Signature Forgery: ಬಿಎಂಟಿಸಿ ಎಂಡಿ ಸಹಿಯೇ ನಕಲು ಮಾಡಿದ ಅಧಿಕಾರಿಗಳು; ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ದೂರು - Vistara News

ಕರ್ನಾಟಕ

Signature Forgery: ಬಿಎಂಟಿಸಿ ಎಂಡಿ ಸಹಿಯೇ ನಕಲು ಮಾಡಿದ ಅಧಿಕಾರಿಗಳು; ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ದೂರು

Signature Forgery: ಬಿಎಂಟಿಸಿ ನಿರ್ದೇಶಕರ ಸಹಿಯನ್ನು ನಕಲು ಮಾಡಿರುವ ಆರೋಪವೊಂದು ಕೇಳಿ ಬಂದಿದ್ದು, ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

VISTARANEWS.COM


on

sing
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (BMTC) ಕೆಲ ಹಿರಿಯ ಅಧಿಕಾರಿಗಳು ಕಳ್ಳಾಟಕ್ಕೆ ಇಳಿದಿದ್ದಾರೆ. ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರ (MD) ಸಹಿಯನ್ನೇ ನಕಲು (Signature Forgery) ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಬಿಎಂಟಿಸಿ ಎಂಡಿಗೆ ವರ್ಷದವರೆಗೂ ಹಿರಿಯ ಅಧಿಕಾರಿಗಳು ಕಡತವನ್ನೇ ಕಳುಹಿಸಿಲ್ಲ. ಬದಲಾಗಿ ಎಂಡಿ ಸಿಗ್ನೇಚರ್‌ ಅನ್ನು ಫೋರ್ಜರಿ ಮಾಡಿ, ಅವರೇ ವಂಚನೆ ಎಸಗಿದ್ದಾರೆ. ಈ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಬಿಎಂಟಿಸಿ ಭದ್ರತಾ ಜಾಗೃತ ಇಲಾಖೆಯಿಂದ ದೂರು ದಾಖಲಾಗಿದೆ.

ಪ್ರಸ್ತುತ ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ ಅಧಿಕಾರಿಯಾಗಿರುವ ಶ್ರಿರಾಮ್ ಮುಲ್ಕಾವನ್‌ ಎಂಬುವವರು ಟೆಂಡರ್ ನವೀಕರಣದ ಕಡತವನ್ನು ನಿರ್ದೇಶಕರಿಗೆ ಕಳುಹಿಸದೆ ಫೋರ್ಜರಿ ಮಾಡಿರುವ ಆರೋಪ ಕೇಳಿ ಬಂದಿದೆ. ಶ್ರೀರಾಮ್ ಮುಲ್ಕಾವನ್ ಫೋರ್ಜರಿ ಮಾಡಿ ಇಲಾಖೆಗೆ ದೋಖಾ ಮಾಡಿದ್ದು, ಹಾಲಿ ಎಂಡಿ ಸೇರಿದಂತೆ ಹಿಂದಿನ ಎಂಡಿಗಳ ಸಹಿಯೂ ನಕಲಿ ಮಾಡಿರುವ ಆಪಾದನೆ ಇದೆ. ಹಿಂದಿನ ಎಂಡಿಗಳಾದ ಶಿಖಾ, ಅನ್ಬುಕುಮಾರ್, ರಾಧಿಕಾ, ಸೂರ್ಯಸೇನ ಅವರ ಸಹಿಗಳನ್ನೂ ನಕಲು ಮಾಡಲಾಗಿದೆ.

ಅಧಿಕಾರಿಗಳು ಶಾಮೀಲು ಶಂಕೆ

ಶ್ರೀರಾಮ್ ಜತೆ ಅನೇಕ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದ್ದು, ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಆದರೆ, ಎಫ್ಐಆರ್‌ನಲ್ಲಿ ಶ್ರೀರಾಮ್ ಹೊರತುಪಡಿಸಿ ಉಳಿದ ಅಧಿಕಾರಿಗಳ ಹೆಸರನ್ನು ಕೈಬಿಡಲಾಗಿದೆ.

ಇದನ್ನೂ ಓದಿ:Ayush Doctors Demands: ಆಯುಷ್ ವೈದ್ಯರ ಕೆಲಸಕ್ಕೆ ಸಿಗದ ಸಮಾನ ವೇತನ; ಶ್ರೀನಿವಾಸಾಚಾರಿ ವರದಿ ಅನುಷ್ಠಾನಕ್ಕೆ ಪಟ್ಟು

ಸಹಿ ಫೋರ್ಜರಿ ಮಾಡಿ ಗುತ್ತಿಗೆದಾರರಿಂದ ಕಿಕ್ ಬ್ಯಾಕ್ ಪಡೆದಿರುವ ಅನುಮಾನ ಇದೆ. ಆಡಿಟ್ ಪರಿಶೀಲನೆ ವೇಳೆ ಶ್ರೀರಾಮ್ ಅಕ್ರಮ ಬಯಲಾಗಿದ್ದು, ಶ್ರೀರಾಮ್ ವಿರುದ್ಧ ಎಂಡಿ ಸತ್ಯವತಿ ಕೆಂಡಾಮಂಡಲವಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು ಗ್ರಾಮಾಂತರ

Murder case : ತಡರಾತ್ರಿ ಹರಿದ ನೆತ್ತರು; ಕತ್ತು ಸೀಳಿ ಯುವಕನ ಬರ್ಬರ ಹತ್ಯೆ

Murder case : ತಡರಾತ್ರಿ ಯುವಕನ ಮೇಲೆ ದಾಳಿ ಮಾಡಿ ಕತ್ತು ಸೀಳಿ ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದು, ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

Murder case in Bengaluru rural
Koo

ದೊಡ್ಡಬಳ್ಳಾಪುರ : ಹಳೆ ದ್ವೇಷಕ್ಕೆ ಯುವಕನ ಕತ್ತು ಕೊಯ್ದು ಬರ್ಬರವಾಗಿ ಕೊಲೆ (Murder case) ಮಾಡಲಾಗಿದೆ. ಹೇಮಂತ್ ಕುಮಾರ್( 27) ಕೊಲೆಯಾದ ದುರ್ದೈವಿ ನಡುರಸ್ತೆಯಲ್ಲಿ ಯುವಕರ ಗುಂಪುವೊಂದು ಹೇಮಂತ್‌ ಮೇಲೆ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ.

ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗ ಘಟನೆ ನಡೆದಿದೆ. ಮಿಟ್ಟೆ ಅಲಿಯಾಸ್ ನರಸಿಂಹಮೂರ್ತಿ ಗ್ಯಾಂಗ್‌ನಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೇಮಂತ್‌ಗೆ ಮಾರಕಾಸ್ತ್ರಗಳಿಂದ ಕುತ್ತಿಗೆ, ಎದೆಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

10ಕ್ಕೂ ಹೆಚ್ಚು ಯುವಕರಿಂದ ಈ ದಾಳಿ ನಡೆದಿದ್ದು, ಕೊಲೆ ಮಾಡಿ ರಸ್ತೆ ಬದಿಯಲ್ಲಿ ಶವ ಎಸೆದು ಎಸ್ಕೇಪ್‌ ಆಗಿದ್ದಾರೆ. ಶನಿವಾರ ಮುಂಜಾನೆ ಸ್ಥಳೀಯರು ವಾಕಿಂಗ್ ಮಾಡುವಾಗ ಮೃತ ದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ರಕ್ತಸಿಕ್ತವಾಗಿ ಬಿದ್ದಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಸದ್ಯ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಎಸ್‌ಐಟಿಯ ವಿಶೇಷ ತಂಡ ರಚನೆ; ಶೀಘ್ರ ರೆಡ್‌ ಕಾರ್ನರ್ ನೋಟಿಸ್‌ ಜಾರಿ

ಕೊಡಗಿನಲ್ಲಿ ಬಾಲಕಿಯ ರುಂಡ ಕತ್ತರಿಸಿದ್ದ ಆರೋಪಿಯ ಬಂಧನ

ಸೋಮವಾರಪೇಟೆ: ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯೊಬ್ಬಳನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ (Murder Case) ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ಗುರುವಾರ ನಡೆದು ರಾಜ್ಯವೇ ಬೆಚ್ಚಿ ಬಿದ್ದಿತ್ತು. ಇದೀಗ ಈ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹತ್ತನೇ ಕ್ಲಾಸ್‌ ಓದುತ್ತಿದ್ದ ಅಪ್ರಾಪ್ತೆ ಮೀನಾಳನ್ನು ಕೊಲೆ ಮಾಡಿದ್ದ ಆರೋಪಿ ಪ್ರಕಾಶ್‌ ಪತ್ತೆಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ.

ಬಾಲಕಿಯನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಪ್ರಕಾಶ್‌ ಕಾಡಿನಲ್ಲಿ ಪತ್ತೆಯಾಗಿದ್ದಾನೆ. ಸದ್ಯ ಆತನನ್ನು ಸೋಮವಾರಪೇಟೆ ಠಾಣೆಗೆ ಪೊಲೀಸರು ಕರೆ ತರುತ್ತಿದ್ದಾರೆ. ಬಾಲಕಿಯನ್ನು ಹತ್ಯೆ ಮಾಡಿದ ಬಳಿಕ ಈತ ರುಂಡ ಹಾಗೂ ಕೋವಿಯೊಂದಿಗೆ ಪರಾರಿಯಾಗಿದ್ದ. ಶುಕ್ರವಾರ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿತ್ತು. ಬಳಿಕ ಪೊಲೀಸರು ಸ್ಪಷ್ಟನೆ ನೀಡಿ ಆತ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ತಿಳಿಸಿದ್ದರು. ಇದೀಗ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಏನಿದು ಪ್ರಕರಣ?

ಮೀನಾ ಇನ್ನೂ ಹತ್ತನೇ ಕ್ಲಾಸ್‌ ಓದುತ್ತಿದ್ದ ಅಪ್ರಾಪ್ತೆ ಆಗಿದ್ದಳು. ಹೀಗಾಗಿ ಗುರುವಾರ ಮಧ್ಯಾಹ್ನ ಪೊಲೀಸರ ಸಮ್ಮುಖದಲ್ಲಿ ಮದುವೆ ನಿಶ್ಚಿತಾರ್ಥ ರದ್ದಾಗಿತ್ತು. ಸಂಜೆ ವೇಳೆ ಆಕೆಯ ಮನೆಗೆ ನುಗ್ಗಿದ ಆರೋಪಿ ಪ್ರಕಾಶ್‌ ಮೀನಾಳನ್ನು ಎಳೆದೊಯ್ದು ಕತ್ತು ಕೊಯ್ದಿದ್ದ. ನಂತರ ದೇಹವನ್ನು ಬಿಸಾಡಿ ರುಂಡ ಕೊಂಡೊಯ್ದಿದ್ದ. ಭೀಕರ ಘಟನೆಯು ಸುತ್ತಲಿನ ಜನರನ್ನು ಬೆಚ್ಚಿ ಬೀಳಿಸಿತ್ತು.

ಆಕೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದು ಗುರುವಾರವಷ್ಟೇ ಫಲಿತಾಂಶ ಪ್ರಕಟಗೊಂಡಿತ್ತು. ಇದೇ ವೇಳೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮೀನಾ ಮದುವೆ ನಿಶ್ಚಿತಾರ್ಥವನ್ನು ರದ್ದು ಮಾಡಲಾಗಿತ್ತು. ಪೊಲೀಸರೇ ಮುಂದೆ ನಿಂತು ಮದುವೆಯನ್ನು ಕೊನೆಗೊಳಿಸಿದ್ದರು. ಆದರೆ ಸಂಜೆ ವೇಳೆಗೆ ಆಕೆಯನ್ನು ಎಳೆದೊಯ್ದು ಪ್ರಕಾಶ್‌ ಕೊಲೆ ಮಾಡಿದ್ದ.

ಬಾಲಕಿಯನ್ನು ಆರೋಪಿ ಪ್ರಕಾಶ್‌ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ, ಅವರ ಮದುವೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ಬಾಲಕಿಗೆ ಮದುವೆಯ ಕಾನೂನುಬದ್ಧ ವಯಸ್ಸಾಗದ ಕಾರಣ ಪೊಲೀಸರು ಅದಕ್ಕೆ ತಡೆಯೊಡ್ಡಿದ್ದರು ಎನ್ನಲಾಗಿದೆ. ಇದರಿಂದ ಆರೋಪಿ ಕೆರಳಿದ್ದ. ಸಂಜೆ ವೇಳೆ ಬಾಲಕಿಯ ಮನೆಗೆ ನುಗ್ಗಿದ ಆತ ಅಲ್ಲಿಂದ ಎಳೆದೊಯ್ದಿದ್ದ. ಬಳಿಕ ಕತ್ತು ಕತ್ತರಿಸಿ ಕೊಲೆ ಮಾಡಿ ರುಂಡವನ್ನು ತೆಗೆದುಕೊಂಡು ಹೋಗಿದ್ದ.

ಎಸ್​ಎಸ್​ಎಲ್​ಸಿ ಪಾಸಾಗಿದ್ದ ಬಾಲಕಿ

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಗುರುವಾರವಷ್ಟೇ ಫಲಿತಾಂಶ ಪ್ರಕಟಿಸಿತ್ತು. ಅಂತೆಯೇ ಸುರ್ಲಬ್ಬಿ ಸರ್ಕಾರಿ ಹೈಸ್ಕೂಲ್​ನ ಏಕೈಕ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಮೀನಾ ಪರೀಕ್ಷೆಯಲ್ಲಿ ಪಾಸಾಗಿದ್ದರು. ಆಕೆ ತೇರ್ಗಡೆಗೊಂಡಿರುವ ಸಂಗತಿ ಶಾಲಾ ಅಧ್ಯಾಪಕರಿಗೆ ಸಂತಸ ತಂದಿದ್ದು. ಅಲ್ಲದೆ ಶಾಲೆಯಲ್ಲಿ ಶೇಕಡಾ 100 ಫಲಿತಾಂಶ ಬಂದಿತ್ತು. ಆದರೆ ಸಂಜೆಯ ವೇಳೆಗೆ ಬಾಲಕಿ ಭಯಾನಕವಾಗಿ ಕೊಲೆಯಾಗಿದ್ದಳು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Prajwal Revanna Case: ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಎಸ್‌ಐಟಿಯ ವಿಶೇಷ ತಂಡ ರಚನೆ; ಶೀಘ್ರ ರೆಡ್‌ ಕಾರ್ನರ್ ನೋಟಿಸ್‌ ಜಾರಿ

Prajwal Revanna Case: ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು ಮೂರು ಅತ್ಯಾಚಾರ ಕೇಸ್‌ಗಳು ದಾಖಲಾಗಿವೆ. ಆದರೆ ಅವರು ವಿದೇಶದಲ್ಲಿ ತಲೆಮರೆಸಿಕೊಂಡು ಇರುವ ಕಾರಣ ಈಗಾಗಲೇ ಬ್ಲ್ಯೂ ಕಾರ್ನರ್‌ ನೋಟಿಸ್ ನೀಡಲಾಗಿತ್ತು. ಶತಾಯಗತಾಯ ಅವರನ್ನು ಬಂಧಿಸಿ ಕರೆತರಲೇಬೇಕು ಎಂದು ತೀರ್ಮಾನಿಸಿರುವ ಎಸ್‌ಐಟಿ ಈಗ ವಿದೇಶದಿಂದ ಪ್ರಜ್ವಲ್ ಅವರನ್ನು ಕರೆತರಲು ವಿಶೇಷ ತಂಡವನ್ನು ರಚಿಸಿದೆ. ಓರ್ವ ಎಸ್‌ಪಿ, ಮೂವರು ಇನ್ಸ್‌ಪೆಕ್ಟರ್ ಹಾಗೂ ಮೂವರು ಜನ ಸಬ್ ಇನ್ಸ್‌ಪೆಕ್ಟರ್ ಈ ತಂಡದಲ್ಲಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical abuse) ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna case) ವಿರುದ್ಧ ಒಟ್ಟು ಮೂರು ಅತ್ಯಾಚಾರ ಕೇಸ್‌ಗಳು ದಾಖಲಾಗಿವೆ. ಆದರೆ ಅವರು ವಿದೇಶದಲ್ಲಿ ತಲೆಮರೆಸಿಕೊಂಡು ಇರುವ ಕಾರಣ ಈಗಾಗಲೇ ಬ್ಲ್ಯೂ ಕಾರ್ನರ್‌ ನೋಟಿಸ್ ನೀಡಲಾಗಿತ್ತು. ಶತಾಯಗತಾಯ ಅವರನ್ನು ಬಂಧಿಸಿ ಕರೆತರಲೇಬೇಕು ಎಂದು ತೀರ್ಮಾನಿಸಿರುವ ಎಸ್‌ಐಟಿ ಈಗ ವಿದೇಶದಿಂದ ಪ್ರಜ್ವಲ್ ಅವರನ್ನು ಕರೆತರಲು ವಿಶೇಷ ತಂಡವನ್ನು ರಚಿಸಿದೆ.

ಓರ್ವ ಎಸ್‌ಪಿ, ಮೂವರು ಇನ್ಸ್‌ಪೆಕ್ಟರ್ ಹಾಗೂ ಮೂವರು ಜನ ಸಬ್ ಇನ್ಸ್‌ಪೆಕ್ಟರ್ ಒಳಗೊಂಡ ತಂಡವನ್ನು ರಚಿಸಲಾಗಿದೆ. ಯೂರೋಪ್ ಬಳಿ ಇರುವ ಹಂಗೇರಿ ತಲುಪಲಿರುವ ಕರ್ನಾಟಕ ಪೊಲೀಸರು ಅಲ್ಲಿ ಹುಡುಕಾಟ ನಡೆಸಲಿದ್ದಾರೆ. ಈಗಾಗಲೇ ಭಾರತ ಹಾಗೂ ಜರ್ಮನಿ ಬಳಿ ಮ್ಯೂಚುಯಲ್ ಲೀಗಲ್ ಅಸಿಸ್ಟೆಂಟ್ ಟ್ರೀಟಿ (MLAT) ಬಗ್ಗೆ ಪರಿಶೀಲನೆ ನಡೆಸಿದ ಅಧಿಕಾರಿಗಳು ಸಿಬಿಐ ಸಹಾಯದಿಂದ ಇಂಟರ್ ಪೋಲ್ ಅಧಿಕಾರಿಗಳ ಜತೆ ಸಹ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.

ಪ್ರಜ್ವಲ್ ಬಳಿ ರಾಜತಾಂತ್ರಿಕ ಪಾಸ್‌ಪೋರ್ಟ್‌ ಇರುವುದರಿಂದ ಅವರು ಕೆಲವು ದೇಶಗಳಿಗೆ ವೀಸಾ ಇಲ್ಲದೆ ಪ್ರಯಾಣಿಸಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಎಸ್ಐಟಿ ವಿಶೇಷ ತನಿಖಾ ದಳ ಮಾಹಿತಿ ಕಲೆ ಹಾಕಿದೆ. ಒಂದು ವೇಳೆ ಇಂಡಿಯನ್ ಎಂಬಸ್ಸಿ ಕಡೆಯಿಂದ ಜರ್ಮನಿ ಎಂಬಸ್ಸಿ ಜತೆಗೆ ಮಾತುಕತೆ ನಡೆದರೆ ಖಂಡಿತವಾಗಲೂ ಪ್ರಜ್ವಲ್ ರೇವಣ್ಣ ಎಸ್ಐಟಿ ತೆಕ್ಕೆಗೆ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ರೆಡ್‌ ಕಾರ್ನರ್‌ ನೋಟಿಸ್‌ ಜಾರಿಗೆ ಚಿಂತನೆ

ಈಗಾಗಲೇ ಪ್ರಜ್ವಲ್ ಪತ್ತೆಗೆ ಬ್ಲ್ಯೂ ಕಾರ್ನರ್‌ ನೋಟಿಸ್ ಹೊರಡಿಸಿದ ಅಧಿಕಾರಿಗಳು ರೆಡ್‌ ಕಾರ್ನರ್‌ ನೋಟಿಸ್‌ ಜಾರಿಗೆ ಚಿಂತನೆ ನಡೆಸಿದ್ದಾರೆ. ಇಂದು ಅಥವಾ ನಾಳೆ ರೆಡ್ ಕಾರ್ನರ್ ನೋಟಿಸ್ ಸರ್ವ್ ಮಾಡಲು ಸಿದ್ಧತೆ ನಡೆಯುತ್ತಿದೆ. ಕೇಂದ್ರ ಗೃಹ ಸಚಿವಾಲಯದ ಜತೆ ಚರ್ಚೆ ನಡೆಸಿ ಇಂಟರ್ ಪೋಲ್ ಮೂಲಕ ರೆಡ್ ಕಾರ್ನರ್ ನೋಟಿಸ್ ಸರ್ವ್ ಮಾಡಲಾಗುತ್ತದೆ.

ರೆಡ್‌ ಕಾರ್ನರ್‌ ನೋಟಿಸ್‌ ಜಾರಿಯಾದರೆ ಏನಾಗುತ್ತೆ?

ಪ್ರಜ್ವಲ್ ರೇವಣ್ಣ ಬಂಧನಕ್ಕೆ ರೆಡ್ ಕಾರ್ನರ್ ನೋಟಿಸ್ ಹೊರಡಿಸಲು ಮನವಿ ಮಾಡಲು ಎಸ್‌ಐಟಿ ಚಿಂತನೆ ನಡೆಸಿದೆ. ಇದಕ್ಕೆ ಮೊದಲು ಸಿಬಿಐ ಸಂಸ್ಥೆಯು ಇಂಟರ್‌ಪೋಲ್‌ ಅನ್ನು ಸಂಪರ್ಕಿಸಿ ರೆಡ್ ಕಾರ್ನರ್ ನೋಟಿಸ್‌ಗೆ ಬೇಡಿಕೆ ಸಲ್ಲಿಸಬೇಕು. ರೆಡ್ ಕಾರ್ನರ್ ನೋಟಿಸ್ ಜಾರಿಯಾದರೆ, ಯಾವ ದೇಶದಲ್ಲಿದ್ದರೂ ಆ ದೇಶದ ಪೊಲೀಸರು ಆರೋಪಿಯನ್ನು ಬಂಧಿಸಿ ಸಂಬಂಧಪಟ್ಟ ದೇಶಕ್ಕೆ ಮಾಹಿತಿ ನೀಡುತ್ತಾರೆ. ನಂತರ ಇಲ್ಲಿನ ಪೊಲೀಸರು ಹೋಗಿ ಆತನನ್ನು ಕರೆತರುತ್ತಾರೆ. ಹೀಗಾಗಿ ಪ್ರಜ್ವಲ್‌ ವಿರುದ್ಧ ಈ ಕ್ರಮಕ್ಕೆ ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Prajwal Revanna case: ಪ್ರಜ್ವಲ್‌ ಮೇಲೆ ಒಟ್ಟು ಮೂರು FIR; ಮೂರರಲ್ಲೂ ವಾಂಟೆಡ್‌ ಲಿಸ್ಟ್‌ನಲ್ಲಿ ಸಂಸದ!

ಬ್ಲ್ಯೂ ಕಾರ್ನರ್‌ ನೋಟಿಸ್‌ ಜಾರಿಯಾದ ಬಳಿಕ ಇಂಟರ್‌ಪೋಲ್ ಇತರ ಕಡೆಗಳಿಗೂ ಆರೋಪಿಯ ಮಾಹಿತಿಯನ್ನು ಕಳಿಸಿ, ಆರೋಪಿಯ ನೆಲೆಯ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುತ್ತದೆ. ಆರೋಪಿ ಯಾವ ದೇಶದಲ್ಲಿ ಇದ್ದಾರೆ? ಎಲ್ಲಿ ಲೊಕೇಟ್ ಆಗಿದ್ದಾರೆ ಅನ್ನುವ ಚಲನವಲನಗಳನ್ನು ಈ ಮೂಲಕ ಪತ್ತೆ ಮಾಡುತ್ತಾರೆ. ಬಳಿಕ ಸಿಬಿಐಗೆ ಆರೋಪಿಯ ಚಲನವಲನ ಬಗ್ಗೆ ಮಾಹಿತಿ ನೀಡುತ್ತಾರೆ. ಸಿಬಿಐ ಮೂಲಕ ಎಸ್ಐಟಿಗೆ ಪ್ರಜ್ವಲ್ ಎಲ್ಲಿದ್ದಾರೆ ಅನ್ನುವ ಮಾಹಿತಿ ಸಿಗುತ್ತದೆ. ಹೀಗಾಗಿ ಈ ನೋಟಿಸ್‌ ನೀಡಲಾಗಿದ್ದು, ಇದು ಸುಳಿವು ಪಡೆಯಲು ಮುಖ್ಯವಾಗಿದೆ. ಆದರೆ ಇದರಿಂದ ಪ್ರಜ್ವಲ್‌ ಬಗ್ಗೆ ಸರಿಯಾದ ಮಾಹಿತಿ ಸಿಗುತ್ತಿಲ್ಲ ಎನ್ನಲಾಗಿದೆ. ಹೀಗಾಗಿ ರೆಡ್‌ ಕಾರ್ನರ್‌ ನೋಟಿಸ್‌ ಜಾರಿ ಮಾಡಲು ಸಿದ್ಧತೆ ನಡೆಸಲಾಗಿದೆ.

Continue Reading

ದೇಶ

K.S. Rajanna: ಛಲಬಿಡದ ಸಾಧಕನಿಗೆ ಪದ್ಮಶ್ರೀ ಗರಿ; ಅಂಗವೈಕಲ್ಯ ಮೆಟ್ಟಿನಿಂತ ಕನ್ನಡಿಗನಿಗೆ ದೇಶದ ನಮನ- ವೀಡಿಯೋ ವೈರಲ್‌

K.S. Rajanna:ವಿಕಲಚೇತನರ ಕಲ್ಯಾಣಕ್ಕಾಗಿ ಶ್ರಮಿಸಿದ ವಿಕಲಚೇತನ ಸಾಮಾಜಿಕ ಕಾರ್ಯಕರ್ತ ಕೆ.ಎಸ್.ರಾಜಣ್ಣ ಅವರಿಗೆ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಲು ವೇದಿಕೆಗೆ ತೆರಳುವ ಮುನ್ನ ರಾಜಣ್ಣ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಬಳಿಗೆ ಬಂದು ಅವರ ಕೈ ಕುಲುಕಿ, ಮಾತನಾಡಿದರು.

ರಾಜಣ್ಣ ನಂತರ ಪಕ್ಕದಲ್ಲೇ ಕುಳಿತಿದ್ದ ಅಮಿತ್‌ ಅವರ ಜೊತೆಯೂ ಮಾತನಾಡಿ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಆಸನದ ಕಡೆಗೆ ಸಾಗಿದರು. ಪ್ರಶಸ್ತಿ ಸ್ವೀಕಾರಕ್ಕೂ ಮುನ್ನ ರಾಷ್ಟ್ರಪತಿಗಳಿಗೆ ತಲೆಬಾಗಿ ನಮಸ್ಕರಿಸಿದರು.

VISTARANEWS.COM


on

K S Rajanna
Koo

ನವದೆಹಲಿ: ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ. ಸಾಧಿಸುವ ಮನೋಬಲ, ಆತ್ಮವಿಶ್ವಾಸ, ದೃಢವಾದ ನಂಬಿಕೆ ಇದ್ದರೆ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ. ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu) ಅವರು ಈ ಸಾಲಿನ ನಾಗರಿಕ ಪದ್ಮ ಪ್ರಶಸ್ತಿ(Padma Award)ಯನ್ನು ಪ್ರದಾನ ಮಾಡಿದರು. ಅಲ್ಲಿ ಪದ್ಮಶ್ರೀ ಪ್ರಶಸ್ತಿ(Padmashri Award) ಸ್ವೀಕರಿಸಲು ಬಂದಿದ್ದ ಈ ವ್ಯಕ್ತಿಯನ್ನು ಕಂಡು ಒಂದು ಕ್ಷಣ ಅಲ್ಲಿದ್ದ ಗಣ್ಯರು ಭಾವುಕರಾದ್ದದ್ದು ನಿಜ. ಬಾಲ್ಯದಲ್ಲಿ ಪೋಲಿಯೋದಿಂದ ಎರಡೂ ಕೈ ಕಾಲುಗಳನ್ನು ಕಳೆದುಕೊಂಡರೂ ಛಲ ಬಿಡದೇ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದು ಉದ್ಯಮಿಯಾಗಿ ಹಲವು ಅಂಗವಿಕಲರಿಗೆ ಉದ್ಯೋಗ ನೀಡಿ, ಪ್ಯಾರಾ-ಒಲಂಪಿಕ್ಸ್ ನಲ್ಲಿ ಪಾಲ್ಗೊಂಡು ದೇಶಕ್ಕೆ ಚಿನ್ನದ ಪದಕದ ಗರಿಯನ್ನೂ ತಂದಿದ್ದ ಈ ವ್ಯಕ್ತಿ ಬೇರೆ ಯಾರೂ ಅಲ್ಲ ಹೆಮ್ಮೆಯ ಕನ್ನಡಿಗ ಕೆ.ಎಸ್.ರಾಜಣ್ಣ(K.S. Rajanna)

ಗುರುವಾರ ನಡೆದ ಪದ್ಮ ಪ್ರಶಶ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ವಿಕಲಚೇತನರ ಕಲ್ಯಾಣಕ್ಕಾಗಿ ಶ್ರಮಿಸಿದ ವಿಕಲಚೇತನ ಸಾಮಾಜಿಕ ಕಾರ್ಯಕರ್ತ ಕೆ.ಎಸ್.ರಾಜಣ್ಣ ಅವರಿಗೆ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಲು ವೇದಿಕೆಗೆ ತೆರಳುವ ಮುನ್ನ ರಾಜಣ್ಣ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಬಳಿಗೆ ಬಂದು ಅವರ ಕೈ ಕುಲುಕಿ, ಮಾತನಾಡಿದರು.

ರಾಜಣ್ಣ ನಂತರ ಪಕ್ಕದಲ್ಲೇ ಕುಳಿತಿದ್ದ ಅಮಿತ್‌ ಅವರ ಜೊತೆಯೂ ಮಾತನಾಡಿ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಆಸನದ ಕಡೆಗೆ ಸಾಗಿದರು. ಪ್ರಶಸ್ತಿ ಸ್ವೀಕಾರಕ್ಕೂ ಮುನ್ನ ರಾಷ್ಟ್ರಪತಿಗಳಿಗೆ ತಲೆಬಾಗಿ ನಮಸ್ಕರಿಸಿದರು. ಇದಾದ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಗೌರವ ಸ್ವೀಕರಿಸಿದರು. ಈ ವೇಳೆ ಅಲ್ಲಿ ನೆರೆದಿದ್ದ ಗಣ್ಯರು ಚಪ್ಪಾಳೆ ಹೊಡೆದು ಅವರನ್ನು ಅಭಿನಂದಿಸಿದರು. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್‌ ಆಗಿದ್ದು, ನೋಡುಗರು ಬಹಳಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜಣ್ಣ ಹಿನ್ನೆಲೆ ಏನು?

ಕೇವಲ 11 ತಿಂಗಳ ಮಗುವಾಗಿದ್ದಾಗ ಮಹಾಮಾರಿ ಪೋಲಿಯೋದಿಂದ ತಮ್ಮ ಎರಡೂ ಕೈಗಳು ಮತ್ತು ಕಾಲುಗಳನ್ನು ಕಳೆದುಕೊಂಡಿದ್ದ ರಾಜಣ್ಣ, ತಮ್ಮ ಕೊರತೆಗಳ ಬಗ್ಗೆ ಕುಗ್ಗದೇ ಅದನ್ನೇ ಸವಾಲಾಗಿ ಸ್ವೀಕರಿಸಿ ಮೆಕ್ಯಾನಿಕಲ್ ಎಂಜಿನಿಯರ್ ಪದವಿ ಪಡೆದ ಅವರು ಉದ್ಯಮಿಯಾದರು. ತಮ್ಮ ರೀತಿಯೇ ಸಮಾಜದಲ್ಲಿ ಅಂಗವೈಕಲ್ಯಕ್ಕೆ ತುತ್ತಾಗಿ ಸಂಕಷ್ಟ ಎದುರಿಸುತ್ತಿರವ ಅನೇಕರಿಗೆ ಕೆಲಸ ನೀಡುವ ಮೂಲಕ ವಿಭಿನ್ನರಾಗಿ ನಿಂತವರು ರಾಜಣ್ಣ. 2002ರ ಪ್ಯಾರಾ ಒಲಿಂಪಿಕ್ಸ್‌ನಲ್ಲಿ ರಾಜಣ್ಣ ಅವರು ಡಿಸ್ಕಸ್ ಥ್ರೋದಲ್ಲಿ ಚಿನ್ನ ಹಾಗೂ ಈಜು ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸುವ ಮೂಲಕ ದೇಶಕ್ಕೆ ಹೆಮ್ಮೆ ತಂದಿದ್ದರು.

ಇದನ್ನೂ ಓದಿ: CAA: ಕೇಂದ್ರ ಸೂಚನೆ ಕೊಟ್ಟ ಕೂಡಲೇ ಮಧ್ಯಪ್ರದೇಶದಲ್ಲಿ ಸಿಎಎ ಜಾರಿ; ಸಿಎಂ ಮೋಹನ್‌ ಯಾದವ್‌

ಸಕ್ಕರೆ ಸವಿದಷ್ಟೇ ಖುಷಿಯಾಯ್ತು ಎಂದ ರಾಜಣ್ಣ

ಇನ್ನು ಪದ್ಮ ಪ್ರಶಸ್ತಿ ಪಡೆದಿರುವ ಬಗ್ಗೆ ರಾಜಣ್ಣ, ಮಂಡ್ಯ ಜಿಲ್ಲೆ ಮೂಲದವನಾದ ನನಗೆ ಈ ಪ್ರಶಸ್ತಿಯು ಸಕ್ಕರೆ ತಿಂದಂತೆ ಸಿಹಿ ಎನಿಸುತ್ತಿದೆ. ದೈಹಿಕ ನ್ಯೂನತೆ ಹೊಂದಿರುವ ವ್ಯಕ್ತಿಗಳಿಗೆ ರಾಜಕೀಯ ಮೀಸಲಾತಿ ಇಲ್ಲ. ಈ ಪ್ರಶಸ್ತಿಯು ವಿಧಾನ ಪರಿಷತ್ ಅಥವಾ ರಾಜ್ಯಸಭೆಗೆ ಸದಸ್ಯರಾಗಿ ಅಂಗವೈಕಲ್ಯವುಳ್ಳ ವ್ಯಕ್ತಿಯನ್ನು ನೇಮಿಸುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಪ್ರೇರಣೆ ನೀಡಲಿದೆ ಎಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.

Continue Reading

ಕ್ರೈಂ

ಬೆಂಗಳೂರಿನಲ್ಲಿ ಮಿತಿ ಮೀರಿದ ಪುಂಡರ ಹಾವಳಿ; ಹಾಡ ಹಗಲೇ ಯುವತಿಗೆ ಅನ್ಯಕೋಮಿನ ಯುವಕರಿಂದ ಕಿರುಕುಳ

Viral News: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪುಂಡರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದಕ್ಕೆ ಲೇಟೆಸ್ಟ್‌ ಉದದಾಹರಣೆ ಈ ಘಟನೆ. ಹಾಡ ಹಗಲೇ ರಸ್ತೆಯ ಪಕ್ಕ ನಿಂತಿದ್ದ ಯುವತಿಗೆ ಇಬ್ಬರು ಮುಸ್ಲಿಂ ಯುವಕರು ಅವಾಚ್ಯವಾಗಿ ನಿಂದಿಸಿ ಕಿರುಕುಳ ನೀಡಿದ ಘಟನೆ ನಡೆದಿದ್ದು ಹಲವರನ್ನು ಬೆಚ್ಚಿ ಬೀಳಿಸಿದೆ. ಸದ್ಯ ಘಟನೆಯ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಇದು ಬಿ.ಟಿ.ಎಂ‌. ಲೇ ಔಟ್‌ನಲ್ಲಿ ನಡೆದಿರುವ ಘಟನೆ ಎನ್ನಲಾಗಿದ್ದು, ಮಹಿಳೆಯರ ಸುರಕ್ಷತೆ ಬಗ್ಗೆ ಹಲವರು ಕಳವಳ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Viral News
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪುಂಡರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾತ್ರಿ ಬಿಡಿ ಹಗಲಿನಲ್ಲೇ ಮಹಿಳೆಯರು, ಯುವತಿಯರು, ಮಕ್ಕಳು ಓಡಾಡಲು ಭಯಪಡುವಂತಾಗಿದೆ. ಇದಕ್ಕೆ ಲೇಟೆಸ್ಟ್‌ ಉದದಾಹರಣೆ ಈ ಘಟನೆ. ಹಾಡ ಹಗಲೇ ರಸ್ತೆಯ ಪಕ್ಕ ನಿಂತಿದ್ದ ಯುವತಿಗೆ ಇಬ್ಬರು ಮುಸ್ಲಿಂ ಯುವಕರು ಅವಾಚ್ಯವಾಗಿ ನಿಂದಿಸಿ ಕಿರುಕುಳ ನೀಡಿದ ಘಟನೆ ನಡೆದಿದ್ದು ಹಲವರನ್ನು ಬೆಚ್ಚಿ ಬೀಳಿಸಿದೆ. ಸದ್ಯ ಘಟನೆಯ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ (Viral News).

ರಸ್ತೆ ಬದಿಯಲ್ಲಿ ಸ್ಕೂಟಿ‌ ನಿಲ್ಲಿಸಿಕೊಂಡು ನಿಂತಿದ್ದ ಯುವತಿ ಬಳಿಗೆ ಬಂದ ಸ್ಕೂಟರ್‌ನಲ್ಲಿದ್ದ ಇಬ್ಬರು ಯುವಕರು ಹಿಂದಿಯಲ್ಲಿ ನಿಂದಿಸಿದ್ದಾರೆ. ಇದು ಬಿ.ಟಿ.ಎಂ‌. ಲೇ ಔಟ್‌ನಲ್ಲಿ ನಡೆದಿರುವ ಘಟನೆ ಎನ್ನಲಾಗಿದ್ದು, ಮಹಿಳೆಯರ ಸುರಕ್ಷತೆ ಬಗ್ಗೆ ಹಲವರು ಕಳವಳ ವ್ಯಕ್ತಪಡಿಸಿದ್ದಾರೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ವಿಡಿಯೊದಲ್ಲಿ ಏನಿದೆ?

ರಸ್ತೆಯ ಪಕ್ಕ ಸ್ಕೂಟಿ ನಿಲ್ಲಿಸಿ ಯುವತಿ ತಮ್ಮ ಪಾಡಿಗೆ ತಾವು ನಿಂತಿದ್ದರು. ಅಲ್ಲಿಗೆ ಸ್ಕೂಟರ್‌ನಲ್ಲಿ ಬಂದ ಇಬ್ಬರು ಮುಸ್ಲಿಂ ಯುವಕರು, ʼʼಕುಡಿದ ನಶೆಯಲ್ಲಿ ರೋಡ್ ಶೋ ಮಾಡುತ್ತೀಯಾ?ʼʼ ಎಂದು ಬೈದಿದ್ದಾರೆ. ಯುವಕರ ಅವಾಚ್ಯ ನಿಂದನೆಯಿಂದ ಒಂದು ಕ್ಷಣ ಗಾಬರಿಗೊಳಗಾದ ಯುವತಿ ಬಳಿಕ ಅವರನ್ನು ದಿಟ್ಟವಾಗಿ ಎದುರಿಸಿದ್ದಾರೆ. ಅವರನ್ನೇ ಪ್ರಶ್ನಿಸಿದ್ದಾರೆ. ಇದರಿಂದ ಕೆರಳಿದ ಪುಂಡರು ಅಶ್ಲೀಲ ಪದಗಳಿಂದ ಯುವತಿಯನ್ನು ಹಿಂದಿಯಲ್ಲಿ ನಿಂದಿಸಿದ್ದಾರೆ. ಹೀಗೆ ಯುವಕರು ಕೆಲಕಾಲ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿರುವುದು ವಿಡಿಯೊದಲ್ಲಿ ದಾಖಲಾಗಿದೆ.

ಸದ್ಯ ಈ ವಿಡಿಯೊ ವೈರಲ್ ಆಗಿದ್ದು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಸದ್ಯ ಈ ಪ್ರಕರಣದಲ್ಲಿ ಯಾವುದೇ ದೂರು ದಾಖಲಾಗಿಲ್ಲ. ಆದರೂ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು. ಹೀಗೆ ಅನುಚಿತವಾಗಿ ವರ್ತಿಸುವವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಹಲವರು ಆಗ್ರಹಿಸಿದ್ದಾರೆ.

ನಡುಬೀದಿಯಲ್ಲಿ ಲೈಂಗಿಕ ಕಿರುಕುಳ

ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲೇ ಬಿಹಾರ ಮೂಲದ ದಂಪತಿಗೆ ಲೈಂಗಿಕ ಕಿರುಕುಳದ ಕರಾಳ ಅನುಭವ ಆಗಿದ್ದು, ಅದರಿಂದ ಪಾರಾಗಲು ಇಬ್ಬರೂ ಒದ್ದಾಡಿದ್ದಾರೆ. ನಗರದಲ್ಲಿ ಪದೇ ಪದೆ ಬೆಳಕಿಗೆ ಬರುತ್ತಿರುವ ಹೆಣ್ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಇದೂ ಒಂದು ಸೇರ್ಪಡೆ. ರಾತ್ರಿ ಸಮಯದಲ್ಲಿ ಯುವತಿಯೊಬ್ಬಳಿಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ್ದಾರೆ. ನಡು ರಸ್ತೆಯಲ್ಲೇ ಯುವತಿಗೆ ಲೈಂಗಿಕ ಕಿರುಕುಳ ಮಾಡಿದ್ದಾರೆ ಎಂದು ಯುವತಿ ಹಾಗೂ ಆಕೆಯ ಪತಿ ಆರೋಪಿಸಿದ್ದಾರೆ. ಕೊಡಿಗೆಹಳ್ಳಿಯ ವಿರೂಪಾಕ್ಷಪುರದಲ್ಲಿ ಒಂದು ವಾರದ ಹಿಂದೆ 10:30ರ ಸುಮಾರಿಗೆ ನಡೆದ ಘಟನೆ ಇದು.

ಜತೆಗಿದ್ದ ದಂಪತಿಯ ಬಳಿ ಬಂದ ಮೂರ್ನಾಲ್ಕು ಪುಂಡರು, ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಯುವತಿಗೆ ಒತ್ತಾಯ ಮಾಡಿದ್ದಾರೆ. ಒಪ್ಪದಿದ್ದಾಗ ಕಿಡ್ನ್ಯಾಪ್ ಮಾಡುವ ಬೆದರಿಕೆ ಹಾಕಿದ್ದಾರೆ. ಈ ದಂಪತಿ ಬಿಹಾರ ಮೂಲದವರಾಗಿದ್ದು, ಈ ದಂಪತಿಗೆ ನಿನ್ನೆ ರಾತ್ರಿ ಕರಾಳ ಅನುಭವವಾಗಿದೆ. ಹೆಂಡತಿಯನ್ನು ಕಳಿಸುವಂತೆ ಪುಂಡರು ಗಂಡನಿಗೆ ಬೆದರಿಕೆ ಹಾಕಿದ್ದಾರೆ. ಗಂಡನ ಸ್ನೇಹಿತನಿಂದಲೇ ಕೃತ್ಯ ನಡೆದಿದೆ. ಹೀಗಾಗಿ ಸದ್ಯ ಬೆಂಗಳೂರಿಗರು ಒಬ್ಬರೇ ಓಡಾಡಲು ಭಯಪಡುವಂತಾಗಿದೆ.

ಇದನ್ನೂ ಓದಿ: Physical Abuse: ನಡುಬೀದಿಯಲ್ಲಿ ಲೈಂಗಿಕ ಕಿರುಕುಳ, ಹೆಂಡತಿಯನ್ನು ಕಳಿಸುವಂತೆ ಗಂಡನಿಗೆ ಬೆದರಿಕೆ

Continue Reading
Advertisement
Murder case in Bengaluru rural
ಬೆಂಗಳೂರು ಗ್ರಾಮಾಂತರ12 mins ago

Murder case : ತಡರಾತ್ರಿ ಹರಿದ ನೆತ್ತರು; ಕತ್ತು ಸೀಳಿ ಯುವಕನ ಬರ್ಬರ ಹತ್ಯೆ

Narendra Modi
ದೇಶ14 mins ago

Narendra Modi: “ದಿವ್ಯಾಂಗ ಸಹೋದರಿಯರಿಗೆ ವ್ಯವಸ್ಥೆ ಮಾಡಿ.. ಅಲ್ಲಿವರೆಗೆ ಭಾಷಣ ಮುಂದುವರೆಸಲ್ಲ”; ಪ್ರಧಾನಿ ಮೋದಿ ವಿಡಿಯೋ ವೈರಲ್

Prajwal Revanna Case
ಕರ್ನಾಟಕ18 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಎಸ್‌ಐಟಿಯ ವಿಶೇಷ ತಂಡ ರಚನೆ; ಶೀಘ್ರ ರೆಡ್‌ ಕಾರ್ನರ್ ನೋಟಿಸ್‌ ಜಾರಿ

K S Rajanna
ದೇಶ1 hour ago

K.S. Rajanna: ಛಲಬಿಡದ ಸಾಧಕನಿಗೆ ಪದ್ಮಶ್ರೀ ಗರಿ; ಅಂಗವೈಕಲ್ಯ ಮೆಟ್ಟಿನಿಂತ ಕನ್ನಡಿಗನಿಗೆ ದೇಶದ ನಮನ- ವೀಡಿಯೋ ವೈರಲ್‌

Viral News
ಕ್ರೈಂ2 hours ago

ಬೆಂಗಳೂರಿನಲ್ಲಿ ಮಿತಿ ಮೀರಿದ ಪುಂಡರ ಹಾವಳಿ; ಹಾಡ ಹಗಲೇ ಯುವತಿಗೆ ಅನ್ಯಕೋಮಿನ ಯುವಕರಿಂದ ಕಿರುಕುಳ

CAA
ದೇಶ2 hours ago

CAA: ಕೇಂದ್ರ ಸೂಚನೆ ಕೊಟ್ಟ ಕೂಡಲೇ ಮಧ್ಯಪ್ರದೇಶದಲ್ಲಿ ಸಿಎಎ ಜಾರಿ; ಸಿಎಂ ಮೋಹನ್‌ ಯಾದವ್‌

Heavy Rain
ಕರ್ನಾಟಕ2 hours ago

Heavy Rain: ಬೆಂಗಳೂರಿನಲ್ಲಿ ಮಳೆಯ ಅಬ್ಬರ; ಹಲವೆಡೆ ರಸ್ತೆಯಲ್ಲೇ ಹರಿದ ನೀರು, ಸಂಚಾರ ಅಸ್ತವ್ಯಸ್ತ

Dharwad News
ಕ್ರೈಂ3 hours ago

Dharwad News: ರಥೋತ್ಸವ ವೇಳೆ ದುರಂತ; ರಥದ ಚಕ್ರಕ್ಕೆ ಸಿಲುಕಿ ಭಕ್ತ ಸಾವು

cyber crime
ದೇಶ3 hours ago

Cyber crime: ದೇಶಾದ್ಯಂತ 28,000ಕ್ಕೂ ಹೆಚ್ಚು ಮೊಬೈಲ್‌ ಫೋನ್‌ಗಳು ಬ್ಲಾಕ್‌!

Murder Case
ಕ್ರೈಂ3 hours ago

Murder Case: ಕೊಡಗಿನಲ್ಲಿ ಬಾಲಕಿಯ ರುಂಡ ಕತ್ತರಿಸಿದ್ದ ಆರೋಪಿಯ ಬಂಧನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ21 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ22 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ23 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ1 day ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ2 days ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಟ್ರೆಂಡಿಂಗ್‌