Sindhuri Vs Roopa: ನಾನು ಇನ್ನೂ ಬದುಕಿದ್ದೀನಿ, ನನ್ನ ಮಗನ ವಿಷ್ಯಕ್ಕೆ ಬರಬೇಡಿ; ಇದೇ ಫಸ್ಟ್‌, ಲಾಸ್ಟ್‌ ಎಂದ ಡಿಕೆ ರವಿ ತಾಯಿ ಗೌರಮ್ಮ Vistara News

ಕರ್ನಾಟಕ

Sindhuri Vs Roopa: ನಾನು ಇನ್ನೂ ಬದುಕಿದ್ದೀನಿ, ನನ್ನ ಮಗನ ವಿಷ್ಯಕ್ಕೆ ಬರಬೇಡಿ; ಇದೇ ಫಸ್ಟ್‌, ಲಾಸ್ಟ್‌ ಎಂದ ಡಿಕೆ ರವಿ ತಾಯಿ ಗೌರಮ್ಮ

Sindhuri Vs Roopa: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಗಳದಲ್ಲಿ ದಿವಂಗತ ಡಿ.ಕೆ.ರವಿ ಅವರ ತಾಯಿ ಗೌರಮ್ಮ ಸಂಕಟ ಹೇಳ ತೀರದಾಗಿದೆ. ನಿಮ್ಮಿಬ್ಬರ ಗಲಾಟೆಯಲ್ಲಿ ನನ್ನ ಮಗನನ್ನು ಎಳೆದು ತರಬೇಡಿ ಎಂದು ಮನವಿ ಮಾಡಿದ್ದಾರೆ.

VISTARANEWS.COM


on

I'm still alive, don't talk to my son matters DK Ravi's mother Gowramma worrning
ಡಿಕೆ ರವಿ ತಾಯಿ ಗೌರಮ್ಮ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗರ: ʻʻರೂಪಾ ನೀನು ನನ್ನ ಮಗನ ಬಗ್ಗೆ ಮಾತಾಡಿದ್ದು ತಪ್ಪು. ನಿಮ್ಮಿಬ್ಬರ ಜಗಳದಲ್ಲಿ ರವಿ ವಿಷಯ ಯಾಕೆ?ʼʼ ಎಂದು ದಿ. ಡಿ.ಕೆ ರವಿ ಅವರ ತಾಯಿ ಗೌರಮ್ಮ ಪ್ರಶ್ನೆ ಮಾಡಿದ್ದಾರೆ. ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ (Sindhuri Vs Roopa) ಟಾಕ್‌ ವಾರ್‌ನಲ್ಲಿ ಮೃತ ಐಎಎಸ್‌ ಅಧಿಕಾರಿ ಡಿ.ಕೆ ರವಿ ವಿಚಾರ ಪ್ರಸ್ತಾಪವಾಗಿದ್ದಕ್ಕೆ ಗೌರಮ್ಮ ಪ್ರತಿಕ್ರಿಯಿಸಿದ್ದಾರೆ.

ʻʻರವಿ ನಮ್ಮನ್ನು ಅಗಲಿ ಎಂಟು ವರ್ಷಗಳಾಗಿವೆ. ನನ್ನ ಮಗ ನನಗಾಗಿ ಏನೂ ಮಾಡಲಿಲ್ಲ, ಈಗ ಮಾತನಾಡುವವರು ಏನೂ ಮಾಡಿಲ್ಲ. ನನ್ನ ಮಗನ ಅಗಲಿಕೆಯನ್ನು ನಾವು ಮರೆಯುತ್ತಿದ್ದರೆ ಇವರೆಲ್ಲ ಕೆದಕಿ ಮತ್ತೆ ನೆನಪು ಮಾಡಿ ನೋವು ಕೊಡುತ್ತಿದ್ದಾರೆ. ನಾನು ಇನ್ನೂ ಬದುಕಿದ್ದೀನಿ, ನನ್ನ ಮಗನ ವಿಷಯಕ್ಕೆ ಬರಬೇಡಿʼʼ ಎಂದು ಇಬ್ಬರು ಮಹಿಳಾ ಅಧಿಕಾರಿಗಳಿಗೆ ಮನವಿ ರವಿ ತಾಯಿ ಗೌರಮ್ಮ ಮನವಿ ಮಾಡಿದರು.

ʻʻರೂಪವ್ವ ನನ್ನ ಮಗನ ಬಗ್ಗೆ ಸಿಂಧೂರಿಗೆ ಹೋಲಿಕೆ ಮಾಡಿ ಮಾತಾಡಬೇಡ್ವಾ. ನನ್ನ ಮಗ ಹಾಗೂ ರೋಹಿಣಿ ಸಿಂಧೂರಿ ಇಬ್ಬರು ಸ್ನೇಹಿತರಾಗಿದ್ದವರು, ಒಟ್ಟಿಗೆ ಓದಿದವರು. ಸಿಂಧೂರಿ ನಮ್ಮ ಮನೆಗೂ ಎರಡು ಬಾರಿ ಬಂದಿದ್ದಾರೆ. ಅವಳ ಬಗ್ಗೆ ನೀನು ಏನು ಮಾತಾಡಬೇಡʼ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ರವಿ ಹೋದ್ಮೇಲೆ ನನ್ನ ಕಷ್ಟ ಸುಖ ಕೇಳಿಲ್ಲ ನೀನು ಸಿಂಧೂರವ್ವಾ

ʻʻಸಿಂಧೂರವ್ವ ನೀನೂ ಅಷ್ಟೇ ರವಿ ಹೋದ ಮೇಲೆ ಅವರ ಅಮ್ಮನ ಕಷ್ಟ ಸುಖ ವಿಚಾರಿಸಬೇಕು ಅಂತ ಒಂದು ದಿನವೂ ನೀನು ಇಲ್ಲಿಗೆ ಬಂದಿಲ್ಲ. ನನ್ನ ಮಗನಿಗೆ ಯಾರೆಲ್ಲ ಅನ್ಯಾಯ ಮಾಡಿದ್ದರೋ ಅವರೆಲ್ಲರೂ ಸಂತೋಷದಿಂದಲೇ ಇರಲಿ. ನೀವುಗಳು ಏನೇ ಅಂದರೂ ನನ್ನ ಮಗ ಕೆಟ್ಟವನು ಆಗಲ್ಲ. ನಿಮ್ಮಗಳ ಜಗಳಕ್ಕೆ ಎಳೆದು ತಂದು ಸಂಕಟ ಕೊಡಬೇಡಿʼʼ ಎಂದು ಗೌರಮ್ಮ ಕಣ್ಣೀರು ಹಾಕಿದರು.

ಮಠದಲ್ಲೇ ನನ್ನ ಜೀವನ

ʻʻಮಗನನ್ನು ಕಳೆದುಕೊಂಡ ನಾನು ಮಠದಲ್ಲಿ ಜೀವನ ಮಾಡುತ್ತಿದ್ದೀನಿ. ನಿಮ್ಮ ನಿಮ್ಮ ವ್ಯವಹಾರ ನೀವೂ ಮಾಡಿ, ನನ್ನ ಮಗನ ಹೆಸರು ಹಾಳು ಮಾಡಬೇಡಿ, ಇದೇ ಲಾಸ್ಟ್‌ ಫಸ್ಟ್‌ ನನ್ನ ಮಗನ ಬಗ್ಗೆ ಮಾತಾಡಿ ಬೀದಿಗೆ ತರಬೇಡಿʼʼ ಎಂದು ಖಡಕ್‌ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ.

ಇದನ್ನೂ ಓದಿ: D Roopa IPS : ಹಿರಿಯ ಅಧಿಕಾರಿಗಳನ್ನೂ ಬಿಡದೆ ಬೆನ್ನಟ್ಟುವ ಡಿ. ರೂಪಾ; ಯಾರಿವರು, ಇವರ ಹಿನ್ನೆಲೆ ಏನು?

ಸೊಸೆ ಕುಸುಮಗೂ ನಮಗೂ ಸಂಬಂಧನೇ ಇಲ್ಲ

ʻʻನನ್ನ ಮಗ ಇದ್ದಾಗಲೂ ಇಲ್ಲದೇ ಇದ್ದಾಲೂ ಕುಸುಮ ನನ್ನ ಸೊಸೆನೇ, ಅವಳು ಬದುಕುವ ದಾರಿ ನೋಡಿಕೊಂಡಿದ್ದಾಳೆ. ಸದ್ಯಕ್ಕೆ ನಮಗೂ ಅವರಿಗೂ ಯಾವುದೇ ಸಂಪರ್ಕ ಇಲ್ಲ. ಕುಸುಮ ಅವರ ಅಪ್ಪನ ಮನೆಯಲ್ಲಿ, ನಾನು ಮಠದಲ್ಲಿ ಜೀವನ ಸಾಗಿಸುತ್ತಿದ್ದೀನಿ. ಅವಳ ಬಗ್ಗೆ ಈಗ ಮಾತು ಬೇಡ. ನನ್ನ ಮಗನನ್ನು ಬೀದಿಗೆಳೆದಿದ್ದು ಡಿ. ರೂಪ ಹಾಗೂ ರೋಹಿಣಿ ಸಿಂಧೂರಿ, ಇವರಿಬ್ಬರ ಜಗಳ ಏನೇ ಇದ್ದರೂ ಮುಂದುವರಿಸಿಕೊಳ್ಳಿ ನನ್ನ ಮಗನ ತಂಟೆಗೆ ಬರುವುದು ಬೇಡʼʼ ಎಂದರು.

ಬೆಂಗಳೂರಿನ ಮತ್ತಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Road Accident : ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

Road accident : ವಿಜಯಪುರದ ತಾಳಿಕೋಟೆ ಬಳಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.

VISTARANEWS.COM


on

vijaypura accident
ತಾಳಿಕೋಟೆ ಅಪಘಾತದಲ್ಲಿಸಂಪೂರ್ಣ ನಜ್ಜಗುಜ್ಜಾಗಿರುವ ಬೈಕ್‌
Koo

ವಿಜಯಪುರ: ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ವೇಗವಾಗಿ ಧಾವಿಸಿ ಬಂದ ಬೈಕ್ ಡಿಕ್ಕಿಯಾಗಿ (Bike Rams into tractor) ಸವಾರರಿಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ (Bike riders dead) ದಾರುಣ ಘಟನೆ (Road Accident) ವಿಜಯಪುರ ಜಿಲ್ಲೆಯ (Vijayapura news) ತಾಳಿಕೋಟಿ ತಾಲೂಕಿನ ದೇವರಹುಲಗಬಾಳ ಗ್ರಾಮದ ಬಳಿ ಬುಧವಾರ ಸಂಜೆ ನಡೆದಿದೆ.

ತಾಳಿಕೋಟಿ ಮುದ್ದೇಬಿಹಾಳ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಮೃತರನ್ನು ತಾಳಿಕೋಟಿ ತಾಲೂಕಿನ ತುಂಬಗಿ ಗ್ರಾಮದವರಾದ ಹುಸೇನಸಾಬ ಇನಾಂದಾರ್ (30), ಮೈಬುಸಾಬ ನದಾಫ್ (33) ಎಂದು ಗುರುತಿಸಲಾಗಿದೆ.

ಕಬ್ಬು ತುಂಬಿಕೊಂಡು ಬಂದು ನಿಂತಿದ್ದ ಟ್ರ್ಯಾಕ್ಟರ್‌ಗೆ ಅತಿ ವೇಗದಲ್ಲಿ ಬಂದ ಬೈಕ್‌ ಡಿಕ್ಕಿಯಾಗಿದೆ. ಬೈಕ್‌ ಸಂಪೂರ್ಣ ನಜ್ಜುಗುಜ್ಜಾಗಿದೆ. ತಾಳಿಕೋಟೆಯಿಂದ ಮುದ್ದೇಬಿಹಾಳ ಕಡೆಗೆ ಹೊರಟಿದ್ದ ಬೈಕ್ ಸವಾರರಿಗೆ ಹೇಗೆ ನಿಯಂತ್ರಣ ತಪ್ಪಿತೋ, ಬೈಕ್‌ ಯಾಕೆ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆಯಿತೋ ಸ್ಪಷ್ಟತೆ ಇಲ್ಲ. ತಾಳಿಕೋಟಿ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Road Accident : ಬರ್ತ್‌ಡೇ ದಿನವೇ ಡೆತ್‌ಡೇ; ಸ್ನೇಹಿತರಿಬ್ಬರ ಪ್ರಾಣ ತೆಗೆದ ಬಸ್‌!

KSRTC ಬಸ್‌ ಮತ್ತು ಬೈಕ್‌ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು

ಗದಗ: ಕರ್ನಾಟಕ ರಾಜ್ಯ ಸರ್ಕಾರಿ ಬಸ್‌ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಗೋಗೇರಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

ದಾವಲಸಾಬ್ ಹುಸೇನಸಾಬ್ ಮ್ಯಾಗೇರಿ(28), ಹಸನಸಾಬ್ ಹುಸೇನಸಾಬ್ ಖಾನಗೌಡರ್ (25) ಮೃತಪಟ್ಟ ದುರ್ದೈವಿಗಳು. ಇವರು ಕೊಪ್ಪಳ ಜಿ.ಕುಷ್ಟಗಿ ತಾಲೂಕಿನ ಕಲಾಲಬಂಡಿ ಗ್ರಾಮದವರಾಗಿದ್ದು, ರೋಣ ತಾಲೂಕಿನ ಸವಡಿ ಗ್ರಾಮದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದರು.

ಸಹೋದರನ ನಿಶ್ಚಿತಾರ್ಥ ಮಗಿಸಿಕೊಂಡು ವಾಪಸ್ ಬರುವ ವೇಳೆ ದುರ್ಘಟನೆ ಸಂಭವಿಸಿದ್ದು, ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ವಿಜಯನಗರ

Vijayanagara News: ಮೂಲ ಸೌಕರ್ಯಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ: ಶಾಸಕ ನೇಮಿರಾಜ ನಾಯ್ಕ

Vijayanagara News: ಕೊಟ್ಟೂರು ಪಟ್ಟಣದ ತಾಲೂಕು ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಮಂಗಳವಾರ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಿತು.

VISTARANEWS.COM


on

Task force committee meeting at Kottur
ಕೊಟ್ಟೂರು ಪಟ್ಟಣದ ತಾಲೂಕು ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಮಂಗಳವಾರ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಿತು.
Koo

ಕೊಟ್ಟೂರು: ಇಡೀ ಕ್ಷೇತ್ರದಲ್ಲಿ ಜನರ ಮೂಲಭೂತ ಸೌಕರ್ಯಗಳಿಗೆ (Infrastructure) ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಶಾಸಕ ನೇಮಿರಾಜ ನಾಯ್ಕ, ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ತಾಲೂಕು ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಮಂಗಳವಾರ ನಡೆದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕೊಟ್ಟೂರು ತಾಲೂಕಿನ 14 ಗ್ರಾಮ ಪಂಚಾಯಿತಿಗಳಲ್ಲಿ ಜನರ ಸಮಸ್ಯೆಗಳಿಗೆ ಪೂರಕವಾಗಿ ಅಧಿಕಾರಿಗಳು ಸ್ಪಂದಿಸಬೇಕು ಎಂದು ತಿಳಿಸಿದರು.

ಕೊಟ್ಟೂರು ಪಟ್ಟಣದಲ್ಲಿ ಜನತೆಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದ್ದು, ಇದನ್ನು ಕೂಡಲೇ ಸರಿಪಡಿಸಬೇಕು ಎಂದು ಮುಖ್ಯಾಧಿಕಾರಿಗಳಿಗೆ ಸೂಚಿಸಿದ ಶಾಸಕರು, ಶುದ್ಧ ಕುಡಿಯುವ ನೀರಿನ ಘಟಕಗಳೇನಾದರೂ ದುರಸ್ತಿಯಿದ್ದರೆ ಕೂಡಲೇ ಅವುಗಳನ್ನು ಸರಿಪಡಿಸಲು ತಿಳಿಸಿದರು.

ಇದನ್ನೂ ಓದಿ: ಕೇಂದ್ರದ ಪಿಎಂ ಗರೀಬ್ ಕಲ್ಯಾಣ್ ಅನ್ನ ಸ್ಕೀಂ 5 ವರ್ಷದವರೆಗೆ ವಿಸ್ತರಣೆ!

ಬರದ ಹಿನ್ನಲೆಯಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಪಿಡಿಒಗಳು ಲಭ್ಯವಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಕೊಟ್ಟೂರು ಪಟ್ಟಣದ ಸಾರ್ವಜನಿಕರು ತಮ್ಮ ತಮ್ಮ ನಿವೇಶನಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಇಲ್ಲವಾದರೆ ಸೈಟ್‌ಗಳ ಮಾಲೀಕರಿಗೆ ದಂಡ ಹಾಕಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಡಿ.1ರಿಂದ ಸಿಮ್‌ ಕಾರ್ಡ್‌ ಹೊಸ ರೂಲ್ಸ್; ನಿಯಮ ಮೀರಿದ್ರೆ 10 ಲಕ್ಷ ರೂ. ದಂಡ!

ಈ ಸಂದರ್ಭದಲ್ಲಿ ತಹಶೀಲ್ದಾರ್‌ ಅಮರೇಶ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ್, ಕಂದಾಯ ನಿರೀಕ್ಷಕ ಹಾಲಸ್ವಾಮಿ, ಜೆಸ್ಕಾಂ ಶಾಖಾಧಿಕಾರಿ ಚೇತನ್, ತಾಲೂಕು ಆರೋಗ್ಯಾಧಿಕಾರಿ ಪ್ರದೀಪ್, ಮುಖ್ಯಾಧಿಕಾರಿ ನಸುರುಲ್ಲಾ ಸೇರಿದಂತೆ ಪಿಡಿಒಗಳು ಹಾಗೂ ಇತರರು ಹಾಜರಿದ್ದರು.

Continue Reading

ಕರ್ನಾಟಕ

Pooja Gandhi: ಮಳೆ ಹುಡುಗಿಗೆ ಮಂತ್ರ ಮಾಂಗಲ್ಯ; ಹೊಸ ಬಾಳಿಗೆ ಕಾಲಿಟ್ಟ ಪೂಜಾ ಗಾಂಧಿ

Pooja Gandhi: ಬೆಂಗಳೂರಿನ ಉದ್ಯಮಿ ವಿಜಯ್ ಘೋರ್ಪಡೆ ಅವರೊಂದಿಗೆ ನಟಿ ಪೂಜಾ ಗಾಂಧಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಚಿತ್ರ ರಂಗದ ಗಣ್ಯರು, ಅಭಿಮಾನಿಗಳು ನವದಂಪತಿಗೆ ಶುಭ ಹಾರೈಸಿದ್ದಾರೆ.

VISTARANEWS.COM


on

Pooja Gandhi and Vijay Ghorpade
Koo

ಬೆಂಗಳೂರು: ನಟಿ ಪೂಜಾ ಗಾಂಧಿ (Pooja Gandhi) ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉದ್ಯಮಿ ಹಾಗೂ ಬಹುಕಾಲದ ಗೆಳೆಯ ವಿಜಯ್ ಘೋರ್ಪಡೆ ಅವರನ್ನು ಮಳೆ ಹುಡುಗಿ ಮದುವೆಯಾಗಿದ್ದು, ಮಂತ್ರ ಮಾಂಗಲ್ಯ ಪದ್ಧತಿಯಲ್ಲಿ ಬಂಧು-ಮಿತ್ರರು, ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಸರಳವಾಗಿ ಬುಧವಾರ ವಿವಾಹವಾಗಿದ್ದಾರೆ.

ವಿವಾಹ ಸಮಾರಂಭದಲ್ಲಿ ನಿರ್ದೇಶಕ ಯೋಗರಾಜ್ ಭಟ್, ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ. ಸುರೇಶ್, ಸಾಹಿತಿ ಜಯಂತ್ ಕಾಯ್ಕಿಣಿ, ನಟಿ ಸುಧಾರಣಿ, ಶುಭಾ ಪೂಂಜಾ, ನಿರ್ದೇಶಕಿ ಸುಮನಾ ಕಿತ್ತೂರು ಮತ್ತಿತರರು ಭಾಗವಹಿಸಿ, ನವ ದಂಪತಿಗೆ ಶುಭ ಕೋರಿದರು.

ಮೂಲತಃ ಉತ್ತರ ಪ್ರದೇಶದವರಾದ ಪೂಜಾ ಗಾಂಧಿ ಕನ್ನಡ ಚಿತ್ರಗಳಲ್ಲಿ ಅಭಿನಯಿಸುತ್ತ ಬೆಂಗಳೂರಿನಲ್ಲೇ ಕೆಲವು ಸಮಯದಿಂದ ನೆಲೆಸಿದ್ದಾರೆ. ತಮ್ಮ ಕನ್ನಡ ಪ್ರೀತಿಯಿಂದಲೇ ಕನ್ನಡಿಗರ ಮನಸ್ಸು ಗೆದ್ದಿದ್ದಾರೆ. ಕನ್ನಡ ಮಾತನಾಡಲು ಅಷ್ಟೇ ಅಲ್ಲ ಓದಲು ಮತ್ತು ಬರೆಯಲು ಅವರು ಕಲಿತಿದ್ದು, ಮೆಚ್ಚುಗೆ ವ್ಯಕ್ತವಾಗಿದೆ.

ವಿಜಯ್ ಅವರೇ ಪೂಜಾ ಗಾಂಧಿಯವರಿಗೆ ಕನ್ನಡ ಕಲಿಸಿರುವುದಾಗಿ ಮಾಹಿತಿ ಇದೆ. ಪೂಜಾ ಗಾಂಧಿ ಹಾಗೂ ವಿಜಯ್ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಯಲ್ಲಿದ್ದರು. ಕನ್ನಡ ಕಲಿತು ಕನ್ನಡಿಗನನ್ನು ಮದುವೆಯಾಗುವ ಮೂಲಕ ಇದೀಗ ಕರ್ನಾಟಕದ ಸೊಸೆಯಾಗಿದ್ದಾರೆ. ಪೂಜಾ ಗಾಂಧಿ ಕನ್ನಡ ಕಲಿತಿರುವುದು ಮಾತ್ರವಲ್ಲ ಅವರ ತಾಯಿಗೂ ಕನ್ನಡ ಹೇಳಿ ಕೊಟ್ಟಿದ್ದಾರೆ ಎನ್ನುವುದು ವಿಶೇಷ. 2012ರಲ್ಲಿ ಪೂಜಾ ಗಾಂಧಿ ಅವರಿಗೆ ಉದ್ಯಮಿ ಆನಂದ್ ಗೌಡ ಜತೆ ನಿಶ್ಚಿತಾರ್ಥವಾಗಿತ್ತು. ನಂತರ ಅದು ಮುರಿದು ಬಿದ್ದಿತ್ತು. ಈಗ ವಿಜಯ್ ಘೋರ್ಪಡೆ ಜತೆ ವಿವಾಹವಾಗಿದೆ.

ಇದನ್ನೂ ಓದಿ | Actress Ramya: ಹುಟ್ಟುಹಬ್ಬದಂದು ನಾಯಿಮರಿಗಳೊಂದಿಗೆ ಕಾಲಕಳೆದ ಮೋಹಕ ತಾರೆ ರಮ್ಯಾ

ಹಿಂದಿ, ಬಂಗಾಳಿ ಚಿತ್ರಗಳಲ್ಲಿ ನಟಿಸುತ್ತಿದ್ದ ಪೂಜಾ ಗಾಂಧಿ 2006ರಲ್ಲಿ ತೆರೆಕಂಡ ʼಮುಂಗಾರು ಮಳೆʼ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟರು. ಯೋಗರಾಜ್‌ ಭಟ್‌ ನಿರ್ದೇಶನದ ಈ ಚಿತ್ರ ಕನ್ನಡದಲ್ಲಿ ದಾಖಲೆಯ ಕಲೆಕ್ಷನ್‌ ಮಾಡಿತ್ತು. ಗೋಲ್ಡನ್‌ ಸ್ಟಾರ್‌ ಗಣೇಶ್‌ ಮತ್ತು ಪೂಜಾ ಗಾಂಧಿ ಈ ಚಿತ್ರದ ಮೂಲಕ ಸ್ಟಾರ್‌ ಆಗಿ ಹೊರ ಹೊಮ್ಮಿದ್ದರು. ಬಳಿಕ ಪೂಜಾ ಗಾಂಧಿ ಪುನೀತ್‌ ರಾಜ್‌ ಕುಮಾರ್‌, ಯಶ್‌, ಉಪೇಂದ್ರ ಮುಂತಾದವರ ಸಿನಿಮಾಗಳಲ್ಲಿ ನಟಿಸಿ ಜನಪ್ರಿಯರಾಗಿದ್ದಾರೆ. ಜತೆಗೆ ತಮಿಳು, ತೆಲುಗು, ಮಲೆಯಾಳಂ ಚಿತ್ರಗಳಲ್ಲಿಯೂ ಅಭಿನಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Mohandas Pai : ಐಟಿ ಸಿಟಿ ಗರಿ ಉದುರೀತು ಎಂದ ಮೋಹನ್‌ ದಾಸ್‌ ಪೈ, ಪ್ರಿಯಾಂಕ್‌ ತಿರುಗೇಟು

Mohandas Pai : ಐಟಿ ಕಂಪನಿಗಳು ಹೈದರಾಬಾದ್‌ ನತ್ತ ಹೋಗುತ್ತಿವೆ, ಇದು ಐಟಿ ಹಬ್‌ ಖ್ಯಾತಿಯ ಬೆಂಗಳೂರಿಗೆ ಎಚ್ಚರಿಕೆ ಎಂದಿದ್ದಾರೆ ಉದ್ಯಮಿ ಟಿ.ವಿ ಮೋಹನದಾಸ್‌ ಪೈಕಿ. ಇದಕ್ಕೆ ಐಟಿ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ.

VISTARANEWS.COM


on

TV Mohandas Pai Priyank Kharge
Koo

ಬೆಂಗಳೂರು: ರಾಜ್ಯ ಸರ್ಕಾರ (State Government) ಹೀಗೇ ನಿರ್ಲಕ್ಷ್ಯ ಮಾಡುತ್ತಾ ಹೋದರೆ ಬೆಂಗಳೂರಿಗೆ ಇರುವ ಐಟಿ ನಗರಿ (IT City feather) ಎಂಬ ಗರಿಮೆಗೆ ಕುತ್ತು ಬಂದೀತು ಎಂದು ಹಿರಿಯ ಉದ್ಯಮಿ ಟಿ.ವಿ. ಮೋಹನ್‌ ದಾಸ್‌ ಪೈ (TV Mohandas Pai) ಅವರು ಚಾಟಿ ಏಟು ನೀಡಿದ್ದಾರೆ. ಆದರೆ, ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಐಟಿ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಅವರು ʻಗಾಳಿಯಲ್ಲಿ ಗುಂಡು ಹೊಡೆಯಬೇಡಿʼʼ ಎಂದಿದ್ದಾರೆ.

analyticsindiamag.com ಎಂಬ ವೆಬ್‌ಸೈಟ್‌ ಪ್ರಕಟಿಸಿದ Will Hyderabad Dethrone Bangalore in the IT Hub Race? (ಐಟಿ ಹಬ್‌ ಪೈಪೋಟಿಯಲ್ಲಿ ಹೈದರಾಬಾದ್‌ ಬೆಂಗಳೂರನ್ನು ಅಗ್ರಪಟ್ಟದಿಂದ ಕಿತ್ತೆಸೆಯಬಹುದೇ?) ಎಂಬ ವರದಿಯನ್ನು ಮುಂದಿಟ್ಟುಕೊಂಡು ಟಿ.ವಿ. ಮೋಹನ್‌ದಾಸ್‌ ಪೈ ಅವರು ಟ್ವೀಟ್‌ ಒಂದನ್ನು ಮಾಡಿದ್ದಾರೆ. ವೆಬ್‌ಸೈಟ್‌ ವರದಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಟ್ಯಾಗ್‌ ಮಾಡಿದ ಟ್ವೀಟ್‌ನಲ್ಲಿ Will Hyderabad Dethrone Bangalore’s IT Status? continued neglect of Bengaluru by successive govts over last 10 years has led to this. Hope govt shows more energy to improve city ಎಂದು ಬರೆದಿದ್ದಾರೆ. ಅಂದರೆ, ಐಟಿ ಕ್ಷೇತ್ರದ ಅಗ್ರಗಣ್ಯ ಎಂಬ ಬೆಂಗಳೂರಿನ ಸ್ಥಾನಮಾನವನ್ನು ಹೈದರಾಬಾದ್‌ ಕಿತ್ತು ಹಾಕಬಹುದೇ? ಇದಕ್ಕೆ ಕಾರಣವಾಗಿರುವುದು ಕಳೆದ ಹತ್ತು ವರ್ಷಗಳಲ್ಲಿ ಅಧಿಕಾರ ನಡೆಸಿದ ಸರ್ಕಾರಗಳು ವಹಿಸಿದ ದಿವ್ಯ ನಿರ್ಲಕ್ಷ್ಯ. ಸರ್ಕಾರ ನಗರದ ಅಭಿವೃದ್ಧಿಗಾಗಿ ಹೆಚ್ಚು ಶಕ್ತಿಯನ್ನು ವಿನಿಯೋಗಿಸುತ್ತದೆ ಎಂದು ಭಾವಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಹಿರಿಯ ಉದ್ಯಮಿ ಆನಂದ ಮಹೇಂದ್ರ ಅವರು ಇತ್ತೀಚೆಗೆ ಒಂದು ಮಾತು ಹೇಳಿದ್ದರು: ಗೂಗಲ್‌ ಕಂಪನಿಯು ಹೈದರಾಬಾದ್‌ನಲ್ಲಿ ತನ್ನ ದೊಡ್ಡ ಕಚೇರಿಯನ್ನು ಸ್ಥಾಪಿಸಲಿದೆ. ಅಮೆರಿಕದ ಹೊರಗಡೆ ಅತಿ ದೊಡ್ಡ ಕಚೇರಿಯನ್ನು ನಿರ್ಮಿಸಲು ಮುಂದಾಗಿರುವುದು ಒಂದು ಗೂಗಲ್‌ ಭೌಗೋಳಿಕ ರಾಜಕೀಯ ಪ್ರಯತ್ನ. ಈ ಕ್ರಮವು ಭಾರತೀಯ ಟೆಕ್‌ ವಾತಾವರಣಕ್ಕೆ ಒಂದು ಗುಡ್‌ ನ್ಯೂಸ್‌. ಆದರೆ, ಗೂಗಲ್‌ ಸಿಲಿಕಾನ್‌ ವ್ಯಾಲಿ ಎಂದೇ ಹೆಸರಾಗಿರುವ ಭಾರತದ ನಿರ್ವಿವಾದಿತ ಐಟಿ ರಾಜಧಾನಿಯಾಗಿರುವ ಬೆಂಗಳೂರನ್ನು ಬಿಟ್ಟು ಹೈದರಾಬಾದ್‌ನ್ನು ಆಯ್ಕೆ ಮಾಡಿರುವುದು ಏನೋ ಅಸಂಬದ್ಧ ಅನಿಸುತ್ತದೆ.

ಈ ಅಂಶಗಳನ್ನು ಉಲ್ಲೇಖಿಸಿ ಮಾಡಿರುವ ವರದಿಗೆ ಹೈದರಾಬಾದ್‌ ಬೆಂಗಳೂರನ್ನು ಅಗ್ರ ಪಟ್ಟದಿಂದ ಕಿತ್ತು ಹಾಕಬಹುದೇ ಎಂಬ ಪ್ರಶ್ನಾರ್ಥಕ ಚಿಹ್ನೆಯೊಂದಿಗೆ ವರದಿ ಮಾಡಿದೆ.

ಟಿ.ವಿ. ಮೋಹನ್‌ ದಾಸ್‌ ಪೈ ಅವರು ಈ ಅಂಶವನ್ನು ಇಟ್ಟುಕೊಂಡು ಟ್ವೀಟ್‌ ಮಾಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಚಾಟಿ ಬೀಸುತ್ತಿರುವುದು ಇದು ಮೊದಲೇನಲ್ಲ. ಹಿಂದೆ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗಲೂ ಅವರು ಬೆಂಗಳೂರು ನಗರದ ರಸ್ತೆಗಳ ವಿಚಾರದಲ್ಲಿ ಆಕ್ಷೇಪ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಅವರ ಗಮನವನ್ನು ಸೆಳೆದಿದ್ದರು.

ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯ ಸಂದರ್ಭದಲ್ಲಿ ಕೆಲವು ಐಟಿ ಕಂಪನಿಗೆ ನೀರು ನುಗ್ಗಿದಾಗಲೂ ಮೋಹನ್‌ ದಾಸ್‌ ಪೈ ಅವರು ಹೀಗೇ ಆದರೆ ಇಲ್ಲಿನ ಕಂಪನಿಗಳು ವಲಸೆ ಹೋಗುವ ಸಾಧ್ಯತೆಗಳಿವೆ ಎಂದಿದ್ದರು. ಈ ನಡುವೆ ಅವರ ಮಾತಿಗೆ ಪೂರಕವಾಗಿ ಬೆಂಗಳೂರಿನಲ್ಲಿ ಪ್ರಾರಂಭವಾಗಬೇಕಿದ್ದ ಕೆಲ ಐಟಿ ಕಂಪನಿ ಹೈದರಾಬಾದ್ ಗೆ ಶಿಫ್ಟ್ ಆಗುತ್ತಿವೆ ಎಂಬ ಮಾಹಿತಿಯೂ ಇದೆ. ಈ ಬಗ್ಗೆ ಐಟಿ ಕಂಪನಿಗಳು ಹಲವು ಬಾರಿ ಸರ್ಕಾರಕ್ಕೆ ಮಾಹಿತಿ ನೀಡಿವೆ ಎನ್ನಲಾಗಿದೆ. ಇದನ್ನು ಬಳಸಿಕೊಂಡು ಮೋಹನ್‌ ದಾಸ್‌ ಪೈ ಅವರು ಸರ್ಕಾರಕ್ಕೆ ಮಾರ್ಮಿಕವಾಗಿ ಕುಟುಕಿದ್ದಾರೆ.

ರಾಜ್ಯ ವಿರೋಧಿ ಹೇಳಿಕೆ ಸಲ್ಲ: ಮೋಹನ್‌ದಾಸ್‌ ಪೈಗೆ ಪ್ರಿಯಾಂಕ್‌ ತಿರುಗೇಟು

ಮೋಹನ್ ದಾಸ್ ಪೈ ಅವರು ಮಾಡಿರುವ ಟ್ವೀಟ್‌ಗೆ ಮಾಹಿತಿ ಮತ್ತು ತಂತ್ರಜ್ಞಾನ ಖಾತೆ ಸಚಿವ ಪ್ರಿಯಾಂಕ್‌ ಖರ್ಗೆ ಅವರು ತಿರುಗೇಟು ನೀಡಿದ್ದಾರೆ.

ʻʻಮೋಹನ್ ದಾಸ್ ಪೈ ಅವರಿಗೆ ಮಾಹಿತಿ ಕೊರತೆ ಇದೆ. ಒಂದೇ ಒಂದು ಸಿಂಗಲ್ ಕಂಪನಿ ಕರ್ನಾಟಕ ಬಿಟ್ಟು ಹೋಗಿಲ್ಲ. ಕೆಲವರಿಗೆ ಕರ್ನಾಟಕ ವಿರೋಧಿ ಹೇಳಿಕೆ ಕೊಡೋದು ಹ್ಯಾಬಿಟ್ ಆಗಿದೆ. ಇದನ್ನು ಪದೇಪದೆ ಮಾಡುವುದು ಸರಿಯಲ್ಲ. ಅವರು ಒಂದೇ ಒಂದು ಕಂಪನಿಯ ಉದಾಹರಣೆ ನೀಡಲಿ ನೋಡೋಣ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾಕುವುದು ಬೇಡʼʼ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ʻʻಇದೇ ಮೋಹನ್ ದಾಸ್ ಪೈ ಬೇರೆ ಬೇರೆ ರಾಜ್ಯಗಳ ಕಂಪನಿಗಳಿಗೆ ಬಂಡವಾಳ ಹಾಕುವುದಿಲ್ವಾ? ಅವರು ಡೈವರ್ಸಿಫಿಕೇಷನ್ ಮಾಡಿದ್ರೆ ಸರಿ, ಬೇರೆಯವರು ಮಾಡಿದ್ರೆ ತಪ್ಪಾ? ಅವರು ಕನ್ನಡಿಗರ ಪರವಾಗಿ ಮಾತನಾಡಬೇಕೇ ಹೊರತು ಈ ರೀತಿ ಮಾತನಾಡಬಾರದುʼʼ ಎಂದು ಹೇಳಿದ್ದಾರೆ ಪ್ರಿಯಾಂಕ್‌ ಖರ್ಗೆ.

ಇವರೇ ಅಲ್ವಾ ಎಲ್ಲ ವಿಷನ್ ಗ್ರೂಪ್‌ಗಳಲ್ಲಿ ಇದ್ದವರು? ಎಂದು ಕೇಳಿರುವ ಪ್ರಿಯಾಂಕ್‌ ಖರ್ಗೆ, ಫಿಲಿಪ್ಸ್ ಇನೊವೇಶನ್ ರಾಜ್ಯಕ್ಕೆ ಬಂದಾಗ ಇವರು ಬೆನ್ನು ತಟ್ಟಿದ್ರಾ ಎಂದು ಪ್ರಶ್ನೆ ಮಾಡಿದ್ದಾರೆ.

ʻʻಸಕಾರಾತ್ಮಕವಾಗಿ ಎಲ್ಲರ ಅಭಿಪ್ರಾಯ ಸಂಗ್ರಹ ಮಾಡ್ತೇವೆ. ಅವರ ಮಾತುಗಳಿಂದ ನಮಗೆ ರಾಜ್ಯಕ್ಕೆ ಬಂಡವಾಳ ಬರುತ್ತದೆ ಎಂದು ಭಾವಿಸುತ್ತೇವೆ. ಆದರೆ, ಪದೇಪದೆ ಯಾಕೆ ಹೀಗೆ ನೆಗೆಟಿವ್ ಆಗಿ ಮಾತನಾಡ್ತಾರೆ ಗೊತ್ತಿಲ್ಲʼʼ ಎಂದು ಹೇಳಿರುವ ಪ್ರಿಯಾಂಕ್‌ ಖರ್ಗೆ, ಯಾವ ಬಂಡವಾಳ ಕೂಡ ರಾಜ್ಯದಿಂದ ವಾಪಸ್ ಹೊರಗಡೆ ಹೋಗಿಲ್ಲ ಎಂದಿದ್ದಾರೆ.

ʻʻಸರ್ಕಾರಕ್ಕೆ ಬ್ಲ್ಯಾಕ್ ಮೇಲ್ ಮಾಡುವಂತ ವ್ಯಕ್ತಿ ಅವರಲ್ಲ. ಆದರೆ ಪದೇ ಪದೇ ಕರ್ನಾಟಕ ವಿರೋಧಿ ನಿಲುವು ತಾಳಬಾರದುʼʼ ಎಂದು ಎಚ್ಚರಿಕೆಯ ಧ್ವನಿಯಲ್ಲಿ ಹೇಳಿದ್ದಾರೆ.

ಮೂಲಸೌಕರ್ಯ ಕೊಡಲು ಸರ್ಕಾರ ವಿಫಲ ಎಂದ ಅಶ್ವತ್ಥನಾರಾಯಣ

ಈ ನಡುವೆ, ಮೋಹನ್ ದಾಸ್ ಪೈ ಟ್ವೀಟ್‌ ಅನ್ನು ಸಮರ್ಥಿಸಿ ಮಾತನಾಡಿರುವ ಮಾಜಿ ಐಟಿಬಿಟಿ ಸಚಿವ ಅಶ್ವಥ್ ನಾರಾಯಣ್ ಅವರು, ಎಲ್ಲಾ ಆವಿಷ್ಕಾರವಂತರು, ತಂತ್ರಜ್ಞಾನದವರು ಮತ್ತು ಉದ್ಯಮಶೀಲ ಇವರೆಲ್ಲರಿಗೂ ಬೆಂಗಳೂರು ಬೇಕು. ಆದರೆ, ಮೂಲಭೂತ ಸೌಕರ್ಯಗಳ ಕೊಡುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದರು.

ʻʻಭ್ರಷ್ಟಾಚಾರ ಹೆಚ್ಚುತ್ತಿದೆ. ಬಿಲ್ಡರ್ ಗಳು ಬಿಲ್ಡಿಂಗ್ ಕಟ್ಟಲು ತಯಾರಿಲ್ಲ. ಅವರಿಗೆ ಸಿಗುವ ಮಾರ್ಜಿನ್‌ ಹಣವನ್ನೂ ಸೇರಿಸಿ ಲಂಚ ಕೊಡುವ ಪರಿಸ್ಥಿತಿ ಇದೆ. ಹಾಗಾಗಿ ಎಲ್ಲರಿಗೂ ಹೈದರಾಬಾದ್ ಆಟ್ರಾಕ್ಷನ್ ಆಗುತ್ತದೆ. ಹೈದರಾಬಾದ್ ನಮ್ಮ ವ್ಯಾಪಾರಕ್ಕೆ ಉತ್ತಮವಾಗಿರುವ ಸ್ಥಳ ಎಂದು ಅವರಿಗೆ ಅನಿಸುತ್ತದೆʼʼ ಎಂದಿದ್ದಾರೆ ಅಶ್ವತ್ಥ್‌ ನಾರಾಯಣ್‌.

ʻʻಏನೂ ಮಾಡಲಿಲ್ಲ ಅಂದ್ರೂ ಬೆಂಗಳೂರಿಗೆ ಬರ್ತಾರೆ ಎಂಬ ಧೋರಣೆ ಬೆಂಗಳೂರಿಗೆ ಕಂಟಕವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ , ಅವರು ಸರ್ಕಾರ ಸಚಿವರು ಎಚ್ಚೆತ್ತುಕೊಳ್ಳಬೇಕಾಗಿದೆʼʼ ಎಂದು ಅವರು ಹೇಳಿದರು.

Continue Reading
Advertisement
vijaypura accident
ಕರ್ನಾಟಕ12 mins ago

Road Accident : ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

Task force committee meeting at Kottur
ವಿಜಯನಗರ23 mins ago

Vijayanagara News: ಮೂಲ ಸೌಕರ್ಯಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ: ಶಾಸಕ ನೇಮಿರಾಜ ನಾಯ್ಕ

Pooja Gandhi and Vijay Ghorpade
ಕರ್ನಾಟಕ27 mins ago

Pooja Gandhi: ಮಳೆ ಹುಡುಗಿಗೆ ಮಂತ್ರ ಮಾಂಗಲ್ಯ; ಹೊಸ ಬಾಳಿಗೆ ಕಾಲಿಟ್ಟ ಪೂಜಾ ಗಾಂಧಿ

Bombay High court orders to son to vacate his mother flat
ಕೋರ್ಟ್39 mins ago

ಆರೈಕೆ ಮಾಡದ ಮಗನಿಗೆ ತಾಯಿಯ ಫ್ಲ್ಯಾಟ್ ಖಾಲಿ ಮಾಡಲು ಬಾಂಬೆ ಹೈಕೋರ್ಟ್ ಆದೇಶ

TV Mohandas Pai Priyank Kharge
ಕರ್ನಾಟಕ49 mins ago

Mohandas Pai : ಐಟಿ ಸಿಟಿ ಗರಿ ಉದುರೀತು ಎಂದ ಮೋಹನ್‌ ದಾಸ್‌ ಪೈ, ಪ್ರಿಯಾಂಕ್‌ ತಿರುಗೇಟು

physical abuse
ದೇಶ1 hour ago

Physical Abuse : ನೀಚ ಕೃತ್ಯ; ನರ್ಸರಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸ್ಕೂಲ್ ವ್ಯಾನ್ ಡ್ರೈವರ್​

peace accord between Manipur oldest armed group UNLF and Government
ದೇಶ1 hour ago

ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಮಣಿಪುರದ ಹಳೆ ಬಂಡುಕೋರ ಗುಂಪು ಯುಎನ್ಎಲ್ಎಫ್!

Gauvarav Yatra
ದೇಶ2 hours ago

Indian Railways : ಭಾರತ ಗೌರವ ಯಾತ್ರಾ ರೈಲಿನಲ್ಲಿ ಕಲುಷಿತ ಆಹಾರ ಸೇವಿಸಿ 90 ಮಂದಿ ಅಸ್ವಸ್ಥ

Actress Ramya
ಕರ್ನಾಟಕ2 hours ago

Actress Ramya: ಹುಟ್ಟುಹಬ್ಬದಂದು ನಾಯಿಮರಿಗಳೊಂದಿಗೆ ಕಾಲಕಳೆದ ಮೋಹಕ ತಾರೆ ರಮ್ಯಾ

fight between Couple in air and Lufthansa flight was diverted to Delhi and Viral News
ದೇಶ2 hours ago

ಗಂಡ-ಹೆಂಡತಿ ಜಗಳ ವಿಮಾನ ಹತ್ತಿದ್ರೂ ಮುಗಿಲಿಲ್ಲ! ಆ ಮೇಲೆ ಏನಾಯ್ತು?

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ4 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ6 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Dina Bhavishya
ಪ್ರಮುಖ ಸುದ್ದಿ16 hours ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜಿಲ್ಲಾ ಮಟ್ಟದ ಸಮಸ್ಯೆ ಬೆಂಗಳೂರಿಗೆ ಬಂದರೆ ಸಹಿಸಲ್ಲ; ಸಿಎಂ ಖಡಕ್‌ ಎಚ್ಚರಿಕೆ

CM Janatha Darshana solved mysore citizens problem
ಕರ್ನಾಟಕ2 days ago

Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

Shivajingar School building collapses The children escaped unhurt
ಕರ್ನಾಟಕ2 days ago

Building collapse : ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ; ಪ್ರಾಣಾಪಾಯದಿಂದ ಚಿಣ್ಣರು ಪಾರು

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಿಎಂಗೆ ದೂರು ನೀಡಬೇಕೇ? ಜನತಾ ದರ್ಶನಕ್ಕೆ ಹೋಗಬೇಕಿಲ್ಲ; ಈ ನಂಬರ್‌ಗೆ ಕರೆ ಮಾಡಿ!

read your daily horoscope predictions for november 27 2023
ಪ್ರಮುಖ ಸುದ್ದಿ3 days ago

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Danger Influenza People are suffering from the flu
ಆರೋಗ್ಯ3 days ago

Viral fever: ಡೆಡ್ಲಿ ಚೀನಾ ವೈರಸ್‌; ಮಕ್ಕಳಿಗೆ ಇದರಿಂದ ಅಪಾಯ ಇದೆಯಾ?

ಟ್ರೆಂಡಿಂಗ್‌