎಂದು ತಿಳಿದು ಮನೆಯಲ್ಲಿ ಯಾರು ಇಲ್ಲದಾಗ ನೇಣಿಗೆ ಶರಣಾಗಿದ್ದಾಳೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ:SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಕಟ್ಟಡದ ಮೇಲಿಂದ ಬಿದ್ದು ಯುವಕ ಸೂಸೈಡ್‌

ಬೆಂಗಳೂರು: ಪಿ.ಜಿ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆ (Self harming) ಮಾಡಿಕೊಂಡಿದ್ದಾನೆ. ಬೆಂಗಳೂರಿನ ವೈಟ್ ಫಿಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ಘಟನೆ ನಡೆದಿದೆ. ಕಲಬುರಗಿ ಮೂಲದ 28ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನಾ ಸ್ಥಳಕ್ಕೆ ವೈಟ್ ಫಿಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕ ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದ ಎನ್ನಲಾಗಿದೆ. ಆದರೆ ಅಲೆದಾಡಿ ಸುಸ್ತಾದ ಯುವಕನಿಗೆ ಎಲ್ಲೂ ಕೆಲಸ ಸಿಕ್ಕಿರಲಿಲ್ಲ ಎನ್ನಲಾಗಿದೆ. ಇದರಿಂದ ಮನನೊಂದು ತಾನು ವಾಸವಿದ್ದ ಪಿಜಿ ಕಟ್ಟಡದ ಮೇಲಿಂದ ಬಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿಕ್ಷಣ

SSLC Result 2024: ಎಸ್‌ಎಸ್‌ಎಲ್‌ಸಿ ‌ಉತ್ತರ ಪತ್ರಿಕೆ ಮರು ಮೌಲ್ಯಮಾಪನ, ಮರುಎಣಿಕೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ನಲ್ಲಷ್ಟೆ ಅವಕಾಶ

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಮೇ 16 ಕೊನೇ ದಿನವಾಗಿದೆ. ಮರು ಎಣಿಕೆಗಾಗಿ ಭೌತಿಕವಾಗಿ ಅರ್ಜಿ ಸಲ್ಲಿಸುವುದನ್ನು ರದ್ದುಗೊಳಿಸಲಾಗಿದೆ. ಹೀಗಾಗಿ ಆನ್‌ಲೈನ್‌ ಮೂಲಕವೇ ಪ್ರತಿ ಪಡೆದು ಸಲ್ಲಿಸಬೇಕಾಗುತ್ತದೆ.

VISTARANEWS.COM


on

By

SSLC Result 2024
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ (SSLC Result 2024) ಫಲಿತಾಂಶವು ಮೇ 9ರಂದು ಪ್ರಕಟಿಸಲಾಗಿದೆ. ಇದೀಗ ಪರೀಕ್ಷೆಯ ಉತ್ತರ ಪತ್ರಿಕೆಗಳ ಪ್ರತಿಗಳನ್ನು ವಿದ್ಯಾರ್ಥಿಗಳು ಪಡೆಯಬಹುದಾಗಿದೆ. ಸ್ಕ್ಯಾನ್‌ ಪ್ರತಿ, ಮರು ಎಣಿಕೆ ಮತ್ತು ಮರುಮೌಲ್ಯಮಾಪನಕ್ಕೆ ಮಂಡಳಿಯ ವೆಬ್‌ಸೈಟ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಮೇ 9ರಿಂದ 16ರವರೆಗೆ ಉತ್ತರ ಪತ್ರಿಕೆಗಳ ಸ್ಕ್ಯಾನ್‌ ಪ್ರತಿಯನ್ನು ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಮರುಎಣಿಕೆಗೆ ಮತ್ತು ಮರು ಮೌಲ್ಯಮಾಪನಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಮೇ 13ರಿಂದ 22ವರೆಗೆ ಅರ್ಜಿ ಸಲ್ಲಿಸಬಹುದು ಜತೆಗೆ ಶುಲ್ಕವನ್ನು ಪಾವತಿಬಹುದಾಗಿದೆ.

ಇನ್ನೂ ನೇರವಾಗಿ ಮರು ಎಣಿಕೆಗಾಗಿ ಭೌತಿಕವಾಗಿ ಅರ್ಜಿ ಸಲ್ಲಿಸುವಂತಿಲ್ಲ. ಬದಲಿಗೆ ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕಿದೆ. ಮರು ಎಣಿಕೆ ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಂಬಂಧಪಟ್ಟ ವಿಷಯದ ಉತ್ತರ ಪತ್ರಿಕೆಯ ಸ್ಕ್ಯಾನ್‌ ಪ್ರತಿಯನ್ನು ಪಡೆಯಬೇಕು.

ಇದನ್ನೂ ಓದಿ: SSLC 2 Exam Time Table : ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2ರ ಡೇಟ್‌ ಫಿಕ್ಸ್‌; ವೇಳಾಪಟ್ಟಿ ಹೀಗಿದೆ

ಸ್ಕ್ಯಾನ್‌ ಪ್ರತಿಯನ್ನು ಪಡೆದ ನಂತರ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಿದ್ದರೆ, ಅದನ್ನೂ ಖಚಿತಪಡಿಸಿಕೊಂಡ ನಂತರವಷ್ಟೇ ಮರುಎಣಿಕೆಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಮರುಎಣಿಕೆಗಾಗಿ ಭೌತಿಕವಾಗಿ ಅರ್ಜಿಗಳನ್ನು ಸ್ವೀಕರಿಸುವುದನ್ನು ರದ್ದುಗೊಳಿಸಲಾಗಿದೆ. ಮರುಎಣಿಕೆ ಬಯಸುವ ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕಾಗಿರುತ್ತದೆ.

ಇನ್ನೂ ಮರುಎಣಿಕೆಯು ಉಚಿತವಾಗಿದ್ದು ಪ್ರತ್ಯೇಕ ಶುಲ್ಕವಿರುವುದಿಲ್ಲ. ಮರು ಎಣಿಕೆ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಿದ್ದಲ್ಲಿ ಪರಿಶೀಲಿಸಿ, ನಂತರ ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.

ಸಹಾಯವಾಣಿಗೆ ಕರೆ ಮಾಡಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ, ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್‌ ಪಡೆಯುವ ಮತ್ತು ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಯಾವುದೇ ಮಾಹಿತಿ ಪಡೆಯಬಹುದಾಗಿದೆ. ಹೀಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸಹಾಯವಾಣಿಯನ್ನು ಆರಂಭವಿಸಿದೆ. ವಿದ್ಯಾರ್ಥಿಗಳು ಸಹಾಯವಾಣಿ ಸಂಖ್ಯೆ 080 23310075, 23310076ಕ್ಕೆ ಕರೆ ಮಾಡಬಹುದು..

SSLC Result 2024: ಎಸ್‌ಎಸ್‌ಎಲ್‌ಸಿ 2, 3ನೇ ಪರೀಕ್ಷೆ ಬರೆಯುವವರಿಗೆ ಗುಡ್‌ ನ್ಯೂಸ್‌! ಇರಲಿದೆ ಸ್ಪೆಷಲ್‌ ಕ್ಲಾಸ್‌

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. ಅಲ್ಲದೆ, ಫಲಿತಾಂಶವನ್ನು ಸುಧಾರಣೆ ಮಾಡಿಕೊಳ್ಳುವವರು, ಅನುತ್ತೀರ್ಣ ಹೊಂದಿದವರ ಸಲುವಾಗಿ ವಿಶೇಷ ಬೋಧನೆ ವ್ಯವಸ್ಥೆಯನ್ನು ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.

ಅಂದರೆ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಫಲಿತಾಂಶ ಬಂದಿಲ್ಲ. ಕೆಲವು ಕಟ್ಟುನಿಟ್ಟಿನ ಕ್ರಮದಿಂದಾಗಿ ಭಾರಿ ಇಳಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಶೇಕಡಾ 20ರಷ್ಟು ಗರೇಸ್‌ ಮಾರ್ಕ್ಸ್‌ ಅನ್ನು ಕೊಟ್ಟು ಪಾಸ್‌ ಮಾಡಲಾಗಿತ್ತು. ಮುಂದೆ ಬರುವ 2, 3ನೇ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ವಿದ್ಯಾರ್ಥಿಗಳು ತೆಗೆದುಕೊಳ್ಳುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಕ್ರಮವನ್ನು ತೆಗೆದುಕೊಂಡಿದೆ. ಅಂಥ ಮಕ್ಕಳಿಗೆ ಮುಂದಿನ ಒಂದು ತಿಂಗಳಲ್ಲಿ “ಪರಿಹಾರ ಬೋಧನೆ” ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ.

ಈ ಬಗ್ಗೆ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಪರಿಹಾರ ಕ್ರಮವಾಗಿ ಶಿಕ್ಷಣ ಇಲಾಖೆಯು ಪರೀಕ್ಷೆ-1 ರಲ್ಲಿ ಉತ್ತಮ ಸಾಧನೆ ಮಾಡದ ಅಥವಾ ತಮ್ಮ ಅಂಕಗಳನ್ನು ಉತ್ತಮ ಪಡಿಸಿಕೊಳ್ಳಲು ಬಯಸುವ ಎಲ್ಲ ವಿದ್ಯಾರ್ಥಿಗಳಿಗೆ ಮುಂದಿನ ಒಂದು ತಿಂಗಳಲ್ಲಿ ಪರಿಹಾರ ಬೋಧನೆಯನ್ನು ಆಯೋಜಿಸುತ್ತದೆ. ಇದರಿಂದ ವಿದ್ಯಾರ್ಥಿಗಳು ಪರೀಕ್ಷೆ-2 ಮತ್ತು ಪರೀಕ್ಷೆ-3ಕ್ಕೆ ಉತ್ತಮವಾಗಿ ಸಿದ್ಧರಾಗಲು ಸಾಧ್ಯವಾಗುತ್ತದೆ ಎಂದು ಹೇಳಿದೆ.

ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

ಶಿಕ್ಷಣ ಇಲಾಖೆ ಈ ಬಾರಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟಿದೆ. ಬರೋಬ್ಬರಿ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌ ಅನ್ನು ಕೊಡಲಾಗಿದೆ.

ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದ್ದು, ಶೇಕಡಾ 20 ಗ್ರೇಸ್ ಮಾರ್ಕ್ಸ್‌ ಕೊಟ್ಟರೂ ಕಡಿಮೆ ಫಲಿತಾಂಶ ದಾಖಲಾಗಿದೆ. ವಿದ್ಯಾರ್ಥಿ ಹಿತದೃಷ್ಟಿಯಿಂದ ಗ್ರೇಸ್‌ ಮಾರ್ಕ್ಸ್‌ ನೀಡಿದೆ ಎನ್ನಲಾಗಿದೆ. ಒಟ್ಟು 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್‌ ಸಿಕ್ಕಿದೆ.

ವೆಬ್‌ ಕಾಸ್ಟಿಂಗ್‌ನಲ್ಲಿ ನಡೆದ ಪರೀಕ್ಷೆ

ಪ್ರಪ್ರಥಮ ಬಾರಿಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿದೆ. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಆದರೆ, ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ. ಮೊದಲ ಬಾರಿಗೆ ವೆಬ್‌ ಕಾಸ್ಟಿಂಗ್ ವಿಧಾನವನ್ನು ಪರಿಚಯಿಸಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಡಿಮೆಯಾಗಿರುವ ಫಲಿತಾಂಶವನ್ನು ಉತ್ತಮ ಪಡಿಸಲು ಸರ್ಕಾರ ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ, ಒಂದು ಬಾರಿಯ ಕ್ರಮವಾಗಿ, 2024ರ ಎಲ್ಲ 3 ಎಸ್ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಎಲ್ಲ ವಿಷಯಗಳಲ್ಲಿ ನೀಡುವ ಕೃಪಾಂಕಗಳನ್ನು ಆಕರ್ಷಿಸಲು ಪಡೆಯಬೇಕಾದ ಅರ್ಹ ಅಂಕಗಳನ್ನು ಶೇ. 35 ರಿಂದ ಶೇ. 25ಕ್ಕೆ ಇಳಿಸಲಾಗಿದೆ ಮತ್ತು ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು, ಮೇಲಿನ ಕೋಷ್ಟಕದಲ್ಲಿನಂತೆ, 73.40% ಆಗಿದೆ. ಮುಂಬರುವ ವರ್ಷಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೂತನ ವ್ಯವಸ್ಥೆಗೆ ಉತ್ತಮವಾಗಿ ಹೊಂದಿಕೊಳ್ಳುವುದರಿಂದ ಫಲಿತಾಂಶ ವೃದ್ಧಿಯ ಅಗತ್ಯವಿರುವುದಿಲ್ಲ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Self Harming: ಕಟ್ಟಡದ ಮೇಲಿಂದ ಬಿದ್ದು ಯುವಕ ಸೂಸೈಡ್‌

Bengaluru News : ಕೆಲಸ ಸಿಗದೆ ಇರುವುದಕ್ಕೆ ಬೇಸರಗೊಂಡ ಯುವಕನೊಬ್ಬ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ (Self harming) ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Self Harming Man commits suicide after falling from PG in Bengaluru
Koo

ಬೆಂಗಳೂರು: ಪಿ.ಜಿ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆ (Self harming) ಮಾಡಿಕೊಂಡಿದ್ದಾನೆ. ಬೆಂಗಳೂರಿನ ವೈಟ್ ಫಿಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ಘಟನೆ ನಡೆದಿದೆ. ಕಲಬುರಗಿ ಮೂಲದ 28ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನಾ ಸ್ಥಳಕ್ಕೆ ವೈಟ್ ಫಿಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕ ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದ ಎನ್ನಲಾಗಿದೆ. ಆದರೆ ಅಲೆದಾಡಿ ಸುಸ್ತಾದ ಯುವಕನಿಗೆ ಎಲ್ಲೂ ಕೆಲಸ ಸಿಕ್ಕಿರಲಿಲ್ಲ ಎನ್ನಲಾಗಿದೆ. ಇದರಿಂದ ಮನನೊಂದು ತಾನು ವಾಸವಿದ್ದ ಪಿಜಿ ಕಟ್ಟಡದ ಮೇಲಿಂದ ಬಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Viral News: ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ: ಹೊಸ ಕಾರಿನ ಪೂಜೆ ವೇಳೆ ನಡೆಯಿತು ಅವಘಡ; ಇಲ್ಲಿದೆ ವಿಡಿಯೊ

Crime News: ಮಕ್ಕಳನ್ನು ಕೊಂದ ಬಳಿಕ ಕಟ್ಟಡದಿಂದ ಜಿಗಿದು ಮಹಿಳೆ ಆತ್ಮಹತ್ಯೆ; ಡೆತ್‌ನೋಟ್‌ನಲ್ಲಿ ಏನಿದೆ?

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಮಹಿಳೆಯೊಬ್ಬಳು ತನ್ನಿಬ್ಬರು ಮಕ್ಕಳನ್ನು ಕೊಂದು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ ತಾನು ಈ ನಿರ್ಧಾರಕ್ಕೆ ಬಂದಿರುವುದಾಗಿ ಆರೋಪಿಸಿದ್ದಾಳೆ. ಮೃತರನ್ನು ಅಶ್ವಿನಿ ನಿಕುಂಭ್‌ (30) ಮತ್ತು ಮಕ್ಕಳಾದ ಆರಾಧ್ಯಾ (8) ಹಾಗೂ ಅಗಸ್ತ್ಯ (2) ಎಂದು ಗುರುತಿಸಲಾಗಿದೆ (Crime News).

ʼʼಅಶ್ವಿನಿ ಆತ್ಮಹತ್ಯೆ ಮಾಡುವ ಮುನ್ನ ಮಕ್ಕಳಿಗೆ ವಿಷ ನೀಡಿದ್ದಾರೆʼʼ ಎಂದು ಪೊಲೀಸರು ತಿಳಿಸಿದ್ದು, ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಬುಧವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಅಶ್ವಿನಿ ಕೋನಾರ್ಕ್‌ ನಗರದ ಅಪಾರ್ಟ್‌ಮೆಂಟ್‌ನ ಟೆರೇಸ್‌ನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಳು. ಘಟನೆ ಸ್ಥಳಕ್ಕೆ ತಲುಪಿದ ಪೊಲೀಸರಿಗೆ ಬಳಿಕ ಆಕೆಯ ಮಕ್ಕಳ ಶವವೂ ಕಂಡು ಬಂದಿತ್ತು. ಈ ವೇಳೆ ಆಕೆಯ ಪತಿ ಊರಿನಲ್ಲಿ ಇರಲಿಲ್ಲ. ಹೀಗಾಗಿ ಆಕೆಯೇ ಮಕ್ಕಳಿಗೆ ವಿಷ ಉಣಿಸಿ ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಊಹಿಸಿದ್ದಾರೆ.

ಡೆತ್‌ನೋಟ್‌ ಪತ್ತೆ

ಪರಿಶೀಲನೆ ವೇಳೆ ಪೊಲೀಸರಿಗೆ ಅಶ್ವಿನಿ ಬರೆದಿದ್ದಾಳೆ ಎನ್ನಲಾದ ಡೆತ್‌ನೋಟ್‌ ಪತ್ತೆಯಾಗಿದೆ. ಇದರಲ್ಲಿ ಆಕೆ ಪತಿ ಸ್ವಪ್ನಿಲ್‌ ಕಿರುಕುಳ ನೀಡುತ್ತಿರುವ ಬಗ್ಗೆ ಉಲ್ಲೇಖಿಸಿದ್ದಾಳೆ.‌ ಜತೆಗೆ ಸಾಯುವ ಮುನ್ನ ವಿಡಿಯೊವನ್ನು ರೆಕಾರ್ಡ್‌ ಮಾಡಿದ್ದಾಳೆ. ಸ್ವಪ್ನಿಲ್‌ ನಿರಂತರ ಹಿಂಸೆ ನೀಡುತ್ತಿರುವುದರಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ಆಕೆ ತನ್ನ ಸಂಬಂಧಿಕರಿಗೆ ಕಳುಹಿಸಿದ ವಿಡಿಯೊದಲ್ಲಿ ತಿಳಿಸಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ಕೃತ್ಯ ನಡೆಯುವ ವೇಳೆ ಸ್ವಪ್ನಿಲ್‌ ಕೆಲಸದ ನಿಮಿತ್ತ ಪುಣೆಗೆ ತೆರಳಿದ್ದರು. ಸದ್ಯ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ.

ಇದನ್ನೂ ಓದಿ: ಶಾಲೆಗೆ ಹೋಗದ್ದಕ್ಕೆ ಬೈದ ತಾಯಿ, ಬಾಲಕ ಆತ್ಮಹತ್ಯೆ

ನೆಚ್ಚಿನ ಶ್ವಾನ ಮರಿ ನಾಪತ್ತೆಯಾದ ಕೊರಗಿನಿಂದ ಆತ್ಮಹತ್ಯೆ

ತನ್ನ ಪ್ರೀತಿಯ ಶ್ವಾನ ನಾಪತ್ತೆಯಾದ ಹಿನ್ನೆಲೆಯಲ್ಲಿ ಕೊರಗಿನಿಂದ 12 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಏಪ್ರಿಲ್‌ 27ರಂದು ಹರಿಯಾಣದಲ್ಲಿ ನಡೆದಿತ್ತು. ʼʼಐದು ದಿನಗಳ ಹಿಂದೆ ನಮ್ಮ ಸಾಕು ನಾಯಿ ಕಾಣೆಯಾಗಿತ್ತು. ಈ ಶ್ವಾನ ಮತ್ತು ಬಾಲಕಿಯ ಮಧ್ಯೆ ಸುಮಾರು 3 ತಿಂಗಳಿಂದ ಉತ್ತಮ ಬಾಂಧವ್ಯ ರೂಪುಗೊಂಡಿತ್ತುʼʼ ಎಂದು ಘಟನೆಯ ಬಗ್ಗೆ ಮನೆಯವರು ತಿಳಿಸಿದ್ದರು. ʼʼಶ್ವಾನ ಕಾಣೆಯಾದಾಗಿನಿಂದ ಆಕೆ ಖಿನ್ನತೆಗೆ ಒಳಗಾಗಿದ್ದಳು. ಬಳಿಕ ತೀವ್ರ ಚಿಂತೆಗೆ ಒಳಗಾಗಿದ್ದ ಅವಳು ಸರಿಯಾಗಿ ಆಹಾರವನ್ನೂ ಸೇವಿಸುತ್ತಿರಲಿಲ್ಲʼʼ ಎಂದು ಅವರು ಹೇಳಿದ್ದರು. ಕುಟುಂಬಸ್ಥರು ಆಕೆಯನ್ನು ಸಮಾಧಾನಪಡಿಸಲು ಎಷ್ಟೇ ಪ್ರಯತ್ನಿಸಿದರೂ ನಾಯಿಮರಿಯನ್ನು ಕಳೆದುಕೊಂಡ 6ನೇ ತರಗತಿಯ ವಿದ್ಯಾರ್ಥಿನಿಯ ದುಃಖವನ್ನು ಕಡಿಮೆ ಮಾಡಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.

ಬಾಲಕಿಯ ತಾಯಿ ಮತ್ತು ಸಹೋದರಿ ದಿನಸಿ ಖರೀದಿಗಾಗಿ ಮನೆಯಿಂದ ಹೊರ ಹೋಗಿದ್ದರು. ಮನೆಯಲ್ಲಿ ಒಬ್ಬಳೇ ಇದ್ದ ಬಾಲಕಿ ಈ ವೇಳೆ ಶಾಕಿಂಗ್‌ ನಿರ್ಧಾರ ಕೈಗೊಂಡಿದ್ದಳು. ನೇಣು ಬಿಗಿದುಕೊಂಡು ಜೀವ ಕಳೆದುಕೊಂಡಿದ್ದಳು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Pejawar Swamiji: ದೇವಾಲಯಗಳ ಆಡಳಿತ ಸಂಪೂರ್ಣವಾಗಿ ಹಿಂದೂಗಳಿಗೆ ಒಪ್ಪಿಸಬೇಕು: ಪೇಜಾವರ ಶ್ರೀ

Pejawar Swamiji: ಧಾರ್ಮಿಕ ಮತ್ತು ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲಾ ಹಿಂದೂ ದೇವಾಲಯಗಳನ್ನು ಆಯಾ ಪ್ರದೇಶದ ಹಿಂದೂಗಳ ಆಡಳಿತಕ್ಕೆ ನೀಡಬೇಕು ಎಂದು ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ದೇಶದ ಬಹುತೇಕ ಅನ್ಯಧರ್ಮಿಯರ ಪ್ರಾರ್ಥನಾ ಮಂದಿರಗಳನ್ನು ಆಯಾ ಸಮುದಾಯಕ್ಕೆ ಬಿಟ್ಟುಕೊಡಲಾಗಿದೆ. ಆದರೆ ಹಿಂದೂ ದೇವಾಲಯಗಳ ಆಡಳಿತ ಮಾತ್ರ ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಸರ್ಕಾರ ನಿಯಂತ್ರಿಸುತ್ತಿದೆ. ಇದು ಸರಿಯಲ್ಲ ಎಂದು ಶ್ರೀಗಳು ತಿಳಿಸಿದ್ದಾರೆ.

VISTARANEWS.COM


on

Administration of Hindu temples should be handed over to Hindus says Pejawara Shri
Koo

ಗಂಗಾವತಿ: ಧಾರ್ಮಿಕ ಮತ್ತು ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲಾ ಹಿಂದೂ ದೇವಾಲಯಗಳನ್ನು ಆಯಾ ಪ್ರದೇಶದ ಹಿಂದೂಗಳ ಆಡಳಿತಕ್ಕೆ ನೀಡಬೇಕು ಎಂದು ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ (Pejawar Swamiji) ಹೇಳಿದರು.

ನಗರದಲ್ಲಿ ಈ ಕುರಿತು ಮಾತನಾಡಿ, ದೇಶದ ಬಹುತೇಕ ಅನ್ಯ ಧರ್ಮಿಯರ ಪ್ರಾರ್ಥನಾ ಮಂದಿರಗಳನ್ನು ಆಯಾ ಸಮುದಾಯಕ್ಕೆ ಬಿಟ್ಟುಕೊಡಲಾಗಿದೆ. ಆದರೆ ಹಿಂದೂ ದೇವಾಲಯಗಳ ಆಡಳಿತ ಮಾತ್ರ ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಸರ್ಕಾರ ನಿಯಂತ್ರಿಸುತ್ತಿದೆ. ಇದು ಸರಿಯಲ್ಲ. ಆಯಾ ಧರ್ಮದ ವ್ಯಾಪ್ತಿಗೆ ಆಯಾ ದೇಗುಲಗಳ ಆಡಳಿತ ನೀಡುವಂತೆ ಸರ್ವೋಚ್ಛ ನ್ಯಾಯಾಲಯ ಆದೇಶ ಇದೆ. ಆದರೆ ಸರ್ಕಾರಗಳು ಎಲ್ಲಿಯೂ ಈ ಆದೇಶವನ್ನು ಜಾರಿಗೆ ತರುತ್ತಿಲ್ಲ. ಈ ಕಾರ್ಯ ತಕ್ಷಣದಿಂದ ಆಗಬೇಕು ಎಂದು ತಿಳಿಸಿದರು.

ಇದನ್ನೂ ಓದಿ: SSLC 2 Exam Time Table : ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2ರ ಡೇಟ್‌ ಫಿಕ್ಸ್‌; ವೇಳಾಪಟ್ಟಿ ಹೀಗಿದೆ

ಐಎಎಸ್‌ನಂತ ಪರೀಕ್ಷೆಯಲ್ಲಿ ದಲಿತರು ಹಿಂದುಳಿಯಲು ಅಥವಾ ಆಯಕಟ್ಟಿನ ಹುದ್ದೆಗೆ ಆಯ್ಕೆ ಹೊಂದದಿರಲು ಮುಖ್ಯ ಕಾರಣ ಮೇಲ್ವರ್ಗದವರು ಎಂಬ ರಾಹುಲ್ ಗಾಂಧಿ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಶ್ರೀಗಳು, ಇದೊಂದು ಆಧಾರ ರಹಿತ ಆರೋಪ. ಪರೀಕ್ಷೆಗಳು ಎಲ್ಲರಿಗೂ ಒಂದೇ ಇರುತ್ತದೆ. ಎಲ್ಲರಿಗೂ ನೂರು ಅಂಕ ಇರುತ್ತದೆ. ಅಭ್ಯರ್ಥಿಗಳು ಗ್ರಹಿಸುವ ಸಾಮರ್ಥ್ಯದ ಮೇಲೆ ಅಂಕಗಳು ಸಿಗುತ್ತವೆಯೇ ವಿನಃ, ಮೇಲ್ವರ್ಗ ಮತ್ತು ಕೆಳವರ್ಗ ಎಂಬ ತಾರತಮ್ಯ ನೀತಿಯಿಂದಲ್ಲ ಎಂದರು.

ದೇಶದಲ್ಲಿ ಹಿಂದೂಗಳ ಸಂಖ್ಯೆ ಕುಸಿಯುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಶ್ರೀಗಳು, ದೇಶದಲ್ಲಿ ಸಮಾನ ನಾಗರಿಕ ಕಾಯ್ದೆ ಜಾರಿಯಾದರೆ ಇಂತಹ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆದಷ್ಟು ತ್ವರಿತವಾಗಿ ಮಸೂದೆ ಮಂಡನೆಯಾಗಿ ಕಾಯ್ದೆ ಜಾರಿಯಾಗಬೇಕು ಎಂದರು.

ಐದಾರು ಶತಮಾನಗಳ ರಾಮಮಂದಿರ ನಿರ್ಮಾಣ ಕನಸು ಇಂದು ನನಸಾಗಿದೆ. ಇಲ್ಲಿಗೆ ನಮ್ಮ ಕಾರ್ಯ ಮುಗೀತು ಎಂದು ಸುಮ್ಮನೆ ಕೂರುವ ಹಾಗಿಲ್ಲ. ಆ ಮಂದಿರವನ್ನು ಸೂರ್ಯ-ಚಂದ್ರರು ಇರೋವರೆಗೂ ಉಳಿಸಿಕೊಂಡು ಹೋಗುವುದು ಸವಾಲಿನ ಕೆಲಸವಾಗಿದೆ.

ಇದನ್ನೂ ಓದಿ: Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

ಮಂದಿರದ ಮೇಲೆ ಯಾವುದೇ ದಾಳಿಯಾಗದಂತೆ, ಧಕ್ಕೆಯಾಗದಂತೆ ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಭಾರತೀಯ ಅದರಲ್ಲೂ ಮುಖ್ಯವಾಗಿ ಪ್ರತಿಯೊಬ್ಬ ಹಿಂದೂ ಈ ಕೆಲಸ ಮಾಡಬೇಕು. ಹಿಂದೂಗಳು ಹಿಂದೂಗಳಾಗಿ ಉಳಿದರೆ ಮಾತ್ರ ಈ ಕೆಲಸ ಸಾಧ್ಯ ಎಂದು ತಿಳಿಸಿದರು.

Continue Reading
Advertisement
Silent Heart Attack
ಆರೋಗ್ಯ30 seconds ago

Silent Heart Attack: ಏನಿದು ಸೈಲೆಂಟ್‌ ಹಾರ್ಟ್‌ ಅಟ್ಯಾಕ್‌? ಇದರ ಲಕ್ಷಣಗಳೇನು?

SSLC Result 2024
ಮಂಡ್ಯ4 mins ago

SSLC Result 2024: ಪಾಸ್ ಆಗಿದ್ದರೂ ಫೇಲ್ ಎಂದು ತಿಳಿದು ನೇಣಿಗೆ ಶರಣಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

IPL 2024
ಪ್ರಮುಖ ಸುದ್ದಿ5 mins ago

IPL 2024 : ಸ್ಟೊಯ್ನಿಸ್ ಕಪಾಳಕ್ಕೆ ಬಾರಿಸಿದ ಕೋಚ್​​ ಕ್ಲೂಸ್ನರ್​; ಇಲ್ಲಿದೆ ವಿಡಿಯೊ

Akshaya Tritiya Fashion
ಫ್ಯಾಷನ್31 mins ago

Akshaya Tritiya Fashion: ಅಕ್ಷಯ ತೃತೀಯಕ್ಕೆ ಬಂತು ಬಂಗಾರದ ಆಕರ್ಷಕ ಮೂಗಿನ ಸ್ಟಡ್ಸ್

SSLC Result 2024
ಶಿಕ್ಷಣ38 mins ago

SSLC Result 2024: ಎಸ್‌ಎಸ್‌ಎಲ್‌ಸಿ ‌ಉತ್ತರ ಪತ್ರಿಕೆ ಮರು ಮೌಲ್ಯಮಾಪನ, ಮರುಎಣಿಕೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ನಲ್ಲಷ್ಟೆ ಅವಕಾಶ

MS Dhoni
ಕ್ರೀಡೆ38 mins ago

MS Dhoni: ಧೋನಿಗೆ ವಿಶೇಷ ಉಡುಗೊರೆ ನೀಡಿದ ಅಭಿಮಾನಿ; ವಿಡಿಯೊ ವೈರಲ್​

Janhvi Kapoor Wears Cricket-Themed Dress
ಬಾಲಿವುಡ್45 mins ago

Janhvi Kapoor: ಕ್ರಿಕೆಟ್ ಥಿಮ್‌ ಡ್ರೆಸ್‌ನಲ್ಲಿ ಪೋಸ್‌ ಕೊಟ್ಟ ಜಾನ್ವಿ ಕಪೂರ್; ಚೆಂಡಿದೆ ಬೆನ್ನ ಹಿಂದೆ!

Job Alert
ಉದ್ಯೋಗ1 hour ago

Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಅಪ್ಲೈ ಮಾಡಿ

Kannada Serials TRP Puttakkana makkalu TOP one
ಕಿರುತೆರೆ1 hour ago

Kannada Serials TRP: ಟಾಪ್‌ 3ರಲ್ಲಿ ಇವೆ ಎರಡು ಧಾರಾವಾಹಿಗಳು; ʻಪುಟ್ಟಕ್ಕನ ಮಕ್ಕಳುʼ ಸೀರಿಯಲ್‌ನದ್ದೇ ಪಾರುಪತ್ಯ!

Self Harming Man commits suicide after falling from PG in Bengaluru
ಬೆಂಗಳೂರು1 hour ago

Self Harming: ಕಟ್ಟಡದ ಮೇಲಿಂದ ಬಿದ್ದು ಯುವಕ ಸೂಸೈಡ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Result 2024 what is the reason for most of the students fail in SSLC
ಕರ್ನಾಟಕ4 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ4 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ5 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು5 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ5 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು7 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

ಟ್ರೆಂಡಿಂಗ್‌