Sindhuri Vs Roopa : ಡಿ.ಕೆ. ರವಿ ಮಾತ್ರವಲ್ಲ ಇನ್ನೊಬ್ಬ ಅಧಿಕಾರಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ: ಡಿ. ರೂಪಾ ಹೇಳಿದ ಆ ವ್ಯಕ್ತಿ ಯಾರು? Vistara News

ಕರ್ನಾಟಕ

Sindhuri Vs Roopa : ಡಿ.ಕೆ. ರವಿ ಮಾತ್ರವಲ್ಲ ಇನ್ನೊಬ್ಬ ಅಧಿಕಾರಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ: ಡಿ. ರೂಪಾ ಹೇಳಿದ ಆ ವ್ಯಕ್ತಿ ಯಾರು?

ರೋಹಿಣಿ ಸಿಂಧೂರಿ ಅವರ ವಿರುದ್ಧ ಡಿ. ರೂಪಾ (Sindhuri Vs Roopa) ಅವರು ಹಲವು ಆರೋಪಗಳನ್ನು ಮಾಡಿದ್ದಲ್ಲದೆ, ವೈಯಕ್ತಿಕ ವಿಚಾರಗಳನ್ನೂ ಪ್ರಸ್ತಾಪಿಸಿದ್ದಾರೆ. ಇದು ಭಾರಿ ಸದ್ದು ಮಾಡಿದೆ.

VISTARANEWS.COM


on

D Roopa Rohini sindhuri DK Ravi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದ, ಈಗ ಮುಜರಾಯಿ ಇಲಾಖೆಯ ಕಮಿಷನರ್‌ ಆಗಿರುವ ರೋಹಿಣಿ ಸಿಂಧೂರಿ ಅವರ ವಿರುದ್ಧ ಐಪಿಎಸ್‌ ಅಧಿಕಾರಿ ಡಿ. ರೂಪಾ (Sindhuri Vs Roopa) ಅವರು ೧೯ ಆರೋಪಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಮೈಸೂರಿನ ಕೆ.ಆರ್‌. ನಗರ ಶಾಸಕ ಸಾ.ರಾ. ಮಹೇಶ್‌ ಅವರ ಜತೆ ರೋಹಿಣಿ ಅವರು ಸಂಧಾನ ಮಾಡಿಕೊಂಡಿದ್ದಾರೆ ಎಂಬ ಅಂಶವನ್ನು ಇಟ್ಟುಕೊಂಡು ಐಎಎಸ್‌ ಅಧಿಕಾರಿಯ ನಡೆಗಳನ್ನು ತೀವ್ರ ವಿಮರ್ಶೆಗೆ ಒಳಪಡಿಸಿರುವ ಡಿ.ರೂಪಾ ಅವರು ಹಲವಾರು ಖಾಸಗಿ ವಿಚಾರಗಳನ್ನು ಕೂಡಾ ಪ್ರಸ್ತಾಪಿಸಿದ್ದಾರೆ.

ಐಎಎಸ್‌ ಅಧಿಕಾರಿಯಾಗಿದ್ದ ಡಿ.ಕೆ. ರವಿ ಅವರ ನಿಗೂಢ ಆತ್ಮಹತ್ಯೆ ಪ್ರಕರಣದ ಉಲ್ಲೇಖವನ್ನೂ ಡಿ.ರೂಪಾ ಅವರು ಮಾಡಿದ್ದಾರೆ. ಇದರಲ್ಲಿ ರೋಹಿಣಿ ಸಿಂಧೂರಿ ಅವರ ಪಾತ್ರವನ್ನೂ ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ. ಅದರ ಜತೆಗೆ ಇನ್ನೊಬ್ಬ ಅಧಿಕಾರಿ ಕೂಡಾ ರೋಹಿಣಿ ಸಿಂಧೂರಿ ಅವರ ಮದುವೆಗಾಗಿ ಕಾದು ಕಾದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದೆಲ್ಲ ಹೇಳಿದ್ದಾರೆ. ಜತೆಗೆ ರೋಹಿಣಿ ಸಿಂಧೂರಿ ಅವರು ಐಎಎಸ್‌ ಅಧಿಕಾರಿಗಳಿಗೆ ಅಸಭ್ಯ ಚಿತ್ರಗಳನ್ನು ಕಳುಹಿಸುತ್ತಿದ್ದರು ಎಂದೂ ಹೇಳಿದ್ದಾರೆ.

ಡಿ.ಕೆ. ರವಿ ಮತ್ತು ಇನ್ನೊಬ್ಬ ಅಧಿಕಾರಿಯ ಸಾವಿಗೆ ಸಂಬಂಧಿಸಿ ರೋಹಿಣಿ ಅವರನ್ನು ಕನೆಕ್ಟ್‌ ಮಾಡಿ ಡಿ.ರೂಪಾ ಮಾಡಿದ ಆರೋಪಗಳು ಹೀಗಿವೆ.

ಡಿ.ಕೆ. ರವಿ ಜತೆಗಿನ ಚಾಟ್ಸ್‌ನಲ್ಲಿ ಎಲ್ಲವೂ ಇದೆ

ಐಎಎಸ್‌ ಅಧಿಕಾರಿಯಾಗಿದ್ದ ಡಿ.ಕೆ. ರವಿ ಸಂಭಾವಿತ ವ್ಯಕ್ತಿ. ಸಿಬಿಐ ವರದಿಯಲ್ಲಿ ಅವರಿಬ್ಬರ ಚಾಟ್ಸ್ (ಮಾತುಕತೆ) ಬಗ್ಗೆ ಉಲ್ಲೇಖ ಇದ್ದು, ರವಿ ಅವರು ಎಂದಾದರೂ ಲಿಮಿಟ್‌ ಕ್ರಾಸ್ ಮಾಡಿದ ತಕ್ಷಣವೇ ಅವರನ್ನು ಬ್ಲಾಕ್ ಮಾಡಬಹುದಿತ್ತು. ಪರ್ಮನೆಂಟ್ ಆಗಿ ಬ್ಲಾಕ್ ಮಾಡಲಿಲ್ಲ ಈಕೆ. ಬ್ಲಾಕ್ ಮಾಡದೆ ಇದ್ದದ್ದು ಉತ್ತೇಜನ ಕೊಡುವ ಹಾಗೆ ಎಂಬಂತೆಯೇ ಕಾಣುತ್ತದೆ ಎಂಬುದು ಅನೇಕರ ಅಭಿಪ್ರಾಯ.‌

ಡಿ.ಕೆ. ರವಿ ಮಾತ್ರವಲ್ಲ ಹರೀಶ್‌ ಆತ್ಮಹತ್ಯೆಗೂ ಲಿಂಕ್‌!

ಡಿ.ಕೆ ರವಿ ತೀರಿಕೊಂಡ ಕೆಲವು ತಿಂಗಳು ಮುಂಚೆ ಕನ್ನಡದ ಹುಡುಗ, ಐಎಎಸ್‌ ಅಧಿಕಾರಿ ಎನ್‌. ಹರೀಶ್ ಇವರ ಬ್ಯಾಚ್‌ಮೇಟ್‌. ಮದುವೆ ಆಗಿರಲಿಲ್ಲ ಆತ. ಈಕೆಗಾಗಿ ಕಾದು ಕಾದು ಆತ ಆತ್ಮಹತ್ಯೆ ಮಾಡಿಕೊಂಡದ್ದು ಎಂದು ಹಲವರು ಹೇಳಿದರೂ ನಾನು ಅದನ್ನು ನಂಬಲಿಲ್ಲ, ಈಗಲೂ ನಂಬಿಲ್ಲ.

ಐಎಎಸ್‌ ಅಧಿಕಾರಿಗಳಿಗೆ ಅಸಭ್ಯ ಚಿತ್ರ ಕಳುಹಿಸುವ ರೋಹಿಣಿ ಸಿಂಧೂರಿ!

ಈಕೆ ಕೆಲವು ಐಎಎಸ್ ಅಧಿಕಾರಿಗಳಿಗೆ ಒಂದಲ್ಲ, ಎರಡಲ್ಲ ಅನೇಕರಿಗೆ ತನ್ನ ಅಷ್ಟೇನೂ ಸಭ್ಯವಲ್ಲದ ಚಿತ್ರಗಳನ್ನು ಕಳಿಸಿರುವ ಹಾಗೂ ಅವರನ್ನು ಉತ್ತೇಜಿಸುವ ಕಾರ್ಯ ಮಾಡಿರುವ ಆಪಾದನೆ ಇದೆ. ಆ ಚಿತ್ರಗಳು ನನಗೆ ಸಿಕ್ಕಿವೆ. ಇದು ಖಾಸಗಿ ವಿಷಯ ಆಗುವುದಿಲ್ಲ. All India service conduct rules ಪ್ರಕಾರ ಹಿರಿಯ ಅಧಿಕಾರಿಗಳು ಈ ರೀತಿಯ ಚಿತ್ರಗಳನ್ನು ಕಳುಹಿಸುವುದು, ಸಂಭಾಷಣೆ ಮಾಡುವುದು ಅಪರಾಧ. ಈ ಆಪಾದನೆಗಳನ್ನು ಸರ್ಕಾರ ತನಿಖೆ ಮಾಡುವುದೇ, ನೋಡಬೇಕಿದೆ. ಏಕೆಂದರೆ ಸತ್ಯಾಸತ್ಯತೆ ಹೊರ ಬರಬೇಕಿದೆ.

ಇವರಿಂದಾಗಿ ಜಿಲ್ಲಾಧಿಕಾರಿ ಸಂಸಾರವೇ ಬೇರ್ಪಟ್ಟಿದೆ!

ಈಕೆ ಪ್ರೊಬೇಷನರಿ ಅಂತ ಇದ್ದಾಗ, ಅಲ್ಲಿಯ ಡಿಸಿ ಹಾಗೂ ಅವರ ಪತ್ನಿ ನೆರೆಯ ಜಿಲ್ಲೆಯ ಜಿಲ್ಲಾಧಿಕಾರಿ ಇವರಿಬ್ಬರ ಸಂಸಾರದಲ್ಲಿ ಹುಳಿ ಬಿದ್ದು ಅವರು ಬೇರ್ಪಟ್ಟಿದ್ದಾರೆ ಹಾಗೂ ಇದು ಈಕೆಯ ದೆಸೆಯಿಂದ ಎಂಬ ಮಾತು ಅನೇಕರ ಬಾಯಲ್ಲಿ ಕೇಳಿದ್ದೇನೆ.

ಡಿ. ರೂಪಾ ಅವರು ಮಾಡಿರುವ ಗಂಭೀರ ಆರೋಪಗಳಿಗೆ ರೋಹಿಣಿ ಸಿಂಧೂರಿ ಅವರು ಏನು ಉತ್ತರ ಕೊಡುತ್ತಾರೆ ಎನ್ನುವ ಕುತೂಹಲ ಎಲ್ಲೆಡೆ ಇದೆ.

ರೋಹಿಣಿ ಸಿಂಧೂರಿ ಅವರ ಮೇಲೆ ಡಿ. ರೂಪಾ ಮಾಡಿದ ಇತರ ಆರೋಪಗಳು ಇಂತಿವೆ

1. ರೋಹಿಣಿ ಸಂಧಾನಕ್ಕೆ ಹೋಗಿದ್ದಾರೆ ಅಂದರೆ ಏನರ್ಥ?

ರೋಹಿಣಿ ಸಿಂಧೂರಿ ಅವರು ಶಾಸಕ ಸಾರಾ ಮಹೇಶ್ ಅವರ ಬಳಿ ಸಂಧಾನಕ್ಕೆ ಹೋಗಿದ್ದರು ಎಂಬ ಸುದ್ದಿ ವೈರಲ್‌ ಆಗಿದೆ. ಸಂಧಾನಕ್ಕೆ ಹೋಗುವುದು ಅಂದರೆ ಅರ್ಥ ಏನು? ಯಾವ ಐಎಎಸ್ ಅಧಿಕಾರಿ ಕೂಡ ಎಂಎಲ್ಎ ಅಥವಾ ರಾಜಕೀಯ ವ್ಯಕ್ತಿಗಳ ಜೊತೆ, ತಾವು ನಿರ್ವಹಿಸಿದ ಕರ್ತವ್ಯ ನಿಮಿತ್ತ ಸಂಧಾನಕ್ಕೆ ಹೋಗಿದ್ದು ನಾನು ಇದೇ ಮೊದಲು ಕೇಳಿದ್ದು. ಹಾಗಾದರೆ, ರೋಹಿಣಿ ಸಿಂಧೂರಿ ಐಎಎಸ್ ಸಂಧಾನಕ್ಕೆ ಹೋಗಿದ್ದು ಯಾಕೆ? ಆಕೆ ಏನನ್ನು ಮುಚ್ಚಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ? ತಮ್ಮ ಕರ್ತವ್ಯ ಲೋಪದ ಬಗ್ಗೆಯೋ, ತಮ್ಮ ಭ್ರಷ್ಟಾಚಾರ ಬಗ್ಗೆಯೋ ಏನು?

2. ಮಂಡ್ಯ ಸಿಇಒ ಆಗಿದ್ದಾಗ ಟಾಯ್ಲೆಟ್ಸ್‌ ಬಗ್ಗೆ ನಕಲಿ ಲೆಕ್ಕ ಕೊಟ್ಟರು!

ರೋಹಿಣಿ ಸಿಂಧೂರಿ ಅವರು ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿದ್ದಾಗ ಅವರು ಕಟ್ಟಿಸಿದ ಟಾಯ್ಲೆಟ್‌ಗಿಂತ ಹೆಚ್ಚು ತೋರಿಸಿ figures fudge ಮಾಡಿ ಕೇಂದ್ರ ಸರ್ಕಾರದ ಪ್ರಶಸ್ತಿ ತೆಗೆದುಕೊಂಡರು ಎಂಬ ಆರೋಪ ಕೇಳಿ ಬಂತು. ಅದರ ತನಿಖೆಯೇ ಆಗಲಿಲ್ಲ.

3. ಆಕ್ಸಿಜನ್‌ ಇಲ್ಲದೆ 24 ಮಂದಿ ಸತ್ತ ಆಪಾದನೆಯಿಂದ ಹೇಗೋ ಪಾರು

ಚಾಮರಾಜನಗರ 24 ಜನರು ಆಮ್ಲಜನಕ ಇಲ್ಲದೇ ಸತ್ತಾಗ, ಆಪಾದನೆಗಳು ಇವರ ಮೇಲೇ ನೇರವಾಗಿ ಬಂತು. ಅದರಿಂದ ಹೇಗೋ ಪಾರಾದರು.

4. ಶಿಲ್ಪಾ ನಾಗ್‌ ಅವರ ಜತೆ ಜಗಳ ಯಾಕೆ?

ಮೈಸೂರಿನಲ್ಲಿ ಅಧಿಕಾರಿಯಾಗಿದ್ದ ಕನ್ನಡದ ಹುಡುಗಿ ಶಿಲ್ಪಾ ನಾಗ್ ಅವರ ಜೊತೆ ಜಗಳ, ರಂಪ ಯಾತಕ್ಕಾಗಿ? ಅಲ್ಲಿ ಯಾವುದೇ ಮೌಲ್ಯಾಧಾರಿತ ವಸ್ತು ವಿಷಯ ಇರಲಿಲ್ಲ. ಬರೀ ಕೋಳಿ ಜಗಳ. ಶಿಲ್ಪಾ ಅವರು ಹೆಚ್ಚು ಕೆಲಸ ಮಾಡಿದ್ದರು. ಅವರ ಬಗ್ಗೆ ಮಾಧ್ಯಮಗಳಲ್ಲಿ ಹೆಚ್ಚು ಪಾಸಿಟೀವ್‌ ಸುದ್ದಿಗಳು ಬಂದಿದ್ದರಿಂದ ಅದನ್ನು ಸಹಿಸಿಕೊಳ್ಳಲಾಗದೆ ಶಿಲ್ಪಾಗೆ ಹೆರೇಸ್‌ಮೆಂಟ್‌ ಮಾಡಿದರು ಎಂದು ಕೆಲವರು ಹೇಳಿದರು. ಕಡೆಗೆ ಮೈಸೂರಲ್ಲಿ ಗೌಡ ಸಮುದಾಯದ ಪತ್ರಕರ್ತರು ಅವರಿಗೆ ಜಾತಿ ಬೆಂಬಲ ನೀಡುತ್ತಿದ್ದಾರೆ ಎಂಬ ಮಟ್ಟಿಗೆ ಸ್ವತಃ ಇಲ್ಲದ ಜಾತೀಯತೆ ಮೈಸೂರಿನ ಜರ್ನಲಿಸ್ಟ್‌ಗಳಲ್ಲಿ ಬಿತ್ತಿದರು ಈಕೆ ಎಂದು ಅನೇಕರು ಹೇಳುತ್ತಾರೆ.

5. ಹರ್ಷ ಗುಪ್ತ ಅವರ ಜತೆಗೂ ಜಗಳ ಅಂದರೆ..

ಹರ್ಷ ಗುಪ್ತ ಅವರು ಅತ್ಯಂತ ಪ್ರಾಮಾಣಿಕ ಅಧಿಕಾರಿ. ಅವರ ಜೊತೆ ಜಗಳ ಮಾಡಿದ್ದಾರೆ. ಎಲ್ಲಾ ಐಎಎಸ್ ಅಧಿಕಾರಿಗಳಿಗೆ ಈ ವಿಷಯ ಗೊತ್ತಿದೆ.

6. ಮಣಿವಣ್ಣನ್‌ ಅಜಾತಶತ್ರು, ಅವರ ಜತೆಗೂ ಜಗಳ ಅಂದ್ರೆ..

ಮಣಿವಣ್ಣನ್ ಐಎಎಸ್ ಜೊತೆ ಲೇಬರ್/ ಕಾರ್ಮಿಕ ಇಲಾಖೆಯಲ್ಲಿ ಇದ್ದಾಗ ಜಗಳ ಮಾಡಿದ್ದು ಜಗಜನಿತ. ಮಣಿವಣ್ಣನ್ ಒಂದು ರೀತಿ ಅಜಾತಶತ್ರು. ಅಂಥದರಲ್ಲಿ…ಅವರ ಜೊತೆಗೂ ಜಗಳ ಮಾಡಿಕೊಂಡಿದ್ದಾರೆ.

7. ಮಹೇಶ್‌ ವಿರುದ್ಧದ ಒಂದು ಆರೋಪಕ್ಕೂ ಪ್ರೂಫ್‌ ನೀಡಿಲ್ಲ

ಕೆ.ಆರ್‌. ನಗರ ಶಾಸಕ ಸಾ.ರಾ ಮಹೇಶ್‌ ಅವರ ಮೇಲೆ ಅನೇಕ ಆಪಾದನೆಗಳನ್ನು ಮಾಡಿದ ಈಕೆ ಒಂದನ್ನೂ ಪ್ರೂವ್ ಮಾಡಲಿಲ್ಲ. ಅದಕ್ಕೇ ಸಂಧಾನಕ್ಕೆ ಹೋದರಾ?

8. ಪ್ರತಾಪ್‌ ಸಿಂಹ ಅವರ ಮೇಲೂ ನಿರಾಧಾರ ಆರೋಪ

ಮೈಸೂರು ಸಂಸದ ಪ್ರತಾಪ್ ಸಿಂಹ ಮೇಲೆ ಕೂಡ ಅನೇಕರ ಬಳಿ ಈಕೆ ಪ್ರೂವ್‌ ಮಾಡಲಾರದ ಆಪಾದನೆಗಳನ್ನು ಮಾಡಿದರು. ಅಂದರೆ, ಪ್ರತಾಪ್ ಸಿಂಹ ಅವರು ಖಾಸಗಿ ಕ್ಲಿನಿಕ್‌ಗಳಿಗೆ ಆಮ್ಲಜನಕ ಕೇಳುತ್ತಾ ತಮ್ಮ ಸ್ವಂತ ಲಾಭಕ್ಕೆ ನಿಂತಿದ್ದಾರೆ ಎಂಬ ನಿರಾಧಾರ ಆರೋಪ ಮಾಡಿದರು. ನಿಜ ಇದ್ದಿದ್ದೇ ಆದರೆ ಅದನ್ನು ಪ್ರೂವ್‌ ಯಾಕೆ ಮಾಡಲಿಲ್ಲ?

9. ಹಾಸನದಿಂದ ಎತ್ತಂಗಡಿ ಮಾಡಿದಾಗ ಅರ್ಜಿ ಬರೆದುಕೊಟ್ಟಿದ್ದು ನನ್ನ ಗಂಡ

ಹಾಸನದಲ್ಲಿ ತನ್ನನ್ನು ಒಂದು ವರ್ಷದ ಒಳಗೆ ಎತ್ತಂಗಡಿ ಮಾಡಿದ ಸರ್ಕಾರದ ವಿರುದ್ಧ CATಯಲ್ಲಿ (Central administrative tribunal) ದಾವೆ ಹೂಡಿದರು. ಆ ದಾವೆಗೆ ಅರ್ಜಿ ಬರೆದುಕೊಟ್ಟಿದ್ದೇ ನನ್ನ ಪತಿ ಮೌನೀಶ್‌ ಮುದ್ಗಿಲ್‌ ಅವರು. ನನ್ನೆದುರಿಗೆ ಬರೆದು ಬರೆದು ಆಕೆಗೆ, ಆಕೆಯ ತಂದೆಗೆ, ಲಾಯರ್‌ಗೆ ಕಳಿಸಿದ್ದರು. ಆದರೆ ಈಕೆ, ಮೈಸೂರು ಡಿಸಿ ಆಗಿ ಹೋದದ್ದು ಹೇಗೆ? ತನಗಿಂತ ಕೇವಲ 29 ದಿನ ಮುಂಚೆ ಮೈಸೂರಿಗೆ ಡಿಸಿ ಎಂದು ವರ್ಗಾವಣೆ ಆಗಿದ್ದ ಕನ್ನಡ ಹುಡುಗ ಶರತ್ ಅವರನ್ನು ಒಕ್ಕಲೆಬ್ಬಿಸಿದ್ದು ನ್ಯಾಯವೇ? ತನ್ನಂತೆ ಪರರು ಎಂಬ ಭಾವನೆ ಇಲ್ಲವೇಕೆ? 29 ದಿನದಲ್ಲಿ ಯಾವುದೇ ಕಳಂಕ, ಆರೋಪ ಇಲ್ಲದ ಶರತ್ ಅವರನ್ನು ರಿಪ್ಲೇಸ್‌ ಮಾಡಿದ್ದು ಈಕೆ ಯಾವ ಉನ್ನತ ಮಟ್ಟದ ಪ್ರಭಾವದಿಂದ?

10. ಕೊರೊನಾ ಟೈಮಲ್ಲಿ ಪಾರಂಪರಿಕ ಕಟ್ಟಡಕ್ಕೆ ಟೈಲ್ಸ್‌ ಹಾಕಿದ್ದು ಸರಿನಾ?

ಐಎಎಸ್‌ ಅಧಿಕಾರಿ ಡಾ. ರವಿಶಂಕರ್‌ ಈಕೆಯ ಮೇಲೆ ಪ್ರಾಥಮಿಕ ತನಿಖೆಯಲ್ಲಿ ತಪ್ಪು ಮಾಡಿರುವುದು ಸಾಬೀತಾಗಿದೆ. ಮೈಸೂರಿನ ಡಿಸಿ ಮನೆ, ಪಾರಂಪರಿಕ ಕಟ್ಟಡ ಅಂತಾ ಇದ್ದರೂ ಅಲ್ಲಿ ಟೈಲ್ಸ್ ಹಾಕಿದ್ದು, ಸ್ವಿಮ್ಮಿಂಗ್ ಪೂಲ್ ಮಾಡಿದ್ದು ಸರಿಯಾ? ಮನುಷ್ಯತ್ವ ಇರೋರು ಕೋವಿಡ್‌ ಸಮಯದಲ್ಲಿ ಜನ ಸಾಯುತ್ತಿರುವಾಗ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿಕೊಳ್ತಾರಾ? John was fiddling when Rome was burning ಅಂದ ಹಾಗೆ. Marie Antoinette ಎಂಬ ರಾಣಿ ಜನರು ಬ್ರೆಡ್‌ (ಆಹಾರ) ಇಲ್ಲದೆ ಸಾಯ್ತ್ತಿದ್ದಾರೆ ಅಂತ ಕೇಳಿಸಿಕೊಂಡಾಗ, ಬ್ರೆಡ್‌ ಇಲ್ಲದೆ ಇದ್ದರೆ ಏನು, ಜನರು ಕೇಕ್‌ ತಿನ್ನಲಿ ಅಂದಳಂತೆ. ಆ ರಾಣಿಯ ನೆನಪಾಯಿತು.

11. ಆಗದವರ ಮೇಲೆ ಸೋಷಿಯಲ್ ಮೀಡಿಯಾ ಟ್ರೋಲ್

ಹಿಂದೆ ನನಗೆ ಒಬ್ಬರು ಮೆಸೇಜ್ ಮಾಡಿ ತಾವು ರೋಹಿಣಿ ಸಿಂಧೂರಿ ಪರವಾಗಿ ಸೋಷಿಯಲ್‌ ಮೀಡಿಯಾ ಹ್ಯಾಂಡ್ಲ್‌ ಮಾಡುವ ಏಜೆನ್ಸಿ ಒಂದರಲ್ಲಿ ಕೆಲಸ ಮಾಡುತ್ತಿದ್ದುದನ್ನು ತಿಳಿಸಿದರು. ಅಲ್ಲಿ ಹೇಗೆ ಈಕೆಯ ಪರವಾಗಿ ಸುದ್ದಿ, ಫೋಟೊ, ವಿಡಿಯೊ ಕ್ರಿಯೇಟ್‌ ಮಾಡುತ್ತಾರೆ, ಹೇಗೆ ಈಕೆಯ ವಿರುದ್ಧ ಇರುವವರನ್ನು ಟ್ರೋಲ್ ಮಾಡುವ ಕಂಟೆಂಟ್‌ ಹಾಗೂ ಹ್ಯಾಂಡಲ್ ಗಳು ತಯಾರಾಗುತ್ತವೆ ಎಂಬುದು ಹೇಳಿದ್ದರು. ನಾನು ಅದನ್ನು ಫೇಸ್ಬುಕ್ ನಲ್ಲಿಯೂ ಹಾಕಿದ್ದೆ.

‌12. ಅಗ್ಗದ ಬ್ಯಾಗ್‌ ಹೆಚ್ಚು ಬೆಲೆಗೆ ಮಾರಾಟ: ತನಿಖೆಗೆ ಅನುಮತಿ ನಿರಾಕರಿಸಿದ್ದೇಕೆ ಸರಕಾರ?

ಈಕೆಯ ಮೇಲೆ ಅಗ್ಗದ ಬ್ಯಾಗ್‌ಗಳನ್ನು ಅತಿ ಹೆಚ್ಚು ಬೆಲೆಗೆ ಮಾರಾಟ ಮಾಡಿರುವ ದೂರು ಲೋಕಾಯುಕ್ತದಲ್ಲಿ ನೋಂದಣಿ ಆಗಿದ್ದು, ಅದರ ತನಿಖೆ ಕೈಗೆತ್ತಿಕೊಳ್ಳಲು ಲೋಕಾಯುಕ್ತ ಈಗಾಗಲೇ ಸರ್ಕಾರಕ್ಕೆ ಬರೆದಿದೆ. ಆದರೆ ಸರ್ಕಾರ ಮಟ್ಟದಲ್ಲಿ ಕಾರಣ ಕೊಡದೆ ಆಕೆಯನ್ನು ತನಿಖೆಗೆ ಒಳಪಡಿಸಲು ಅನುಮತಿ ನಿರಾಕರಣೆ ಮಾಡಲಾಗಿದೆ. ಅದರ ಪ್ರತಿ ನನ್ನ ಬಳಿ ಇದೆ. ಸಾಮಾನ್ಯವಾಗಿ ಅಧಿಕಾರಿಗಳಿಗೆ ಈ ರೀತಿಯ ಬೆಂಬಲ ಇರುತ್ತದೆಯೇ?

13. ಲಕ್ಕಿ ಅಲಿ ಕಾರ್ಯಕ್ರಮಕ್ಕೆ ರೌಡಿಗಳನ್ನು ಕಳುಹಿಸಿದರು

ಮೊನ್ನೆ ಇವರ ಭಾವ ಮಧುಸೂಧನ್ ರೆಡ್ಡಿ ಅವರು, ಲಕ್ಕಿ ಆಲಿ ಎಂಬ ಗಾಯನ ಆಯೋಜನೆ ಆಗಿದ್ದ ಜಾಗಕ್ಕೆ 20 – 30 ಜನ ಕರೆದುಕೊಂಡು ಹೋಗಿ ರೌಡಿಸಂ ಮಾಡಿರುವ ವಿಷಯ ಮಾಧ್ಯಮಗಳಲ್ಲಿ ಬಂತು. ಈಕೆಯು ತನ್ನ ಐಎಎಸ್ ಪ್ರಭಾವ ಬಳಸಿ ದುರುಪಯೋಗ ಮಾಡಿಕೊಂಡು ಇರುವುದಾಗಿ ಲಕ್ಕಿ ಆರೋಪ ಮಾಡಿದರು. ವ್ಯಾಜ್ಯದ ಜಮೀನಿಗೆ 20-30 ಜನ ಕರೆದುಕೊಂಡು ಹೋಗಿ ಕಾನೂನು ಕೈಗೆ ತೆಗೆದುಕೊಳ್ಳಬಹುದು? ಈ ರೀತಿಯ ಭಂಡ ಧೈರ್ಯ ಎಲ್ಲಿಂದ ಬರುತ್ತದೆ? ಐಎಎಸ್ ಅಧಿಕಾರದಿಂದ?

14. ಗಂಡ, ಮಾವನಿಗೆ ಭೂ ಸಂಬಂಧಿ ದಾಖಲೆ ಕೊಡುತ್ತಾರೆ..

ಇವರ ಗಂಡ ಹಾಗೂ ಇವರ ಮಾವನವರು (ಈಗ ತೀರಿ ಹೋಗಿದ್ದಾರಂತೆ) ರಿಯಲ್‌ ಎಸ್ಟೇಟ್‌ ಬ್ಯುಸಿನೆಸ್ ನಡೆಸುತ್ತಾರೆ. ಅನೇಕ ಬಾರಿ ಸರ್ವೇ ಹಾಗೂ ಭೂ ದಾಖಲೆ ಕಚೇರಿಯ ಮೂಲಕ ತನ್ನ ಕೌಟುಂಬಿಕ ವ್ಯವಹಾರಕ್ಕೆ ಅಗತ್ಯ ಇರುವ ಅನೇಕ ಭೂಸಂಬಂಧಿ ಮಾಹಿತಿ ಅಂದರೆ, ಒಂದು ಭೂಮಿಯ ಫೋಡಿ, ಇನ್ನೊಂದರ ಬಗ್ಗೆ ಅದು ವ್ಯಾಜ್ಯ ಇರುವ ಭೂಮಿಯೇ ಅಥವಾ ಖರೀದಿಸಲು ಯೋಗ್ಯವೇ ಎಂಬಂತಹ ಮಾಹಿತಿಗಳನ್ನು ತಮ್ಮ ಐಎಎಸ್ ಸ್ಥಾನ ಅಧಿಕಾರದಿಂದ ಪಡೆದು ಕೊಂಡಿರುವ ಮಾಹಿತಿ ದಾಖಲೆ ಸಮೇತ ಇದ್ದು, ಇದರ ಮೇಲೆ ಕ್ರಮ ಆಗುತ್ತದೆಯೇ? ನೋಡಬೇಕು.

15. ನನ್ನ ವರ್ಗಾವಣೆ ಆದಾಗ ಯಾರೂ ನೆರವಿಗೆ ಬರಲಿಲ್ಲ ಯಾಕೆ?

ಅನೇಕ ಬಾರಿ ಸರ್ಕಾರ ಅಧಿಕಾರಿಗಳನ್ನು ವರ್ಗಾವಣೆ ಮಾಡಿದಾಗ ಆ ಜಾಗದಲ್ಲಿ ಇದ್ದವರು ಕ್ಯಾಟ್/ಕೋರ್ಟ್ ಗೆ ಹೋಗುವುದು ಸಹಜ. ನಾನು 3 ವರ್ಷ ದೂರದ ಯಾದಗಿರಿಯಲ್ಲಿ ಕೆಲಸ ಮಾಡಿ,( senior most sp in the state, 2013ರಲ್ಲಿ ನಾನು) ಬೆಂಗಳೂರಿಗೆ ನನಗೆ ವರ್ಗವಾದಾಗ, ಆ ಜಾಗದಲ್ಲಿ ಇದ್ದ ಅಧಿಕಾರಿ ಪವಾರ್ ಅವರು ನನ್ನ ವರ್ಗಾವಣೆ ಪ್ರಶ್ನಿಸಿ ಕ್ಯಾಟ್ ಗೆ ಹೋದರು. ಆದರೆ, ರೋಹಿಣಿ ಸಿಂಧೂರಿ ಗೆ ಸಾಕ್ಷಾತ್ ಅಡ್ವೊಕೇಟ್ ಜನರಲ್ ಅವರೇ ಬಂದು ವಾದ ಮಾಡಿದರಲ್ಲ, ಮೈಸೂರು ಡಿಸಿ ವರ್ಗಾವಣೆ ವಿಷಯದಲ್ಲಿ, ಆ ಸೌಲಭ್ಯ ನನಗೇಕೆ ಸಿಗಲಿಲ್ಲ? ನನ್ನಂತಹ ಕನ್ನಡಿಗ ಅಧಿಕಾರಿಗಳು, ಹೇಗೆ ನಡೆಸಿ ಕೊಂಡರೂ ಸುಮ್ಮನೆ ಇರ್ತಾರೆ ಅಂತಲೇ? ಸ್ವತಃ ಅಡ್ವೊಕೇಟ್ ಜನರಲ್ ಹಾಜರಾಗಿ ವಾದ ಮಾಡಿದ್ದು ಈಕೆಗಲ್ಲದೆ ಮತ್ಯಾವ ಅಧಿಕಾರಿಗೂ ಈ ಸೌಲಭ್ಯ ಸಿಕ್ಕಿಲ್ಲ. ಯಾಕೆ ಈ ತಾರತಮ್ಯ ಧೋರಣೆ?

16. ಜಾಲಹಳ್ಳಿ ಮನೆಯ ದಾಖಲೆ ಕೊಟ್ಟೇ ಇಲ್ಲ!

ಜಾಲಹಳ್ಳಿಯಲ್ಲಿ ಈಕೆ (ಪತಿಯದ್ದು ಇದ್ದರೂ ಈಕೆಯದೂ ಆಗುತ್ತದೆ) ದೊಡ್ಡ ಮನೆ ಒಂದು ಕಟ್ಟುತ್ತಿದ್ದು, ಐಎಎಸ್ ಅಧಿಕಾರಿ ಸಲ್ಲಿಸಬೇಕಾದ immovable property returnsನಲ್ಲಿ ಈ ಮನೆಯ ಉಲ್ಲೇಖ ಇಲ್ಲ. ಬದಲಾಗಿ ಬೇರೆಲ್ಲಾ ಲಂಗು ಲೊಟ್ಟು ಆಸ್ತಿ ಬಗ್ಗೆ ವರದಿ ಕೊಟ್ಟಿದ್ದಾರೆ. ಆ ಮನೆಗೆ ಕೋಟಿಗಟ್ಟಲೆ ಇಟಲಿ ಫರ್ನಿಚರ್‌, 26 ಲಕ್ಷದ ಜರ್ಮನ್ ಗೃಹೋಪಯೋಗಿ ವಸ್ತುಗಳು (ಅದನ್ನು duty free ಮಾಡಿಸಿಕೊಳ್ಳುವ ಬಗ್ಗೆ ಚರ್ಚೆ ಇದೆ) ತರಿಸಿಕೊಂಡಿದ್ದಾರೆ. ಆರು ಲಕ್ಷ ಕೇವಲ ಬಾಗಿಲಿನ ಹಿಡಿಕೆಗಳಿಗೆ ಖರ್ಚು ಮಾಡಿರುವ ಬಗ್ಗೆ ಈಕೆ ಮಾಡಿರುವ ಚಾಟ್‌ಗಳ ಮಾಹಿತಿ ಸರ್ಕಾರಕ್ಕೆ ಸಿಕ್ಕಿದೆ. ಇದರ ಮೇಲೆ ಕೂಲಂಕಷ ತನಿಖೆ ಆಗುವುದೇ ನೋಡಬೇಕಿದೆ.

ಇದನ್ನೂ ಓದಿ : Sindhuri Vs Roopa : ಶಾಸಕರ ಜತೆ ಸಂಧಾನ ಅಂದ್ರೆ ಏನರ್ಥ?‌ ಸಿಂಧೂರಿ ವಿರುದ್ಧ IPS ರೂಪಾ ಗರಂ, 19 ಆರೋಪಗಳ ಚಾರ್ಜ್‌ಶೀಟ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Complaint to CM : ಸಿಎಂಗೆ ದೂರು ನೀಡಬೇಕೇ? ಈ ನಂಬರ್‌ಗೆ ಕರೆ ಮಾಡಿ!

Complaint to CM : ತಮ್ಮ ಸಮಸ್ಯೆಗಳಿಗೆ ಸರ್ಕಾರಿ ವ್ಯವಸ್ಥೆಯಲ್ಲಿ ಪರಿಹಾರ ಸಿಗದೇ ಇದ್ದಾಗ ನಾಗರಿಕರು ಅನಿವಾರ್ಯವಾಗಿ ಮುಖ್ಯಮಂತ್ರಿಯತ್ತ ದೃಷ್ಟಿ ನೆಡುತ್ತಾರೆ. ಹೇಗಾದರೂ ಮಾಡಿ ಅವರಿಗೊಂದು ದೂರು ಕೊಡಬೇಕು ಎಂದು ಅಂದುಕೊಳ್ಳುತ್ತಾರೆ. ಆದರೆ, ಇದಕ್ಕೆ ಅವರಿಗೆ ಯಾವ ಮಾರ್ಗ ಎಂಬುದು ಮಾತ್ರ ತಿಳಿದಿರುವುದಿಲ್ಲ. ಇದಕ್ಕೆ ಈಗ ಎರಡು ಮಾರ್ಗಗಳು ಇವೆ. ಸಹಾಯವಾಣಿಗೆ ಕರೆ ಮಾಡಿ ದೂರು ನೀಡುವುದು ಸರಳ ಮಾರ್ಗವಾಗಿದೆ.

VISTARANEWS.COM


on

Complaint to CM Siddaramaiah
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ದೂರು ನೀಡಬೇಕೇ? (Complaint to CM) ಇದಕ್ಕಾಗಿ ನೀವು ಜನತಾ ದರ್ಶನಕ್ಕೆ (Janatha Darshan) ಹೋಗಬೇಕೆಂದೇನೂ ಇಲ್ಲ. ನೀವು ಕುಳಿತಲ್ಲಿಯೇ ದೂರು ದಾಖಲು ಮಾಡಬಹುದು. ಅದಕ್ಕೆ ಇದೊಂದು ನಂಬರ್‌ಗೆ ಕರೆ ಮಾಡಿದರೆ ಸಾಕು ನಿಮ್ಮ ದೂರನ್ನು ದಾಖಲಿಸಿಕೊಳ್ಳಲಾಗುತ್ತದೆ.

ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳನ್ನು ಮಾಡಿಸಿಕೊಳ್ಳಬೇಕೆಂದರೆ ತುಸು ಕಷ್ಟವನ್ನೇ ಪಡಬೇಕು. ರೈತರಿಗೆ ಒಂದು ಖಾತೆ ಮಾಡಿಸಿಕೊಳ್ಳಲೋ, ರಸ್ತೆ ಸಮಸ್ಯೆಯೋ ಅದೇ ದೊಡ್ಡದಾಗಿರುತ್ತದೆ. ಆದರೆ, ಇದಕ್ಕೆ ಅಧಿಕಾರಿಗಳು ಸೊಪ್ಪು ಹಾಕುವುದಿಲ್ಲ. ಇನ್ನು ಮಹಿಳೆಯರಿಗೆ, ವೃದ್ಧರಿಗೆ ಸೇರಿದಂತೆ ನಾಗರಿಕರಿಗೆ ಒಂದಲ್ಲ ಒಂದು ಸಮಸ್ಯೆಗಳು ಇದ್ದೇ ಇರುತ್ತವೆ. ಇದಕ್ಕೆ ಸರ್ಕಾರಿ ವ್ಯವಸ್ಥೆಯಲ್ಲಿ ಪರಿಹಾರ ಸಿಗದೇ ಇದ್ದಾಗ ಅನಿವಾರ್ಯವಾಗಿ ಮುಖ್ಯಮಂತ್ರಿಯತ್ತ ದೃಷ್ಟಿ ನೆಡುತ್ತಾರೆ. ಹೇಗಾದರೂ ಮಾಡಿ ಅವರಿಗೊಂದು ದೂರು ಕೊಡಬೇಕು ಎಂದು ಅಂದುಕೊಳ್ಳುತ್ತಾರೆ. ಆದರೆ, ಇದಕ್ಕೆ ಅವರಿಗೆ ಯಾವ ಮಾರ್ಗ ಎಂಬುದು ಮಾತ್ರ ತಿಳಿದಿರುವುದಿಲ್ಲ. ಇದಕ್ಕೆ ಈಗ ಎರಡು ಮಾರ್ಗಗಳು ಇವೆ. ಒಂದೋ ಸಿಎಂ ನಡೆಸುವ ಜನತಾ ದರ್ಶನ ಕಾರ್ಯಕ್ರಮಕ್ಕೆ ಆಗಮಿಸಿ ದೂರು ಸಲ್ಲಿಸುವುದು, ಇಲ್ಲವೇ 1902 ಸಹಾಯವಾಣಿಗೆ (Helpline Number) ಕರೆ ಮಾಡಿ ಜನತಾ ದರ್ಶನದ ಅಡಿ ದೂರನ್ನು ದಾಖಲಿಸುವುದನ್ನು ಮಾಡಬಹುದಾಗಿದೆ. ಹೀಗೆ ಮಾಡಿದರೂ ನೇರವಾಗಿಯೇ ಸಿಎಂಗೆ ದೂರು ದಾಖಲಿಸಿದಂತೆ ಆಗುತ್ತದೆ.

ಕರೆ ಮಾಡಿ ಸಿಎಂಗೆ ಹೀಗೆ ದೂರು ನೀಡಿ!

1902 ಸಹಾಯವಾಣಿಯನ್ನು ರಾಜ್ಯ ಸರ್ಕಾರ ಈಗಾಗಲೇ ತೆರೆದಿದೆ. ಜನತಾ ದರ್ಶನಕ್ಕೆ ದೂರದ ಊರಿನಿಂದ ಹೋಗಲು ಆಗದವರು, ತೀವ್ರ ಸಮಸ್ಯೆ ಎದುರಿಸುತ್ತಿರುವವರು ಯಾರಾದರೂ ಇದ್ದರೆ ಸಿಎಂ ಗಮನಕ್ಕೆ ತರುವ ಸಂಬಂಧ ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಸಾಕು. ಅಲ್ಲಿ ನಿಮ್ಮ ಸಮಸ್ಯೆಗಳನ್ನು ಹೇಳಬೇಕು. ಅವರು ನಿಮ್ಮ ಅಹವಾಲುಗಳನ್ನು ಆಧರಿಸಿ ಅದನ್ನು ಜನತಾ ದರ್ಶನ ಕೆಟಗರಿ ಅಡಿ ದೂರು ದಾಖಲು ಮಾಡಿಕೊಳ್ಳುತ್ತಾರೆ.

ಹೀಗೆ ದೂರು ದಾಖಲು ಮಾಡುವಾಗ ನಿಮ್ಮ ಸಮಸ್ಯೆ, ವಿಳಾಸ, ಮೊಬೈಲ್‌ ಸಂಖ್ಯೆಯನ್ನು ಪಡೆದು ಅದರಲ್ಲಿ ನಮೂದು ಮಾಡಲಾಗುತ್ತದೆ. ಈ ದೂರು ಸಿಎಂ ಜನತಾ ದರ್ಶನ ಕೆಟಗರಿ ಮೂಲಕ ಸಂಬಂಧಪಟ್ಟ ಇಲಾಖೆಗೆ ರವಾನೆ ಮಾಡಲಾಗುತ್ತದೆ. ಆದರೆ, ಮುಂದಿನ ಹಂತದ ಬಗ್ಗೆ ಸ್ಪಷ್ಟತೆಯನ್ನು ನೀಡಲಾಗಿಲ್ಲ.

ಮುಂದಿನ ಕ್ರಮ ಏನು?

ಒಂದು ವೇಳೆ 1092 ಸಹಾಯವಾಣಿಗೆ ಕರೆ ಮಾಡಿ ದೂರು ದಾಖಲಾದರೆ ನಿಮಗೊಂದು ಐಡಿ ಸಂಖ್ಯೆಯನ್ನು ನೀಡಲಾಗುತ್ತದೆ. ನೀವು ದಾಖಲು ಮಾಡಲಾದ ದೂರು ಸಿಎಂ ಕಾರ್ಯಾಲಯಕ್ಕೆ ಹೋಗುತ್ತದೆ. ಅಲ್ಲಿಂದ ಮುಂದಿನ ಪ್ರಕ್ರಿಯೆ ಏನು? ನಿಮ್ಮ ದೂರಿನ ಸ್ಥಿತಿ-ಗತಿ ಏನಾಯಿತು ಎಂಬ ಬಗ್ಗೆ ತಿಳಿಯಬೇಕು ಎಂದಿದ್ದರೆ, ಜನಸ್ಪಂದನ ಪೋರ್ಟಲ್‌ ಅಥವಾ ಜನಸ್ಪಂದನ ಪಿಜಿಆರ್‌ಎಸ್‌ ಪೋರ್ಟಲ್‌ಗೆ ಭೇಟಿ ನೀಡಿ ಅಲ್ಲಿ “ಸಿಪಿಗ್ರಾಮ್ಸ್‌ ಕುಂದುಕೊರತೆ ಸ್ಥಿತಿಯನ್ನು ಪರಿಶೀಲಿಸಿ ಆಯ್ಕೆ ಮೇಲೆ ಕ್ಲಿಕ್‌ ಮಾಡಬೇಕು. ಬಳಿಕ ನಿಮ್ಮ ಸಿಪಿಗ್ರಾಮ್ಸ್‌ ಗ್ರೀವಿಯನ್ಸ್‌ ನಂಬರ್‌ (CPGRAMS Grievance Number) ಅಥವಾ ನಿಮ್ಮ ನೋಂದಾಯಿತ ಮೊಬೈಲ್‌ ಸಂಖ್ಯೆಯನ್ನು ನಮೂದು ಮಾಡಿದರೆ ಅಲ್ಲಿ ಅಹವಾಲು ಯಾವ ಹಂತದಲ್ಲಿದೆ ಎಂಬುದನ್ನು ತಿಳಿಸುತ್ತದೆ. ಇಲ್ಲವೇ ನೇರವಾಗಿ 1902 ಸಂಖ್ಯೆಗೆ ಕರೆ ಮಾಡಿದರೆ ನಿಮಗೆ ಅಲ್ಲಿನ ಸಿಬ್ಬಂದಿ ಸಹ ಅಹವಾಲಿನ ಸ್ಟೇಟಸ್‌ ಬಗ್ಗೆ ತಿಳಿಸಿಕೊಡಲಿದ್ದಾರೆ.

ಪ್ರಕ್ರಿಯೆ ಹೇಗಿರಲಿದೆ?

ಸಾರ್ವಜನಿಕರಿಂದ ಮುದ್ದಾಂ/ಆನ್‌ಲೈನ್‌ನಲ್ಲಿ ಸ್ವೀಕೃತವಾಗುವ ಕುಂದುಕೊರತೆ/ಅಹವಾಲುಗಳನ್ನು ಏಕೀಕೃತ ಸಾರ್ವಜನಿಕ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆಯಲ್ಲಿ ದಾಖಲಿಸಿ, ಸ್ವೀಕೃತಿಯನ್ನು ನೀಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ಸ್ವೀಕೃತಿ ಸಂಖ್ಯೆ ಬಳಸಿ ತಮ್ಮ ಕುಂದುಕೊರತೆ/ಅಹವಾಲಿನ ಸ್ಥಿತಿಗತಿಯನ್ನು ಏಕೀಕೃತ ಸಾರ್ವಜನಿಕ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆಯಲ್ಲಿ ಅಥವಾ 1902 ಸಂಖ್ಯೆಗೆ ಕರೆಮಾಡಿ ತಿಳಿದುಕೊಳ್ಳಬಹುದು.

ಇದನ್ನೂ ಓದಿ: Gruha Lakshmi : ಗೃಹಲಕ್ಷ್ಮಿ ಹಣ ಇನ್ನೂ ಬಂದಿಲ್ಲವೇ? ಹಾಗಾದರೆ ದೂರು ಕೊಡೋಕೆ ರೆಡಿ ಆಗಿ!

ಎಪಿಐ ಮೂಲಕ ನಿರ್ವಹಣೆ

ಸ್ವೀಕರಿಸಲಾದ ಕುಂದುಕೊರತೆ/ಅಹವಾಲುಗಳನ್ನು ವಿಷಯದ ಆಧಾರದಲ್ಲಿ ಸಂಬಂಧಿಸಿದ ಇಲಾಖೆಗಳ/ಅಧೀನ ಸಂಸ್ಥೆಗಳ ಅಧಿಕಾರಿಗಳ ಲಾಗಿನ್‌ಗಳಿಗೆ ತಕ್ಷಣ ರವಾನಿಸಲಾಗುತ್ತದೆ. ಮುಖ್ಯಮಂತ್ರಿಗಳ ಜನತಾದರ್ಶನದಲ್ಲಿ ಸ್ವೀಕೃತವಾದ ಕುಂದುಕೊರತೆ/ಅಹವಾಲುಗಳನ್ನು ಸ್ವಯಂಚಾಲಿತವಾಗಿ ಸಂಬಂಧಪಟ್ಟ ಇಲಾಖಾ ಕಾರ್ಯದರ್ಶಿಗಳ ಇ-ಆಫೀಸ್‌ ಲಾಗಿನ್‌ಗೆ ಕಳುಹಿಸುವ ವ್ಯವಸ್ಥೆ ಅಳವಡಿಸಲಾಗಿದೆ. ಇ-ಆಫೀಸ್‌ನಲ್ಲಿ ಸದರಿ ಕಡತದ ಪ್ರತಿ ಹಂತದ ಚಲನೆಯನ್ನು API ಮೂಲಕ ಏಕೀಕೃತ ಸಾರ್ವಜನಿಕ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆಗೆ ಒದಗಿಸಲಾಗುತ್ತದೆ. ಸ್ವೀಕೃತವಾದ ಅಹವಾಲುಗಳ ಪ್ರಗತಿ ಪರಿಶೀಲಿಸಲು ಪ್ರತ್ಯೇಕ ಡ್ಯಾಶ್‌ಬೋರ್ಡ್‌ ಅಭಿವೃದ್ಧಿಪಡಿಸಲಾಗಿದೆ. ಈ ಡ್ಯಾಶ್‌ಬೋರ್ಡ್‌ನಲ್ಲಿ ಇಲಾಖಾ/ಜಿಲ್ಲಾವಾರು ಸ್ವೀಕೃತವಾದ ಕುಂದುಕೊರತೆ ಮತ್ತು ಅಹವಾಲುಗಳ ಸಂಖ್ಯೆ, ವಿಲೇ ಮಾಡಲಾದ ಮತ್ತು ಬಾಕಿ ಉಳಿದಿರುವ ಕುಂದುಕೊರತೆ ಮತ್ತು ಅಹವಾಲುಗಳ ವಿವರ ಲಭ್ಯವಿದೆ.

Continue Reading

ಉಡುಪಿ

Karnataka Weather : ಮಳೆಯೊಂದಿಗೆ 30 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

Rain News : ಇನ್ನೆರಡು ದಿನಗಳು ಹಗುರ ಮಳೆಯೊಂದಿಗೆ ಥಂಡಿ ಗಾಳಿಯು ಬೀಸಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

women enjoying in rain
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ಡಿ. 4-5ರಂದು ಮಳೆಯ ಸಿಂಚನವಾಗಲಿದ್ದು, ಪ್ರತಿ ಗಂಟೆಗೆ 30 ಕಿ.ಮೀ ವೇಗದಲ್ಲಿ ನೆಲಗಾಳಿಯು ಬೀಸಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚುಂಗ್ ಚಂಡಮಾರುತದ ಪರಿಣಾಮದಿಂದಾಗಿ ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಭಾಗದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ (karnataka Weather Forecast) ಸಾಧ್ಯತೆ ಇದೆ.

ಮುಂದಿನ 24 ಗಂಟೆಗಳಲ್ಲಿ ಮಿಚುಂಗ್ ಸೈಕ್ಲೋನ್ ತೀವ್ರಗೊಳ್ಳುವ ನಿರೀಕ್ಷೆ ಇದ್ದು, ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಮಳೆಯಾಗಲಿದೆ.

ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ರಾಯಚೂರಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು, ಉಳಿದೆಡೆ ಒಣ ಹವೆ ಇರಲಿದೆ. ಕರಾವಳಿಯಲ್ಲಿ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ ಇರಲಿದ್ದು, ಉತ್ತರ ಕನ್ನಡದಲ್ಲಿ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Cocktail finger ring : ಬ್ರೈಡಲ್‌ ಜ್ಯುವೆಲರಿ ಫ್ಯಾಷನ್‌ನಲ್ಲಿ ಎಥ್ನಿಕ್‌ ಕಾಕ್‌ಟೈಲ್‌ ಉಂಗುರಗಳ ಕಲರವ

ಕನಿಷ್ಠ ತಾಪಮಾನ ಏರಿಕೆ

ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರುವುದರಿಂದ ಮುಂದಿನ 48 ಗಂಟೆಯಲ್ಲಿ ಕನಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದಾಗಿ ಕೆಲವೆಡೆ ಚಳಿಯು ಮೈ ನಡುಗಿಸಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 27 ಡಿ.ಸೆ -18 ಡಿ.ಸೆ
ಮಂಗಳೂರು: 36 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 18 ಡಿ.ಸೆ
ಗದಗ: 33 ಡಿ.ಸೆ – 18ಡಿ.ಸೆ
ಹೊನ್ನಾವರ: 36 ಡಿ.ಸೆ- 23 ಡಿ.ಸೆ
ಕಲಬುರಗಿ: 34 ಡಿ.ಸೆ – 20 ಡಿ.ಸೆ
ಬೆಳಗಾವಿ: 32 ಡಿ.ಸೆ – 18 ಡಿ.ಸೆ
ಕಾರವಾರ: 36 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಕರ್ನಾಟಕ

ಧಾರವಾಡದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಧಾರವಾಡದ ಕೊಪ್ಪದಕೇರಿಯ ಶಿವಾಲಯದ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದೆ.

VISTARANEWS.COM


on

Crime news
Koo

ಧಾರವಾಡ: ನಡುರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ (Murder Case) ಮಾಡಿರುವ ಘಟನೆ ಧಾರವಾಡದ ಕೊಪ್ಪದಕೇರಿಯ ಶಿವಾಲಯದ ಬಳಿ ನಡೆದಿದೆ. ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ನಿಂಗಪ್ಪ ಹಡಪದ (60) ಹತ್ಯೆಗೀಡಾದ ವ್ಯಕ್ತಿ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಉಪನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗೋಕರ್ಣ ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ನೀರುಪಾಲು

drown in sea

ಕಾರವಾರ: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಪ್ರವಾಸಿಗರು ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಗೋಕರ್ಣ ಕಡಲತೀರದಲ್ಲಿ (Drown in Sea) ನಡೆದಿದೆ. ಇದೇ ವೇಳೆ ಗಂಭೀರಗೊಂಡ ಮತ್ತೊಬ್ಬ ಪ್ರವಾಸಿಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | ತಮ್ಮ ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸುಟ್ಟು ಹಾಕಿ ಎಂದ ಭವಾನಿ ರೇವಣ್ಣ! ವಿಡಿಯೊ ನೋಡಿ

ಕಲಬುರಗಿ ಮೂಲದ ಅಭಿಷೇಕ್, ಆಕಾಶ್ ಮೃತ ಪ್ರವಾಸಿಗರು. ಕಲಬುರಗಿಯಿಂದ ಐವರು ಸ್ನೇಹಿತರು ಪ್ರವಾಸಕ್ಕೆಂದು ಗೋಕರ್ಣಕ್ಕೆ ಆಗಮಿಸಿದ್ದರು. ಸಮುದ್ರದಲ್ಲಿ ಮೂವರು ಈಜಲು ತೆರಳಿದ್ದಾಗ ಅಲೆಗಳಿಗೆ ಸಿಲುಕಿ ಮುಳುಗಿದ್ದರು. ಈ ವೇಳೆ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದು, ಒಬ್ಬನನ್ನು ರಕ್ಷಣೆ ಮಾಡಲಾಗಿದೆ. ಗಂಭೀರಗೊಂಡ ಪ್ರವಾಸಿಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Continue Reading

ಕರ್ನಾಟಕ

ತಮ್ಮ ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸುಟ್ಟು ಹಾಕಿ ಎಂದ ಭವಾನಿ ರೇವಣ್ಣ! ವಿಡಿಯೊ ನೋಡಿ

ಅಪಘಾತ ನಡೆದಾಗ ಬೈಕ್‌ ಸವಾರನನ್ನು ಸಂತೈಸುವುದು ಬಿಟ್ಟು ಹಿಗ್ಗಾಮುಗ್ಗಾ ಬೈಯುವ ಮೂಲಕ ಮಾನವೀಯತೆ ಮರೆತ ಭವಾನಿ ರೇವಣ್ಣ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

VISTARANEWS.COM


on

Bhavani Revanna
Koo

ಮೈಸೂರು: ಕಾರಿಗೆ ಡಿಕ್ಕಿ ಹೊಡೆದ ಬೈಕ್ ಚಾಲಕನನ್ನು ಭವಾನಿ ರೇವಣ್ಣ (Bhavani Revanna) ತರಾಟೆಗೆ ತೆಗೆದುಕೊಂಡ ಘಟನೆ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದ ಹೊರವಲಯದಲ್ಲಿ ನಡೆದಿದೆ. ಅಪಘಾತ ನಡೆದಾಗ ಬೈಕ್‌ ಸವಾರನನ್ನು ಸಂತೈಸುವುದು ಬಿಟ್ಟು ಹಿಗ್ಗಾಮುಗ್ಗಾ ಬೈದಿರುವ ಭವಾನಿ ರೇವಣ್ಣ, ಬೈಕ್‌ ಸುಟ್ಟು ಹಾಕಿ ಎಂದು ಆಕ್ರೋಶ ಹೊರಹಾಕಿರುವುದು ಕಂಡುಬಂದಿದೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದ ಹೊರವಲಯದಲ್ಲಿ ಅಪಘಾತ ನಡೆದಿದೆ. ಹಾಸನ – ಕೆ.ಆರ್.ನಗರ ರಸ್ತೆಯಲ್ಲಿ ಬರುತ್ತಿದ್ದಾಗ ಭವಾನಿ ರೇವಣ್ಣ ಕಾರಿಗೆ ಬೈಕ್‌ ಸವಾರರೊಬ್ಬರು ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಅಕ್ಕಾ ಕಾರು ಸೈಡಿಗೆ ಹಾಕಿ ಅಂದಿದ್ದಕ್ಕೆ ಕಿಡಿಕಾರಿರುವ ಭವಾನಿ ರೇವಣ್ಣ, ನನ್ನ ಕಾರಿಗೆ ಡ್ಯಾಮೇಜ್‌ ಆಗಿದೆ. ರಿಪೇರಿ ಮಾಡಿಸೋಕೆ 50 ಲಕ್ಷ ರೂ. ಹಣ ಬೇಕು. ಯಾರಾದರೂ ನ್ಯಾಯ ಮಾತನಾಡುವವರು ಐವತ್ತು ಲಕ್ಷ ಹಣ ಕೊಟ್ಟು ಮಾತನಾಡಿ. ಒಂದೂವರೆ ಕೋಟಿ ರೂಪಾಯಿ ಗಾಡಿ ಇದು ಎಂದು ದರ್ಪ ತೋರಿದ್ದಾರೆ.

ಸಾಲಿಗ್ರಾಮ ಠಾಣೆಯ ಇನ್ಸ್‌ಪೆಕ್ಟರ್‌ನ ಕರೀರಿ, ತಗೊಂಡು ಹೋಗಿ ಇವನನ್ನು ಒಳಗೆ ಹಾಕಲಿ, ಸಾಯಂಗಿದ್ರೆ ಬಸ್ಸಿಗೆ ಸಿಕ್ಕಿ ಸಾಯಬೇಕಿತ್ತು. ಸಾಯೋಕೆ ನನ್ ಕಾರೇ ಬೇಕಿತ್ತಾ? ಅವನು ಸತ್ತೋಗ್ತಾನೆ ಅಂತ ಅವನ ಬಗ್ಗೆ ಯಾಕೆ ಯೋಚನೆ ಮಾಡ್ತೀಯಾ? ಒಂದೂವರೆ ಕೋಟಿ ರೂಪಾಯಿ ಕಾರು ಬಗ್ಗೆ ಯೋಚನೆ ಮಾಡು ಎಂದಿರುವ ಭವಾನಿ ರೇವಣ್ಣ, ಬೈಕ್ ಸವಾರನ‌ನ್ನು ನಿಲ್ಲಿಸಿ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ.

ಇದನ್ನೂ ಓದಿ | ಚಿಕ್ಕಮಗಳೂರು ಪೊಲೀಸ್-ವಕೀಲರ ಸಂಘರ್ಷ; ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಅಪಘಾತದಲ್ಲಿ ಗಾಯಗೊಂಡವನನ್ನು ಸಂತೈಸುವುದು ಬಿಟ್ಟು ಹಿಗ್ಗಾಮುಗ್ಗಾ ಬೈಯುವ ಮೂಲಕ ಭವಾನಿ ರೇವಣ್ಣ ಮಾನವೀಯತೆ ಮರೆತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Ishwar Sahu
ದೇಶ29 mins ago

ಮುಸ್ಲಿಮರಿಂದ ಹತ್ಯೆಗೀಡಾದ ಯುವಕನ ತಂದೆ 7 ಬಾರಿಯ ಕಾಂಗ್ರೆಸ್ ಶಾಸಕನನ್ನು ಸೋಲಿಸಿದರು!

Jyothi Reddy CEO of American Company
ಅಂಕಣ32 mins ago

Raja Marga Column : ಅನ್ನಕ್ಕಾಗಿ ಕಲ್ಲು ಒಡೆಯೋ ಕೆಲಸ ಮಾಡ್ತಿದ್ದ ಆಕೆ ಈಗ ಅಮೆರಿಕನ್‌ ಕಂಪನಿ ಸಿಇಓ!

Venkataramana Reddy
ದೇಶ1 hour ago

ತೆಲಂಗಾಣದಲ್ಲಿ ಹಾಲಿ, ಭಾವಿ ಸಿಎಂಗಳನ್ನೇ ಸೋಲಿಸಿದ ಬಿಜೆಪಿಯ ವೆಂಕಟರಮಣ ರೆಡ್ಡಿ; ಯಾರಿವರು?

Complaint to CM Siddaramaiah
ಕರ್ನಾಟಕ1 hour ago

Complaint to CM : ಸಿಎಂಗೆ ದೂರು ನೀಡಬೇಕೇ? ಈ ನಂಬರ್‌ಗೆ ಕರೆ ಮಾಡಿ!

women enjoying in rain
ಉಡುಪಿ1 hour ago

Karnataka Weather : ಮಳೆಯೊಂದಿಗೆ 30 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

Mizoram Election Result
ದೇಶ2 hours ago

Mizoram Election Result: ಮಿಜೋರಾಂ ಫಲಿತಾಂಶಕ್ಕೆ ಕ್ಷಣಗಣನೆ; ಯಾರಿಗೆ ಗೆಲುವು?

4 state election results shows us that, freebies are not the way for win elections
ದೇಶ2 hours ago

ವಿಸ್ತಾರ ಸಂಪಾದಕೀಯ: ವಿಧಾನಸಭೆ ಚುನಾವಣೆ ಫಲಿತಾಂಶ; ‘ಗ್ಯಾರಂಟಿ’ಯೇ ಅಂತಿಮವಲ್ಲ!

ead your daily horoscope predictions for december 4th 2023
ಪ್ರಮುಖ ಸುದ್ದಿ3 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Sphoorti Salu
ಸುವಚನ3 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Mizoram Election Result will be announced on December 4, 2023
ದೇಶ7 hours ago

Mizoram Election Result: ಇಂದು ಮಿಜೋರಾಂ ಎಲೆಕ್ಷನ್ ರಿಸಲ್ಟ್; ಮತ ಎಣಿಕೆ ಒಂದು ದಿನ ಮುಂದೂಡಿದ್ದೇಕೆ?

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ3 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ20 hours ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ3 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ3 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ4 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌