Site icon Vistara News

ಸಿದ್ದರಾಮಯ್ಯ@75 | ತವರು ಜಿಲ್ಲೆಯ ದೇಗುಲಗಳಲ್ಲಿ ವಿಶೇಷ ಪೂಜೆ, 75 ಈಡುಗಾಯಿ

siddaramaiah mysore

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ತವರು ಜಿಲ್ಲೆ ಮೈಸೂರಿನಲ್ಲಿ ಸಂಭ್ರಮ ಮನೆ ಮಾಡಿದೆ. ಅಭಿಮಾನಿಗಳು ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟ, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಭಿಮಾನಿಗಳು ಮತ್ತು ಆಪ್ತರು ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಅಗ್ರಹಾರದ ನೂರೊಂದು ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಜನರು ಸಿದ್ದರಾಮಯ್ಯಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು.

ನೂರಾರು ಅಭಿಮಾನಿಗಳು ಸಿದ್ದರಾಮಯ್ಯ ಭಾವಚಿತ್ರಗಳನ್ನು ಹಿಡಿದು ಜೈಕಾರ ಹಾಕಿದರು. ಸಿದ್ದರಾಮಯ್ಯ ಅವರ ೭೫ನೆ ಹುಟ್ಟುಹಬ್ಬದ ನಿಮಿತ್ತ 75 ಈಡುಗಾಯಿ ಒಡೆದು ಅಭಿಮಾನಿಗಳು ಶುಭ ಕೋರಿದರು.

Exit mobile version