Site icon Vistara News

Sirsi News: ದಲಿತ ಸಿಎಂ ಮಾಡಲು ಇನ್ನೂ ಕಾಲ ಕೂಡಿ ಬಂದಿಲ್ಲ: ಸಚಿವ ಸತೀಶ್ ಜಾರಕಿಹೊಳಿ

Minister Satish Jarakiholi latest Statement at sirsi

ಶಿರಸಿ: ರಾಜ್ಯದಲ್ಲಿ ದಲಿತ ಸಿಎಂ ಮಾಡಲು ಇನ್ನೂ ಕಾಲ ಕೂಡಿ ಬಂದಿಲ್ಲ. ಕಾಲ ಬಂದಾಗ ಹೇಳುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಶಿರಸಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಲಿತ ಸಿಎಂ ಮಾಡುವ ಬಗ್ಗೆ ಪಕ್ಷಕ್ಕೆ ನಮ್ಮ ನಿರ್ಧಾರ ಹೇಳಬಹುದು ಅಷ್ಟೇ, ನಿರ್ಧಾರ ಹೈಕಮಾಂಡ್ ಮಾಡಬೇಕು ಎಂದು ತಿಳಿಸಿದರು.

ಇನ್ನು ಬಿ.ಕೆ. ಹರಿಪ್ರಸಾದ್ ಅವರನ್ನು ಪಕ್ಷ ಕಡಗಣನೆ ಕುರಿತು ಮಾತನಾಡಿದ ಅವರು, ಪಕ್ಷ ಕಡೆಗಣನೆ ಮಾಡುವ ಪ್ರಶ್ನೆಯೇ ಇಲ್ಲ,ಅವರನ್ನು ಯಾರೂ ಕೆಳಗಿಳಿಸುವ ಪ್ರಶ್ನೆ ಇಲ್ಲ, ನಾವು ಅವರ ಜತೆ ಚರ್ಚೆ ಮಾಡಿದ್ದೇವೆ. ಬಹಳಷ್ಟು ಹಿರಿಯ ನಾಯಕರಿಗೆ ಸ್ಥಾನ ನೀಡಿಲ್ಲ, ಅವಕಾಶ ಬಂದಾಗ ಅವರಿಗೆ ಸ್ಥಾನಮಾನ ನೀಡುತ್ತಾರೆ. ಇನ್ನು ನಿಗಮ ಮಂಡಳಿಗೆ 25 ಜನ ಶಾಸಕರಿಗೆ ಸ್ಥಾನ ನೀಡುತ್ತಿದ್ದಾರೆ. ಚುನಾವಣೆ ಮುಗಿದ ನಂತರ ಇನ್ನಷ್ಟು ಜನರಿಗೆ ನೀಡುತ್ತಾರೆ, ಎಲ್ಲರಿಗೂ ಸಮಾಧಾನ ಮಾಡಲು ಅವಕಾಶ ಇದೆ, ಅಸಮಾಧಾನ ಆಗುವ ಪ್ರಶ್ನೆ ಇಲ್ಲ ಎಂದರು.

ಇದನ್ನೂ ಓದಿ: Tsunami Warning: 7.6 ತೀವ್ರತೆಯ ಭೂಕಂಪ; ಭೀಕರ ಸುನಾಮಿಯ ವಾರ್ನಿಂಗ್‌!

ಇನ್ನು ಗುತ್ತಿಗೆದಾರರಿಗೆ ಪ್ರಾಮುಖ್ಯತೆ ಮೇಲೆ ಹಂತ ಹಂತವಾಗಿ ಹಣ ಬಿಡುಗಡೆ ಮಾಡುತ್ತೇವೆ. ಹಿಂದಿನ ಸರ್ಕಾರ ಅನುದಾನಕ್ಕಿಂತ ಹೆಚ್ಚಿಗೆ ಕಾಮಗಾರಿ ಮಂಜೂರು ಮಾಡಿದ್ದರಿಂದ ಸಮಸ್ಯೆಯಾಗಿದೆ ಎಂದರು.

Exit mobile version