Basavaraja Bommai | 5 ವರ್ಷ ಸಿದ್ದರಾಮಯ್ಯ ಪರಿಶಿಷ್ಟ ಸಮುದಾಯಗಳತ್ತ ತಿರುಗಿಯೂ ನೋಡಿಲ್ಲ ಎಂದ ಸಿಎಂ ಬೊಮ್ಮಾಯಿ - Vistara News

ಕರ್ನಾಟಕ

Basavaraja Bommai | 5 ವರ್ಷ ಸಿದ್ದರಾಮಯ್ಯ ಪರಿಶಿಷ್ಟ ಸಮುದಾಯಗಳತ್ತ ತಿರುಗಿಯೂ ನೋಡಿಲ್ಲ ಎಂದ ಸಿಎಂ ಬೊಮ್ಮಾಯಿ

ಒಳಮೀಸಲಾತಿಗೆ ಸಂಬಂಧಿಸಿ ಸಿದ್ದರಾಮಯ್ಯ ಮತ್ತು ಸಿಎಂ ಬೊಮ್ಮಾಯಿ (Basavaraja Bommai) ನಡುವೆ ಜಗಳ ಕಾವೇರಿದೆ. ಸಿದ್ದರಾಮಯ್ಯ ಅವರು ಐದು ವರ್ಷಗಳಲ್ಲಿ ಪರಿಶಿಷ್ಟ ಸಮುದಾಯಕ್ಕಾಗಿ ಏನೂ ಮಾಡಿಲ್ಲ ಎಂದಿದ್ದಾರೆ ಸಿಎಂ.

VISTARANEWS.COM


on

CM at home
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ತಮ್ಮ ಆರ್ ಟಿ ನಗರದ ನಿವಾಸದ ಬಳಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ವರ್ಗಗಳ ಬಗ್ಗೆ ಈಗ ಭಾರಿ ಕಾಳಜಿಯ ಮಾತನಾಡುತ್ತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾವು ಐದು ವರ್ಷ ಮುಖ್ಯಮಂತ್ರಿಯಾಗಿದ್ದಾಗ ಅವರತ್ತ ತಿರುಗಿಯೂ ನೋಡಿರಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿದರು. ಅವರು ಬುಧವಾರ ರೇಸ್ ಕೋರ್ಸ್ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ʻʻಒಳಮೀಸಲಾತಿಗೆ ಸಚಿವ ಸಂಪುಟ ಉಪಸಮಿತಿ ರಚಿಸಿರುವುದು ಕಣ್ಣೊರೆಸುವ ತಂತ್ರʼʼ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು, ಸಿದ್ದರಾಮಯ್ಯ ಅವರಿಗೆ ಈ ಕುರಿತ ವರದಿಯನ್ನು ತೆಗೆದು ನೋಡುವ ಧೈರ್ಯ ಇರಲಿಲ್ಲ. ಹುಬ್ಬಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ಬರೀ ದೀಪ ಹಚ್ಚಿ ಮಾತನಾಡದೆ ಬಂದರು. ಇಂಥವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದರು.

ʻʻನಮ್ಮ ಬದ್ಧತೆ ಏನೆಂದು ಎಲ್ಲಾ ಸಮುದಾಯಗಳಿಗೆ ತಿಳಿದಿದೆ. ಕಾನೂನು ಸ್ಥಾನಮಾನವೂ ನಮಗೆ ತಿಳಿದಿದೆ. ಇಂಥ ಪ್ರಮುಖ ವಿಚಾರಗಳಲ್ಲಿ ನಿರ್ಣಯ ಕೈಗೊಳ್ಳುವ ದಿಟ್ಟತನ ಸರ್ಕಾರಕ್ಕಿದೆ ಎಂದು ತೋರಿಸಿದ್ದೇವೆ. ಇನ್ನೊಬ್ಬರ ಬಗ್ಗೆ ಮಾತನಾಡುವ ಮುನ್ನ ಸಿದ್ದರಾಮಯ್ಯ ಹಿಂತಿರುಗಿ ನೋಡಿದರೆ ಉತ್ತಮʼʼ ಎಂದು ಹೇಳಿದರು.

ಸಿದ್ದರಾಮಯ್ಯ ಅವರು ಹೇಳಿದ್ದೇನು?
ಒಳಮೀಸಲಾತಿಗೆ ಸಂಬಂಧಿಸಿ ಸದಾಶಿವ ಆಯೋಗದ ವರದಿ ಜಾರಿಗಾಗಿ ಒತ್ತಾಯಿಸುತ್ತಿದ್ದ ಮೇಲೆ ಪೊಲೀಸರು ಲಾಠಿಚಾರ್ಜ್‌ ಮಾಡಿದ್ದನ್ನು ಸಿದ್ದರಾಮಯ್ಯ ಆಕ್ಷೇಪಿಸಿದ್ದರು.
ಕೇಸರಿ ಶಾಲು ಧರಿಸಿ ದಾಂಧಲೆ ಮಾಡುವ ಪುಂಡರಿಗೆ ರಾಜ ಮರ್ಯಾದೆ ಕೊಡುವ ಸರ್ಕಾರ, ಶಾಂತ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದ ದಲಿತರೆಂದರೆ ಬಿಜೆಪಿಯ ಲಾಠಿಗಳಿಗೆ ಅಷ್ಟೊಂದು ತಾತ್ಸಾರವೇ ಎಂದು ಪ್ರಶ್ನಿಸಿದ್ದರು. ಜತೆಗೆ ನಮ್ಮ ಸರಕಾರ ಅಸ್ತಿತ್ವಕ್ಕೆ ಬಂದರೆ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡುತ್ತೇವೆ ಎಂದು ಟ್ವೀಟ್‌ ಮಾಡಿದ್ದರು.

ಇದನ್ನೂ ಓದಿ | ಸದಾಶಿವ ಆಯೋಗ ಕುರಿತು ಟ್ವೀಟ್‌ ಮಾಡಿ ಇಕ್ಕಟ್ಟಿಗೆ ಸಿಲುಕಿದ ಸಿದ್ದರಾಮಯ್ಯ: ದಲಿತರಿಗೆ ವಂಚಿಸಿದ್ದು ನೀವೇ ಎಂದ ಬಿಜೆಪಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Kempegowda International Airport: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲೂ ಹಣ ಕೊಡಬೇಕು!

Kempegowda International Airport: ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಪ್ರಯಾಣಿಕರ ಪಿಕ್ ಅಪ್‌ಗೂ ದರ ನಿಗದಿ ಮಾಡಿದ್ದರಿಂದ ಪ್ರಯಾಣಿಕರು ಹಾಗೂ ಬಾಡಿಗೆ ವಾಹನ ಚಾಲಕರು ಬೆಚ್ಚಿ ಬಿದ್ದಿದ್ದಾರೆ. ಆಗಮನದ ದ್ವಾರದ ಬಳಿ ವಾಹನಗಳಲ್ಲಿ ಪಿಕಪ್ ಮಾಡುವುದಕ್ಕೆ ದರ ನಿಗದಿ ಮಾಡಿದ ಪರಿಣಾಮ ಕೆಂಪೇಗೌಡ ಏರ್ಪೋರ್ಟ್‌ ಮತ್ತಷ್ಟು ದುಬಾರಿಯಾಗಿತ್ತು. ಇಷ್ಟು ದಿನ ವಾಹನ ಚಾಲಕರು ಪ್ರಯಾಣಿಕರನ್ನು ಉಚಿತವಾಗಿ ಪಿಕಪ್ ಮಾಡುತ್ತಿದ್ದರು.

VISTARANEWS.COM


on

Kempegowda International Airport parking
Koo

ದೇವನಹಳ್ಳಿ: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ- Kempegowda International Airport- KIA) ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು (pickup vehicles) ಬರುವ ವಾಹನಗಳೂ ಇನ್ನು ಮುಂದೆ ನಿಲುಗಡೆ ಶುಲ್ಕ (Parking fees) ಕೊಡಬೇಕು ಎಂಬ ನಿಯಮ ಮಾಡಿ ಏರ್ಪೋರ್ಟ್‌ ಆಡಳಿತ ಮಂಡಳಿ ನಿನ್ನೆ ವಸೂಲಿ ಶುರು ಮಾಡಿತ್ತು. ಇದೀಗ ಎದುರಾದ ಪ್ರತಿರೋಧವನ್ನು ಕಂಡು ಬೆಚ್ಚಿಬಿದ್ದು ತಾತ್ಕಾಲಿಕವಾಗಿ ವಸೂಲಿ ಸ್ಥಗಿತಗೊಳಿಸಿದೆ.

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಪ್ರಯಾಣಿಕರ ಪಿಕ್ ಅಪ್‌ಗೂ ದರ ನಿಗದಿ ಮಾಡಿದ್ದರಿಂದ ಪ್ರಯಾಣಿಕರು ಹಾಗೂ ಬಾಡಿಗೆ ವಾಹನ ಚಾಲಕರು ಬೆಚ್ಚಿ ಬಿದ್ದಿದ್ದಾರೆ. ಆಗಮನದ ದ್ವಾರದ ಬಳಿ ವಾಹನಗಳಲ್ಲಿ ಪಿಕಪ್ ಮಾಡುವುದಕ್ಕೆ ದರ ನಿಗದಿ ಮಾಡಿದ ಪರಿಣಾಮ ಕೆಂಪೇಗೌಡ ಏರ್ಪೋರ್ಟ್‌ ಮತ್ತಷ್ಟು ದುಬಾರಿಯಾಗಿತ್ತು. ಇಷ್ಟು ದಿನ ವಾಹನ ಚಾಲಕರು ಪ್ರಯಾಣಿಕರನ್ನು ಉಚಿತವಾಗಿ ಪಿಕಪ್ ಮಾಡುತ್ತಿದ್ದರು.

ಪಿಕಪ್‌ಗೆ ಹೆಚ್ಚುವರಿ ಲೈನ್ ಮಾಡಿ ಹಣ ವಸೂಲಿ ಮಾಡಲು ಶುರು ಮಾಡಲಾಗಿತ್ತು. ಕಾರು, ಜೀಪ್ ಪಿಕಪ್ ಪ್ರವೇಶಕ್ಕೆ 7 ನಿಮಿಷದವರೆಗೂ 150 ರೂ. ದರ, 7ರಿಂದ 14 ನಿಮಿಷಕ್ಕೆ 300 ರೂ., ಬಸ್ಸಿಗೆ 600 ರೂಪಾಯಿ, ಟಿಟಿಗೆ 300 ರೂಪಾಯಿ ಪ್ರವೇಶ ದರ ನಿಗದಿ ಮಾಡಲಾಗಿತ್ತು. ನೂತನ ವಸೂಲಿ ಕಂಡು ಪ್ರಯಾಣಿಕರಿಗೆ ತಲೆ ತಿರುಗಿತ್ತು.

ಪಿಕಪ್‌ಗೂ ಹಣ ಕೊಡಬೇಕಾ ಎಂದು ರೊಚ್ಚಿಗೆದ್ದ ಚಾಲಕರು ಹಾಗೂ ಪ್ರಯಾಣಿಕರು ಏರ್ಪೋರ್ಟ್‌ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಚಾಲಕರು ಆಕ್ರೋಶ ಹೊರ ಹಾಕುತ್ತಿದ್ದಂತೆ ಮಂಡಳಿ ತಾತ್ಕಾಲಿಕವಾಗಿ ವಸೂಲಿ ನಿಲ್ಲಿಸಿದೆ. ನಾಳೆ ದರ ನಿಗದಿ ವಿರುದ್ಧ ಏರ್ಪೋರ್ಟ್‌ನಲ್ಲಿ ಪ್ರತಿಭಟನೆಗೆ ಚಾಲಕರು ಸಜ್ಜಾಗಿದ್ದಾರೆ.

ಭಾರಿ ಮಳೆಗೆ ಬೆಂಗಳೂರು ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ ಸೋರಿಕೆ

ಇತ್ತೀಚೆಗೆ ಸುರಿದ ಭಾರೀ ಮಳೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Airport – KIA) ನೂತನ ಟರ್ಮಿನಲ್ 2 (Terminal 2, T2) ಇದರಲ್ಲಿ ಭಾರಿ ಸೋರಿಕೆ (leakage) ಕಂಡುಬಂತು. ಭಾರಿ ಮಳೆಯ ಪರಿಣಾಮ ಇಲ್ಲಿಗೆ ಬರಬೇಕಿದ್ದ ಹಲವು ವಿಮಾನಗಳನ್ನು ಬೇರೆ ಕಡೆಗೆ ಕಳಿಸಲಾಯಿತು.

ಇತ್ತೀಚೆಗೆ ಸುರಿದ ಭಾರಿ ಮಳೆಯ ನಂತರ T2ನ ಬ್ಯಾಗೇಜ್ ಕ್ಲೈಮ್ ಪ್ರದೇಶದ ಬಳಿ ಛಾವಣಿಯಿಂದ ಮಳೆನೀರು ಜಿನುಗತೊಡಗಿತು. “ಮಳೆನೀರು ಛಾವಣಿಯಿಂದ ಸೋರಿಕೆಯಾಗಲು ಪ್ರಾರಂಭಿಸಿತು. ಕನ್ವೇಯರ್ ಬೆಲ್ಟ್ ಬಳಿ ಕೊಚ್ಚೆಗುಂಡಿಯಂತೆ ಆಯಿತು. ಪ್ರಯಾಣಿಕರಿಗೆ ಅನನುಕೂಲತೆಯನ್ನು ತಪ್ಪಿಸಲು ಗೃಹರಕ್ಷಕ ಸಿಬ್ಬಂದಿ ಯತ್ನಿಸಿದ್ದು, ನೀರನ್ನು ತೆರವುಗೊಳಿಸಿದರು” ಎಂದು ವಿಮಾನ ನಿಲ್ದಾಣದ ಸಿಬ್ಬಂದಿ ತಿಳಿಸಿದ್ದಾರೆ.

ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ (BIAL) ಈ ಬಗ್ಗೆ ಹೇಳಿಕೆ ನೀಡಿದ್ದು, ಹೀಗೆ ಹೇಳಿದೆ: “ಮೇ 9, 2024ರ ಸಂಜೆ ಅಲ್ಪಾವಧಿಯಲ್ಲಿಯೇ ಅತಿ ಹೆಚ್ಚು ಮಳೆ ಸುರಿದ ಪರಿಣಾಮ, ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್‌ಗಳ ಕೆಲವು ಪ್ರದೇಶಗಳಲ್ಲಿ ನೀರು ಸೋರಿಕೆಯಾಗಿದೆ. ನಮ್ಮ ಕಾರ್ಯಾಚರಣೆ ತಂಡಗಳು ಈ ಸೋರಿಕೆಯನ್ನು ತಗ್ಗಿಸಲು ಮತ್ತು ಚಟುವಟಿಕೆಯನ್ನು ಸಾಮಾನ್ಯ ಸ್ಥಿತಿಗೆ ತರಲು ತ್ವರಿತವಾಗಿ ಪ್ರತಿಕ್ರಿಯಿಸಿವೆ. ನಮ್ಮ ಪ್ರಯಾಣಿಕರಿಗೆ ಉಂಟಾದ ಅನನುಕೂಲತೆಗಾಗಿ ನಾವು ವಿಷಾದಿಸುತ್ತೇವೆ.”

KIAಯ T2 ಅನ್ನು 5,000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ನವೆಂಬರ್ 11, 2022ರಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇದನ್ನು ಉದ್ಘಾಟಿಸಿದರು. ʼಉದ್ಯಾನವನ ಟರ್ಮಿನಲ್ʼ ಎಂದು ಕರೆಯಲ್ಪಡುವ T2, ಯುನೆಸ್ಕೋದಿಂದ ʼವಿಶ್ವದ ಅತ್ಯಂತ ಸುಂದರವಾದ ವಿಮಾನ ನಿಲ್ದಾಣ’ ಎಂದು ಗುರುತಿಸಲ್ಪಟ್ಟಿದೆ. ಜನವರಿ 15, 2023ರಂದು ದೇಶೀಯ ಕಾರ್ಯಾಚರಣೆಯನ್ನು ಆರಂಭಿಸಿದ ಟರ್ಮಿನಲ್, ಉದ್ಘಾಟನೆಯ ಕೆಲವೇ ತಿಂಗಳುಗಳಲ್ಲಿ ಸೋರಿಕೆಯನ್ನು ಕಂಡಿದೆ. T2ನಲ್ಲಿ ಅಂತಾರಾಷ್ಟ್ರೀಯ ವಿಮಾನ ಕಾರ್ಯಾಚರಣೆಗಳು ಸೆಪ್ಟೆಂಬರ್ 12ರಂದು ಪ್ರಾರಂಭವಾದವು.

ಇದನ್ನೂ ಓದಿ: Bangalore Airport : ಬೆಂಗಳೂರು ವಿಮಾನ ನಿಲ್ದಾಣಕ್ಕೆ ವಿಶ್ವದ ಅತಿ ಸುಂದರ ಏರ್‌ಪೋರ್ಟ್ ಗರಿ

Continue Reading

ಬೆಂಗಳೂರು

2nd PUC Result : ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ; ಫಲಿತಾಂಶವನ್ನು ಮೊಬೈಲ್‌ನಲ್ಲೇ ನೋಡಿ

2nd PUC Result : ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟಗೊಂಡಿದೆ. 52,505 ವಿದ್ಯಾರ್ಥಿಗಳು ಪಾಸಾಗಿದ್ದು, 35.25ರಷ್ಟು ಶೇಕಡವಾರು ಫಲಿತಾಂಶ ಬಂದಿದೆ.

VISTARANEWS.COM


on

By

2nd Puc Result
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಮೇ 21ರ ಮಧ್ಯಾಹ್ನ 3ಗಂಟೆಗೆ ಪ್ರಕಟಗೊಂಡಿದೆ. ರಾಜ್ಯಾದ್ಯಂತ ಒಟ್ಟು 301 ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ 29 ರಿಂದ ಮೇ 16ರವರೆಗೆ 2ನೇ ಪರೀಕ್ಷೆ ನಡೆದಿತ್ತು. 7,875 ಮೌಲ್ಯಮಾಪಕರಿಂದ 28 ಕೇಂದ್ರಗಳಲ್ಲಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆದಿತ್ತು. ಪರೀಕ್ಷೆ 2ಕ್ಕೆ 1,49,824 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 1,48,942 ವಿದ್ಯಾರ್ಥಿಗಳು ಹಾಜರಾಗಿದ್ದು, 52,505 ವಿದ್ಯಾರ್ಥಿಗಳು ಪಾಸಾಗಿದ್ದಾರೆ. 35.25ರಷ್ಟು ಶೇಕಡವಾರು ಫಲಿತಾಂಶ ಬಂದಿದೆ. 26,496 ಬಾಲಕರು, 26,009 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಇನ್ನೂ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಲಾಖೆಯ ವೆಬ್‌ಸೈಟ್‌ karresults.nic.in ನಲ್ಲಿ ನೋಡಬಹುದಾಗಿದೆ.

ಇನ್ನೂ ಪರೀಕ್ಷೆ 1 ಮತ್ತು ಪರೀಕ್ಷೆ 2ರಲ್ಲಿ ವಿಷಯವಾರು ಗಳಿಸಿದ ಅತಿಹೆಚ್ಚು ಅಂಕಗಳನ್ನು ಪರಿಗಣಿಸಿ ಅಂತಿಮ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ. ಪಿಯುಸಿ ಪರೀಕ್ಷೆಗಳನ್ನು ಎದುರಿಸಿದ ಎಲ್ಲಾ ವಿದ್ಯಾರ್ಥಿಗಳು ರೋಲ್ ನಂಬರ್ ಆಧರಿಸಿ ತಮ್ಮ ಫಲಿತಾಂಶಗಳನ್ನು ಈ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು. ವಿದ್ಯಾರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು..

ಹಂತಗಳು ಏನು?

-karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್‌ಗೆ ಭೇಟಿ ನೀಡಿ.
-ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ.
-ಲಾಗಿನ್ ಪುಟದಲ್ಲಿ, ನಿಮ್ಮ KSEAB ನೋಂದಣಿ ಸಂಖ್ಯೆಯನ್ನು ಒದಗಿಸಿ; ವಿಷಯ ಸಂಯೋಜನೆ ಅಥವಾ ಸ್ಟ್ರೀಮ್ ಅನ್ನು ಆಯ್ಕೆ ಮಾಡಿ (ವಿಜ್ಞಾನ/ಕಲೆ/ವಾಣಿಜ್ಯ)
-ನಿಮ್ಮ 2ನೇ ಪಿಯುಸಿ ಫಲಿತಾಂಶವನ್ನು ಮುಂದಿನ ಪುಟದಲ್ಲಿ ಪರಿಶೀಲಿಸಿ.

ಇದನ್ನೂ ಓದಿ: CET Result: ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ; ಮೇ 30 ಅಥವಾ 31ಕ್ಕೆ ಪ್ರಕಟ?

ಸಂಯೋಜನೆವಾರು ಫಲಿತಾಂಶ

ಸಂಯೋಜನೆಹಾಜರಾದವರುಉತ್ತೀರ್ಣರಾದವರುಶೇಕಡವಾರು
ಕಲಾ52,12011,58922.24
ವಾಣಿಜ್ಯ39,4748,70922.06
ವಿಜ್ಞಾನ57,34832,20756.16
ಒಟ್ಟು1,48,94252,50535.25

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ -1ರಲ್ಲಿ ಕೆಲವರು ಅನುತ್ತೀರ್ಣರಾಗಿದ್ದರೆ, ಮತ್ತೆ ಕೆಲವರಿಗೆ ಅಂಕ ಕಡಿಮೆ ಬಂದಿದೆ ಎಂಬ ಅಸಮಾಧಾನ ಇದ್ದವರಿಗಾಗಿ ಈ ಅವಕಾಶ ಕಲ್ಪಿಸಲಾಗಿತ್ತು. 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಅಭ್ಯರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ಫಲಿತಾಂಶ ಉತ್ತಮಪಡಿಸಿಕೊಳ್ಳಲು 32,940 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು.

ಉತ್ತರ ಪತ್ರಿಕೆಯ ಸ್ಕ್ಯಾನಿಂಗ್‌ ಪ್ರತಿಗಾಗಿ ಮೇ 21ರಿಂದ 23ರವರೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕಡ್ಡಾಯವಾಗಿ ಸ್ಕ್ಯಾನಿಂಗ್‌ ಪ್ರತಿ ತೆಗೆದುಕೊಂಡವರಿಗೆ ಮಾತ್ರ ಮರುಮೌಲ್ಯಮಾಪನ ಹಾಗೂ ಮರುಎಣಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಮೇ 22ರಿಂದ 25ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಸ್ಕ್ಯಾನಿಂಗ್‌ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530ರೂ .ಶುಲ್ಕ ನಿಗದಿ ಮಾಡಲಾಗಿದೆ. ಮರುಮೌಲ್ಯಮಾಪನದ ಶುಲ್ಕದ ಪ್ರತಿ ವಿಷಯಕ್ಕೆ 1,670 ರೂ. ಇದೆ. ಇನ್ನೂ ಯಾವುದೇ ಅಭ್ಯರ್ಥಿಗಳು ಪರೀಕ್ಷೆ 3ಕ್ಕೆ ಅರ್ಜಿ ಸಲ್ಲಿಸಲು ಮರುಮೌಲ್ಯಮಾಪನ ಫಲಿತಾಂಶಕ್ಕಾಗಿ ಕಾಯಬೇಕಾಗಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

‌DK Shivakumar: ಕೆಪಿಸಿಸಿ ಅಧ್ಯಕ್ಷನಾಗಿ ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ; ಡಿಕೆಶಿ ಹೀಗೆ ಹೇಳಿದ್ಯಾಕೆ?

‌DK Shivakumar: ನಾನು ಒಂದು ವರ್ಷ ಪೂರೈಸಿದ್ದು ಮುಖ್ಯವಲ್ಲ. ನಾಲ್ಕು ವರ್ಷಗಳಲ್ಲಿ ನನ್ನ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ, ಅದು ಮುಖ್ಯ ಎಂಬ ಮಾತನ್ನೂ ಇದೇ ವೇಳೆ ಹೇಳಿದ್ದಾರೆ. ಅಂದರೆ, ಅವರಿಲ್ಲಿ ಪಕ್ಷ ಸಂಘಟನೆ ಬಗ್ಗೆ ಮಾತುಗಳನ್ನು ಆಡಿದ್ದಾರೆ. ತಾವು ಪಕ್ಷಕ್ಕಾಗಿ ಗಟ್ಟಿಯಾಗಿ ನಿಂತಿದ್ದರಿಂದ ಪಕ್ಷವು ಅಧಿಕಾರಕ್ಕೆ ಬಂದಿದೆ. ಅದೇ ರೀತಿಯಾಗಿ ಪಕ್ಷದ ನಾಯಕತ್ವವನ್ನು, ಉನ್ನತ ಹುದ್ದೆಯನ್ನು ಕೇಳುವವರು ಕೆಲಸ ಮಾಡಿ ತೋರಿಸಬೇಕು ಎಂಬ ನೇರ ಸಂದೇಶವನ್ನು ಡಿ.ಕೆ. ಶಿವಕುಮಾರ್‌ ರವಾನೆ ಮಾಡಿದ್ದಾರೆ.

VISTARANEWS.COM


on

DK Shivakumar speaks about KPCC president post
Koo

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷದ ಪೂರೈಕೆ ಹಿನ್ನೆಲೆಯಲ್ಲಿ ಕೆಪಿಸಿಸಿ ಘಟಕದಿಂದ ಏರ್ಪಡಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಅವರು ತಮ್ಮ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಮಾತನಾಡಿದ್ದಾರೆ. ನಾನು ಸದ್ಯ ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ಆದರೆ, ಈ ಸ್ಥಾನದಲ್ಲಿ ಇನ್ನೆಷ್ಟು ದಿನ ಇರುತ್ತೇನೆ ಎಂಬುದು ಗೊತ್ತಿಲ್ಲ ಎಂದು ಹೇಳಿದ್ದಾರೆ. ಇದೀಗ ಕಾಂಗ್ರೆಸ್‌ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದರ ಹಿಂದೆ ಏನಾದರೂ ಉದ್ದೇಶ ಇದೆಯಾ? ಅವರು ಹೀಗೆ ಹೇಳಿದ್ದು ಯಾಕೆ ಎಂದೆಲ್ಲ ಚರ್ಚೆಗಳು ನಡೆಯುತ್ತಿವೆ.

ಅಷ್ಟಕ್ಕೂ ಹಾಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್‌ ಹೇಳಿದ್ದೇನೆಂದರೆ, “ನಾನು ಸದ್ಯ ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ಇನ್ನೂ ಎಷ್ಟು ದಿನ ಈ ಸ್ಥಾನದಲ್ಲಿ ಇರುತ್ತೇನೋ, ಇಲ್ಲವೋ ಅನ್ನುವುದು ಗೊತ್ತಿಲ್ಲ. ನಮ್ಮ ಪಕ್ಷದ ನಾಯಕತ್ವ ಬುನಾದಿ ಗಟ್ಟಿ ಮಾಡಬೇಕು. ಬೂತ್ ಮಟ್ಟದಲ್ಲಿ ಗಟ್ಟಿ ಮಾಡಬೇಕು” ಎಂದು ಕಿವಿಮಾತು ಹೇಳಿದ್ದಾರೆ.

ನಾನು ಒಂದು ವರ್ಷ ಪೂರೈಸಿದ್ದು ಮುಖ್ಯವಲ್ಲ. ನಾಲ್ಕು ವರ್ಷಗಳಲ್ಲಿ ನನ್ನ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ, ಅದು ಮುಖ್ಯ ಎಂಬ ಮಾತನ್ನೂ ಇದೇ ವೇಳೆ ಹೇಳಿದ್ದಾರೆ. ಅಂದರೆ, ಅವರಿಲ್ಲಿ ಪಕ್ಷ ಸಂಘಟನೆ ಬಗ್ಗೆ ಮಾತುಗಳನ್ನು ಆಡಿದ್ದಾರೆ. ತಾವು ಪಕ್ಷಕ್ಕಾಗಿ ಗಟ್ಟಿಯಾಗಿ ನಿಂತಿದ್ದರಿಂದ ಪಕ್ಷವು ಅಧಿಕಾರಕ್ಕೆ ಬಂದಿದೆ. ಅದೇ ರೀತಿಯಾಗಿ ಪಕ್ಷದ ನಾಯಕತ್ವವನ್ನು, ಉನ್ನತ ಹುದ್ದೆಯನ್ನು ಕೇಳುವವರು ಕೆಲಸ ಮಾಡಿ ತೋರಿಸಬೇಕು ಎಂಬ ನೇರ ಸಂದೇಶವನ್ನು ಡಿ.ಕೆ. ಶಿವಕುಮಾರ್‌ ರವಾನೆ ಮಾಡಿದ್ದಾರೆ.

ಹೊಸ ನಾಯಕತ್ವ ಬೆಳೆಸುವ ಎಚ್ಚರಿಕೆ!

ನಾಲ್ಕು ವೋಟ್ ಹಾಕಿಸದೇ ಬಂದು ಇಲ್ಲಿ ಸ್ಥಾನಮಾನ ಕೇಳುತ್ತೀರಾ? ಮೊದಲು ನಿಮ್ಮ ಬೂತ್‌ನಲ್ಲಿ ಸಂಘಟನೆ ಮಾಡಿ. ಬೂತ್ ಲೀಡ್ ಕೊಡಿಸಿ ಬಂದು ನಾಯಕತ್ವ ಕೇಳಿ. ಇಲ್ಲದೆ ಹೋದರೆ ನಾಯಕತ್ವ ಕೊಡಲ್ಲ ಎಂದು ಪಕ್ಷದ ಮುಖಂಡರಿಗೆ, ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್‌ ಚಾಟಿ ಬೀಸಿದ್ದಾರೆ.

ನಾಲ್ಕು ವೋಟ್ ಹಾಕಿಸದೇ ಬಂದು ಇಲ್ಲಿ ಸ್ಥಾನಮಾನ ಕೇಳಿದರೆ ಹೇಗೆ? ಬಿಳಿ‌ ಜುಬ್ಬಾ, ಬಿಳಿ‌ ಕಾರು ತೆಗೆದುಕೊಂಡು ಬಂದು ಸ್ಥಾನಗಳನ್ನು ಕೇಳುವುದಲ್ಲ. ಮೊದಲು ಸಂಘಟನೆ ‌ಮಾಡಿ, ಇಲ್ಲದಿದ್ದರೆ ಜಾಗ ಖಾಲಿ ಮಾಡಿ. ನಾವು ಹೊಸ ‌ನಾಯಕತ್ವವನ್ನು ಬೆಳೆಸುತ್ತೇವೆ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ. ಬೂತ್‌ ಮಟ್ಟದಲ್ಲಿ ಪಕ್ಷ ಬಲಗೊಳ್ಳದಿದ್ದರೆ ದೂರದೃಷ್ಟಿಯಲ್ಲಿ ಪಕ್ಷವು ಉಳಿದುಕೊಳ್ಳುವುದು ಕಷ್ಟ ಎಂಬ ಹಿನ್ನೆಲೆಯಲ್ಲಿ ಮುಖಂಡರಿಗೆ ಬಿಸಿ ಮುಟ್ಟಿಸುವ ಪ್ರಯತ್ನವನ್ನು ಡಿ.ಕೆ. ಶಿವಕುಮಾರ್‌ ಮಾಡಿದ್ದಾರೆನ್ನಲಾಗಿದೆ.

ರಾಜೀವ್‌ ಗಾಂಧಿ ಪ್ರತಿಮೆ ಬದಲಿಸಿದ್ದೇನೆ

ರಾಜೀವ್ ಗಾಂಧಿಯವರ ಪ್ರಾಣ ಎಲ್ಲಿ ಹೋಯಿತೋ ಅಲ್ಲಿ ಕನಕಪುರದ ಕಲ್ಲು ಹಾಕಿದ್ದೇನೆ. ಸೋನಿಯಾ ಗಾಂಧಿ ಸೂಚನೆ ಮೇರೆಗೆ ಹಾಕಿದ್ದೇನೆ. ನನಗೆ ಕನಕಪುರ ಬಂಡೆ ಅಂತಾರಲ್ಲ. ನಮ್ಮೂರ ಬಂಡೆಯ ಕಲ್ಲು ಅಲ್ಲಿ ತೆಗೆದುಕೊಂಡು ಹೋಗಿ ಹಾಕಿದ್ದೇನೆ. ಅಲ್ಲಿ ಹೋದಾಗ ನೋಡಿ. ಬೆಂಗಳೂರಿನಲ್ಲಿ ರಾಜೀವ್ ಗಾಂಧಿ ಪ್ರತಿಮೆಯನ್ನು ಬದಲಾವಣೆ ಮಾಡಿದ್ದೇವೆ. ನಾನು ಬೆಂಗಳೂರು ಉಸ್ತುವಾರಿ ಸಚಿವನಾದ ಮೇಲೆ ಮೊದಲು ಅನುದಾನ ಬಿಡುಗಡೆ ‌ಮಾಡಿದ್ದು, ಸಹ ಇದಕ್ಕೇ ಆಗಿದೆ. ಅದರಂತೆ ರಾಜೀವ್ ಗಾಂಧಿ ಪ್ರತಿಮೆ ಬದಲಾವಣೆ ಮಾಡಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉದ್ಘಾಟನೆ ಮಾಡಿದರು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

Prashant Kishor: ಈ ಬಾರಿ ಮೋದಿಗೆ ಹಿನ್ನಡೆ ಆಗುತ್ತಾ? ಪ್ರಶಾಂತ್ ಕಿಶೋರ್ ಲೇಟೆಸ್ಟ್ ಲೆಕ್ಕಾಚಾರ ಹೀಗಿದೆ

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election)ಯ ಮೊದಲ 5 ಹಂತಗಳ ಮತದಾನ ಮುಗಿದಿದೆ. ಇನ್ನು ಎರಡು ಹಂತಗಳ ಮತದಾನ ಬಾಕಿ ಇದ್ದು, ಸೋಲು-ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ. ಈ ಮಧ್ಯೆ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ (Prashant Kishor) ಫಲಿತಾಂಶವನ್ನು ಊಹಿಸಿದ್ದು, 2019ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಿಜೆಪಿ ಹೆಚ್ಚುವರಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಬಿಜೆಪಿ ಸ್ಪಷ್ಟ ಬಹುಮತ ಹೊಂದಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼಈ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಪ್ರದರ್ಶನ ತೋರಲಿದೆ. ಜತೆಗೆ ಸೀಟುಗಳ ಸಂಖ್ಯೆಯನ್ನೂ ವೃದ್ಧಿಸಿಕೊಳ್ಳಲಿದೆ. ಅದರಲ್ಲಿಯೂ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಬಿಜೆಪಿ ಇನ್ನಷ್ಟು ಶಕ್ತವಾಗಲಿದೆ. ಅಲ್ಲದೆ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿಯೂ ಸೀಟು ಹೆಚ್ಚಳವಾಗುವ ನಿರೀಕ್ಷೆ ಇದೆʼʼ ಎಂದು ಅಭಿಪ್ರಾಯಪಟ್ಟಿದ್ದಾರೆ.

ವಿಶ್ಲೇಷಕರ ಅಭಿಪ್ರಾಯದ ಮಧ್ಯೆ ಕಿಶೋರ್‌ ಮಾತು

ಬಿಜೆಪಿ ಬಹುಮತ ಪಡೆಯುವ ಸಾಧ್ಯತೆಯಿಲ್ಲ ಮತ್ತು ಮೊದಲ ಕೆಲವು ಹಂತಗಳ ಮತದಾನ ಆಡಳಿತ ಪಕ್ಷದ ಪರವಾಗಿಲ್ಲ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದು, ಕೆಲವು ವರದಿಗಳು ಇದನ್ನೇ ಊಹಿಸಿರುವ ಮಧ್ಯೆ ಪ್ರಶಾಂತ್‌ ಕಿಶೋರ್‌ ಈ ರೀತಿ ಹೇಳಿಕೆ ನೀಡಿರುವುದು ಕಮಲ ಪಾಳಯಕ್ಕೆ ಕೊಂಚ ಮಟ್ಟಿನ ಸಮಾಧಾನ ತಂದಿತ್ತಿದೆ. ಆದಾಗ್ಯೂ ಅವರು ರಾಜ್ಯವಾರು ಫಲಿತಾಂಶಗಳನ್ನು ಊಹಿಸಲು ನಿರಾಕರಿಸಿದ್ದಾರೆ.

ಮೋದಿ ಬ್ರ್ಯಾಂಡ್‌ ಕುಸಿತ

ಬಿಜೆಪಿಯ ಬಗ್ಗೆ ಈಗಲೂ ಜನರಲ್ಲಿ ಸಕಾರಾತ್ಮಕ ಭಾವನೆ ಇದೆ ಎಂದಿರುವ ಪ್ರಶಾಂತ್‌ ಕಿಶೋರ್‌, ಮೋದಿ ಬ್ರ್ಯಾಂಡ್‌ ಮಾತ್ರ ಕುಸಿಯುತ್ತಿದೆ. ಪ್ರಧಾನಿಯ ಪ್ರಭಾವ ಕ್ಷೀಣಿಸುತ್ತಿದೆ ಎಂದು ಹೇಳಿದ್ದಾರೆ. ಇತ್ತ ವಿರೋಧ ಪಕ್ಷಗಳ ಕಾರ್ಯ ವೈಖರಿಯನ್ನೂ ಅವರು ಟೀಕಿಸಿದ್ದಾರೆ. ಬಿಜೆಪಿ ವಿರುದ್ಧ ಪ್ರಯೋಗಿಸಬಹುದಾದ ಅನೇಕ ಅಸ್ತ್ರಗಳನ್ನು, ಅವಕಾಶಗಳನ್ನು ʼಇಂಡಿಯಾʼ ಮೈತ್ರಿಕೂಟ ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ರಾಜ್ಯ ವಿಧಾನಸಭಾ ಚುನಾವಣೆಗಳ ಮೇಲೆ ಗಮನ ಕೇಂದ್ರೀಕರಿಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಮತ್ತು ಡಿಸೆಂಬರ್ ನಡುವಿನ ನಿರ್ಣಾಯಕ ತಿಂಗಳುಗಳು ವ್ಯರ್ಥವಾಗಿದೆ. ಇದು ʼಇಂಡಿಯಾʼ ಬಣದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಡಿಸೆಂಬರ್‌ನಲ್ಲಿ ಮೂರು ರಾಜ್ಯಗಳಲ್ಲಿನ ಬಿಜೆಪಿಯ ಗೆಲುವು ಮತ್ತು ಜನವರಿಯಲ್ಲಿ ನಡೆದ ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಕಮಲ ಪಡೆಯ ಗೆಲುವಿಗೆ ಇನ್ನಷ್ಟು ಶಕ್ತಿ ನೀಡಲಿದೆ ಎಂದಿದ್ದಾರೆ.

ಇದನ್ನೂ ಓದಿ: Lok Sabha Election 2024: ಪ್ರತಿಪಕ್ಷಗಳಿಗೆ ರೆಡ್‌ ಅಲರ್ಟ್‌ ನೀಡಿದ ಪ್ರಶಾಂತ್‌ ಕಿಶೋರ್‌; ಏನವರ ಚುನಾವಣಾ ಲೆಕ್ಕಾಚಾರ?

ರಾಹುಲ್‌ ಗಾಂಧಿಗೆ ಸಲಹೆ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದ ಪ್ರಶಾಂತ್‌ ಕಿಶೋರ್, ಚುನಾವಣಾ ಫಲಿತಾಂಶಗಳು ಕಾಂಗ್ರೆಸ್ ಪರವಾಗಿಲ್ಲದಿದ್ದರೆ ಐದು ವರ್ಷಗಳ ವಿರಾಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಮೂರನೇ ಅವಧಿಯಲ್ಲಿ ಬಿಜೆಪಿಗೆ ಅನೇಕ ಕಠಿಣ ಸವಾಲು ಎದುರಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಭೂ ಮಸೂದೆ ವಿರೋಧಿ ಪ್ರತಿಭಟನೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ವಿರೋಧಿಸಿ ನಡೆದ ಪ್ರತಿಭಟನೆ ಮತ್ತು ರೈತರ ಹೋರಾಟವನ್ನು ಉಲ್ಲೇಖಿಸಿ ಅವರು ಸವಾಲುಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಈ ಎಲ್ಲ ಸವಾಲುಗಳಿಂದ ಮೋದಿ ದುರ್ಬಲ ಪ್ರಧಾನಿ ಎನಿಸಿಕೊಳ್ಳಲಿದ್ದಾರೆ ಎಂದೂ ಅಭಿಪ್ರಾಯಪಟ್ಟಿದ್ದಾರೆ.

Continue Reading

ಕ್ರೈಂ

Road Accident : ತಾಯಿ-ಮಗನ ಬಲಿ ಪಡೆದ ಕಂಟೇನರ್‌; ಆಟೋ ಪ್ರಯಾಣಿಕ ಸೇರಿ ಸವಾರರಿಬ್ಬರ ಪ್ರಾಣ ಕಸಿದ ಬೈಕ್‌

Road Accident : ಹಾಸನ ಹಾಗೂ ಯಾದಗಿರಿ, ಮಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನದಲ್ಲಿ ತಾಯಿ-ಮಗ ಮೃತಪಟ್ಟರೆ, ಯಾದಗಿರಿಯಲ್ಲಿ ಬೈಕ್‌ ಸವಾರರಿಬ್ಬರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇತ್ತ ಮಂಗಳೂರಿನಲ್ಲಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಅಪಘಾತದಲ್ಲಿ ಮೃತಪಟ್ಟಿದ್ದಾನೆ.

VISTARANEWS.COM


on

By

Road Accident
Koo

ಹಾಸನ/ಯಾದಗಿರಿ: ಪ್ರತ್ಯೇಕ ಕಡೆಗಳಲ್ಲಿ ಸಂಭವಿಸಿದ ಅಪಘಾತದಲ್ಲಿ (Road Accident) ತಾಯಿ-ಮಗ ಸೇರಿ ಬೈಕ್‌ ಸವಾರರಿಬ್ಬರು, ಆಟೋ ಪ್ರಯಾಣಿಕ ದಾರುಣವಾಗಿ ಮೃತಪಟ್ಟಿದ್ದಾರೆ. ಐವರಿಗೆ ಗಂಭೀರ ಗಾಯಗೊಂಡಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಕೆಂಪುಹೊಳೆ ಸಮೀಪ ಇನೋವಾ ಕಾರು ಹಾಗೂ ಕಂಟೇನರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟರೆ, ಉಳಿದ ನಾಲ್ವರಿಗೆ ಗಂಭೀರ ಗಾಯವಾಗಿದೆ. ಶಫೀಕ್ (20), ಸಫಿಯಾ (50) ಮೃತ ದುರ್ದೈವಿಗಳು.

ಕಂಟೇನರ್ ಲಾರಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ಇನೋವಾ ಕಾರು ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದಾಗ ಕೆಂಪುಹೊಳೆ ಸಮೀಪ ಮುಖಾಮುಖಿ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತರು ಹಾಗೂ ಗಾಯಾಳುಗಳು ದಕ್ಷಿಣ ಕನ್ನಡದ ಬಂಟ್ವಾಳ ಮೂಲದವರು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಛಿದ್ರವಾಗಿ ಬಿದ್ದಿದ್ದ ಕಾರನ್ನು ತೆರವುಗೊಳಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಯಾದಗಿರಿಯಲ್ಲಿ ಬೈಕ್‌ಗಳ ಡಿಕ್ಕಿ, ಇಬ್ಬರು ಸವಾರರು ಸಾವು

ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ನಿನ್ನೆ ಸೋಮವಾರ ಸಂಜೆ ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಸವಾರನಿಗೆ ಗಂಭೀಯ ಗಾಯವಾಗಿದೆ. ಗಾಯಾಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸೈದಾಪುರದ ಸ್ವಾಮಿ ವಿವೇಕಾನಂದ ಶಾಲೆಯ ಮುಂಭಾಗ ಅಪಘಾತ ಸಂಭವಿಸಿದೆ. ಸೈದಾಪುರ ನಿವಾಸಿ ಮೌನೇಶ್ (24) ಹಾಗೂ ಕೊಂಡಾಪುರ ನಿವಾಸಿ ಅಶೋಕ್ (21) ಮೃತ ಬೈಕ್ ಸವಾರರು. ಸೈದಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಆಟೋ-ಬೈಕ್‌ ಡಿಕ್ಕಿ, ಹಾರಿ ಬಿದ್ದ ಪ್ರಯಾಣಿಕ ಸಾವು

ಆಟೋ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ‌ ರಭಸಕ್ಕೆ ಆಟೋದಲ್ಲಿದ್ದ ಪ್ರಯಾಣಿಕ ರಸ್ತೆಗೆ ಹಾರಿ ಬಿದ್ದಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಎಂಬಲ್ಲಿ ಘಟನೆ ನಡೆದಿದೆ. ಮಹಮ್ಮದ್ ಅಲ್ತಾಫ್ (19) ಮೃತ ದುರ್ದೈವಿ.

ಮಹಮ್ಮದ್‌ ಆಟೋದಲ್ಲಿ ಸಜಿಪ ಕಡೆಯಿಂದ ಬಿಸಿರೋಡ್ ಕಡೆ ತೆರಳುತ್ತಿದ್ದರು. ಬಿಸಿರೋಡ್ ನಿಂದ ಪಾಣೆಮಂಗಳೂರು ಕಡೆಯಿಂದ ಬೈಕ್‌ ಬರುವಾಗ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತ ಸಂದರ್ಭದಲ್ಲಿ ಆಟೋ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ದೃಶ್ಯ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಬೈಕ್ ಸವಾರರಿಗೂ ಸಣ್ಣಪುಟ್ಟ ಗಾಯವಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Kempegowda International Airport parking
ಬೆಂಗಳೂರು9 mins ago

Kempegowda International Airport: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲೂ ಹಣ ಕೊಡಬೇಕು!

Abhijit Gangopadhyay
ದೇಶ14 mins ago

Abhijit Gangopadhyay: ದೀದಿ ವಿರುದ್ಧ ಮಾಜಿ ಜಡ್ಜ್‌ ಅವಹೇಳನಕಾರಿ ಹೇಳಿಕೆ; 24 ಗಂಟೆಗಳ ಕಾಲ ಚುನಾವಣಾ ಪ್ರಚಾರಕ್ಕೆ ತಡೆ

2nd Puc Result
ಬೆಂಗಳೂರು29 mins ago

2nd PUC Result : ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ; ಫಲಿತಾಂಶವನ್ನು ಮೊಬೈಲ್‌ನಲ್ಲೇ ನೋಡಿ

L2 Empuraan first look poster shared by Prithviraj Sukumaran
South Cinema39 mins ago

 L2 Empuraan: ಮೋಹನ್‌ಲಾಲ್ ಬರ್ತ್‌ಡೇ; L2E-ಎಂಪುರಾನ್‌ ಲುಕ್‌ ಔಟ್‌!

Shane Watson Apologize
ಕ್ರಿಕೆಟ್56 mins ago

Shane Watson Apologize: ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಪುಸ್ತಕ ಬಿಡುಗಡೆಗೊಳಿಸಿ ಆರ್​ಸಿಬಿ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ಶೇನ್​ ವಾಟ್ಸನ್

Viral Video
ವೈರಲ್ ನ್ಯೂಸ್57 mins ago

Viral Video: ಇಂಗ್ಲೀಷ್‌ನಲ್ಲೂ ಮಾತಾಡುತ್ತೆ…ಮಿಮಿಕ್ರಿನೂ ಮಾಡುತ್ತೆ ಈ ಗಿಣಿ; ವಿಡಿಯೋ ನೋಡಿದ್ರೆ ಫಿದಾ ಆಗೋದು ಗ್ಯಾರಂಟಿ!

DK Shivakumar speaks about KPCC president post
ಬೆಂಗಳೂರು60 mins ago

‌DK Shivakumar: ಕೆಪಿಸಿಸಿ ಅಧ್ಯಕ್ಷನಾಗಿ ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ; ಡಿಕೆಶಿ ಹೀಗೆ ಹೇಳಿದ್ಯಾಕೆ?

Chitta Ranjan Dash
ದೇಶ1 hour ago

Chitta Ranjan Dash: ಆರ್‌ಎಸ್‌ಎಸ್‌ನ ಸ್ವಯಂಸೇವಕನಾಗಿದ್ದೆ; ಈಗಲೂ ಮರಳಲು ಸಿದ್ಧ ಎಂದ ಹೈಕೋರ್ಟ್‌ ನಿವೃತ್ತ ಜಡ್ಜ್‌ ಚಿತ್ತರಂಜನ್‌ ದಾಸ್‌

Road Accident
ಕ್ರೈಂ2 hours ago

Road Accident : ತಾಯಿ-ಮಗನ ಬಲಿ ಪಡೆದ ಕಂಟೇನರ್‌; ಆಟೋ ಪ್ರಯಾಣಿಕ ಸೇರಿ ಸವಾರರಿಬ್ಬರ ಪ್ರಾಣ ಕಸಿದ ಬೈಕ್‌

DK Shivakumar statement in KPCC. no leadership if the booth lead is not given DK Shivakumar warns leaders
ರಾಜಕೀಯ2 hours ago

‌DK Shivakumar: ಬೂತ್ ಲೀಡ್ ಕೊಡಿಸದಿದ್ದರೆ ನಾಯಕತ್ವ ಇಲ್ಲ; ಜಾಗ ಖಾಲಿ ಮಾಡಿ: ಮುಖಂಡರಿಗೆ ಡಿಕೆಶಿ ವಾರ್ನಿಂಗ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌