Site icon Vistara News

Murder Case: ಅತ್ಯಾಚಾರಕ್ಕೆ ವಿರೋಧಿಸಿದ ತಾಯಿಯನ್ನೇ ಕೊಂದ ಕಡುಪಾಪಿ ಮಗ

Murder Case

ಮಂಗಳೂರು: ಅತ್ಯಾಚಾರಕ್ಕೆ ವಿರೋಧಿಸಿದ ತಾಯಿಯನ್ನೇ ಕಡುಪಾಪಿ ಮಗ ಕೊಂದಿರುವ ಅತೀ ವಿಕೃತ ಘಟನೆ (Murder Case) ತಡವಾಗಿ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ ಮೂಲ್ಕಿ ತಾಲೂಕಿನ ಕೊಂಡೇಲಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೊಂಡೇಲಾ ಗ್ರಾಮದ ದುರ್ಗಾನಗರ ನಿವಾಸಿ ರತ್ನ ಶೆಟ್ಟಿ (62) ಮೃತರು, ರವಿರಾಜ್ ಶೆಟ್ಟಿ ಆರೋಪಿ. ಅ. 26ರ ರಾತ್ರಿ ನಡೆದ ಘಟನೆ ಮೂರು ದಿನಗಳ ಬಳಿಕ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೆ ಒಪ್ಪದ ಹಿನ್ನೆಲೆಯಲ್ಲಿ ತಾಯಿಯನ್ನು ಮಗ ಕತ್ತು ಹಿಸುಕಿ ಕೊಂದಿದ್ದು, ಬಳಿಕ ಮನೆಗೆ ಬೀಗ ಜಡಿದು ಪರಾರಿಯಾಗಿದ್ದ.

ಮೂರು ದಿನಗಳ ಬಳಿಕ ಮೃತದೇಹಕ್ಕೆ ನೊಣಗಳು ಮುತ್ತಿಕೊಂಡು ಘಟನೆ ಬೆಳಕಿಗೆ ಬಂದಿದ್ದು, ಸೋಮವಾರ ಸಂಜೆ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ತಾಯಿ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದೆ, ಆಕೆ ಒಪ್ಪದ ಹಿನ್ನೆಲೆಯಲ್ಲಿ ಕೊಂದಿದ್ದಾಗಿ ಮಗ ಹೇಳಿದ್ದಾನೆ. ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ | Medical Seat : ಮೆಡಿಕಲ್‌ ಸೀಟ್‌ ದೋಖಾ; ವಿದ್ಯಾರ್ಥಿಗಳಿಗೆ ವಂಚಿಸುತ್ತಿದ್ದ ವಂಚಕ ಅರೆಸ್ಟ್‌

ನಿವೃತ್ತ ಪೊಲೀಸ್ ಮನೆಯಲ್ಲೇ ವೇಶ್ಯಾವಾಟಿಕೆ; 5 ಯುವತಿಯರ ರಕ್ಷಣೆ, ಇಬ್ಬರ ಬಂಧನ

ಮೈಸೂರು: ನಿವೃತ್ತ ಪೊಲೀಸ್ ಅಧಿಕಾರಿ ಮನೆಯಲ್ಲೇ ವೇಶ್ಯಾವಾಟಿಕೆ ದಂಧೆ ಬೆಳಕಿಗೆ ಬಂದಿದೆ. ಬ್ಯೂಟಿ ಪಾರ್ಲರ್ ನೆಪದಲ್ಲಿ ನಡೆಸುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ (Prostitution Racket) ಮೇಲೆ ಪೋಲಿಸರು ದಾಳಿ ಮಾಡಿ, ಐವರು ಯುವತಿಯರನ್ನು ರಕ್ಷಣೆ ಮಾಡಿ, ಇಬ್ಬರು ವಿಟ ಪುರುಷರನ್ನು ಬಂಧಿಸಿದ್ದಾರೆ.

ಲಲಿತ ಮಹಲ್‌ ನಗರದಲ್ಲಿರುವ ನಿವೃತ್ತ ಇನ್ಸ್‌ಪೆಕ್ಟರ್ ಜಿ.ಬಿ.ರಂಗಸ್ವಾಮಿ ಅವ ನಿವಾಸದಲ್ಲಿ ದುನಿಯಾ ಫ್ಯಾಮಿಲಿ ಸಲೂನ್‌ ನಡೆಸಲಾಗುತ್ತಿತ್ತು. ಆರೋಪಿಗಳು ಬ್ಯೂಟಿ ಪಾರ್ಲರ್ ನೆಪದಲ್ಲಿ ವೇಶ್ಯಾವಾಟಿಕೆ ಅಡ್ಡೆ ನಡೆಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ. ಮಹೇಶ್, ಚೈತ್ರಾ ಈ ದಂಧೆಯ ಕಿಂಗ್‌ಪಿನ್‌ಗಳಾಗಿದ್ದು, ಇವರಿಬ್ಬರ ಮೇಲೆ ಈ ಹಿಂದೆಯೂ ಅನೇಕ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ | Actor Darshan: ನಟ ದರ್ಶನ್ ವಿರುದ್ಧ ಕೇಸ್‌ ದಾಖಲು; ನಾಯಿಗಳು ಕಚ್ಚಿದ್ದಕ್ಕೆ ವೈದ್ಯೆ ದೂರು

ನಿವೃತ್ತ ಪೊಲೀಸ್ ಅಧಿಕಾರಿ, ತಾವು ವಾಸವಿರುವ ಮನೆಯಲ್ಲೇ ಮಾಂಸ ದಂಧೆಗೆ ಅವಕಾಶ ಮಾಡಿಕೊಟ್ಟರೇ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಪೊಲೀಸರು, ಒಡನಾಡಿ ಸೇವಾ ಸಂಸ್ಥೆ ಜಂಟಿ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ. ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version