Sindhuri Vs Roopa : ಶಾಸಕರ ಜತೆ ಸಂಧಾನ ಅಂದ್ರೆ ಏನರ್ಥ?‌ ಸಿಂಧೂರಿ ವಿರುದ್ಧ IPS ರೂಪಾ ಗರಂ, 19 ಆರೋಪಗಳ ಚಾರ್ಜ್‌ಶೀಟ್ Vistara News

ಕರ್ನಾಟಕ

Sindhuri Vs Roopa : ಶಾಸಕರ ಜತೆ ಸಂಧಾನ ಅಂದ್ರೆ ಏನರ್ಥ?‌ ಸಿಂಧೂರಿ ವಿರುದ್ಧ IPS ರೂಪಾ ಗರಂ, 19 ಆರೋಪಗಳ ಚಾರ್ಜ್‌ಶೀಟ್

ಐಪಿಎಸ್‌ ಅಧಿಕಾರಿ ಡಿ. ರೂಪಾ ಅವರು ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಸಿಕ್ಕಾಪಟ್ಟೆ ಗರಂ ಆಗಿದ್ದಾರೆ. ಸಿಂಧೂರಿ ಅವರ ಪ್ರತಿಯೊಂದು ನಡೆಯನ್ನೂ ಪ್ರಶ್ನಿಸಿರುವ ಅವರು 19 ಆರೋಪಗಳನ್ನು ಮಾಡಿದ್ದಾರೆ.

VISTARANEWS.COM


on

Rohini sindhuri Roopa moudgil
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಖಡಾಖಡಿ ಹೋರಾಟಕ್ಕೆ ಹೆಸರಾದ ಇಬ್ಬರು ಮಹಿಳಾ ಅಧಿಕಾರಿಗಳು ಈಗ ಪರಸ್ಪರ ಎದುರಾಳಿಗಳಾಗಿ ನಿಂತಂತೆ ಕಾಣುತ್ತಿದೆ. ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್‌ ಅಧಿಕಾರಿಯಾಗಿರುವ ಐಜಿಪಿ ಡಿ. ರೂಪಾ (Sindhuri Vs Roopa) ಸಿಡಿದೆದ್ದಿದ್ದು, ಒಬ್ಬ ಶಾಸಕನ ಜತೆ ಸಂಧಾನ ಅಂದ್ರೆ ಏನು ಎಂದು ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಕೆ.ಆರ್‌. ನಗರ ಶಾಸಕ ಸಾ.ರಾ. ಮಹೇಶ್‌ ಅವರ ಜತೆಗಿನ ಜಗಳವನ್ನು ರೋಹಿಣಿ ಸಿಂಧೂರಿ ಅವರು ಸಂಧಾನದ ಮೂಲಕ ಇತ್ಯರ್ಥ ಮಾಡಿಕೊಂಡಿದ್ದಾರೆ ಎಂಬ ಆರೋಪಗಳಿಗೆ ಸಂಬಂಧಿಸಿ ಡಿ. ರೂಪಾ ಈ ಪ್ರತಿಕ್ರಿಯೆ ನೀಡಿದ್ದಾರೆ. ಅದರ ಜತೆಗೆ ಡಿ. ರೂಪಾ ಅವರು ೧೯ ಆರೋಪಗಳನ್ನು ಮಾಡಿದ್ದು, ಪ್ರತಿಯೊಂದು ಕೂಡಾ ಗಂಭೀರವಾಗಿವೆ.

ರೋಹಿಣಿ ಸಿಂಧೂರಿ ಅವರು ಏನೇ ಮಾಡಿದರೂ ಅವರನ್ನು ಪ್ರತಿಬಾರಿಯೂ ತನಿಖೆ ಮಾಡದೆಯೇ ರಕ್ಷಣೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಈಕೆ ಕೆಮ್ಮಿದ್ದೂ ಕ್ಯಾಕರಿಸಿದ್ದೂ ತಮ್ಮ ಟಿಆರ್‌ಪಿಗೋಸ್ಕರ ಹಾಕುವ ಮೀಡಿಯಾ ಗಳೇ ಈಕೆಯನ್ನು ಹೀರೋ/ ಹೀರೋಯಿನ್ ಮಾಡುವ ಮೂಲಕ ಈಕೆ ಯಾವುದೇ ಶಿಕ್ಷೆಯಿಲ್ಲದೆ ಪ್ರತಿ ಬಾರಿ ಬಚಾವ್ ಆಗಿರುವುದೇ? ಅಥವಾ ಕಿಂದರಿ ಜೋಗಿ ಮಾಡಿದ ರೀತಿಯಲ್ಲಿ ಸರ್ಕಾರದಲ್ಲಿ ಇರುವ ಪ್ರಭಾವಿಗಳು ಕಿಂದರಿ ಜೋಗಿಯ ಪಾಶಕ್ಕೆ ಸಿಲುಕಿದರೆ ಎಂದೆಲ್ಲ ಡಿ. ರೂಪಾ ಕೇಳಿದ್ದಾರೆ. ಸಿಂಧೂರಿ ಅವರಿಂದಾಗಿ ಹಲವರ ಬಾಳು ಹಾಳಾಗಿದೆ ಎಂದೆಲ್ಲ ಆರೋಪ ಮಾಡಿದ್ದು, ಅದಕ್ಕೆ ರೋಹಿಣಿ ಸಿಂಧೂರಿ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂದು ಕಾದು ನೋಡಬೇಕಾಗಿದೆ.

ರೋಹಿಣಿ ಸಿಂಧೂರಿ ಅವರ ಮೇಲೆ ಡಿ. ರೂಪಾ ಮಾಡಿದ ಆರೋಪಗಳು ಇಂತಿವೆ

1. ರೋಹಿಣಿ ಸಂಧಾನಕ್ಕೆ ಹೋಗಿದ್ದಾರೆ ಅಂದರೆ ಏನರ್ಥ?

ರೋಹಿಣಿ ಸಿಂಧೂರಿ ಅವರು ಶಾಸಕ ಸಾರಾ ಮಹೇಶ್ ಅವರ ಬಳಿ ಸಂಧಾನಕ್ಕೆ ಹೋಗಿದ್ದರು ಎಂಬ ಸುದ್ದಿ ವೈರಲ್‌ ಆಗಿದೆ. ಸಂಧಾನಕ್ಕೆ ಹೋಗುವುದು ಅಂದರೆ ಅರ್ಥ ಏನು? ಯಾವ ಐಎಎಸ್ ಅಧಿಕಾರಿ ಕೂಡ ಎಂಎಲ್ಎ ಅಥವಾ ರಾಜಕೀಯ ವ್ಯಕ್ತಿಗಳ ಜೊತೆ, ತಾವು ನಿರ್ವಹಿಸಿದ ಕರ್ತವ್ಯ ನಿಮಿತ್ತ ಸಂಧಾನಕ್ಕೆ ಹೋಗಿದ್ದು ನಾನು ಇದೇ ಮೊದಲು ಕೇಳಿದ್ದು. ಹಾಗಾದರೆ, ರೋಹಿಣಿ ಸಿಂಧೂರಿ ಐಎಎಸ್ ಸಂಧಾನಕ್ಕೆ ಹೋಗಿದ್ದು ಯಾಕೆ? ಆಕೆ ಏನನ್ನು ಮುಚ್ಚಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ? ತಮ್ಮ ಕರ್ತವ್ಯ ಲೋಪದ ಬಗ್ಗೆಯೋ, ತಮ್ಮ ಭ್ರಷ್ಟಾಚಾರ ಬಗ್ಗೆಯೋ ಏನು?

2. ಡಿ.ಕೆ. ರವಿ ಜತೆಗಿನ ಚಾಟ್ಸ್‌ನಲ್ಲಿ ಎಲ್ಲವೂ ಇದೆ

ಐಎಎಸ್‌ ಅಧಿಕಾರಿಯಾಗಿದ್ದ ಡಿ.ಕೆ. ರವಿ ಸಂಭಾವಿತ ವ್ಯಕ್ತಿ. ಸಿಬಿಐ ವರದಿಯಲ್ಲಿ ಅವರಿಬ್ಬರ ಚಾಟ್ಸ್ (ಮಾತುಕತೆ) ಬಗ್ಗೆ ಉಲ್ಲೇಖ ಇದ್ದು, ರವಿ ಅವರು ಎಂದಾದರೂ ಲಿಮಿಟ್‌ ಕ್ರಾಸ್ ಮಾಡಿದ ತಕ್ಷಣವೇ ಅವರನ್ನು ಬ್ಲಾಕ್ ಮಾಡಬಹುದಿತ್ತು. ಪರ್ಮನೆಂಟ್ ಆಗಿ ಬ್ಲಾಕ್ ಮಾಡಲಿಲ್ಲ ಈಕೆ. ಬ್ಲಾಕ್ ಮಾಡದೆ ಇದ್ದದ್ದು ಉತ್ತೇಜನ ಕೊಡುವ ಹಾಗೆ ಎಂಬಂತೆಯೇ ಕಾಣುತ್ತದೆ ಎಂಬುದು ಅನೇಕರ ಅಭಿಪ್ರಾಯ.‌

3. ಮಂಡ್ಯ ಸಿಇಒ ಆಗಿದ್ದಾಗ ಟಾಯ್ಲೆಟ್ಸ್‌ ಬಗ್ಗೆ ನಕಲಿ ಲೆಕ್ಕ ಕೊಟ್ಟರು!

ರೋಹಿಣಿ ಸಿಂಧೂರಿ ಅವರು ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿದ್ದಾಗ ಅವರು ಕಟ್ಟಿಸಿದ ಟಾಯ್ಲೆಟ್‌ಗಿಂತ ಹೆಚ್ಚು ತೋರಿಸಿ figures fudge ಮಾಡಿ ಕೇಂದ್ರ ಸರ್ಕಾರದ ಪ್ರಶಸ್ತಿ ತೆಗೆದುಕೊಂಡರು ಎಂಬ ಆರೋಪ ಕೇಳಿ ಬಂತು. ಅದರ ತನಿಖೆಯೇ ಆಗಲಿಲ್ಲ.

4. ಆಕ್ಸಿಜನ್‌ ಇಲ್ಲದೆ ೨೪ ಮಂದಿ ಸತ್ತ ಆಪಾದನೆಯಿಂದ ಹೇಗೋ ಪಾರು

ಚಾಮರಾಜನಗರ 24 ಜನರು ಆಮ್ಲಜನಕ ಇಲ್ಲದೇ ಸತ್ತಾಗ, ಆಪಾದನೆಗಳು ಇವರ ಮೇಲೇ ನೇರವಾಗಿ ಬಂತು. ಅದರಿಂದ ಹೇಗೋ ಪಾರಾದರು.

5. ಶಿಲ್ಪಾ ನಾಗ್‌ ಅವರ ಜತೆ ಜಗಳ ಯಾಕೆ?

ಮೈಸೂರಿನಲ್ಲಿ ಅಧಿಕಾರಿಯಾಗಿದ್ದ ಕನ್ನಡದ ಹುಡುಗಿ ಶಿಲ್ಪಾ ನಾಗ್ ಅವರ ಜೊತೆ ಜಗಳ, ರಂಪ ಯಾತಕ್ಕಾಗಿ? ಅಲ್ಲಿ ಯಾವುದೇ ಮೌಲ್ಯಾಧಾರಿತ ವಸ್ತು ವಿಷಯ ಇರಲಿಲ್ಲ. ಬರೀ ಕೋಳಿ ಜಗಳ. ಶಿಲ್ಪಾ ಅವರು ಹೆಚ್ಚು ಕೆಲಸ ಮಾಡಿದ್ದರು. ಅವರ ಬಗ್ಗೆ ಮಾಧ್ಯಮಗಳಲ್ಲಿ ಹೆಚ್ಚು ಪಾಸಿಟೀವ್‌ ಸುದ್ದಿಗಳು ಬಂದಿದ್ದರಿಂದ ಅದನ್ನು ಸಹಿಸಿಕೊಳ್ಳಲಾಗದೆ ಶಿಲ್ಪಾಗೆ ಹೆರೇಸ್‌ಮೆಂಟ್‌ ಮಾಡಿದರು ಎಂದು ಕೆಲವರು ಹೇಳಿದರು. ಕಡೆಗೆ ಮೈಸೂರಲ್ಲಿ ಗೌಡ ಸಮುದಾಯದ ಪತ್ರಕರ್ತರು ಅವರಿಗೆ ಜಾತಿ ಬೆಂಬಲ ನೀಡುತ್ತಿದ್ದಾರೆ ಎಂಬ ಮಟ್ಟಿಗೆ ಸ್ವತಃ ಇಲ್ಲದ ಜಾತೀಯತೆ ಮೈಸೂರಿನ ಜರ್ನಲಿಸ್ಟ್‌ಗಳಲ್ಲಿ ಬಿತ್ತಿದರು ಈಕೆ ಎಂದು ಅನೇಕರು ಹೇಳುತ್ತಾರೆ.

6. ಹರ್ಷ ಗುಪ್ತ ಅವರ ಜತೆಗೂ ಜಗಳ ಅಂದರೆ..

ಹರ್ಷ ಗುಪ್ತ ಅವರು ಅತ್ಯಂತ ಪ್ರಾಮಾಣಿಕ ಅಧಿಕಾರಿ. ಅವರ ಜೊತೆ ಜಗಳ ಮಾಡಿದ್ದಾರೆ. ಎಲ್ಲಾ ಐಎಎಸ್ ಅಧಿಕಾರಿಗಳಿಗೆ ಈ ವಿಷಯ ಗೊತ್ತಿದೆ.

7. ಮಣಿವಣ್ಣನ್‌ ಅಜಾತಶತ್ರು, ಅವರ ಜತೆಗೂ ಜಗಳ ಅಂದ್ರೆ..

ಮಣಿವಣ್ಣನ್ ಐಎಎಸ್ ಜೊತೆ ಲೇಬರ್/ ಕಾರ್ಮಿಕ ಇಲಾಖೆಯಲ್ಲಿ ಇದ್ದಾಗ ಜಗಳ ಮಾಡಿದ್ದು ಜಗಜನಿತ. ಮಣಿವಣ್ಣನ್ ಒಂದು ರೀತಿ ಅಜಾತಶತ್ರು. ಅಂಥದರಲ್ಲಿ…ಅವರ ಜೊತೆಗೂ ಜಗಳ ಮಾಡಿಕೊಂಡಿದ್ದಾರೆ.

8. ಡಿ.ಕೆ. ರವಿ ಮಾತ್ರವಲ್ಲ ಹರೀಶ್‌ ಆತ್ಮಹತ್ಯೆಗೂ ಲಿಂಕ್‌!

ಡಿ.ಕೆ ರವಿ ತೀರಿಕೊಂಡ ಕೆಲವು ತಿಂಗಳು ಮುಂಚೆ ಕನ್ನಡದ ಹುಡುಗ, ಐಎಎಸ್‌ ಅಧಿಕಾರಿ ಎನ್‌. ಹರೀಶ್ ಇವರ ಬ್ಯಾಚ್‌ಮೇಟ್‌. ಮದುವೆ ಆಗಿರಲಿಲ್ಲ ಆತ. ಈಕೆಗಾಗಿ ಕಾದು ಕಾದು ಆತ ಆತ್ಮಹತ್ಯೆ ಮಾಡಿಕೊಂಡದ್ದು ಎಂದು ಹಲವರು ಹೇಳಿದರೂ ನಾನು ಅದನ್ನು ನಂಬಲಿಲ್ಲ, ಈಗಲೂ ನಂಬಿಲ್ಲ.

9. ಮಹೇಶ್‌ ವಿರುದ್ಧದ ಒಂದು ಆರೋಪಕ್ಕೂ ಪ್ರೂಫ್‌ ನೀಡಿಲ್ಲ

ಕೆ.ಆರ್‌. ನಗರ ಶಾಸಕ ಸಾ.ರಾ ಮಹೇಶ್‌ ಅವರ ಮೇಲೆ ಅನೇಕ ಆಪಾದನೆಗಳನ್ನು ಮಾಡಿದ ಈಕೆ ಒಂದನ್ನೂ ಪ್ರೂವ್ ಮಾಡಲಿಲ್ಲ. ಅದಕ್ಕೇ ಸಂಧಾನಕ್ಕೆ ಹೋದರಾ?

10. ಪ್ರತಾಪ್‌ ಸಿಂಹ ಅವರ ಮೇಲೂ ನಿರಾಧಾರ ಆರೋಪ

ಮೈಸೂರು ಸಂಸದ ಪ್ರತಾಪ್ ಸಿಂಹ ಮೇಲೆ ಕೂಡ ಅನೇಕರ ಬಳಿ ಈಕೆ ಪ್ರೂವ್‌ ಮಾಡಲಾರದ ಆಪಾದನೆಗಳನ್ನು ಮಾಡಿದರು. ಅಂದರೆ, ಪ್ರತಾಪ್ ಸಿಂಹ ಅವರು ಖಾಸಗಿ ಕ್ಲಿನಿಕ್‌ಗಳಿಗೆ ಆಮ್ಲಜನಕ ಕೇಳುತ್ತಾ ತಮ್ಮ ಸ್ವಂತ ಲಾಭಕ್ಕೆ ನಿಂತಿದ್ದಾರೆ ಎಂಬ ನಿರಾಧಾರ ಆರೋಪ ಮಾಡಿದರು. ನಿಜ ಇದ್ದಿದ್ದೇ ಆದರೆ ಅದನ್ನು ಪ್ರೂವ್‌ ಯಾಕೆ ಮಾಡಲಿಲ್ಲ?

11. ಹಾಸನದಿಂದ ಎತ್ತಂಗಡಿ ಮಾಡಿದಾಗ ಅರ್ಜಿ ಬರೆದುಕೊಟ್ಟಿದ್ದು ನನ್ನ ಗಂಡ

ಹಾಸನದಲ್ಲಿ ತನ್ನನ್ನು ಒಂದು ವರ್ಷದ ಒಳಗೆ ಎತ್ತಂಗಡಿ ಮಾಡಿದ ಸರ್ಕಾರದ ವಿರುದ್ಧ CATಯಲ್ಲಿ (Central administrative tribunal) ದಾವೆ ಹೂಡಿದರು. ಆ ದಾವೆಗೆ ಅರ್ಜಿ ಬರೆದುಕೊಟ್ಟಿದ್ದೇ ನನ್ನ ಪತಿ ಮೌನೀಶ್‌ ಮುದ್ಗಿಲ್‌ ಅವರು. ನನ್ನೆದುರಿಗೆ ಬರೆದು ಬರೆದು ಆಕೆಗೆ, ಆಕೆಯ ತಂದೆಗೆ, ಲಾಯರ್‌ಗೆ ಕಳಿಸಿದ್ದರು. ಆದರೆ ಈಕೆ, ಮೈಸೂರು ಡಿಸಿ ಆಗಿ ಹೋದದ್ದು ಹೇಗೆ? ತನಗಿಂತ ಕೇವಲ 29 ದಿನ ಮುಂಚೆ ಮೈಸೂರಿಗೆ ಡಿಸಿ ಎಂದು ವರ್ಗಾವಣೆ ಆಗಿದ್ದ ಕನ್ನಡ ಹುಡುಗ ಶರತ್ ಅವರನ್ನು ಒಕ್ಕಲೆಬ್ಬಿಸಿದ್ದು ನ್ಯಾಯವೇ? ತನ್ನಂತೆ ಪರರು ಎಂಬ ಭಾವನೆ ಇಲ್ಲವೇಕೆ? 29 ದಿನದಲ್ಲಿ ಯಾವುದೇ ಕಳಂಕ, ಆರೋಪ ಇಲ್ಲದ ಶರತ್ ಅವರನ್ನು ರಿಪ್ಲೇಸ್‌ ಮಾಡಿದ್ದು ಈಕೆ ಯಾವ ಉನ್ನತ ಮಟ್ಟದ ಪ್ರಭಾವದಿಂದ?

11. ಕೊರೊನಾ ಟೈಮಲ್ಲಿ ಪಾರಂಪರಿಕ ಕಟ್ಟಡಕ್ಕೆ ಟೈಲ್ಸ್‌ ಹಾಕಿದ್ದು ಸರಿನಾ?

ಐಎಎಸ್‌ ಅಧಿಕಾರಿ ಡಾ. ರವಿಶಂಕರ್‌ ಈಕೆಯ ಮೇಲೆ ಪ್ರಾಥಮಿಕ ತನಿಖೆಯಲ್ಲಿ ತಪ್ಪು ಮಾಡಿರುವುದು ಸಾಬೀತಾಗಿದೆ. ಮೈಸೂರಿನ ಡಿಸಿ ಮನೆ, ಪಾರಂಪರಿಕ ಕಟ್ಟಡ ಅಂತಾ ಇದ್ದರೂ ಅಲ್ಲಿ ಟೈಲ್ಸ್ ಹಾಕಿದ್ದು, ಸ್ವಿಮ್ಮಿಂಗ್ ಪೂಲ್ ಮಾಡಿದ್ದು ಸರಿಯಾ? ಮನುಷ್ಯತ್ವ ಇರೋರು ಕೋವಿಡ್‌ ಸಮಯದಲ್ಲಿ ಜನ ಸಾಯುತ್ತಿರುವಾಗ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿಕೊಳ್ತಾರಾ? John was fiddling when Rome was burning ಅಂದ ಹಾಗೆ. Marie Antoinette ಎಂಬ ರಾಣಿ ಜನರು ಬ್ರೆಡ್‌ (ಆಹಾರ) ಇಲ್ಲದೆ ಸಾಯ್ತ್ತಿದ್ದಾರೆ ಅಂತ ಕೇಳಿಸಿಕೊಂಡಾಗ, ಬ್ರೆಡ್‌ ಇಲ್ಲದೆ ಇದ್ದರೆ ಏನು, ಜನರು ಕೇಕ್‌ ತಿನ್ನಲಿ ಅಂದಳಂತೆ. ಆ ರಾಣಿಯ ನೆನಪಾಯಿತು.

12. ಆಗದವರ ಮೇಲೆ ಸೋಷಿಯಲ್ ಮೀಡಿಯಾ ಟ್ರೋಲ್

ಹಿಂದೆ ನನಗೆ ಒಬ್ಬರು ಮೆಸೇಜ್ ಮಾಡಿ ತಾವು ರೋಹಿಣಿ ಸಿಂಧೂರಿ ಪರವಾಗಿ ಸೋಷಿಯಲ್‌ ಮೀಡಿಯಾ ಹ್ಯಾಂಡ್ಲ್‌ ಮಾಡುವ ಏಜೆನ್ಸಿ ಒಂದರಲ್ಲಿ ಕೆಲಸ ಮಾಡುತ್ತಿದ್ದುದನ್ನು ತಿಳಿಸಿದರು. ಅಲ್ಲಿ ಹೇಗೆ ಈಕೆಯ ಪರವಾಗಿ ಸುದ್ದಿ, ಫೋಟೊ, ವಿಡಿಯೊ ಕ್ರಿಯೇಟ್‌ ಮಾಡುತ್ತಾರೆ, ಹೇಗೆ ಈಕೆಯ ವಿರುದ್ಧ ಇರುವವರನ್ನು ಟ್ರೋಲ್ ಮಾಡುವ ಕಂಟೆಂಟ್‌ ಹಾಗೂ ಹ್ಯಾಂಡಲ್ ಗಳು ತಯಾರಾಗುತ್ತವೆ ಎಂಬುದು ಹೇಳಿದ್ದರು. ನಾನು ಅದನ್ನು ಫೇಸ್ಬುಕ್ ನಲ್ಲಿಯೂ ಹಾಕಿದ್ದೆ.

‌13. ಅಗ್ಗದ ಬ್ಯಾಗ್‌ ಹೆಚ್ಚು ಬೆಲೆಗೆ ಮಾರಾಟ: ತನಿಖೆಗೆ ಅನುಮತಿ ನಿರಾಕರಿಸಿದ್ದೇಕೆ ಸರಕಾರ?

ಈಕೆಯ ಮೇಲೆ ಅಗ್ಗದ ಬ್ಯಾಗ್‌ಗಳನ್ನು ಅತಿ ಹೆಚ್ಚು ಬೆಲೆಗೆ ಮಾರಾಟ ಮಾಡಿರುವ ದೂರು ಲೋಕಾಯುಕ್ತದಲ್ಲಿ ನೋಂದಣಿ ಆಗಿದ್ದು, ಅದರ ತನಿಖೆ ಕೈಗೆತ್ತಿಕೊಳ್ಳಲು ಲೋಕಾಯುಕ್ತ ಈಗಾಗಲೇ ಸರ್ಕಾರಕ್ಕೆ ಬರೆದಿದೆ. ಆದರೆ ಸರ್ಕಾರ ಮಟ್ಟದಲ್ಲಿ ಕಾರಣ ಕೊಡದೆ ಆಕೆಯನ್ನು ತನಿಖೆಗೆ ಒಳಪಡಿಸಲು ಅನುಮತಿ ನಿರಾಕರಣೆ ಮಾಡಲಾಗಿದೆ. ಅದರ ಪ್ರತಿ ನನ್ನ ಬಳಿ ಇದೆ. ಸಾಮಾನ್ಯವಾಗಿ ಅಧಿಕಾರಿಗಳಿಗೆ ಈ ರೀತಿಯ ಬೆಂಬಲ ಇರುತ್ತದೆಯೇ?

14. ಐಎಎಸ್‌ ಅಧಿಕಾರಿಗಳಿಗೆ ಅಸಭ್ಯ ಚಿತ್ರ ಕಳುಹಿಸುವ ರೋಹಿಣಿ ಸಿಂಧೂರಿ!

ಈಕೆ ಕೆಲವು ಐಎಎಸ್ ಅಧಿಕಾರಿಗಳಿಗೆ ಒಂದಲ್ಲ, ಎರಡಲ್ಲ ಅನೇಕರಿಗೆ ತನ್ನ ಅಷ್ಟೇನೂ ಸಭ್ಯವಲ್ಲದ ಚಿತ್ರಗಳನ್ನು ಕಳಿಸಿರುವ ಹಾಗೂ ಅವರನ್ನು ಉತ್ತೇಜಿಸುವ ಕಾರ್ಯ ಮಾಡಿರುವ ಆಪಾದನೆ ಇದೆ. ಆ ಚಿತ್ರಗಳು ನನಗೆ ಸಿಕ್ಕಿವೆ. ಇದು ಖಾಸಗಿ ವಿಷಯ ಆಗುವುದಿಲ್ಲ. All India service conduct rules ಪ್ರಕಾರ ಹಿರಿಯ ಅಧಿಕಾರಿಗಳು ಈ ರೀತಿಯ ಚಿತ್ರಗಳನ್ನು ಕಳುಹಿಸುವುದು, ಸಂಭಾಷಣೆ ಮಾಡುವುದು ಅಪರಾಧ. ಈ ಆಪಾದನೆಗಳನ್ನು ಸರ್ಕಾರ ತನಿಖೆ ಮಾಡುವುದೇ, ನೋಡಬೇಕಿದೆ. ಏಕೆಂದರೆ ಸತ್ಯಾಸತ್ಯತೆ ಹೊರ ಬರಬೇಕಿದೆ.

15. ಲಕ್ಕಿ ಅಲಿ ಕಾರ್ಯಕ್ರಮಕ್ಕೆ ರೌಡಿಗಳನ್ನು ಕಳುಹಿಸಿದರು

ಮೊನ್ನೆ ಇವರ ಭಾವ ಮಧುಸೂಧನ್ ರೆಡ್ಡಿ ಅವರು, ಲಕ್ಕಿ ಆಲಿ ಎಂಬ ಗಾಯನ ಆಯೋಜನೆ ಆಗಿದ್ದ ಜಾಗಕ್ಕೆ 20 – 30 ಜನ ಕರೆದುಕೊಂಡು ಹೋಗಿ ರೌಡಿಸಂ ಮಾಡಿರುವ ವಿಷಯ ಮಾಧ್ಯಮಗಳಲ್ಲಿ ಬಂತು. ಈಕೆಯು ತನ್ನ ಐಎಎಸ್ ಪ್ರಭಾವ ಬಳಸಿ ದುರುಪಯೋಗ ಮಾಡಿಕೊಂಡು ಇರುವುದಾಗಿ ಲಕ್ಕಿ ಆರೋಪ ಮಾಡಿದರು. ವ್ಯಾಜ್ಯದ ಜಮೀನಿಗೆ 20-30 ಜನ ಕರೆದುಕೊಂಡು ಹೋಗಿ ಕಾನೂನು ಕೈಗೆ ತೆಗೆದುಕೊಳ್ಳಬಹುದು? ಈ ರೀತಿಯ ಭಂಡ ಧೈರ್ಯ ಎಲ್ಲಿಂದ ಬರುತ್ತದೆ? ಐಎಎಸ್ ಅಧಿಕಾರದಿಂದ?

16. ಗಂಡ, ಮಾವನಿಗೆ ಭೂ ಸಂಬಂಧಿ ದಾಖಲೆ ಕೊಡುತ್ತಾರೆ..

ಇವರ ಗಂಡ ಹಾಗೂ ಇವರ ಮಾವನವರು (ಈಗ ತೀರಿ ಹೋಗಿದ್ದಾರಂತೆ) ರಿಯಲ್‌ ಎಸ್ಟೇಟ್‌ ಬ್ಯುಸಿನೆಸ್ ನಡೆಸುತ್ತಾರೆ. ಅನೇಕ ಬಾರಿ ಸರ್ವೇ ಹಾಗೂ ಭೂ ದಾಖಲೆ ಕಚೇರಿಯ ಮೂಲಕ ತನ್ನ ಕೌಟುಂಬಿಕ ವ್ಯವಹಾರಕ್ಕೆ ಅಗತ್ಯ ಇರುವ ಅನೇಕ ಭೂಸಂಬಂಧಿ ಮಾಹಿತಿ ಅಂದರೆ, ಒಂದು ಭೂಮಿಯ ಫೋಡಿ, ಇನ್ನೊಂದರ ಬಗ್ಗೆ ಅದು ವ್ಯಾಜ್ಯ ಇರುವ ಭೂಮಿಯೇ ಅಥವಾ ಖರೀದಿಸಲು ಯೋಗ್ಯವೇ ಎಂಬಂತಹ ಮಾಹಿತಿಗಳನ್ನು ತಮ್ಮ ಐಎಎಸ್ ಸ್ಥಾನ ಅಧಿಕಾರದಿಂದ ಪಡೆದು ಕೊಂಡಿರುವ ಮಾಹಿತಿ ದಾಖಲೆ ಸಮೇತ ಇದ್ದು, ಇದರ ಮೇಲೆ ಕ್ರಮ ಆಗುತ್ತದೆಯೇ? ನೋಡಬೇಕು.

17. ನನ್ನ ವರ್ಗಾವಣೆ ಆದಾಗ ಯಾರೂ ನೆರವಿಗೆ ಬರಲಿಲ್ಲ ಯಾಕೆ?

ಅನೇಕ ಬಾರಿ ಸರ್ಕಾರ ಅಧಿಕಾರಿಗಳನ್ನು ವರ್ಗಾವಣೆ ಮಾಡಿದಾಗ ಆ ಜಾಗದಲ್ಲಿ ಇದ್ದವರು ಕ್ಯಾಟ್/ಕೋರ್ಟ್ ಗೆ ಹೋಗುವುದು ಸಹಜ. ನಾನು 3 ವರ್ಷ ದೂರದ ಯಾದಗಿರಿಯಲ್ಲಿ ಕೆಲಸ ಮಾಡಿ,( senior most sp in the state, 2013ರಲ್ಲಿ ನಾನು) ಬೆಂಗಳೂರಿಗೆ ನನಗೆ ವರ್ಗವಾದಾಗ, ಆ ಜಾಗದಲ್ಲಿ ಇದ್ದ ಅಧಿಕಾರಿ ಪವಾರ್ ಅವರು ನನ್ನ ವರ್ಗಾವಣೆ ಪ್ರಶ್ನಿಸಿ ಕ್ಯಾಟ್ ಗೆ ಹೋದರು. ಆದರೆ, ರೋಹಿಣಿ ಸಿಂಧೂರಿ ಗೆ ಸಾಕ್ಷಾತ್ ಅಡ್ವೊಕೇಟ್ ಜನರಲ್ ಅವರೇ ಬಂದು ವಾದ ಮಾಡಿದರಲ್ಲ, ಮೈಸೂರು ಡಿಸಿ ವರ್ಗಾವಣೆ ವಿಷಯದಲ್ಲಿ, ಆ ಸೌಲಭ್ಯ ನನಗೇಕೆ ಸಿಗಲಿಲ್ಲ? ನನ್ನಂತಹ ಕನ್ನಡಿಗ ಅಧಿಕಾರಿಗಳು, ಹೇಗೆ ನಡೆಸಿ ಕೊಂಡರೂ ಸುಮ್ಮನೆ ಇರ್ತಾರೆ ಅಂತಲೇ? ಸ್ವತಃ ಅಡ್ವೊಕೇಟ್ ಜನರಲ್ ಹಾಜರಾಗಿ ವಾದ ಮಾಡಿದ್ದು ಈಕೆಗಲ್ಲದೆ ಮತ್ಯಾವ ಅಧಿಕಾರಿಗೂ ಈ ಸೌಲಭ್ಯ ಸಿಕ್ಕಿಲ್ಲ. ಯಾಕೆ ಈ ತಾರತಮ್ಯ ಧೋರಣೆ?

18. ಇವರಿಂದಾಗಿ ಜಿಲ್ಲಾಧಿಕಾರಿ ಸಂಸಾರವೇ ಬೇರ್ಪಟ್ಟಿದೆ!

ಈಕೆ ಪ್ರೊಬೇಷನರಿ ಅಂತ ಇದ್ದಾಗ, ಅಲ್ಲಿಯ ಡಿಸಿ ಹಾಗೂ ಅವರ ಪತ್ನಿ ನೆರೆಯ ಜಿಲ್ಲೆಯ ಜಿಲ್ಲಾಧಿಕಾರಿ ಇವರಿಬ್ಬರ ಸಂಸಾರದಲ್ಲಿ ಹುಳಿ ಬಿದ್ದು ಅವರು ಬೇರ್ಪಟ್ಟಿದ್ದಾರೆ ಹಾಗೂ ಇದು ಈಕೆಯ ದೆಸೆಯಿಂದ ಎಂಬ ಮಾತು ಅನೇಕರ ಬಾಯಲ್ಲಿ ಕೇಳಿದ್ದೇನೆ.

19. ಜಾಲಹಳ್ಳಿ ಮನೆಯ ದಾಖಲೆ ಕೊಟ್ಟೇ ಇಲ್ಲ!

ಜಾಲಹಳ್ಳಿಯಲ್ಲಿ ಈಕೆ (ಪತಿಯದ್ದು ಇದ್ದರೂ ಈಕೆಯದೂ ಆಗುತ್ತದೆ) ದೊಡ್ಡ ಮನೆ ಒಂದು ಕಟ್ಟುತ್ತಿದ್ದು, ಐಎಎಸ್ ಅಧಿಕಾರಿ ಸಲ್ಲಿಸಬೇಕಾದ immovable property returnsನಲ್ಲಿ ಈ ಮನೆಯ ಉಲ್ಲೇಖ ಇಲ್ಲ. ಬದಲಾಗಿ ಬೇರೆಲ್ಲಾ ಲಂಗು ಲೊಟ್ಟು ಆಸ್ತಿ ಬಗ್ಗೆ ವರದಿ ಕೊಟ್ಟಿದ್ದಾರೆ. ಆ ಮನೆಗೆ ಕೋಟಿಗಟ್ಟಲೆ ಇಟಲಿ ಫರ್ನಿಚರ್‌, 26 ಲಕ್ಷದ ಜರ್ಮನ್ ಗೃಹೋಪಯೋಗಿ ವಸ್ತುಗಳು (ಅದನ್ನು duty free ಮಾಡಿಸಿಕೊಳ್ಳುವ ಬಗ್ಗೆ ಚರ್ಚೆ ಇದೆ) ತರಿಸಿಕೊಂಡಿದ್ದಾರೆ. ಆರು ಲಕ್ಷ ಕೇವಲ ಬಾಗಿಲಿನ ಹಿಡಿಕೆಗಳಿಗೆ ಖರ್ಚು ಮಾಡಿರುವ ಬಗ್ಗೆ ಈಕೆ ಮಾಡಿರುವ ಚಾಟ್‌ಗಳ ಮಾಹಿತಿ ಸರ್ಕಾರಕ್ಕೆ ಸಿಕ್ಕಿದೆ. ಇದರ ಮೇಲೆ ಕೂಲಂಕಷ ತನಿಖೆ ಆಗುವುದೇ ನೋಡಬೇಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Aadhaar update: ಆಧಾರ್‌ ಕಾರ್ಡ್‌ ಉಚಿತ ಅಪ್ಡೇಟ್‌ಗೆ 4 ದಿನ ಮಾತ್ರವೇ ಅವಕಾಶ! ಹೀಗೆ ಮಾಡಿ ನವೀಕರಿಸಿ

Aadhaar update: ಈ ಡಿಸೆಂಬರ್ 14ರವರೆಗೆ ನೀವು ಆಧಾರ್ ಕಾರ್ಡ್‌ನಲ್ಲಿ ನಿಮ್ಮ ಹೆಸರು, ವಿಳಾಸ ಮತ್ತು ಹುಟ್ಟಿದ ದಿನಾಂಕವನ್ನು ಉಚಿತವಾಗಿ ನವೀಕರಿಸಬಹುದಾಗಿದೆ. ಇನ್ನೂ ಅಪ್ಡೇಟ್‌ ಮಾಡಿಲ್ಲವಾದರೆ ಕೂಡಲೇ ಮಾಡಲು ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಸೂಚಿಸಿದೆ. ಇದರ ನಂತರ, ನೀವು ಶುಲ್ಕ ಪಾವತಿಸಿ ಅಪ್ಡೇಟ್‌ ಮಾಡಿಕೊಳ್ಳಬೇಕು.

VISTARANEWS.COM


on

Aadhaar update
Koo

ಬೆಂಗಳೂರು: ನೀವೀಗ ನಿಮ್ಮ ಆಧಾರ್‌ ಕಾರ್ಡ್‌ನಲ್ಲಿ (Aadhaar Card) ತಮ್ಮ ವಿವರಗಳನ್ನು ಯಾವುದೇ ಶುಲ್ಕವಿಲ್ಲದೆ ನವೀಕರಿಸಬಹುದು (Aadhaar update for free). ಆದರೆ, ಈ ಸೌಲಭ್ಯ ಇನ್ನು ನಾಲ್ಕು ದಿನ ಮಾತ್ರವೇ ಅವಕಾಶ ಇದೆ. ಅಂದರೆ, ಡಿಸೆಂಬರ್‌ 14ರ ವರೆಗೆ ಉಚಿತ ಅಪ್ಡೇಟ್‌ಗೆ ಅವಕಾಶ ಕಲ್ಪಿಸಲಾಗಿದೆ.

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಆನ್‌ಲೈನ್ ಆಧಾರ್ ನವೀಕರಣಗಳಿಗಾಗಿ (online Aadhaar update) ಇಟ್ಟಿದ್ದ ರೂ. 50ರ ಸಾಮಾನ್ಯ ಶುಲ್ಕವನ್ನು ಡಿ.14ರವರೆಗೆ ಮನ್ನಾ ಮಾಡಿದೆ. ಹೆಸರು, ವಿಳಾಸ, ಜನ್ಮ ದಿನಾಂಕ, ಲಿಂಗ, ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಮುಂತಾದ ವಿವರಗಳನ್ನು ನವೀಕರಿಸಬಹುದು. ಇನ್ನೂ ಅಪ್ಡೇಟ್‌ ಮಾಡಿಲ್ಲವಾದರೆ ಕೂಡಲೇ ಮಾಡಲು ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಸೂಚಿಸಿದೆ. ಇದರ ನಂತರ, ನೀವು ಶುಲ್ಕ ಪಾವತಿಸಿ ಅಪ್ಡೇಟ್‌ ಮಾಡಿಕೊಳ್ಳಬೇಕು.

ಆದರೆ ಭಾವಚಿತ್ರ, ಐರಿಸ್ ಅಥವಾ ಇತರ ಬಯೋಮೆಟ್ರಿಕ್ (Biometric details) ವಿವರಗಳನ್ನು ನವೀಕರಿಸಲು ಬಯಸಿದರೆ, ಆಧಾರ್ ನೋಂದಣಿ ಕೇಂದ್ರಕ್ಕೆ ಭೇಟಿ ನೀಡಬೇಕು ಮತ್ತು ಅಗತ್ಯ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಏಕೆಂದರೆ ಬಯೋಮೆಟ್ರಿಕ್ ಅಪ್‌ಡೇಟ್‌ಗಳಿಗೆ ಫಿಂಗರ್‌ಪ್ರಿಂಟ್‌ಗಳು, ಐರಿಸ್ ಮತ್ತು ಇತರ ಬಯೋಮೆಟ್ರಿಕ್ ಡೇಟಾ ಸ್ಕ್ಯಾನಿಂಗ್ ಅಗತ್ಯವಿದೆ. ಇದನ್ನು ದಾಖಲಾತಿ ಕೇಂದ್ರಗಳಲ್ಲಿ ಲಭ್ಯವಿರುವ ಬಯೋಮೆಟ್ರಿಕ್ ಸ್ಕ್ಯಾನಿಂಗ್ ಯಂತ್ರಗಳೊಂದಿಗೆ ಮಾತ್ರ ಮಾಡಬಹುದು. ಜತೆಗೆ ವಂಚನೆ ತಡೆಯಲು ಕೂಡ ಬಯೋಮೆಟ್ರಿಕ್ ಪರಿಶೀಲನೆ ಅಗತ್ಯವಿದೆ.

ಆಧಾರ್ ಏಕೆ ನವೀಕರಿಸಬೇಕು?

ಆಧಾರ್‌ನ ಆಡಳಿತ ಮಂಡಳಿ UIDAI, ಪ್ರಜೆಗಳು ತಮ್ಮ ಆಧಾರ್ ವಿವರಗಳನ್ನು ಪ್ರತಿ 10 ವರ್ಷಗಳಿಗೊಮ್ಮೆ ನವೀಕರಿಸುವುದನ್ನು ಕಡ್ಡಾಯಗೊಳಿಸಿದೆ. ಡೇಟಾಬೇಸ್‌ನಲ್ಲಿನ ಡೇಟಾ ನಿಖರವಾಗಿದೆ ಮತ್ತು ನವೀಕೃತವಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕಿದೆ.

ಮದುವೆ, ವಾಸಸ್ಥಾನ ಬದಲಾವಣೆ ಇತ್ಯಾದಿ ಜೀವನ ಘಟನೆಗಳಿಂದ ವ್ಯಕ್ತಿ ಹೆಸರು ಮತ್ತು ವಿಳಾಸದಂತಹ ಮೂಲಭೂತ ಜನಸಂಖ್ಯಾ ವಿವರಗಳನ್ನು ಬದಲಾಯಿಸಬೇಕಾಗಬಹುದು. ವಿಳಾಸ ಮತ್ತು ಮೊಬೈಲ್ ಸಂಖ್ಯೆ ಹೊಸ ಸ್ಥಳಗಳಿಗೆ ವಲಸೆ ಹೋದಾಗ ಬದಲಾಗಬಹುದು.

ಇದರ ಜೊತೆಗೆ ಮಕ್ಕಳ ಆಧಾರ್ ವಿವರಗಳನ್ನು ನವೀಕರಿಸಲು ಸರ್ಕಾರ ಈಗ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ. ಈ ಮಾರ್ಗಸೂಚಿಗಳ ಪ್ರಕಾರ, ಮಗುವಿಗೆ 15 ವರ್ಷ ವಯಸ್ಸಾದಾಗ ನವೀಕರಣಕ್ಕಾಗಿ ಎಲ್ಲ ಬಯೋಮೆಟ್ರಿಕ್‌ಗಳನ್ನು ಒದಗಿಸಬೇಕು. ಇದು ಮಗುವಿನ ಆಧಾರ್ ಡೇಟಾ ನಿಖರವಾಗಿದೆ ಮತ್ತು ನವೀಕೃತವಾಗಿದೆ ಎಂದು ಖಚಿತಪಡಿಸಿಕೊಳ್ಳುತ್ತದೆ.

ಯಾಕೆ ಮುಖ್ಯ?

  • ವಂಚನೆ ಮತ್ತು ಆಧಾರ್ ದುರುಪಯೋಗವನ್ನು ತಡೆಗಟ್ಟಲು.
  • ಆಧಾರ್ ದೃಢೀಕರಣದ ಯಶಸ್ಸಿನ ಪ್ರಮಾಣವನ್ನು ಹೆಚ್ಚಿಸಲು.
  • ಸರ್ಕಾರವು ಒದಗಿಸುವ ಆಧಾರ್-ಸಂಬಂಧಿತ ಸೇವೆಗಳನ್ನು ಸುಧಾರಿಸಲು.

ಆನ್‌ಲೈನ್‌ನಲ್ಲಿ ಆಧಾರ್ ಅಪ್‌ಡೇಟ್‌ ಮಾಡುವುದು ಹೇಗೆ?

UIDAI ವೆಬ್‌ಸೈಟ್‌ಗೆ ಹೋಗಿ, ಅಲ್ಲಿ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ಸೃಷ್ಟಿಸಿಕೊಳ್ಳಿ. ಲಾಗ್ ಇನ್ ಆಗಿ ಅಪ್‌ಡೇಟ್‌ ವಿನಂತಿ ಸಲ್ಲಿಸಿದರೆ, UIDAI ವಿನಂತಿಯನ್ನು ಪರಿಶೀಲಿಸುತ್ತದೆ ಮತ್ತು 15 ದಿನಗಳಲ್ಲಿ ಆಧಾರ್ ವಿವರಗಳನ್ನು ನವೀಕರಿಸುತ್ತದೆ.

ಇದನ್ನೂ ಓದಿ: Health Card: ಸರ್ಕಾರದ ಹೊಸ ಹೆಲ್ತ್‌ ಕಾರ್ಡ್‌; ದೇಶದ ಎಲ್ಲೆಡೆ ಸಿಗಲಿದೆ Treatment! ಏನಿದರ ವಿಶೇಷತೆ?

UIDAI ವೆಬ್‌ಸೈಟ್‌ಗೆ ಇಲ್ಲಿ ಕ್ಲಿಕ್‌ ಮಾಡಿ ಹೋಗಿ.

  • ಅಲ್ಲಿ My Aadhar ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ಡ್ರಾಪ್-ಡೌನ್ ಮೆನುವಿನಿಂದ “Update Your Aadhaar” ಆಯ್ಕೆ ಮಾಡಿ.
  • `Update Aadhaar Details (Online)” ಪುಟದಲ್ಲಿ, “Proceed to Update Aadhaar” ಕ್ಲಿಕ್ ಮಾಡಿ.
  • ನಿಮ್ಮ ಆಧಾರ್ ಸಂಖ್ಯೆ ಮತ್ತು ಕ್ಯಾಪ್ಚಾ ಪರಿಶೀಲನೆ ಕೋಡ್ ಅನ್ನು ನಮೂದಿಸಿ. ನಂತರ “Send OTP” ಕ್ಲಿಕ್ ಮಾಡಿ.
  • ನೀವು ಸ್ವೀಕರಿಸಿದ OTP ಅನ್ನು ನಮೂದಿಸಿ ಮತ್ತು “Login” ಕ್ಲಿಕ್ ಮಾಡಿ.
  • ಮುಂದಿನ ಪುಟದಲ್ಲಿ, ನೀವು ನವೀಕರಿಸಲು ಬಯಸುವ ವಿವರಗಳನ್ನು ಆಯ್ಕೆ ಮಾಡಿ ಮತ್ತು ಹೊಸ ವಿವರಗಳನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯ ಬದಲಾವಣೆಗಳನ್ನು ಮಾಡಿದ ನಂತರ, “Submit” ಕ್ಲಿಕ್ ಮಾಡಿ.
  • ಅಗತ್ಯವಿರುವ ಸ್ಕ್ಯಾನ್ ಮಾಡಿದ ಡಾಕ್ಯುಮೆಂಟ್‌ಗಳನ್ನು ಅಪ್‌ಲೋಡ್ ಮಾಡಿ ಮತ್ತು “Submit Update Request” ಕ್ಲಿಕ್ ಮಾಡಿ.
  • ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ SMS ಮೂಲಕ ನವೀಕರಣ ವಿನಂತಿ ಸಂಖ್ಯೆ (URN) ಸ್ವೀಕರಿಸುತ್ತೀರಿ. ಟ್ರ್ಯಾಕಿಂಗ್‌ಗಾಗಿ ಈ URN ಅನ್ನು ಇರಿಸಿಕೊಳ್ಳಿ.
  • ನಿಮ್ಮ ನವೀಕರಣ ವಿನಂತಿಯ ಸ್ಥಿತಿಯನ್ನು ಪರಿಶೀಲಿಸಲು, myaadhaar.uidai.gov.in/ಗೆ ಭೇಟಿ ನೀಡಿ ಮತ್ತು “Check Enrolment & Update Status” ಕ್ಲಿಕ್ ಮಾಡಿ.
  • ನಿಮ್ಮ ನವೀಕರಣ ವಿನಂತಿಯ ಸ್ಥಿತಿಯನ್ನು ವೀಕ್ಷಿಸಲು ನಿಮ್ಮ URN ಸಂಖ್ಯೆ ಮತ್ತು ಕ್ಯಾಪ್ಚಾವನ್ನು ನಮೂದಿಸಿ.
Continue Reading

ಕರ್ನಾಟಕ

Yuva Nidhi Scheme: ಜನವರಿಯಲ್ಲೇ ಯುವನಿಧಿ ಜಾರಿ; ಅರ್ಹತೆ ಯಾರಿಗಿದೆ? ಈ ದಾಖಲೆ ನಿಮ್ಮಲಿರಲಿ!

Yuva Nidhi Scheme: ರಾಜ್ಯದಲ್ಲಿ ಈಗಾಗಲೇ ಪ್ರಮುಖವಾಗಿ 4 ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ, ಅನ್ನ ಭಾಗ್ಯ, ಶಕ್ತಿ, ಗೃಹಲಕ್ಷ್ಮಿ ಯೋಜನೆಗಳು ಜನರನ್ನು ತಲುಪಿವೆ. ಈಗ ಐದನೇ ಗ್ಯಾರಂಟಿಯಾಗಿರುವ ಯುವನಿಧಿ ಜನವರಿಯಲ್ಲಿ ಜಾರಿಗೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಈಚೆಗೆ ಹೇಳಿದ್ದರು. ಬರುವ ಜನವರಿಯಲ್ಲಿ ಯುವ ನಿಧಿ ಜಾರಿಯಾಗಲಿದ್ದು, ಫಲಾನುಭವಿಗಳು ಅಗತ್ಯ ದಾಖಲೆಗಳನ್ನು ಈಗಲೇ ಸಿದ್ಧಪಡಿಸಿಟ್ಟುಕೊಳ್ಳಬೇಕು ಎಂದು ಹೇಳಲಾಗಿದೆ.

VISTARANEWS.COM


on

Yuva Nidhi Scheme
Koo

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ (Congress Government) ಸಂಪೂರ್ಣ ಬಹುಮತಗಳೊಂದಿಗೆ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದೆ. ಇದಕ್ಕೆ ಮುಖ್ಯ ಕಾರಣ ಗ್ಯಾರಂಟಿ (Congress Guarantee Scheme) ಯೋಜನೆಗಳಾಗಿವೆ. ಘೋಷಣೆ ಮಾಡಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಈಗಾಗಲೇ ನಾಲ್ಕನ್ನು ಅನುಷ್ಠಾನಕ್ಕೆ ತರಲಾಗಿದೆ. ಐದನೇ ಯೋಜನೆಯಾದ “ಯುವ ನಿಧಿ”ಗೆ (Yuva Nidhi Scheme) ಈಗ ಮುಹೂರ್ತ ನಿಗದಿಯಾಗಿದೆ. ಮುಂದಿನ 2024ರ ಜನವರಿಯಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಆದರೆ, ದಿನಾಂಕ ನಿಗದಿ ಮಾತ್ರ ಬಾಕಿ ಇದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಸಹ ಈಚೆಗೆ ಹೇಳಿದ್ದರು. ಆದರೆ, ಇದಕ್ಕೆ ಯಾರಿಗೆ ಅರ್ಹತೆ ಇದೆ? ಯಾವ ಅರ್ಹತೆ ಉಳ್ಳವರಿಗೆ ಎಷ್ಟು ಹಣ ಸಿಗುತ್ತದೆ? ಯಾವೆಲ್ಲ ದಾಖಲೆಗಳು ಬೇಕು ಎಂಬ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ.

ನಮ್ಮ ಸರ್ಕಾರವು ನುಡಿದಂತೆ ನಡೆಯುತ್ತಿದೆ. ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಿದ 143 ಕಾರ್ಯಕ್ರಮಗಳಲ್ಲಿ 83 ಯೋಜನೆಗಳು ಜಾರಿಯಾಗಿವೆ. ಪ್ರಮುಖವಾಗಿ 4 ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ, ಅನ್ನ ಭಾಗ್ಯ, ಶಕ್ತಿ, ಗೃಹಲಕ್ಷ್ಮಿ ಯೋಜನೆಗಳು ಜನರನ್ನು ತಲುಪಿವೆ. ಈಗ ಐದನೇ ಗ್ಯಾರಂಟಿಯಾಗಿರುವ ಯುವನಿಧಿ ಜನವರಿಯಲ್ಲಿ ಜಾರಿಗೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಈಚೆಗೆ ಹೇಳಿದ್ದರು.

ಏನಿದು ಯುವನಿಧಿ ಯೋಜನೆ?

ಕರ್ನಾಟಕದ ನಿರುದ್ಯೋಗಿ ಯುವಕರ ಕಲ್ಯಾಣಕ್ಕಾಗಿ ಯುವ ನಿಧಿ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಈ ಯೋಜನೆಯಲ್ಲಿ ನಿರುದ್ಯೋಗಿ ಯುವಕರಿಗೆ ಮಾಸಿಕ ನಿರುದ್ಯೋಗ ಭತ್ಯೆಯನ್ನು ನೀಡಲಾಗುತ್ತದೆ. ಅಂದರೆ, ಇದು ಅವರಿಗೆ ಈ ಮೂಲಕ ಉದ್ಯೋಗವನ್ನು ಹುಡುಕಲು ನೆರವಾಗುವ ಉದ್ದೇಶವನ್ನು ಯುವ ನಿಧಿ ಯೋಜನೆ ಹೊಂದಿದೆ. ಈ ಸಮಯದಲ್ಲಿ ಸಾಕಷ್ಟು ಖರ್ಚುಗಳು ಇರುತ್ತವೆ. ಈ ನೆರವು ನೀಡುವುದರಿಂದ ನಿರುದ್ಯೋಗಿಗಳ ಕೆಲವೊಂದು ಖರ್ಚುಗಳು ನೀಗುತ್ತವೆ ಎಂಬ ಉದ್ದೇಶದಿಂದ ಜಾರಿಗೆ ತರುತ್ತಿರುವುದಾಗಿ ಕಾಂಗ್ರೆಸ್‌ ಹೇಳಿಕೊಂಡಿದೆ.

ಯುವ ನಿಧಿಯಿಂದ ಯಾರಿಗೆ ಎಷ್ಟು ಹಣ ಸಿಗುತ್ತದೆ?

  • ನಿರುದ್ಯೋಗಿ ಪದವೀಧರ ಯುವಜನತೆಗೆ ಪ್ರತಿ ತಿಂಗಳು 3,000 ರೂಪಾಯಿ ಮಾಸಿಕ ನಿರುದ್ಯೋಗ ಭತ್ಯೆ
  • ನಿರುದ್ಯೋಗಿ ಡಿಪ್ಲೊಮಾ ಹೊಂದಿರುವ ಯುವಕರಿಗೆ ಪ್ರತಿ ತಿಂಗಳು 1,500 ರೂಪಾಯಿ ಮಾಸಿಕ ನಿರುದ್ಯೋಗ ಭತ್ಯೆ

ಯಾರಿಗೆ ಸಿಗಲ್ಲ ಯುವ ನಿಧಿ?

  • 2022-2023ನೇ ಸಾಲಿಗಿಂತ ಮುಂಚಿತವಾಗಿ ತೇರ್ಗಡೆಯಾಗಿ ಉದ್ಯೋಗ ಹುಡುಕುತ್ತಿರುವವರಿಗೆ
  • ಪದವಿ ಅಥವಾ ಡಿಪ್ಲೊಮಾ ಉತ್ತೀರ್ಣರಾದ ನಂತರ ಉನ್ನತ ಶಿಕ್ಷಣಕ್ಕೆ ಸೇರ್ಪಡೆಯಾಗುವವರಿಗೆ
  • ಅಪ್ರೆಂಟಿಸ್ ವೇತನದ ಫಲಾನುಭವಿಗಳಿಗೆ
  • ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗದಲ್ಲಿರುವವರಿಗೆ
  • ಸ್ವಯಂ ಉದ್ಯೋಗಿಗಳಾಗಿರುವವರಿಗೆ
  • ಸರ್ಕಾರದ ಇತರೆ ಆರ್ಥಿಕ ನೆರವು ಯೋಜನೆಯ ಫಲಾನುಭವಿ.

ಯುವ ನಿಧಿ ಯೋಜನೆ ಪಡೆಯಲು ಅರ್ಹತೆ ಏನು?

  • ಅರ್ಜಿದಾರರು ಕರ್ನಾಟಕದ ಕಾಯಂ ನಿವಾಸಿಯಾಗಿರಬೇಕು.
  • ಪದವೀಧರರಾಗಿರಬೇಕು ಅಥವಾ ಡಿಪ್ಲೊಮಾ ಪದವಿಯನ್ನು ಹೊಂದಿರಬೇಕು
  • 2022-2023ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರಬೇಕು
  • ಪದವಿ ಅಥವಾ ಡಿಪ್ಲೊಮಾಗೆ ತೇರ್ಗಡೆಯಾದ ದಿನಾಂಕದ ನಂತರ ಕನಿಷ್ಠ 180 ದಿನಗಳವರೆಗೆ ನಿರುದ್ಯೋಗಿಯಾಗಿರಬೇಕು.

ಯುವ ನಿಧಿಗೆ ಬೇಕಾದ ದಾಖಲೆಗಳ ಪಟ್ಟಿ

  • ಕರ್ನಾಟಕದ ನಿವಾಸಿ ಎಂಬ ಪುರಾವೆ
  • ಆಧಾರ್ ಕಾರ್ಡ್
  • 10ನೇ ತರಗತಿ ಅಂಕಪಟ್ಟಿ
  • ದ್ವಿತೀಯ ಪಿಯುಸಿ ಅಂಕಪಟ್ಟಿ
  • ಪದವಿ ಅಂಕಪಟ್ಟಿ ಮತ್ತು ಪ್ರಮಾಣಪತ್ರ
  • ಡಿಪ್ಲೊಮಾ ಪ್ರಮಾಣಪತ್ರ
  • ಜಾತಿ ಪ್ರಮಾಣ ಪತ್ರ (ಅನ್ವಯವಾದಲ್ಲಿ)
  • ಆದಾಯ ಪ್ರಮಾಣಪತ್ರ
  • ಮೊಬೈಲ್ ನಂಬರ್
  • ಬ್ಯಾಂಕ್ ಖಾತೆ ವಿವರಗಳು
  • ಸೆಲ್ಫ್ ಡಿಕ್ಲೆರೇಷನ್ ಪ್ರತಿ

ಇದನ್ನೂ ಓದಿ: Police Constable: ನಾಳೆ ಕಾನ್ಸ್‌ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ; ಈ ದಾಖಲೆ ಮರೆಯಬೇಡಿ!

ಎಲ್ಲಿಯವರೆಗೆ ಸಿಗಲಿದೆ ಯುವ ನಿಧಿ ಭತ್ಯೆ?

ಯುವ ನಿಧಿ ಯೋಜನೆಯಡಿ ಒಮ್ಮೆ ಫಲಾನುಭವಿಗಳಾಗಿ ಆಯ್ಕೆಯಾಗುವ ಯುವ ಜನತೆಗೆ 2 ವರ್ಷಗಳ ಅವಧಿವರೆಗೆ ಭತ್ಯೆಯನ್ನು ಪಡೆದುಕೊಳ್ಳಬಹುದಾಗಿದೆ. ಹೀಗಾಗಿ ಪದವೀಧರರಿಗೆ ಮಾಸಿಕ 3 ಸಾವಿರ ರೂ. ಹಾಗೂ ಡಿಪ್ಲೊಮಾ ಪದವೀಧರರಿಗೆ ಮಾಸಿಕ 1500 ರೂಪಾಯಿ ಕೊಡಲಾಗುತ್ತದೆ. ಆದರೆ, ಎರಡು ವರ್ಷಗಳ ಅವಧಿಯೊಳಗೆ ಅವರಿಗೆ ಕೆಲಸ ಸಿಕ್ಕರೆ, ತತ್‌ ಕ್ಷಣವೇ ಈ ಭತ್ಯೆಯನ್ನು ನಿಲ್ಲಿಸಲಾಗುತ್ತದೆ. ಇನ್ನು ಫಲಾನುಭವಿಗೆ 2 ವರ್ಷಗಳ ನಂತರ ಯೋಜನೆಯ ಹಣವನ್ನು ನೀಡಲಾಗುವುದಿಲ್ಲ.

Continue Reading

ಉಡುಪಿ

Karnataka Weather : ಮೈಸೂರು ಸೇರಿ 11 ಜಿಲ್ಲೆಗಳಿಗೆ ಮಳೆ ಅಲರ್ಟ್‌!

Rain News : ದಕ್ಷಿಣ ಒಳನಾಡು ಹಾಗೂ ಮಲೆನಾಡು, ಕರಾವಳಿ ಭಾಗದಲ್ಲಿ ವರುಣ (Karnataka weather Forecast) ಸಕ್ರಿಯನಾಗಿದ್ದರೆ, ಉತ್ತರ ಒಳನಾಡಿನಲ್ಲಿ ಒಣಹವೆ (Dry weather) ಮುಂದುವರಿಯಲಿದೆ.

VISTARANEWS.COM


on

By

Rain News
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರಾವಳಿ ಮತ್ತು ದಕ್ಷಿಣ ಒಳನಾಡಿನ (Karnataka weather Forecast) ಕೆಲವು ಕಡೆಗಳಲ್ಲಿ ಮಳೆಯಾಗಲಿದ್ದು, (Rain News) ಉತ್ತರ ಒಳನಾಡಿನಲ್ಲಿ ಒಣಹವೆ (Dry weather) ಇರಲಿದೆ. ಬಹುತೇಕ ಜಿಲ್ಲೆಗಳಲ್ಲಿ ಉರಿ ಉರಿ ವಾತಾವರಣ ಇರಲಿದೆ.

ಮೈಸೂರಲ್ಲಿ ಭಾರಿ ಮಳೆ

ದಕ್ಷಿಣ ಒಳನಾಡಿನ ಮೈಸೂರಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಹಾವೇರಿ, ಧಾರವಾಡ ಮತ್ತು ಬೆಳಗಾವಿಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಸಾಧಾರಣದೊಂದಿಗೆ ಹಗುರ ಮಳೆ ಸಾಧ್ಯತೆ

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆ ಸುರಿಯಲಿದೆ.

ಮೋಡ ಕವಿದ ವಾತಾವರಣ

ಬೆಂಗಳೂರಲ್ಲಿ ಕೆಲವೊಮ್ಮೆ ಮೋಡ ಕವಿದ ವಾತಾವರಣವಿರಲಿದೆ. ಮಧ್ಯಾಹ್ನ ಬಿಸಿಲು ಇರಲಿದೆ. ಸಂಜೆ ಅಥವಾ ರಾತ್ರಿಯಂದು ಆಯ್ದ ಕಡೆಗಳಲ್ಲಿ ಮಳೆ ಇರಲಿದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: KGF 3 Actor Yash | ಕೆಜಿಎಫ್​ನ ರಾಕಿ ಭಾಯ್​, ಪಾಂಡ್ಯ ಬ್ರದರ್ಸ್​ ಭೇಟಿ; ಕೆಜಿಎಫ್​ 3 ಟ್ರೆಂಡಿಂಗ್​

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ -20 ಡಿ.ಸೆ
ಮಂಗಳೂರು: 34 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 19 ಡಿ.ಸೆ
ಗದಗ: 31 ಡಿ.ಸೆ – 17 ಡಿ.ಸೆ
ಹೊನ್ನಾವರ: 35 ಡಿ.ಸೆ- 22 ಡಿ.ಸೆ
ಕಲಬುರಗಿ: 31 ಡಿ.ಸೆ – 19 ಡಿ.ಸೆ
ಬೆಳಗಾವಿ: 31 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಕರ್ನಾಟಕ

ವಿಸ್ತಾರ ಸಂಪಾದಕೀಯ: ಸರ್ಕಾರಿ ಶಾಲೆಗಳ ಬಲವರ್ಧನೆಗೆ ತಜ್ಞರ ಸೂತ್ರಗಳು ಜಾರಿಯಾಗಲಿ

VISTARANEWS.COM


on

Vistara Editorial, Let the strengthening government schools
Koo

ಸರ್ಕಾರಿ ಶಾಲೆಗಳು ಹಾಗೂ ಆ ಶಾಲೆಗಳಿಗೆ ತೆರಳುವ ಮಕ್ಕಳ ಹಿತದೃಷ್ಟಿಯಿಂದ ಆಗಲೇಬೇಕಾದ ಹಲವಾರು ಕಾರ್ಯಗಳ ಬಗ್ಗೆ ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯು ಶಿಕ್ಷಣ ಸಚಿವರ ಗಮನಕ್ಕೆ ತಂದಿದೆ. ಏಕೋಪಾಧ್ಯಾಯ/ ಶೂನ್ಯ ಶಿಕ್ಷಕರಿರುವ ಶಾಲೆಗಳಿಗೆ ಕೂಡಲೇ ಕಾಯಂ ಶಿಕ್ಷಕರ ನೇಮಕ ಮಾಡಬೇಕು. ಕಾಯಂ ಶಿಕ್ಷಕರನ್ನು ಅತ್ಯಗತ್ಯವಿರುವ ಗ್ರಾಮೀಣ ಪ್ರದೇಶಗಳಿಗೆ ನಿಯೋಜನೆ ಮಾಡುವುದು ಸೇರಿದಂತೆ ಇನ್ನಿತರ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪತ್ರ ಬರೆದು ಒತ್ತಾಯ ಮಾಡಿದೆ. ಈ ಸಂಬಂಧ ಹತ್ತು ಸೂತ್ರವನ್ನೂ ನೀಡಿದೆ. ಮಕ್ಕಳ ಶೈಕ್ಷಣಿಕ (Education News) ಪ್ರಗತಿಯ ಹಿತದೃಷ್ಟಿಯಿಂದ ಈ ಕಾರ್ಯಗಳನ್ನು ಮಾಡುವಂತೆ ಒತ್ತಾಯ ಮಾಡಿದೆ. ಇದೇ ಸಂದರ್ಭದಲ್ಲಿ, 8ನೇ ತರಗತಿಯಲ್ಲಿ ಓದುವ ಮಕ್ಕಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಉಚಿತ ಸೈಕಲ್‌ (Free bicycle) ಕೊಡಲು ಬಜೆಟ್‌ನಲ್ಲಿ ಕ್ರಮ ಕೈಗೊಳ್ಳುವುದಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಭರವಸೆ ನೀಡಿದ್ದಾರೆ. ಭರವಸೆಗಳನ್ನು ಆಗುಮಾಡುವುದರ ಜೊತೆಗೆ, ತಜ್ಞರ ಮಾತುಗಳ ಬಗೆಗೂ ಸಚಿವರು ಕಿವಿಗೊಡುವುದು ಅಗತ್ಯವಾಗಿದೆ(Vistara Editorial).

ಶಾಲಾ ಶಿಕ್ಷಣದಲ್ಲಿ ಮಕ್ಕಳು ಕಲಿಕೆಯ ಕೇಂದ್ರ ಬಿಂದು. ಮಕ್ಕಳಿಗಿರುವ ಶಿಕ್ಷಣದ ಮೂಲಭೂತ ಹಕ್ಕಿನ ಭಾಗವಾಗಿ ಒದಗಿಸಬೇಕಾದ ಉತ್ತೇಜಕಗಳು, ಕಲಿಯಲು ಅಗತ್ಯವಾದ ಮೂಲ ಸೌಕರ್ಯ ಹಾಗೂ ಕಲಿಸಲು ಬೇಕಾದ ಅರ್ಹ ಶಿಕ್ಷಕರನ್ನು ಒದಗಿಸುವುದು ಸರ್ಕಾರದ ಮೊದಲ ಆದ್ಯತೆ. ರಾಜ್ಯದಲ್ಲಿ ಹಲವು ವರ್ಷಗಳಿಂದ ಶಾಲೆ ಪ್ರಾರಂಭವಾಗಿ ಹಲವು ತಿಂಗಳು ಕಳೆದರೂ ಮಕ್ಕಳಿಗೆ ಪಠ್ಯಪುಸ್ತಕ ಮತ್ತು ನೋಟ್ ಪುಸ್ತಕ, ಸಮವಸ್ತ್ರ ಮತ್ತು ಶೂ, ಸಾಕ್ಸ್ ಸಕಾಲಕ್ಕೆ ದೊರೆತಿಲ್ಲ. ಜತೆಗೆ, ಏಳನೇ ತರಗತಿಯಿಂದ ಎಂಟು ಅಥವಾ ಎಂಟರಿಂದ ಒಂಬತ್ತನೇ ತರಗತಿಗೆ ಹೋಗುತ್ತಿರುವ ಮಕ್ಕಳಿಗೆ ಕಳೆದ ಮೂರು ವರ್ಷದಿಂದ ಉಚಿತ ಬೈಸಿಕಲ್ ಸಿಕ್ಕಿಲ್ಲ. ಎಲ್ಲ ಮಕ್ಕಳಿಗೆ ಪರಿಷ್ಕೃತ ಪಠ್ಯಪುಸ್ತಕ ಮತ್ತು ನೋಟ್ ಪುಸ್ತಕ, 2 ಜತೆ ಸಮವಸ್ತ್ರ ಮತ್ತು 2 ಜತೆ ಶೂ ಹಾಗೂ ಸಾಕ್ಸ್ ವಿತರಣೆ ಮಾಡಬೇಕು. ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿ. ವಿಳಂಬವಾದಲ್ಲಿ ಶಾಲೆ ಪ್ರಾರಂಭದಲ್ಲಿಯೇ ಅತಿಥಿ ಶಿಕ್ಷಕರ ನೇಮಕ. ಏಕೋಪಾಧ್ಯಾಯ/ ಶೂನ್ಯ ಶಿಕ್ಷಕರಿರುವ ಶಾಲೆಗಳಿಗೆ ಕೂಡಲೇ ಕಾಯಂ ಶಿಕ್ಷಕರ ನೇಮಕ ಮುಂತಾದ ಕ್ರಮಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳಲು ತಜ್ಞರ ವೇದಿಕೆ ಆಗ್ರಹಿಸಿದೆ.

ಇವರ ಬೇಡಿಕೆಗಳಲ್ಲಿ ಸರ್ಕಾರಿ ಶಾಲೆಗಳನ್ನು ಸಾಮೂಹಿಕವಾಗಿ ಮುಚ್ಚುವ/ ವಿಲೀನಗೊಳಿಸುವ ಪ್ರಕ್ರಿಯೆಗಳು ಪೂರ್ಣವಾಗಿ ನಿಲ್ಲಬೇಕು ಎಂಬುದು ಇದೆ. ಇದು ಮುಖ್ಯವಾದುದು. ಇಂಗ್ಲಿಷ್‌ ಶಾಲೆಗಳು ಹಳ್ಳಿಹಳ್ಳಿಗಳಲ್ಲಿ ಹೆಚ್ಚುತ್ತಿರುವುದು ಮತ್ತು ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯಗಳು ಕಡಿಮೆಯಾಗುತ್ತಿರುವುದು ಬಡ ಮಕ್ಕಳ ಶಿಕ್ಷಣಕ್ಕೆ ಚಪ್ಪಡಿಕಲ್ಲು ಎಳೆದಂತೆ. ಹೀಗಾಗಬಾರದು. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಭಾಗವಾಗಿ ಮಧ್ಯಾಹ್ನದ ಬಿಸಿಯೂಟದ ವೆಚ್ಚಕ್ಕೆ ಈಗಿರುವ ಪ್ರತಿ ಮಗುವಿನ ಯುನಿಟ್ ವೆಚ್ಚವನ್ನು ಹೆಚ್ಚಿಸಬೇಕು. ಈ ಶೈಕ್ಷಣಿಕ ವರ್ಷದ ಕೊನೆಯಲ್ಲಿ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಸ್ಥಿತಿಗತಿ ಅರಿಯಲು ಸಿಆರ್‌ಪಿ, ಶಿಕ್ಷಣ ಸಂಯೋಜಕರು, ಬಿಆರ್‌ಸಿ, ಬಿಆರ್‌ಪಿ, ಬಿಇಒ, ಡಿಡಿಪಿಐ ಮತ್ತು ಡಯಟ್ ಸಿಬ್ಬಂದಿ ಶಾಲೆಗಳಿಗೆ ಭೇಟಿ ನೀಡಿ ವಿವರವಾದ ವರದಿ ಸಲ್ಲಿಸಲು ಕ್ರಮ ವಹಿಸಬೇಕು. ಶಿಕ್ಷಣ ಹಕ್ಕು ಕಾಯಿದೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಎಲ್ಲ ಮೂಲಭೂತ ಸೌಕರ್ಯ ಒದಗಿಸಲು ಕಾಲಮಿತಿ ಯೋಜನೆ ರೂಪಿಸಬೇಕು. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳನ್ನು ಪ್ರಜಾಸತ್ತಾತ್ಮಕವಾಗಿ ರಚಿಸಿ ಬಲವರ್ಧನೆಗೊಳಿಸಬೇಕು. ಕನಿಷ್ಠ 12ನೆಯ ತರಗತಿಯವರೆಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ವಿಸ್ತರಿಸಲು ಸಂವಿಧಾನ ಹಾಗೂ ಶಿಕ್ಷಣ ಹಕ್ಕು ಕಾಯಿದೆಗೆ ಅಗತ್ಯ ತಿದ್ದುಪಡಿ ತರಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದೂ ವೇದಿಕೆ ಆಗ್ರಹಿಸಿದೆ. ಇವೆಲ್ಲವೂ ಆಗಬೇಕಾದ ವಿಚಾರಗಳೇ. ಸರ್ಕಾರ ಇವುಗಳ ಬಗ್ಗೆ ಶೀಘ್ರ ಗಮನ ಹರಿಸಬೇಕು.

ಇದೇ ಹೊತ್ತಿಗೆ ರಾಜ್ಯ ಸರ್ಕಾರ, ಕೇಂದ್ರವು ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೈಬಿಟ್ಟು ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಿ ಜಾರಿ ಮಾಡಲು ಮುಂದಾಗಿದೆ. ಶಿಕ್ಷಣ ನೀತಿ ಎಂಬುದು ಒಂದೊಂದು ರಾಜ್ಯಕ್ಕೊಂದೊಂದು ಎಂಬಂತಾಗುವುದರಲ್ಲಿ ಅರ್ಥವಿಲ್ಲ. ಕೇಂದ್ರ ತಂದಿರುವ ಶಿಕ್ಷಣ ನೀತಿಯು ವೃತ್ತಿಪರ ಶಿಕ್ಷಣ, ಮಕ್ಕಳ ಜ್ಞಾನವರ್ಧನೆ ಇತ್ಯಾದಿಗಳ ಕಡೆಗೆ ಹೆಚ್ಚಿನ ಗಮನ ಕೊಟ್ಟು ವೈಜ್ಞಾನಿಕವಾಗಿ ರೂಪುಗೊಂಡಿದೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷ ರಾಜಕೀಯ ಕಾರಣಗಳಿಗಾಗಿ ಇದನ್ನು ಬದಲಾಯಿಸಲು ಹೊರಟಂತಿದೆ. ರಾಜ್ಯ ನೀತಿ ಒಂದು, ರಾಷ್ಟ್ರದ ನೀತಿಯೇ ಒಂದು ಎಂಬಂತಾಗುವುದರಿಂದ ಮಕ್ಕಳಿಗೆ ಭವಿಷ್ಯದಲ್ಲಿ ಸಮಸ್ಯೆಯೇ ಆಗುತ್ತದೆ ಹೊರತಾಗಿ ಯಾವುದೇ ಪ್ರಯೋಜನವಿಲ್ಲ. ಈ ಬಗ್ಗೆ ಕೂಡ ಸರಿಯಾದ ತಜ್ಞರ ಅಭಿಪ್ರಾಯವನ್ನು ಪಡೆದು ಸರ್ಕಾರ ಒಂದು ಸಮರ್ಪಕ ನಿರ್ಧಾರವನ್ನು ತೆಗೆದುಕೊಳ್ಳಬೇಕಿದೆ.

ಈ ಸಂಪಾದಕೀಯವನ್ನೂ ಓದಿ: ವಿಸ್ತಾರ ಸಂಪಾದಕೀಯ: ಸಂಸದೆಯ ಕೃತ್ಯಕ್ಕೆ ತಕ್ಕ ಶಿಕ್ಷೆ, ಇತರರಿಗೂ ಪಾಠವಾಗಲಿ

Continue Reading
Advertisement
Aadhaar update
ಕರ್ನಾಟಕ6 mins ago

Aadhaar update: ಆಧಾರ್‌ ಕಾರ್ಡ್‌ ಉಚಿತ ಅಪ್ಡೇಟ್‌ಗೆ 4 ದಿನ ಮಾತ್ರವೇ ಅವಕಾಶ! ಹೀಗೆ ಮಾಡಿ ನವೀಕರಿಸಿ

CM Revanth Reddy launches two guarantee Schemes in Telangana
ದೇಶ14 mins ago

ತೆಲಂಗಾಣದಲ್ಲಿ ಎರಡು ಗ್ಯಾರಂಟಿಗಳಿಗೆ ಚಾಲನೆ ನೀಡಿದ ಸಿಎಂ ರೇವಂತ್ ರೆಡ್ಡಿ

sextortion
ಅಂಕಣ29 mins ago

ಸೈಬರ್‌ ಸೇಫ್ಟಿ ಅಂಕಣ: ‘ಡೀಪ್ ಫೇಕ್’ ತಂತ್ರಜ್ಞಾನದಿಂದ ಸೆಕ್ಸ್‌ಟಾರ್ಷನ್

Yuva Nidhi Scheme
ಕರ್ನಾಟಕ29 mins ago

Yuva Nidhi Scheme: ಜನವರಿಯಲ್ಲೇ ಯುವನಿಧಿ ಜಾರಿ; ಅರ್ಹತೆ ಯಾರಿಗಿದೆ? ಈ ದಾಖಲೆ ನಿಮ್ಮಲಿರಲಿ!

kaivara tatayya
ಅಂಕಣ44 mins ago

ತಾತಯ್ಯ ತತ್ವಾಮೃತಂ: ಭಕ್ತಿತತ್ವದಿಂದ ಮೋಕ್ಷ ಸಾಧನೆ

Madhu Bangarappa Beluru Gopalakrishna
ಅಂಕಣ59 mins ago

ಮೊಗಸಾಲೆ ಅಂಕಣ: ಒಣಗಿದ ಜಿಲ್ಲೆಯಲ್ಲಿ ಜೋಗದ ಬದಲು ಕಚ್ಚಾಟದ ರೋಗ

Rain News
ಉಡುಪಿ59 mins ago

Karnataka Weather : ಮೈಸೂರು ಸೇರಿ 11 ಜಿಲ್ಲೆಗಳಿಗೆ ಮಳೆ ಅಲರ್ಟ್‌!

Vistara Editorial, Let the strengthening government schools
ಕರ್ನಾಟಕ1 hour ago

ವಿಸ್ತಾರ ಸಂಪಾದಕೀಯ: ಸರ್ಕಾರಿ ಶಾಲೆಗಳ ಬಲವರ್ಧನೆಗೆ ತಜ್ಞರ ಸೂತ್ರಗಳು ಜಾರಿಯಾಗಲಿ

Dina Bhavishya
ಪ್ರಮುಖ ಸುದ್ದಿ2 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

Sphoorti Salu
ಸುವಚನ2 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Dina Bhavishya
ಪ್ರಮುಖ ಸುದ್ದಿ2 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ1 day ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema1 day ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema1 day ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ2 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ3 days ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ3 days ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

ಟ್ರೆಂಡಿಂಗ್‌