Site icon Vistara News

Sirsi News | ಸಂಸ್ಕೃತ ಭಾಷಣ ಸ್ಪರ್ಧೆ: ಸೋಂದಾ ಸ್ವರ್ಣವಲ್ಲಿಯ ಶ್ರೀ ರಾಜರಾಜೇಶ್ವರಿ ಸಂಸ್ಕೃತ ಕಾಲೇಜಿನ ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ

Sanskrit speech competition sirsi

ಶಿರಸಿ: ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯಮಟ್ಟದ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ಶಿರಸಿ (Sirsi News) ಸೋಂದಾ ಸ್ವರ್ಣವಲ್ಲಿಯ ಶ್ರೀ ರಾಜರಾಜೇಶ್ವರಿ ಸಂಸ್ಕೃತ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ವೇದಭಾಷ್ಯ ಭಾಷಣ ಸ್ಪರ್ಧೆಯಲ್ಲಿ ಮಹೇಶ ಭಟ್ ಹಿತ್ಲಕಾರ ಗದ್ದೆ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಧರ್ಮ ಶಾಸ್ತ್ರದ ಭಾಷಣ ಸ್ಪರ್ಧೆಯಲ್ಲಿ ಸುಬ್ರಹ್ಮಣ್ಯ ಗಾಂವ್ಕರ್ ದ್ವಿತೀಯ ಹಾಗೂ ಈಶ್ವರ ಭಟ್ಟ ತೃತೀಯ ಸ್ಥಾನ ಪಡೆದಿರುತ್ತಾರೆ. ಡಾ. ವಿನಾಯಕ ಭಟ್ ಗುಂಜುಗೋಡು ಹಾಗೂ ಡಾ. ಮಹಾಬಲೇಶ್ವರ ಭಟ್ಟ ಕಿರುಕುಂಭತ್ತಿ ಅವರ ಮಾರ್ಗದರ್ಶನದಲ್ಲಿ ಮಾಡಿದ ವಿದ್ಯಾರ್ಥಿಗಳ ಸಾಧನೆಗೆ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತೀ ಶ್ರೀಗಳು, ಆಡಳಿತ ಮಂಡಳಿ ಸಮಿತಿಯವರು, ಪ್ರಾಚಾರ್ಯರು ಹಾಗೂ ಎಲ್ಲ ಅಧ್ಯಾಪಕರು ಸಂತೋಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | Santro Ravi case | ಸ್ಯಾಂಟ್ರೋ ರವಿ, ಸೈಕಲ್‌ ರವಿ ಬಿಜೆಪಿ ಸರ್ಕಾರದ ಮುತ್ತು, ರತ್ನಗಳಿದ್ದಂತೆ ಎಂದ ಡಿಕೆಶಿ

Exit mobile version