ಕರ್ನಾಟಕ
SK Bhagavan: ಭಗವಾನ್ ಒಂದು ರೂಪಾಯಿ ಕೇಳಿದರೆ ಎಂಟಾಣೆ ಕೊಟ್ಟ ದೊರೆ: ಈ ಅಪೂರ್ವ ಜೋಡಿಯ ಮೊದಲ ಭೇಟಿ ಹೀಗಿತ್ತು!
ಕಾಸಿಲ್ಲದೆ, ಊಟ ಮಾಡದೆ ಎರಡು ದಿನಗಳಾಗಿತ್ತು. ಹಸಿವಿನಿಂದ ತತ್ತರಿಸುತ್ತಿದ್ದರು. ಯಾರಾದರೂ ಕನ್ನಡದವರು ಬಂದರೆ ಸ್ವಲ್ಪ ಕಾಸು ಪಡೆದು ತಿಂಡಿ ಹೋಟೆಲ್ನಲ್ಲಿ ತಿನ್ನೋಣ ಎಂದುಕೊಂಡಿದ್ದರು. ಆಗ ಅಲ್ಲಿ ಕ್ಯಾಮೆರಾಮನ್ ಆಗಿದ್ದ ದೊರೆ ಬಂದರು.
ಬೆಂಗಳೂರು: ಮೈಸೂರಿನ ಹಳ್ಳದಕೇರಿ ಎಂಬಲ್ಲಿ ಹುಟ್ಟಿದ ಭಗವಾನ್, ಕಾಲೇಜಿನಲ್ಲಿದ್ದಾಗಲೇ ನಾಟಕಗಳಲ್ಲಿ ನಟಿಸುತ್ತಿದ್ದರು. ಸುಂದರವಾಗಿದ್ದುದರಿಂದ ಹೆಣ್ಣು ಪಾತ್ರಗಳು ಅವರಿಗೆ ಸಿಗುತ್ತಿದ್ದವು. ಇದನ್ನು ನೋಡಿದ ಹಿರಣ್ಣಯ್ಯನವರು ಅವರನ್ನು ಕರೆದು ತಮ್ಮ ತಂಡದಲ್ಲಿ ನಟಿಸುವ ಆಫರ್ ನೀಡಿದರು. ಅವರ ನಟನೆ ಎಲ್ಲರ ಗಮನ ಸೆಳೆಯಿತು. ಅಲ್ಲಿಂದ ಎಡತೊರೆ ನಾಟಕ ಕಂಪನಿಗೆ ಆಹ್ವಾನ ಬಂತು. ಅಲ್ಲಿ ಜಿ.ವಿ ಅಯ್ಯರ್ ಅವರು ಭಗವಾನ್ ಅವರನ್ನು ʼಪ್ರಾಕ್ಟೀಸ್ ಮ್ಯಾನೇಜರ್ʼ ಎಂದು ಮಾಡಿದರು. ನಂತರ ಕರ್ನಾಟಕ ನಾಟಕ ಸಭಾ ತಂಡದಲ್ಲಿ ಸೇರಿಕೊಂಡರು.
ಒಮ್ಮೆ ಹಾಸನದಲ್ಲಿ ಜಾತ್ರೆ ಸಂದರ್ಭದಲ್ಲಿ ಕರ್ನಾಟಕ ನಾಟಕ ಸಭಾ ಟೀಮ್ ಟೆಂಟ್ ಹಾಕಿತ್ತು. ಪಕ್ಕದಲ್ಲೇ ಗುಬ್ಬಿ ವೀರಣ್ಣನವರ ನಾಟಕ ಕಂಪನಿ. ಅದರಲ್ಲಿ ಮುತ್ತುರಾಜು ಅವರು ʼಕೃಷ್ಣಲೀಲೆʼ ನಾಟಕದ ʼಕಲಾವತಿʼ ಪಾತ್ರ ಮಾಡುತ್ತಿದ್ದರು. ಇತ್ತ ಕರ್ನಾಟಕ ನಾಟಕ ಸಭಾದ ʼವೀರಪುತ್ರʼ ನಾಟಕದಲ್ಲಿ ಭಗವಾನ್ ಅವರ ʼಗಾಯತ್ರಿʼ ಪಾತ್ರ. ಇಬ್ಬರೂ ಅಲ್ಲಿ ಪರಸ್ಪರರ ಪಾತ್ರಗಳನ್ನು ನೋಡಿ, ಮೆಚ್ಚಿ, ಪರಿಚಯ ಮಾಡಿಕೊಂಡರು. ಹಾಗೆ ರಾಜ್ಕುಮಾರ್- ಭಗವಾನ್ ಪರಿಚಯ.
ಮುಂದೆ ಮದ್ರಾಸ್ನಲ್ಲಿ ಸಿನಿಮಾ ಪ್ರೊಡಕ್ಷನ್ ಯುನಿಟ್ನಲ್ಲಿ ಕೆಲಸಗಾರನಾಗಿ ಸೇರಿಕೊಂಡಾಗ ಅಲ್ಲಿಯೂ ರಾಜ್ಕುಮಾರ್ ಇದ್ದರು. ಆಗ ರಾಜ್ ಮದುವೆಯಾಗಿ ಮದ್ರಾಸ್ನಲ್ಲಿ ಎಂಟು ರೂಪಾಯಿಗೆ ಬಾಡಿಗೆ ಮನೆ ಮಾಡಿಕೊಂಡು ಅಲ್ಲೇ ನೆಲೆಸಿದ್ದರು. ಅಲ್ಲಿ ರಾಜ್ಕುಮಾರ್, ಭಗವಾನ್ ಅವರನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ಅವರಿಗೆ ಊಟ ಹಾಕಿದರು. ಪಾರ್ವತಮ್ಮನವರು ಎಲ್ಲರನ್ನೂ ಕೂರಿಸಿ ಕೈತುತ್ತು ಹಾಕಿದರು. ಅದನು ಭಗವಾನ್ ಕೊನೆಯವರೆಗೂ ನೆನೆಯುತ್ತಿದ್ದರು.
ಇದನ್ನೂ ಓದಿ: SK Bhagavan: ಡಾ.ರಾಜ್ ಜತೆ ಎಸ್.ಕೆ. ಭಗವಾನ್ ನಂಟು: ನಿರ್ದೇಶಕರ ಸಿನಿ ಜರ್ನಿ ಹೇಗಿತ್ತು?
ಮದ್ರಾಸ್ನ ಪಾಂಡಿ ಬಜಾರ್ ಸುತ್ತಮುತ್ತ ಸುಮಾರು ಕನ್ನಡದ ಕಂಪನಿಗಳು, ಕೆಲಸಗಾರರು ಇದ್ದರು. ಕೆಲವೊಮ್ಮೆ ಕೆಲಸ ಇರುತ್ತಿರಲಿಲ್ಲ. ಒಮ್ಮೆಯಂತೂ ಕನ್ನಡದ ಸಿನಿಮಾಗಳೆಲ್ಲಾ ಕಾಸಿಲ್ಲದೆ ನಿಂತುಹೋಗಿ, ಭಗವಾನ್ಗೆ ಕೆಲಸ, ಸಂಬಳ ಇಲ್ಲದಂತಾಯಿತು. ಬಾಡಿಗೆ ಮನೆಯಾತ ಹಿಂಸೆ ಕೊಡತೊಡಗಿದ. ಕಾಸಿಲ್ಲದೆ, ಊಟ ಮಾಡದೆ ಎರಡು ದಿನಗಳಾಗಿತ್ತು. ಹಸಿವಿನಿಂದ ತತ್ತರಿಸುತ್ತಿದ್ದರು. ಯಾರಾದರೂ ಕನ್ನಡದವರು ಬಂದರೆ ಸ್ವಲ್ಪ ಕಾಸು ಪಡೆದು ತಿಂಡಿ ಹೋಟೆಲ್ನಲ್ಲಿ ತಿನ್ನೋಣ ಎಂದುಕೊಂಡಿದ್ದರು. ಆಗ ಅಲ್ಲಿ ಕ್ಯಾಮೆರಾಮನ್ ಆಗಿದ್ದ ದೊರೆ ಬಂದರು. ಭಗವಾನ್ ಅವರು ದೊರೆ ಬಳಿ, ʼʼಒಂದು ರೂಪಾಯಿ ಇದ್ರೆ ಕೊಡ್ತೀರಾ, ಹಸಿವಾಗ್ತಿದೆ ಎರಡು ದಿನದಿಂದ ಊಟವಿಲ್ಲ. ಸಂಬಳ ಬಂದ ಮೇಲೆ ಕೊಡ್ತೀನಿʼʼ ಎಂದರು.
ಅದನ್ನು ಕೇಳಿ ದೊರೆ ಮುಖ ಪೆಚ್ಚು ಮಾಡಿಕೊಂಡರು. ಜೇಬಿಗೆ ಕೈಹಾಕಿ, ʼʼನನ್ನತ್ರ ಇರೋದು ಎಂಟೇ ಆಣೆ. ಇದನ್ನು ಇಟ್ಟುಕೊಳ್ಳಿʼʼ ಎಂದು ಹೊರಟುಹೋದರು. ಭಗವಾನ್ ಹೋಟೆಲ್ಗೆ ಹೋಗಿ (ಆಗ ನಾಲ್ಕಾಣೆಗೆ ಮೂರು ಇಡ್ಲಿ ಒಂದು ಕಾಫಿ ಸಿಗುತ್ತಿತ್ತು) ತಿಂಡಿ ತಿಂದು, ಜಿವಿ ಅಯ್ಯರ್ ಕಚೇರಿಗೆ ಬಂದು ಕುಳಿತರು. ಸ್ವಲ್ಪ ಹೊತ್ತಿನಲ್ಲಿ ಧಡಧಡನೆ ಬಂದ ಅಯ್ಯರ್, ʼʼಏನೋ, ಎರಡು ದಿನದಿಂದ ಹೊಟ್ಟೆಗಿಲ್ಲದೆ ಇದ್ದೀಯಾ, ನಾವೆಲ್ಲ ಸತ್ತುಹೋಗಿದೀವಾ ನಿನ್ನ ಪಾಲಿಗೆʼʼ ಎಂದು ಕೂಗಾಡಿದರು. ದೊರೆ ಈ ವಿಚಾರವನ್ನು ಅವರಿಗೆ ಹೇಳಿದ್ದರು. ಭಗವಾನ್ಗೆ ದೊರೆ ನೀಡಿದ್ದ ಎಂಟಾಣೆ, ಅಯ್ಯರ್ ಅವರ ಬಳಿ ದೊರೆ ಪಡೆದಿದ್ದ ಸಾಲವಾಗಿತ್ತು! ಸ್ವತಃ ಹಸಿದುಕೊಂಡು ಇದ್ದ ದೊರೆ, ತನ್ನ ಬಳಿ ಇದ್ದ ಹಣವನ್ನೇ ಭಗವಾನ್ಗೆ ನೀಡಿದ್ದರು.
ಕನ್ನಡ ಚಿತ್ರರಂಗ ಕಂಡ ಅಪೂರ್ವ ಜೋಡಿಯ ಗೆಳೆತನ ಆರಂಭವಾದದ್ದು ಹೀಗೆ. ಆಗಲೇ ರಾಜ್ಕುಮಾರ್ ಚಿತ್ರಗಳಿಗೆ ದೊರೆ ಕ್ಯಾಮೆರಾಮನ್ ಆಗಿದ್ದರು. ಸೋದರಿ, ಓಹಿಲೇಶ್ವರ ಚಿತ್ರಗಳನ್ನು ಚಿತ್ರೀಕರಿಸಿದ್ದರು. ಅವರ ಜತೆ ಭಗವಾನ್ ಸೇರಿಕೊಂಡರು. ಮುಂದೆ ಈ ಮೂವರ ಜೋಡಿ ಹತ್ತಾರು ಐತಿಹಾಸಿಕ ಚಿತ್ರಗಳನ್ನು ನಿರ್ಮಿಸಿತು.
ಇದನ್ನೂ ಓದಿ: SK Bhagavan: ಖ್ಯಾತ ಚಿತ್ರ ನಿರ್ದೇಶಕ ಎಸ್.ಕೆ. ಭಗವಾನ್ ಇನ್ನಿಲ್ಲ
ಕರ್ನಾಟಕ
VISTARA TOP 10 NEWS: ನಾಳೆ ಬೆಂಗಳೂರು ಬಂದ್, ಶುಕ್ರವಾರ ಕರ್ನಾಟಕ ಬಂದ್, ಎಐಎಡಿಎಂಕೆ-ಬಿಜೆಪಿ ಮೈತ್ರಿಯೂ ಬಂದ್
VISTARA TOP 10 NEWS : ನಾಳೆ ಬೆಂಗಳೂರು ಬಂದ್, ಶುಕ್ರವಾರ ಕರ್ನಾಟಕ ಬಂದ್, ತಮಿಳುನಾಡಿನಲ್ಲಿ ಬಿಜೆಪಿ-ಎಐಎಡಿಎಂಕೆ ಬಂದ್! ಇನ್ನು ಪ್ರಧಾನಿ ಮೋದಿ ಅವರು ಅ. 1ರಂದು ಎಲ್ಲರೂ ಸೇರಿ ಕಸ ಗುಡಿಸೋಣ ಅಂದಿದ್ದಾರೆ. ಹೀಗೆ ಪ್ರಮುಖ ಸುದ್ದಿಗಳ ಗುಚ್ಛವೇ ವಿಸ್ತಾರ ಟಾಪ್ 10 ನ್ಯೂಸ್.
1. ಕಾವೇರಿ ಕಿಚ್ಚು: ರಾಜ್ಯಕ್ಕೆ ಡಬಲ್ ಬಂದ್ ಶಾಕ್; ನಾಳೆ ಬೆಂಗಳೂರು, ಸೆ. 29 ಕರ್ನಾಟಕ ಬಂದ್
ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಕರೆ ನೀಡಲಾಗಿರುವ ಸೆ. 26ರ ಬೆಂಗಳೂರು ಬಂದ್ ಬೆನ್ನಿಗೇ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಸೆ. 29ರಂದು ಅಖಿಲ ಕರ್ನಾಟಕ ಬಂದ್ಗೆ ಕರೆ ನೀಡಿದ್ದಾರೆ. ಹೀಗಾಗಿ ವಾರದಲ್ಲಿ ಎರಡು ಬಂದ್ ನಡೆಯಲಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ವರದಿ : ನಾಯಕರ ಪ್ರತಿಷ್ಠೆಯಿಂದ ಬೆಂಗಳೂರಿಗೆ ಡಬಲ್ ಬಂದ್ ಬಿಸಿ, ಬೇಕಿತ್ತಾ ಎರಡೆರಡು ಬಂದ್?
2. ನಾಳೆ ಬೆಂಗಳೂರು ಬಂದ್: ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ; ಏನಿರುತ್ತೆ? ಏನಿರಲ್ಲ?
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ (Cauvery water Dispute) ಮಾಡಬಾರದು ಎಂದು ಆಗ್ರಹಿಸಿ ಜಲ ಸಂರಕ್ಷಣಾ ಸಮಿತಿ ಕರೆ ನೀಡಿರುವ ಸೆ. 26ರ ಬೆಂಗಳೂರು ಬಂದ್ (Bangalore bandh) ಮೊದಲು ಪ್ರಕಟಿಸಿದಂತೆ ಯಥಾವತ್ತಾಗಿ ನಡೆಯಲಿದೆ. ಹಾಗಿದ್ದರೆ ಏನಿರುತ್ತೆ? ಏನಿರಲ್ಲ? ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ಸುದ್ದಿ1: ಬಲವಂತದಿಂದ ಬಂದ್ ಮಾಡಿಸುವಂತಿಲ್ಲ; ಮೆರವಣಿಗೆಗೆ ಅವಕಾಶವಿಲ್ಲ ಎಂದ ಕಮಿಷನರ್
ಪೂರಕ ಸುದ್ದಿ2: ಬಂದ್ ಯಶಸ್ವಿ ಆಗಬೇಕು; ಹೋಟೆಲ್ ಓಪನ್ ಮಾಡ್ಬೇಡಿ, ಸಮಸ್ಯೆಗೆ ನೀವೇ ಹೊಣೆ: ಬಿಎಸ್ವೈ
ಪೂರಕ ಸುದ್ದಿ3: ಯಾವ ಬಂದ್ಗೂ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ಇಲ್ಲ; ನಾರಾಯಣ ಗೌಡ ಘೋಷಣೆ
3 .ಜಲಶಕ್ತಿ ಇಲಾಖೆ ಸುಪ್ರೀಂ ಕೋರ್ಟ್ಗೆ ಅರ್ಜಿ ಹಾಕಲಿ, ಮೋದಿ ಮಧ್ಯಪ್ರವೇಶಿಸಲಿ: ದೇವೇಗೌಡ
ಸುಪ್ರೀಂ ಕೋರ್ಟ್ನಲ್ಲಿ ರಾಜ್ಯಕ್ಕೆ ಹಿನ್ನಡೆಯಾಗಿರುವುದಕ್ಕೆ ರಾಜ್ಯ ಸರ್ಕಾರದ ವೈಫಲ್ಯ ಎಂದು ಹೇಳಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಈ ಸಂಬಂಧ ಜಲ ಶಕ್ತಿ ಇಲಾಖೆಯಿಂದ ಅರ್ಜಿ ಸಲ್ಲಿಕೆ ಮಾಡಬೇಕು. ಇದಕ್ಕೆ ಪ್ರಧಾನಿ ಮೋದಿ ಮಧ್ಯ ಪ್ರವೇಶ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಈ ಸುದ್ದಿಯನ್ನೂ ಓದಿ: ಕಾವೇರಿ ನೆಪದಲ್ಲಿ ಬಿಜೆಪಿ-ಜೆಡಿಎಸ್ನಿಂದ ರಾಜಕೀಯ: ಸಿದ್ದರಾಮಯ್ಯ ಆರೋಪ
4. ಏಕಕಾಲಕ್ಕೆ ರಾಜ್ಯಾದ್ಯಂತ ದಾಖಲೆ ಬರೆದ ಜನತಾ ದರ್ಶನ: ಸಿದ್ದರಾಮಯ್ಯ ಚಿಂತನೆ ಕ್ಲಿಕ್
ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaih) ಅವರ ಸೂಚನೆಯಂತೆ ಇದೇ ಮೊಟ್ಟ ಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ಜನತಾ ದರ್ಶನ (Janata Darshana) ಕಾರ್ಯಕ್ರಮ ನಡೆದಿದ್ದು, ಸಾರ್ವಜನಿಕರಿಂದ ಅತ್ಯುತ್ತಮ ಸ್ಪಂದನೆ ಮತ್ತು ಪ್ರಶಂಸೆ ವ್ಯಕ್ತವಾಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
5. ಏಷ್ಯನ್ ಗೇಮ್ಸ್: ಐತಿಹಾಸಿಕ ಚಿನ್ನ ಗೆದ್ದ ಭಾರತ ಮಹಿಳಾ ಕ್ರಿಕೆಟ್ ತಂಡ; ಲಂಕಾ ವಿರುದ್ಧ ರೋಚಕ ಜಯ
ಇದೇ ಮೊದಲ ಬಾರಿಗೆ ಏಷ್ಯನ್ ಗೇಮ್ಸ್(Asian Games 2023) ಕ್ರೀಡಾಕೂಟದಲ್ಲಿ ಸ್ಪರ್ಧಿಸಿದ್ದ ಭಾರತ ಮಹಿಳಾ ಕ್ರಿಕೆಟ್ ತಂಡ ಮೊದಲ ಪ್ರಯತ್ನದಲ್ಲೇ ಐತಿಹಾಸಿಕ ಚಿನ್ನದ ಪದಕ ಜಯಿಸಿ ಮರೆದಾಡಿದೆ. ಅಲ್ಪ ಮೊತ್ತದ ಪಂದ್ಯದಲ್ಲಿ ಲಂಕಾ ವಿರುದ್ಧ ರೋಚಕ 19 ರನ್ಗಳ ಗೆಲುವು ಸಾಧಿಸಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
6. ದೇಶಾದ್ಯಂತ ಅ.1ರಂದು 1 ಗಂಟೆ ಸ್ವಚ್ಛತಾ ಅಭಿಯಾನ: ಎಲ್ಲರೂ ಬನ್ನಿ ಎಂದು ಆಹ್ವಾನಿಸಿದ ಪ್ರಧಾನಿ ಮೋದಿ
ಗಾಂಧಿ ಜಯಂತಿಗೂ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 1ರಂದು ದೇಶಾದ್ಯಂತ ಸ್ವಚ್ಛತಾ ಅಭಿಯಾನ ಕೈಗೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಅಂದು ಒಂದು ಗಂಟೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಈ ಸುದ್ದಿಯನ್ನೂ ಓದಿ: ಎಲ್ಲ ಗ್ಯಾರಂಟಿಗಳಿಗಳ ಜಾರಿಗೂ ಮೋದಿಯೇ ಗ್ಯಾರಂಟಿ; ಪ್ರಧಾನಿ ಅಬ್ಬರದ ಭಾಷಣ
7. ಭಾರತ ವಿಭಜಿಸಿ ಹಲವು ದೇಶ ಸೃಷ್ಟಿಸುವುದು ಖಲಿಸ್ತಾನಿ ಉಗ್ರ ಪನ್ನುನ್ ಗುರಿ; ಷಡ್ಯಂತ್ರ ಬಯಲು
ಕೆನಡಾದಲ್ಲಿ ಕುಳಿತು ಭಾರತ ವಿರೋಧಿ ಕೃತ್ಯಗಳಲ್ಲಿ ತೊಡಗಿರುವ ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ ಸಂಘಟನೆಯ ಗುರುಪತ್ವಂತ್ ಸಿಂಗ್ ಪನ್ನುನ್ (Gurpatwant Singh Pannun) ಆಸ್ತಿಗಳನ್ನು ಎನ್ಐಎ ಜಪ್ತಿ ಮಾಡಿದ ಬೆನ್ನಲ್ಲೇ ಉಗ್ರನ ಕುರಿತು ಸ್ಫೋಟಕ ಮಾಹಿತಿ ಲಭ್ಯವಾಗಿದೆ. “ಭಾರತವನ್ನು ವಿಭಜಿಸಿ, ಹಲವು ದೇಶಗಳನ್ನಾಗಿ ಸೃಷ್ಟಿಸುವುದು ಗುರುಪತ್ವಂತ್ ಸಿಂಗ್ ಪನ್ನುನ್ ಗುರಿಯಾಗಿದೆ” ಎನ್ನುವುದೇ ಆ ಮಾಹಿತಿ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
8. ಬಿಜೆಪಿ ಜತೆ ಮೈತ್ರಿ ಇಲ್ಲ; ಎಐಎಡಿಎಂಕೆ ಅಧಿಕೃತ ಘೋಷಣೆ! ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ
ತಮ್ಮ ಪಕ್ಷದ ನಾಯಕರನ್ನು ಅವಮಾನಿಸುತ್ತಿರುವ ಬಿಜೆಪಿ ಜತೆಗೆ ಸಖ್ಯವನ್ನು ಕಡಿದುಕೊಂಡಿರುವುದಾಗಿ ಇತ್ತೀಚೆಗಷ್ಟೇ ಎಐಎಡಿಎಂಕೆ ನಾಯಕರೊಬ್ಬರು ಹೇಳಿದ್ದರು. ಇದೀಗ, ಬಿಜೆಪಿ ಜತೆಗಿನ ಮೈತ್ರಿಯನ್ನು ಮುರಿದುಕೊಂಡಿರುವುದಾಗಿ ಎಐಎಡಿಎಂಕೆ ಅಧಿಕೃತವಾಗಿ ಘೋಷಿಸಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
9. 9 ತಿಂಗಳೊಳಗೆ 2000 ಕೋಟಿ ರೂ. ಕೊಳ್ಳೆ ಹೊಡೆದ ಶಾರುಖ್; ಜವಾನ್ ಹೊಸ ದಾಖಲೆ
ಶಾರುಖ್ ಖಾನ್ ಪ್ರಧಾನ ಪಾತ್ರದಲ್ಲಿರುವ ಜವಾನ್, ವಿಶ್ವದಾದ್ಯಂತ ಬಾಕ್ಸ್ ಆಫೀಸ್ನಲ್ಲಿ 1000 ಕೋಟಿ ರೂ. ಗಳಿಸಿದೆ (Jawan box office collection).ಪಠಾಣ್ ಸಿನಿಮಾವೂ 1000 ಕೋಟಿ ದಾಟಿತ್ತು. ಹೀಗಾಗಿ ಒಂಬತ್ತು ತಿಂಗಳ ಅವಧಿಯಲ್ಲಿ ಶಾರುಖ್ 2000 ಕೋಟಿ ಕೊಳ್ಳೆ ಹೊಡೆದಂತಾಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
10. 100 ಫ್ಯಾನ್ಗಳಲ್ಲಿ ಅರಳಿದ ಗಣಪ; ಹ್ಯಾವಲ್ಸ್ ಕಂಪನಿಯ ಕ್ರಿಯೆಟಿವಿಟಿಗೆ ನೆಟ್ಟಿಗರ ಮೆಚ್ಚುಗೆ
ದೇಶಾದ್ಯಂತ ಅದ್ಧೂರಿಯಾಗಿ ಆಚರಿಸುವ ಗಣೇಶ ಚತುರ್ಥಿ(Ganesh Chaturthi) ಹಬ್ಬವನ್ನು ಹ್ಯಾವಲ್ಸ್ ಕಂಪೆನಿ(Havells) ಕ್ರಿಯಾತ್ಮಕವಾಗಿ ಬರಮಾಡಿಕೊಂಡಿದೆ. 100 ಫ್ಯಾನ್ಗಳನ್ನು ಬಳಸಿಕೊಂಡು ಗಣೇಶನನ್ನು ರಚಿಸಿ ಗಮನ ಸೆಳೆದಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
ತುಮಕೂರು
Tumkur News: ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಒತ್ತಾಯಿಸಿ ಪಾವಗಡದಲ್ಲಿ ಪ್ರತಿಭಟನೆ
Tumkur News: ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಒತ್ತಾಯಿಸಿ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ (ಸಿಐಟಿಯು) ಪಾವಗಡ ತಾಲೂಕು ಸಮಿತಿ ವತಿಯಿಂದ ಪಾವಗಡದ ಕಾರ್ಮಿಕ ನಿರೀಕ್ಷಕರ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪಾವಗಡ: ಕಟ್ಟಡ ನಿರ್ಮಾಣ ಕಾರ್ಮಿಕರಿಗೆ (Building Construction Labors) ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಒತ್ತಾಯಿಸಿ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ (ಸಿಐಟಿಯು) ಪಾವಗಡ ತಾಲೂಕು ಸಮಿತಿ ವತಿಯಿಂದ ಇಲ್ಲಿನ ಕಾರ್ಮಿಕ ನಿರೀಕ್ಷಕರ ಕಚೇರಿ ಎದುರು ಪ್ರತಿಭಟನೆ (Protest) ನಡೆಸಲಾಯಿತು.
ಪಟ್ಟಣದ ಪ್ರಮುಖ ರಸ್ತೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಪ್ರತಿಭಟನಾ ಮೆರವಣಿಗೆ ಮೂಲಕ ಕೆಬಿ ಕಚೇರಿ ಮುಂಭಾಗದ ಕಾರ್ಮಿಕ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿ, ಕಾರ್ಮಿಕ ಇಲಾಖೆ ಅಧಿಕಾರಿ ರವೋಫ್ ಅವರಿಗೆ ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿದರು.
ಪಾವಗಡ ಸಿ.ಐ.ಟಿ.ಯು. ತಾಲೂಕು ಅಧ್ಯಕ್ಷ ರಾಮಾಂಜಿನಪ್ಪ ಮಾತನಾಡಿ, ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯಿಂದ ಕಾನೂನು ಪ್ರಕಾರ ಪ್ರತಿವರ್ಷ ನೀಡಬೇಕಾದ ಶೈಕ್ಷಣಿಕ ಸಹಾಯಧನವನ್ನು ಬಿಡುಗಡೆ ಮಾಡಿಲ್ಲ. 2022-23ನೇ ಸಾಲಿನಲ್ಲಿ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿದ ಕಾರ್ಮಿಕರಿಗೆ ಈವರೆಗೂ ಸಹಾಯಧನ ಬಿಡುಗಡೆ ಮಾಡಿಲ್ಲ.
ಇದನ್ನೂ ಓದಿ: Indian Coast Guard: 290 ನಾವಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಅಪ್ಲೈ ದಿನಾಂಕ ವಿಸ್ತರಣೆ
2023-24 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿ, ಅರ್ಧ ವರ್ಷ ಕಳೆಯುತ್ತಿದ್ದರೂ ಈವರೆಗೂ ಸಹಾಯಧನಕ್ಕಾಗಿ ಅರ್ಜಿಯನ್ನೇ ಆಹ್ವಾನಿಸಿಲ್ಲ. ಹಾಗೆಯೇ 2021-22ನೇ ಸಾಲಿನಲ್ಲಿ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿದ ಸುಮಾರು ಒಂದೂವರೆ ಲಕ್ಷ ಜನ ಕಾರ್ಮಿಕರಿಗೆ ಸಹಾಯಧನ ಕೊಡದೇ, ಬಾಕಿ ಉಳಿಸಿಕೊಳ್ಳಲಾಗಿದೆ ಎಂದು ಆರೋಪಿಸಿದರು.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಉದ್ಯೋಗ ಮತ್ತು ಸೇವಾ ಷರತ್ತುಗಳ ಕಾಯ್ದೆ – 1996 ರ ನಿಯಮ 45ರ ಅಡಿಯಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರ ಇಬ್ಬರು ಮಕ್ಕಳಿಗೆ ‘ಕಲಿಕಾ ಭಾಗ್ಯ’ ಯೋಜನೆಯಡಿ ಶೈಕ್ಷಣಿಕ ಸಹಾಯಧನ ನೀಡಬೇಕೆಂದು ಕಾನೂನು ಹೇಳುತ್ತದೆ. ನೋಂದಾಯಿತ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಆದರೆ ಇದೀಗ ಶೈಕ್ಷಣಿಕ ಸಹಾಯಧನ ಬಿಡುಗಡೆ ಮಾಡಲು ‘ಹಣದ ಕೊರತೆ ಇದೆ’ ಎಂದು ಹೇಳಲಾಗುತ್ತಿದೆ ಎಂದು ದೂರಿದರು.
ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಶೈಕ್ಷಣಿಕ ಸಹಾಯಧನ ಬಿಡುಗಡೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಇದನ್ನೂ ಓದಿ: Weather Report : ಮಾಸಾಂತ್ಯದವರೆಗೂ ಮಳೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಪ್ರತಿಭಟನೆಯಲ್ಲಿ ಸಿಐಟಿಯು ತಾಲೂಕು ಪದಾಧಿಕಾರಿಗಳಾದ ರಾಮಾಂಜಿನಪ್ಪ, ಮಮತ, ನಾಗರಾಜ್ ಹಾಗೂ ದುರ್ಗಪ್ಪ, ಶಿವಗಂಗಮ್ಮ, ಕೆಂಚಮ್ಮ, ನವಿನ್ ಕುಮಾರ್, ಜಬಿವುಲ್ಲಾ, ಈಶ್ವರಪ್ಪ, ಚಾಂದ್ ಬಾಷ, ಮಲೇಶಪ್ಪ, ಕಾಮಕ್ಕ, ಹನಮಂತರಾಯಪ್ಪ, ಕಮಲಮ್ಮ, ದೇವಿ, ನಂಜಪ್ಪ ಹಾಗೂ ಇತರರು ಪಾಲ್ಗೊಂಡಿದ್ದರು.
ಉತ್ತರ ಕನ್ನಡ
Uttara Kannada News: ಮಠಕ್ಕೆ ಗುರು ಎಷ್ಟು ಮುಖ್ಯವೋ ಸಮಾಜಕ್ಕೆ ಗುರಿಕ್ಕಾರರು ಅಷ್ಟೇ ಮುಖ್ಯ: ಶ್ರೀರಾಘವೇಶ್ವರಭಾರತೀ ಸ್ವಾಮೀಜಿ
Uttara Kannada News: ಗೋಕರ್ಣದ ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಆವರಣದಲ್ಲಿ ಚಾತುರ್ಮಾಸ್ಯ ಅಂಗವಾಗಿ ಗುರಿಕ್ಕಾರರ ಬೃಹತ್ ಸಮಾವೇಶ ಜರುಗಿತು.
ಗೋಕರ್ಣ: ಮಠದಲ್ಲಿ ಗುರುಗಳು ಹೇಗೆ ಮುಖ್ಯವೋ ಸಮಾಜದಲ್ಲಿ ಗುರಿಕ್ಕಾರರು ಅಷ್ಟೇ ಮುಖ್ಯ. ಗುರಿಕ್ಕಾರರು ಇಡೀ ಸಮಾಜ (Society) ವ್ಯವಸ್ಥೆಯ ಬೆನ್ನೆಲುಬು (Backbone) ಎಂದು ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ತಿಳಿಸಿದರು.
ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಆವರಣದಲ್ಲಿ ಚಾತುರ್ಮಾಸ್ಯ ಅಂಗವಾಗಿ ಆಯೋಜಿಸಿದ್ದ ಗುರಿಕ್ಕಾರರ ಬೃಹತ್ ಸಮಾವೇಶದಲ್ಲಿ ಶ್ರೀಸಂದೇಶ ನೀಡಿದ ಶ್ರೀಗಳು, “ರಾಮನಿಗೆ ಮುಖ್ಯಪ್ರಾಣನ ಸೇವೆ ಹೇಗೆ ಸಂದಿದೆಯೋ ಗುರಿಕ್ಕಾರರು ಸಮಾಜಕ್ಕೆ ಅಂಥ ಸೇವೆ ಸಲ್ಲಿಸಬೇಕು. ಆ ಸ್ಥಾನ ನೀಡುವ ಗೌರವ ದೊಡ್ಡದು. ಗುರಿಕ್ಕಾರ ಗೌರವದ ಜತೆಗೆ ಹಲವು ಜವಾಬ್ದಾರಿಗಳೂ ಹೆಗಲಿಗೇರುತ್ತವೆ” ಎಂದು ಕಿವಿಮಾತು ಹೇಳಿದರು.
ಸಮಾಜದಲ್ಲಿ ನಿಮಗಿಂತ ಶ್ರೀಮಂತರು ಅಥವಾ ಪ್ರಭಾವಿಗಳು ಇರಬಹುದು. ಆದರೆ ಸಮಾಜದಲ್ಲಿ ಗುರುಪೀಠ ಮಾತ್ರ ನಿಮಗಿಂತ ದೊಡ್ಡದು. ಇಡೀ ಸಮಾಜದ ಭಾವ ಗಮನಿಸಿ ಗುರುಪೀಠ ನಿಮ್ಮನ್ನು ನೇಮಕ ಮಾಡಿದೆ. ಇಡೀ ಪೀಠದ ಶಕ್ತಿ ನಿಮ್ಮ ಹಿಂದಿರುತ್ತದೆ. ಸಮಾಜಸೇವೆಗಾಗಿ ಆತ್ಮವಿಶ್ವಾಸದಿಂದ ಮುನ್ನುಗ್ಗಿ ಎಂದು ಕರೆ ನೀಡಿದರು.
ಸಮಾಜ ನೀಡುವ ಗೌರವಕ್ಕೆ ತಕ್ಕಂತೆ ನೀವು ಕೂಡಾ ಜವಾಬ್ದಾರಿಯುತವಾಗಿ ಕೆಲಸ ಮಾಡಿ, ಆ ಗೌರವ ಉಳಿಸಿಕೊಳ್ಳಬೇಕು. ಗುರುಗಳ, ಶ್ರೀರಾಮನ, ಸಮಾಜದ ಪ್ರತಿನಿಧಿಗಳು ನೀವು. ಇಡೀ ಶಿಷ್ಯಸಮಾಜದ ಅಭಿವ್ಯಕ್ತಿ ನೀವು. ಸಮಾಜದ ಎಲ್ಲರನ್ನೂ ಮಮತೆಯಿಂದ ಕಾಣಬೇಕು, ಕಾಳಜಿ ವಹಿಸಬೇಕು. ದಾರಿ ತಪ್ಪಿದರೆ ಎಚ್ಚರಿಸಿ ಅವರನ್ನು ಸರಿದಾರಿಗೆ ತರುವ ಕರ್ತವ್ಯ ನಿಮ್ಮದು ಎಂದು ಸೂಚಿಸಿದರು.
ಇದನ್ನೂ ಓದಿ: Indian Coast Guard: 290 ನಾವಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಅಪ್ಲೈ ದಿನಾಂಕ ವಿಸ್ತರಣೆ
ಸಂಘಟನೆಯನ್ನು ತಳಮಟ್ಟದಿಂದ ಬೆಳೆಸುವಲ್ಲಿ ನಿಮ್ಮ ಪಾತ್ರ ಅತ್ಯಂತ ದೊಡ್ಡದು. ಭಾವ ರಾಮಾಯಣದ ಮೂಲಕ ಗುರುಭಾವವನ್ನು ಪ್ರತಿಯೊಬ್ಬ ಶಿಷ್ಯರ ಮನೆಗೆ ತಲುಪಿಸುವ ರಾಯಭಾರಿಗಳು ನೀವು. ಸಮಾಜವನ್ನು ಸನ್ಮಾರ್ಗಕ್ಕೆ ಒಯ್ಯುವ ದೊಡ್ಡ ಅಭಿಯಾನ ನಿಮ್ಮಿಂದ ಆಗುತ್ತಿದೆ. ಇದು ಜ್ಞಾನ ಜಾಗರಣ. ನೀವು ಸಮಾಜದ ನೇತಾರರಾಗಿ ನಿಂತು ಬೇರು ಮಟ್ಟದಲ್ಲಿ ಸಂಘಟನೆಯನ್ನು ಬೆಳೆಸಬೇಕು ಎಂದು ಸಲಹೆ ಮಾಡಿದರು.
ಶ್ರೀರಾಮ ತನ್ನ ಸೇವೆ ಮಾಡಿದ ಕಪಿಸೇನೆಯನ್ನು ಕಾಪಾಡಿದಂತೆ ಶ್ರೀಸಂಸ್ಥಾನದವರ ಸಾಕ್ಷಾತ್ ಪ್ರತಿನಿಧಿಗಳಾದ ನಿಮ್ಮನ್ನು ಶ್ರೀಪೀಠ ರಕ್ಷಿಸುತ್ತದೆ. ಯಾವ ಪ್ರತಿಫಲಾಪೇಕ್ಷೆಯೂ ಇಲ್ಲದೇ ನೀವು ಸಲ್ಲಿಸುತ್ತಿರುವ ಸೇವೆ ಅಮೂಲ್ಯ. ನಮ್ಮ ಸಂಘಟನೆ, ಶಿಸ್ತು, ಬದ್ಧತೆ, ಇಡೀ ಜಗತ್ತಿಗೆ ಮಾದರಿ. ಇದನ್ನು ಮತ್ತಷ್ಟು ಬಲಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಬೇಕು ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಶ್ರೀಮಠದ ಧರ್ಮಕರ್ಮ ವಿಭಾಗ ಸಿದ್ಧಪಡಿಸಿ, ಭಾರತಿ ಪ್ರಕಾಶನ ಹೊರತಂದ ಗುರಿಕ್ಕಾರರ ಗುರುಮಾರ್ಗ ಕೈಪಿಡಿಯನ್ನು ಶ್ರೀಗಳು ಲೋಕಾರ್ಪಣೆ ಮಾಡಿದರು.
ಇದನ್ನೂ ಓದಿ: Ganesh Chaturthi: 100 ಫ್ಯಾನ್ಗಳಲ್ಲಿ ಅರಳಿದ ಗಣಪ; ಹ್ಯಾವಲ್ಸ್ ಕಂಪೆನಿಯ ಕ್ರಿಯೆಟಿವಿಟಿಗೆ ನೆಟ್ಟಿಗರ ಮೆಚ್ಚುಗೆ
ಮುಳ್ಳೇರಿಯಾ ಮಂಡಲ ಪ್ರಧಾನ ಗುರಿಕ್ಕಾರ ಎಂ.ಜಿ.ಸತ್ಯನಾರಾಯಣ ಅವರು ಕೃತಿ ಬಗ್ಗೆ ಮಾತನಾಡಿದರು. ಹವ್ಯಕ ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಹವ್ಯಕ ಮಹಾಮಂಡಲದ ನಿಕಟಪೂರ್ವ ಅಧ್ಯಕ್ಷ ಆರ್.ಎಸ್.ಹೆಗಡೆ ಹರಗಿ, ಗೌರವ ಕಾರ್ಯದರ್ಶಿ ನಾಗರಾಜ ಭಟ್ ಪೆದಮೂಲೆ, ಮಂಡಲ ಪ್ರಧಾನ ಗುರಿಕ್ಕಾರರಾದ ಉದಯ ಕುಮಾರ್ ಖಂಡಿಗ, ಲಕ್ಷ್ಮೀನಾರಾಯಣ ಕೌಲಕೈ, ಸುಬ್ರಹ್ಮಣ್ಯ ಚಿಪ್ಲಿ, ಕೆ.ಎಸ್.ಮಂಜುನಾಥ ಭಟ್ಟ ಕೌಲಮನೆ, ಶಂಭು ಎಸ್.ಭಟ್ ಕಡತೋಕ, ಬಾಲ್ಯ ಶಂಕರನಾರಾಯಣ ಭಟ್, ಪ್ರಕಾಶ ಮಳಲಗದ್ದೆ, ಜೆಡ್ಡು ರಾಮಚಂದ್ರ ಭಟ್, ಮಹಾಮಂಡಲದ ಪ್ರಾಂತ ಉಪಾಧ್ಯಕ್ಷ ಜಿ.ಎಸ್.ಹೆಗಡೆ, ಪದಾಧಿಕಾರಿಗಳಾದ ಹೇರಂಬ ಶಾಸ್ತ್ರಿ, ಗಣೇಶ್ ಜೋಶಿ, ಕೇಶವಪ್ರಕಾಶ್ ಎಂ, ಗೀತಾ ಮಂಜಪ್ಪ ಮತ್ತಿತರರು ವೇದಿಕೆಯಲ್ಲಿದ್ದರು.
ಶ್ರೀಮಠದ ಇತಿಹಾಸ, ಪರಂಪರೆ ಮಹತ್ವ ಹಾಗೂ ಗುರಿಕ್ಕಾರರ ಕರ್ತವ್ಯಗಳ ಬಗ್ಗೆ ವಿದ್ವಾನ್ ಸತ್ಯನಾರಾಯಣ ಶರ್ಮಾ ಮಾತನಾಡಿದರು. ಗುರಿಕ್ಕಾರರ ಸಮಾವೇಶದ ಅಂಗವಾಗಿ ಡಾ.ಗೌತಮ್ ಅವರಿಂದ ದಾನ ಧಾರಾ ಪ್ರಸ್ತುತಿ ನಡೆಯಿತು. ಶ್ರೀಸಂಸ್ಥಾನದವರು ಅನುಗ್ರಹಿಸುವ ಭಾವರಾಮಾಯಣದ ಎಂಟನೇ ಸಂಚಿಕೆಯನ್ನು ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ.ಜಿ.ಎಲ್.ಹೆಗಡೆ ಲೋಕಾರ್ಪಣೆ ಮಾಡಿದರು. ಆರ್.ಎಸ್.ಹೆಗಡೆಯವರ ಆಯತನ ಕೃತಿಯ ಎರಡನೇ ಭಾಗವನ್ನು ಇದೇ ಸಂದರ್ಭದಲ್ಲಿ ಶ್ರೀಗಳು ಲೋಕಾರ್ಪಣೆ ಮಾಡಿದರು.
ಇದನ್ನೂ ಓದಿ: Weather Update: ಭಾರತದಲ್ಲಿ ಮುಗೀತು ಮಳೆಗಾಲ! ಎಷ್ಟು ಮಳೆ ಕೊರತೆ, ಬರಗಾಲ ಪಕ್ಕಾ?
ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದ ಸಾವಿರಕ್ಕೂ ಹೆಚ್ಚು ಮಂದಿ ಗುರಿಕ್ಕಾರರು, ಶ್ರೀಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಿದ್ದರು. ಗುರಿಕ್ಕಾರರ ಯೋಗಕ್ಷೇಮವನ್ನು ಪ್ರಾರ್ಥಿಸಿ ಪರಮೇಶ್ವರ ಮಾರ್ಕಂಡೆ ನೇತೃತ್ವದಲ್ಲಿ ನವಗ್ರಹ ಹವನ, ಆಂಜನೇಯ ಹವನ ನಡೆಯಿತು. ಶ್ರೀಮಠದ ಧರ್ಮಕರ್ಮ ವಿಭಾಗದ ಸಂಯೋಜಕ ಕೇಶವ ಪ್ರಸಾದ್ ಕೂಟೇಲು, ಚಾತುರ್ಮಾಸ ಸಮಿತಿ ಅಧ್ಯಕ್ಷ ಯು.ಎಸ್.ಜಿ.ಭಟ್, ವಿವಿವಿ ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಕಾರ್ಯಾಲಯ ಕಾರ್ಯದರ್ಶಿ ಆಡಳಿತಾಧಿಕಾರಿ ಡಾ.ಟಿ.ಜಿ.ಪ್ರಸನ್ನ ಕುಮಾರ್ ಉಪಸ್ಥಿರಿದ್ದರು.
ಕರ್ನಾಟಕ
Bangalore Bandh : ಬೆಂಗಳೂರು ಬಂದ್ ಫಿಕ್ಸ್; ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಬಸ್ ಸಂಚಾರ ಡೌಟ್; ಏನಿರುತ್ತೆ? ಏನಿರಲ್ಲ?
Bangalore Bandh : ಮಂಗಳವಾರದ ಬೆಂಗಳೂರು ಬಂದ್ಗೆ ವೇದಿಕೆ ಸಿದ್ಧವಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಆಗುವ ಸಾಧ್ಯತೆ ಇದೆ. ಹಾಗಿದ್ದರೆ ಬಂದ್ ವೇಳೆ ಏನಿರುತ್ತದೆ? ಏನಿರಲ್ಲ ಎಂಬುದರ ಪೂರ್ಣ ವಿವರ ಇಲ್ಲಿದೆ.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ (Cauvery water Dispute) ಮಾಡಬಾರದು ಎಂದು ಆಗ್ರಹಿಸಿ ಜಲ ಸಂರಕ್ಷಣಾ ಸಮಿತಿ (Jala Samrakshana Samiti) ಕರೆ ನೀಡಿರುವ ಸೆ. 26ರ ಬೆಂಗಳೂರು ಬಂದ್ (Bangalore bandh) ಮೊದಲು ಪ್ರಕಟಿಸಿದಂತೆ ಯಥಾವತ್ತಾಗಿ ನಡೆಯಲಿದೆ. ಆದರೆ, ವಾಟಾಳ್ ನಾಗರಾಜ್ (Vatal Nagaraj) ನೇತೃತ್ವದಲ್ಲಿ ಸೆ. 29ರಂದು ಕರ್ನಾಟಕ ಬಂದ್ಗೆ (Karnataka Bandh) ಕರೆ ನೀಡಿರುವ ಹಿನ್ನೆಲೆಯಲ್ಲಿ ಕೆಲವು ಸಂಘಟನೆಗಳು ಈ ಹಿಂದೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿವೆ.
ರೈತ ಸಂಘದ ಕುರುಬೂರು ಶಾಂತ ಕುಮಾರ್ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಚಂದ್ರು ನೇತೃತ್ವದಲ್ಲಿ ಹಲವಾರು ಸಂಘಟನೆಗಳ ಬೆಂಬಲದೊಂದಿಗೆ ಬೆಂಗಳೂರು ಬಂದ್ ನಡೆಯಲಿದೆ. ಬಂದ್ನಿಂದಾಗಿ ಮಕ್ಕಳಿಗೆ ಸಮಸ್ಯೆ ಆಗಬಾರದು ಎಂಬ ಕಾರಣಕ್ಕಾಗಿ ಬೆಂಗಳೂರು ಜಿಲ್ಲಾಧಿಕಾರಿಗಳು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ (Holiday announced for School and Colleges) ಘೋಷಿಸಿದ್ದಾರೆ. ಕಾಲೇಜುಗಳು ಮತ್ತು ವಿವಿಗಳು ನಿಗದಿ ಮಾಡಿದ್ದ ಪರೀಕ್ಷೆಗಳನ್ನು ಮುಂದೂಡಿವೆ (Exams Postponed).
ಈ ನಡುವೆ ಬೆಂಗಳೂರಿನ ಸಾರಿಗೆ ವ್ಯವಸ್ಥೆಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುವ ಬಿಎಂಟಿಸಿ ಮತ್ತು ಕರ್ನಾಟಕ ಸಾರಿಗೆ ಬಸ್ಗಳ ಸಂಚಾರ ವ್ಯತ್ಯಯಗೊಳ್ಳುವ ಸಾಧ್ಯತೆಗಳಿವೆ. ಯಾಕೆಂದರೆ, ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ನೌಕರರ ಸಂಘಟನೆ ಬಂದ್ಗೆ ಬೆಂಬಲ ಘೋಷಿಸಿವೆ. ಆದರೆ ಮೆಟ್ರೋ ಸಂಚಾರ ಎಂದಿನಂತೆ ಇರುತ್ತದೆ.
ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ಇಲ್ಲ
ಕನ್ನಡ ಮತ್ತು ನೀರಿಗೆ ಸಂಬಂಧಿಸಿದ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಕನ್ನಡ ರಕ್ಷಣಾ ವೇದಿಕೆ ಈ ಬಾರಿ ತಟಸ್ಥವಾಗಿ ಉಳಿದಿದೆ. ಸೆ. 26 ಅಥವಾ ಸೆ. 29 ಯಾವ ಬಂದ್ಗೂ ಬೆಂಬಲ ಕೊಡುವುದಿಲ್ಲ ಎಂದು ಅದು ಪ್ರಕಟಿಸಿದೆ. ಇದು ಬಂದ್ ಆಯೋಜಕರಿಗೆ ದೊಡ್ಡ ಹಿನ್ನಡೆಯಾಗಲಿದೆ.
ಹಲವು ಸಂಘಟನೆಗಳ ಬೆಂಬಲ ವಾಪಸ್
ಬೆಂಗಳೂರು ಬಂದ್, ಕರ್ನಾಟಕ ಬಂದ್ ಎರಡು ಬಂದ್ ಘೋಷಣೆಯಾಗಿದ್ದರಿಂದ ಕೆಲವು ಸಂಘಟನೆಗಳು ಸೆ. 26ರ ಬಂದ್ಗೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿವೆ.
1. ಬೆಂಗಳೂರಿನ ಓಲಾ, ಊಬರ್ ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಅವರು ತಾವು ಸೆ. 26ರ ಬದಲು ಸೆ. 29ರ ಬಂದ್ ಬೆಂಬಲಿಸುವುದಾಗಿ ಹೇಳಿದೆ.
2. ಬೆಂಗಳೂರಿನ ಆದರ್ಶ ಆಟೋ ಚಾಲಕರ ಯೂನಿಯನ್ ಕೂಡಾ ಸೆ. 26ರ ಬದಲು ಸೆ. 29ಕ್ಕೆ ಶಿಫ್ಟ್ ಆಗಿದೆ.
3. ಈ ಹಿಂದೆ ಸೆ. 26ರ ಬೆಂಗಳೂರು ಬಂದ್ಗೆ ಬೆಂಬಲ ಘೋಷಿಸಿದ್ದ ಬೃಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್ ಅವರು ಈಗ ಸೆ. 29ರ ಬಂದ್ಗೆ ಬೆಂಬಲ ಸೂಚಿಸಿದ್ದಾರೆ.
ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ ಇರುವುದಿಲ್ಲ ಅಂದಿದೆ ಸಂಘಟನೆ
ಸೆ. 26ರಂದು ನಡೆಯುವ ಬೆಂಗಳೂರು ಬಂದ್ ಗೆ ಬಿಎಂಟಿಸಿ ಹಾಗೂ KSRTC ನೌಕರರು ಬೆಂಬಲ ಕೊಡುತ್ತಾರೆ ಎಂದು ಕರ್ನಾಟಕ ಸಾರಿಗೆ ನಿಗಮಗಳ ನೌಕರರ ಕೂಟದ ಪ್ರಧಾನ ಕಾರ್ಯದರ್ಶಿ ಎಸ್ ನಾಗರಾಜ್ ಹೇಳಿಕೆ ನೀಡಿದ್ದಾರೆ. ನಾವು ಹಾಗೂ ಸಮಾನ ಮನಸ್ಕರ ವೇದಿಕೆ ಹಾಗೂ ಬಿಎಂಟಿಸಿ ನೌಕರರ ಸಂಘಗಳು ತೀರ್ಮಾನ ಮಾಡಿದ್ದೇವೆ. ಯಾವ ವಾಹನಗಳನ್ನು ರಸ್ತೆಗೆ ಇಳಿಸಬೇಡಿ ಅಂತ ನಾವು ಸೂಚನೆ ಕೊಟ್ಟಿದ್ದೇವೆ. ಈ ಹಿಂದೆಯೂ ನಾವು ಬೆಂಬಲ ಕೊಟ್ಟಿದ್ದೆವು, ನಾಳೆಯೂ ಬೆಂಬಲ ಕೊಡುತ್ತೇವೆ ಎಂದಿದ್ದಾರೆ ನಾಗರಾಜ್.
ಸೆ. 26ರ ಬಂದ್ನಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗಿ ಆಗುವಂತೆ ಕರೆ ಕೊಟ್ಟಿದ್ದೇವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ಹೇಳಿದ್ದಾರೆ. ಶಾಂತಿಯುತ ಹೋರಾಟಕ್ಕೆ ನಾವು ಒಟ್ಟು ಕೊಡುತ್ತೇವೆ, ಅಹಿತಕರ ಘಟನೆ ಆಸ್ಪದ ಕೊಡಲ್ಲ. ಇದರಲ್ಲಿ ನಮ್ಮ ನೌಕರರನ್ನು ವಿಭಜನೆ ಮಾಡಿ ನೋಡುವ ಅಗತ್ಯ ಇಲ್ಲ ಎಂದು ಚಂದ್ರಶೇಖರ್ ಹೇಳಿದ್ದಾರೆ.
ಇದನ್ನೂ ಓದಿ: Cauvery water dispute : ನಾಳೆ ಬಂದ್ ಯಶಸ್ವಿ ಆಗಬೇಕು; ಹೋಟೆಲ್ ಓಪನ್ ಮಾಡ್ಬೇಡಿ, ಸಮಸ್ಯೆಗೆ ನೀವೇ ಹೊಣೆ: ಬಿಎಸ್ವೈ
ಹಾಗಿದ್ದರೆ ಸೆ. 26ರ ಬೆಂಗಳೂರು ಬಂದ್ನಲ್ಲಿ ಏನಿರುತ್ತದೆ? ಏನಿರುವುದಿಲ್ಲ?
ಏನೇನು ಇರುವುದಿಲ್ಲ?
-ಶಾಲೆ, ಕಾಲೇಜುಗಳು ಬಂದ್: ಪರೀಕ್ಷೆಗಳು ಕೂಡಾ ಮುಂದಕ್ಕೆ
-ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ಗಳು ಬಹುತೇಕ ಇರುವುದಿಲ್ಲ
– ಓಲಾ, ಊಬರ್ ಹೊರತಾದ ಆಟೋ ರಿಕ್ಷಾಗಳು ಡೌಟ್
– ಸಿನಿಮಾ ಥಿಯೇಟರ್ಗಳು ಬಂದ್
– ಖಾಸಗಿ ಬಸ್ಗಳು, ಗೂಡ್ಸ್ ವಾಹನಗಳು
-ಸೂಪರ್ ಮಾರ್ಕೆಟ್, ಮಾಲ್ಗಳು
– ಬಹುತೇಕ ಅಂಗಡಿಗಳು ಬಂದ್
– ಕೈಗಾರಿಕೆಗಳು
– ಜುವೆಲ್ಲರಿ ಶಾಪ್ಗಳು
– ಬಿಬಿಎಂಪಿ ಕಾರ್ಮಿಕರು, ನೌಕರರು ಕೆಲಸ ಮಾಡಲ್ಲ
ಏನೇನು ಸೇವೆಗಳು ಲಭ್ಯ ಇರುತ್ತವೆ?
– ತುರ್ತು ಅಗತ್ಯದ ಎಲ್ಲ ಸೇವೆಗಳು ಇರುತ್ತವೆ.
– ಹಾಲಿನ ಬೂತ್ ಓಪನ್, ಪತ್ರಿಕೆಗಳು ಸಿಗುತ್ತವೆ
– ನಗರದಲ್ಲಿ ಹೋಟೆಲ್ಗಳು ತೆರೆದಿರುತ್ತವೆ.
– ಓಲಾ ಮತ್ತು ಊಬರ್ ಟ್ಯಾಕ್ಸಿಗಳು ಓಡಾಡುತ್ತವೆ
– ಹೆಚ್ಚಿನ ಆಟೋಗಳು ಓಡಾಡುತ್ತವೆ.
– ಆಸ್ಪತ್ರೆ, ಮೆಡಿಕಲ್ಗಳ ಸೇವೆ ಯಥಾಸ್ಥಿತಿ
– ಸರ್ಕಾರಿ ಕಚೇರಿಗಳು ಇರುತ್ತವೆ, ಜನ ಕಡಿಮೆ ಇರಬಹುದು
– ಆಂಬ್ಯುಲೆನ್ಸ್ ಸೇವೆಗಳು ಸಿಗುತ್ತವೆ.
– ಮೆಟ್ರೋ ಸೇವೆ ಎಂದಿನಂತೆ ಇರುತ್ತದೆ.
ಬಲವಂತವಾಗಿ ಬಂದ್ ಮಾಡುವಂತಿಲ್ಲ
ಸುಪ್ರೀಂಕೋರ್ಟ್ ತೀರ್ಪಿನಂತೆ ಬಂದ್ ಎಂಬ ಪದವೇ ಇಲ್ಲ. ಪ್ರತಿಭಟನೆಗೆ ಮಾತ್ರ ಅವಕಾಶ. ಬೆಂಗಳೂರು ಬಂದ್ ವೇಳೆ ಯಾರೂ ಯಾವುದೇ ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸುವಂತಿಲ್ಲ, ವಾಹನಗಳನ್ನು ತಡೆಯುವಂತಿಲ್ಲ. ಹಾಗೆ ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಜತೆಗೆ ಬಂದ್ನಿಂದಾಗಿ ಆಸ್ತಿಪಾಸ್ತಿಗೆ ಹಾನಿ ಉಂಟಾದರೆ ಸಂಘಟಕರಿಂದಲೇ ವಸೂಲಿ ಮಾಡಲಾಗುವುದು.
-
ಸುವಚನ18 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ವಿದೇಶ9 hours ago
Akshardham : ವಿದೇಶದಲ್ಲಿನ ಅತೀ ದೊಡ್ಡ ದೇವಾಲಯ ಉದ್ಘಾಟನೆಗೆ ಸಜ್ಜು; ಏನಿದರ ವಿಶೇಷ?
-
ಕರ್ನಾಟಕ7 hours ago
PSI Scam : ಪಿಎಸ್ಐ ನೇಮಕಾತಿ ಅಕ್ರಮ; ಕೊನೆಗೂ ಅಮೃತ್ ಪಾಲ್ಗೆ ಜಾಮೀನು
-
ದೇಶ24 hours ago
Viral News: ಎಲ್ಕೆಜಿ ಬಾಲಕನಿಗೆ ಕಾಲು ಮುರಿಯುವ ಹಾಗೆ ಬಡಿದ ಮೇಷ್ಟ್ರು , ಗಾಯಗಳನ್ನು ನೋಡಿ ಬೆಚ್ಚಿದ ಅಮ್ಮ
-
ದೇಶ23 hours ago
India Canada Row : ಖಲಿಸ್ತಾನಿ ಉಗ್ರರ ಕಡೆಗೆ ಮೃದು ಧೋರಣೆ; ಟ್ರುಡೊ ವಿರುದ್ಧ ಆರ್ಯ ಮತ್ತೆ ವಾಗ್ದಾಳಿ
-
ಅಂಕಣ9 hours ago
ವಿಧಾನಸೌಧ ರೌಂಡ್ಸ್: ಜೆಡಿಎಸ್ಗೆ ಸಂಜೀವಿನಿಯಾದ ಬಿಜೆಪಿ ಮೈತ್ರಿ; ಬೆಂಗಳೂರು ದಕ್ಷಿಣದಿಂದ ಕಾಂಗ್ರೆಸ್ ಅಚ್ಚರಿ ಅಭ್ಯರ್ಥಿ?
-
ದೇಶ7 hours ago
Army Jawan: ಯೋಧನ ಮೇಲೆ ಹಲ್ಲೆ ನಡೆಸಿ, ಬೆನ್ನಿನ ಮೇಲೆ ‘ಪಿಎಫ್ಐ’ ಎಂದು ಬರೆದ ದುರುಳರು!
-
ಕರ್ನಾಟಕ13 hours ago
BJP-JDS Alliance: ಬಿಜೆಪಿ- ಜೆಡಿಎಸ್ ಮೈತ್ರಿ; ಮುಸ್ಲಿಂ ನಾಯಕರು ಜೆಡಿಎಸ್ಗೆ ಗುಡ್ಬೈ?