World Hearing Day: ಇಂದು ವಿಶ್ವ ಶ್ರವಣ ದಿನ: ಸ್ವಲ್ಪ ಹೇಳಿದ್ದು ಕೇಳಿಸ್ಕೊಳ್ಳಿ! - Vistara News

ಆರೋಗ್ಯ

World Hearing Day: ಇಂದು ವಿಶ್ವ ಶ್ರವಣ ದಿನ: ಸ್ವಲ್ಪ ಹೇಳಿದ್ದು ಕೇಳಿಸ್ಕೊಳ್ಳಿ!

ನಾನಾ ರೀತಿಯ ಔಷಧಿಗಳು, ಯಾವುದಕ್ಕೂ ಸಲ್ಲದ ಆಹಾರಕ್ರಮ, ಜಡಭರತನಂಥ ಜೀವನಶೈಲಿ ಮತ್ತು ಕುಲಗೆಟ್ಟ ಚಟಗಳು ಕಿವಿಯ ಶಕ್ತಿಯನ್ನು ಕುಂದಿಸಬಲ್ಲವು.

VISTARANEWS.COM


on

significance of World Hearing Day
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೇಳಿಸದವರ ಸಂಖ್ಯೆ ಈಗೀಗ ಹೆಚ್ಚಾಗುತ್ತಿದೆ. ಅಂದರೆ, ಸಂಗಾತಿ ಕರೆದಾಗ ಕೇಳದಿರುವುದು, ಅಪ್ಪ-ಅಮ್ಮ ಹೇಳಿದ್ದು ಕೇಳದಿರುವುದು, ಶಾಲೆಯಲ್ಲಿ ಶಿಕ್ಷಕರ ಮಾತು ಕೇಳದಿರುವುದು- ಇಂಥ ಜಾಣ ಕಿವುಡಿನ ಬಗ್ಗೆಯಲ್ಲ ಇಲ್ಲಿ ಹೇಳುತ್ತಿರುವುದು. ಶ್ರವಣ ಸಾಮರ್ಥ್ಯ ಕುಂಠಿತವಾಗುತ್ತಿರುವ ಬಗೆಗಿನ ಆತಂಕವಿದು. ನಮ್ಮ ಕಿವಿ ಮತ್ತು ಕೇಳುವ ಸಾಧ್ಯತೆಯನ್ನು ಜತನ ಮಾಡುವ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಮಾರ್ಚ್‌ 3ರಂದು ವಿಶ್ವ ಶ್ರವಣ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷದ ಘೋಷವಾಕ್ಯ- “ಎಲ್ಲರಿಗೂ ಶ್ರವಣ ಮತ್ತು ಶ್ರವಣೇಂದ್ರಿಯದ ಆರೈಕೆ” (Ear and hearing care for all)

ಈಗಿನ ಬದುಕೇ ಗದ್ದಲದ್ದು. ಮನೆಯಿಂದ ಹೊರಗೆ ಬಂದರೆ ಟ್ರಾಫಿಕ್ಕಿನ ಗಲಾಟೆ, ಕಾರ್ಖಾನೆಗಳು, ರಸ್ತೆ- ಕಟ್ಟಡ ಇತ್ಯಾದಿಗಳ ನಿರ್ಮಾಣ ಕೆಲಸಗಳು- ಕಿವಿಗೆ ಬೇಕಾದ್ದು ಕೇಳುವುದಕ್ಕೆ ಆಸ್ಪದವೇ ಇಲ್ಲದಷ್ಟು ಶಬ್ದ. ಮನೆಯೊಳಗೆ ಹೋದರೆ ಫ್ರಿಜ್‌, ಟಿವಿ, ವಾಷಿಂಗ್‌ ಮಿಷನ್‌, ಮಿಕ್ಸರ್‌, ಕುಕ್ಕರ್‌, ಫೋನು, ಫ್ಯಾನ್-‌ ಅಂತೂ ಒಂದಿಲ್ಲೊಂದು ದುಂಬಿಯಂತೆ ಗುಂ…ಯ್‌ ಗುಟ್ಟುತ್ತಲೇ ಇರುತ್ತದೆ. ರಾತ್ರಿಯ ನೀರವತೆಯಲ್ಲಿ ನಾವು ಇಯರ್‌ಫೋನ್‌ ಕಿವಿಗೆ ತುರುಕಿಕೊಂಡರೆ- ಅಲ್ಲಿಗೆ ಮನದ ಕದ ತಟ್ಟುವ ಸೌಮ್ಯ ನಾದಕ್ಕೆ ಬದುಕಿನಲ್ಲಿ ಎಡೆಯೇ ಇಲ್ಲ. ನಮಗರಿವಿಲ್ಲದಿದ್ದರೂ ಬಡಪಾಯಿ ಕಿವಿಯಂತೂ ಸದಾ ಜಾಗೃತವಾಗಿಯೇ ಇರಬೇಕಲ್ಲ.

ಇದಿಷ್ಟು ಸಾಲದೆಂಬಂತೆ ನಾನಾ ರೀತಿಯ ಔಷಧಿಗಳು, ಯಾವುದಕ್ಕೂ ಸಲ್ಲದ ಆಹಾರಕ್ರಮ, ಜಡಭರತನಂಥ ಜೀವನಶೈಲಿ ಮತ್ತು ಕುಲಗೆಟ್ಟ ಚಟಗಳು – ಕಿವಿಯ ಶಕ್ತಿ ಕುಂದದೆ ಇನ್ನೇನಾದೀತು? ಇತ್ತೀಚಿನ ಅಧ್ಯಯನದ ಪ್ರಕಾರ, ಧೂಮಪಾನಿಗಳಿಗೆ ಕೇಳುವ ಸಾಮರ್ಥ್ಯ ಉಳಿದರಿಗಿಂತ ಕಡಿಮೆಯಂತೆ. ಸಿಗರೇಟ್ ಬಿಡುವ ಬಗೆಗಿನ ಬುದ್ಧಿ ಮಾತನ್ನು ಅವರು ಕೇಳದೆ ಇರುವುದಕ್ಕೆ ಕಿವಿ ಸರಿಯಿಲ್ಲದ್ದೇ ಕಾರಣ ಎನ್ನಬೇಡಿ ಮತ್ತೆ! ಸಿಗರೇಟ್‌ ತ್ಯಜಿಸಿದರೆ ಕಿವುಡುತನದ ಅಪಾಯ ಕ್ರಮೇಣ ಕಡಿಮೆಯಾಗುತ್ತದೆ ಎಂಬುದನ್ನೂ ಈ ಅಧ್ಯಯನ ತಿಳಿಸಿದೆ.

ಇದನ್ನೂ ಓದಿ: World Wildlife Day: ಇಂದು ವಿಶ್ವ ವನ್ಯಜೀವಿ ದಿನ: ಏನಿದರ ಮಹತ್ವ?

ವಿಶ್ವ ಆರೋಗ್ಯ ಸಂಸ್ಥೆಯ ಮಾಹಿತಿಯ ಪ್ರಕಾರ, ಜಗತ್ತಿನಲ್ಲಿ 15 ಕೋಟಿ ಮಂದಿ ಕಿವುಡುತನದಿಂದ ನರಳುತ್ತಿದ್ದಾರೆ. 2050ರ ವೇಳೆಗೆ ಈ ಸಂಖ್ಯೆ 25 ಕೋಟಿ ತಲುಪುವ ನಿರೀಕ್ಷೆಯಿದೆ. ಅದರಲ್ಲೂ ಯುವ ಜನತೆ ಬಲು ಬೇಗನೆ ತಮ್ಮ ಶ್ರವಣ ಸಾಮರ್ಥ್ಯ ಕಳೆದುಕೊಳ್ಳುತ್ತಿದ್ದಾರೆ ಎಂಬುದು ಆತಂಕ ಹುಟ್ಟಿಸುವ ಸಂಗತಿಯಾಗಿದೆ. ಅತಿಯಾಗಿ ಇಯರ್‌ ಫೋನ್‌ ಬಳಸುವುದು ಒಂದು ಕಾರಣವಾದರೆ, ಸಿಗರೇಟ್‌ ಮತ್ತು ಆಲ್ಕೊಹಾಲ್‌ ಇನ್ನೊಂದು ಕಾರಣ. ಅಮೆರಿಕನ್‌ ಜರ್ನಲ್‌ ಆಫ್‌ ಮೆಡಿಸಿನ್‌ನಲ್ಲಿ ಪ್ರಕಟವಾದ ಅಧ್ಯಯನವೊಂದು ಈ ಬಗ್ಗೆ ವಿವರವಾಗಿ ಬೆಳಕು ಚೆಲ್ಲಿದೆ. 15.34 ಮಂದಿ ಯುವ ಜನರನ್ನು ಬಳಸಿಕೊಂಡು ನಡೆಸಲಾಗಿದ್ದ ಅಧ್ಯಯನದಲ್ಲಿ, 2760 ಮಂದಿ ಈಗಾಗಲೇ ಶ್ರವಣ ಸಮಸ್ಯೆಗೆ ತುತ್ತಾಗಿದ್ದರು. ಇವರಲ್ಲಿ ಹೆಚ್ಚಿನವರು ಸಿಗರೇಟ್‌ ಪ್ರೇಮಿಗಳು.

ತಜ್ಞರ ಸಲಹೆಗಳನ್ನು ಕೇಳಿ

ಸದಾ ಇಯರ್‌ ಫೋನ್‌ ಬಳಸುವವರಿಗೂ ತಜ್ಞರು ಕೆಲವು ಸಲಹೆಗಳನ್ನು ನೀಡುತ್ತಾರೆ. ಉಪಕರಣದ ಶೇ. 60ರಷ್ಟು ಸಾಮರ್ಥ್ಯ ಮೀರಿ ವಾಲ್ಯೂಮ್‌ ಇಟ್ಟುಕೊಳ್ಳುವುದು ಬೇಡ. ಇದಕ್ಕಿಂತ ಹೆಚ್ಚಿನ ವಾಲ್ಯೂಮ್‌ನಲ್ಲಿ ಇಯರ್‌ಫೋನ್‌ ಬಳಸುವವರು, ದಿನಕ್ಕೆ 90 ನಿಮಿಷಕ್ಕಿಂತ ಹೆಚ್ಚಿನ ಹೊತ್ತು ಬಳಸುವುದು ಸಲ್ಲದು.

ದೀರ್ಘ ಕಾಲ ಇಯರ್‌ ಫೋನ್‌ ಬಳಸುವವರು ಹೊರಗಿನ ಗದ್ದಲ ಕಡಿಮೆ ಮಾಡುವ ನಾಯ್ಸ್‌ ಕ್ಯಾನ್ಸಲಿಂಗ್‌ ಉಪಕರಣಗಳನ್ನು ಬಳಸುವುದು ಒಳ್ಳೆಯದು. ಹೊರಗಿನ ಗಲಾಟೆ ಕಡಿಮೆ ಇದ್ದರೆ, ಕಡಿಮೆ ವಾಲ್ಯೂಮ್‌ನಲ್ಲೇ ಇಯರ್‌ಫೋನ್‌ ಬಳಸಬಹುದು.

ಆಗಾಗಿ ಇಯರ್‌ಫೋನ್‌ನಿಂದ ಬಿಡುವು ಅಗತ್ಯ. ತಾಸಿಗೊಮ್ಮೆ ಇಯರ್‌ ಫೋನ್‌ ತೆಗೆದು ಕೆಲವು ನಿಮಿಷಗಳವರೆಗೆ ಕಿವಿಗೆ ವಿಶ್ರಾಂತಿ ನೀಡಿ. ಕೆಲಸ ಮಾಡುವ ಸ್ಥಳದಲ್ಲಿ ಸಿಕ್ಕಾಪಟ್ಟೆ ಗದ್ದಲ ಇದ್ದರೆ, ಅಲ್ಲಿಂದ ಹೊರಗೆ ಹೋದ ಮೇಲೆ ಮತ್ತೆ ಇಯರ್‌ಫೋನ್‌ ಬಳಸಬೇಡಿ. ಕಿವಿಯ ಮೇಲೆ ಕರುಣೆ ತೋರಿ!

ಕಣ್ಣು, ಕಿವಿ ಅಥವಾ ಮೂಗಿನಲ್ಲಿ ಯಾವುದೇ ಸೋಂಕಿದ್ದರೆ, ಅದನ್ನು ಆದಷ್ಟೂ ಶೀಘ್ರ ವೈದ್ಯರಲ್ಲಿ ತೋರಿಸಿ. ಇಂಥ ಸೋಂಕುಗಳು ನೇರವಾಗಿ ಕೇಳುವ ಸಾಧ್ಯತೆಯ ಮೇಲೆ ಪರಿಣಾಮ ಬೀರುತ್ತವೆ. ಹಾಗೆಯೇ, ಸಿಕ್ಕಿದ ಯಾವುದೋ ಡ್ರಾಪ್‌ ಕಿವಿಗೆ ಹಾಕುವುದು ಅಥವಾ ಕಡ್ಡಿ, ಪೆನ್ನು, ಪೆನ್ಸಿಲ್‌ನಂಥ ಏನನ್ನೂ ಕಿವಿಯೊಳಗೆ ಹಾಕಿ ಶುಚಿ ಮಾಡುವ ಸಾಹಸ ಕೂಡದು. ರಕ್ತದೊತ್ತಡ ಮತ್ತು ಹೃದ್ರೋಗಗಳು ಸಹ ಕಿವಿಯ ಮೇಲೆ ಘೋರ ಪರಿಣಾಮ ಬೀರಬಲ್ಲವು.

ನಿಯಮಿತವಾಗಿ ವ್ಯಾಯಾಮ ಮಾಡುವುದು ಶ್ರವಣೇಂದ್ರಿಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರಬಲ್ಲದು. ವ್ಯಾಯಾಮದಿಂದ ದೇಹದೆಲ್ಲೆಡೆ ರಕ್ತ ಸಂಚಲನೆ ಸರಾಗವಾಗಿ, ಆಮ್ಲಜನಕದ ಮಟ್ಟ ಹೆಚ್ಚಿದಂತೆ ಕಿವಿಗೂ ಆಗುತ್ತದೆ. ಅದರಲ್ಲೂ ಹೆಚ್ಚಿನ ಗದ್ದಲವಿಲ್ಲದೆ ಮಾಡುವ ಯೋಗ-ಧ್ಯಾನದಂಥವು ಕಿವಿಯ ಆರೋಗ್ಯಕ್ಕೂ ಒಳ್ಳೆಯದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Health Tips: ಕಿಡ್ನಿಕಲ್ಲಿನ ಸಮಸ್ಯೆ ನಿವಾರಣೆಗೆ ಬಾಳೆ ದಿಂಡನ್ನು ಹೀಗೆ ಬಳಸಿ…

Health Tips: ತೆಂಗಿನಂತೆ ಬಾಳೆಯೂ ಕಲ್ಪವೃಕ್ಷ ಎನಿಸಿಕೊಂಡಿದೆ. ಇದರ ಪ್ರತಿಯೊಂದು ಭಾಗವೂ ಉಪಯೋಗಕ್ಕೆ ಬರುತ್ತದೆ. ಅದರಲ್ಲಿಯೂ ಬಾಳೆದಿಂಡಿನಲ್ಲಿ ಅಪೂರ್ವ ಔಷಧೀಯ ಗುಣಗಳಿವೆ. ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸುವ ಅದ್ಭುತ ಶಕ್ತಿ ಬಾಳೆ ದಿಂಡಿಗಿದೆ. ಜತೆಗೆ ಗ್ಯಾಸ್ಟ್ರಿಕ್ ಸಮಸ್ಯೆ, ಮೂತ್ರಪಿಂಡದ ಸಮಸ್ಯೆಗೆ ಇದು ರಾಮಬಾಣ. ಖಾಲಿ ಹೊಟ್ಟೆಯಲ್ಲಿ ಬಾಳೆದಿಂಡಿರ ರಸವನ್ನು ಸೇವಿಸುವುದರಿಂದ ಎಸಿಡಿಟಿ ಸಮಸ್ಯೆ ದೂರವಾಗುತ್ತದೆ.

VISTARANEWS.COM


on

Health Tips
Koo

ಕುಮಾರ ಪೆರ್ನಾಜೆ, ಪುತ್ತೂರು
ಬೆಂಗಳೂರು: ಕಲ್ಪವೃಕ್ಷ ಎಂದಾಕ್ಷಣ ತೆಂಗಿನ ಚಿತ್ರ ನಮ್ಮ ಕಣ್ಣ ಮುಂದೆ ಬರುತ್ತದೆ. ಅದರ ಜತೆಗೆ ಬಾಳೆಯೂ ಕಲ್ಪವೃಕ್ಷವೇ. ತೆಂಗಿನಂತೆ ಇದರ ಎಲ್ಲ ಭಾಗಗಳು ಉಪಯುಕ್ತ. ಬಾಳೆ ದಿಂಡು ಉತ್ತಮ ಔಷಧಿಯ ಗುಣಗಳನ್ನು ಹೊಂದಿದ್ದು, ಇತ್ತೀಚೆಗೆ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಕಿಡ್ನಿಯ ಕಲ್ಲಿನ ಸಮಸ್ಯೆಯನ್ನು ಗುಣಪಡಿಸುವ ಶಕ್ತಿ ಇದಕ್ಕಿದೆ. ಈ ಬಗೆಗಿನ ವಿವರ ಇಲ್ಲಿದೆ (Health Tips).

ಬಾಳೆ ದಿಂಡಿನ ಪ್ರಾಮುಖ್ಯತೆ ಇದೀಗ ಪ್ರತಿಯೊಬ್ಬರ ಅರಿವಿಗೂ ಬಂದಿದೆ. ಪರಿಣಾಮವಾಗಿ ಮಾರುಕಟ್ಟೆಯಲ್ಲಿ ಒಂದು ಅಡಿ ಉದ್ದದ ದಿಂಡಿಗೂ ಬಹಳ ಬೇಡಿಕೆ ಸೃಷ್ಟಿಯಾಗಿದೆ. ಇದರಲ್ಲಿ ಚಟ್ನಿ, ಸಾಸಿವೆ, ಸಾಂಬಾರ್, ಪಲ್ಯ, ಪಕೋಡ, ದೋಸೆ, ಇಡ್ಲಿ, ಸಲಾಡ್, ಮೊಸರು ಗೊಜ್ಜು ಹೀಗೆ ನಾನಾ ಭಕ್ಷ್ಯ ತಯಾರಿಸಬಹುದು. ಮಾತ್ರವಲ್ಲ ಬಾಳೆ ನಾರಿನಿಂದ ವಿವಿಧ ಪರಿಸರಸ್ನೇಹಿ ಉತ್ಪನ್ನಗಳನ್ನು ತಯಾರಿಸಬಹುದು. ಚೀಲಗಳು, ಬುಟ್ಟಿಗಳು, ಸಸಿ ಕುಂಡಗಳು, ಯೋಗಾಸನ ಚಾಪೆಗಳು, ಹಗ್ಗ, ಬಟ್ಟೆ ತಯಾರಿ ಹೀಗೆ…ಏನೆಲ್ಲ ಮಾಡಬಹುದು ಎಂಬ ಸಂಶೋಧನೆ ಮಾಡುವ ತನಕ ಬಾಳೆ ಇಷ್ಟೊಂದು ರೀತಿಯಲ್ಲಿ ಉಪಯೋಗಕ್ಕೆ ಬರುತ್ತದೆ ಎನ್ನುವುದು ಯಾರಿಗೂ ತಿಳಿದಿರಲಿಲ್ಲ.

ಕಿಡ್ನಿ ಕಲ್ಲು ಕರಗಿಸುವ ಬಾಳೆ ದಿಂಡು

ಮೊದಲೇ ಹೇಳಿದಂತೆ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸುವ ಅದ್ಭುತ ಶಕ್ತಿ ಬಾಳೆ ದಿಂಡಿಗಿದೆ. ಜತೆಗೆ ಗ್ಯಾಸ್ಟ್ರಿಕ್ ಸಮಸ್ಯೆ, ಮೂತ್ರಪಿಂಡದ ಸಮಸ್ಯೆಗೆ ಇದು ರಾಮಬಾಣ. ಖಾಲಿ ಹೊಟ್ಟೆಯಲ್ಲಿ ಬಾಳೆದಿಂಡಿರ ರಸವನ್ನು ಸೇವಿಸುವುದರಿಂದ ಎಸಿಡಿಟಿ ಸಮಸ್ಯೆ ದೂರವಾಗುತ್ತದೆ. ಕಿಡ್ನಿ ಕಲ್ಲಿನ ಸಮಸ್ಯೆ ನಿವಾರಣೆಗೆ ಬಾಳೆ ದಿಂಡಿನ ನೀರನ್ನು ಕುಡಿಯುವುದು ಅತ್ಯುತ್ತಮ ಮಾರ್ಗ ಎನಿಸಿಕೊಂಡಿದೆ. ಈ ನೀರನ್ನು ಹೇಗೆ ಸಂಗ್ರಹಿಸಬಹುದು ಎನ್ನುವುದರ ವಿವರ ಇಲ್ಲಿದೆ. ಬಾಳೆಗಿಡ ಕಡಿದು ಮಧ್ಯದ ದಿಂಡನ್ನು ತೆಗೆದು ಕಾಂಡದಲ್ಲಿ ಗುಳಿಯ ಆಕಾರವನ್ನು ತೋಡಿ. ಬಳಿಕ ಕಸ, ಧೂಳು ಹಾರದಂತೆ ಅದಕ್ಕೆ ಪ್ಲಾಸ್ಟಿಕ್ ಅಥವಾ ಬಾಳೆ ಎಲೆ ಮುಚ್ಚಿ. ಮರುದಿನ ನೋಡಿದಾಗ ಗುಳಿಯಲ್ಲಿ ನೀರು ತುಂಬಿರುತ್ತದೆ.

ಈ ನೀರನ್ನು ಶುಭ್ರ ಪಾತ್ರೆಯಲ್ಲಿ ತೆಗೆದುಕೊಂಡು ನಿಯಮಿತವಾಗಿ ಸೇವಿಸಿ. ಇದರಿಂದ ಕಿಡ್ನಿ ಕಲ್ಲಿ ಕರಗುತ್ತದೆ ಎನ್ನುತ್ತಾರೆ ತಜ್ಞರು. ಅಲ್ಲದೆ ಬಾಳೆ ದಿಂಡನ್ನು ಅರೆದು ಅದನ್ನು ಸೋಸಿಯೂ ಕುಡಿಯಬಹುದು. ಹೀಗೆ ಬಾಳೆದಿಂಡಿನ ರಸವನ್ನು ವರ್ಷಕ್ಕೆ ಎರಡು ಬಾರಿಯಾದರೂ ಸೇವಿಸುವುದರಿಂದ ಹೊಟ್ಟೆಯಲ್ಲಿರುವ ಕಲ್ಮಶಗಳನ್ನು ಹೊರ ಹಾಕಬಹುದು.

ಇದನ್ನೂ ಓದಿ: Benefits of Tender Coconut: ಎಳನೀರು ಹೀರುವುದರಿಂದ ದೇಹಕ್ಕೆ ಏನೇನು ಲಾಭ ಗೊತ್ತೇ?

ಜ್ಯೂಸ್‌ ತಯಾರಿಸಿ

ಬಾಳೆ ದಿಂಡಿನ ರಸವನ್ನು ನೇರವಾಗಿ ಸೇವಿಸಲು ಸಾಧ್ಯವಾಗದಿದ್ದರೆ ಜ್ಯೂಸ್‌ ತಯಾರಿಸಿಯೂ ಕುಡಿಯಬಹುದು. ಬಾಳೆದಿಂಡಿನ ನೀರಿಗೆ ಜೀರಿಗೆ, ಶುಂಠಿ, ನಿಂಬೆರಸ, ಗಾಂಧಾರಿ ಮೆಣಸು, ಚಿಟಿಕೆ ಉಪ್ಪು, ಬೇಕಿದ್ದರೆ ಕಲ್ಲು ಸಕ್ಕರೆ ಸೇರಿಸಿ ಕುಡಿಯಬಹುದು. ಇದನ್ನು ಸಮಸ್ಯೆ ಇದ್ದವರೇ ಕುಡಿಯಬೇಕೆಂದಿಲ್ಲ. ಯಾರೂ ಬೇಕಾದರೂ ಸೇವಿಸಬಹುದು. ಇತ್ತೀಚೆಗಂತೂ ಬಿಸಿಲಿನ ತಾಪ ವಿಪರೀತವಾಗಿ ಏರಿಕೆಯಾಗುತ್ತಿದೆ. ಹೀಗಾಗಿ ಸಾಧ್ಯವಾದಷ್ಟು ಮನೆಯಲ್ಲಿಯೇ ತಯಾರಿಸಿದ ಆಹಾರದ ಜತೆಗೆ ಇಂತಹ ಪ್ರಾಕೃತಿಕ ಔಷಧಗಳ ಪ್ರಯೋಜನ ಪಡೆಯಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ.

Continue Reading

ಲೈಫ್‌ಸ್ಟೈಲ್

Mosquito control: ಸೊಳ್ಳೆ ಕಾಟಕ್ಕೆ ಬೇಸತ್ತಿದ್ದೀರಾ? ಹಾಗಿದ್ರೆ ಈ ಮನೆಮದ್ದನ್ನು ಟ್ರೈ ಮಾಡಿ ನೋಡಿ!

Mosquito control: ಸೊಳ್ಳೆಗಳ ಕಡಿತದಿಂದ ಮಲೇರಿಯಾ, ಡೆಂಗ್ಯೂ, ಚಿಕುನ್ ಗುನ್ಯಾದಂತಹ ಮಾರಣಾಂತಿಕ ಕಾಯಿಲೆಗಳು ಕಾಡುತ್ತದೆ. ಹಾಗಾಗಿ ಸೊಳ್ಳೆಗಳ ಕಡಿತದಿಂದ ತಪ್ಪಿಸಿಕೊಳ್ಳಬೇಕು. ಅದಕ್ಕಾಗಿ ನೀವು ಎಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು.

VISTARANEWS.COM


on

Mosquito controle
Koo

ಬೆಂಗಳೂರು: ಸೊಳ್ಳೆ ಎಂದರೆ ಸಾಕು ಕೆಲವರು ಕುಳಿತಲ್ಲಿಯೇ ಹೌಹಾರುತ್ತಾರೆ. ಗಾತ್ರದಲ್ಲಿ ಚಿಕ್ಕದಾದರೂ ಇವು ಕೊಡುವ ಕಾಟ ಹೇಳತೀರದು. ಇನ್ನು ಬೇಸಿಗೆಯಲ್ಲಿ ಸೊಳ್ಳೆಗಳ ಕಾಟ (Mosquito control) ಹೆಚ್ಚಾಗಿರುತ್ತದೆ. ಸಂಜೆಯಾಗುತ್ತಿದ್ದಂತೆ ಮನೆಯ ಕಿಟಕಿ ಮತ್ತು ಬಾಗಿಲಿನ ಸಂದಿಯಲ್ಲಿ ನುಸುಳಿಕೊಂಡು ಮನೆಯೊಳಗೆ ಪ್ರವೇಶಿಸುತ್ತವೆ. ಮನೆಯೊಳಗೆ ಸಿಕ್ಕಿದವರಿಗೆ ಕಚ್ಚಿ ರಕ್ತ ಹೀರುತ್ತದೆ. ಇವುಗಳಿಂದ ರಾತ್ರಿ ನಿದ್ರೆ ಮಾಡಲು ಸಾದ್ಯವಾಗುವುದಿಲ್ಲ. ಹಾಗಾಗಿ ಜನರು ಸೊಳ್ಳೆ ನಿವಾರಕಗಳನ್ನು ಬಳಸುತ್ತಾರೆ.

ಆದರೆ ಈ ಸೊಳ್ಳೆಗಳ ಕಡಿತದಿಂದ ಮಲೇರಿಯಾ, ಡೆಂಗ್ಯೂ, ಚಿಕುನ್ ಗುನ್ಯಾದಂತಹ ಮಾರಣಾಂತಿಕ ಕಾಯಿಲೆಗಳು ಕಾಡುತ್ತದೆ. ಹಾಗಾಗಿ ಸೊಳ್ಳೆಗಳ ಕಡಿತದಿಂದ ತಪ್ಪಿಸಿಕೊಳ್ಳಬೇಕು. ಅದಕ್ಕಾಗಿ ನೀವು ಎಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ಹಾಗೇ ಸೊಳ್ಳೆಗಳ ಕಡಿತದಿಂದ ಉಂಟಾಗುವಂತಹ ಮಲೇರಿಯಾ ರೋಗವನ್ನು ತಡೆಗಟ್ಟಲು ಈ ಮನೆಮದ್ದುಗಳನ್ನು ತಪ್ಪದೇ ಬಳಸಿ.

ಆರ್ಟೆಮಿಸಿಯಾ ಆನ್ಯುವಾ(ಸ್ವೀಟ್ ವರ್ಮ್ವುಡ್ ): ಇದು ಸಾಂಪ್ರಾದಾಯಿಕ ಚೀನೀ ಔಷಧದ ಮೂಲಾಧಾರವಾಗಿದೆ. ಇದು ಮಲೇರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇದರಲ್ಲಿರುವ ಆರ್ಟೆಮಿಸಿನಿನ್ ಸಂಯುಕ್ತ ಮಲೇರಿಯಾದ ಚಿಕಿತ್ಸೆಗೆ ಪರಿಣಾಮಕಾರಿಯಾಗಿದೆ. ಈ ಸಸ್ಯದ ಎಲೆಗಳಿಂದ ತಯಾರಿಸಿದ ಚಹಾವನ್ನು ಕುಡಿಯುವುದರ ಮೂಲಕ ಚಿಕಿತ್ಸೆಯನ್ನು ಪಡೆಯಬಹುದು.

Mosquito controle

ಬೇವು: ಬೇವಿನ ಎಲೆಗಳು ಮಲೇರಿಯಾ ಚಿಕಿತ್ಸೆಗೆ ಪರಿಣಾಮಕಾರಿ ಮನೆಮದ್ದಾಗಿದೆ. ಇದು ಜ್ವರ ನಿವಾರಕ ಗುಣವನ್ನು ಹೊಂದಿದೆ. ಬೇವು ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುವ ಮೂಲಕ ರಕ್ತ ಪರಿಚಲನೆಯ ಮೂಲಕ ಮಲೇರಿಯಾಕ್ಕೆ ಕಾರಣವಾಗುವಂತಹ ಬ್ಯಾಕ್ಟೀರಿಯಾಗಳನ್ನು ನಿವಾರಿಸುತ್ತದೆ.

ಸಿಂಕೋನಾ ಟ್ರೀ ತೊಗಟೆ: ಇದು ದಕ್ಷಿಣಾ ಅಮೇರಿಕಾದಲ್ಲಿ ಹೆಚ್ಚಾಗಿ ಬೆಳೆಯುತ್ತದೆ. ಈ ಮರದ ತೊಗಟೆಯು ಕ್ವಿನೈನ್ ಅನ್ನು ಹೊಂದಿರುತ್ತದೆ. ಇದನ್ನು ಶತಮಾನಗಳಿಂದ ಮಲೇರಿಯಾ ಚಿಕಿತ್ಸೆಯಲ್ಲಿ ಬಳಸಲಾಗುತ್ತಿತ್ತು. ಹಾಗಾಗಿ ಜನರು ಮಲೇರಿಯಾ ತಡೆಗಟ್ಟಲು ಕ್ವಿನೈನ್ ಅಂಶವನ್ನು ಹೊಂದಿರುವ ನೀರನ್ನು ಕುಡಿಯುತ್ತಿದ್ದರು.

Mosquito controle

ಬೆಳ್ಳುಳ್ಳಿ : ಇದು ಆ್ಯಂಟಿ ಮೈಕ್ರೊಬಿಯಲ್ ಮತ್ತು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ಹಾಗಾಗಿ ಇದನ್ನು ಸೇವಿಸುವುದರಿಂದ ಮಲೇರಿಯಾ ರೋಗ ಲಕ್ಷಣಗಳನ್ನು ಕಡಿಮೆ ಮಾಡಬಹುದು. ಇದು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

Mosquito controle

ಶುಂಠಿ: ಶುಂಠಿಯು ಮಲೇರಿಯಾಕ್ಕೆ ಚಿಕಿತ್ಸೆ ನೀಡುವ ಮತ್ತು ತಡೆಗಟ್ಟುವ ಸಾಮರ್ಥ್ಯವನ್ನು ಹೊಂದಿದೆ. ಹಾಗೇ ಇದು ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದರಲ್ಲಿರುವ ಜಿಂಜರಾಲ್ ಮತ್ತು ಜಿಂಜರೋನ್ ಉರಿಯೂತ ಮತ್ತು ಜ್ವರ ನಿವಾರಕ ಗುಣಗಳನ್ನು ಹೊಂದಿದೆ. ಇದು ಮಲೇರಿಯಾ ರೋಗಗಳಿಗೆ ಪ್ರಯೋಜನಕಾರಿಯಾಗಿದೆ.

ಇದನ್ನೂ ಓದಿ: E-Pass Mandatory: ಊಟಿ, ಕೊಡೈಕೆನಾಲ್‌ ಪ್ರವಾಸ ಹೊರಟಿದ್ದೀರಾ? ಹಾಗಿದ್ದರೆ ಗಮನಿಸಿ

ಅರಿಶಿನ: ಇದನ್ನು ಆಯುರ್ವೇದದ ಚಿಕಿತ್ಸೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಇದು ಕರ್ಕ್ಯುಮಿನ್ ಅಂಶವನ್ನು ಹೊಂದಿದ್ದು, ಮಲೇರಿಯಾವನ್ನು ತಡೆಗಟ್ಟಲು ಪರಿಣಾಮಕಾರಿಯಾಗಿದೆ. ಇದು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಮೂಲಕ ರೋಗಗಳನ್ನು ತಡೆಗಟ್ಟುತ್ತದೆ.

Mosquito controle

ಪಪ್ಪಾಯ ಎಲೆಗಳು: ಮಲೇರಿಯಾದ ಚಿಕಿತ್ಸೆಗೆ ಪಪ್ಪಾಯ ಎಲೆಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ. ಇದರಲ್ಲಿರುವ ಅಂಶವು ಪ್ಲೇಟ್ಲೆಟ್ ಸಂಖ್ಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ಮಲೇರಿಯಾ ರೋಗವನ್ನು ಕಡಿಮೆಮಾಡುತ್ತದೆ.

Continue Reading

ಆರೋಗ್ಯ

Tobacco Use: ತಂಬಾಕು ಸೇವನೆ; ವಿಶ್ವದಲ್ಲೇ ಭಾರತಕ್ಕೆ ಎರಡನೇ ಸ್ಥಾನ

Tobacco Use: ಭಾರತವು ಶೇ. 27ರಷ್ಟು ವಯಸ್ಕ ತಂಬಾಕು ಸೇವನೆ ಮಾಡುವವರನ್ನು ಹೊಂದಿದೆಯಂತೆ. 2019ರ ಅಂಕಿ ಅಂಶದ ಪ್ರಕಾರ ವಿಶ್ವದಲ್ಲೇ 70 ಲಕ್ಷಕ್ಕೂ ಹೆಚ್ಚು ಮಂದಿ ತಂಬಾಕು ಸೇವಿಸಿ ಸಾವನ್ನಪ್ಪಿದ್ದು, ಭಾರತದಲ್ಲಿ 13.5 ಲಕ್ಷ ಮಂದಿ ಮೃತಪಟ್ಟಿದ್ದಾರೆ

VISTARANEWS.COM


on

By

Tobacco use
Koo

ತಂಬಾಕು ಬಳಸುವವರಲ್ಲಿ (Tobacco Use) ವಿಶ್ವದಲ್ಲೇ ಭಾರತ (india) ಎರಡನೇ ಸ್ಥಾನದಲ್ಲಿದ್ದು, ಶೇ. 27ರಷ್ಟು ವಯಸ್ಕ ಭಾರತೀಯರು ತಂಬಾಕು ಸೇವನೆ (Tobacco consumption) ಮಾಡುತ್ತಾರೆ ಎಂದು ಕೆಪಿಎಂಜಿ (KPMG) ಅಶ್ಯೂರೆನ್ಸ್ ಮತ್ತು ಕನ್ಸಲ್ಟಿಂಗ್ ಸರ್ವಿಸಸ್ ಎಲ್ಎಪಿಯ ವರದಿ ಹೇಳಿದೆ. 2019ರಲ್ಲಿ ವಿಶ್ವದಲ್ಲೇ 7 ಮಿಲಿಯನ್‌ಗೂ ಹೆಚ್ಚು ಮಂದಿ ತಂಬಾಕು ಸೇವಿಸಿ ಸಾವನ್ನಪ್ಪಿದ್ದು , ಭಾರತದಲ್ಲಿ 1.35 ಮಿಲಿಯನ್ ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇಟಿ ಎಡ್ಜ್ ಸಹಯೋಗದೊಂದಿಗೆ ನಡೆದ ಸಮೀಕ್ಷೆಯಲ್ಲಿ ಭಾರತವು ಶೇ. 27ರಷ್ಟು ವಯಸ್ಕ ತಂಬಾಕು ಸೇವನೆ ಮಾಡುವವರನ್ನು ಹೊಂದಿದ್ದು, ವಿಶ್ವದ ಎರಡನೇ ಅತೀ ದೊಡ್ಡ ತಂಬಾಕು ಬಳಸುವ ಜನಸಂಖ್ಯೆಯನ್ನು ಹೊಂದಿದೆ ಎಂದು ಬಹಿರಂಗಪಡಿಸಿದೆ.

ಈ ಅಂಕಿ ಅಂಶವು ತಂಬಾಕು ಪ್ರೇರಿತ ಹಾನಿಯನ್ನು ಕಡಿಮೆ ಮಾಡಲು ತಂಬಾಕು ನಿಯಂತ್ರಣದ ಕಡೆಗೆ ಸಮಗ್ರ ಮಾರ್ಗಸೂಚಿಯನ್ನು ಹೊಂದಲು ಕಡ್ಡಾಯ ಮತ್ತು ನಿರ್ಣಾಯಕವಾಗಿದೆ. 2060ರ ವೇಳೆಗೆ ತಂಬಾಕು ಸಂಬಂಧಿತ ರೋಗಗಳಿಂದ ಜಾಗತಿಕವಾಗಿ ವಾರ್ಷಿಕ ಮರಣಗಳ ಅಂದಾಜು ಶೇ. 50ರಷ್ಟು ಕಡಿಮೆ ಮಾಡುವ ಉದ್ದೇಶವಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: Covishield Vaccine: ಭಾರತದಲ್ಲಿ ಕೋವಿಶೀಲ್ಡ್‌ ಅಡ್ಡ ಪರಿಣಾಮದ ಅಪಾಯವಿಲ್ಲ: ಯಾಕೆ ಗೊತ್ತೆ?

ಭಾರತದ ತಂಬಾಕು ಬಳಕೆ

2019ರಲ್ಲಿ ಜಾಗತಿಕವಾಗಿ 7 ಮಿಲಿಯನ್ ತಂಬಾಕು ಸಂಬಂಧಿತ ಸಾವುಗಳಲ್ಲಿ ಭಾರತದಲ್ಲಿ 1.35 ಮಿಲಿಯನ್ ಸಾವು ಸಂಭವಿಸಿವೆ. ಶೇ. 66ರಷ್ಟು ಭಾರತೀಯರು 20- 25 ವರ್ಷ ವಯಸ್ಸಿನ ನಡುವೆ ತಂಬಾಕು ಸೇವಿಸಲು ಪ್ರಾರಂಭಿಸಿದರು. ಪರ್ಯಾಯ ಮಾರ್ಗಗಳ ಕೊರತೆಯಿಂದ ಶೇ.45ರಷ್ಟು ಮಂದಿಗೆ ಧೂಮಪಾನ ಅಥವಾ ತಂಬಾಕು ಜಗಿಯುವುದನ್ನು ಬಿಡಲು ಸಾಧ್ಯವಾಗಲಿಲ್ಲ.

ಜನರು ಬಳಸುವ ತಂಬಾಕಿನಲ್ಲಿ ಶೇ. 8ರಷ್ಟು ಮಾತ್ರ ಕಾನೂನುಬದ್ಧವಾಗಿ ಉತ್ಪಾದಿಸಲಾಗಿದೆ. ಆದರೆ ಉಳಿದ ಶೇ. 92 ರಷ್ಟು ಬಳಕೆ ಬೀಡಿಗಳು, ಜಗಿಯುವ ತಂಬಾಕು, ಖೈನಿ ಮುಂತಾದ ಅಗ್ಗದ ತಂಬಾಕು ಉತ್ಪನ್ನಗಳಾಗಿದೆ. ತಂಬಾಕು ಸೇವನೆಗೆ ಮುಖ್ಯ ಕಾರಣ ಒತ್ತಡ, ಆತಂಕ ಮತ್ತು ಭಾವನಾತ್ಮಕ ಯಾತನೆ ಎಂಬುದನ್ನು ಸಮೀಕ್ಷೆಯು ಬಹಿರಂಗಪಡಿಸಿದೆ.

ಭಾರತದಲ್ಲಿ ತಂಬಾಕು ಸೇವನೆಗೆ ನಿಯಂತ್ರಣ ಹೇರುವುದು ಅತೀ ಅವಶ್ಯಕವಾಗಿದೆ. ಜಾಗತಿಕವಾಗಿ ಸೂಚಿಸಲಾದ ತಂಬಾಕು ನಿಯಂತ್ರಣ ಕ್ರಮಗಳನ್ನು ಭಾರತದಲ್ಲಿ ಜಾರಿಗೊಳಿಸಲು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಸಹಾಯ ಮಾಡುವ ಉದ್ದೇಶ ಹೊಂದಿರುವುದು ಸವಾಲಾಗಿ ಪರಿಣಮಿಸುತ್ತಿದೆ.


ತಂಬಾಕು ಸೇವನೆ ಮಾಡುವ ಶೇ. 50ರಷ್ಟು ಪುರುಷರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅದರಲ್ಲಿ ಶೇ. 29 ರಷ್ಟು ಗಂಭೀರ ಪ್ರಕರಣಗಳಾಗಿವೆ. ಅರಿವಿನ ಕೊರತೆ ಮತ್ತು ಪರ್ಯಾಯಗಳ ಅಲಭ್ಯತೆಯಿಂದಾಗಿ ಗಂಭೀರ ಆರೋಗ್ಯ ಸಮಸ್ಯೆಗಳಿರುವ ನಗರಗಳಲ್ಲಿ ಶೇ. 81ರಷ್ಟು ಮಂದಿ ಪುರುಷರು ತಂಬಾಕನ್ನು ತ್ಯಜಿಸಲು ಮುಂದಾಗುತ್ತಿಲ್ಲ.
2030ರ ವೇಳೆಗೆ ತಂಬಾಕು ಸಂಬಂಧಿತ ಸಾವುಗಳಲ್ಲಿ ಶೇ.80ಕ್ಕಿಂತ ಹೆಚ್ಚು ಸಾವುಗಳು ಕಡಿಮೆ ಮತ್ತು ಮಧ್ಯಮ-ಆದಾಯದ ದೇಶಗಳಲ್ಲಿ ಸಂಭವಿಸಬಹುದು ಎಂದು ವರದಿ ಹೇಳಿದೆ.

ಜಿಡಿಪಿ ಮೇಲೆ ಪರಿಣಾಮ

ತಂಬಾಕು ಸೇವನೆಯಿಂದ ಉಂಟಾಗುವ ರೋಗಗಳು ಮತ್ತು ಸಾವುಗಳಿಂದಾಗಿ ಭಾರತವು ಪ್ರತಿ ವರ್ಷ ತನ್ನ ಜಿಡಿಪಿಯ ಶೇ.1ರಷ್ಟನ್ನು ಕಳೆದುಕೊಳ್ಳುತ್ತದೆ. ಇದರಿಂದ ರಕ್ಷಿಸಿಕೊಳ್ಳಲು ಪರಿಣಾಮಕಾರಿ ತಂಬಾಕು ನಿಯಂತ್ರಣ ನೀತಿಯನ್ನು ಅಳವಡಿಸಿಕೊಳ್ಳಲು ಭಾರತ ಮುಂದಾಗಬೇಕಿದೆ.

ತಂಬಾಕು ನಿಯಂತ್ರಣಕ್ಕೆ ಕ್ರಮ

ಭಾರತವು ಈಗಾಗಲೇ ತಂಬಾಕು ಸೇವನೆಯನ್ನು ನಿಯಂತ್ರಿಸುವ ಮತ್ತು ಸಾರ್ವಜನಿಕ ಆರೋಗ್ಯವನ್ನು ಕಾಪಾಡುವ ಗುರಿಯನ್ನು ಹೊಂದಿರುವ ಕಠಿಣ ನಿಯಮಗಳನ್ನು ಸಕ್ರಿಯವಾಗಿ ಜಾರಿಗೊಳಿಸುತ್ತಿದೆ. ತಂಬಾಕು ಉತ್ಪನ್ನಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಯಂತ್ರಿಸುವ ಗುರಿಯನ್ನು ಹೊಂದಿರುವ ಡಬ್ಲ್ಯೂ ಎಚ್‌ಒ ಸೂಚಿಸಿದ ಕಾನೂನುಗಳ ನಿಬಂಧನೆಗಳಿಗೆ ಹೊಂದಿಕೆಯಾಗಲು ದೇಶವು ತಂಬಾಕು ನಿಯಂತ್ರಣ ಕಾನೂನುಗಳನ್ನು ಜಾರಿಗೆ ತಂದಿದೆ. ಧೂಮಪಾನಿಗಳಲ್ಲದವರನ್ನು ಧೂಮಪಾನದಿಂದ ದೂರವಿಡಲು ಇದು ಸಹಾಯ ಮಾಡುತ್ತದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಅಗತ್ಯ ಔಷಧಗಳ ರಾಷ್ಟ್ರೀಯ ಪಟ್ಟಿಯಲ್ಲಿ (NLEM) ನಿಕೋಟಿನ್ ರಿಪ್ಲೇಸ್ಮೆಂಟ್ ಥೆರಪಿಯನ್ನು (NRT) ಪರಿಚಯಿಸಿದೆ. ಉದಾಹರಣೆಗೆ ಚೂಯಿಂಗ್ ನಿಕೋಟಿನ್ ಗಮ್ ಅಥವಾ ಇನ್ಹೇಲರ್‌ಗಳನ್ನು ಬಳಸುವುದು ಧೂಮಪಾನ ಅಭ್ಯಾಸವನ್ನು ಮುರಿಯಲು ಮತ್ತು ಸಿಗರೇಟಿನ ಮೇಲೆ ಮಾನಸಿಕ ಅವಲಂಬನೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.


ಜಾಗತಿಕ ನೀತಿಗಳು

ತಂಬಾಕು ಬಳಕೆಯನ್ನು ನಿಯಂತ್ರಿಸಲು ಅನೇಕ ದೇಶಗಳು ಡಬ್ಲ್ಯೂ ಎಚ್ ಒ ಫ್ರೇಮ್‌ವರ್ಕ್ ಕನ್ವೆನ್ಶನ್ ಆನ್ ತಂಬಾಕು ನಿಯಂತ್ರಣವನ್ನು (FCTC) ಅನುಸರಿಸಿದರೆ, ಕೆಲವು ಸೂಕ್ತವಾದ ವಿಧಾನವನ್ನು ಅಳವಡಿಸಿಕೊಂಡಿವೆ.

ಭಾರತ, ಆಸ್ಟ್ರೇಲಿಯಾ ಮತ್ತು ಸಿಂಗಾಪುರಕ್ಕೆ ಹೋಲಿಸಿದರೆ ಜಪಾನ್, ಯುಕೆ, ನ್ಯೂಜಿಲೆಂಡ್ ಮತ್ತು ಸ್ವೀಡನ್‌ನಂತಹ ದೇಶಗಳಲ್ಲಿ ಧೂಮಪಾನದ ಪ್ರಮಾಣವು ಹೆಚ್ಚು ಎಂದು ವರದಿ ಬಹಿರಂಗಪಡಿಸಿದೆ.

ಏನು ಮಾಡಬಹುದು?

ಧೂಮಪಾನವನ್ನು ತೊರೆಯಲು ಇಷ್ಟಪಡದ ವ್ಯಕ್ತಿಗಳು ಕಡಿಮೆ ಅಪಾಯಕಾರಿ ತಂಬಾಕುಗಳನ್ನು ಬಳಸಲು ಪ್ರೋತ್ಸಾಹಿಸಬೇಕು. ನಿಕೋಟಿನ್ ರಿಪ್ಲೇಸ್‌ಮೆಂಟ್ ಥೆರಪಿ (ಎನ್‌ಆರ್‌ಟಿ) ಅನ್ನು ಕೈಗೆಟುಕುವ ಮತ್ತು ಸುಲಭವಾಗಿ ಸಿಗುವಂತೆ ಮಾಡಬೇಕು. ತಂಬಾಕು ಉತ್ಪನ್ನಗಳ ಪಟ್ಟಿ ಮಾಡಲಾದ ಮತ್ತು ಪಟ್ಟಿ ಮಾಡದ ತಯಾರಕರು ಮತ್ತು ಚಿಲ್ಲರೆ ವ್ಯಾಪಾರಿಗಳ ಸಮಗ್ರ ಡೇಟಾಬೇಸ್ ಅನ್ನು ಅಧಿಕಾರಿಗಳು ಸಂಗ್ರಹಿಸಬೇಕು. ಧೂಮಪಾನಿಗಳಿಗೆ ಶಿಕ್ಷಣ ನೀಡಲು, ತಂಬಾಕು ಬಳಕೆಯ ಬಗ್ಗೆ ಇರುವ ಮಿಥ್ಯೆಗಳನ್ನು ಹೋಗಲಾಡಿಸಲು ರಾಷ್ಟ್ರವ್ಯಾಪಿ ಸಮೂಹ ಮಾಧ್ಯಮ ಪ್ರಚಾರಕ್ಕಾಗಿ ಹೂಡಿಕೆಯನ್ನು ಹೆಚ್ಚಳ ಮಾಡಬೇಕು.

ಆರೋಗ್ಯಕರ ಭವಿಷ್ಯಕ್ಕಾಗಿ ವಾಸ್ತವಿಕ ಮತ್ತು ವೈಜ್ಞಾನಿಕ ತಂಬಾಕು ನಿಯಂತ್ರಣ ನೀತಿಗಳನ್ನು ಸುಗಮಗೊಳಿಸಲು ಗ್ರಾಹಕರು, ಉದ್ಯಮಿಗಳು ಮತ್ತು ಸರ್ಕಾರ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಕೋವಿಶೀಲ್ಡ್‌ ಲಸಿಕೆಯ ಅಡ್ಡ ಪರಿಣಾಮ ಆತಂಕಕಾರಿ

Continue Reading

ದೇಶ

CoWIN Certificates: ಕೋವಿಡ್‌ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಔಟ್‌; ಕೇಂದ್ರ ಹೇಳೋದೇನು?

CoWIN Certificates: ಕೊರೋನಾ ಲಸಿಕೆ ಪ್ರಮಾಣಪತ್ರದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ತೆಗೆದುಹಾಕಿದೆ. ಈ ಹಿಂದೆ ಈ ಪ್ರಮಾಣಪತ್ರಗಳಲ್ಲಿ ಪ್ರಧಾನಿ ಮೋದಿ ಭಾವಚಿತ್ರದ ಜೊತೆಗೆ ಭಾರತ ಒಟ್ಟಾಗಿ ಕೋವಿಡ್‌-19ನನ್ನು ಸೋಲಿಸಲಿದೆ ಎಂಬ ಘೋಷವಾಕ್ಯ ಕಾಣಬಹುದಾಗಿತ್ತು. ಇದೀಗ ಅವರ ಭಾವಚಿತ್ರವನ್ನು ತೆಗೆದು ಹಾಕುವ ಮೂಲಕ ಆರೋಗ್ಯ ಇಲಾಖೆ ಮಹತ್ವದ ಬದಲಾವಣೆ ಮಾಡಿತ್ತು.

VISTARANEWS.COM


on

CoWin Certificates
Koo

ನವದೆಹಲಿ: ಕೋವಿಡ್‌-19(Covid-19) ಲಸಿಕೆಗೆ ನೀಡಲಾಗಿದ್ದ ಕೋವಿನ್‌ ಪ್ರಮಾಣಪತ್ರ(CoWIN Certificates)ಗಳಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ(Union Health Ministry) ಮಹತ್ವದ ಬದಲಾವಣೆಯೊಂದನ್ನು ಮಾಡಿದ್ದು, ಪ್ರಮಾಣಪತ್ರದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಭಾವಚಿತ್ರವನ್ನು ತೆಗೆದುಹಾಕಿದೆ. ಈ ಹಿಂದೆ ಈ ಪ್ರಮಾಣಪತ್ರಗಳಲ್ಲಿ ಪ್ರಧಾನಿ ಮೋದಿ ಭಾವಚಿತ್ರದ ಜೊತೆಗೆ ಭಾರತ ಒಟ್ಟಾಗಿ ಕೋವಿಡ್‌-19ನನ್ನು ಸೋಲಿಸಲಿದೆ ಎಂಬ ಘೋಷವಾಕ್ಯ ಕಾಣಬಹುದಾಗಿತ್ತು. ಇದೀಗ ಅವರ ಭಾವಚಿತ್ರವನ್ನು ತೆಗೆದು ಹಾಕುವ ಮೂಲಕ ಆರೋಗ್ಯ ಇಲಾಖೆ ಮಹತ್ವದ ಬದಲಾವಣೆ ಮಾಡಿತ್ತು.

ಈ ಮಹತ್ವದ ಬದಲಾವಣೆ ಬಗ್ಗೆ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಬಹಳ ಚರ್ಚೆ ಆಗುತ್ತಿದ್ದು, ಕೋವಿನ್‌ ಸರ್ಟಿಫಿಕೇಟ್‌ನಲ್ಲಿ ಪ್ರಧಾನಿ ಮೋದಿಯ ಭಾವಚಿತ್ರ ಮಾಯವಾಗಿದೆ. ಬೇಕಿದ್ದರೆ ಡೌನ್‌ಲೋಡ್‌ ಮಾಡಿ ಚೆಕ್‌ ಮಾಡಿ ಎಂದು ಎಕ್ಸ್‌ ಬಳಕೆದಾರ ಸಂದೀಪ್‌ ಹೇಳಿದ್ದಾರೆ. ಇನ್ನೊಬ್ಬ ಬಳಕೆದಾದ ಇರ್ಫಾನ್‌ ಅಲಿ ಟ್ವೀಟ್‌ ಮಾಡಿದ್ದು, ಹೌದು ಪ್ರಧಾನಿ ಮೋದಿ ಫೋಟೋ ಪ್ರಮಾಣ ಪತ್ರದಲ್ಲಿ ಇಲ್ಲ. ಅದರ ಬದಲು ಅಲ್ಲಿ ಕ್ಯೂ ಆರ್‌ ಕೋಡನ್ನು ಕಾಣಬಹುದಾಗಿದೆ. ಇನ್ನು ಈ ಹಿಂದೆಯೇ ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್‌, ಮಣಿಪುರ ಮತ್ತು ಗೋವಾದಲ್ಲಿ ಪ್ರಧಾನಿ ಮೋದಿಯ ಭಾವಚಿತ್ರವನ್ನು ಪ್ರಮಾಣಪತ್ರದಿಂದ ತೆಗೆದುಹಾಕಲಾಗಿತ್ತು. ಇನ್ನು ಈ ಬಗ್ಗೆ ಸ್ವತಃ ಆರೋಗ್ಯ ಇಲಾಖೆ ಪ್ರತಿಕ್ರಿಯಿಸಿದ್ದು, ಕೋವಿನ್‌ ಪ್ರಮಾಣಪತ್ರದಿಂದ ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ತೆಗೆದು ಹಾಕಲಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಅವರ ಫೋಟೋ ತೆಗೆದುಹಾಕಲಾಗಿದೆ ಎಂದು ಸ್ಪಷ್ಟನೆ ನೀಡಿದೆ.

ಇನ್ನು ಮತ್ತೊಂದೆಡೆ ಬ್ರಿಟಿಷ್ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ (AstraZeneca) ತನ್ನ ಕೋವಿಡ್ ಲಸಿಕೆ ಕೋವಿಶೀಲ್ಡ್‌ ಅಪರೂಪವಾಗಿ ಅಡ್ಡ ಪರಿಣಾಮವನ್ನು ಉಂಟುಮಾಡಬಹುದು ಎಂದು ಒಪ್ಪಿಕೊಳ್ಳುವ ಮೂಲಕ ಜನರನ್ನು ಆತಂಕಕ್ಕೆ ತಳ್ಳಿತ್ತು. ಕೋವಿಶೀಲ್ಡ್ ಅಪರೂಪದ ಸಂದರ್ಭಗಳಲ್ಲಿ, ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ಪ್ಲೇಟ್‌ಲೆಟ್ ಎಣಿಕೆಗೆ ಕಾರಣವಾಗುವ ಸ್ಥಿತಿಯನ್ನು ಉಂಟುಮಾಡಬಹುದು ಎಂದು ಲಸಿಕೆ ತಯಾರಕರು ನ್ಯಾಯಾಲಯದಲ್ಲಿ ಹೇಳಿದ್ದರು.

ಸಾಂಕ್ರಾಮಿಕ ಸಮಯದಲ್ಲಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಿಂದ ಅಭಿವೃದ್ಧಿಪಡಿಸಲಾದ ಕೋವಿಶೀಲ್ಡ್ ಅನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿತು ಮತ್ತು ದೇಶದಲ್ಲಿ ವ್ಯಾಪಕವಾಗಿ ನೀಡುತ್ತಿದೆ. AstraZeneca ಯುಕೆಯಲ್ಲಿ ತನ್ನ ಲಸಿಕೆಯು ಹಲವಾರು ಪ್ರಕರಣಗಳಲ್ಲಿ ಸಾವುಗಳು ಮತ್ತು ತೀವ್ರ ಅಸ್ವಸ್ಥತೆಗೆ ಕಾರಣವಾಯಿತು ಎಂಬ ಆರೋಪದ ಮೇಲೆ ಕ್ಲಾಸ್ ಆಕ್ಷನ್ ಮೊಕದ್ದಮೆಯನ್ನು ಎದುರಿಸುತ್ತಿದೆ. ಯುಕೆ ಹೈಕೋರ್ಟ್‌ನಲ್ಲಿ 51 ಪ್ರಕರಣಗಳಲ್ಲಿ ಸಂತ್ರಸ್ತರು 100 ಮಿಲಿಯನ್ ಪೌಂಡ್‌ಗಳವರೆಗೆ ನಷ್ಟ ಪರಿಹಾರ ಬಯಸಿದ್ದಾರೆ.

ಇದನ್ನೂ ಓದಿ:Parineeti Chopra: ಪರಿಣಿತಿ ಚೋಪ್ರಾ ಪತಿ ಕಣ್ಣು ಕಳೆದುಕೊಳ್ಳುವ ಸಾಧ್ಯತೆ: ವೈದ್ಯರು ಹೇಳೋದೇನು?

ಇನ್ನು ಜನರನ್ನು ಆತಂಕಕ್ಕೀಡು ಮಾಡಿರುವ ಈ ವಿಚಾರದ ಬಗ್ಗೆ ಭಾರತದ ಹಿರಿಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞ, ಮಾಜಿ ICMR ವಿಜ್ಞಾನಿ ಡಾ. ರಾಮನ್ ಗಂಗಾಖೇಡ್ಕರ್ ಸ್ಪಷ್ಟನೆ ನೀಡಿದ್ದು, ಭಾರತದಲ್ಲಿ ಕೊರೊನಾ ವೈರಸ್‌ಎದುರಿಸಲು ಕೋವಿಶೀಲ್ಡ್‌ ಲಸಿಕೆ ತೆಗೆದುಕೊಂಡವರಲ್ಲಿ ರಕ್ತ ಹೆಪ್ಪುಗಟ್ಟುವ ಅಡ್ಡ ಪರಿಣಾಮದ ಅಪಾಯದ ಸಾಧ್ಯತೆಗಳು ತೀರಾ ಕಡಿಮೆ ಎಂದು ಹೇಳಿದ್ದಾರೆ. ಮೊದಲ ಡೋಸ್ ಅನ್ನು ಪಡೆದಾಗ ಅಡ್ಡ ಪರಿಣಾಮದ ರಿಸ್ಕ್‌ ಅತ್ಯಧಿಕವಾಗಿರುತ್ತದೆ. ಆದರೆ ಎರಡನೇ ಡೋಸ್‌ನೊಂದಿಗೆ ಕಡಿಮೆಯಾಗುತ್ತದೆ; ಮೂರನೆಯದರೊಂದಿಗೆ ಮತ್ತೂ ಕಡಿಮೆಯಾಗುತ್ತದೆ. ಅಡ್ಡ ಪರಿಣಾಮ ಸಂಭವಿಸುವುದಾದಲ್ಲಿ, ಲಸಿಕೆ ಪಡೆದ ಎರಡು ಮೂರು ತಿಂಗಳೊಳಗೆ ಕಾಣಿಸಿಕೊಳ್ಳುತ್ತದೆ” ಎಂದು ಗಂಗಾಖೇಡ್ಕರ್ ತಿಳಿಸಿದ್ದಾರೆ


Continue Reading
Advertisement
Shine Shetty Summer Fashion
ಫ್ಯಾಷನ್3 mins ago

Summer Fashion: ಉರಿ ಬಿಸಿಲಿನಲ್ಲಿ ಗಮನ ಸೆಳೆವ ನಟ ಶೈನ್‌ ಶೆಟ್ಟಿಯ ಕೂಲ್‌ ಸ್ಮೈಲ್‌ & ಸ್ಟೈಲ್‌!

IPL 2024
ಕ್ರೀಡೆ10 mins ago

IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

assault Case
ಬೆಂಗಳೂರು11 mins ago

Assault Case : ಪೊಲೀಸ್‌ ಸ್ಟೇಷನ್‌ನಲ್ಲೇ ಇನ್‌ಸ್ಪೆಕ್ಟರ್‌ ಕಪಾಳಕ್ಕೆ ಹೊಡೆದ ಮಹಿಳೆ

Prajwal Revanna Case Centre says it has no power to revoke Prajwal diplomatic passport Big relief for MP
ಕರ್ನಾಟಕ17 mins ago

Prajwal Revanna Case: ಪ್ರಜ್ವಲ್‌ರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಮಾಡೋ ಅಧಿಕಾರ ನಮಗಿಲ್ಲ ಎಂದ ಕೇಂದ್ರ! ಸಂಸದನಿಗೆ ಬಿಗ್‌ ರಿಲೀಫ್‌?

Virat kohli
ಪ್ರಮುಖ ಸುದ್ದಿ27 mins ago

Virat Kohli : ಅಂಕಿ, ಅಂಶ ಪಂಡಿತರೇ ಬಾಯ್ಮುಚ್ಚಿ; ಕೊಹ್ಲಿಯನ್ನು ಟೀಕಿಸಿದವರ ಬೆಂಡೆತ್ತಿದ ಡಿ’ವಿಲಿಯರ್ಸ್​​

Brij Bhushan Singh
ದೇಶ28 mins ago

ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ ಭೂಷಣ್‌ಗಿಲ್ಲ ಟಿಕೆಟ್‌; ಮಗನಿಗೆ ಮಣೆ, ರಾಯ್‌ಬರೇಲಿಗೂ ಅಭ್ಯರ್ಥಿ ಘೋಷಿಸಿದ ಬಿಜೆಪಿ

Murder case in Bengaluru
ಬೆಂಗಳೂರು37 mins ago

Murder Case : ನಡುರಸ್ತೆಯಲ್ಲೆ ಪತ್ನಿಗೆ ಚಾಕು ಇರಿದು ಕೊಂದ ಪತಿ

Prajwal Revanna Case Locked up as Prajwal arrives at Bengaluru airport
ಹಾಸನ39 mins ago

Prajwal Revanna Case: ಬೆಂಗಳೂರು ಏರ್‌ಪೋರ್ಟ್‌ಗೆ ಪ್ರಜ್ವಲ್‌ ಬರುತ್ತಿದ್ದಂತೆ ಲಾಕ್‌! ಏನಿದು SIT ಸೂಚನೆ?

Andre Russell
ಕ್ರಿಕೆಟ್51 mins ago

Andre Russell : ಬ್ರಾವೊ ರೀತಿಯಲ್ಲೇ ಬಾಲಿವುಡ್​ಗೆ ಎಂಟ್ರಿ ಪಡೆದ ಆ್ಯಂಡ್ರೆ ರಸೆಲ್​

Jolly LLB 3
ಸಿನಿಮಾ52 mins ago

Jolly LLB 3: ಬರ್ತಿದೆ ಅಕ್ಷಯ್‌ ಕುಮಾರ್‌ ನಟನೆಯ ಜಾಲಿ ಎಲ್‌ಎಲ್‌ಬಿ 3; ಈ ಬಾರಿ ಇದೆ ಸರ್‌ಪ್ರೈಸ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌