Site icon Vistara News

ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಸಿದ್ದರಾಮಯ್ಯ ಭೇಟಿ

ದಾವಣಗೆರೆ: ಅಮೃತ ಮಹೋತ್ಸವದ ಸಂಭ್ರಮಾಚರಣೆಯಲ್ಲಿದ್ದ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹರಿಹರದ ಹರಕ್ಷೇತ್ರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಬುಧವಾರ ಭೇಟಿ ನೀಡಿ, ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ಅನ್ನಭಾಗ್ಯ, ಕೃಷಿ ಭಾಗ್ಯ, ಕ್ಷೀರಧಾರೆ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್‌, ವಿದ್ಯಾಸಿರಿ, ವಸತಿ ಭಾಗ್ಯ, ಆರೋಗ್ಯಭಾಗ್ಯದಂತಹ ನೂರಾರು ಕಾರ್ಯಕ್ರಮಗಳ ಮೂಲಕ ಎಲ್ಲ ವರ್ಗಗಳ ಅಭ್ಯುದ್ಯಯಕ್ಕಾಗಿ ಶ್ರಮಿಸಿದ ಹಾಗೂ 75ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಸಿದ್ದರಾಮಯ್ಯ ಅವರಿಗೆ ಭಗವಂತ ಉತ್ತಮ ಆರೋಗ್ಯ, ಇನ್ನಷ್ಟು ಸಮಾಜ ಸೇವೆಯಲ್ಲಿ ತೊಡಗಿಕೊಳ್ಳುವ ಅವಕಾಶ ದೊರಕಿಸಲಿ ಎಂದು ಶ್ರೀ ವಚನಾನಂದ ಮಹಾಸ್ವಾಮಿ ಆಶೀರ್ವದಿಸಿದರು.

ಶ್ರೀ ವಚನಾನಂದ ಮಹಾಸ್ವಾಮಿ ಅವರೊಂದಿಗೆ ಮಾಜಿ ಸಿದ್ದರಾಮಯ್ಯ.

ಇದನ್ನೂ ಓದಿ | ಮೋದಿಯ ನಾಲ್ಕು ಡೈಲಾಗ್‌ ಮೂಲಕವೇ ಬಿಜೆಪಿ ಸರ್ಕಾರಗಳನ್ನು ಮೂದಲಿಸಿದ ಸಿದ್ದರಾಮಯ್ಯ

Exit mobile version