Site icon Vistara News

Karnataka Election Results 2023: ವರುಣದಲ್ಲಿ ಸಿದ್ದರಾಮಯ್ಯ ಮುನ್ನಡೆ; ಮಾಧ್ಯಮಗಳಿಗೆ ಪ್ರತಿಕ್ರಿಯಿಸದೆ ಹೊರಟ ಸೋಮಣ್ಣ

V Somanna Talks about Next political move

V Somanna Talks about Next political move

ಮೈಸೂರು: ವರುಣ ಹಾಗೂ ಚಾಮರಾಜನಗರ ಕ್ಷೇತ್ರದಲ್ಲಿ (Karnataka Election Results 2023) ಕಾಂಗ್ರೆಸ್‌ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಸಚಿವ ವಿ.ಸೋಮಣ್ಣ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ಮತ ಎಣಿಕೆ ಕೇಂದ್ರದಿಂದ ಹೊರನಡೆದಿದ್ದಾರೆ.

ವರುಣದಲ್ಲಿ ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಿದ್ದರಾಮಯ್ಯ 6576 ಮತಗಳನ್ನು ಪಡೆದು ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ 3866 ಮತಗಳನ್ನು ಪಡೆದಿದ್ದರು. ಇನ್ನು ಚಾಮರಾಜನಗರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟರಂಗಶೆಟ್ಟಿ 11ನೇ ಸುತ್ತಿನಲ್ಲಿ ಕಾಂಗ್ರೆಸ್ 58,426 ಮತ, ಬಿಜೆಪಿ
45,568 ಮತಗಳು ಬಂದಿವೆ. 12908 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಮುನ್ನಡೆಯಲ್ಲಿದ್ದಾರೆ.

Exit mobile version