Boy death | ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ ಅಳವಡಿಸಲು ತೆಗೆದಿದ್ದ ಗುಂಡಿಗೆ ಬಿದ್ದು ಬಾಲಕ ಸಾವು - Vistara News

ಕರ್ನಾಟಕ

Boy death | ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ ಅಳವಡಿಸಲು ತೆಗೆದಿದ್ದ ಗುಂಡಿಗೆ ಬಿದ್ದು ಬಾಲಕ ಸಾವು

ಅವನು ಅಜ್ಜ- ಅಜ್ಜಿ ಜತೆ ಪೇಟೆಗೆ ಬಂದಿದ್ದ. ಅವರಿಬ್ಬರು ಆಧಾರ್‌ ಕಾರ್ಡ್‌ ಮಾಡಿಸುತ್ತಿದ್ದರು. ಅವನು ಆಟವಾಡುತ್ತಿದ್ದ. ಒಮ್ಮಿಂದೊಮ್ಮೆಗೇ ಮಾಯವಾದ ಆ ಹುಡುಗ ಸಿಕ್ಕಿದ್ದು ಹೆಣವಾಗಿ.

VISTARANEWS.COM


on

ಗಗನ್‌ ಸಾವು
ಮೃತ ಪಟ್ಟ ಬಾಲಕ ಗಗನ್‌ ಮತ್ತು ಆತ ಶವವಾಗಿ ಪತ್ತೆಯಾದ ಗುಂಡಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ ಅಳವಡಿಸಲು ತೆಗೆದಿದ್ದ ಗುಂಡಿಗೆ ಬಿದ್ದು ಬಾಲಕನೊಬ್ಬ ಮೃತಪಟ್ಟ ದಾರುಣ ಘಟನೆ (Boy death) ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದ ಕೋಟೆ ರಸ್ತೆಯಲ್ಲಿ ನಡೆದಿದೆ. ಗಗನ್ ಎಂಬ ಆರು ವರ್ಷದ ಬಾಲಕ ಮೃತ ದುರ್ದೈವಿ.

ಗಗನ್‌ನ ಅಜ್ಜ-ಅಜ್ಜಿ ಆಧಾರ್‌ ಕಾರ್ಡ್‌ ಮಾಡಿಸಲೆಂದು ಹೊಳೆ ನರಸೀಪುರ ಪಟ್ಟಣಕ್ಕೆ ಬಂದಿದ್ದರು. ಗಗನ್‌ ತಾನೂ ಬರುವುದಾಗಿ ಹಠ ಹಿಡಿದಿದ್ದ. ಹೀಗಾಗಿ ಅವನನ್ನೂ ಜತೆಗೆ ಕರೆದುಕೊಂಡು ಬಂದಿದ್ದರು. ಅಜ್ಜ, ಅಜ್ಜಿ ಆಧಾರ್‌ ಕಾರ್ಡ್ ಮಾಡಿಸುತ್ತಿದ್ದಾಗ ಹೊರಗಡೆ ಆಟವಾಡುತ್ತಿದ್ದ ಗಗನ್ ಒಮ್ಮಿಂದೊಮ್ಮೆಗೇ ನಾಪತ್ತೆಯಾಗಿದ್ದ.

ಆಧಾರ್‌ಕಾರ್ಡ್ ಮಾಡಿಸಿ ಹೊರ ಬಂದು ನೋಡಿದಾಗ ಗಗನ್‌ ಕಾಣಲಿಲ್ಲ ಎಂದು ಅಜ್ಜ- ಅಜ್ಜಿ ಇಬ್ಬರೂ ಅಲ್ಲಿಲ್ಲಿ ಹುಡುಕಾಡಿದರು. ಈ ವೇಳೆ ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ ಗಾಗಿ ತೆಗೆದಿದ್ದ ಗುಂಡಿಯಲ್ಲಿ ಗಗನ್ ಶವ ಪತ್ತೆಯಾಗಿದೆ. ಗಗನ್‌ ಆಟವಾಡುವಾಗ ಆಯತಪ್ಪಿ ಗುಂಡಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

ಅಮ್ಮನಿಲ್ಲದ ತಬ್ಬಲಿ ಮಗು
ಗಗನ್‌ನ ತಾಯಿ ಆತನ ಬಾಲ್ಯದಲ್ಲೇ ತೀರಿಕೊಂಡಿದ್ದು ಅಜ್ಜ- ಅಜ್ಜಿಯ ಪ್ರೀತಿಯಲ್ಲಿ ಬೆಳೆದಿದ್ದ. ಗಗನ್‌ನ ತಂದೆ ಮಿಲಿಟರಿಯಲ್ಲಿ ಕರ್ತವ್ಯದಲ್ಲಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Road Accident | ಬೊಲೆರೊ ವಾಹನ ಬೈಕ್‌ಗೆ ಡಿಕ್ಕಿ, ಶಿಕ್ಷಕ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Shivamogga News: ಶಿವಮೊಗ್ಗದಲ್ಲಿ ಆಂಬುಲೆನ್ಸ್-ಬೈಕ್‌ ಡಿಕ್ಕಿ; ಸ್ಥಳದಲ್ಲೇ ಮೂವರ ಸಾವು

Shivamogga News: ಶಿವಮೊಗ್ಗದಿಂದ ಹಾವೇರಿ ಕಡೆ ಆಂಬುಲೆನ್ಸ್‌ ತೆರಳುತ್ತಿತ್ತು. ಇದೇ ವೇಳೆ ಶಿಕಾರಿಪುರ ಕಡೆಯಿಂದ ಜೋಗದ ಕಡೆ ತೆರಳುತ್ತಿದ್ದ ಬೈಕ್‌, ತರಲಘಟ್ಟ ಗ್ರಾಮದ ಬಳಿ ಆಂಬುಲೆನ್ಸ್‌ಗೆ ಡಿಕ್ಕಿಯಾಗಿದೆ. ಮೃತರನ್ನು ಜೋಗದ ನಿವಾಸಿಗಳು ಎಂಬುದಾಗಿ ಗುರುತಿಸಲಾಗಿದೆ.

VISTARANEWS.COM


on

Shivamogga News
Koo

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ಶುಕ್ರವಾರ (ಜೂನ್‌ 28) ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಂಬುಲೆನ್ಸ್‌ ಹಾಗೂ ಬೈಕ್‌ ಡಿಕ್ಕಿಯಾಗಿದ್ದು, ಮೂವರು ಬೈಕ್‌ ಸವಾರರು ಮೃತಪಟ್ಟಿದ್ದಾರೆ. ಮೃತರನ್ನು ಪ್ರಸನ್ನ (25), ಕಾರ್ತಿಕ್ (27), ಅಜಯ್ (25) ಎಂಬುದಾಗಿ ಗುರುತಿಸಲಾಗಿದೆ. ವೇಗವಾಗಿ ಚಲಿಸುತ್ತಿದ್ದ ಬೈಕ್‌, ಸವಾರನ ನಿಯಂತ್ರಣ ತಪ್ಪಿ ಆಂಬುಲೆನ್ಸ್‌ಗೆ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.

ತಡರಾತ್ರಿ ಶಿವಮೊಗ್ಗದಿಂದ ಹಾವೇರಿ ಕಡೆ ಆಂಬುಲೆನ್ಸ್‌ ತೆರಳುತ್ತಿತ್ತು. ಇದೇ ವೇಳೆ ಶಿಕಾರಿಪುರ ಕಡೆಯಿಂದ ಜೋಗದ ಕಡೆ ತೆರಳುತ್ತಿದ್ದ ಬೈಕ್‌, ತರಲಘಟ್ಟ ಗ್ರಾಮದ ಬಳಿ ಆಂಬುಲೆನ್ಸ್‌ಗೆ ಡಿಕ್ಕಿಯಾಗಿದೆ. ಮೃತರನ್ನು ಜೋಗದ ನಿವಾಸಿಗಳು ಎಂಬುದಾಗಿ ಗುರುತಿಸಲಾಗಿದೆ. ಸ್ಥಳಕ್ಕೆ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಜಿರೆಯಲ್ಲಿ ಅಪಘಾತ; ಉದ್ಯಮಿ ಪುತ್ರನ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಜಿರೆ ಉದ್ಯಮಿ ಎಂ.ಆರ್‌.ನಾಯಕ್‌ ಅವರ ಪುತ್ರ ಪ್ರಜ್ವಲ್‌ ಮೃತಪಟ್ಟಿದ್ದಾರೆ. ಉಜಿರೆ ಬಳಿಕ ಕಾರು ವೇಗವಾಗಿ ಚಲಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ್ದು, ಡಿವೈಡರ್‌ ಮೇಲೇರಿ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿದೆ. ಶನಿವಾರ (ಜೂನ್‌ 6) ಬೆಳಗ್ಗೆ ಅಪಘಾತ ಸಂಭವಿಸಿದ್ದು, ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಬೆಳ್ತಂಗಡಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಘಟನೆ ನಡೆದಿದೆ.

ಹಾವೇರಿ ಬಳಿ ಶುಕ್ರವಾರ (ಜೂನ್‌ 28) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆ ಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದ 13 ಮಂದಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಹಾವೇರಿ ಜಿಲ್ಲಾಸ್ಪತ್ರೆಗೆ 13 ಮೃತದೇಹಗಳನ್ನು ರವಾನಿಸಿದ್ದು, ಈ ವೇಳೆ ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು, ಇಲ್ಲದಿದ್ದರೆ ಶವಗಳನ್ನು ತೆಗೆದುಕೊಂಡು ಹೋಗುವುದಿಲ್ಲ ಎಂದು ಸಂಬಂಧಿಕರು, ಗ್ರಾಮಸ್ಥರು ಆಗ್ರಹಿಸಿದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ.

ಇದನ್ನೂ ಓದಿ: Haveri Accident: ಹಾವೇರಿ ಅಪಘಾತ ಪ್ರಕರಣ; ಭಾರತ ಅಂಧರ ಪುಟ್‌ಬಾಲ್ ತಂಡದ ಕ್ಯಾಪ್ಟನ್ ಕೂಡ ಸಾವು

Continue Reading

ಕರ್ನಾಟಕ

Actor Darshan: ಜೈಲಲ್ಲಿ ಮುದ್ದೆ-ಚಿಕನ್‌ ಸಾಂಬಾರ್‌ ಸವಿದ ದರ್ಶನ್;‌ ನಟನ ನೋಡಲು ಮುಗಿಬಿದ್ದ ಕೈದಿಗಳು!

Actor Darshan: ಶನಿವಾರ ಬೆಳಗ್ಗೆ ಎದ್ದ ದರ್ಶನ್‌, ಕೆಲಹೊತ್ತು ಜೈಲಿನ ಕೊಠಡಿಯಲ್ಲಿಯೇ ವಾಕಿಂಗ್‌ ಮಾಡಿದರು. ಇದರ ಮಧ್ಯೆಯೇ, ಪದೇಪದೆ ಅನಾರೋಗ್ಯದ ನೆಪ ಹೇಳಿ ಜೈಲು ಆಸ್ಪತ್ರೆ ಕಡೆ ಸುಳಿಯುತ್ತಿದ್ದು, ಜೈಲಧಿಕಾರಿಗಳಿಗೆ ನಟ ತಲೆನೋವಾಗಿದ್ದಾರೆ. ಹೊಟ್ಟೆ ನೋವು, ತಲೆನೋವು ಸೇರಿ ಹಲವು ನೆಪಗಳನ್ನು ಹೇಳಿಕೊಂಡು ಅವರು ಆಸ್ಪತ್ರೆಗೆ ಹೋಗುತ್ತಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು (Parappana Agrahara) ಸೇರಿರುವ ನಟ ದರ್ಶನ್‌ (Actor Darshan) ಅವರಿಗೆ ಜೈಲಿನ ಮೆನು ಪ್ರಕಾರವೇ ಊಟ ನೀಡಲಾಗುತ್ತಿದೆ. ಅದರಂತೆ, ಶುಕ್ರವಾರ (ಜೂನ್‌ 28) ರಾತ್ರಿ ದರ್ಶನ್‌ ಅವರಿಗೆ ಚಿಕನ್‌ ಸಾಂಬಾರ್‌, ಮುದ್ದೆ ಹಾಗೂ ಅನ್ನವನ್ನು ನೀಡಲಾಗಿದೆ. ಜೈಲಿನ ಅನ್ನ-ಸಾಂಬಾರ್‌ ತಿಂದು ಬಸವಳಿದಿದ್ದ ದರ್ಶನ್‌ ಅವರಿಗೆ ಚಿಕನ್‌ ಸಾಂಬಾರ್‌ ನೀಡಿರುವುದು ತುಸು ಸಮಾಧಾನ ತಂದಿದೆ. ಮುದ್ದೆ, ಚಿಕನ್‌ ಸಾಂಬಾರ್‌ ಸೇವಿಸಿದ ದರ್ಶನ್‌ ತಡವಾಗಿ ನಿದ್ದೆಗೆ ಜಾರಿದರು ಎಂದು ತಿಳಿದುಬಂದಿದೆ.

ಶನಿವಾರ (ಜೂನ್‌ 29) ಬೆಳಗ್ಗೆ 6 ಗಂಟೆಗೆ ಎದ್ದ ದರ್ಶನ್‌, ಕೆಲಹೊತ್ತು ಜೈಲಿನ ಕೊಠಡಿಯಲ್ಲಿಯೇ ವಾಕಿಂಗ್‌ ಮಾಡಿದರು. ಇದರ ಮಧ್ಯೆಯೇ, ಪದೇಪದೆ ಅನಾರೋಗ್ಯದ ನೆಪ ಹೇಳಿ ಜೈಲು ಆಸ್ಪತ್ರೆ ಕಡೆ ಸುಳಿಯುತ್ತಿದ್ದು, ಜೈಲಧಿಕಾರಿಗಳಿಗೆ ನಟ ತಲೆನೋವಾಗಿದ್ದಾರೆ. ಹೊಟ್ಟೆ ನೋವು, ತಲೆನೋವು ಸೇರಿ ಹಲವು ನೆಪಗಳನ್ನು ಹೇಳಿಕೊಂಡು ಅವರು ಆಸ್ಪತ್ರೆಗೆ ಹೋಗುತ್ತಿದ್ದಾರೆ. ಇದರ ಮಧ್ಯೆಯೇ, ನಟ ದರ್ಶನ್‌ ಅವರನ್ನು ನೋಡಲು ಜೈಲಿನಲ್ಲಿರುವ ಕೈದಿಗಳು ಹರಸಾಹಸ ಪಡುತ್ತಿದ್ದಾರೆ ಎಂದು ಕೂಡ ತಿಳಿದುಬಂದಿದೆ.

Actor Darshan

6106 ಸ್ಟಿಕ್ಕರ್‌ಗಳಿಗೆ ಡಿಮ್ಯಾಂಡ್

ʻʻಡಿ 6106ʼʼಎಂದು ಒಬ್ಬ ಅಭಿಮಾನಿ ಕೈ ಮೇಲೆ ಟ್ಯಾಟೂ ಹಾಕಿಸಿಕೊಂಡಿದ್ದಾನೆ. ದರ್ಶನ್ ಕೈದಿ ನಂಬರ್‌ನಲ್ಲಿಯೇ ಮೊಬೈಲ್ ಕವರ್‌ ಕೂಡ ಬಂದಿದೆ. ಬೈಕ್,ಆಟೋಗಳ ಹಿಂದೆ ಕೂಡ ಇದೇ ಕೈದಿ ನಂಬರ್ ಸ್ಟಿಕ್ಕರ್ ಅಂಟಿಸುತ್ತಿದ್ದಾರೆ. ತಮ್ಮ ವಾಹನಗಳಿಗೆ ಈ ರೀತಿಯ ಸ್ಟಿಕ್ಕರ್‌ವನ್ನು ನೂರಾರು ಫ್ಯಾನ್ಸ್‌ ಹಾಕಿಕೊಂಡು ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡುತ್ತಿದ್ದಾರೆ. ಕೈದಿ ನಂಬರ್ 6106 ಸೋಶಿಯಲ್ ಮೀಡಿಯಾಗಳಲ್ಲಿ ಮತ್ತೆ ಟ್ರೆಂಡಿಂಗ್ ಆಗುತ್ತಿದೆ.

ಸದ್ಯ ಈಗ ಕೈದಿ ನಂಬರ್ 6106 ಸ್ಟಿಕ್ಕರ್ ಗಳಿಗೆ ಫುಲ್ ಡಿಮ್ಯಾಂಡ್ ಇದೆ ಎನ್ನಲಾಗಿದ್ದು ವಿಭಿನ್ನ ಬಣ್ಣ, ವಿನ್ಯಾಸದಲ್ಲಿ ದರ್ಶನ್ ಫ್ಯಾನ್ಸ್ ಇದನ್ನು ಮಾಡಿಸಿಕೊಂಡು ತಮ್ಮ ವಾಹನಗಳಿಗೆ ಅಂಟಿಸಿಕೊಳ್ಳುತ್ತಿದ್ದಾರೆ.ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇತ್ತೀಚೆಗೆ ಅವರ ವಿಶೇಷ ಚೇತನ ಅಭಿಮಾನಿಯೊಬ್ಬರು ಅವರನ್ನು ನೋಡಲು ಬಂದಿದ್ದರು. ಈ ಘಟನೆಯ ನಂತರ ಅಭಿಮಾನಿಗಳಿಗೆ ನಟ ದರ್ಶನ್ ಮನವಿ ಮಾಡಿದ್ದು ಜೈಲಿನಿಂದಲೇ ನಟ ದರ್ಶನ್ ಮನವಿ ತಿಳಿಸಿದ್ದಾರೆ.

ಇದನ್ನೂ ಓದಿ: Actor Darshan: ಒಂದಲ್ಲ, ಎರಡಲ್ಲ…. ಬರೋಬ್ಬರಿ 50 ನಿಮಿಷ ರೇಣುಕಾ ಸ್ವಾಮಿ ಮೇಲೆ ದರ್ಶನ್‌ ಕ್ರೌರ್ಯ!

Continue Reading

ಬೆಂಗಳೂರು

BBMP Scam: ನಕಲಿ ಸೊಸೈಟಿಗಳಿಗೆ ಬಿಬಿಎಂಪಿ 102 ಕೋಟಿ ರೂ. ವರ್ಗಾವಣೆ; ಬಯಲಾಯ್ತು ಮತ್ತೊಂದು ಹಗರಣ!

BBMP Scam: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣವು ರಾಜ್ಯಾದ್ಯಂತ ಸುದ್ದಿಯಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದ್ದು, ಈಗಾಗಲೇ ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ, ಬಿಬಿಎಂಪಿ ಅಧಿಕಾರಿಗಳು ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಅಂದರೆ, 2020-21ರಲ್ಲಿ ನಕಲಿ ಸೊಸೈಟಿಗಳಿಗೆ 102 ಕೋಟಿ ರೂ. ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

VISTARANEWS.COM


on

BBMP Scam
Koo

ಬೆಂಗಳೂರು: ರಾಜ್ಯದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿಯನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣವು ಗಂಭೀರ ಸ್ವರೂಪ ಪಡೆದಿರುವ ಬೆನ್ನಲ್ಲೇ ಮತ್ತೊಂದು ಬಹುಕೋಟಿ ಹಗರಣವು ಬಯಲಾಗಿದೆ. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (BBMP Scam) ಅಧಿಕಾರಿಗಳು ಸುಮಾರು 102 ಕೋಟಿ ರೂಪಾಯಿಯನ್ನು ನಕಲಿ ಸೊಸೈಟಿಗಳಿಗೆ (Fake Societies) ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 9 ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಹೌದು, ಬಿಬಿಎಂಪಿ ಅಧಿಕಾರಿಗಳು ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಅಂದರೆ, 2020-21ರಲ್ಲಿ ನಕಲಿ ಸೊಸೈಟಿಗಳಿಗೆ 102 ಕೋಟಿ ರೂ. ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ವಿಧವೆಯರಿಗೆ ಮೀಸಲಾದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ 102 ಕೋಟಿ ರೂ. ನಷ್ಟವಾಗಿದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ಹಗರಣದಲ್ಲಿ ಶಾಮೀಲಾದ ಅಧಿಕಾರಿಗಳ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಾಗಿಯಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಆಗ್ರಹಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸಚಿವ ಬಿ. ನಾಗೇಂದ್ರ 20% ತಿಂದಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ 80% ತಿಂದಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಈ ಕುರಿತು ಸದನದಲ್ಲೂ ಆಗ್ರಹಿಸುತ್ತೇವೆ. ಸಿಎಂ ರಾಜೀನಾಮೆ ನೀಡುವವರೆಗೂ ಹೋರಾಡುತ್ತೇವೆ ಎಂದು ತಿಳಿಸಿದರು.

ಕಾಂಗ್ರೆಸ್‌ ಸರ್ಕಾರ ಉಚಿತಗಳ ಹೆಸರಲ್ಲಿ ಬೆಲೆ ಏರಿಕೆ ಮಾಡಿದೆ. ಹಾಲಿನ ಬೆಲೆ ಏರಿಕೆ ಮಾಡಿದ್ದು ಏಕೆ ಎಂದು ಪ್ರಶ್ನೆ ಮಾಡಿದರೆ ಹೆಚ್ಚು ಹಾಲು ನೀಡಿದ್ದೇವೆ ಎನ್ನುತ್ತಾರೆ. ಆದರೆ ಹೆಚ್ಚಾದ ಹಣವನ್ನು ರೈತರಿಗೆ ಕೊಡುವುದಿಲ್ಲ. ಬಡವರು ಕೂಲಿ ಮಾಡಿ ದುಡಿದು ಮದ್ಯ ಸೇವಿಸಲು ಹೋದರೆ ಅದಕ್ಕೂ ದರ ಏರಿಕೆ ಮಾಡಿದ್ದಾರೆ. ಶ್ರೀಮಂತರು ಕುಡಿಯುವ ಮದ್ಯದ ದರವನ್ನು ಇಳಿಕೆ ಮಾಡಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ. ಆದರೆ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಮಾತ್ರ ಅಭಿವೃದ್ಧಿಯಾಗುತ್ತಿದ್ದಾರೆ ಎಂದು ದೂರಿದರು.

ಇದನ್ನೂ ಓದಿ: Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಸಿಬಿಐನಿಂದ ಬಂಧನ ಆತಂಕದಲ್ಲಿ ಮಾಜಿ ಸಚಿವ ನಾಗೇಂದ್ರ

Continue Reading

ಮಳೆ

Karnataka Weather : ಕರಾವಳಿಯಲ್ಲಿ ಮುಂಗಾರು ಪ್ರಬಲ; ಮುಂದುವರಿಯಲಿದೆ ಮಳೆ ಅಬ್ಬರ

Karnataka Weather Forecast : ಕರಾವಳಿ ಭಾಗದಲ್ಲಿ ಮಳೆ ಅಬ್ಬರ (Rain News) ಮುಂದುವರಿದಿದೆ. ವೀಕೆಂಡ್‌ನಲ್ಲೂ ವ್ಯಾಪಕ ಮಳೆಯಾಗುವ ಎಚ್ಚರಿಕೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ (Yellow alert) ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯೊಂದಿಗೆ (Rain News) ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಕರ್ನಾಟಕ ಕರಾವಳಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯೊಂದಿಗೆ ಕೆಲವೊಮ್ಮೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಬೀದರ್‌, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಸುತ್ತಮುತ್ತ ಹಗುರದಿಂದ ಕೂಡಿದ ಮಳೆಯಾದರೆ, ಬೆಳಗಾವಿ, ಧಾರವಾಡ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ದಕ್ಷಿಣಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

ಬೆಂಗಳೂರಲ್ಲಿ ತುಂತುರು ಮಳೆ

ಶನಿವಾರ ಬೆಂಗಳೂರು ಸುತ್ತಮುತ್ತ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕರಾವಳಿಗೆ ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, 45-55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜುಲೈ 2 ರವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Road Accident
ದೇಶ5 mins ago

Road Accident: ಭೀಕರ ರಸ್ತೆ ಅಪಘಾತ; 2 ಕಾರು ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ಸಾವು

IND vs SA Final
ಕ್ರಿಕೆಟ್17 mins ago

IND vs SA Final: ಭಾರತ ತಂಡ ವಿಶ್ವಕಪ್​ ಗೆಲ್ಲಲಿ; ಪ್ರಯಾಗ್ ರಾಜ್​ನಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ

Job Alert
ಉದ್ಯೋಗ47 mins ago

Job Alert: ಗಮನಿಸಿ: ಗ್ರಾಮೀಣ ಬ್ಯಾಂಕ್‌ನ 9,995 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ನಾಳೆ ಕೊನೆಯ ದಿನ

Kannada New Movie Kenda in premier In world wide
ಸ್ಯಾಂಡಲ್ ವುಡ್52 mins ago

Kannada New Movie: ವಿಶ್ವಮಟ್ಟದಲ್ಲಿ ದಾಖಲೆ ಬರೆದ ಕನ್ನಡದ `ಕೆಂಡ’!

Orange Peel Benefits
ಆರೋಗ್ಯ52 mins ago

Orange Peel Benefits: ಕಿತ್ತಳೆ ಸಿಪ್ಪೆ ಎಸೆಯಬೇಡಿ; ಹೃದಯದ ಆರೋಗ್ಯಕ್ಕೆ ಇದು ಒಳ್ಳೆಯದು!

Shivamogga News
ಕರ್ನಾಟಕ53 mins ago

Shivamogga News: ಶಿವಮೊಗ್ಗದಲ್ಲಿ ಆಂಬುಲೆನ್ಸ್-ಬೈಕ್‌ ಡಿಕ್ಕಿ; ಸ್ಥಳದಲ್ಲೇ ಮೂವರ ಸಾವು

IND vs SA Final
ಕ್ರೀಡೆ55 mins ago

IND vs SA Final: ಫೈನಲ್​ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ನಡುಕ ಹುಟ್ಟಿಸಿದ ಅಂಪೈರ್​!

Kalki 2898 AD box office day 2 prediction Prabhas
ಟಾಲಿವುಡ್1 hour ago

Kalki 2898 AD: ಎರಡನೇ ದಿನವೂ ಒಳ್ಳೆಯ ಗಳಿಕೆ ಕಂಡ  ‘ಕಲ್ಕಿ 2898 ಎಡಿ’ ಸಿನಿಮಾ!

US Presidential Election
ವಿದೇಶ1 hour ago

US Presidential Election: ಬಹಿರಂಗ ಚರ್ಚೆ ಬಳಿಕ ಅಭ್ಯರ್ಥಿಯ ಬದಲಾವಣೆ? ಬೈಡೆನ್‌ ಬದಲಿಗೆ ಮಿಶೆಲ್‌ ಒಬಾಮಾ ಕಣಕ್ಕೆ?

IND vs SA Final
ಕ್ರೀಡೆ1 hour ago

IND vs SA Final: ಇಂದು ಫೈನಲ್​ ಪಂದ್ಯ ನಡೆಯುವುದೇ ಅನುಮಾನ; ಕಾರಣವೇನು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ15 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ22 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌