Site icon Vistara News

Snake bite: ಶುಂಠಿಕೊಪ್ಪದಲ್ಲಿ ನಾಗರಹಾವು ಕಚ್ಚಿ ರೈತ ಮಹಿಳೆ ಸಾವು

farmer woman died after being bitten by a cobra in Shunthikoppa village

ರಿಪ್ಪನ್‌ಪೇಟೆ: ನಾಗರಹಾವು ಕಚ್ಚಿ ರೈತ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಪಂ ವ್ಯಾಪ್ತಿಯ ಶುಂಠಿಕೊಪ್ಪ ಗ್ರಾಮದಲ್ಲಿ ಶುಕ್ರವಾರ (Snake bite) ನಡೆದಿದೆ.

ವೀಣಾ (35) ಮೃತಪಟ್ಟ ರೈತ ಮಹಿಳೆಯಾಗಿದ್ದಾರೆ. ಶುಕ್ರವಾರ ಬೆಳಗ್ಗೆ ಜಮೀನಿನಲ್ಲಿ ಕೃಷಿ ಕೆಲಸ ಮಾಡುವ ವೇಳೆ ನಾಗರಹಾವು ಎಡಗಾಲಿನ ಕಿರುಬೆರಳಿಗೆ ಕಚ್ಚಿದೆ. ಕೂಡಲೇ ನಾಟಿ ಔಷಧಕ್ಕಾಗಿ ಸಾಗರ ತಾಲೂಕಿನ ಗೆಣಸಿನ ಕುಣಿಗೆ ಗ್ರಾಮಕ್ಕೆ ಕರೆದುಕೊಂಡು ಹೋಗಿ ಆನಂತರ ಸಾಗರದ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನದ ವೇಳೆ ಮಹಿಳೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Dengue Fever: ರಾಜ್ಯದಲ್ಲಿ ಶುಕ್ರವಾರ 437 ಮಂದಿಗೆ ಡೆಂಗ್ಯೂ; ಸಕ್ರಿಯ ಪ್ರಕರಣಗಳ ಸಂಖ್ಯೆ 388ಕ್ಕೇರಿಕೆ!

ಈ ಕುರಿತು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version