Site icon Vistara News

ACCIDENT | ಯಾದಗಿರಿಯಲ್ಲಿ ಭೀಕರ ಅಪಘಾತ, ಒಂದೇ ಕುಟುಂಬದ ಆರು ಮಂದಿ ಸಾವು

accident

ಯಾದಗಿರಿ: ಯಾದಗಿರಿ ಜಿಲ್ಲೆಯ ಗುರಮಿಠಕಲ್ ತಾಲೂಕಿನ ಅರಕೇರಾ(ಕೆ) ಬಳಿ ಗುರುವಾರ ತಡರಾತ್ರಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿದ್ದಾರೆ. ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ, ಉಳಿದ ಮೂವರು ಆಸ್ಪತ್ರೆಯಲ್ಲಿ ಕೊನೆಯ ಉಸಿರೆಳೆದರು.

ಮೃತರೆಲ್ಲರೂ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಗ್ರಾಮದವರು. ತೆಲಂಗಾಣದ ಕೊಡಂಗಲ್ ಸಮೀಪದ ದರ್ಗಾಕ್ಕೆ ತೆರಳಿದ್ದ ಇವರು ಮನೆಗೆ ಮರಳುವ ವೇಳೆ ಘಟನೆ ನಡೆದಿದೆ. ಇವರ ಕಾರು ಮತ್ತು ೪೦೭ ಲಾರಿ ನಡುವೆ ಅಪಘಾತ ಸಂಭವಿಸಿದೆ.

ಮಹ್ಮದ್ ವಾಜೀದ್ ಹುಸೇನ್(39), ಮಹ್ಮದ್ ಮಜರ್ ಹುಸೇನ್(79), ನೂರ್ ಜಹಾನ್ ಬೇಗಂ(70), ಹೀನಾ ಬೇಗಂ(30), ಇಮ್ರಾನ್(22) ಮೃತಪಟ್ಟಿದ್ದಾರೆ.

ಇವರು ಕೊಡಂಗಲ್‌ ದರ್ಗಾದಲ್ಲಿ ಜವಳ ಕಾರ್ಯಕ್ರಮಕ್ಕೆಂದು ಹೋಗಿದ್ದವರು. ಮೃತರಲ್ಲಿ ಒಂದು ವರ್ಷದ ಪುಟ್ಟ ಹೆಣ್ಣು ಮಗುವೂ ಸೇರಿದೆ. ಒಬ್ಬ ಬಾಲಕ ಗಂಭೀರ ಗಾಯಗೊಂಡಿದ್ದು, ಆತನನ್ನು ಕಲಬುರಗಿಯ ಜಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಯಾದಗಿರಿ ಎಸ್ಪಿ ಡಾ.ಸಿ.ಬಿ.ವೇದಮೂರ್ತಿ‌, ಪಿಐ ದೌವಲತ್ ಕುರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ| Bike Accident | ಮೂರು ಪ್ರತ್ಯೇಕ ಅಪಘಾತ; ಮೂವರು ಸ್ಥಳದಲ್ಲೇ ಸಾವು

Exit mobile version