Shakti Scheme : ಮಹಿಳೆಯರ ಉಚಿತ ಪ್ರಯಾಣದ ಸ್ಮಾರ್ಟ್‌ ಕಾರ್ಡ್‌; ಹುಟ್ಟಿದ ಹೊಸ ಕಥೆ! - Vistara News

ಕರ್ನಾಟಕ

Shakti Scheme : ಮಹಿಳೆಯರ ಉಚಿತ ಪ್ರಯಾಣದ ಸ್ಮಾರ್ಟ್‌ ಕಾರ್ಡ್‌; ಹುಟ್ಟಿದ ಹೊಸ ಕಥೆ!

Shakti Scheme : ಶಕ್ತಿ ಯೋಜನೆಯಡಿ ಉಚಿತ ಪ್ರಯಾಣಕ್ಕೆ ಸ್ಮಾರ್ಟ್‌ ಕಾರ್ಡ್‌ ಕೊಡುವುದಾಗಿ ಸರ್ಕಾರ ಹೇಳಿತ್ತು. ಆದರೆ, ಈಗ ಸ್ಮಾರ್ಟ್‌ ಕಾರ್ಡ್‌ ಬದಲು ಸಾಮಾನ್ಯ ಬಸ್‌ ಪಾಸ್‌ ಕೊಡುವ ಬಗ್ಗೆ ಸುದ್ದಿ ಹರಡಿದೆ. ಇದನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಅಲ್ಲಗಳೆದಿದ್ದಾರೆ.

VISTARANEWS.COM


on

Shakti smart card
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಪ್ರಮುಖ ಗ್ಯಾರಂಟಿಗಳಲ್ಲಿ (Congress Guarantee Scheme) ಒಂದಾಗಿರುವ “ಶಕ್ತಿ” ಯೋಜನೆಗೆ (Shakti Scheme) ಈಗಾಗಲೇ ಮಹಿಳೆಯರಿಂದ ಭರ್ಜರಿ ರೆಸ್ಪಾನ್ಸ್‌ ಸಿಕ್ಕಿದೆ. ಸದ್ಯಕ್ಕಂತೂ ಮಹಿಳೆಯರು ಆಧಾರ್‌ ಕಾರ್ಡ್‌ (AAdhar Card) ಸೇರಿದಂತೆ ತಮ್ಮ ಗುರುತಿನ ಚೀಟಿಯನ್ನು ತೋರಿಸಿ ಪ್ರಯಾಣ ಮಾಡುತ್ತಿದ್ದಾರೆ. ಆದರೆ, ಇನ್ನು ಮುಂದೆ ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್‌ (Smart Card) ಕೊಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಶುಕ್ರವಾರ (ಆಗಸ್ಟ್‌ 10) ಮಾದರಿ ಕಾರ್ಡ್‌ ಅನ್ನು ಪ್ರದರ್ಶನ ಮಾಡಿದ್ದರು. ಆದರೆ, ಈಗ ಈ ಬಗ್ಗೆ ಹಲವಾರು ಅಂತೆಕಂತೆಗಳು ಹುಟ್ಟಿಕೊಂಡಿವೆ. ಸ್ಮಾರ್ಟ್‌ ಕಾರ್ಡ್‌ಗೆ ಸೆಂಟರ್ ಫಾರ್ ಇ-ಆಡಳಿತ (CEG) ವಿರೋಧ ಇದೆ. ಹೀಗಾಗಿ ಇದರ ಬದಲು ಮಾಮೂಲಿ ಬಸ್‌ ಪಾಸ್‌ ನೀಡಲಾಗುವುದು ಎಂದು ಹೇಳಲಾಗಿತ್ತು. ಆದರೆ, ಇದು ಶುದ್ಧ ಸುಳ್ಳು, ಸರ್ಕಾರ ಸ್ಮಾರ್ಟ್‌ ಕಾರ್ಡ್‌ ಅನ್ನೇ ಕೊಡಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Transport Minister Ramalinga Reddy) ವಿಸ್ತಾರ ನ್ಯೂಸ್‌ಗೆ ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕರು ಯಾವುದೇ ಊಹಾಪೋಹಕ್ಕೆ ಕಿವಿಗೊಡಬಾರದು. ಈಗಾಗಲೇ ನಮ್ಮ ಸರ್ಕಾರ ತೀರ್ಮಾನಿಸಿದಂತೆ ಸ್ಮಾರ್ಟ್‌ ಕಾರ್ಡ್‌ ಅನ್ನೇ ಕೊಡಲಿದೆ ಎಂದು ವಿಸ್ತಾರ ನ್ಯೂಸ್‌ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: Commission Politics : ನ್ಯಾಯಾಂಗ ತನಿಖಾ ಆಯೋಗಕ್ಕೆ ಬಿಜೆಪಿಯ 40% ಕಮಿಷನ್‌ ದಾಖಲೆ ಕೊಡುವೆ: ಕೆಂಪಣ್ಣ

ಸ್ಮಾರ್ಟ್‌ ಕಾರ್ಡ್‌ನಲ್ಲೇನು ಇರಲಿದೆ?

ಈ ಸ್ಮಾರ್ಟ್ ಕಾರ್ಡ್‌ನಲ್ಲಿ ಫಲಾನುಭವಿಗಳ ವಿವರ ಇರಲಿದೆ. ಮೊದಲಿಗೆ ಕ್ರಮ ಸಂಖ್ಯೆ, ಹೆಸರು, ಜನ್ಮ ದಿನಾಂಕ ಹಾಗೂ ವಾಸ ಸ್ಥಳದ ಮಾಹಿತಿ ಇರಲಿದೆ. ಇದರ ಕೆಳಗೆ ಕಾರ್ಡ್‌ ವಿತರಣಾ ದಿನಾಂಕವೂ ಇರಲಿದೆ. ಕೊನೆಯಲ್ಲಿ ಕ್ಯೂ ಆರ್‌ ಕೋಡ್‌ ಅನ್ನೂ ನೀಡಲಾಗುತ್ತದೆ. ಇನ್ನು ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ಹಾಗೂ ಸಚಿವ ರಾಮಲಿಂಗಾ ರೆಡ್ಡಿ ಭಾವಚಿತ್ರ ಇರಲಿದೆ. ಜತೆಗೆ “ಶಕ್ತಿ – ಮಹಿಳಾ ಸಬಲೀಕರಣದತ್ತ ಪಯಣ” ಎಂಬ ಅಡಿ ಶೀರ್ಷಿಕೆಯೂ ಇರಲಿದೆ.

ಈ ಕಾರ್ಡ್‌ ಕೊಡುವುದರ ಹಿಂದಿದೆ ಜಾತಿ ಲೆಕ್ಕಾಚಾರ!

ರಾಜ್ಯ ಸರ್ಕಾರವು ಉಚಿತ ಪ್ರಯಾಣಕ್ಕೆ (Free Bus ride) ಸ್ಮಾರ್ಟ್‌ ಕೊಡುವುದರ ಹಿಂದೆ ಪ್ರಚಾರದ ಜತೆ ಜಾತಿ ಲೆಕ್ಕಾಚಾರಗಳೂ (Caste calculation) ಅಡಗಿವೆ. ಕಾರಣ, ಕಾರ್ಡ್‌ಗಳು ಬೇಗ ಹಾಳಾಗುವುದಿಲ್ಲ. ಜತೆಗೆ ಕಲರ್‌ಫುಲ್‌ ಆಗಿರುವುದರಿಂದ ಪ್ರತಿ ಬಾರಿ ಪ್ರಯಾಣ ಮಾಡುವಾಗಲೂ ಸರ್ಕಾರದ ಉಚಿತ ಯೋಜನೆ ಬಗ್ಗೆ ಗಮನಕ್ಕೆ ಬರುತ್ತದೆ. ಜನರ ಮನಸ್ಸಿನಲ್ಲಿ ಹಾಗೆಯೇ ಉಳಿಯುತ್ತದೆ ಎಂಬುದಾಗಿದೆ. ಇನ್ನೊಂದೆಡೆ ಈಗಾಗಲೇ ಸರ್ಕಾರದ ವಿರುದ್ಧ ಗ್ಯಾರಂಟಿ ಯೋಜನೆಗಳಿಗೆ ಎಸ್‌ಟಿ, ಎಸ್‌ಟಿ ನಿಧಿಗಳನ್ನು (ST/ST Fund) ಬಳಸಿದ ಆರೋಪ ಕೇಳಿ ಬಂದಿದೆ. ಆದರೆ, ಜಾತಿಗಳ ವಿವರವನ್ನು ಪಡೆದುಕೊಂಡರೆ ಯಾವ ಯಾವ ಜಾತಿಯ ಎಷ್ಟು ಫಲಾನುಭವಿಗಳಿದ್ದಾರೆ ಎಂಬ ಲೆಕ್ಕ ಸಿಗುತ್ತದೆ. ಆ ಪ್ರಕಾರ, ಜನರ ಮುಂದೂ ಈ ಲೆಕ್ಕವನ್ನು ಇಡುವ ಲೆಕ್ಕಾಚಾರ ಸರ್ಕಾರದ ಹಿಂದಿದೆ ಎನ್ನಲಾಗಿದೆ. ಅಲ್ಲದೆ, ಈಚೆಗೆ ಸಚಿವ ಪ್ರಿಯಾಂಕ್‌ ಖರ್ಗೆ ಸಹ ಈ ಬಗ್ಗೆ ಸೂಚ್ಯವಾಗಿ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: Commission Politics : ನ್ಯಾಯಾಂಗ ಆಯೋಗಕ್ಕೆ ಕೊಠಡಿಯನ್ನೇ ಕೊಡದ ಸರ್ಕಾರ; ಇನ್ನೂ ಶುರುವಾಗದ ತನಿಖೆ!

ಮೂರು ತಿಂಗಳೊಳಗೆ ಸ್ಮಾರ್ಟ್‌ ಕಾರ್ಡ್ ಕೊಡುವುದಾಗಿ ಹೇಳಿದ್ದ ಸರ್ಕಾರ!

ಶಕ್ತಿ ಯೋಜನೆಯು ಜೂನ್‌ 11ರಂದು ಜಾರಿಗೆ ಬಂದಿದೆ. ಈ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಐವರು ಮಹಿಳೆಯರಿಗೆ ಸಾಂಕೇತಿಕವಾಗಿ ಸ್ಮಾರ್ಟ್‌ ಕಾರ್ಡ್‌ ವಿತರಣೆ ಮಾಡಿದ್ದ ರಾಜ್ಯ ಸರ್ಕಾರ, ಮೂರು ತಿಂಗಳೊಳಗೆ ಎಲ್ಲರಿಗೂ ಸ್ಮಾರ್ಟ್‌ ಕಾರ್ಡ್‌ ನೀಡುವ ವ್ಯವಸ್ಥೆಗೆ ಚಾಲನೆ ನೀಡಲಾಗುವುದು ಎಂದು ಹೇಳಿತ್ತು. ಆದರೆ, ಈ ಶುಕ್ರವಾರಕ್ಕೆ (ಆಗಸ್ಟ್‌ 11) ಸರಿಯಾಗಿ 2 ತಿಂಗಳು ಪೂರೈಸಿದೆ. ಇಲ್ಲಿಯವರೆಗೂ ಸ್ಮಾರ್ಟ್‌ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಬಗ್ಗೆ ಯಾವುದೇ ತೀರ್ಮಾನವನ್ನೂ ರಾಜ್ಯ ಸರ್ಕಾರ ಕೈಗೊಂಡಿಲ್ಲ. ಅಂದಹಾಗೆ, ರಾಜ್ಯದಲ್ಲಿ ‘ಶಕ್ತಿ’ ಯೋಜನೆಯಡಿ ವಿದ್ಯಾರ್ಥಿಗಳು, ಮಂಗಳಮುಖಿಯರು, ಮಹಿಳೆಯರು ಸೇರಿದಂತೆ ಒಟ್ಟು 1.2 ಕೋಟಿ ಮಂದಿ ಸ್ಮಾರ್ಟ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಬಹುದು ಎಂದು ಸಾರಿಗೆ ಇಲಾಖೆ ಅಂದಾಜಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Pralhad Joshi: ಹಿಂದೂಗಳು ಅಲ್ಪಸಂಖ್ಯಾತರಾದ ದಿನ ಭಾರತ ಜಾತ್ಯತೀತವಾಗಿ ಉಳಿಯದು; ಪ್ರಲ್ಹಾದ್‌ ಜೋಶಿ ಆತಂಕ

Pralhad Joshi: ಭಾರತ ಹಿಂದೂ ರಾಷ್ಟ್ರವಲ್ಲ ಎಂಬ ನೋಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಹೇಳಿಕೆ ಸರಿಯಿದೆ. ನಾನೂ ಅದನ್ನು ಮೊದಲಿನಿಂದಲೂ ಪ್ರತಿಪಾದಿಸುತ್ತಾ ಬಂದಿದ್ದೇವೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಹಿಂದೂಗಳು ಅಲ್ಪಸಂಖ್ಯಾತರಾದ ದಿನ ಭಾರತ ಜಾತ್ಯತೀತ ರಾಷ್ಟ್ರವಾಗಿ ಉಳಿಯಲು ಸಾಧ್ಯವಿಲ್ಲ ಎಂದು ಎಚ್ಚರಿಸಿದ್ದಾರೆ.

VISTARANEWS.COM


on

India is a secular nation because Hindus are the majority says Union Minister Pralhad Joshi
Koo

ನವದೆಹಲಿ: ಹಿಂದೂಗಳು ಬಹುಸಂಖ್ಯಾತರಾಗಿ ಇರುವುದರಿಂದಲೇ ಭಾರತ ಜಾತ್ಯತೀತ ರಾಷ್ಟ್ರವಾಗಿದೆ ಎಂಬ ಕಟು ಸತ್ಯವನ್ನು ಸಿಎಂ ಸಿದ್ದರಾಮಯ್ಯ ಮೊದಲು ಅರ್ಥ ಮಾಡಿಕೊಳ್ಳಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ.

“ಭಾರತ ಹಿಂದೂ ರಾಷ್ಟ್ರವಲ್ಲ” ಎಂಬ ಅಮರ್ತ್ಯ ಸೇನ್ ಹೇಳಿಕೆ ಸಮರ್ಥಿಸಿದ ಸಿಎಂ ಸಿದ್ದರಾಮಯ್ಯ ಅವರ ನಡೆಗೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಕ್ಷೇಪಿಸಿದ್ದು, ನವದೆಹಲಿಯಲ್ಲಿ ಶುಕ್ರವಾರ ಈ ಕುರಿತು ಪ್ರತಿಕ್ರಿಯಿಸಿದರು.

ಇದನ್ನೂ ಓದಿ: R Ashok: ವಾಲ್ಮೀಕಿ ನಿಗಮ ಹಗರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ; ಆರ್‌. ಅಶೋಕ್‌

ಹಿಂದೂಗಳು ಅಲ್ಪಸಂಖ್ಯಾತರಾದ ದಿನ ಭಾರತ ಜಾತ್ಯಾತೀತ ರಾಷ್ಟ್ರವಾಗಿ ಉಳಿಯಲು ಸಾಧ್ಯವಿಲ್ಲ ಎಂದು ಸಚಿವ ಪ್ರಲ್ಹಾದ್‌ ಜೋಶಿ ಎಚ್ಚರಿಸಿದ್ದಾರೆ.

ಇದನ್ನೂ ಓದಿ: Team India : ಟೆಸ್ಟ್​​ ಕ್ರಿಕೆಟ್​ನ ಒಂದೇ ದಿನದಲ್ಲಿ ಗರಿಷ್ಠ ರನ್​; ದಾಖಲೆ ಬರೆದ ಭಾರತ ತಂಡ

ಭಾರತ ಹಿಂದೂ ರಾಷ್ಟ್ರವಲ್ಲ ಎಂಬ ನೋಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಹೇಳಿಕೆ ಸರಿಯಿದೆ. ತಾವೂ ಅದನ್ನು ಮೊದಲಿನಿಂದಲೂ ಪ್ರತಿಪಾದಿಸುತ್ತಾ ಬಂದಿದ್ದೇವೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಸಚಿವ ಪ್ರಲ್ಹಾದ್‌ ಜೋಶಿ ತೀವ್ರವಾಗಿ ಖಂಡಿಸಿದ್ದಾರೆ.

Continue Reading

ಕರ್ನಾಟಕ

Rain News: ಕಾರವಾರದಲ್ಲಿ ಭಾರಿ ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಸಾವು

Rain News: ಕಾರವಾರದ ಅಸ್ನೋಟಿಯ ಆರವ ಗ್ರಾಮದ ತೋರ್ಲೆಭಾಗದಲ್ಲಿ ಶುಕ್ರವಾರ ದುರ್ಘಟನೆ ನಡೆದಿದೆ. ಮನೆಯ ಪಕ್ಕದ ಹಳೆಯ ಕಟ್ಟಡದ ಬಳಿ ತೆರಳಿದ್ದಾಗ ಮೈಮೇಲೆ ಗೋಡೆ ಕುಸಿದಿದ್ದರಿಂದ ವೃದ್ಧೆ ಮೃತಪಟ್ಟಿದ್ದಾರೆ.

VISTARANEWS.COM


on

Rain News
Koo

ಕಾರವಾರ: ಭಾರಿ ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಮೃತಪಟ್ಟಿರುವ ಘಟನೆ ಕಾರವಾರದ ಅಸ್ನೋಟಿಯ ಆರವ ಗ್ರಾಮದ ತೋರ್ಲೆಭಾಗದಲ್ಲಿ ಶುಕ್ರವಾರ ನಡೆದಿದೆ. ಗುಲಾಬಿ ರಾಮಚಂದ್ರ ಮಾಂಜ್ರೇಕರ್ (70) ಮೃತ ದುರ್ದೈವಿ.

ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ವೃದ್ಧೆ, ಚಿತ್ತಾಕುಲದಲ್ಲಿ ಹಣ್ಣಿನ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದರು. ನೆನ್ನೆ ಮಧ್ಯಾಹ್ನ ಮನೆಯ ಪಕ್ಕದ ಹಳೆಯ ಕಟ್ಟಡದ ಬಳಿ ತೆರಳಿದ್ದಾಗ ಮೈಮೇಲೆ ಗೋಡೆ ಕುಸಿದಿದೆ. ಗೋಡೆಯ ಅವಶೇಷಗಳಡಿ ವೃದ್ಧೆ ಮುಚ್ಚಿಹೋಗಿದ್ದರಂದ ಇಂದು ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ತಹಸೀಲ್ದಾರ್ ನಿಶ್ಚಲ ನೊರೋನ್ಹಾ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಡೆಂಗ್ಯೂಗೆ ಮೊದಲ ಬಲಿ

ಬೆಂಗಳೂರು ನಗರದಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದೆ. 80 ವರ್ಷದ ಮಹಿಳೆ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಖಾಸಗಿ ಅಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬೆಂಗಳೂರು ಪೂರ್ವ ವಲಯದ ವಾರ್ಡ್‌ನಲ್ಲಿ ಪ್ರಕರಣ ನಡೆದಿದೆ.

ಬೈಕ್-ಟ್ರ್ಯಾಕ್ಟರ್ ಡಿಕ್ಕಿಯಾಗಿ ಆಹಾರ ಇಲಾಖೆ ನಿರೀಕ್ಷಕ ಸಾವು

ಚಾಮರಾಜನಗರ: ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿ ಆಹಾರ ಇಲಾಖೆ ನಿರೀಕ್ಷಕ ಮೃತಪಟ್ಟು, ಶಿರಸ್ತೇದಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಸಪುರ ಗ್ರಾಮದ ಬಳಿ ನಡೆದಿದೆ.

ಆಹಾರ ಇಲಾಖೆ ನಿರೀಕ್ಷಕ ನಾಗೇಂದ್ರ (46) ಮೃತರು. ಆಹಾರ‌ ಇಲಾಖೆ ಶಿರಸ್ತೇದಾರ ರಮೇಶ್‌ಗೆ ಗಂಭೀರ ಗಾಯಗಳಾಗಿವೆ. ಗುಂಡ್ಲುಪೇಟೆ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಅಧಿಕಾರಿಗಳು, ಇಂದು ಹಂಗಲ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಮುಗಿಸಿ ಬರುವ ವೇಳೆ ಅವಘಡ ನಡೆದಿದೆ. ಅಪಘಾತದಲ್ಲಿ
ಸ್ಥಳದಲ್ಲೇ ಆಹಾರ ಇಲಾಖೆ ನಿರೀಕ್ಷಕ ನಾಗೇಂದ್ರ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಭೇಟಿ ನೀಡಿ ಪರಿಶೀಲಿಸಿದ್ದು, ಗಾಯಾಳು ರಮೇಶ್‌ರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Road Accident : ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದ ದಂಪತಿ ಮೇಲೆ ಮುರಿದು ಬಿದ್ದ ಬೃಹತ್‌ ಮರ!

ಕಲಬುರಗಿಯಲ್ಲಿ 13 ವರ್ಷದ ಬಾಲಕಿ ಲೈಂಗಿಕ ದೌರ್ಜನ್ಯ, ತೀವ್ರ ರಕ್ತಸ್ರಾವವಾಗಿ ಸಾವು!

ಕಲಬುರಗಿ: ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ 13 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಮೃತಪಟ್ಟಿರುವ ಘಟನೆ (Physical Abuse) ಕಲಬುರಗಿ ನಗರದ ಸಬ್ ಅರ್ಬನ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲೈಂಗಿಕ ದೌರ್ಜನ್ಯದಿಂದ ತೀವ್ರ ರಕ್ತಸ್ರಾವವಾಗಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಜ್ಜಿ ಅಂಗಡಿ ವ್ಯಾಪಾರಿ ಸರ್ಫರಾಜ್ (30) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕಿಯ ಮನೆಗೆ ಹೋಗಿ ಹೆದರಿಸಿ ಕಾರಿನಲ್ಲಿ ಕರೆದುಕೊಂಡು ಹೋಗಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ ತೀವ್ರ ರಕ್ತ ಸ್ರಾವವಾಗಿ ಬಾಲಕಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಅತ್ಯಾಚಾರಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ದಲಿತ ಸೇನೆ ಕಾರ್ಯಕರ್ತರು ರಸ್ತೆ ತಡೆ ನಡೆಸಿ, ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದಾರೆ.

Continue Reading

ಕರ್ನಾಟಕ

Run4Research: ಬೆಂಗಳೂರಿನಲ್ಲಿ ಜೂ.30ರಂದು ʼರನ್4ರೀಸರ್ಚ್ʼ ಓಟ

Run4Research: ಇಂಡಿಯನ್ ಸೊಸೈಟಿ ಫಾರ್ ಕ್ಲಿನಿಕಲ್ ರೀಸರ್ಚ್ (ಐ.ಎಸ್.ಸಿ.ಆರ್.) ವತಿಯಿಂದ ಜೂ.30ರಂದು ಭಾನುವಾರ ಬೆಳಿಗ್ಗೆ 5 ರಿಂದ 9 ರವರೆಗೆ ಬೆಂಗಳೂರಿನ ಎಚ್.ಎಸ್.ಆರ್. ಬಡಾವಣೆಯ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂನಲ್ಲಿ ʼರನ್4ರೀಸರ್ಚ್ʼ ಕ್ಲಿನಿಕಲ್ ರೀಸರ್ಚ್ ಕುರಿತು ಅರಿವನ್ನು ಮೂಡಿಸಲು ಸವಾಲಿನ ಓಟ ಕಾರ್ಯಕ್ರಮ ಏರ್ಪಡಿಸಲಾಗಿದೆ.

VISTARANEWS.COM


on

Run4Research programme on June 30 in Bengaluru
Koo

ಬೆಂಗಳೂರು: ಇಂಡಿಯನ್ ಸೊಸೈಟಿ ಫಾರ್ ಕ್ಲಿನಿಕಲ್ ರೀಸರ್ಚ್ (ಐ.ಎಸ್.ಸಿ.ಆರ್.) ವತಿಯಿಂದ ಜೂ.30 ರಂದು ಭಾನುವಾರ ಬೆಳಿಗ್ಗೆ 5 ಗಂಟೆಯಿಂದ 9 ರವರೆಗೆ ಬೆಂಗಳೂರಿನ ಎಚ್.ಎಸ್.ಆರ್. ಬಡಾವಣೆಯ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂನಲ್ಲಿ ʼರನ್4ರೀಸರ್ಚ್ʼ (Run4Research) ಕ್ಲಿನಿಕಲ್ ರೀಸರ್ಚ್ ಕುರಿತು ಅರಿವನ್ನು ಮೂಡಿಸಲು ಸವಾಲಿನ ಓಟ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಈ ಸವಾಲಿನ ಓಟವು ಭಾರತದ ಉಜ್ವಲ ಕ್ಲಿನಿಕಲ್ ರೀಸರ್ಚ್ ಸಮುದಾಯಕ್ಕೆ ಅರಿವನ್ನು ಉತ್ತೇಜಿಸುವ ಗುರಿ ಹೊಂದಿದೆ. ಅನುಷ್ಠಾನದ ಪಾಲುದಾರ ಸೆಲ್ಲುಲಾದೊಂದಿಗೆ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ 3ಕೆ, 5ಕೆ ಮತ್ತು 10ಕೆ ವಿಭಾಗಗಳಿದ್ದು, ಎಲ್ಲ ಫಿಟ್ನೆಸ್ ಹಂತಗಳ ಭಾಗವಹಿಸುವವರಿಗೆ ಅವಕಾಶ ನೀಡುತ್ತದೆ. ಐ.ಸಿ.ಎಸ್.ಆರ್. ಕ್ಲಿನಿಕಲ್ ರೀಸರ್ಚ್ ಕ್ಷೇತ್ರದಲ್ಲಿ ತೊಡಗಿಕೊಂಡ ಮತ್ತು ಆರೋಗ್ಯದ ಉತ್ಸಾಹಿಗಳನ್ನು ಈ ಉತ್ಸಾಹಕರ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನಿಸುತ್ತಿದೆ.

ಇದನ್ನೂ ಓದಿ: Post Office: ಪೋಸ್ಟ್‌ ಆಫೀಸ್‌ ಉಳಿತಾಯ ಯೋಜನೆಗಳ ಬಡ್ಡಿದರ ಬದಲಾವಣೆ ಇಲ್ಲ; ಬಡ್ಡಿಯ ಪಟ್ಟಿ ಇಲ್ಲಿದೆ

ಇಂಡಿಯನ್ ಸೊಸೈಟಿ ಫಾರ್ ಕ್ಲಿನಿಕಲ್ ರೀಸರ್ಚ್ (ಐ.ಎಸ್.ಸಿ.ಆರ್.) ಭಾರತದಲ್ಲಿ ನೈತಿಕ ಮತ್ತು ಉನ್ನತ ಗುಣಮಟ್ಟದ ಕ್ಲಿನಿಕಲ್ ರೀಸರ್ಚ್ ಉತ್ತೇಜಿಸಲು ಬದ್ಧವಾದ ವೃತ್ತಿಪರ ಸಂಸ್ಥೆಯಾಗಿದೆ. ಐ.ಸಿ.ಎಸ್.ಆರ್.ನ ಉದ್ದೇಶ ಪಾಲುದಾರರೊಂದಿಗೆ ಸಹಯೋಗ ರೂಪಿಸುವುದು ಮತ್ತು ಆರೋಗ್ಯಸೇವಾ ಫಲಿತಾಂಶಗಳನ್ನು ಸುಧಾರಿಸಲು ಕ್ಲಿನಿಕಲ್ ರೀಸರ್ಚ್ ಸುಧಾರಣೆಯನ್ನು ಪ್ರತಿಪಾದಿಸುವುದು. ಹಲವಾರು ಉಪಕ್ರಮಗಳ ಮೂಲಕ ಐ.ಸಿ.ಎಸ್.ಆರ್. ದೇಶದಲ್ಲಿ ಕ್ಲಿನಿಕಲ್ ಟ್ರಯಲ್‌ಗಳ ವೈಜ್ಞಾನಿಕ, ನೈತಿಕ ಮತ್ತು ಕಾರ್ಯಾಚರಣೆಯ ಆಯಾಮಗಳನ್ನು ಹೆಚ್ಚಿಸಲು ಶ್ರಮಿಸುತ್ತದೆ.

ಇದನ್ನೂ ಓದಿ: Bengaluru Power Cut: ಬೆಂಗಳೂರು ನಿವಾಸಿಗಳೇ ಗಮನಿಸಿ; ಜೂ.29ರಂದು ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಇಂಡಿಯನ್ ಸೊಸೈಟಿ ಫಾರ್ ಕ್ಲಿನಿಕಲ್ ರೀಸರ್ಚ್ ಅಧ್ಯಕ್ಷ ಡಾ. ಸನಿಶ್ ಡೇವಿಸ್ ಈ ಕಾರ್ಯಕ್ರಮದ ಕುರಿತು ಮಾತನಾಡಿ, ಕ್ಲಿನಿಕಲ್ ರೀಸರ್ಚ್ ರೋಗಿಗಳಿಗೆ ಹೊಸ ಚಿಕಿತ್ಸೆಗಳನ್ನು ತರುವಲ್ಲಿ ಅತ್ಯಂತ ಮುಖ್ಯವಾಗಿದೆ. ಕ್ಲಿನಿಕಲ್ ಟ್ರಯಲ್‌ಗಳಲ್ಲಿ ಕಠಿಣ ಪರೀಕ್ಷೆಗಳಿಲ್ಲದೆ ಹೊಸ ಔಷಧಗಳು, ಲಸಿಕೆಗಳು ಮತ್ತು ವೈದ್ಯಕೀಯ ಸಾಧನಗಳನ್ನು ಬಳಕೆಗೆ ಅನುಮೋದಿಸಲು ಸಾಧ್ಯವಿಲ್ಲ. ಈ ಕಾರ್ಯಕ್ರಮವು ರೋಗಿಗಳಿಗೆ ಕ್ಲಿನಿಕಲ್ ಟ್ರಯಲ್‌ಗಳ ಪ್ರಾಮುಖ್ಯತೆ ಕುರಿತು ಮತ್ತು ಹೇಗೆ ಅವರ ಭಾಗವಹಿಸುವಿಕೆಯು ಅವರಿಗೆ ಮತ್ತು ಭವಿಷ್ಯದ ತಲೆಮಾರುಗಳಿಗೆ ಪ್ರಯೋಜನವಾಗಬಲ್ಲದು ಎಂದು ಅರಿವನ್ನು ಮೂಡಿಸುವ ಗುರಿ ಹೊಂದಿದೆ ಎಂದು ತಿಳಿಸಿದ್ದಾರೆ.

Continue Reading

ವಿಜಯನಗರ

Vijayanagara News: ಕೂಡ್ಲಿಗಿಯಲ್ಲಿ ಬೆಳೆ ವಿಮೆ ಜಾಗೃತಿ ಜಾಥಾಕ್ಕೆ ಶಾಸಕ ಶ್ರೀನಿವಾಸ್ ಚಾಲನೆ

Vijayanagara News: ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಕೃಷಿ ಇಲಾಖೆಯ ಪ್ರಸಕ್ತ ಸಾಲಿನ ಬೆಳೆ ವಿಮೆ ಜಾಗೃತಿ ಜಾಥಾಕ್ಕೆ ಶಾಸಕ ಡಾ.ಎನ್.ಟಿ. ಶ್ರೀನಿವಾಸ್ ಚಾಲನೆ ನೀಡಿದರು. ರೈತರಿಂದ ಬೆಳೆ ವಿಮೆ ನೋಂದಣಿ ಮಾಡಿಕೊಳ್ಳಲು ಈಗಾಗಲೇ ವಿವಿಧ ಬೆಳೆಗಳಿಗೆ ದಿನಾಂಕ ನಿಗದಿ ಮಾಡಿದ್ದು, ಜೋಳ ಹಾಗೂ ಮೆಕ್ಕೆಜೋಳ ಬೆಳೆಗೆ ಇದೇ 31 ಕೊನೆಯ ದಿನವಾಗಿದೆ. ಅದರಂತೆ ಶೇಂಗಾ ಸೇರಿದಂತೆ ಇತರೆ ಬೆಳೆಗಳಿಗೂ ವಿಮೆ ಮಾಡಿಸಿದಲ್ಲಿ ರೈತರಿಗೆ ಬೆಳೆ ನಷ್ಟದಿಂದ ವಿಮೆ ಪರಿಹಾರ ಬರುತ್ತದೆ. ಇದರಿಂದ ಆರ್ಥಿಕ ನಷ್ಟ ಎದುರಾಗುವುದಿಲ್ಲ.

VISTARANEWS.COM


on

MLA Dr N T Srinivas drives for crop insurance Awareness jatha in Kudligi
Koo

ಕೂಡ್ಲಿಗಿ: ಕೃಷಿ ಇಲಾಖೆಯ ಪ್ರಸಕ್ತ ಸಾಲಿನ ಬೆಳೆ ವಿಮೆ ಜಾಗೃತಿ ಜಾಥಾಕ್ಕೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಶಾಸಕ ಡಾ.ಎನ್.ಟಿ. ಶ್ರೀನಿವಾಸ್ ಚಾಲನೆ (Vijayanagara News) ನೀಡಿದರು.

ಈ ವೇಳೆ ಜಿಲ್ಲಾ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್ ಮಾತನಾಡಿ, ಕೃಷಿ ಇಲಾಖೆಯಿಂದ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ (ವಿಮಾ) ಯೋಜನೆ ಅನುಷ್ಠಾನಗೊಳಿಸಲು ರೈತರು ಬೆಳೆ ವಿಮೆ ನೋಂದಣಿ ಮಾಡಿಸಲು ಈಗಾಗಲೇ ಸೂಚನೆ ನೀಡಲಾಗಿದೆ, ಆದ್ದರಿಂದ ಪ್ರತಿಯೊಬ್ಬ ರೈತರು ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸುವಂತೆ ತಿಳಿಸಿದರು.

ರೈತರಿಂದ ಬೆಳೆ ವಿಮೆ ನೋಂದಣಿ ಮಾಡಿಕೊಳ್ಳಲು ಈಗಾಗಲೇ ವಿವಿಧ ಬೆಳೆಗಳಿಗೆ ದಿನಾಂಕ ನಿಗದಿ ಮಾಡಿದ್ದು, ಜೋಳ ಹಾಗೂ ಮೆಕ್ಕೆಜೋಳ ಬೆಳೆಗೆ ಇದೇ 31 ಕೊನೆಯ ದಿನವಾಗಿದೆ. ಅದರಂತೆ ಶೇಂಗಾ ಸೇರಿದಂತೆ ಇತರೆ ಬೆಳೆಗಳಿಗೂ ವಿಮೆ ಮಾಡಿಸಿದಲ್ಲಿ ರೈತರಿಗೆ ಬೆಳೆ ನಷ್ಟದಿಂದ ವಿಮೆ ಪರಿಹಾರ ಬರುತ್ತದೆ. ಇದರಿಂದ ಆರ್ಥಿಕ ನಷ್ಟ ಎದುರಾಗುವುದಿಲ್ಲ.

ಇದನ್ನೂ ಓದಿ: CM Siddaramaiah: ನಿತಿನ್‌ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ಪ್ರಮುಖ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ

ಶೇ.75 ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡರೆ, ಬಿತ್ತನೆಯಾದ ನಂತರ ಕಟಾವಿಗೆ ಮೊದಲು ಸಕಾಲಕ್ಕೆ ಮಳೆ ಬಾರದೇ ನಿರೀಕ್ಷಿತ ಇಳುವರಿಗಿಂತ ಶೇ 50 ಕ್ಕಿಂತ ಹೆಚ್ಚು ಇಳುವರಿ ನಷ್ಟವಾದಲ್ಲಿ ಅಥವಾ ಅಕಾಲಿಕ ಮಳೆಯಾಗಿ ಬೆಳೆ ಮುಳುಗಡೆ ಅಥವಾ ಕಟಾವಿನ ನಂತರ 14 ದಿನದೊಳಗೆ ಅಕಾಲಿಕ ಮಳೆಯಿಂದ ಬೆಳೆ ನಾಶವಾದರೆ ವಿಮಾ ಸಂಸ್ಥೆ ವೈಯಕ್ತಿಕವಾಗಿ ನಷ್ಟವನ್ನು ನಿರ್ಧರಿಸಿ ಪರಿಹಾರ ನೀಡಲು ಅವಕಾಶವಿರುತ್ತದೆ. ಆದ್ದರಿಂದ ರೈತರು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಬೆಳೆವಿಮೆ ಮಾಡಿಸಲು ಅವರು ಮನವಿ ಮಾಡಿದರು.

ಇದನ್ನೂ ಓದಿ: Paris Olympics 2024 : ಒಲಿಂಪಿಕ್ಸ್​​ ಸ್ಮರಣೆಗಾಗಿ ಜೆಎಸ್​ಡಬ್ಲ್ಯುನಿಂದ ಪ್ಯಾರಿಸ್​ನಲ್ಲಿ ವಿಶೇಷ ಪ್ರದರ್ಶನ

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌, ಸಿಇಒ ಸದಾಶಿವ ಪ್ರಭು, ತಾಪಂ ಇಒ ವೈ. ರವಿಕುಮಾರ್, ಸಹಾಯಕ ಕೃಷಿ ನಿರ್ದೇಶಕ ಸುನೀಲ್ ಕುಮಾರ್, ಬಣವಿಕಲ್ಲು ಯರಿಸ್ವಾಮಿ, ನರೇಂದ್ರ ಸ್ವಾಮಿ ಹಾಗೂ ಇತರರು ಉಪಸ್ಥಿತರಿದ್ದರು.

Continue Reading
Advertisement
Tulu language
ತಂತ್ರಜ್ಞಾನ11 mins ago

Tulu Translate Google: ಗೂಗಲ್ ಟ್ರಾನ್ಸ್‌ಲೇಟ್‌ನಲ್ಲಿ ತುಳು ಭಾಷೆ ಸೇರ್ಪಡೆ

India is a secular nation because Hindus are the majority says Union Minister Pralhad Joshi
ಕರ್ನಾಟಕ18 mins ago

Pralhad Joshi: ಹಿಂದೂಗಳು ಅಲ್ಪಸಂಖ್ಯಾತರಾದ ದಿನ ಭಾರತ ಜಾತ್ಯತೀತವಾಗಿ ಉಳಿಯದು; ಪ್ರಲ್ಹಾದ್‌ ಜೋಶಿ ಆತಂಕ

IND vs SA
ಪ್ರಮುಖ ಸುದ್ದಿ25 mins ago

IND vs SA: ದಕ್ಷಿಣ ಆಫ್ರಿಕಾದ ಬೌಲಿಂಗ್​ ಶಕ್ತಿ ಭಾರತದ ಬ್ಯಾಟಿಂಗ್​ಗೆ ಲೆಕ್ಕಕ್ಕೇ ಇಲ್ಲ; ಮಾಜಿ ಆಟಗಾರನ ಭವಿಷ್ಯ

Rain News
ಕರ್ನಾಟಕ30 mins ago

Rain News: ಕಾರವಾರದಲ್ಲಿ ಭಾರಿ ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಸಾವು

Maharashtra Budget
ದೇಶ30 mins ago

ಮಹಿಳೆಯರಿಗೆ ಬಂಪರ್‌; ಮಾಸಿಕ 1,500 ರೂ. ಜಮೆ, 3 ಅಡುಗೆ ಅನಿಲ ಸಿಲಿಂಡರ್‌ ಫ್ರೀ ಘೋಷಣೆ

Rahyl Dravid
ಪ್ರಮುಖ ಸುದ್ದಿ56 mins ago

Rahul Dravid : ವಿಶ್ವ ಕಪ್​ ಗೆದ್ದು ಬನ್ನಿ ಅಭಿಯಾನದ ವಿರುದ್ಧ ಸಿಟ್ಟಿಗೆದ್ದ ರಾಹುಲ್ ದ್ರಾವಿಡ್​

Run4Research programme on June 30 in Bengaluru
ಕರ್ನಾಟಕ1 hour ago

Run4Research: ಬೆಂಗಳೂರಿನಲ್ಲಿ ಜೂ.30ರಂದು ʼರನ್4ರೀಸರ್ಚ್ʼ ಓಟ

MLA Dr N T Srinivas drives for crop insurance Awareness jatha in Kudligi
ವಿಜಯನಗರ1 hour ago

Vijayanagara News: ಕೂಡ್ಲಿಗಿಯಲ್ಲಿ ಬೆಳೆ ವಿಮೆ ಜಾಗೃತಿ ಜಾಥಾಕ್ಕೆ ಶಾಸಕ ಶ್ರೀನಿವಾಸ್ ಚಾಲನೆ

physical Abuse
ಕ್ರೈಂ1 hour ago

Physical Abuse: ಕಲಬುರಗಿಯಲ್ಲಿ 13 ವರ್ಷದ ಬಾಲಕಿ ಲೈಂಗಿಕ ದೌರ್ಜನ್ಯ, ತೀವ್ರ ರಕ್ತಸ್ರಾವವಾಗಿ ಸಾವು!

Viral Video
Latest1 hour ago

Viral Video: ಈ ಆರು ಯೂಟ್ಯೂಬರ್‌ಗಳು ಜೈಲು ಪಾಲಾಗಲು ಶಾರುಖ್‌ ಖಾನ್‌ ಕಾರಣವಂತೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ3 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ10 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು1 day ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌