Sirsi News | ಸಹಸ್ರ ಲಿಂಗದಲ್ಲಿ ಬಿರಿಯಾನಿ ಸೇವನೆ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲ್‌; ವ್ಯಾಪಕ ಆಕ್ರೋಶ - Vistara News

ಆಹಾರ/ಅಡುಗೆ

Sirsi News | ಸಹಸ್ರ ಲಿಂಗದಲ್ಲಿ ಬಿರಿಯಾನಿ ಸೇವನೆ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲ್‌; ವ್ಯಾಪಕ ಆಕ್ರೋಶ

Sirsi News | ಸಹಸ್ರ ಲಿಂಗದ ಪಕ್ಕದ ಕಲ್ಲಿನಲ್ಲಿ ಕುಳಿತು ಮುಸ್ಲಿಂ ದಂಪತಿ ಬಿರಿಯಾನಿ ಸೇವನೆ ಮಾಡುವ ವಿಡಿಯೊ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

VISTARANEWS.COM


on

Sahasra Linga sirsi biriyani social media
ಸಹಸ್ರ ಲಿಂಗದ ಪಕ್ಕದ ಕಲ್ಲಿನಲ್ಲಿ ಕುಳಿತು ಬಿರಿಯಾನಿ ಸೇವನೆ ಮಾಡುತ್ತಿರುವ ಮುಸ್ಲಿಂ ದಂಪತಿ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿರಸಿ: ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣ, ಭಕ್ತಿಯ ಸ್ಥಳವಾದ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ (Sirsi News) ಸಹಸ್ರ ಲಿಂಗದಲ್ಲಿ ಮುಸ್ಲಿಂ ದಂಪತಿ ಚಿಕನ್ ಬಿರಿಯಾನಿ ಸೇವನೆ ಮಾಡಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ಸಹಸ್ರ ಲಿಂಗಕ್ಕೆ ಪ್ರವಾಸಕ್ಕೆಂದು ಬಂದಿದ್ದ ಮುಸ್ಲಿಂ ದಂಪತಿಯು ಲಿಂಗಗಳಿರುವ ಪಕ್ಕದ ಕಲ್ಲಿನಲ್ಲಿ ಕುಳಿತು ಬಿರಿಯಾನಿ ಸೇವನೆ ಮಾಡಿದ್ದಾರೆ. ಇದನ್ನು ಅಲ್ಲಿಯೇ ಇದ್ದ ಪ್ರವಾಸಿಗರೊಬ್ಬರು ವಿಡಿಯೊ ಮಾಡಿಕೊಂಡಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

ಈ ಪ್ರಸಂಗವು ಇತ್ತೀಚೆಗೆ ನಡೆದಿದೆ ಎನ್ನಲಾಗಿದ್ದು, ವಿಡಿಯೊ ನೋಡಿ ಜಿಲ್ಲೆಯ ಜನರು ಅಸಮಾಧಾನ ವ್ಯಕ್ತವಾಗುತ್ತಿದೆ. ಮಹಿಳೆಯೊಬ್ಬರು ಈ ವಿಡಿಯೊ ಮಾಡಿದ್ದು, “ನೀವಿಲ್ಲಿ ಬಿರಿಯಾನಿ ತಿನ್ನುತ್ತಿದ್ದೀರಾ?” ಎಂದು ಪ್ರಶ್ನಿಸಿರುವುದು ಗೊತ್ತಾಗುತ್ತದೆ. ಸಹಸ್ರ ಲಿಂಗವು ಹಿಂದುಗಳ ಧಾರ್ಮಿಕ ತಾಣವಾಗಿದ್ದು, ಇಲ್ಲಿ ಸಾವಿರಾರು ಶಿವಲಿಂಗಗಳಿವೆ. ಮುಸ್ಲಿಂ ದಂಪತಿಯ ನಡೆಗೆ ನೆಟ್ಟಿಗರಿಂದಲೂ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಸ್ಥಳದ ಪಾವಿತ್ರ್ಯತೆಗೆ ಧಕ್ಕೆ ತರುವವರ ವಿರುದ್ಧ ಕ್ರಮಕ್ಕೆ ಜನರಿಂದ ಒತ್ತಾಯ ಕೇಳಿಬಂದಿದೆ.

‌ಇದನ್ನೂ ಓದಿ | Rishab Shetty | ಬೆಳಕು, ಆದರೆ ಇದು ಬೆಳಕಲ್ಲ! 100 ದಿನದ ದರ್ಶನ ಎಂದು ಸ್ಪೆಷಲ್‌ ಪೋಸ್ಟ್‌ ಹಂಚಿಕೊಂಡ ರಿಷಬ್‌ ಶೆಟ್ಟಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆಹಾರ/ಅಡುಗೆ

Aam Panna Recipe: ಆಮ್‌ ಪನ್ನಾ! ಮಾವಿನಕಾಯಿಯ ಅದ್ಭುತ ಪೇಯ ಇದು; ನೀವೂ ಮಾಡಿ ನೋಡಿ

ಮಾವಿನ ಕಾಯಿ ದೊರೆತರೆ, ಉಪ್ಪಿನಕಾಯಿ, ಗೊಜ್ಜು ಸೇರಿದಂತೆ ಥರಹೇವಾರಿ ಅಡುಗೆಗಳನ್ನು ಮಾಡುವುದು ಸಾಮಾನ್ಯ. ಅವುಗಳ ಪೈಕಿ ಆಮ್‌ ಪನ್ನಾ ಕೂಡಾ ಒಂದು. ಈ ಮಹಾರಾಷ್ಟ್ರ ಮೂಲದ ಪೇಯ ಬೇಸಿಗೆಗೆ ಅತ್ಯಂತ ಹಿತ ನೀಡುವ ಪೇಯಗಳ ಪೈಕಿ ಒಂದು. ಮನೆಯಲ್ಲೇ ಸುಲಭವಾಗಿ ಮಾಡಿಕೊಳ್ಳಬಹುದಾದ ಹಾಗೂ ಆರೋಗ್ಯಕರವೂ ಆಗಿರುವ ಈ ಪೇಯದಿಂದ ಸಾಕಷ್ಟು ಲಾಭಗಳೂ ಇವೆ. ಬನ್ನಿ, ಆಮ್‌ ಪನ್ನಾದ (Aam Panna Recipe) ಲಾಭಗಳು ಯಾವುವು ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Aam Panna Recipe
Koo

ಹೇಳಿಕೇಳಿ ಇದು ಮಾವಿನಹಣ್ಣಿನ ಕಾಲ. ಮಾರುಕಟ್ಟೆಗೆ ಕಾಲಿಟ್ಟರೆ ಮಾವಿನಹಣ್ಣಿನಷ್ಟೇ ಸುಲಭವಾಗಿ ಮಾವಿನಕಾಯಿಯೂ ದೊರೆಯುತ್ತದೆ. ಮಾವಿನ ಕಾಯಿ ದೊರೆತರೆ, ಉಪ್ಪಿನಕಾಯಿ, ಗೊಜ್ಜು ಸೇರಿದಂತೆ ಥರಹೇವಾರಿ ಅಡುಗೆಗಳನ್ನು ಮಾಡುವುದು ಸಾಮಾನ್ಯ. ಅವುಗಳ ಪೈಕಿ ಆಮ್‌ ಪನ್ನಾ ಕೂಡಾ ಒಂದು. ಈ ಮಹಾರಾಷ್ಟ್ರ ಮೂಲದ ಪೇಯ ಬೇಸಿಗೆಗೆ ಅತ್ಯಂತ ಹಿತ ನೀಡುವ ಪೇಯಗಳ ಪೈಕಿ ಒಂದು. ಮನೆಯಲ್ಲೇ ಸುಲಭವಾಗಿ ಮಾಡಿಕೊಳ್ಳಬಹುದಾದ ಹಾಗೂ ಆರೋಗ್ಯಕರವೂ ಆಗಿರುವ ಈ ಪೇಯದಿಂದ ಸಾಕಷ್ಟು ಲಾಭಗಳೂ ಇವೆ. ಬನ್ನಿ, ಆಮ್‌ ಪನ್ನಾದ (Aam Panna Recipe) ಲಾಭಗಳು ಯಾವುವು ಎಂಬುದನ್ನು ನೋಡೋಣ.

healthy internal organs of human digestive system

ಪಚನಕ್ರಿಯೆಗೆ ಒಳ್ಳೆಯದು

ಜೀರ್ಣಕ್ರಿಯೆಯ ಸಮಸ್ಯೆಗಳನ್ನು ಹೊಂದಿರುವ ಮಂದಿಗೆ ಆಮ್‌ ಪನ್ ಒಳ್ಳೆಯದು. ಹೊಟ್ಟೆಯುಬ್ಬರ ಹಾಗೂ ಮಲಬದ್ಧತೆಯ ಸಮಸ್ಯೆ ನಿಮಗೆ ಆಗಾಗ ಕಾಣಿಸುತ್ತಿದೆ ಎಂದಾದಲ್ಲಿ ಇದರಲ್ಲಿ ಅದಕ್ಕೆ ಉತ್ತರವಿದೆ. ಆಮ್‌ ಪನ್ನಾದಲ್ಲಿ ನಾರಿನಂಶವಿದೆ. ಅಷ್ಟೇ ಅಲ್ಲ, ಮಾವಿನ ಕಾಯಿಯಲ್ಲಿ ಜೀರ್ಣಕಾರಿ ಗುಣಗಳಿವೆ. ಜೊತೆಗ ಆಮ್‌ ಪನ್ನಾ ಮಾಡುವಾಗ ಬಳಸಿದ ಜೀರಿಗೆ, ಸೈಂದವ ಲವಣ, ಕರಿಮೆಣಸು ಎಲ್ಲವೂ ಕೂಡಾ ಜೀರ್ಣಕ್ರಿಯೆಗೆ ಅತ್ಯಂತ ಒಳ್ಳೆಯದು.

Antioxidants in it keep immunity strong Benefits Of Mandakki

ರೋಗನಿರೋಧಕತೆ ಹೆಚ್ಚಿಸುತ್ತದೆ

ಆಮ್‌ ಪನ್ನಾದ ಮತ್ತೊಂದು ಲಾಭವೆಂದರೆ ಇದು ರೋಗ ನಿರೋಧಕತೆಯನ್ನು ಹೆಚ್ಚಿಸುತ್ತದೆ. ಕಾರಣ ಇದರಲ್ಲಿರುವ ವಿಟಮಿನ್‌ ಸಿ. ಮಾವಿನಕಾಯಿಯಲ್ಲಿ ವಿಟಮಿನ್‌ ಸಿ ಹೇರಳವಾಗಿ ಇರುವುದರಿಂದ ಇದು ರೋಗ ನಿರೋಧಕತೆಯ ವಿಚಾರದಲ್ಲಿ ಉತ್ತಮ ಕೊಡುಗೆ ನೀಡುತ್ತದೆ. ಅಷ್ಟೇ ಅಲ್ಲ, ಮಾವಿನಕಾಯಿಯಲ್ಲಿ ಆಂಟಿಆಕ್ಸಿಡೆಂಟ್‌ಗಳು ಹೇರಳವಾಗಿದ್ದು, ಇದೂ ಕೂಡಾ ರೋಗ ನಿರೋಧಕತೆ ಹೆಚ್ಚಿಸಲು ಸಹಾಯ ಮಾಡುತ್ತದೆ.

Skin Care

ಚರ್ಮದ ಆರೋಗ್ಯಕ್ಕೆ ಉತ್ತಮ

ಆಮ್‌ ಪನ್ನಾ ಚರ್ಮದ ಆರೋಗ್ಯಕ್ಕೂ ಒಳ್ಳೆಯದು ಎಂಬುದು ತಿಳಿದಿದೆಯೇ? ಹೌದು. ವಿಟಮಿನ್‌ ಸಿ ಹೇರಳವಾಗಿರುವ ಮಾವಿನ ಕಾಯಿ ಚರ್ಮದ ಆರೋಗ್ಯಕ್ಕೆ ಒಳ್ಳೆಯದನ್ನೇ ಮಾಡುತ್ತದೆ. ಚರ್ಮದ ಹೊಳಪಿಗೆ, ತಾಜಾತನಕ್ಕೆ, ಹಾಗೂ ಆರೋಗ್ಯದಿಂದ ಕಂಗೊಳಿಸುವಂತೆ ಮಾಡಲು ವಿಟಮಿನ್‌ ಸಿ ಬೇಕೇ ಬೇಕು. ಮೊಡವೆ, ಕಪ್ಪುಕಲೆ, ಚುಕ್ಕೆಗಳು ಇತ್ಯಾದಿ ಚರ್ಮದ ಸಮಸ್ಯೆಗಳಿಗೂ ಇದು ರಾಮಬಾಣವಾಗಿ ಕೆಲಸ ಮಾಡುತ್ತದೆ.

weight loss

ತೂಕ ಇಳಿಕೆಗೂ ಒಳ್ಳೆಯದು

ನೀವು ತೂಕ ಇಳಿಕೆಯ ಹಂಬಲದಲ್ಲಿದ್ದರೆ ಆಮ್‌ ಪನ್ನಾ ಕೂಡಾ ಅದಕ್ಕೆ ಸಹಾಯ ಮಾಡುತ್ತದೆ. ಇದು ಕಡಿಮೆ ಕ್ಯಾಲರಿಯ, ನಾರಿನಂಶ ಹೆಚ್ಚಿರುವ ಪೇಯವಾದ್ದರಿಂದ ಇದನ್ನು ಯಾವ ತಲೆಬಿಸಿಗಳಿಲ್ಲದೆ ಕುಡಿಯಬಹುದು.

Aam Panna

ಆಮ್‌ ಪನ್ನಾ ಹೇಗೆ ಮಾಡುವುದು?

ಮಾವಿನ ಕಾಯಿಯನ್ನು ಬೇಯಿಸಿ. ಅದು ಮೆದುವಾಗುವವರೆಗೆ ಬೇಯಲಿ. ಬೆಂದಾಗ ಮಾವಿನ ಕಾಯಿಯ ಸಿಪ್ಪೆಯ ಬಣ್ಣ ಬದಲಾಗುತ್ತದೆ. ಬೇಯಿಸಿದ ಮಾವಿನ ಕಾಯಿ ತಣ್ಣಗಾದಾಗ, ಅದರ ಸಿಪ್ಪೆ ಹಾಗೂ ಬೀಜವನ್ನು ಬೇರ್ಪಡಿಸಿ. ಉಳಿದ ಭಾಗವನ್ನು ಚೆನ್ನಾಗಿ ಮ್ಯಾಶ್‌ ಮಾಡಿ. ಅದಕ್ಕೆ ಜೀರಿಗೆ, ಕರಿಮೆಣಸು, ಸೈಂದವ ಲವಣ, ಚೆನ್ನಾಗಿ ಕತ್ತರಿಸಿದ ಪುದಿನ ಎಲೆಗಳನ್ನು ಸೇರಿಸಿ ಮಿಕ್ಸಿಯಲ್ಲಿ ತಿರುಗಿಸಿ. ಸಕ್ಕರೆ ನಿಮ್ಮ ಅಗತ್ಯಕ್ಕೆ ತಕ್ಕಂತೆ ಸೇರಿಸಬಹುದು. ನಂತರ ಅದಕ್ಕೆ ಅಗತ್ಯವಿದ್ದಷ್ಟು ನೀರನ್ನು ಸೇರಿಸಿ. ತಣ್ಣಗೆ ಬೇಕಿದ್ದರೆ ಐಸ್‌ ಕ್ಯೂಬ್‌ ಸೇರಿಸಿ ಕುಡಿಯಿರಿ.

ಇದನ್ನೂ ಓದಿ: Healthy Salad Tips: ನೀವು ಸಲಾಡ್‌ ಪ್ರಿಯರೇ? ಸಲಾಡ್‌ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ!

Continue Reading

ಆರೋಗ್ಯ

Healthy Sandwich Spread: ಮನೆಯಲ್ಲೇ ಮಾಡಿ ಕಡಿಮೆ ಕ್ಯಾಲರಿಯ ಆರೋಗ್ಯಕರ ಸ್ಯಾಂಡ್‌ವಿಚ್‌ ಸ್ಪ್ರೆಡ್‌!

ಮಕ್ಕಳಿರುವ ಹೆತ್ತವರಿಗಂತೂ, ವಾರದಲ್ಲಿ ಎರಡು ಸಲವಾದರೂ ಮನೆಯಲ್ಲಿ ಸ್ಯಾಂಡ್‌ವಿಚ್‌ ಮಾಡಬೇಕಾದ ಪ್ರಸಂಗಗಳು ಇದ್ದೇ ಇರುತ್ತವೆ. ಕಚೇರಿ ಕೆಲಸಕ್ಕೆ ಬೇಗ ಹೋಗಬೇಕಾದಾಗ, ಅತೀವ ಕೆಲಸದ ಒತ್ತಡದಲ್ಲಿರುವಾಗ, ಅಡುಗೆ ಮಾಡಲು ಪುರುಸೊತ್ತು, ವ್ಯವಧಾನ ಇರದಿದ್ದಾಗ, ಬೇರೆ ಅಡುಗೆ ಮಾಡಲು ಗೊತ್ತಿಲ್ಲದೇ ಇದ್ದಾಗ, ಏನಾದರೂ ರುಚಿಯಾಗಿ ತಿನ್ನಬೇಕೆಂದು ಬಯಕೆಯಾದಾಗ, ಹೀಗೆ ನಾನಾ ಕಾರಣಗಳಲ್ಲಿ ಸ್ಯಾಂಡ್‌ವಿಚ್‌ ಎಂಬ ತಿನಿಸು ಅಡುಗೆಮನೆಯಲ್ಲಿ ಹೊತ್ತಲ್ಲದ ಹೊತ್ತಿನಲ್ಲೆಲ್ಲ ಪ್ರತ್ಯಕ್ಷವಾಗುತ್ತದೆ. ಮನೆಯಲ್ಲೇ ಮಾಡಬಹುದಾದ ಸ್ಯಾಂಡ್‌ವಿಚ್‌ ಸ್ಪ್ರೆಡ್‌ಗಳ (healthy sandwich spread) ವಿವರ ಇಲ್ಲಿದೆ.

VISTARANEWS.COM


on

Healthy Sandwich Spread
Koo

ಸ್ಯಾಂಡ್‌ವಿಚ್‌ ಎಂಬ ತಿನಿಸು, ಬೆಳಗ್ಗೆ, ಮಧ್ಯಾಹ್ನ ಸಂಜೆ ರಾತ್ರಿಯೆನ್ನದೆ, ಯಾವುದೇ ಹೊತ್ತಿಗೂ ಹೊಟ್ಟೆ ತುಂಬಿಸಬಲ್ಲ ಒಂದು ಸುಲಭವಾದ ತಿನಿಸು. ಅಷ್ಟೇ ರುಚಿಯಾದ ತಿನಸು ಎಂಬುದರಲ್ಲೂ ಎರಡು ಮಾತಿಲ್ಲ. ಮಕ್ಕಳಿರುವ ಹೆತ್ತವರಿಗಂತೂ, ವಾರದಲ್ಲಿ ಎರಡು ಸಲವಾದರೂ ಮನೆಯಲ್ಲಿ ಸ್ಯಾಂಡ್‌ವಿಚ್‌ ಮಾಡಬೇಕಾದ ಪ್ರಸಂಗಗಳು ಇದ್ದೇ ಇರುತ್ತವೆ. ಕಚೇರಿ ಕೆಲಸಕ್ಕೆ ಬೇಗ ಹೋಗಬೇಕಾದಾಗ, ಅತೀವ ಕೆಲಸದ ಒತ್ತಡದಲ್ಲಿರುವಾಗ, ಅಡುಗೆ ಮಾಡಲು ಪುರುಸೊತ್ತು, ವ್ಯವಧಾನ ಇರದಿದ್ದಾಗ, ಬೇರೆ ಅಡುಗೆ ಮಾಡಲು ಗೊತ್ತಿಲ್ಲದೇ ಇದ್ದಾಗ, ಏನಾದರೂ ರುಚಿಯಾಗಿ ತಿನ್ನಬೇಕೆಂದು ಬಯಕೆಯಾದಾಗ, ಹೀಗೆ ನಾನಾ ಕಾರಣಗಳಲ್ಲಿ ಸ್ಯಾಂಡ್‌ವಿಚ್‌ ಎಂಬ ತಿನಿಸು ಅಡುಗೆಮನೆಯಲ್ಲಿ ಹೊತ್ತಲ್ಲದ ಹೊತ್ತಿನಲ್ಲೆಲ್ಲ ಪ್ರತ್ಯಕ್ಷವಾಗುತ್ತದೆ. ಬ್ರೆಡ್‌ ಆರೋಗ್ಯಕ್ಕೆ ಅಷ್ಟೇನೂ ಒಳ್ಳೆಯದಲ್ಲ ಎಂದು ತಿಳಿದಿದ್ದರೂ, ಬಹುತೇಕರ ಮನೆಗಳಲ್ಲಿ ಬ್ರೆಡ್‌ ಬಳಕೆ ಸಾಮಾನ್ಯ. ಈ ಬ್ರೆಡ್‌ ಒಳಗೆ ಮೆಯೋನೀಸ್‌ ಅಥವಾ ಇನ್ನೇನೋ ಅದರೊಳಗೆ ಸುರಿದು ಇನ್ನಷ್ಟು ಅನಾರೋಗ್ಯಕರ ವಾತಾವರಣವನ್ನು ಅಲ್ಲಿ ಸೃಷ್ಟಿಸುವುದು ಬೇಡವೆನಿಸಿದವರೆಲ್ರೂ, ಸ್ಯಾಂಡ್‌ವಿಚ್‌ನಲ್ಲೂ ಆರೋಗ್ಯಕರ ವಿಧಾನಗಳನ್ನು ಹುಡುಕುತ್ತಾರೆ. ಆದರಷ್ಟೂ ಬ್ರೆಡ್‌ ಜೊತೆಗೆ ಒಂದಷ್ಟು ತರಕಾರಿ, ಪ್ರೊಟೀನ್‌, ನೈಸರ್ಗಿಕ ಆಹಾರಗಳು ಹೊಟ್ಟೆ ಸೇರಲಿ ಎಂದು ಬಯಸುತ್ತಾರೆ. ಮಾರುಕಟ್ಟೆಯಲ್ಲಿ ಸಿಗುವ ಬಗೆಬಗೆಯ ಸ್ಪ್ರೆಡ್‌ಗಳು ರುಚಿಕರವಾಗಿ ಕಂಡರೂ, ಅದರಲ್ಲಿರುವ ಆರೋಗ್ಯಕರ ಅಂಶಗಳು ಅಷ್ಟಕ್ಕಷ್ಟೇ ಎಂಬ ಸತ್ಯವೂ ತಿಳಿದಿರುವುದರಿಂದ ಒಂದಿಷ್ಟಿ ಒಳ್ಳೆಯ ಆರೋಗ್ಯಕರ, ಹಾಗೂ ಕಡಿಮೆ ಕ್ಯಾಲರಿಯ ಮನೆಯಲ್ಲೇ ಮಾಡಬಹುದಾದ ಸ್ಯಾಂಡ್‌ವಿಚ್‌ ಸ್ಪ್ರೆಡ್‌ಗಳ ವಿವರ ಇಲ್ಲಿದೆ. ಸಾಕಷ್ಟು ಪೋಷಕಾಂಶವನ್ನು ನೀಡುವ ಈ ಆರೋಗ್ಯಕರ ಸ್ಪ್ರೆಡ್‌ಗಳು (healthy sandwich spread) ಇವು.

Hummus Sandwich Spread

ಹುಮಸ್‌

ಚೆನ್ನಾ, ಎಳ್ಳು ಹಾಗೂ ಆಲಿವ್‌ ಎಣ್ಣೆಯಿಂದ ಮಾಡಬಹುದಾದ ಹುಮಸ್‌, ಪ್ರೊಟೀನ್‌ನಿಂದ ಸಮೃದ್ಧವಾಗಿರುವ ಸ್ಪ್ರೆಡ್‌. ಇದರಲ್ಲಿ ದೇಹಕ್ಕೆ ಅಗತ್ಯವಾದ ಒಳ್ಳೆಯ ಕೊಬ್ಬಿದೆ. ಇದನ್ನು ತಯಾರಿಸಿ, ಸ್ಯಾಂಡ್‌ವಿಚ್‌ ಮಾಡುವಾಗ ಒಳಗೆ ಲೇಪಿಸಿ ಟೊಮೇಟೋ, ಸೌತೆಕಾಯಿ ಇತ್ಯಾದಿಗಳನ್ನೂ ಇಟ್ಟು ಸ್ಯಾಂಡ್‌ವಿಚ್‌ ಮಾಡಬಹುದು.

Avocado Sandwich Spread

ಬೆಣ್ಣೆಹಣ್ಣು

ಅವಕಾಡೋ ಅಥವಾ ಬೆಣ್ಣೆಹಣ್ಣನ್ನು ಸ್ಯಾಂಡ್‌ವಿಚ್‌ ಒಳಗೆ ಸ್ಪ್ರೆಡ್‌ನಂತೆ ಬಳಸಬಹುದು. ರುಚಿಯಾದ ಹಾಗೂ ಅಷ್ಟೇ ಪೋಷಕಾಂಶಯುಕ್ತವೂ ಆಗಿರುವ ಈ ಸ್ಪ್ರೆಡ್‌ ಮಾಡಲು ಬೆಣ್ಣೆಹಣ್ಣಿಗೆ ವಿವಿಧ ಮಿಕ್ಸ್‌ಡ್‌ ಹರ್ಬ್ಸ್‌ ಹಾಗೂ ಮಸಾಲೆಗಳನ್ನು ಬಳಸಬಹುದು. ಸಿಹಿಯಾದ ಹಾಗೂ ಸ್ಪೈಸೀಯಾದ ಸ್ಯಾಂಡ್‌ವಿಚ್‌ಗಳೆರಡಕ್ಕೂ ಇದು ಸೂಕ್ತವಾದ ಆಯ್ಕೆ.

Berries Sandwich Spread

ಬೆರ್ರಿಗಳು

ನಿಮಗೆ ಅಥವಾ ನಿಮ್ಮ ಮಕ್ಕಳಿಗೆ ಸಿಹಿಯಾದ ಸ್ಯಾಂಡ್‌ವಿಚ್‌ ಇಷ್ಟವಾಗುತ್ತಿದ್ದರೆ, ಮಾರುಕಟ್ಟೆಯಿಂದ ಜ್ಯಾಮ್‌ ತಂದು ಸುರಿಯುವ ಬದಲು ಬೆರ್ರಿ ಹಣ್ಣುಗಳನ್ನು ಮ್ಯಾಶ್‌ ಮಾಡಿ ಬಳಸಬಹುದು. ನಿಮಗಿಷ್ಟವಾದ ಬೆರ್ರಿ ಹಣ್ಣುಗಳನ್ನು ಕೊಂಡು ತಂದು ಅವನ್ನೆಲ್ಲ ಮ್ಯಾಶ್‌ ಮಾಡಿ, ಸ್ವಲ್ಪ ಜೇನುತುಪ್ಪ ಸೇರಿಸಿ ಪೇಸ್ಟ್‌ ತರಹ ಮಾಡಿ, ನೈಸರ್ಗಿಕವಾದ ಸಿಹಿಯಾದ ಸ್ಯಾಂಡ್‌ವಿಚ್‌ಗಳನ್ನು ಮಾಡಬಹುದು. ಬೆಳಗಿನ ಹಗುರವಾದ ಉಪಹಾರಕ್ಕೆ ಇದನ್ನು ಮಾಡಬಹುದು.

Peanut Butter Sandwich Spread

ಪೀನಟ್‌ ಬಟರ್‌

ಮಾರುಕಟ್ಟೆಯಿಂದ ದೊಡ್ಡ ಜಾರ್‌ನಲ್ಲಿ ಪೀನಟ್‌ ಬಟರ್‌ ತಂದು ಸ್ಯಾಂಡ್‌ವಿಚ್‌ಗೆ ಸ್ಪ್ರೆಡ್‌ ಮಾಡಿ ಕೊಡುವ ಬದಲು ನೀವೇ ಏಕೆ ಪೀನಟ್‌ ಬಟರನ್ನು ಮನೆಯಲ್ಲಿಯೇ ಮಾಡಬಾರದು? ನೆಲಗಡಲೆಯಿಂದ ಪೀನಟ್‌ ಬಟರ್‌ ಮಾಡಿ ಅದರ ಜೊತೆಗೆ ಬಾಳೆಹಣ್ಣಿನ ತುಣುಕುಗಳನ್ನೂ ಸೇರಿಸಿ ಅದನ್ನು ಸ್ಯಾಂಡ್‌ವಿಚ್‌ ಸ್ಪ್ರೆಡ್‌ ಆಗಿ ಬಳಸಬಹುದು. ಬೇಕಾದರೆ ಜೇನುತುಪ್ಪವನ್ನೂ ಸೇರಿಸಬಹುದು.

Paneer Mayonnaise Sandwich Spread

ಪನೀರ್‌ನ ಮೆಯೋನೀಸ್‌

ನಿಮಗೆ ಮೆಯೋನೀಸ್‌ ಅತ್ಯಂತ ಪ್ರಿಯವಾದ ಸ್ಯಾಂಡ್‌ವಿಚ್‌ ಸ್ಪ್ರೆಡ್‌ ಆಗಿದ್ದರೆ, ನೀವು ಪನೀರ್‌ ಅಥವಾ ಮೊಸರಿನಿಂದ ಇಂತಹ ಸ್ಯಾಂಡ್‌ವಿಚ್‌ ಸ್ಪ್ರೆಡ್‌ ಮಾಡಬಹುದು. ಯಾವುದೇ ಕಷ್ಟವಿಲ್ಲದ, ರುಚಿಯಲ್ಲೂ ರಾಜಿ ಮಾಡಿಕೊಳ್ಳದ ಈ ಸ್ಪ್ರೆಡ್‌ ಮಕ್ಕಳಿಗೂ ಬಹಳ ಪ್ರಿಯವಾಗುತ್ತದೆ. ಮೊಸರಿನ ನೀರನ್ನು ಸಂಪೂರ್ಣವಾಗಿ ಒಂದು ಬಟ್ಟೆಯಲ್ಲಿ ಹಿಂಡಿ ತೆಗೆದು ಅಥವಾ ಪನೀರ್‌ರನ್ನು ಚೆನ್ನಾಗಿ ಮ್ಯಾಶ್‌ ಮಾಡಿ ಅದಕ್ಕೆ ಒಂದಿಷ್ಟು ನೆನೆಸಿದ ಗೋಡಂಬಿ ಹಾಗೂ ಒಂದು ಹಸಿ ಬೆಳ್ಳುಳ್ಳಿಯನ್ನು ಹಾಕಿ ಮಿಕ್ಸಿಯಲ್ಲಿ ರುಬ್ಬಿಕೊಂಡು ಪೇಸ್ಟ್‌ ತಯಾರಿಸಿ. ರುಚಿಗೆ ತಕ್ಕಷ್ಟು ಉಪ್ಪು, ಮಿಕ್ಸ್ಡ್‌ ಹರ್ಬ್ಸ್‌ ಸೇರಿಸಿದರೆ, ಮಾರುಕಟ್ಟೆಯ ಮೆಯೋನೀಸ್‌ಗಳೆಲ್ಲ ಮಕಾಡೆ ಮಲಗಬೇಕು!

ಇದನ್ನೂ ಓದಿ: Heatwave Effect: ಬೇಸಿಗೆಗೂ ಕಣ್ಣಿನ ಸಮಸ್ಯೆಗೂ ಇದೆ ನಂಟು!

Continue Reading

ಆರೋಗ್ಯ

Health Tips For Rainy Season: ಮಳೆಗಾಲ ಶುರುವಾಗಿದೆ, ಅನಾರೋಗ್ಯಕ್ಕೆ ತುತ್ತಾಗದಿರಲು ಈ ಸಲಹೆ ಪಾಲಿಸಿ

ಮಳೆಗಾಲದಲ್ಲಿ ಆರೋಗ್ಯವನ್ನು (Health Tips For Rainy Season) ಕಾಪಾಡಿಕೊಳ್ಳುವುದು ಬಹುಮುಖ್ಯ,. ಇದಕ್ಕಾಗಿ ಕೆಲವೊಂದು ಸಲಹೆಗಳನ್ನು ಪಾಲಿಸುವುದು ಒಳ್ಳೆಯದು. ಆಹಾರ ಮತ್ತು ಆರೋಗ್ಯದ ಕಾಳಜಿ ಹೆಚ್ಚಾಗಿದ್ದರೆ ಈ ಬಾರಿ ಮಳೆಗಾಲವನ್ನು ಸಂತೋಷದಿಂದ ಕಳೆಯಬಹುದು. ಮಳೆಗಾಲದಲ್ಲಿ ಆರೋಗ್ಯವಾಗಿರಲು ಏನು ಮಾಡಬೇಕು? ಇಲ್ಲಿದೆ ಉಪಯುಕ್ತ ಸಲಹೆ.

VISTARANEWS.COM


on

By

Man
Koo

ಮಳೆ ಆರಂಭವಾದಾಗ ಬಿಸಿಬಿಸಿ ಪಕೋಡ, ಚಹಾ, ಕಾಫಿ ಎಲ್ಲವೂ ನೆನಪಾಗುತ್ತದೆ. ಆದರೆ ಮಳೆಗಾಲ (Health Tips For Rainy Season) ಎಂದರೆ ನಾವು ಆರೋಗ್ಯದ (health) ಜೊತೆಜೊತೆಗೆ ಆಹಾರದ (food) ಬಗ್ಗೆಯೂ ಎಚ್ಚರವಹಿಸಬೇಕು. ಮಳೆಗಾಲ (Rainy Season) ಪ್ರಕೃತಿಯಲ್ಲಿ ಉಲ್ಲಾಸಕರ ಅನುಭವವನ್ನು ತುಂಬುವ ಸಮಯ. ಈ ಋತು ಎಲ್ಲರಿಗೂ ಅಚ್ಚುಮೆಚ್ಚಿನದ್ದಾಗಿದೆ.

ಮಳೆಗಾಲದ ಸಮಯದಲ್ಲಿ ಆರೋಗ್ಯದ ಬಗ್ಗೆ ಜಾಗೃತರಾಗಿದ್ದರೆ ರೋಗ ಮತ್ತು ಸೋಂಕುಗಳಿಂದ ದೂರವಿರಬಹುದು. ಇದಕ್ಕೆ ಸಹಾಯ ಮಾಡಲು ಟಾಪ್ 10 ಸಲಹೆಗಳು ಇಲ್ಲಿವೆ.

ಆರೋಗ್ಯದ ಅವಶ್ಯಕತೆಗಳನ್ನು ಅರ್ಥಮಾಡಿಕೊಳ್ಳುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಆರೋಗ್ಯ ಸೇವೆಗಳ ತಜ್ಞರು ಹೇಳುವ ಮಳೆಗಾಲದಲ್ಲಿ ಪಾಲಿಸಬೇಕಾದ ಕೆಲವು ವಿಚಾರಗಳ ಬಗ್ಗೆ ತಿಳಿದುಕೊಳ್ಳೋಣ.


ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ

ಇದು ಮಳೆಗಾಲದಲ್ಲಿ ನಾವು ತೆಗೆದುಕೊಳ್ಳಬೇಕಾದ ಮೊದಲ ಹೆಜ್ಜೆ. ರೋಗನಿರೋಧಕ ಶಕ್ತಿಯ ಕೊರತೆಯಿಂದಾಗಿ ಮಳೆಗಾಲದಲ್ಲಿ ಹೆಚ್ಚಿನ ರೋಗ ಮತ್ತು ಸೋಂಕುಗಳು ಹರಡುತ್ತವೆ. ಅಲ್ಲದೇ ವಾತಾವರಣದಲ್ಲಿ ಅತಿಯಾದ ತೇವಾಂಶದ ಪರಿಣಾಮವಾಗಿ ಕೆಮ್ಮು, ಶೀತ ಮತ್ತು ಜ್ವರ ಕಾಣಿಸಿಕೊಳ್ಳುತ್ತದೆ. ಮಳೆಗಾಲದಲ್ಲಿ ಸಂರಕ್ಷಿತವಾಗಿರಲು ಸೂಪ್‌ಗೆ ಬೆಳ್ಳುಳ್ಳಿಯನ್ನು ಸೇರಿಸುವುದು ಮತ್ತು ಚಹಾಕ್ಕೆ ಶುಂಠಿಯನ್ನು ಸೇರಿಸುವುದು ಮೊದಲಾದವುಗಳನ್ನು ಪ್ರಯತ್ನಿಸಬಹುದು.

ಕಹಿ ತರಕಾರಿಗಳನ್ನು ಸೇವಿಸಿ

ತಜ್ಞರು ಸೂಚಿಸುವಂತೆ ಇದು ಅತ್ಯಗತ್ಯ ಸಲಹೆಯಾಗಿದೆ. ಕೆಲವು ಸಂಸ್ಕೃತಿಯಲ್ಲಿ ಹಾಗಲಕಾಯಿಯಂತಹ ತರಕಾರಿಗಳನ್ನು ತಿನ್ನುವುದು ವಿಶೇಷವಾಗಿ ಮಳೆಗಾಲದಲ್ಲಿ ಸಂಪ್ರದಾಯದ ಒಂದು ಭಾಗವಾಗಿದೆ. ಅಂತಹ ತರಕಾರಿಗಳಿಂದ ನೀವು ಪಡೆಯುವ ಹಲವಾರು ಪ್ರಯೋಜನಗಳಿವೆ ಮತ್ತು ಆದ್ದರಿಂದ ನಿಮ್ಮ ದೈನಂದಿನ ಊಟದಲ್ಲಿ ಅದನ್ನು ಸೇರಿಸಿಕೊಳ್ಳಬೇಕು.

ಕುದಿಸಿದ ನೀರು ಕುಡಿಯಿರಿ

ಮಳೆಗಾಲದಲ್ಲಿ ಕಲುಷಿತ ನೀರಿನಿಂದ ಹಲವಾರು ರೋಗಗಳು ಬರಬಹುದು. ಆದ್ದರಿಂದ ಶುದ್ಧ ಮತ್ತು ಸುರಕ್ಷಿತ ನೀರನ್ನು ಮಾತ್ರ ಕುಡಿಯುತ್ತೀರಿ ಎಂಬುದನ್ನು ಖಚಿತಪಡಿಸಿಕೊಳ್ಳಿ. ಕೆಲವೊಂದು ಕಾಯಿಲೆಗಳನ್ನು ತೊಡೆದುಹಾಕಲು ಮನೆಯಲ್ಲಿ ಕುದಿಸಿ ಆರಿಸಿದ ನೀರು ಬಳಸುವುದು ಉತ್ತಮ ಮಾರ್ಗವಾಗಿದೆ.


ಹಾಲಿನ ಉತ್ಪನ್ನಗಳನ್ನು ಸೇವಿಸಿ

ಮಳೆಗಾಲದಲ್ಲಿ ಹಾಲು ಅಜೀರ್ಣವನ್ನು ಉಂಟುಮಾಡಬಹುದು. ಇದಕ್ಕೆ ಪರ್ಯಾಯವಾಗಿ ಕಾಟೇಜ್ ಚೀಸ್, ತಾಜಾ ಮೊಸರು ಮತ್ತು ಮಜ್ಜಿಗೆಯಂತಹ ಇತರ ಡೈರಿ ಉತ್ಪನ್ನಗಳನ್ನು ಆಯ್ಕೆ ಮಾಡಬಹುದು. ಈ ಉತ್ಪನ್ನಗಳು ಜೀರ್ಣಕ್ರಿಯೆಯನ್ನು ಸುಧಾರಿಸಲು ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಗಿಡಮೂಲಿಕೆ ಚಹಾಗಳನ್ನು ಸೇರಿಸಿ

ಗಿಡಮೂಲಿಕೆಯ ಚಹಾ ಹಲವಾರು ಪ್ರಯೋಜನಗಳನ್ನು ನೀಡುತ್ತದೆ. ಉತ್ತಮ ಆರೋಗ್ಯವನ್ನು ಖಚಿತಪಡಿಸಿಕೊಳ್ಳಲು ಸಾಮಾನ್ಯ ಚಹಾಕ್ಕೆ ಬದಲಾಗಿ ಗಿಡಮೂಲಿಕೆ ಚಹಾಗಳಿಗೆ ಬದಲಾಯಿಸುವ ಸಮಯ. ಇದು ರೋಗನಿರೋಧಕ ಶಕ್ತಿ ಮತ್ತು ಹಸಿವನ್ನು ಹೆಚ್ಚಿಸುವುದು. ಒಂದೆರಡು ದಿನಗಳಲ್ಲೇ ಇದರ ಪರಿಣಾಮ ಗಮನಿಸಬಹುದು.

ಹಣ್ಣುಗಳ ಆಯ್ಕೆ ಮಾಡುವಾಗ ಜಾಗರೂಕರಾಗಿರಿ

ಎಲ್ಲಾ ಹಣ್ಣುಗಳನ್ನು ತಿನ್ನುವುದು ಉತ್ತಮ ಅಭ್ಯಾಸವಾಗಿದೆ. ಯಾಕೆಂದರೆ ಪ್ರತಿಯೊಂದರಿಂದಲೂ ಬಹು ಪೋಷಕಾಂಶಗಳೊಂದಿಗೆ ಪೂರ್ಣ ಪೋಷಣೆಯನ್ನು ಪಡೆಯುತ್ತೀರಿ. ಆದರೂ ಮಳೆಗಾಲದಲ್ಲಿ ಕಲ್ಲಂಗಡಿ ಸೇರಿದಂತೆ ಕೆಲವು ನಿರ್ದಿಷ್ಟ ಹಣ್ಣುಗಳನ್ನು ತ್ಯಜಿಸುವುದು ಒಳ್ಳೆಯದು. ಪೇರಳೆ, ಮಾವಿನ ಹಣ್ಣು, ಸೇಬು, ದಾಳಿಂಬೆ ಮೊದಲಾದ ಹಣ್ಣುಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳಬಹುದು.

ಮಸಾಲೆಯುಕ್ತ ಆಹಾರದಿಂದ ದೂರವಿರಿ

ಮಸಾಲೆಯುಕ್ತ ಆಹಾರಕ್ಕಾಗಿ ಹಂಬಲಿಸುತ್ತಿದ್ದರೆ ಮಳೆಗಾಲದಲ್ಲಿ ಅದನ್ನು ಸೇವಿಸುವುದನ್ನು ನಿರ್ಬಂಧಿಸಬೇಕಾದ ಸಮಯವಾಗಿದೆ. ಇಂತಹ ಆಹಾರಗಳು ಚರ್ಮದ ಅಲರ್ಜಿ ಮತ್ತು ಕಿರಿಕಿರಿಯನ್ನು ಉಂಟು ಮಾಡುತ್ತದೆ. ಬದಲಾಗಿ ಆರೋಗ್ಯಕರ ಸೂಪ್‌ ಮತ್ತು ಕಡಿಮೆ ಅಥವಾ ಮಧ್ಯಮ ಮಸಾಲೆಯುಕ್ತ ಬೆಚ್ಚಗಿನ ಆಹಾರವನ್ನು ಸೇವಿಸಿ.

ನೀರು ನಿಲ್ಲದಂತೆ ಮಾಡಿ

ಮನೆಯ ಸುತ್ತಮುತ್ತ ಮಳೆಯಿಂದ ನಿಂತ ನೀರು ತೀವ್ರ ರೋಗಗಳಿಗೆ ಕಾರಣವಾಗಬಹುದು. ಆದ್ದರಿಂದ ಬಳಕೆಯಾಗದ ಟ್ಯಾಂಕ್, ವಾಟರ್ ಕೂಲರ್ ಮತ್ತು ಹೂವಿನ ಕುಂಡಗಳೊಳಗೆ ನೀರು ನಿಲ್ಲದಂತೆ ಮಾಡಿ. ನೀರಿನ ಮೇಲ್ಮೈಗಳನ್ನು ಸ್ವಚ್ಛವಾಗಿ ಮತ್ತು ಶುಷ್ಕವಾಗಿ ಇಟ್ಟುಕೊಳ್ಳುವುದು ಅಪಾರ ಪ್ರಯೋಜನವನ್ನು ನೀಡುತ್ತದೆ.

ಇದನ್ನೂ ಓದಿ: Hair Growth Tips: ಕೂದಲು ಉದುರುವುದಕ್ಕೆ ಬೀಟಾ ಕ್ಯಾರೊಟಿನ್‌ ಮದ್ದು!


ಸೊಳ್ಳೆ ನಿವಾರಕವನ್ನು ಬಳಸಿ

ಮಳೆಗಾಲದಲ್ಲಿ ಸೊಳ್ಳೆಗಳು ವೇಗವಾಗಿ ಬೆಳೆಯುತ್ತವೆ ಮತ್ತು ಇವು ದೊಡ್ಡ ಆರೋಗ್ಯ ಸಮಸ್ಯೆಗಳನ್ನು ಉಂಟು ಮಾಡಬಹುದು. ಈ ಸಮಯದಲ್ಲಿ ರೂಮ್ ಫ್ರೆಶ್ನರ್, ಸೌಮ್ಯವಾದ ಮಾರ್ಜಕ ಮತ್ತು ಸುಗಂಧ ದ್ರವ್ಯಗಳಂತಹ ಸೊಳ್ಳೆ ನಿವಾರಕಗಳು ಅತ್ಯಗತ್ಯವಾಗಿರುತ್ತದೆ.

ಛತ್ರಿ ಮತ್ತು ರೈನ್‌ಕೋಟ್‌ಗಳನ್ನು ಒಯ್ಯಿರಿ

ಮನೆಯಿಂದ ಹೊರಗೆ ಹೋಗುವಾಗ ಮಳೆಗಾಲದಲ್ಲಿ ಅಗತ್ಯವಿರುವ ಛತ್ರಿ ಅಥವಾ ರೈನ್ ಕೋಟ್ ಅಥವಾ ಎರಡನ್ನೂ ಒಯ್ಯಲು ಪ್ರಯತ್ನಿಸಿ. ಶೀತ, ಕೆಮ್ಮು, ಜ್ವರ ಮತ್ತು ಜ್ವರದಂತಹ ಕಾಯಿಲೆಗಳನ್ನು ತಪ್ಪಿಸಲು ನಿಮ್ಮನ್ನು ಶುಷ್ಕ, ತಾಜಾ ಮತ್ತು ಸ್ವಚ್ಛವಾಗಿರಿಸಿಕೊಳ್ಳುವುದು ಉತ್ತಮ ಮಾರ್ಗವಾಗಿದೆ.

Continue Reading

ಆಹಾರ/ಅಡುಗೆ

Healthy Salad Tips: ನೀವು ಸಲಾಡ್‌ ಪ್ರಿಯರೇ? ಸಲಾಡ್‌ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ!

ಕೆಲವು ಬಗೆಯ ಹಣ್ಣುಗಳು, ಒಣಬೀಜಗಳು, ಒಣಹಣ್ಣುಗಳು, ಹಸಿ ತರಕಾರಿಗಳು, ಮೊಳಕೆ ಕಾಳುಗಳು, ಬೇಯಿಸಿದ ಕಾಳುಗಳು ಹೀಗೆ ಹತ್ತು ಹಲವು ಬಗೆಯ ಕಾಂಬಿನೇಶನ್ನಿನ ಸಲಾಡ್‌ಗಳನ್ನು ನಿತ್ಯವೂ ತಯಾರಿಸಬಹುದು. ಕಡಿಮೆ ಕ್ಯಾಲರಿಯ, ಪ್ರೊಟೀನ್‌ ಹಾಗೂ ಸಾಕಷ್ಟು ಪೋಷಕಾಂಶಗಳನ್ನು ನಮ್ಮ ದೇಹಕ್ಕೆ ಒದಗಿಸಬಲ್ಲ ಆಹಾರವಾದ ಈ ಸಲಾಡ್‌ಗಳು ಆರೋಗ್ಯಕರ ಎಂಬುದರಲ್ಲಿ ಎರಡು ಮಾತೇ ಇಲ್ಲ. ಹಸಿವಾದಾಗ ತಕ್ಷಣ ಹಸಿವು ಕಡಿಮೆ ಮಾಡಬಲ್ಲ ಆಪದ್ಬಾಂಧವ ಕೂಡಾ ಈ ಸಲಾಡ್‌ಗಳೇ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಈ ಆರೋಗ್ಯ ವರ್ಧಿಸುವ ಸಲಾಡ್‌ಗಳನ್ನು ಮಾಡುವ ಸಮಯದಲ್ಲಿ (healthy salad tips) ಕೆಲವು ತಪ್ಪುಗಳನ್ನು ಮಾಡುವ ಅಪಾಯವೂ ಇದೆ.

VISTARANEWS.COM


on

Healthy Salad Tips
Koo

ಪೋಷಕಾಂಶಯುಕ್ತ ಆಹಾರ ಎಂದಾಕ್ಷಣ ಸುಲಭವಾಗಿ ನೆನಪಿಗೆ ಬರುವುದು ಸಲಾಡ್‌ಗಳು. ಸುಲಭವಾಗಿ ಮಾಡಬಹುದಾದ, ಹೆಚ್ಚೂ ಶ್ರಮ ಬೇಡದ, ಬೇಗ ಹೊಟ್ಟೆ ತುಂಬಿಸುವ ಗುಣ ಉಳ್ಳ ಸಲಾಡ್‌ಗಳು ತೂಕ ಇಳಿಸುವ ಮಂದಿಯ ಪರಮಾಪ್ತ ಸ್ನೇಹಿತನಂತೆ. ಕಚೇರಿಗಳಿಗೆ ಬಿಡು ಹೊತ್ತಿನಲ್ಲಿ ತಿನ್ನಬಹುದಾದ ಸ್ನ್ಯಾಕ್‌ಗಳ ಬದಲಿಗೂ ಈ ಸಲಾಡ್‌ಗಳು ಅನೇಕರಿಗೆ ಸುಲಭವಾಗಿ ಮಾಡಬಹುದಾದ ಆಹಾರವೇ ಆಗಿದೆ. ಕೆಲವು ಬಗೆಯ ಹಣ್ಣುಗಳು, ಒಣಬೀಜಗಳು, ಒಣಹಣ್ಣುಗಳು, ಹಸಿ ತರಕಾರಿಗಳು, ಮೊಳಕೆ ಕಾಳುಗಳು, ಬೇಯಿಸಿದ ಕಾಳುಗಳು ಹೀಗೆ ಹತ್ತು ಹಲವು ಬಗೆಯ ಕಾಂಬಿನೇಶನ್ನಿನ ಸಲಾಡ್‌ಗಳನ್ನು ನಿತ್ಯವೂ ತಯಾರಿಸಬಹುದು. ಕಡಿಮೆ ಕ್ಯಾಲರಿಯ, ಪ್ರೊಟೀನ್‌ ಹಾಗೂ ಸಾಕಷ್ಟು ಪೋಷಕಾಂಶಗಳನ್ನು ನಮ್ಮ ದೇಹಕ್ಕೆ ಒದಗಿಸಬಲ್ಲ ಆಹಾರವಾದ ಈ ಸಲಾಡ್‌ಗಳು ಆರೋಗ್ಯಕರ ಎಂಬುದರಲ್ಲಿ ಎರಡು ಮಾತೇ ಇಲ್ಲ. ಹಸಿವಾದಾಗ ತಕ್ಷಣ ಹಸಿವು ಕಡಿಮೆ ಮಾಡಬಲ್ಲ ಆಪದ್ಬಾಂಧವ ಕೂಡಾ ಈ ಸಲಾಡ್‌ಗಳೇ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಈ ಆರೋಗ್ಯ ವರ್ಧಿಸುವ ಸಲಾಡ್‌ಗಳನ್ನು ಮಾಡುವ ಸಮಯದಲ್ಲಿ ಕೆಲವು ತಪ್ಪುಗಳನ್ನು ಮಾಡುವ ಅಪಾಯವೂ ಇದೆ. ಬನ್ನಿ, ನೀವು ಸಲಾಡ್‌ಗಳನ್ನು ಮಾಡುವ ಸಂದರ್ಭ ಈ ಕೆಳಗಿನ ತಪ್ಪುಗಳನ್ನು ಮಾಡುತ್ತಿದ್ದೀರಿ ಎಂದಾದಲ್ಲಿ, ಆರೋಗ್ಯಕ್ಕೆ ಒಳಿತಾಗುವ ರೀತಿಯಲ್ಲಿ ತಿದ್ದಿಕೊಳ್ಳಿ. ಬನ್ನಿ, ಸಲಾಡ್‌ ಮಾಡುವ ಸಮಯದಲ್ಲಿ ಸಾಮಾನ್ಯವಾಗಿ (healthy salad tips) ಮಾಡುವ ತಪ್ಪುಗಳೇನು ಎಂಬುದನ್ನು ನೋಡೋಣ.

Greek Salad

ಡ್ರೆಸ್ಸಿಂಗ್‌ ಅತಿಯಾಗಿ ಮಾಡುವುದು

ಹೌದು, ಸಲಾಡ್‌ ಎಂದಾಕ್ಷಣ ಡ್ರೆಸ್ಸಿಂಗ್‌ ಸಹಜ. ಯಾಕೆಂದರೆ ಸಲಾಡ್‌ಗೆ ಒಂದು ರುಚಿಯನ್ನು ನೀಡುವುದೇ ಈ ಡ್ರೆಸ್ಸಿಂಗ್‌. ಆದರೆ, ಅತಿಯಾದ ಡ್ರೆಸ್ಸಿಂಗ್‌ ಮಾಡುವುದರಿಂದ ಸಲಾಡ್‌ನಲ್ಲಿ ಕೊಬ್ಬು ಜಾಸ್ತಿಯಾಗಬಹುದು. ಹೆಚ್ಚು ಕ್ಯಾಲರಿ ಸೇರಿಕೊಳ್ಳಬಹುದು. ಕೇವಲ ರುಚಿಗೆ ತಕ್ಕಷ್ಟೇ ಡ್ರೆಸ್ಸಿಂಗ್‌ ಮಾಡಿ.

ತರಕಾರಿಗಳನ್ನು ತೊಳೆಯದೆ ಇರುವುದು

ಹಸಿಯಾದ ತರಕಾರಿಗಳನ್ನು ಹಾಗೆಯೇ ಸಲಾಡ್‌ಗೆ ಬಳಸುವುದರಿಂದ ತರಕಾರಿಗಳನ್ನು ತೊಳೆಯುವುದು ಅತ್ಯಂತ ಮುಖ್ಯವಾದ ಘಟ್ಟ. ಹಾಗಾಗಿ ತರಕಾರಿಗಳನ್ನು ಒಮ್ಮೆ ಉಪ್ಪು ನೀರಿನಲ್ಲಿ ಹಾಕಿಟ್ಟು ತೊಳೆಯುವುದನ್ನು ರೂಢಿ ಮಾಡಿಕೊಳ್ಳಿ. ಯಾಕೆಂದರೆ ಇಲ್ಲಿ ತರಕಾರಿ ಬೇಯುವುದಿಲ್ಲವಾದ್ದರಿಂದ ಕೆಲವು ರಾಸಾಯನಿಕಗಳು ತರಕಾರಿಗೆ ಸಿಂಪಡಿಸಲ್ಪಟ್ಟದ್ದು ಹಾಗೆಯೇ ಉಳಿದಿರುವ ಸಾಧ್ಯತೆಯೂ ಇದೆ. ಹಾಗಾಗಿ, ತರಕಾರಿಯನ್ನು ಎರಡೆರಡು ಬಾರಿ ತೊಳೆದುಕೊಂಡು ಬಳಸಿ.

ಇದನ್ನೂ ಓದಿ: Which Type Of Roti Is Best: ಯಾರಿಗೆ ಯಾವ ರೊಟ್ಟಿ ಸೂಕ್ತ? ತಿನ್ನುವ ಮೊದಲು ತಿಳಿದುಕೊಂಡಿರಿ!

ಅತಿಯಾಗಿ ತರಕಾರಿಗಳನ್ನು ಬಳಸುವುದು

ಸಲಾಡ್‌ ಎಂದಾಕ್ಷಣ ಬೇಕಾದ ಹಾಗೆ ತರಕಾರಿಗಳನ್ನು ಬಳಸಬಹುದು ಎಂಬ ನಿಮ್ಮ ಎಣಿಕೆಯಾಗಿದ್ದರೆ ಅದು ತಪ್ಪು. ತರಕಾರಿಗಳ ಸಂಖ್ಯೆಯೂ ಅತಿಯಾಗಬಾರದು. ಒಂದಕ್ಕೊಂದು ಹೊಂದಿಕೊಳ್ಳುವ ಮೂರ್ನಾಲ್ಕು ಬಗೆಯ ತರಕಾರಿಗಳಿಗಿಂತ ಹೆಚ್ಚು ಬಳಸಬೇಡಿ. ತರಕಾರಿಗಳು ಅತಿಯಾದರೆ, ಅವು ಹಸಿಯಾಗಿರುವುದರಿಂದ ಇವು ಗ್ಯಾಸ್‌ನಂತಹ ಸಮಸಯೆಯನ್ನು ತಂದೊಡ್ಡಬಹುದು. ಜೀರ್ಣದ ಸಮಸ್ಯೆಗಳೂ ತಲೆದೋರಬಹುದು. ಕೆಲವರಿಗೆ ಹಸಿ ತರಕಾರಿಗಳು ಕರಗುವುದಿಲ್ಲ. ಇಂಥ ಮಂದಿ ತರಕಾರಿಗಳನ್ನು ಸ್ವಲ್ಪ ಬೇಯಿಸಿಕೊಂಡು ತಿನ್ನಬಹುದು. ಹೀಗೆ ಮಾಡುವುದರಿಂದ ಜೀರ್ಣ ಸಮಸ್ಯೆಗಳು ಬರದು.

Continue Reading
Advertisement
Arvind Kejriwal
ದೇಶ21 mins ago

Arvind Kejriwal: ಮಧ್ಯಂತರ ಜಾಮೀನು ಅವಧಿ ಮುಗಿದು ಜೈಲಿಗೆ ಮರಳಿದ ಅರವಿಂದ್‌ ಕೇಜ್ರಿವಾಲ್‌; ಜೂ. 5ರ ತನಕ ನ್ಯಾಯಾಂಗ ಬಂಧನ

Bangalore North Lok Sabha Constituency
ದೇಶ25 mins ago

Bangalore North Lok Sabha Constituency : ಕ್ಷೇತ್ರ ಬದಲಾಯಿಸಿದ ಶೋಭಾ ಕರಂದ್ಲಾಜೆಗೆ ಒಲಿಯವುದೇ ಬೆಂಗಳೂರು ಉತ್ತರ

Congress leader Celebration
ಕರ್ನಾಟಕ28 mins ago

Congress leader Celebration: ತಲ್ವಾರ್ ಹಿಡಿದು ಕೇಕ್ ಕಟ್ ಮಾಡಿದ ಕಾಂಗ್ರೆಸ್‌ ಮುಖಂಡ; ವಿಡಿಯೊ ವೈರಲ್‌

Karnataka Weather Forecast
ಮಳೆ1 hour ago

Karnataka Weather : ಕೋಲಾರದಲ್ಲಿ ಅಬ್ಬರಿಸಿದ ವರುಣ; ಒಳನಾಡಿನಲ್ಲಿ ತಾಪಮಾನ ಇಳಿಕೆ

Exit Polls
ವಾಣಿಜ್ಯ1 hour ago

Exit Polls: ಚುನಾವಣೋತ್ತರ ಸಮೀಕ್ಷೆ ಪ್ರಕಟವಾದ ಬೆನ್ನಲ್ಲೇ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಜಿಗಿತ ಸಾಧ್ಯತೆ

Raichur Lok Sabha Constituency
ರಾಯಚೂರು1 hour ago

Raichur Lok Sabha Constituency: ರಾಯಚೂರಿನಲ್ಲಿ ನಾಯಕರ ನಡುವಿನ ಕಾಳಗದಲ್ಲಿ ಯಾರು ರಾಜ?

Accident Case
ಕ್ರೈಂ2 hours ago

Accident Case : ಕರೆಂಟ್‌ ಶಾಕ್‌ಗೆ ಕಂಬದಲ್ಲೇ ಕಾರ್ಮಿಕನ ನರಳಾಟ; ಭೀಕರ ಅಪಘಾತಕ್ಕೆ ಇಬ್ಬರು ಬಲಿ

Lok Sabha Election 2024
ಕರ್ನಾಟಕ2 hours ago

Lok Sabha Election 2024: ಮೈಸೂರು ಕ್ಷೇತ್ರದಲ್ಲಿ ಗೆಲುವು ಯಾರಿಗೆ? ಶ್ವಾನದಿಂದ ಅಚ್ಚರಿಯ ಭವಿಷ್ಯ!

Aam Panna Recipe
ಆಹಾರ/ಅಡುಗೆ2 hours ago

Aam Panna Recipe: ಆಮ್‌ ಪನ್ನಾ! ಮಾವಿನಕಾಯಿಯ ಅದ್ಭುತ ಪೇಯ ಇದು; ನೀವೂ ಮಾಡಿ ನೋಡಿ

Arvind Kejriwal
ದೇಶ2 hours ago

Arvind Kejriwal: ತಿಹಾರ್‌ ಜೈಲಿಗೆ ಮರಳಿದ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌; ಜೂ. 5ರಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ8 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 day ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌