Somanna's car attacked by Congress workers in Varuna, Pro-Siddaramaiah slogans in varuna constituency Karnataka Election 2023: ವರುಣದಲ್ಲಿ ಸೋಮಣ್ಣಗೆ ಕಾಂಗ್ರೆಸ್‌ ಕಾರ್ಯಕರ್ತರ ಮುತ್ತಿಗೆ; ಸಿದ್ದರಾಮಯ್ಯ ಪರ ಘೋಷಣೆ - Vistara News

ಕರ್ನಾಟಕ

Karnataka Election 2023: ವರುಣದಲ್ಲಿ ಸೋಮಣ್ಣಗೆ ಕಾಂಗ್ರೆಸ್‌ ಕಾರ್ಯಕರ್ತರ ಮುತ್ತಿಗೆ; ಸಿದ್ದರಾಮಯ್ಯ ಪರ ಘೋಷಣೆ

Karnataka Election 2023: ಮೈಸೂರು ತಾಲೂಕಿನ ಭುಗತಹಳ್ಳಿಯಲ್ಲಿ ಪ್ರಚಾರದ ವೇಳೆ
ಸಚಿವ ವಿ. ಸೋಮಣ್ಣಗೆ ಕಾಂಗ್ರೆಸ್‌ ಕಾರ್ಯಕರ್ತರು ಘೇರಾವ್ ಹಾಕಿದ್ದು, ಸಿದ್ದರಾಮಯ್ಯ ಪರ ಘೋಷಣೆಗಳನ್ನು ಕೂಗಿದ್ದಾರೆ.

VISTARANEWS.COM


on

Somanna's car attacked by Congress workers in Varuna village, Mysore. Karnataka Election updates.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆಯ (Karnataka Election 2023) ಹೈ ವೋಲ್ಟೇಜ್‌ ಕ್ಷೇತ್ರಗಳಲ್ಲಿ ವರುಣ ಕೂಡ ಒಂದಾಗಿದೆ. ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ, ಸಚಿವ ವಿ.ಸೋಮಣ್ಣ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಈ ನಡುವೆ ತಾಲೂಕಿನ ಭುಗತಹಳ್ಳಿಯಲ್ಲಿ ಸೋಮಣ್ಣ ಕಾಂಗ್ರೆಸ್‌ ಕಾರ್ಯಕರ್ತರು ಮುತ್ತಿಗೆ ಹಾಕಿ, ಸಿದ್ದರಾಮಯ್ಯ ಪರ ಘೋಷಣೆಗಳನ್ನು ಕೂಗಿರುವುದು ಕಂಡುಬಂದಿದೆ.

ಭುಗತಗಳ್ಳಿ ಗ್ರಾಮದಲ್ಲಿ ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪುಚ್ಪಾರ್ಚನೆ ಮಾಡಿ ಸೋಮಣ್ಣ ಭಾಷಣ ಮಾಡುತ್ತಿದ್ದಾಗ ಯುವಕನೊಬ್ಬ ಅವರನ್ನು ಪ್ರಶ್ನೆ ಮಾಡಲು ಮುಂದಾಗಿದ್ದಾನೆ. ಈ ವೇಳೆ ಭಾಷಣ ಮುಗಿಯುವವರೆಗೂ ಕಾಯುವಂತೆ ಸಚಿವರು ಮನವಿ ಮಾಡಿದ್ದಾರೆ. ಭಾಷಣ ಮುಗಿಯುತ್ತಿದ್ದಂತೆ ನಿರ್ಗಮಿಸಲು ಮುಂದಾದಾಗ ಸೋಮಣ್ಣಗೆ ಕೈ ಕಾರ್ಯಕರ್ತರು ಘೇರಾವ್‌ ಹಾಕಿದರು. ನಂತರ ಅವರ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದರು. ಇದರಿಂದ ಸಚಿವರು ಮುಜುಗರಕ್ಕೆ ಒಳಗಾಗುವಂತಾಯಿತು.

ಇದೇ ವೇಳೆ ಮತ್ತೊಂದು ಯುವಕರ ಗುಂಪಿನಿಂದ ಸೋಮಣ್ಣ ಹಾಗೂ ಬಿಜೆಪಿ ಪರ ಘೋಷಣೆಗಳು ಮೊಳಗಿದವು. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು. ನಂತರ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು. ಬಳಿಕ ಅಲ್ಲಿಂದ ಮತ್ತೊಂದು ಊರಿಗೆ ವಿ.ಸೋಮಣ್ಣ ಪ್ರಚಾರಕ್ಕೆ ತೆರಳಿದರು.

ಇದನ್ನೂ ಓದಿ | Karnataka Election 2023: ಶೃಂಗೇರಿಯಲ್ಲಿ ಚಂಡಿಕಾ ಯಾಗ ನೆರವೇರಿಸಿದ ಡಿ.ಕೆ. ಶಿವಕುಮಾರ್;‌ ಅಧಿಕಾರಕ್ಕಾಗಿ ಪ್ರಾರ್ಥನೆ

ಮೈಸೂರು ತಾಲೂಕಿನ ಭುಗತಗಳ್ಳಿಯ ಶ್ರೀ ಪಾತಾಳೇಶ್ವರ ದೇವರ ಸನ್ನಿಧಿಯಿಂದ ವಿ.ಸೋಮಣ್ಣ ಪ್ರಚಾರ ಶುರು ಮಾಡಿದರು. ಅವರಿಗೆ ಸಂಸದ ಪ್ರತಾಪ್ ಸಿಂಹ, ಕೋಟೆ ಶಿವಣ್ಣ ಸೇರಿ ಸ್ಥಳೀಯ ಜನಪ್ರತಿನಿಧಿಗಳು ಸಾಥ್‌ ನೀಡಿದರು.

ಸಂಸದ ಪ್ರತಾಪ್ ಸಿಂಹ ಮಾತನಾಡಿ, ಈ ಬಾರಿ ವರುಣದಲ್ಲಿ‌ ದೊಡ್ಡ ಸಂಚಲನ ಕಾಣಿಸುತ್ತಿದೆ. 15 ವರ್ಷಗಳಿಂದ ವರುಣ ಜನ ಒಳ್ಳೆಯ ಅಭ್ಯರ್ಥಿಯನ್ನು ಕೇಳಿದ್ದರು. ಒಳ್ಳೆಯ ಅಭ್ಯರ್ಥಿ ಇಲ್ಲ ಎಂದು ಎರಡು ಬಾರಿ ಅಪ್ಪ, ಒಂದು‌ ಬಾರಿ ಮಗ ಗೆದ್ದಿದ್ದು, ಈಗ ಉತ್ತರಾಧಿಕಾರಿಯಾಗಿ ಮೊಮ್ಮಗನನ್ನು ಕರೆತಂದಿದ್ದಾರೆ. ಒಂದು ದಿನ ಪ್ರಚಾರಕ್ಕೆ ಬರುತ್ತೇನೆ ಎಂದವರು ಈಗ ಹೆದರಿದ್ದಾರೆ. ಸೋಮಣ್ಣ ಹೆಸರು ಘೋಷಣೆ ಆಗುತ್ತಿದ್ದಂತೆ ನಾಮಪತ್ರ ಸಲ್ಲಿಕೆಗೆ ಒಂದು ದಿನ ಮುಂಚಿತವಾಗೇ ಬಂದು ಕುಳಿತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಟೀಕಿಸಿದರು.

ಎಲ್ಲ ಜಾತಿ ಜನಾಂಗದವರು ಸೋಮಣ್ಣ ಬೆನ್ನಿಗಿದ್ದಾರೆ ಎಂದು ಗೊತ್ತಾಗುತ್ತಿದ್ದಂತೆ ಬೆಂಗಳೂರಿನಿಂದ ರಿವರ್ಸ್‌ ಗೇರಲ್ಲಿ ಬಂದಿದ್ದಾರೆ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಕನಸು ಕಾಣುತ್ತಿದ್ದೀರಿ. ನಿಮ್ಮ ಹೆಸರಲ್ಲಿ 30-40 ಜನರನ್ನು ಗೆಲ್ಲಿಸಬೇಕು. ಅವರನ್ನು ಗೆಲ್ಲಿಸುವುದು ಬಿಡಿ, ನೀವು ಗೆಲ್ಲುತ್ತೀರೋ ಇಲ್ಲವೋ ಎನ್ನುವ ಭಯ ಕಾಡುತ್ತಿದೆ. ಅದಕ್ಕಾಗಿ ವಾಪಸ್ ವರುಣಕ್ಕೆ ಬಂದಿದ್ದೀರಿ ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯಗೆ ಚಾಮುಂಡೇಶ್ವರಿಯಂತೆ ವರುಣ ಕಾಣುತ್ತಿದೆ

ಸಿದ್ದರಾಮಯ್ಯಗೆ 2018ರಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಹೇಗೆ ಕಾಣುಸುತ್ತಿತ್ತೋ ಹಾಗೆಯೇ ಈಗ ವರುಣ ಕಾಣುತ್ತಿದೆ. ಅವರಿಗೆ ಸೋಲಿನ ಭಯ ಕಾಣುತ್ತಿದೆ. ಅದಕ್ಕಾಗಿ ಏನೇನೋ ಮಾತನಾಡುತ್ತಿದ್ದಾರೆ. ಬಸವಣ್ಣನ ಅನುಯಾಯಿಯಾದ ಮುಖ್ಯಮಂತ್ರಿಗಳ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿ ಮಾತನಾಡುತ್ತಿದ್ದಾರೆ. ವೀರೇಂದ್ರ ಪಾಟೀಲ್, ನಿಜಲಿಂಗಪ್ಪ, ಜೆ.ಎಚ್‌. ಪಟೇಲ್ ಅವರಂತಹ ಲಿಂಗಾಯತ ಸಿಎಂಗಳಿದ್ದರು. ಅತ್ಯಂತ ಅಭಿವೃದ್ಧಿ ಕಾರ್ಯ ಮಾಡಿದ ನಮ್ಮ ಯಡಿಯೂರಪ್ಪ ಸಾಹೇಬರು ಇದ್ದರು. ಈಗ ಬಸವರಾಜ ಬೊಮ್ಮಾಯಿ ಇದ್ದಾರೆ. ಬಸವಾನುಯಾಯಿಗಳ ಬಗ್ಗೆ ಸಿದ್ದರಾಮಯ್ಯ ತುಚ್ಚವಾಗಿ ಮಾತನಾಡಲು ಶುರುಮಾಡಿದ್ದಾರೆ. ಇದು ಬೇರೆ ಸಮುದಾಯಗಳ ಬಗ್ಗೆ ಅವರಿಗಿರುವ ತುಚ್ಚ ಭಾವನೆ ತೋರಿಸುತ್ತದೆ. ಇಂತಹ ದುರಂಹಕಾರಿ ಸಿದ್ದರಾಮಯ್ಯಗೆ ವರುಣ ಜನ ಪಾಠ ಕಲಿಸಬೇಕು ಎಂದು ಪ್ರತಾಪ್‌ ಸಿಂಹ ಹೇಳಿದರು.

ಇದನ್ನೂ ಓದಿ | Karnataka Election: ಹಿಜಾಬ್‌, ಹಲಾಲ್‌ ಚುನಾವಣೆ ವಿಷಯವೇ ಅಲ್ಲ; ಎಲ್ಲ ಮುಗಿದು ಹೋಗಿದೆ: ಸಿಎಂ ಬಸವರಾಜ ಬೊಮ್ಮಾಯಿ

ಮೈಸೂರು ಮಹಾರಾಜರ ಊರು. ಎಲ್ಲರಿಗೂ ಗೌರವ ಕೊಟ್ಟ ಊರು. ಅಂತಹ ಊರಲ್ಲಿ‌ ಹನುಮ ಜಯಂತಿಗೆ ಹೋದರೆ ಹನುಮ ಎಲ್ಲಿ ಹುಟ್ಟಿದ ಎಂದು ಕೇಳುತ್ತಾರೆ. ಅದ್ಧೂರಿ ದಸರಾಗೆ ಮತ್ತೊಂದು ದಸರಾ (ಮಹಿಷ ದಸರಾ) ಹುಟ್ಟುಹಾಕಿದ ವ್ಯಕ್ತಿಗೆ ಪಾಠ ಕಲಿಸುವ ಕಾಲ ಬಂದಿದೆ. ಅದಕ್ಕಾಗಿ ಸೋಮಣ್ಣ ಅವರನ್ನು ಕಳುಹಿಸಿದ್ದಾರೆ. ಮಾದಪ್ಪ, ಚಾಮುಂಡೇಶ್ವರಿಯ ಭಕ್ತ ಸೋಮಣ್ಣಗೆ ಜನರು ಮತ ಹಾಕಬೇಕು. ಮೈಸೂರು ಜಿಲ್ಲೆಯಲ್ಲಿ ಜನರು ಚಾಮುಂಡಿ ಭಕ್ತನನ್ನು ಗೆಲ್ಲಿಸುತ್ತಾರೆ ಎಂಬುವುದನ್ನು ಸಾಬೀತು ಮಾಡಿ ಎಂದು ಕರೆ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತಂತ್ರಜ್ಞಾನ

Bomber Drone: ಭಾರತದ ಮೊದಲ ಬಾಂಬರ್ ಡ್ರೋನ್ ಅನಾವರಣ; ಇದರ ವಿಶೇಷತೆ ಹೀಗಿದೆ ನೋಡಿ

Bomber Drone: ಭಾರತದ ಮೊದಲ ಮಿಲಿಟರಿ ದರ್ಜೆಯ (Indian military) ಬಾಂಬರ್ ಡ್ರೋನ್ ಇದಾಗಿದೆ. ಡ್ರೋನ್‌ಗಿಂತ ಗಾತ್ರದಲ್ಲಿ ಸ್ವಲ್ಪ ದೊಡ್ಡದಾಗಿರುವ, ಹೆಲಿಕಾಪ್ಟರ್‌ಗಿಂತ ಚಿಕ್ಕದಾಗಿರುವ ಈ ವಾಹಕ, ಪೈಲಟ್‌ರಹಿತವಾಗಿ ಕಾರ್ಯಾಚರಿಸಿ ಬಾಂಬ್‌ಗಳನ್ನು ಹೊತ್ತೊಯ್ದು ವೈರಿನೆಲೆಗಳ ಮೇಲೆ ಉದುರಿಸಬಲ್ಲುದು ಎಂದು ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಸಂಸ್ಥಾಪಕ, ಸಿಇಒ ಸುಹಾಸ್ ತೇಜ ಸ್ಕಂದ ವಿವರಿಸಿದ್ದಾರೆ.

VISTARANEWS.COM


on

bomber drone
Koo

ಬೆಂಗಳೂರು: ಭಾರತದ ಮೊತ್ತ ಮೊದಲ ಸ್ವದೇಶಿ ತಂತ್ರಜ್ಞಾನದ ಬಾಂಬರ್‌ ಡ್ರೋನ್‌ (Indigenous Bomber Drone) ಬೆಂಗಳೂರಿನಲ್ಲಿ ಅನಾವರಣಗೊಂಡಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ (Electronic City) ಅನಾವರಣಗೊಂಡಿರುವ ಈ ಬಾಂಬರ್‌ ಡ್ರೋನ್‌ ಅನ್ನು ʼಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಟೆಕ್ನಾಲಜೀಸ್ʼ ಸಂಸ್ಥೆ ನಿರ್ಮಾಣ ಮಾಡಿದೆ. ಇದಕ್ಕೆ FWD-200B UAV ಎಂದು ಹೆಸರಿಡಲಾಗಿದೆ.

ಭಾರತದ ಮೊದಲ ಮಿಲಿಟರಿ ದರ್ಜೆಯ (Indian military) ಬಾಂಬರ್ ಡ್ರೋನ್ ಇದಾಗಿದೆ. ಡ್ರೋನ್‌ಗಿಂತ ಗಾತ್ರದಲ್ಲಿ ಸ್ವಲ್ಪ ದೊಡ್ಡದಾಗಿರುವ, ಹೆಲಿಕಾಪ್ಟರ್‌ಗಿಂತ ಚಿಕ್ಕದಾಗಿರುವ ಈ ವಾಹಕ, ಪೈಲಟ್‌ರಹಿತವಾಗಿ ಕಾರ್ಯಾಚರಿಸಿ ಬಾಂಬ್‌ಗಳನ್ನು ಹೊತ್ತೊಯ್ದು ವೈರಿನೆಲೆಗಳ ಮೇಲೆ ಉದುರಿಸಬಲ್ಲುದು ಎಂದು ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಸಂಸ್ಥಾಪಕ, ಸಿಇಒ ಸುಹಾಸ್ ತೇಜ ಸ್ಕಂದ ವಿವರಿಸಿದ್ದಾರೆ.

FWD-200B UAV ಎಂದು ತಾಮತ್ರಿಕವಾಗಿ ಕರೆಯಲಾಗುವ ಈ ಡ್ರೋನ್ ವಿಮಾನವನ್ನು ಇಂದು ಎಲೆಕ್ಟ್ರಾನಿಕ ಸಿಟಿಯಲ್ಲಿ ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಸಂಸ್ಥೆ ಅನಾವರಣ ಮಾಡಿದೆ. ರಕ್ಷಣಾ ಕ್ಷೇತ್ರದಲ್ಲಿ ವಿದೇಶಗಳ ಮೇಲಿನ ಅವಲಂಬನೆಗೆ ಬ್ರೇಕ್ ಹಾಕಲು ಸ್ವದೇಶಿ ಡ್ರೋನ್ ವಿಮಾನ‌ ತಯಾರಿಸಲಾಗಿದೆ. ಇದರೊಂದಿಗೆ ಸುಧಾರಿತ ಮಾನವರಹಿತ ಯುದ್ಧ ಡ್ರೋನ್ ಹೊಂದಿದ ರಾಷ್ಟ್ರಗಳ ಪಟ್ಟಿಗೆ ಭಾರತ ಸೇರಲಿದೆ. ಇದರ ಆರಂಬಿಕ ಟೆಸ್ಟ್‌ಗಳು ಆಗಿದ್ದು, ಅಡ್ವಾನ್ಸ್‌ಡ್‌ ಪರೀಕ್ಷೆಗಳು ಇನ್ನೆರಡು ತಿಂಗಳಲ್ಲಿ ನೆರವೇರಲಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಇದರ ಉದ್ಘಾಟನೆ ಮಾಡಿಸುವ ಚಿಂತನೆಯನ್ನು ಸುಹಾಸ್ ಹಂಚಿಕೊಂಡಿದ್ದಾರೆ.

bomber drone flying vedge ceo suhas

ಭಾರತದಲ್ಲಿ ಸದ್ಯ ದಾಳಿ ಡ್ರೋನ್‌ಗಳು ಲಭ್ಯವಿಲ್ಲ. ಇರಾನ್‌ ಹಾಗೂ ರಷ್ಯಾಗಳು ಇದನ್ನು ಈಗಾಗಲೇ ಬಳಸುತ್ತಿವೆ. ಇಸ್ರೇಲ್‌ ಮೇಲೆ ದಾಳಿ ಮಾಡಲು ಕೂಡ ಪ್ಯಾಲೆಸ್ತೀನಿನ ಬಂಡುಕೋರರು ಸಣ್ಣ ಗಾತ್ರದ ಇಂಥದೇ ಡ್ರೋನ್‌ಗಳನ್ನು ಬಳಸಿದ್ದರು. ಈ ಬಗೆಯ ಡ್ರೋನ್‌ಗಳು ಆಧುನಿಕ ಯುದ್ಧದ ವೈಖರಿಯನ್ನೇ ಬದಲಿಸಲಿವೆ. ಕ್ಷಿಪಣಿಗಳು ದುಬಾರಿಯಾಗಿದ್ದು, ಅದಕ್ಕಿಂತ ಡ್ರೋನ್‌ಗಳು ಅಗ್ಗವಾಗಿವೆ. FWD-200B UAV ಸುಮಾರು 200 ಕಿಲೋದಷ್ಟು ಪೇಲೋಡ್‌ ಅನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ.

ಭಾರತ ಈಗ ಅಮೆರಿಕದ ಪ್ರಿಡೇಟರ್ ಡ್ರೋನ್‌ಗಳನ್ನು (Predator Drone) ತರಿಸುತ್ತಿದೆ. ಆದರೆ ಇದು 250 ಕೋಟಿಗಳಷ್ಟು ದುಬಾರಿಯಾಗಿದೆ. ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ದೇಶೀಯವಾಗಿ ತಯಾರಾದ FWD-200B ಭಾರತದಲ್ಲಿ ಸ್ವದೇಶಿ ತಂತ್ರಜ್ಞಾನದೊಂದಿಗೆ ಕೇವಲ 25ಯಿಂದ 50 ಕೋಟಿ ವೆಚ್ಚದಲ್ಲಿ ತಯಾರಾಗಲಿದೆ. ಭಾರತವನ್ನು ಜಾಗತಿಕ ಡ್ರೋನ್ ಉತ್ಪಾದನೆ ಮತ್ತು ತಂತ್ರಜ್ಞಾನದ ಕೇಂದ್ರವಾಗಿಸುವ ಗುರಿ ತಮ್ಮದು. ಇನ್ನು ಎರಡು ತಿಂಗಳಲ್ಲಿ ಇದು ಭಾರತದ ಮಿಲಿಟರಿಯನ್ನು ಸೇರುವ ಆಶಯ ಇದೆ. ಈ ಮೂಲಕ ನಮ್ಮ ರಾಷ್ಟ್ರದ ವಾಯು ರಕ್ಷಣಾ ವ್ಯವಸ್ಥೆಯನ್ನು ಸಶಕ್ತಗೊಳಿಸಲು ಸಂಸ್ಥೆ ಮುಂದಾಗಿದೆ ಎಂದು ಸುಹಾಸ್‌ ತಿಳಿಸಿದ್ದಾರೆ.

ಇದನ್ನೂ ಓದಿ: Tejas Aircraft: ಸ್ವದೇಶಿ ʼತೇಜಸ್ʼ ವಿಮಾನದಲ್ಲಿ ಮೋದಿ ಹಾರಾಟ: ಪಾಕಿಸ್ತಾನ, ಚೀನಾಗೆ ನಡುಕ!

Continue Reading

ಮಳೆ

Karnataka Weather Forecast : ರಾಯಚೂರಲ್ಲಿ ಬಿಸಿಲಾಜ್ಞೆ; ಮಧ್ಯಾಹ್ನ 12-4ರ ವರೆಗೆ ಹೊರಬರದಂತೆ ಡಿಸಿ ಕಟ್ಟಾಜ್ಞೆ!

Karnataka Weather Forecast : ದಿನೇದಿನೆ ಸುಡುತ್ತಿರುವ ಬಿಸಿಲಿಗೆ ಜನರು ಬೆಂದು ಹೋಗುತ್ತಿದ್ದಾರೆ. ಸದ್ಯ ರಾಯಚೂರಲ್ಲಿ ಗರಿಷ್ಟ ತಾಪಮಾನದ ಕಾರಣಕ್ಕೆ ಮಧ್ಯಾಹ್ನದ ನಂತರ ಜನರು ಹೊರಬರದಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇತ್ತ ಚಿಕ್ಕಬಳ್ಳಾಪುರದಲ್ಲಿ ಮಧ್ಯಾಹ್ನದ ನಂತರ ಅಘೋಷಿತ ಬಂದ್‌ ವಾತಾವರಣ ನಿರ್ಮಾಣವಾಗಿದೆ.

VISTARANEWS.COM


on

By

Karnataka Weather Forecast
Koo

ರಾಯಚೂರು/ಚಿಕ್ಕಬಳ್ಳಾಪುರ: ರಾಜ್ಯಾದ್ಯಂತ ಉರಿ ಬಿಸಿಲು ಜನರನ್ನು ಸುಸ್ತು (Karnataka Weather Forecast) ಮಾಡಿದೆ. ಅದರಲ್ಲೂ ಉತ್ತರ ಕರ್ನಾಟಕದ ಮಂದಿ ಕುಂತರೂ ನಿಂತರೂ ಬೆವರು ಸುರಿಸುವಂತಾಗಿದೆ. ಬಿಸಿಲಿನ ಆಜ್ಞೆಗೆ ಜನರು ಹೊರಬರಲು ಆಗದೆ ಅಘೋಷಿತ ಬಂದ್‌ ನಿರ್ಮಾಣವಾಗಿದೆ. ಸದ್ಯ ಅತಿಯಾದ ಬಿಸಿಲಿಗೆ ತತ್ತರಿಸಿದ ರಾಯಚೂರು ಜನರು ಮಧ್ಯಾಹ್ನ ಹೊರಗೆ ಬಾರದಂತೆ ರಾಯಚೂರು ಜಿಲ್ಲಾಧಿಕಾರಿ ಸಲಹೆ ನೀಡಿದ್ದಾರೆ.

ಮುಂದಿನ ಒಂದು ವಾರ ಮತ್ತಷ್ಟು ಗರಿಷ್ಠ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ 44 ರಿಂದ 46 ಡಿ.ಸೆ ನಷ್ಟು ತಾಪಮಾನ ದಾಖಲಾಗುತ್ತಿದೆ. ಇದರಿಂದ ಅನಾರೋಗ್ಯ ಸಮಸ್ಯೆ ಜತೆಗೆ ಬಿಸಿಲಾಘಾತಕ್ಕೆ ಸಾವು ಸಂಭವಿಸಬಹುದು. ಹಾಗಾಗಿ ಮಧ್ಯಾಹ್ನ 12 ರಿಂದ 4 ಗಂಟೆವರೆಗೂ ಹೊರಗೆ ಹೋಗದಿರಿ ಎಂದು ಡಿಸಿ ಎಲ್ ಚಂದ್ರಶೇಖರ ನಾಯಕ್ ಸಲಹೆ ನೀಡಿದ್ದಾರೆ. ಹೊರಗೆ ಹೋಗಲೇಬೇಕಾದ ಅವಶ್ಯಕತೆ ಇದ್ದರೆ ಶುದ್ಧ ಕುಡಿಯುವ ನೀರಿನ ಬಾಟಲ್ ಕೊಂಡೊಯ್ಯಿರಿ. ಟೋಪಿ ಅಥವಾ ಛತ್ರಿ ಬಳಸಿ, ಆದಷ್ಟು ನೆರಳಿನ ಪ್ರದೇಶಗಳಲ್ಲಿ ಓಡಾಡಿ. ಬಾಯಾರಿಕೆ ಆಗದಿದ್ದರೂ ಆಗಾಗ ನೀರು ಕುಡಿಬೇಕು. ಯಾವಾಗಲೂ ನಿಮ್ಮ ಬಳಿ ನೀರು ಇಟ್ಟುಕೊಂಡಿರಿ ಎಂದು ಜಿಲ್ಲಾಧಿಕಾರಿ ಎಲ್‌.ಚಂದ್ರಶೇಖರ ನಾಯಕ್ ಸಲಹೆ ನೀಡಿದ್ದಾರೆ. ಹಾಗೆಯೇ ಮನೆ- ಕಚೇರಿಗಳಲ್ಲಿ ಪಕ್ಷಿಗಳಿಗೂ ನೀರನ್ನು ತುಂಬಿ ಇಡಿ ಎಂದಿದ್ದಾರೆ.

karnataka weather forecast

ತುಮಕೂರಲ್ಲಿ ಬಿಸಿ ಗಾಳಿ; ಹಸುಗಳಿಗೆ ತೇವದ ಗೋಣಿಚೀಲದ ಹೊದಿಕೆ

ತುಮಕೂರು ಜಿಲ್ಲೆಯಲ್ಲೂ ಬಿಸಿ ಗಾಳಿಯು ಆತಂಕವನ್ನು ಹೆಚ್ಚಿಸಿದೆ. ಪಾವಗಡ ತಾಲೂಕಿನಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಬಿಸಿಲ ಬೇಗೆಗೆ ಪ್ರಾಣಿ ಪಕ್ಷಿಗಳೂ ಹೈರಾಣಾಗಿವೆ. ಇತ್ತ ರೈತರು ದನ ಕರುಗಳಿಗೆ ಒದ್ದೆ ಮಾಡಿದ ಗೋಣಿಚೀಲ ಹಾಕುತ್ತಿದ್ದಾರೆ. ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆಯಲ್ಲಿ ಹಸುಗಳಿಗೆ ತೇವದ ಗೋಣಿಚೀಲದ ಹೊದಿಕೆ ಹಾಕಿ, ತಂಪು ಮಾಡುತ್ತಿದ್ದಾರೆ.

ಬಿಸಿಲಿನ ಹೊಡೆತ- ಚಿಕ್ಕಬಳ್ಳಾಪುರ ಪ್ರವಾಸಿತಾಣ ಖಾಲಿ ಖಾಲಿ

ಇತ್ತ ಚಿಕ್ಕಬಳ್ಳಾಪುರದಲ್ಲೂ ಅತಿಯಾದ ತಾಪಮಾನದಿಂದಾಗಿ ಪ್ರವಾಸಿ ತಾಣಗಳು ಪ್ರವಾಸಿಗರು ಇಲ್ಲದೆ ಬಣಗುಡುತ್ತಿದೆ. ನಂದಿ ಬೆಟ್ಟ, ಈಶಾ ಫೌಂಡೇಶನ್ ಜನರಿಲ್ಲದೆ ಖಾಲಿ ಖಾಲಿಯಾಗಿದೆ. ಬಿಸಿಲಿನ ತಾಪಕ್ಕೆ ಜನರು ಮನೆ ಬಿಟ್ಟು‌ ಕದಲದ ಕಾರಣಕ್ಕೆ ಮಧ್ಯಾಹ್ನ 12 ಗಂಟೆ ಬಳಿಕ ಚಿಕ್ಕಬಳ್ಳಾಪುರದಲ್ಲಿ ಆಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ. ಪ್ರತಿನಿತ್ಯ ಪ್ರವಾಸಿಗರಿಂದ ಗಿಜುಗುಡುತಿದ್ದ ನಂದಿಬೆಟ್ಟ ಖಾಲಿಯಾಗಿದೆ.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆ ಮತ್ತೆ ಇಳಿಕೆ; 10 ಗ್ರಾಂ 22 ಕ್ಯಾರಟ್‌ ಬಂಗಾರದ ಬೆಲೆಯಲ್ಲಿ ₹500 ಕಡಿತ

ಸೆಕೆಗೆ ಕಾವೇರಿ ನದಿಗಿಳಿದ ಜನ

ಮಂಡ್ಯ ಜಿಲ್ಲೆಯಲ್ಲೂ ಬಿಸಿಲ ಬೇಗೆ ಹೆಚ್ಚಾಗಿದೆ. ಬಿಸಿಲಿನ ಸೆಕೆ ತಾಳಲಾರದೆ ಜನರು ನದಿಗಿಳಿದು ತಾಪವನ್ನು ಕಡಿಮೆ ಮಾಡಿಕೊಳ್ಳುತ್ತಿದ್ದಾರೆ. ಕುಟುಂಬ ಸಮೇತವಾಗಿ ಬಂದು ಮಂಡ್ಯದ ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ಇಳಿಯುತ್ತಿದ್ದಾರೆ. ಬಿಸಿಲಿನ ಕಾವಿನಿಂದಾಗಿ ಕಾವೇರಿ ನದಿ ದಂಡೆಯಲ್ಲಿ ಜನರ ದಂಡು ಹೆಚ್ಚಾಗಿದೆ.

ಬೆಂಗಳೂರಲ್ಲಿ ಸುರಿದ ಮಳೆಗೆ ಧರೆಗುರುಳಿದ ಮರಗಳು

ಬೆಂಗಳೂರಿನಲ್ಲಿ ನಿನ್ನೆ ಗುರುವಾರ ಸಂಜೆ ಸುರಿದ ಮಳೆಗೆ ಮರಗಳು ಧರೆಗುರುಳಿವೆ. ಕೆಲವು ಕಡೆ ಅರ್ಧ ಗಂಟೆ, ಮತ್ತೆ ಕೆಲವು ಭಾಗದಲ್ಲಿ ಒಂದು ಗಂಟೆ ಕಾಲ ಮಳೆಯಾಗಿದೆ. ಬನಶಂಕರಿ, ಹಂಪಿನಗರ, ವಿಜಯನರ, ರಾಜರಾಜೇಶ್ವರಿನಗರ ಹಾಗೂ ನಾಯಂಡಹಳ್ಳಿ ಸೇರಿ ಮೆಜೆಸ್ಟಿಕ್‌ ಸುತ್ತಮುತ್ತ ಉತ್ತಮ ಮಳೆಯಾಗಿದೆ. ನಗರದ ಬಹುತೇಕ ಪ್ರದೇಶಗಳಲ್ಲಿ ಸುಮಾರು 10 ನಿಮಿಷಗಳ ಸಾಧಾರಣ ಮಳೆಯಾಗಿದೆ.

ಎಲ್ಲೆಲ್ಲಿ ಎಷ್ಟು ಮಳೆ (ಮಿ.ಮೀ)
ವಿದ್ಯಾಪೀಠ – 20, ಹಂಪಿನಗರ – 12.5, ಮಾರುತಿ ಮಂದಿರ – 12, ರಾಜರಾಜೇಶ್ವರಿನಗರ – 7.5, ನಾಯಂಡಹಳ್ಳಿ – 7.5, ಬಸವನಪುರ – 5.5, ದೊಡ್ಡನೆಕ್ಕುಂದಿ – 5, ಎಚ್‌ಎಸ್‌ಆರ್‌ ಲೇಔಟ್‌- 5, ಉತ್ತರಹಳ್ಳಿ – 5 ಹಾಗೂ ಮಹದೇವಪುರ – 4, ರಾಮಮೂರ್ತಿ ನಗರ – 4, ಹೆಮ್ಮಿಗೆಪುರ – 4.5, ಕೆಂಗೇರಿ – 4.5 ಸೇರಿದಂತೆ ಯಲಹಂಕ ಉಪನಗರ – 3.5, ಹೊರಮಾವು – 3.5ಮಿ.ಮೀ ಮಳೆಯಾಗಿದೆ. ಬೆಂಗಳೂರು ದಕ್ಷಿಣದಲ್ಲಿ 10-15 ಮರಗಳು ಧರೆಗೆ ಉರುಳಿರುವ ಬಗ್ಗೆ ಬಿಬಿಎಂಪಿ ಮಾಹಿತಿ ನೀಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Prajwal Revanna Case: ಪ್ರಜ್ವಲ್ ದುಬೈ ಅಲ್ಲ, ಎಲ್ಲಿ ಎಸ್ಕೇಪ್‌ ಆದ್ರೂ ಅಲ್ಲಿಂದ್ಲೇ ಹಿಡಿದುಕೊಂಡು ಬರುತ್ತೇವೆ: ಸಿಎಂ ಸಿದ್ದರಾಮಯ್ಯ

Prajwal Revanna Case: ನಾನು ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೆ. ಪಾಸ್‌ಪೋರ್ಟ್ ಕ್ಯಾನ್ಸಲ್ ಆದ ಮೇಲೆ ಪ್ರಜ್ವಲ್‌ ವಿದೇಶದಲ್ಲಿ ಇರಲು ಆಗುವುದಿಲ್ಲವಲ್ಲ. ಈ ಕಾರಣಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಜ್ವಲ್‌ ಪಾಸ್‌ಪೋರ್ಟ್‌ ಅನ್ನು ಕ್ಯಾನ್ಸಲ್‌ ಮಾಡಲಿ ಮಾಡಲಿ. ಪ್ರಜ್ವಲ್‌ ವಿದೇಶಕ್ಕೆ ಹೋಗಬೇಕಾದರೆ ಕೇಂದ್ರ ಸರ್ಕಾರಕ್ಕೆ ಗೊತ್ತಿರುವುದಿಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Prajwal Revanna Case Wherever Prajwal escapes we will pick him up says CM Siddaramaiah
Koo

ಬಾಗಲಕೋಟೆ: ಹಾಸನದ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣದ (Hassan Pen Drive Case) ಪ್ರಮುಖ ಆರೋಪಿ ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ದುಬೈ ಅಲ್ಲ, ಎಲ್ಲಿಯಾದರೂ ಎಸ್ಕೇಪ್‌ ಆಗಲಿ. ಅಲ್ಲಿಂದಲೇ ಹಿಡಿದುಕೊಂಡು ಬರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಜ್ವಲ್ ಜರ್ಮನಿಯಿಂದ ದುಬೈಗೆ ಎಸ್ಕೇಪ್ ಆಗಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಜ್ವಲ್‌ ಎಲ್ಲಿಯಾದರೂ ಎಸ್ಕೇಪ್ ಆಗಲಿ. ಅಲ್ಲಿಂದಲೇ ಹಿಡಿದುಕೊಂಡು ಬರುತ್ತೇವೆ. ಯಾವ ದೇಶದಲ್ಲಿ ಇದ್ದರೂ ಬಿಡುವುದಿಲ್ಲ. ಅಲ್ಲಿಂದಲೇ ಕರೆದುಕೊಂಡು ಬರುತ್ತೇವೆ ಎಂದು ಹೇಳಿದರು.

ಈ ಕಾರಣಕ್ಕಾಗಿಯೇ ನಾನು ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೆ. ಪಾಸ್‌ಪೋರ್ಟ್ ಕ್ಯಾನ್ಸಲ್ ಆದ ಮೇಲೆ ಪ್ರಜ್ವಲ್‌ ವಿದೇಶದಲ್ಲಿ ಇರಲು ಆಗುವುದಿಲ್ಲವಲ್ಲ. ಈ ಕಾರಣಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಜ್ವಲ್‌ ಪಾಸ್‌ಪೋರ್ಟ್‌ ಅನ್ನು ಕ್ಯಾನ್ಸಲ್‌ ಮಾಡಲಿ ಮಾಡಲಿ. ಪ್ರಜ್ವಲ್‌ ವಿದೇಶಕ್ಕೆ ಹೋಗಬೇಕಾದರೆ ಕೇಂದ್ರ ಸರ್ಕಾರಕ್ಕೆ ಗೊತ್ತಿರುವುದಿಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

ಸಂತ್ರಸ್ತರ ರಕ್ಷಣೆ ಮಾಡಲು ಸೂಚಿಸಿದ್ದೇನೆ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ ಸಂತ್ರಸ್ತೆ ಕಿಡ್ನ್ಯಾಪ್ ಆಗಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಆ ಹೆಣ್ಣುಮಕ್ಕಳ ಎಲ್ಲಿ ಹೋಗಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಅವರನ್ನು ರಕ್ಷಣೆ ಮಾಡುವಂತೆ ಪೊಲೀಸರಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌, ರೇವಣ್ಣಗೆ ಮತ್ತೊಂದು ನೋಟಿಸ್‌; ವಿಚಾರಣೆಗೆ ಬಾರದಿದ್ದರೆ ಅರೆಸ್ಟ್‌: ಡಾ. ಜಿ. ಪರಮೇಶ್ವರ್

ರಾಜಕೀಯ ಮಾಡೋದು ಒಟ್ಟಿಗೆ, ಕುಕೃತ್ಯ ಮಾಡೋದೂ ಒಟ್ಟಿಗೆ

ಪ್ರಜ್ವಲ್‌ ಅವರ ತಂದೆ ಎಚ್.ಡಿ. ರೇವಣ್ಣ ಅವರು ಲಾಯರ್ ಹತ್ತಿರ ಯಾಕೆ ಹೋಗಿದ್ದಾರೆ? ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಮನೆಗೆ ಲಾಯರ್ ಅನ್ನು ಕರೆಸಿಕೊಂಡು ಏಕೆ ಚರ್ಚೆ ಮಾಡಿದ್ದಾರೆ? ಎಚ್‌ಡಿಕೆ ಒಮ್ಮೆ ಹೇಳುತ್ತಾರೆ, ರೇವಣ್ಣ, ನಾನು ಬೇರೆ ಬೇರೆ ಆಗಿದ್ದೇವೆ ಅಂತ. ದೇವೇಗೌಡರಿಗೂ, ನಮಗೂ ಈ ಪ್ರಕರಣಕ್ಕೂ ಏನೂ ಸಂಬಂಧ ಇಲ್ಲ ಅಂತ ಹೇಳುತ್ತಾರೆ. ಇನ್ನೊಂದು ಕಡೆ ಇದೆಲ್ಲವನ್ನೂ ಮಾಡುತ್ತಾರೆ. ಚುನಾವಣೆ ಪ್ರಚಾರದಲ್ಲಿ ಪ್ರಜ್ವಲ್ ಬೇರೆ ಅಲ್ಲ, ನನ್ನ ಮಗ ಬೇರೆ ಅಲ್ಲ ಎಂದು ಹೇಳಿದ್ದು ಕುಮಾರಸ್ವಾಂಇ ಅಲ್ಲವೇ? ಇದರ ಅರ್ಥ ಏನು? (What is it mean?) ಅವರು ಮಾಡೋದೆಲ್ಲವನ್ನೂ ಒಟ್ಟಿಗೆ ಮಾಡೋದು. ರಾಜಕೀಯ ಮಾಡೋದು ಒಟ್ಟಿಗೆ, ಕುಕೃತ್ಯ ಮಾಡೋದೂ ಒಟ್ಟಿಗೆ ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದರು.

Continue Reading

ಕ್ರೈಂ

Prajwal Revanna Case: ಪ್ರಜ್ವಲ್‌, ರೇವಣ್ಣಗೆ ಮತ್ತೊಂದು ನೋಟಿಸ್‌; ವಿಚಾರಣೆಗೆ ಬಾರದಿದ್ದರೆ ಅರೆಸ್ಟ್‌: ಡಾ. ಜಿ. ಪರಮೇಶ್ವರ್

Prajwal Revanna Case: ನಾವು ಸಂತ್ತಸ್ತ ಮಹಿಳೆಯರಿಗೆ ರಕ್ಷಣೆ ನೀಡುತ್ತೇವೆ. ಭಯದ ವಾತಾವರಣ ಸೃಷ್ಟಿಯಾದರೆ ಯಾರು ಬಂದು ಹೇಳುತ್ತಾರೆ. ಸಾವಿರಾರು ವಿಡಿಯೊ ಇದೆ ಅಂತ ಹೇಳುತ್ತಿದ್ದಾರೆ. ಕೆ.ಆರ್. ನಗರದ ಸಂತ್ರಸ್ತೆ ಬಗ್ಗೆ ನನಗೆ ಗೊತ್ತಿಲ್ಲ. ಟೆಕ್ನಿಕಲ್ ವಿಷಯದಲ್ಲಿ ನಾವ್ಯಾರೂ ಎಕ್ಸ್‌ಪರ್ಟ್ ಅಲ್ಲ. ಯಾವ ಯಾವುದೋ ಸೆಕ್ಷನ್ಸ್ ಹಾಕಲು ಸಾಧ್ಯವಿಲ್ಲ. ದೂರಿನಲ್ಲಿ ಏನಿದೆಯೋ ಅದರ ಆಧಾರದ ಮೇಲೆ ಸೆಕ್ಷನ್‌ಗಳನ್ನು ಹಾಕುತ್ತಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಂತ್ರಸ್ತೆಯರು ಮುಂದೆ ಬಂದು ಹೇಳಿಕೆ ಕೊಡಬಹುದು. ಹೀಗಾಗಿ ಕೇಸ್ ಮತ್ತಷ್ಟು ಕಾಂಪ್ಲಿಕೇಟೇಡ್ ಆಗಬಹುದು ಎಂದು ಗೃಹ ಸಚಿವ ಡಾ. ಪರಮೇಶ್ವರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Prajwal Revanna Case If Prajwal and Revanna fails to appear infront of SIT they will be arrested says Dr Parameshwara
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಪ್ರಜ್ವಲ್‌ ರೇವಣ್ಣ ಅವರನ್ನು ಬಂಧಿಸಲು ಎಸ್‌ಐಟಿಗೆ ಅಧಿಕಾರ ಇದೆ. ಎರಡನೇ ನೋಟಿಸ್‌ಗಾದರೂ 24 ಗಂಟೆಯ ಒಳಗೆ ವಿಚಾರಣೆಗೆ ಹಾಜರಾಗಬೇಕು. ಹಾಜರಾಗದೇ ಇದ್ದರೆ ಕಾನೂನಿನ ಪ್ರಕಾರ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಇನ್ನು ರೇವಣ್ಣ ಅವರಿಗೂ ಮತ್ತೊಂದು ನೋಟಿಸ್‌ ನೀಡಿದ್ದು, ಸ್ಪಂದಿಸದಿದ್ದರೆ ಮುಂದಿನ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಾ. ಜಿ. ಪರಮೇಶ್ವರ್‌, ರೇವಣ್ಣಗೂ ಕೂಡ 41ಎ ಅಡಿ ಇನ್ನೊಂದು ನೋಟಿಸ್ ನೀಡಿದ್ದೇವೆ. ರೇವಣ್ಣ ಕೂಡ 24 ಗಂಟೆ ಸಮಯ ಕೇಳಿದ್ದಾರೆ. ಕಾನೂನು ಪ್ರಕಾರ ಮತ್ತೊಂದು ನೋಟಿಸ್‌ ನೀಡಿದ್ದೇವೆ. ಅದಕ್ಕೂ ಸ್ಪಂದನೆ ಮಾಡದಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಮಹಿಳೆಯ ಕಿಡ್ನ್ಯಾಪ್ ವಿಚಾರವಾಗಿಯೂ ಎಸ್‌ಐಟಿಯವರು ಕ್ರಮ ಕೈಗೊಳ್ಳುತ್ತಾರೆ. ಎಲ್ಲದರ ಬಗ್ಗೆ ತನಿಖೆ ನಡೆಯುತ್ತಿದೆ. ಇನ್ನು ನಾವು ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್ ರದ್ದು ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೇವೆ ಎಂದು ಡಾ. ಜಿ. ಪರಮೇಶ್ವರ್‌ ತಿಳಿಸಿದರು.

ನಾವು ಸಂತ್ತಸ್ತ ಮಹಿಳೆಯರಿಗೆ ರಕ್ಷಣೆ ನೀಡುತ್ತೇವೆ. ಭಯದ ವಾತಾವರಣ ಸೃಷ್ಟಿಯಾದರೆ ಯಾರು ಬಂದು ಹೇಳುತ್ತಾರೆ. ಸಾವಿರಾರು ವಿಡಿಯೊ ಇದೆ ಅಂತ ಹೇಳುತ್ತಿದ್ದಾರೆ. ಕೆ.ಆರ್. ನಗರದ ಸಂತ್ರಸ್ತೆ ಬಗ್ಗೆ ನನಗೆ ಗೊತ್ತಿಲ್ಲ. ಟೆಕ್ನಿಕಲ್ ವಿಷಯದಲ್ಲಿ ನಾವ್ಯಾರೂ ಎಕ್ಸ್‌ಪರ್ಟ್ ಅಲ್ಲ. ಯಾವ ಯಾವುದೋ ಸೆಕ್ಷನ್ಸ್ ಹಾಕಲು ಸಾಧ್ಯವಿಲ್ಲ. ದೂರಿನಲ್ಲಿ ಏನಿದೆಯೋ ಅದರ ಆಧಾರದ ಮೇಲೆ ಸೆಕ್ಷನ್‌ಗಳನ್ನು ಹಾಕುತ್ತಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಂತ್ರಸ್ತೆಯರು ಮುಂದೆ ಬಂದು ಹೇಳಿಕೆ ಕೊಡಬಹುದು. ಹೀಗಾಗಿ ಕೇಸ್ ಮತ್ತಷ್ಟು ಕಾಂಪ್ಲಿಕೇಟೇಡ್ ಆಗಬಹುದು ಎಂದು ಗೃಹ ಸಚಿವ ಡಾ. ಪರಮೇಶ್ವರ್ ಅಭಿಪ್ರಾಯಪಟ್ಟರು.

ಮ್ಯಾಜಿಸ್ಟ್ರೇಟ್ ಮುಂದೆ ಸಿಆರ್‌ಪಿಸಿ 164 ಹೇಳಿಕೆ

ಸಂತ್ರಸ್ತೆಯರಿಂದ ಸಿಆರ್‌ಪಿಸಿ ಸೆಕ್ಷನ್‌ 164 ಹೇಳಿಕೆಯನ್ನು ಪಡೆಯುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನನೀಡಲಾಗಿದೆ. ಯಾರು ಕೂಡ ಮುಂದೆ ಎಸ್ಐಟಿ ಮೇಲೆ ಬೆರಳು ತೋರಿಸಬಾರದು. ಹೀಗಾಗಿ ನೇರವಾಗಿ ಮ್ಯಾಜಿಸ್ಟ್ರೇಟ್ ಮುಂದೆ ಸಿಆರ್‌ಪಿಸಿ 164 ಹೇಳಿಕೆಯನ್ನು ಕೊಡಿಸಲಾಗುತ್ತಿದೆ. ಈ ಮಧ್ಯೆ 41ಎ ಅಡಿಯಲ್ಲಿ ನೋಟಿಸ್ ಕೊಟ್ಟಿದ್ದೇವೆ. ನೋಟಿಸ್‌ಗೆ ಪ್ರಜ್ವಲ್ ರೇವಣ್ಣ ಪರ ವಕೀಲ ಸಮಯ ಕೊಡಿ ಅಂತ ಕೇಳಿದ್ದಾರೆ. ಅದಕ್ಕೆ ಸಮಯ ಕೊಡುವುದಕ್ಕೆ ಪ್ರಾವಿಷನ್ ಇಲ್ಲ ಅಂತ ತಿಳಿಸಿದ್ದೇವೆ. ಪ್ರಜ್ವಲ್‌ ಪ್ರಕರಣದಲ್ಲಿ ಕಾನೂನಿನಡಿ ಏನೆಲ್ಲ ಕ್ರಮ ಕೈಗೊಳ್ಳಬಹುದು ಎಂದು ಪರಿಶೀಲನೆ ಮಾಡಲಾಗಿದೆ. ಈಗಾಗಲೇ ಲುಕ್‌ಔಟ್ ನೋಟಿಸ್‌ ಅನ್ನು ಕೊಟ್ಟಿದ್ದೇವೆ. ಇದನ್ನು ಸಹ ಕಾನೂನಿನ ಪ್ರಕಾರವೇ ನೀಡಲಾಗಿದೆ ಎಂದು ಡಾ. ಜಿ. ಪರಮೇಶ್ವರ್‌ ತಿಳಿಸಿದರು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ, ರೇವಣ್ಣ ಮನೆ ಇಂಚಿಂಚೂ ತಲಾಶ್, ಸಿಗ್ತಾ ಮಹತ್ವದ ಕ್ಲೂ?

ಗುರುವಾರವೂ ಒಂದು ದೂರು ದಾಖಲಾಗಿದೆ‌‌. ಅದೇ ಸ್ಟೇಟ್‌ಮೆಂಟ್‌ ಅನ್ನು ಮ್ಯಾಜಿಸ್ಟ್ರೇಟ್ ಮುಂದೆಯೇ ಮಾಡಿಸಲಾಗಿದೆ. ಆನಂತರ ಎಸ್‌ಐಟಿಯವರು ಒತ್ತಾಯ ಮಾಡಿ ಹೇಳಿಸಿದ್ದಾರೆ ಎಂದು ಹೇಳಬಾರದಲ್ಲವೇ? ಅದಕ್ಕೆ ಮ್ಯಾಜಿಸ್ಟ್ರೇಟ್ ಮುಂದೆಯೇ ಹೇಳಿಕೆ ಕೊಡಿಸಲಾಗಿದೆ. ಹಲವು ವಿಚಾರಗಳನ್ನು ಪಬ್ಲಿಕ್ ಡೊಮೈನ್‌ನಲ್ಲಿ ಹೇಳೋಕೆ ಆಗಲ್ಲ. ಅವರ ಮನೆ ಮೇಲೆ ರೈಡ್ ಆಗಿರುವ ಸಂಗತಿ ಗೊತ್ತಿಲ್ಲ. ಆದರೆ, ಲುಕ್‌ಔಟ್ ನೋಟಿಸ್ ಕೊಟ್ಟಿದ್ದೇವೆ. ಎಲ್ಲ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ರವಾನೆ ಆಗಿದೆ. ದುಬೈಗೆ ಪ್ರಜ್ವಲ್‌ ಹೋಗಿರುವುದು ಗೊತ್ತಿಲ್ಲ. ನಮಗೆ ಸಿಕ್ಕಿರುವ ಮಾಹಿತಿ ಪ್ರಕಾರ ಅವರು ಜರ್ಮನಿಗೆ ಹೋಗಿದ್ದಾರೆ. ಜರ್ಮನಿಯಲ್ಲಿ ನಾವು ಹುಡುಕೋಕೆ ಹೋಗಿಲ್ಲ. ನಾವು ಅಲ್ಲಿ ಅದನ್ನು ಮಾಡೋಕೆ ಆಗಲ್ಲ. ನೋಟಿಸ್ ಕೊಟ್ಟ ಮೇಲೆ 24 ಗಂಟೆಯಲ್ಲಿ ಅವರು ಹಾಜರಾಗಬೇಕು. ಹಾಜರಾಗದಿದ್ದರೆ ಬಂಧನವೋ? ಮುಂದೇನು ಅನ್ನೋದನ್ನು ಎಸ್‌ಐಟಿಯವರು ತೀರ್ಮಾನ ಮಾಡ್ತಾರೆ ಎಂದು ಡಾ. ಜಿ. ಪರಮೇಶ್ವರ್‌ ಹೇಳಿದರು.

Continue Reading
Advertisement
bomber drone
ತಂತ್ರಜ್ಞಾನ4 mins ago

Bomber Drone: ಭಾರತದ ಮೊದಲ ಬಾಂಬರ್ ಡ್ರೋನ್ ಅನಾವರಣ; ಇದರ ವಿಶೇಷತೆ ಹೀಗಿದೆ ನೋಡಿ

Viral Video
ವೈರಲ್ ನ್ಯೂಸ್9 mins ago

Viral Video: ಎಲ್ಲ ಖುಷಿಯನ್ನು ಯಾಕೆ ಮನುಷ್ಯ ಮಾತ್ರ ಅನುಭವಿಸಬೇಕು? ಸ್ಮಿಮ್ಮಿಂಗ್‌ ಪೂಲ್‌ಗೆ ಲಗ್ಗೆ ಇಟ್ಟ ಮಂಗಗಳು

United Nations
ವಿದೇಶ13 mins ago

United Nations: ಪಾಕಿಸ್ತಾನ ದುಷ್ಕೃತ್ಯಗಳ ಟ್ರ್ಯಾಕ್‌ ರೆಕಾರ್ಡ್‌ ಹೊಂದಿದೆ; ವಿಶ್ವಸಂಸ್ಥೆಯಲ್ಲಿ ಗುಡುಗಿದ ಭಾರತ

Karnataka Weather Forecast
ಮಳೆ18 mins ago

Karnataka Weather Forecast : ರಾಯಚೂರಲ್ಲಿ ಬಿಸಿಲಾಜ್ಞೆ; ಮಧ್ಯಾಹ್ನ 12-4ರ ವರೆಗೆ ಹೊರಬರದಂತೆ ಡಿಸಿ ಕಟ್ಟಾಜ್ಞೆ!

Rashmika Mandanna's younger sister Shiman
ಟಾಲಿವುಡ್31 mins ago

Rashmika Mandanna: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ತಂಗಿ ಈಗ ಹೇಗಿದ್ದಾರೆ?

Prajwal Revanna Case Wherever Prajwal escapes we will pick him up says CM Siddaramaiah
ಕ್ರೈಂ33 mins ago

Prajwal Revanna Case: ಪ್ರಜ್ವಲ್ ದುಬೈ ಅಲ್ಲ, ಎಲ್ಲಿ ಎಸ್ಕೇಪ್‌ ಆದ್ರೂ ಅಲ್ಲಿಂದ್ಲೇ ಹಿಡಿದುಕೊಂಡು ಬರುತ್ತೇವೆ: ಸಿಎಂ ಸಿದ್ದರಾಮಯ್ಯ

Devon Thomas
ಕ್ರೀಡೆ40 mins ago

Devon Thomas: ಟಿ20 ವಿಶ್ವಕಪ್​ಗೂ ಮುನ್ನ ವಿಂಡೀಸ್​ ಬ್ಯಾಟರ್​ಗೆ 5 ವರ್ಷ ನಿಷೇಧ ಹೇರಿದ ಐಸಿಸಿ

Prajwal Revanna Case If Prajwal and Revanna fails to appear infront of SIT they will be arrested says Dr Parameshwara
ಕ್ರೈಂ56 mins ago

Prajwal Revanna Case: ಪ್ರಜ್ವಲ್‌, ರೇವಣ್ಣಗೆ ಮತ್ತೊಂದು ನೋಟಿಸ್‌; ವಿಚಾರಣೆಗೆ ಬಾರದಿದ್ದರೆ ಅರೆಸ್ಟ್‌: ಡಾ. ಜಿ. ಪರಮೇಶ್ವರ್

gold rate today
ಚಿನ್ನದ ದರ1 hour ago

Gold Rate Today: ಚಿನ್ನದ ಬೆಲೆ ಮತ್ತೆ ಇಳಿಕೆ; 10 ಗ್ರಾಂ 22 ಕ್ಯಾರಟ್‌ ಬಂಗಾರದ ಬೆಲೆಯಲ್ಲಿ ₹500 ಕಡಿತ

Gurucharan Singh Taarak Mehta Ka Ooltah Chashmah actor planned disappearance
ಕಿರುತೆರೆ1 hour ago

Gurucharan Singh: ಎರಡು ವಾರ ಕಳೆದರೂ ಪತ್ತೆಯಾಗದ  ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಖ್ಯಾತಿಯ ನಟ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ18 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌